Author: News Desk Benkiyabale

ತುಮಕೂರು :       ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ 22ರ ಅಕ್ಕ ತಂಗಿ ಪಾರ್ಕ್ ಬಳಿ ಇರುವ ಹೊಸಳ್ಳಯ ತೋಟ ಪ್ರದೇಶದಲ್ಲಿ ಹಲವು ದಿನಗಳಿಂದ ಯುಜಿಡಿ ಸಮಸ್ಯೆ ಉಂಟಾಗಿದ್ದು ಬಂಡೆಪಾಳ್ಯ ಸೇರಿದಂತೆ ಆಭಾಗದ ಯುಜಿಡಿ ನೀರು ಹರಿದು ಅಕ್ಕ ತಂಗಿ ಕೆರೆ ಪಕ್ಕದ ನಿವಾಸಿಗಳಿಗೆ ತೀವ್ರ ತೊಂದರೆ ಉಂಟಾಗುತ್ತಿದೆ.       ಆದ್ದರಿಂದ ಕೂಡಲೇ ಈ ಸಮಸ್ಯೆ ಬಗೆಹರಿಸುವ ಹರಿಸುವಂತೆ ಸಮಾಜಸೇವಕ ನರಸಿಂಹಮೂರ್ತಿ ತಿಳಿಸಿದ್ದಾರೆ. ಹಲವು ತಿಂಗಳಿಂದ ಯುಜಿಡಿ ನೀರು ಈ ಭಾಗದಲ್ಲಿ ಶೇಖರಣೆಗೊಳ್ಳುವ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆ ಸೇರಿದಂತೆ ಹಲವು ತೊಂದರೆ ಉಂಟಾಗುತ್ತಿದೆ.        ಇದೇ ಸಂದರ್ಭದಲ್ಲಿ ರಾತ್ರಿ ವೇಳೆ ಸೊಳ್ಳೆಗಳು ಹೆಚ್ಚಾಗಿದ್ದು ಹಲವು ರೋಗಗಳು ಹರಡುವ ಸಾಧ್ಯತೆ ಇದೆ ಆದ್ದರಿಂದ ಕೂಡಲೇ ಯುಜಿಡಿ ಸಮಸ್ಯೆ ಬಗೆಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Read More

ತುಮಕೂರು: ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳ ಗಡಿ ಗುರುತಿಸಿ ಒತ್ತುವರಿ ಕಂಡುಬಂದಲ್ಲಿ ತೆರವುಗೊಳಿಸಿ ಕೆರೆಗಳ ಸಂರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜರುಗಿದ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಮಟ್ಟದ ಕಾರ್ಯನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 2061 ಕೆರೆಗಳನ್ನು ಗುರುತಿಸಲಾಗಿದ್ದು, ಇದುವರೆಗೂ 404 ಕೆರೆಗಳ ಸರ್ವೆ ಕಾರ್ಯ ನಡೆದಿದೆ. ಅಳತೆಯಾಗಿರುವ 404 ಕೆರೆಗಳ ಪೈಕಿ 293 ಕೆರೆಗಳು ಒತ್ತುವರಿಯಾಗಿರುವುದು ಕಂಡುಬಂದಿದ್ದು, ಇವುಗಳಲ್ಲಿ 103 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಉಳಿದ 136 ಕೆರೆಗಳ ಒತ್ತುವರಿ ತೆರವುಗೊಳಿಸುವುದರ ಜೊತೆಗೆ ಬಾಕಿ ಉಳಿದಿರುವ 1657 ಕೆರೆಗಳ ಅಳತೆ ಕಾರ್ಯ ಪೂರ್ಣಗೊಳಿಸುವಂತೆ ನಿರ್ದೇಶಿಸಿದರು. ಜಿಲ್ಲೆಯಲ್ಲಿ ಆರ್.ಡಿ.ಪಿ.ಆರ್ ಅಡಿ1522, ಸಣ್ಣ ನೀರಾವರಿ ಇಲಾಖೆಯಡಿ 366, ಕಾವೇರಿ ನಿಗಮದಡಿ 151, ಮಹಾನಗರ ಪಾಲಿಕೆಯಡಿ 8, ನಗರಾಭಿವೃದ್ಧಿ ಅಭಿವೃದ್ಧಿ ಪ್ರಾಧಿಕಾರದ 1, ಅರಣ್ಯ ಇಲಾಖೆ 6, ಸ್ಥಳೀಯ ಸಂಸ್ಥೆ…

Read More

ತುಮಕೂರು :       ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ತುಮಕೂರಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಐಟಿ ಮಿಲನ್, ಪರ್ಯಾವರಣ ಸಂರಕ್ಷಣ ಗತಿವಿಧಿ, ಹಾಗೂ ಬ್ಯೂಗಲ್ ಟ್ರಸ್ಟ್,  ಇವರ ಸಂಯುಕ್ತ ಆಶ್ರಯದಲ್ಲಿ  ಶ್ರೀದೇವಿ ಎಂಜಿನಿಯರಿಂಗ್ ಕಾಲೇಜಿನ ಹಿಂಬಾಗ, ಶಿರಾ ಗೇಟ್ ನಲ್ಲಿ  ಗಿಡನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 

Read More

 ತುಮಕೂರು  :       ರಾಜ್ಯಾದ್ಯಂತ ಕೈಗೊಂಡಿರುವ ಕೋವಿಡ್ ಲಸಿಕಾಭಿಯಾನದಡಿ ಜಿಲ್ಲೆಯಲ್ಲಿಯೂ ಶೇ.100ರಷ್ಟು ಯಶಸ್ವಿಯಾಗಲು ಎಲ್ಲರೂ ಸೂಕ್ತ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಈ ಲಸಿಕಾಭಿಯಾನದಲ್ಲಿ ನಿಗಧಿತ ಗುರಿಗಿಂತ ಕಡಿಮೆ ಲಸಿಕಾಕರಣವಾಗಬಾರದು ಎಂದು ನಿರ್ದೇಶಿಸಿದರು.      ಲಭ್ಯವಿರುವ ಲಸಿಕೆಯನ್ನು ಬಳಸಿಕೊಂಡು ಸರ್ಕಾರದ ಮಾರ್ಗಸೂಚಿಯಂತೆ ಲಸಿಕಾಭಿಯಾನದಲ್ಲಿ ಶೇ.100ರಷ್ಟು ಸಾಧನೆ ಮಾಡಲು ಪಣ ತೊಡಬೇಕು. ಈಗಾಗಲೇ ಲಸಿಕಾಕರಣ ಕಾರ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು ಸೂಕ್ತ ಕ್ರಮವಹಿಸಿ ಅಭಿಯಾನ ಯಶಸ್ವಿಗೊಳಿಸಬೇಕು. ಸಮನ್ವಯ ಸಾಧಿಸಿಕೊಂಡು ಲಸಿಕಾಕರಣ ಕಾರ್ಯ ಮಾಡಬೇಕು ಎಂದು ತಿಳಿಸಿದರು.

Read More

ತುಮಕೂರು : ಕೊರಟಗೆರೆ ತಾಲೂಕಿನ ದಂಡಿನ ಶಿವರ ಹಾಗೂ ತಿಪಟೂರು ತಾಲೂಕಿನ ತಡಸೂರು ಗ್ರಾಮದ ಲಸಿಕಾ ಕೇಂದ್ರದಲ್ಲಿ ಅಂಗವಾಡಿ ಫಲಾನುಭವಿ ತಾಯಂದಿರಿಗೆ ಲಸಿಕೆ ನೀಡುತ್ತಿರುವುದು.       ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೋವಿಡ್- 19 ಲಸಿಕಾ ಅಭಿಯಾನದಡಿ ಸೋಮವಾರ(ಇಂದು) ಅಂಗನವಾಡಿ ಕೇಂದ್ರಗಳ ಫಲಾನುಭವಿ 0-6 ವರ್ಷದೊಳಗಿನ 162451 ಮಕ್ಕಳ ತಾಯಂದಿರಿಗೆ ಕೋವಿಡ್ ಲಸಿಕೆ ವ್ಯಾಕ್ಸಿನ್ ನೀಡಲಾಯಿತು. ಜಿಲ್ಲಾಧಿಕಾರಿಗಳ ಸೂಚನೆಯಂತೆ ಇಂದು ಜಿಲ್ಲೆಯ ಎಲ್ಲಾ ಲಸಿಕಾ ಕೇಂದ್ರಗಳಲ್ಲಿ ಅಂಗನವಾಡಿ ಫಲಾನುಭವಿಗಳ ತಾಯಂದಿರಿಗೆ ಲಸಿಕೆ ನೀಡಲಾಯಿತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್ ನಟರಾಜ್ ತಿಳಿಸಿದ್ದಾರೆ.  

Read More

  ತುಮಕೂರು :      ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗಿರುವುದರಿಂದ ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾ, ಮೆದುಳುಜ್ವರ, ಆನೆಕಾಲು ರೋಗಗಳು ಹರಡದಂತೆ ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಲೇರಿಯಾ, ಡೆಂಗ್ಯು, ಚಿಕುನ್ ಗುನ್ಯಾ ರೋಗಗಳ ನಿಯಂತ್ರಣ ಕ್ರಮ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜೂಮ್ ಆ್ಯಪ್ ಮೂಲಕ ಏರ್ಪಡಿಸಲಾಗಿದ್ದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಕುರಿತು ಸಮುದಾಯಕ್ಕೆ ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇತರೆ ಇಲಾಖೆಗಳು ಹೆಚ್ಚಿನ ಅರಿವು ಮೂಡಿಸಬೇಕು. ನಗರದಲ್ಲಿರುವ ಗುಂಡಿ ಮತ್ತು ಕೆಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿರುವ ಟೈರ್ ಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ಸಾಧ್ಯತೆಯಿದ್ದು, ನೈರ್ಮಲ್ಯತೆ ಕಾಪಾಡುವಲ್ಲಿ ಹೆಚ್ಚು ಜಾಗೃತರಾಗಬೇಕು. ಪಾಲಿಕೆ ಸೇರಿದಂತೆ ನಗರಸಭೆ, ಪಟ್ಟಣ ಪಂಚಾಯ್ತಿಗಳಲ್ಲಿಯೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನೀರು ಸಂಗ್ರಹವಾಗುವ ಗುಂಡಿಗಳನ್ನು…

Read More

ಚಿಕ್ಕನಾಯಕನಹಳ್ಳಿ:      ತಾಲ್ಲೂಕಿನ ಬೊರನಕಣವೆಗೆ ಜಲಾಶಯಕ್ಕೆ ನೀರು ತುಂಬಿಸುವ ಸಾಧ್ಯತೆಗಾಗಿ ಸಚಿವ ಜೆ.ಸಿ. ಮಾಧುಸ್ವಾಮಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸರ್ವೆಗಾಗಿ ಗಂಟೇನಹಳ್ಳಿ ಬಳಿ ಸ್ಥಳ ಪರಿಶೀಲನೆ ನಡೆಸಿದರು.       ತಾಲ್ಲೂಕಿನ ಹೆಗ್ಗಳಿಕೆಯೊಂದಾದ ಬೋರನಕಣಿವೆ ಜಲಾಶಯ ಹೆಸರಿಗಷ್ಟೆ ಜಲಾಶಯವಾದರೂ ನೀರಿನ ಹರಿವಿನ ಕೊರತೆಯಿಂದಾಗಿ ಇದುವರೆಗೂ ಬೆರಳೆಣಿಕೆಯಷ್ಟು ಸಲ ತುಂಬಿದೆ. ಈ ಕೊರತೆ ನೀಗಿಸುವ ಉದ್ದೇಶದಿಂದ ಈ ಜಲಾಶಯಕ್ಕೆ 2.3 ಟಿಎಂಸಿ ನೀರಿನ ಅಗತ್ಯವಿದ್ದು, ಭದ್ರಾ ಮೇಲ್ದಂಡೆ ಹಾಗೂ ಹೇಮಾವತಿ ನಾಲೆಯಿಂದ 1.33 ಟಿಎಂಸಿ ಯಷ್ಟು ನೀರನ್ನು ನಿಗಧಿ ಮಾಡಿದ್ದು, ಉಳಿದ 1 ಟಿಂಎಂಸಿ ನೀರಿನ ಲಭ್ಯತೆಗಾಗಿ ಎತ್ತಿನಹೊಳೆ ಹಾಗೂ ಇನ್ನಿತರ ಜಲಮೂಲದಿಂದ ನೀರನ್ನು ಪಡೆಯುವ ಕುರಿತಾಗಿ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಾಧುಸ್ವಾಮಿಯವರು ತಾಲ್ಲೂಕಿನ ಗಂಟೇನಹಳ್ಳಿ ಭಾಗದಲ್ಲಿ ಅಧಿಕಾರಿಗಳೊಂದಿಗೆ ಸ್ಥಳಪರಶೀಲನೆ ನಡೆಸಿದರು. ಗಂಟೇನಹಳ್ಳಿಯಿಂದ ಬೋರನಕಣಿವೆಯವರೆಗೆ 250 ಕ್ಯೂಸೆಕ್ಸ್ ನೀರು ಹರಿಯುವ 9 ಕಿಮೀಗಳ ಫೀಡರ್ ಚಾನೆಲ್ ಮಾಡುವುದರಿಂದ ಈ ಭಾಗದ ಹೆಚ್ಚಿನ ನೀರು ಗಾಯಿತ್ರಿ ಜಲಾಶಯಕ್ಕೆ ಹರಿಯುವದನ್ನು…

Read More

ತುಮಕೂರು: ಊರ್ಡಿಗೆರೆ ಹೋಬಳಿ, ಅರೆಗುಜ್ಜನಹಳ್ಳ್ಳಿ ಗ್ರಾಮ ಪಂಚಾಯಿತಿ, ಸೀತಕಲ್ಲು ಗ್ರಾಮ ಪಂಚಾಯಿತಿ, ಊರ್ಡಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ವೈದ್ಯಕೀಯ ಸಿಬ್ಬಂದಿ, ಕೊರೋನ ಸೋಂಕಿತ ಕುಟುಂಬಳಿಗೆ ಹಾಗೂ ಆಟೋ ಚಾಲಕರಿಗೆ ಉಚಿತವಾಗಿ ಆಹಾರ ದಾನ್ಯಗಳ ಕಿಟ್‍ಗಳನ್ನು ಜಿಲ್ಲಾದ್ಯಕ್ಷರಾದ ಬಿ.ಸುರೇಶ್ ಗೌಡ ವಿತರಿಸಿ ಅವರ ಸೇವೆಯನ್ನು ಶ್ಲಾಘೀಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಬಿ.ಸುರೇಶ್ ಗೌಡ ಇಡೀ ದೇಶದಲ್ಲೇ ಮೊದಲ ಬಾರಿಗೆ ಕೊವಿಡ್-19 ಸೋಕಿಂನಿಂದ ಮೃತಪಟ್ಟ ಬಿಪಿಎಲ್ ಕುಟುಂಬ ವರ್ಗದ ಒಬ್ಬ ಸದಸ್ಯರಿಗೆ 1 ಲಕ್ಷ ರೂಪಾಯಿಯ ಪರಿಹಾರವನ್ನು ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಘೋಷಣೆ ಮಾಡಿರುವುದು ಅತ್ಯಂತ ಸ್ವಾಗತಾರ್ಹ. ಇದರಿಂದ ರಾಜ್ಯದ ಬಿಪಿಎಲ್ ಕಾರ್ಡ್ ಹೊಂದಿರುವ ವ್ಯಕ್ತಿಗಳು ಮೃತ ಪಟ್ಟರೆ ಅಂತಹ ಕುಟುಂಬಗಳ ಒಬ್ಬರಿಗೆ ಅನ್ವಯವಾಗುವಂತೆ 1 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡುವ ಮೂಲಕ ರಾಜ್ಯ ಸರ್ಕಾರ ಬಡವರ ಪರವಿದೆ, ಅದೇ ರೀತಿ ಬಡ ಜನತೆಗೆ…

Read More

ತುಮಕೂರು:       ನಗರದಲ್ಲಿ ಆಶ್ರಯ ಮನೆ ಯೋಜನೆಯಡಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಈ ಹಿಂದೆ ಅವಕಾಶ ಕಲ್ಪಿಸಲಾಗಿತ್ತು. ಸದರಿಯವರು 22 ಸಾವಿರಕ್ಕೂ ಹೆಚ್ಚು ಆನ್‍ಲೈನ್ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇದರಲ್ಲಿ 4 ಸಾವಿರ ಅರ್ಜಿಗಳು ಮಾತ್ರ ಅರ್ಹವಾಗಿರುತ್ತದೆ. ಮತ್ತೊಂದೆಡೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಬಗ್ಗೆ ನಮಗೆ ಮಾಹಿತಿಯಿಲ್ಲ. ನಮಗೂ ಅರ್ಜಿ ಸಲ್ಲಿಸಲು ಅವಕಾಶ ಕೊಡಿ, ನಾವು ಅರ್ಹರು ಎಂದು ನೂರಾರು ಸಾರ್ವಜನಿಕರು ನನ್ನ ಬಳಿ ಬಂದು ಅಳಲು ತೋಡಿಕೊಂಡಿದ್ದಾರೆ. ಈ ಕಾರಣದಿಂದ ಈ ಸಭೆಯ ನಿರ್ಣಯದಂತೆ ಮತ್ತೊಮ್ಮೆ ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲು ಮಾನ್ಯ ವಸತಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ರವರು ತಿಳಿಸಿದರು.       ತಮ್ಮ ಶಾಸಕ ಕಛೇರಿಯಲ್ಲಿ ನಗರ ಆಶ್ರಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ನಗರದಲ್ಲಿ ಸೈಟ್ ಹಂಚಿಕೆ ಮಾಡಲು ಸಾಧ್ಯವಿಲ್ಲ. ಸರ್ಕಾರಿ ಜಮೀನುಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದು, ಜಿ+2…

Read More

ತುಮಕೂರು :       ಕೋವಿಡ್ ಮೊದಲನೇ ಲಸಿಕೆ ಪಡೆದು 84 ದಿನ ಪೂರೈಸಿ ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಉಳಿದಿರುವ ಸಾರ್ವಜನಿಕರು ಸೇರಿದಂತೆ 21592 ಫ್ರಂಟ್‍ಲೈನ್ ಹಾಗೂ ಹೆಲ್ತ್ ಕೇರ್ ವರ್ಕರ್ಸ್‍ಗಳಿಗೆ ಆದ್ಯತೆ ಮೇರೆಗೆ ಶನಿವಾರ ಮತ್ತು ಭಾನುವಾರದಂದು ಹತ್ತಿರದ ಲಸಿಕಾ ಕೇಂದ್ರದಲ್ಲಿ ಲಸಿಕೆ ನೀಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ತಹಸೀಲ್ದಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜರುಗಿದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಸರ್ಕಾರದಿಂದ ಲಸಿಕೆ ಪೂರೈಕೆಯಾಗಲಿದ್ದು, ಶನಿವಾರದಿಂದ ಮೂರು ದಿನಗಳ ಕಾಲ ಜಿಲ್ಲೆಯ ಎಲ್ಲಾ ಲಸಿಕಾ ಕೇಂದ್ರಗಳಲ್ಲಿಯೂ ಸಮರ್ಪಕವಾಗಿ ಲಸಿಕೆ ಲಭ್ಯವಾಗಲಿದೆ. ಹಾಗಾಗಿ ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಜಿಲ್ಲೆಯಲ್ಲಿ ಈಗಾಗಲೇ 574781 ಮೊದಲ ಡೋಸ್, 123577 ಎರಡನೇ ಡೋಸ್ ಸೇರಿ ಸುಮಾರು 7 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಇದರಲ್ಲಿ ಹೆಲ್ತ್‍ಕೇರ್ ವರ್ಕರ್ಸ್‍ಗಳಿಗೆ…

Read More