Author: News Desk Benkiyabale

ಗುಬ್ಬಿ: ತಾಲೂಕಿನ ಜನತೆಯನ್ನು ತಾನು ಗೆದ್ದಂತ ಪಕ್ಷದಿಂದ ಬೇರೆ ಪಕ್ಷಕ್ಕೆ ಅಡವಿಡುತ್ತಿದ್ದಾರೆ ಎಂದು ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಜಿ.ಎಸ್.ಪ್ರಸನ್ನ ಕುಮಾರ್ ಶಾಸಕರ ವಿರುದ್ಧ ಕಿಡಿಕಾರಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನೆ ನಡೆಸಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ನಂತರ ಮಾತನಾಡಿದ ಅವರು ಜೆಡಿಎಸ್ ಪಕ್ಷದ ಚಿನ್ನೆ ಮೇಲೆ ಗೆದ್ದಂತ ಶಾಸಕ ತನ್ನ ಮತವನ್ನು ಬಿಜೆಪಿಗೆ ಮಾರಿಕೊಂಡ ನಂತರ ಜೆಡಿಎಸ್ ಪಕ್ಷದಿಂದ ಹೊರ ಹಾಕಿದ ನಂತರ ದಿ. 5- 7- 2022 ರಂದು ತನ್ನ ಲೆಟರ್ ಹೆಡ್ಡಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತೀರ ಹಿಂದುಳಿದ ಪ್ರದೇಶ ಹಾಗಾಗಿ 100 ಕೋಟಿ ರೂಗಳನ್ನು ತನ್ನ ತಾಲೂಕಿನ ಅಭಿವೃದ್ಧಿಗೆ ಬಿಡುಗಡೆ ಮಾಡಬೇಕೆಂದು ಪತ್ರ ಬರೆದಿರುವುದು ಪಕ್ಷದಿಂದ ಹುಚ್ಚಾಟಿಸಿದ ನಂತರ ಇದರಿಂದ ಗುಬ್ಬಿ ತಾಲೂಕಿನ ಜನತೆಯ ಕಣ್ಣಿಗೆ ಮಣ್ಣು ಎರಚುವಂತಹ ಹುನ್ನಾರಿನಲ್ಲಿದ್ದಾರೆ. ಕೇವಲ ಚುನಾವಣೆಯು ಎಂಟು ತಿಂಗಳಲ್ಲಿ ಇರುವುದು ಸರಿ ಅಷ್ಟೇ. 20 ವರ್ಷಗಳಿಂದ ಆಡಳಿತ ನಡೆಸಿದಂತಹ ಗುಬ್ಬಿಯ ಶಾಸಕ ಹಿಂದುಳಿದ ಪ್ರದೇಶವೆಂದು…

Read More

ತುಮಕೂರು: ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಡಿ.ಕೊರಟಗೆರೆಯಲ್ಲಿ ಫ್ಲೆಕ್ಸ್ ಅಳವಡಿಸುವ ವಿಚಾರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದಂತಹ ಗಲಭೆಯನ್ನೇ ಮಾಜಿ ಶಾಸಕ ಬಿ.ಸುರೇಶ್‍ಗೌಡ ಮತ್ತು ಅವರ ಬೆಂಬಲಿಗರು ಹಿಂದು-ಮುಸ್ಲಿಂ ಗಲಾಟೆ, ಲಿಂಗಾಯಿತ-ಒಕ್ಕಲಿಗರ ನಡುವೆ ಗಲಾಟೆ ಎಂಬಂತೆ ಬಿಂಬಿಸಲು ಹೊರಟಿರುವುದು ಖಂಡನೀಯ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಿರೇಹಳ್ಳಿ ಮಹೇಶ್ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಸ್ಕಲ್ ಗ್ರಾಪಂ ವ್ಯಾಪ್ತಿ ಡಿ.ಕೊರಟಗೆರೆ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ನಡೆಯಿತು, ಈ ಪ್ರಯುಕ್ತ ಫ್ಲೆಕ್ಸ್ ಬ್ಯಾನರ್ ಕಟ್ಟುವ ವಿಚಾರದಲ್ಲಿ ಬಿಜೆಪಿ ಕಿಡಿಗೇಡಿಗಳು ಜಗಳ ತೆಗೆದು ಕೆಟ್ಟ ಹೆಸರು ತರುವ ಹುನ್ನಾರ ಮಾಡಿದ್ದಾರೆ, ಜೆಡಿಎಸ್ ಶಾಸಕರ ಮೇಲಿನ ಅಭಿಮಾನದಿಂದ ಪಕ್ಷದ ಕಾರ್ಯಕರ್ತರು ಬ್ಯಾನರ್ ಕಟ್ಟಲು ಹೋದಾಗ ಜೆಡಿಎಸ್ ಕಾರ್ಯಕರ್ತರನ್ನು ಮಸ್ಕಲ್ ಗ್ರಾಪಂ ಅಧ್ಯಕ್ಷರು ತಡೆಯುತ್ತಾರೆ. ನಮ್ಮ ಮನೆ ಮುಂದೆ ಕಟ್ಟಬೇಡಿ ಎಂದಾಗ ನಾವು ಸುಮ್ಮನಾಗುತ್ತೇವೆ. ಬೇರೆ ಕಡೆ ಕಟ್ಟಲು ಮುಂದಾದಾಗ ಬ್ಯಾನರ್ ಹರಿದು ಹಲ್ಲೆ ಮಾಡಿದ್ದಾರೆ.ಆದರೆ ಸತ್ಯ ಮರೆಮಾಚುವ ಕೆಲಸಕ್ಕೆ…

Read More

ತುಮಕೂರು: ಗ್ರಾಮಾಂತರ ಕ್ಷೇತ್ರದಲ್ಲಿ ಪದೇ ಪದೇ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಜೆಡಿಎಸ್‍ನ ಪಾಲನೇತ್ರಯ್ಯನವರ ವಿರುದ್ಧ ಪೆÇಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಹಾಗೂ ಜಿ.ಪಂ. ಮಾಜಿ ಸದಸ್ಯ ಶಿವಕುಮಾರ್ ಒತ್ತಾಯಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೂ ಗ್ರಾಮ ಪಂಚಾಯ್ತಿ ಸದಸ್ಯ ಕೂಡ ಆಗಿರದ ಪಾಲನೇತ್ರಯ್ಯ ಅವರು ಗ್ರಾಮಾಂತರ ಕ್ಷೇತ್ರದಲ್ಲಿ ಕೆಲ ಅಹಿತಕರ ಘಟನೆಗಳಿಗೆ ಕಾರಣವಾಗುತ್ತಿದ್ದಾರೆ. ಅಲ್ಲದೆ ಅಂತಹ ಸ್ಥಳಗಳಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇವರ ವಿರುದ್ಧ ಕೂಡಲೇ ಪೆÇಲೀಸರು ಕ್ರಮ ಕೈಗೊಳ್ಳಬೇಕು ಎಂದರು. ಗ್ರಾಮಾಂತರ ಕ್ಷೇತ್ರದಲ್ಲಿ ವೀರಶೈವ ಜನಾಂಗವನ್ನು ಒಡೆಯುವ ಉದ್ದೇಶದಿಂದ ಪಾಲನೇತ್ರಯ್ಯ ಪದೇ ಪದೇ ಮಾಜಿ ಶಾಸಕ ಸುರೇಶ್‍ಗೌಡ ಅವರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಸುರೇಶ್‍ಗೌಡರು ಬೆಂಗಳೂರಿನಲ್ಲಿದ್ದರೂ ಸಹ ಅವರ ಹೆಸರನ್ನು ಮುನ್ನಲೆಗೆ ತರುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಗುಡುಗಿದರು. ಊರ ಜಾತ್ರೆ ಸಂದರ್ಭದಲ್ಲಿ ಪ್ಲಕ್ಸ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದಿದೆ. ಆದರೆ ಅದಕ್ಕೆ ಸುರೇಶ್‍ಗೌಡರೇ ಕಾರಣ ಎಂದು ಪಾಲನೇತ್ರಯ್ಯ ಹೇಳಿಗೆ ನೀಡುತ್ತಾರೆ.…

Read More

ತುಮಕೂರು: ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಚರ್ಚಿಸಿದರು. ಗ್ರಾಮೀಣ ಮತ್ತು ನಗರ ಪ್ರದೇಶಗಳ ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಒದಗಿಸಬೇಕಾಗಿದ್ದು, ಕನಿಷ್ಠ 20×30 ಅಳತೆಯ ನಿವೇಶನಗಳನ್ನು ಪಾಲಿಕೆ, ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳು ಮತ್ತು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಪಿಡಿಓಗಳು ನಿವೇಶನ ಒದಗಿಸುವಂತೆ ಸೂಚಿಸಿದರು. 15ನೇ ಹಣಕಾಸು ಪ್ರಗತಿ ಪರಿಶೀಲನೆ ನಡೆಸಿದ ಅವರು, ಕುಡಿಯುವ ನೀರು, ಅಮೃತ್ ನಿರ್ಮಲ ನಗರ ಯೋಜನೆ, ಅಂಬೇಡ್ಕರ್, ವಾಜಪೇಯಿ ವಸತಿ ಯೋಜನೆಗಳಡಿ ನಿರೀಕ್ಷಿತ ಪ್ರಗತಿ ಸಾಧಿಸುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳಿಗೆ ಸೂಚಿಸಿದರು. ನೋಟಿಸ್ ಅವಧಿಯ ಭೂಮಿ ಅರ್ಜಿಗಳನ್ನು 33 ದಿನಗಳೊಗಾಗಿ ವಿಲೇವಾರಿ ಮಾಡದ ತಹಸಿಲ್ದಾರ್, ಕಂದಾಯ ನಿರೀಕ್ಷಕ, ಸರ್ವೇ ಸೂಪರ್‍ವೈಸರ್‍ಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು. ಜಿಲ್ಲೆಯಲ್ಲಿ 6850 ಪಹಣಿ ಕಾಲಂ 3/9 ಮಿಸ್ ಮ್ಯಾಚ್ ಪ್ರಕರಣಗಳಿದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸೂಚಿಸಿದರು. ಕಂದಾಯ ಇಲಾಖೆಯ ಸರ್ಕಾರಿ…

Read More

ತುಮಕೂರು: ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಕುಟುಂಬ ಯೋಜನೆ ಉಪಯೋಗಗಳನ್ನು ನಮ್ಮದಾಗಿಸಿ ಉನ್ನತಿಯ ಹೊಸ ಆಧ್ಯಾಯ ಬರೆಯೋಣ ಎಂಬ ಘೋಷವಾಕ್ಯದೊಂದಿಗೆ ಜನಸಂಖ್ಯೆ ನಿಯಂತ್ರಣ ಕುರಿತು ಜನಜಾಗೃತಿ ಜಾಥಾವನ್ನು ನಗರದಲ್ಲಿ ನಡೆಸಲಾಯಿತು. ಇಲ್ಲಿನ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜನಸಂಖ್ಯೆ ನಿಯಂತ್ರಣ ಕುರಿತ ಜನಜಾಗೃತಿ ಜಾಥಾಕ್ಕೆ ಮಹಾನಗರ ಪಾಲಿಕೆ ಮೇಯರ್ ಬಿ.ಜಿ. ಕೃಷ್ಣಪ್ಪ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಭಾರತ ದೇಶ ಜನಸಂಖ್ಯೆಯಲ್ಲಿ ಮುಂಚೂಣಿಯಲ್ಲಿದೆ. ಜನಸಂಖ್ಯಾ ಸ್ಫೋಟವನ್ನು ನಿಯಂತ್ರಣಗೊಳಿಸುವಲ್ಲಿ ಅಧಿಕಾರಿಗಳು ಸಹ ಮುಂದಾಗಿದ್ದಾರೆ. ಈ ಕುರಿತು ಜನರಲ್ಲಿ ಮತ್ತಷ್ಟು ಅರಿವು ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕಿದೆ ಎಂದರು. ಜನಸಾಮಾನ್ಯರಿಗೆ ಜನಸಂಖ್ಯೆ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಇಂತಹ ಕಾರ್ಯಕ್ರಮ ಅತ್ಯಗತ್ಯವಾಗಿದೆ ಎಂದರು. ಡಿಹೆಚ್‍ಓ ಡಾ. ಮಂಜುನಾಥ್ ಮಾತನಾಡಿ, ಕುಟುಂಬ ಯೋಜನೆ ಕಾರ್ಯಕ್ರಮಗಳ ಬಗ್ಗೆ ಪ್ರತಿಯೊಬ್ಬರೂ…

Read More

ತುಮಕೂರು: ಮುಂದಿನ ಆಗಸ್ಟ್ 03 ರಂದು ದಾವಣಗೆರೆಯಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಹಿಂದುಳಿದ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಇಂದು ಕಾಳಿದಾಸ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ಎಂ.ಎಲ್.ಸಿ. ಆರ್.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಪೂರ್ವಭಾವಿ ಸಭೆಯಲ್ಲಿ ಕುರುಬ, ಮಡಿವಾಳ, ಕುಂಬಾರ, ನೇಕಾರ, ಸವಿತಾ, ವಾಲ್ಮೀಕಿ, ಗೊಲ್ಲ ಸಮುದಾಯದ ಮುಖಂಡರು ಸೇರಿದಂತೆ ಓಬಿಸಿ ಸಮುದಾಯಕ್ಕೆ ಸೇರಿದ ಹಲವು ಮುಖಂಡರು ಭಾಗವಹಿಸಿ, ಜಿಲ್ಲೆಯಿಂದ ಹೆಚ್ಚು ಜನರನ್ನು ಕರೆದುಕೊಂಡು ಹೋಗುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಯಿತು. ಕಾರ್ಯಕ್ರಮ ಕುರಿತು ಮಾತನಾಡಿದ ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದ ಸಂಚಾಲಕ ಧನಿಯಕುಮಾರ್, ದಿವಂಗತ ದೇವರಾಜ ಅರಸು ನಂತರ ಹಿಂದುಳಿದ ವರ್ಗಗಳ ಕುಂದು ಕೊರತೆಗಳಿಗೆ ಸ್ಪಂದಿಸಿ ಕೆಲಸ ಮಾಡಿದ ಮುಖ್ಯಮಂತ್ರಿಗಳಿದ್ದರೆ ಅದು ಸಿದ್ದರಾಮಯ್ಯ ಮಾತ್ರ. ಹಾಗಾಗಿ ದಾವಣಗೆರೆಯಲ್ಲಿ ನಡೆಯುವ ಅವರ 75ನೇ ಹುಟ್ಟು ಹಬ್ಬದಲ್ಲಿ ಜಿಲ್ಲೆಯಿಂದ ಹೆಚ್ಚು ಜನರು ಭಾಗವಹಿಸುವ ಮೂಲಕ ಒಗ್ಗಟ್ಟು…

Read More

ಗುಬ್ಬಿ: ತಾಲೂಕಿನ ಶಾಸಕರು ಅಸಮರ್ಥರಾಗಿದ್ದು ಕಮಿಟಿಯ ಅಧ್ಯಕ್ಷರಾದವರೇ ಭ್ರಷ್ಟಾಚಾರಿಗಳಾದರೆ ಜನಸಾಮಾನ್ಯರ ಗತಿ ಏನು ಎಂದು ಕಾಂಗ್ರೆಸ್ ಮುಖಂಡ ಹೊನ್ನಗಿರಿಗೌಡ ಅವರು ಶಾಸಕರ ವಿರುದ್ಧ ಕಿಡಿಕಾರಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು 20 ವರ್ಷಗಳಿಂದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಶಾಸಕ ತನ್ನ ಹಿಂಬಾಲಕರ ಟೀಮ್ ಕಟ್ಟಿಕೊಂಡು ತಾಲೂಕಿನಾದ್ಯಂತ ಭ್ರಷ್ಟಾಚಾರ ವೆಸಿಗಿದ್ದು ಇದನ್ನು ಪ್ರಶ್ನೆಸಲು ಹೋದ ಸಾರ್ವಜನಿಕರಿಗೆ ಧಮ್ಕಿ ಹಾಕುವಂತಹ ಈ ಶಾಸಕರ ಸ್ಥಾನದಲ್ಲಿರಲು ಅರ್ಹರಲ್ಲ. ಭೂ ಹಗರಣದ ರೂವಾರಿ ನೀವೇ ಅಲ್ಲವೇ ಎಂದು ಪ್ರಶ್ನಿಸಿದರು. ಇದೇ ತಿಂಗಳ 25 ಸೋಮವಾರದಂದು ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಯಕರ್ತರುಗಳು ಹಾಗೂ ನೋಂದ ರೈತರಗಳ ಜೊತೆ ಬೃಹತ್ ಪ್ರತಿಭಟನೆ ಯೊಂದಿಗೆ ನ್ಯಾಯ ಒದಗಿಸುವಂತೆ ಹಾಗೂ ಸಿ ಓಡಿ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಜಿಲ್ಲಾ ಮುಖಂಡರು ಹಾಗೂ ತಾಲೂಕು ಮುಖಂಡರುಗಳ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದ ಅವರು ಪಕ್ಷದಿಂದ ಹುಚ್ಚಾಟಿತರಾದ ವಾಸು ರವರು ಶಾಸಕ ಗಿರಿಯನ್ನು ನಿಭಾಯಿಸಲು ಅಸಮರ್ಥರಾಗಿದ್ದಾರೆ. ಭೂ ನ್ಯಾಯ ಮಂಡಳಿಯ…

Read More

ಗುಬ್ಬಿ: ತಾಲ್ಲೂಕಿನಲ್ಲಿ ಶಾಸಕರ ದುರಾಡಳಿತ ದಿಂದ ಜನತೆ ಬೇಸತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜ್ ನೇರ ವಾಗ್ದಾಳಿ ನಡೆಸಿದರು. ಗುಬ್ಬಿ ತಾಲ್ಲೂಕಿನಲ್ಲಿ 20ವರ್ಷಗಳಿಂದ ಶಾಸಕರಾಗಿರುವ ನೀನು ತಾಲ್ಲೂಕಿನ ಯಾವ ಅಭಿವೃದ್ಧಿ ಮಾಡಿದ್ದೀರಿ ಎಂಬುದನ್ನು ತೋರಿಸಿ ನೋಡೋಣ ಕೇವಲ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಅಧಿಕಾರಿಗಳನ್ನು ಬಳಸಿಕೊಂಡು ಭ್ರಷ್ಟಾಚಾರಕ್ಕೆ ನೇರ ಕಾರಣ ಶಾಸಕ ಎಸ್. ಆರ್.ಶ್ರೀನಿವಾಸ್ ಎಂದು ನೇರ ಆರೋಪ ಮಾಡಿದರು. ಗುಬ್ಬಿ ಪಟ್ಟಣದ ತಾಲೂಕು ಕಛೇರಿಯ ಮುಂಭಾಗದಲ್ಲಿ ಜೆಡಿಎಸ್ ತಾಲೂಕು ಘಟಕದ ವತಿಯಿಂದ ಗುಬ್ಬಿ ತಾಲ್ಲೂಕಿನ ಲ್ಲಿ ನೆಡೆದಿರುವ ಭೂ ಹಗರಣವನ್ನು ಸಿಒಡಿ ತನಿಖೆಗೆ ವಹಿಸುವಂತೆ ಆಗ್ರಹಿಸಿ ಇಂದು ಆಯೋಜಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ ದ ಅವರು ಶಾಸಕರೇ ನಾನಂತು ಬಗರುಕುಂ ಸಾಗುವಳಿ ಮತ್ತು 50.53 ಬಗ್ಗೆ ಪಿ ಹೆಚ್ ಡಿ ಪದವಿ ಮಾಡಿಲ್ಲ ನೀವು ಬಗರುಕುಂ ಸಮಿತಿ ಅಧ್ಯಕ್ಷ ರಾಗಿರುವವರು ಸಾಗುವಳಿ ವಿತರಣೆ ಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವ ರೈತರಿಗೆ ಅನ್ಯಾಯ ಮಾಡಲು ಮುಂದಾಗಬೇಡಿ. ಇಂದು ರೈತರ ಜಮೀನು ಕಬಳಿಸಲು ಮುಂದಾಗಿರುವ…

Read More

ತುಮಕೂರು: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯನ್ನು ನಡೆಸಿ ಚರ್ಚಿಸಿದರು. ಸಭೆಯನ್ನು ಉದ್ದೇಶಿಸಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕೋವಿಡ್-19 ತಡೆಗಟ್ಟಲು ಲಸಿಕಾಕರಣ ಅಗತ್ಯವಾಗಿದ್ದು, ಗ್ರಾಮ ಪಂಚಾಯತ್ ಹಂತದಲ್ಲಿ ಪಿಡಿಓ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ವೃದ್ಧಾಪ್ಯ ವೇತನ ಪಡೆಯತ್ತಿರುವವರ ಮಾಹಿತಿ ತರಿಸಿಕೊಂಡು ಅವರಿಗೆ ಬೂಸ್ಟರ್ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳಲು ತಿಳಿಸಬೇಕು. ಈ ಕುರಿತು ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಕಾಧಿಕಾರಿಗಳು ತಮ್ಮ ಅಧೀನ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸೂಚಿಸಿದರು. ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟ ಮೊದಲೆರಡು ಡೋಸ್ ಲಸಿಕಾಕರಣ ಪೂರೈಸಿದವರಿಗೆ ಹತ್ತಿರದ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಜುಲೈ 15 ರಿಂದ 75 ದಿನಗಳ ಕಾಲ ಬೂಸ್ಟರ್ ಡೋಸ್ ಹಾಕಲಾಗುವುದು ಎಂದರಲ್ಲದೇ, ನಿಗಧಿತ ವಯಸ್ಸಿನ ಮೇಲ್ಪಟ್ಟ ಎಲ್ಲರೂ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದರು. ಶಿಕ್ಷಣಾಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯ ಪಿಯುಸಿ, ಐಟಿಐ, ಡಿಪ್ಲೊಮಾ, ನಸಿರ್ಂಗ್…

Read More

ತುಮಕೂರು: ದೇಶಾದ್ಯಂತ ಸ್ವಾತಂತ್ರ್ಯದ 75ರ ಸಂಭ್ರಮವನ್ನು ವೈವಿಧ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದ್ದು, ಈ ಸಂಭ್ರಮದ ಒಂದು ಭಾಗವಾಗಿ ಕೇಂದ್ರ ಸರ್ಕಾರದ ‘ಹರ್ ಘರ್ ತಿರಂಗಾ’ ಎಂಬ ಘೋಷ ವಾಕ್ಯದೊಂದಿಗೆ 2022ರ ಆಗಸ್ಟ್ 11ರಿಂದ 17ರವರೆಗೆ ದೇಶದ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿ, ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವ ನಿಟ್ಟಿನಲ್ಲಿ ‘ಹರ್ ಘರ್ ತಿರಂಗಾ’ ಎಂಬ ಕಾರ್ಯಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ‘ಹರ್ ಘರ್ ತಿರಂಗಾ’ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿರ್ದೇಶನದಂತೆ ಪ್ರತಿಯೊಬ್ಬ ವ್ಯಕ್ತಿಯಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸಲು, ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಬೇಕು ಹಾಗೂ ಮಕ್ಕಳಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸುವುದು ‘ಹರ್ ಘರ್ ತಿರಂಗಾ’ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ. ಪ್ರತೀ ಗ್ರಾಮ ಪಂಚಾಯ್ತಿಗಳಲ್ಲಿ 250 ಭಾವುಟಗಳನ್ನು ಖರೀದಿಸಿ ಸಂಬಂಧಿಸಿದ ಎಲ್ಲಾ ಸರ್ಕಾರಿ ಕಚೇರಿ, ಕ್ವಾಟ್ರಸ್, ಅಂಗನವಾಡಿ, ಶಾಲಾ-ಕಾಲೇಜು, ನ್ಯಾಯ ಬೆಲೆ ಅಂಗಡಿಗಳಿಗೆ ನೀಡುವ ಮೂಲಕ ರಾಷ್ಟ್ರಧ್ವಜವನ್ನು…

Read More