ತುಮಕೂರು ವಿಜ್ಞಾನ ಮನೆಯಿಂದಲೇ ಆರಂಭವಾಗುತ್ತದೆ .ದಿನನಿತ್ಯ ಜೀವನದಲ್ಲಿ ಪ್ರತಿ ಹೆಜ್ಜೆ ಹೆಜ್ಜೆಗೂ ವಿಜ್ಞಾನದ ಅನ್ವಯವಾಗುತ್ತಿದ್ದು ಅವುಗಳನ್ನು ವಿಶ್ಲೇಷಣೆ ಮಾಡುವುದರ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಂಶೋಧನಾತ್ಮಕ ಹಾಗೂ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಸುದ್ಧಿ ಬಿಂಬ ಪತ್ರಿಕೆ ಸಂಪಾದಕರಾದ ಸತೀಶ್ ಹೇಳಿದರು . ತುಮಕೂರು ನಗರದ ಆರ್ಯನ್ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು ಜಿಲ್ಲಾ ಸಮಿತಿ ತುಮಕೂರು ಹಾಗೂ ಶಾಲಾ ,ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಇವರುಗಳ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಸರ್ ಸಿ ವಿ ರಾಮನ್ ರಸಪ್ರಶ್ನೆ ಕಾರ್ಯಕ್ರಮದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾಕ್ಟರ್ ಸಂಜಯ್ ನಾಯಕ್ ಮಾತನಾಡಿ ವಿಜ್ಞಾನವು ಒಂದು ಅದ್ಭುತವಾದ ವಿಷಯವಾಗಿದೆ ಪ್ರಚಲಿತ ವಿದ್ಯಮಾನಗಳಿಗೆ ವಿಜ್ಞಾನದ ಕೊಡುಗೇ ಅಪಾರವಾಗಿದೆ.ಯಾವುದೇ ಒಂದು ವಿಷಯವನ್ನು ಕುರಿತು ಆವಿಷ್ಕಾರ ಮಾಡಿದಾಗ ಅದರಿಂದ ಜನರಿಗೆ ಅನುಕೂಲವಾದರೆ ಅತಿ ಸಂತೋಷವಾಗುತ್ತದೆ ಯಂದು ತಿಳಿಸಿದರು . ಪ್ರಥಮ ಬಹುಮಾನ ಶ್ರೀ…
Author: News Desk Benkiyabale
ತುಮಕೂರು: ತತ್ವ ಸಿದ್ದಾಂತಗಳಿಗೆ ಬದ್ದವಾಗಿ ಬದುಕಿದಾಗ ಮಾತ್ರ ಗಟ್ಟಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯ. ಅಂತಹ ಘನ ವ್ಯಕ್ತಿತ್ವ ಡಿ. ದೇವರಾಜ ಅರಸು ಅವರದು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು. ನಗರದ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ನಡೆದ ಡಿ. ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಿ. ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಕೈಗೊಂಡಂತಹ ಮಹತ್ತರವಾದ ನಿರ್ಧಾರಗಳಲ್ಲಿ ಭೂ ಸುಧಾರಣೆ ಕಾಯ್ದೆ ಪ್ರಮುಖವಾಗಿದ್ದು, ಉಳುವವನೇ ಭೂಮಿಯ ಒಡೆಯ ಯೋಜನೆಯನ್ನು ಜಾರಿಗೆ ತರುವುದರ ಮೂಲಕ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬಂತೆ ಭೂಮಿಯ ಹಕ್ಕನ್ನು ನೀಡಿದವರು ಎಂದರು. ಜನ ಸಮುದಾಯಕ್ಕೆ ಅನುಕೂಲವಾಗುವಂತೆ ನೀತಿಗಳಿಗೆ ಬದಲಾವಣೆ ಮಾಡಿ ಭೂ ಸುಧಾರಣೆ ಕಾಯ್ದೆ ಜಾರಿಗೆ ತಂದರು. ವ್ಯಕ್ತಿ-ಶಕ್ತಿಯಾಗಿ ರೂಪುಗೊಂಡಿದ್ದ ಅರಸು ಅವರು ತತ್ವಸಿದ್ಧಾಂತಕ್ಕೆ ಬದ್ದರಾಗಿದ್ದರು. ಸಾಮಾನ್ಯರ ಕಷ್ಟಗಳನ್ನು ಹತ್ತಿರದಿಂದ ಬಲ್ಲವರಾಗಿದ್ದರೆಂದರು.…
ತುಮಕೂರು: ಮಳೆಹಾನಿ ಪ್ರದೇಶಗಳ ವೀಕ್ಷಣೆಗೆ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಅಪಮಾನ ಮಾಡಿರುವ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೂಡಲೇ ಬಂಧಿಸಿ, ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಭದ್ರಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ನಂತರ ಭದ್ರಮ್ಮ ವೃತ್ತಕ್ಕೆ ತೆರಳಿ ಕೆಲ ಕಾಲ ಮಾನವ ಸರಪಳಿ ನಿರ್ಮಿಸಿ,ವಿರೋಧಪಕ್ಷದ ನಾಯಕರ ಪ್ರವಾಸದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಬಜರಂಗದಳವನ್ನು ನಿಷೇಧಿಸಬೇಕೆಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಸ್.ಷಪಿ ಅಹಮದ್, ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರಕಾರ ಕಾನೂನು, ಸುವ್ಯವಸ್ಥೆಯನ್ನು ಹತೋಟಿಗೆ ತರುವಲ್ಲಿ ವಿಫಲವಾಗಿದೆ.ಒಂದು ಸಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಗೆ ನಿಮಗೆ ರಕ್ಷಣೆ ನೀಡಲು ಸಾಧ್ಯವಾಗಿಲ್ಲ ಎಂದರೆ, ಇನ್ನೂ ಜನಸಾಮಾನ್ಯರ…
ಗುಬ್ಬಿ: ಕಾಂಗ್ರೆಸ್ ಪಕ್ಷವು ಭ್ರಮೆಯಿಂದ ಹೊರಬರಬೇಕು ಒಂದು ಮನೆ ಮೂರು ಬಾಗಿಲಂತಾಗಿರುವ ಕಾಂಗ್ರೆಸ್ ಪಕ್ಷವು ಇನ್ನು ಮುಂದಾದರು ಪಾಠ ಕಲಿಯಬೇಕು ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದರು. ಚೇಳೂರು ಹೇಮಾವತಿ ಆವರಣದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಈಗಾಗಲೇ ಕಾಂಗ್ರೆಸ್ ಪಕ್ಷವು ಹೊಡೆದಾಡುತ್ತಿದ್ದು ಒಂದೆಡೆ ಡಿಕೆಶಿ ಆದರೆ ಇನ್ನೊಂದೆಡೆ ಸಿದ್ದರಾಮಯ್ಯನವರ ಜಟಾಪಟಿ ಹೆಚ್ಚಾಗುತ್ತಿದ್ದು ಇದರಿಂದ ಕರ್ನಾಟಕದ ಜನತೆ ಇವರ ಆಟಗಳನ್ನು ನೋಡುತ್ತಿದ್ದಾರೆ ಮುಂದಿನ ದಿನಗಳಲ್ಲಿ ಭಾರತೀಯ ಜನತಾ ಪಕ್ಷವು ಅಧಿಕ ಶಾಸಕರಿಂದ ಪೂರ್ಣ ಪ್ರಮಾಣದ ಭಾರತೀಯ ಜನತಾ ಪಕ್ಷವು ಅಧಿಕಾರ ಹಿಡಿಯುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷವು ಹತಾಶ ಮನೋಭಾವದಿಂದ ಬೇರೆ ಬೇರೆ ರೀತಿಯ ಸಂದರ್ಭಗಳನ್ನು ಸೃಷ್ಟಿಸುತ್ತಿದ್ದು ಮುಖ್ಯಮಂತ್ರಿ ಗಾದಿಗೆಗೆ ಹೊಡೆದಾಟ ನಡೆಸುತ್ತಿದ್ದು ಇಡೀ ದೇಶದಲ್ಲಿ ಮೋದಿಜಿಗೆ ದೇಶದ ಅಧಿಕಾರ ನೀಡಲು 301 ಸಂಸದರನ್ನು ಆಯ್ಕೆ ಮಾಡಿ ಕಳಿಸಿರುವುದು ಮೋದಿಯವರ ಕಾರ್ಯಕ್ಕೆ ಹಾಗೂ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ನೀಡಿರುವುದು ಕಾಂಗ್ರೆಸ್ ಗೆ ಕಣ್ಣು ಉರಿಯಾಗಿದ್ದು ಹಾಗಾಗಿ ರಾಜ್ಯ ಕಾಂಗ್ರೆಸ್…
ತುಮಕೂರು: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಾನಿಯುಂಟಾಗಿರುವ ಹೇಮಾವತಿ ನಾಲೆ, ಕೆರೆ ಕೋಡಿಗಳ ಪ್ರದೇಶಕ್ಕೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಗುಬ್ಬಿಗೇಟ್ ಸಮೀಪ ಹಾದು ಹೋಗಿರುವ ಹೇಮಾವತಿ ನಾಲೆ ಮಳೆಯಿಂದ ಹಾನಿಗೆ ಒಳಗಾಗಿರುವ ಹಿನ್ನೆಲೆಯಲ್ಲಿ ಆ ಸ್ಥಳಕ್ಕೆ ಸಚಿವ ಕಾರಜೋಳ ಅವರು ಅಧಿಕಾರಿಗಳೊಂದಿಗೆ ತೆರಳಿ ಹಾನಿ ಉಂಟಾಗಿರುವ ಹೇಮಾವತಿ ನಾಲೆಯನ್ನು ವೀಕ್ಷಿಸಿದರು. ಹೇಮಾವತಿ ನಾಲೆ ಪರಿಶೀಲಿಸಿದ ನಂತರ ಮಲ್ಲಸಂದ್ರ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು ಗ್ರಾಮದ ಸಿದ್ದಿವಿನಾಯಕ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಂತರ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ ಭಾರೀ ಮಳೆಯಿಂದ ಹಾನಿಗೆ ಒಳಗಾಗಿರುವ ಕೆರೆಯ ಕೋಡಿ ದುರಸ್ಥಿಗೊಳಿಸುವುದಾಗಿ ಭರವಸೆ ನೀಡಿದರು. ನಂತರ ಅಡಗೂರು ಕೆರೆಗೆ ತೆರಳಿದ ಸಚಿವರು ಅಲ್ಲೂ ಸಹ ಕೆರೆ ಕೋಡಿ ಮಳೆಯಿಂದ ಹಾಳಾಗಿರುವುದನ್ನು ವೀಕ್ಷಿಸಿ, ಸರ್ಕಾರದಿಂದ ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ಕೋಡಿ ದುರಸ್ಥಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದರು. ಗುಬ್ಬಿ ತಾಲ್ಲೂಕು ನಿಟ್ಟೂರು-ಚೇಳೂರು…
ತುಮಕೂರು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಬಜರಂಗದಳ ಹಾಗು ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು, ಗೋ ಬ್ಯಾಕ್ ಘೋಷಣೆ ಕೂಗಿ ಅಪಮಾನಿಸಿರುವ ಕ್ರಮವನ್ನು ಖಂಡಿಸಿ ಇಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ನಗರದ ಟೌನ್ಹಾಲ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಆಯೋಜಿಸಿದ್ದ ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ, ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ, ಕಾಂಗ್ರೆಸ್ ಮುಖಂಡರಾದ ಕೆಂಚಮಾರಯ್ಯ, ನರಸೀಯಪ್ಪ, ಪತ್ರಕರ್ತ ಎಸ್.ನಾಗಣ್ಣ ಮತ್ತಿತರ ಪ್ರಮುಖ ಮುಖಂಡರು ಭಾಗವಹಿಸಿ, ಸರಕಾರದ ನೀತಿಯನ್ನು ಖಂಡಿಸಿದರಲ್ಲದೆ, ಸರಕಾರ ಕೂಡಲೇ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಅಪಮಾನ ಮಾಡಿರುವ ವ್ಯಕ್ತಿಗಳನ್ನು ಬಂಧಿಸಿ, ಗಡಿಪಾರು ಮಾಡಬೇಕು ಹಾಗೂ ಇಂತಹ ಘಟನೆ ಮರುಕಳುಹಿಸದಂತೆ ಸರಕಾರ ಕಟ್ಟು ನಿಟ್ಟಿನ ಭ್ರದತೆ ನೀಡಬೇಕೆಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ,ಆಗಸ್ಟ್ 03 ರಂದು ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಅವರ 75ನೇ…
ತುಮಕೂರು: ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಂದ ನಿರ್ಮಾಣಗೊಂಡಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಬಳಕೆ ಶುಲ್ಕ ನಿಗಧಿ ಮಾಡಿರುವ ಸರಕಾರದ ಕ್ರಮವನ್ನು ತುಮಕೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಕ್ರೀಡಾ ಪಟುಗಳು ತೀವ್ರವಾಗಿ ವಿರೋಧಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಎಂ.ಜಿ.ಕ್ರೀಡಾಂಗಣದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ ಕ್ರೀಡಾಪಟುಗಳು ಸರಕಾರದ ನಡೆಯನ್ನು ವಿರೋಧಿಸಿ ಕ್ರೀಡಾಂಗಣದ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳಿಗೆ ಶುಲ್ಕ ವಿರೋಧಿಸಿ ಮನವಿ ಸಲ್ಲಿಸಲು ನಿರ್ಧರಿಸಲಾಯಿತು ಸರಕಾರದ ನಡೆಯನ್ನು ವಿರೋಧಿಸಿ ಮಾತನಾಡಿದ ಕ್ರೀಡಾ ಪೆÇ್ರೀತ್ಸಾಹಕ ಧನಿಯಕುಮಾರ್, ಇಂದು ಕ್ರೀಡಾ ಚಟುವಟಿಕೆಗಳೇ ಕಡಿಮೆಯಾಗಿ,ಕ್ರೀಡೆಗೆ ತಗುಲುವ ವೆಚ್ಚ ಭರಿಸುವುದು ಪೆÇೀಷಕರೀಗೆ ದೊಡ್ಡ ಸವಾಲಾಗಿರುವ ಸಂದರ್ಭದಲ್ಲಿ ತುಮಕೂರು ನಗರದಲ್ಲಿ ಕ್ರೀಡಾಪಟುಗಳ ಅಭ್ಯಾಸಕ್ಕೆಂದು ಇರುವ ಜಾಗಕ್ಕು ಶುಲ್ಕ ನಿಗಧಿ ಮಾಡಿರುವುದು ಖಂಡನೀಯ.ಶುಲ್ಕ ನಿಗಧಿ ಸಂದರ್ಭದಲ್ಲಿ ಸ್ಥಳೀಯ ಕ್ರೀಡಾಪಟುಗಳನ್ನಾಗಲಿ, ಕ್ರೀಡಾ ಸಂಸ್ಥೆ ಗಳನ್ನಾಗಲಿ ಗಮನಕ್ಕೆ ತೆಗೆದುಕೊಂಡಿಲ್ಲ. ಏಕಾಎಕಿ ನಿರ್ಧಾರ ಖಂಡನೀಯ.ಕೂಡಲೇ ಸರಕಾರ ಸ್ಟೇಡಿಯಂ ಬಳಕೆಗೆ ವಿಧಿಸಿರುವ ಶುಲ್ಕವನ್ನು ಹಿಂಪಡೆಯಬೇಕು ಹಾಗು ಶೂಟಿಂಗ್ ಸೇರಿದಂತೆ ಎಲ್ಲಾ ಕ್ರೀಡೆಗಳಿಗೂ ಅಭ್ಯಾಸಕ್ಕು ಅವಕಾಶ…
ತುಮಕೂರು: ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಹೆಚ್ಚಿದ್ದರೂ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ತಿಗಳ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಗಸ್ಟ್ 26 ರಂದು ತುಮಕೂರಿನ ಗಾಜಿನಮನೆಯಲ್ಲಿ ಗುರುವಂದನೆ ಹಾಗೂ ತಿಗಳರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ತಿಗಳ ಕ್ಷತ್ರಿಯ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಸುಬ್ಬಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಸುಮಾರು 4 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದರೂ ಓರ್ವ ಶಾಸಕ, ಸಂಸದನಿಲ್ಲ. ನಮ್ಮನ್ನು ಕೇವಲ ಓಟ್ಬ್ಯಾಂಕಾಗಿ ರಾಜಕೀಯ ಪಕ್ಷಗಳು ಪರಿಗಣಿಸಿವೆ. 2 ಎ ಪಟ್ಟಿಯಲ್ಲಿರುವ ಎಲ್ಲಾ ಜಾತಿಗಳ ಅಭಿವೃದ್ದಿಗೆ ನಿಗಮ ಸ್ಥಾಪನೆ ಮಾಡಲಾಗಿದೆ. ಆದರೆ ತಿಗಳ ಅಭಿವೃದ್ದಿ ನಿಗಮ ಇದುವರೆಗೂ ಸ್ಥಾಪನೆ ಮಾಡಿಲ್ಲ. ಅಲ್ಲದೆ 2 ಎ ನಲ್ಲಿರುವ ಸಮುದಾಯವನ್ನು ಪ್ರವರ್ಗ 1ರ ಜಾತಿ ಪಟ್ಟಿಗೆ ಸೇರಿಸಲು ಹಲವಾರು ಹೋರಾಟ ಮಾಡಿದರೂ ಈ ಸರಕಾರ ಕಿವಿಗೋಡುತ್ತಿಲ್ಲ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಆಗಸ್ಟ್ 26 ರಂದು ರಾಜ್ಯದ ಎಲ್ಲಾ ತಿಗಳನ್ನು ಒಗ್ಗೂಡಿಸಿ, ಸಾಮಾವೇಶ ಮಾಡಲಾಗುತ್ತಿದೆ ಎಂದರು. ಪ್ರಸ್ತುತ…
ತುಮಕೂರು: ರಾಜ್ಯಸ್ಥಾನದ ಸುರಾನ ಗ್ರಾಮದ ಶಾಲೆಯೊಂದರಲ್ಲಿ ದಲಿತ ಸಮುದಾಯದಕ್ಕೆ ಸೇರಿದ ಬಾಲಕ ಕುಡಿಯುವ ನೀರಿನ ಮಡಿಕೆ ಮುಟ್ಟಿನೆಂಬ ಕಾರಣಕ್ಕೆ ಶಾಲೆಯ ಶಿಕ್ಷಕನೇ ಹಲ್ಲೆ ನಡೆಸಿ, ಕೊಂದಿರುವ ಘಟನೆಯನ್ನು ಖಂಡಿಸಿ, ತುಮಕೂರು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಶುಕ್ರವಾರ ಟೌನ್ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಓಂಕಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಎಸ್ಸಿ ಮೋರ್ಚಾ ಪದಾಧಿಕಾರಿಗಳು, ಸದಸ್ಯರುಗಳು ಭಾಗವಹಿಸಿ, ಮಾನವ ಸರಪಳಿ ನಿರ್ಮಿಸಿ, ದಲಿತ ಬಾಲಕನ ಮೇಲೆ ಹಲ್ಲೆ ನಡೆಸಿಕೊಲೆ ಮಾಡಿರುವ ರಾಜಸ್ಥಾನ ಸರಕಾರವನ್ನು ವಜಾ ಮಾಡಬೇಕೆಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಓಂಕಾರ, ರಾಜ್ಯಸ್ಥಾನದ ಸುರಾನ ಗ್ರಾಮದ ಶಾಲೆಯಲ್ಲಿ ಓದುತ್ತಿದ್ದ ದಲಿತ ಬಾಲಕ ನೀರು ಕುಡಿಯುವ ನೀರಿನ ಮಡಿಕೆ ಮುಟ್ಟಿದನೆಂಬ ಕಾರಣಕ್ಕೆ ಶಿಕ್ಷಕ ಚಹೀಲ್ ಸಿಂಗ್ ಹಲ್ಲೆ ನಡೆಸಿದ್ದು, ಸಾವು ಬದುಕಿನ ನಡುವೆ 23 ದಿನಗಳ ಕಾಲ ಹೋರಾಟ ನಡೆಸಿದ ಬಾಲಕ ಸಾವನ್ನಪ್ಪಿದ್ದಾನೆ. ಇದನ್ನು ಖಂಡಿಸಿ, ಅಲ್ಲಿನ…
ತುಮಕೂರು: ಲಂಚ ಕೊಟ್ಟರೆ ನೌಕರಿ, ಮಂಚ ಏರಿದರೆ ಅಧಿಕಾರ ಎಂದು ಹೇಳಿ ಮಹಿಳೆಯರಿಗೆ ಅವಮಾನ ಮಾಡಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಜಿಲ್ಲಾ ಮಹಿಳಾ ಸಮನ್ವಯ ಸಮಿತಿ ಸದಸ್ಯೆಯರು ಗುರುವಾರ ನಗರದ ಬಿಜಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅಸಭ್ಯ ಹೇಳಿಕೆ ನೀಡಿ ಮಹಿಳಾ ಕುಲಕ್ಕೆ ಅವಮಾನ ಮಾಡಿರುವ ಶಾಸಕ ಖರ್ಗೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಂಬಿಕಾ ಹುಲಿನಾಯ್ಕರ್ ಮಾತನಾಡಿ, ಉದ್ಯೋಗಕ್ಕೆ ಹೋಗುವ ಎಲ್ಲಾ ಹೆಣ್ಣು ಮಕ್ಕಳು ಈ ರೀತಿ ನಡೆದುಕೊಳ್ಳುತ್ತಾರೆಯೇ, ಈ ಹೇಳಿಕೆಯನ್ನು ಕುಟುಂಬದವರು ಗಂಭೀರವಾಗಿ ಪರಿಗಣಿಸಿದರೆ ಅವರನ್ನು ಉದ್ಯೋಗಕ್ಕೆ ಕಳಿಸುತ್ತಾರೆಯೆ? ಪ್ರಿಯಾಂಕ್ ಖರ್ಗೆ ತಮ್ಮ ಕುಟುಂಬದ ಹೆಣ್ಣುಮಕ್ಕಳನ್ನು ಹೀಗೇ ನಡೆಸಿಕೊಳ್ಳುತ್ತಾರೆಯೆ? ಖರ್ಗೆ ಹೇಳಿಕೆ ಅವರ ಹಾಗೂ ಕಾಂಗ್ರೆಸ್ ಪಕ್ಷ ಸಂಸ್ಕøತಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು. ಜವಾಬ್ದಾರಿ…











