Author: News Desk Benkiyabale

ತುಮಕೂರು: ಸಂಗೀತ, ನೃತ್ಯ, ನಾಟಕಗಳಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಮನುಷ್ಯನ ಮನಸ್ಸು, ಕೆಟ್ಟ ವಿಚಾರಗಳತ್ತ ಹೊರಳದಂತೆ ತಡೆಯುತ್ತವೆ. ಇಂತಹ ಅಭ್ಯಾಸಗಳಿಂದ ಯುವಜನರು ದುಶ್ಚಟಗಳ ದಾಸರಾಗುವುದು ತಪ್ಪುತ್ತದೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಕಲಾಕಾರ್ ಇವೆಂಟ್ಸ್ ಅವರ ಆಯೋಜಿಸಿದ್ದ ರಾಜ್ಯಮಟ್ಟದ ಸ್ವರ ಶೃಂಗಾರ ಕರೋಕೆ ಗೀತಗಾಯನ ಮತ್ತು ಸ್ವರ ಶೃಂಗಾರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸ್ವರ ಶೃಂಗಾರ ಸಂಸ್ಥೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡುತಿದ್ದ ಅವರು,ಮಾದಕ ವ್ಯಸನಗಳಿಗೆ ಬಲಿಯಾಗಿ ಯುವಜನರು ತಮ್ಮ ಜೀವನವನ್ನೇ ಕಳೆದುಕೊಳ್ಳುತ್ತಿದ್ದಾರೆ.ಶಾಲಾ, ಕಾಲೇಜುಗಳ ಯುವಜನರು ಸಂಗೀತ, ಸಾಹಿತ್ಯದಂತಹ ಸಾಂಸ್ಕೃತಿಕ ಕಲೆಗಳನ್ನು ತಮ್ಮಲ್ಲಿ ರೂಢಿಸಿಕೊಂಡರೆ ವ್ಯಸನ ಮುಕ್ತ ಜೀವನ ನಡೆಸಲು ದಾರಿಯಾಗುತ್ತದೆ. ಹಾಗಾಗಿ ಕಲಾಕಾರ್ ಈವೆಂಟ್ಸ್ ಇಂತಹ ಕಾರ್ಯಕ್ರಮಗಳನ್ನು ಹದಿಹರೆಯದ ಯುವಜನರು ಕಲಿಯುವ ಕಾಲೇಜುಗಳಲ್ಲಿ ಏರ್ಪಡಿಸಿ, ಅವರಲ್ಲಿರುವ ಪ್ರತಿಭೆಗೆ ಸಾಣೆ ಹಿಡಿಯುವ ಕೆಲಸ ಮಾಡಿದರೆ, ಹೊಸ ಪ್ರತಿಭೆಗಳ ಉದಯದ ಜೊತೆಗೆ, ಸಾಮಾಜಿಕ ಸಮಸ್ಯೆಯಾಗಿರುವ ದುಶ್ಚಟಗಳಿಂದ ದೂರ ಇಡಲು…

Read More

ತುರುವೇಕೆರೆ: ಕಾಶ್ಮೀರದಲ್ಲಿನ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರರು ಮತ್ತು ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ಮೇಲೆ ಭಾರತ  ಸಿಂಧೂರ್ ಆಫರೇಷ್ ನಡೆಸಿ ಯಶಸ್ವಿಯಾಗಿವ ಕಾರಣ  ಇದರ ಕ್ರೆಡಿಟ್ ಅನ್ನು  ಪ್ರಧಾನಿಯವರಿಗೆ ನೀಡದೆ ಸೈನಿಕರಿಗೆ ನೀಡಬೇಕು  ಎನ್ನುವ  ಮುಖ್ಯ ಮಂತ್ರಿಗಳ  ನಿಲುವು ಖಂಡನೀಯ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸಂಜೆ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಯುದ್ದದ ಮೂಲಕ ಭಾರತ ಪಾಕಿಸ್ತಾನದ ತಪ್ಪನ್ನು ಮನವರಿಕೆ ಮಾಡಿಕೊಟ್ಟಿದೆ. ಜೊತೆಗೆ ಪಾಕಿಸ್ತಾನದ ಪ್ರಧಾನಿಯವರು ಯುದ್ದವನ್ನು ನಿಲ್ಲಿಸುವಂತೆ ಭಾರತಕ್ಕೆ ಮನವಿ ಮಾಡಿದ ಕಾರಣ ಪ್ರಧಾನಿ ನೇಂದ್ರ ಮೋದಿಯವರು ತಾತ್ಕಾಲಿಕವಾಗಿ ಕದನ ವಿರಾಮ ಘೋಷಣೆ  ಮಾಡಿದ್ದರೂ ಸಹ ಸಂಪೂರ್ಣವಾಗಿ ಯುದ್ದ ನಿಂತಿಲ್ಲ. ಭಾರತೀಯ ಸೈನಿಕರು ಉಗ್ರರನ್ನು ಹುಡುಕಿ ಸದೆಬಡಿದಿದ್ದಾರೆ. ಆದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಂಧೂರ್ ಆಫರೇಷ್  ಗೆಲುವಿನ ಕ್ರೆಡಿಟ್ ಅನ್ನು ಯಾರಿಗೂ ನೀಡದೆ  ಹೋರಾಡಿದ ಸೈನಿಕರಿಗೆ ನೀಡಬೇಕು ಎನ್ನುತ್ತಾರೆ ಇದನ್ನೂ ಒಪ್ಪೊಣ. ಆದರೆ  ಶತ್ರುಗಳೊಂದಿಗೆ ಯುದ್ದ ನಡೆಸುವ…

Read More

ತುಮಕೂರು: ಮಾಧ್ಯಮರಂಗ ಇಂದು ಬಹಳ ವಿಸ್ತಾರವಾಗಿ ಹರಡಿಕೊಂಡಿದೆ. ಇದರಲ್ಲಿರುವ ವಿಫುಲ ಅವಕಾಶಗಳನ್ನು ಯುವಜನತೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಸಂತ ಟಿ. ಡಿ. ತಿಳಿಸಿದರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಸೋಮವಾರ ಹಮ್ಮಿಕೊಂಡಿದ್ದ ಒಂದು ದಿನದ ಮಾಧ್ಯಮ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾಧ್ಯಮ ಕ್ಷೇತ್ರ ಇಂದು ಪತ್ರಿಕೆ, ಟಿವಿಗಳಿಗೆ ಸೀಮಿತವಾಗಿಲ್ಲ. ಡಿಜಿಟಲ್ ಯುಗ ನಮ್ಮನ್ನು ಆವರಿಸಿಕೊಂಡಿದೆ. ಯುವಜನರು ಮನಸ್ಸು ಮಾಡಿದರೆ ಸಮಾಜದಲ್ಲಿ ಬದಲಾವಣೆ ತರಲು ಮಾಧ್ಯಮರಂಗವನ್ನು ಬಳಸಿಕೊಳ್ಳಬಹುದು. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಮಾಧ್ಯಮ ರಂಗದ ಉದ್ಯೋಗಾವಕಾಶಗಳ ಬಗ್ಗೆ ಮಾತನಾಡಿದ ತುಮಕೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯೋಜಕ ಡಾ. ಸಿಬಂತಿ ಪದ್ಮನಾಭ ಕೆ. ವಿ. ಮಾಧ್ಯಮರಂಗದಲ್ಲಿ ಉದ್ಯೋಗ ಪಡೆಯುವವರಿಗೆ ಜೀವನೋಪಾಯವಷ್ಟೇ ಮುಖ್ಯವಾಗುವುದಿಲ್ಲ. ಸಮಾಜದ ಬದಲಾವಣೆಯಲ್ಲಿ ಪಾತ್ರವಹಿಸಿದ ತೃಪ್ತಿ ಹಾಗೂ ಸಾಮಾಜಿಕ ಮನ್ನಣೆ ಕೂಡ…

Read More

ತುಮಕೂರು: ಜಿಲ್ಲಾಡಳಿತ ಹಾಗೂ ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ೭೫ ಲಕ್ಷ ರೂ. ವೆಚ್ಚದಲ್ಲಿ ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಟೆನಿಸ್ ಕೋರ್ಟ್ ಹಾಗೂ ಆಟಗಾರರ ಕೊಠಡಿಯ ನವೀಕರಣಗೊಳಿಸುವ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ತುಮಕೂರು ಬಹಳ ವೇಗವಾಗಿ ಬೆಳೆಯುತ್ತಿದೆ. ಇದರ ದೂರದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಸಚಿವ ಪರಮೇಶ್ವರ ಅವರು ಹೇಳಿದರು. ೨೦೦೩ರಲ್ಲಿ ಎಟಿಪಿ ರ‍್ಯಾಂಕ್ ಟೆನಿಸ್ ಟೂರ್ನಿಮೆಂಟ್ ನಡೆಸಬೇಕು ಎಂಬ ಮನವಿ ಬಂದಿತ್ತು. ಆಗ ಈ ಜಾಗವನ್ನು ಗುರುತಿಸಿ, ಎರಡು ತಿಂಗಳಲ್ಲಿ ಟೆನಿಸ್ ಮೈದಾನ ನಿರ್ಮಿಸಲಾಯಿತು. ಅಂದಿನ ಟೂರ್ನಮೆಂಟ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಭಾಗವಹಿಸಿದರು. ತದನಂತರ ಇದರ ನಿರ್ವಹಣೆಯ ಹೊಣೆಯನ್ನು ತುಮಕೂರು ಟೆನಿಸ್ ಅಸೋಸಿಯೇಷನ್‌ಗೆ ವಹಿಸಲಾಯಿತು. ಕೆಲವು ದಿನ ನಿರ್ವಹಣೆ ಮಾಡಿದರು. ಸಂಪನ್ಮೂಲ ಕೊರತೆಯಿಂದ ಮುಂದುವರೆಯಲಿಲ್ಲ. ನಾಲ್ಕೂ ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಉದ್ಘಾಟನೆಯ ಸಂದರ್ಭದಲ್ಲಿ ಟೂರ್ನಮೆಂಟ್ ಆಯೋಜಿಸಲಾಗುವುದು. ರಾಜ್ಯದ ಕ್ರೀಡಾಕೂಟ ತುಮಕೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಬ್ಯಾಸ್ಕೆಟ್‌ಬಾಲ್,…

Read More

ತುಮಕೂರು:  ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನ ಸಭಾಂಗಣ ಕಟ್ಟಡದ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ತುಮಕೂರಿನ ಅಭಿವೃದ್ಧಿಯ ದೃಷ್ಟಿಯಿಂದ ಜಿಲ್ಲೆಯ ಆಡಳಿತದ ವೈಖರಿ ಮತ್ತಷ್ಟು ಸುಧಾರಣೆಯಾಗಬೇಕು. ಯಾವುದೇ ರೀತಿಯ ಆಪೇಕ್ಷೆ ಇಲ್ಲದೆ ಜನಸಮುದಾಯಕ್ಕೆ ಕೆಲಸಗಳು ಆಗಬೇಕು ಎಂದು ಸಚಿವರು ಹೇಳಿದರು. ಸಾಮಾನ್ಯ ಪ್ರಜೆ, ಬಡ ರೈತ ತಹಶೀಲ್ದಾರರ ಕಚೇರಿಗೆ ತೊಂದರೆ, ನೋವಿನಿಂದ ಬರುತ್ತಾನೆ. ಅಂತವರ ಕೆಲಸಗಳನ್ನು ಸುಲಭವಾಗಿ ಮಾಡಿಕೊಡಬೇಕು. ಆತ ನಗುವಿನಿಂದ ಹೋದರೆ ಅದೇ ಒಳ್ಳೆಯ ಆಡಳಿತ. ಒಂದು ದಾಖಲೆ ಪಡೆದುಕೊಳ್ಳಲು ಹತ್ತು ಬಾರಿ ಅಲೆಯಬಾರದು. ಈ ವಿಚಾರವನ್ನು ಅಧಿಕಾರಿಗಳು ಮನಸ್ಸಿನಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು ಎಂದು ಸೂಚಿಸಿದರು. ಸರ್ಕಾರವು ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುತ್ತದೆ. ಅನೇಕ ನೀತಿಗಳನ್ನು, ತೀರ್ಮಾನಗಳನ್ನು ಮಾಡುತ್ತೇವೆ. ಅವುಗಳು ಜನರಿಗೆ ತಲುಪುವ ನಿಟ್ಟಿನಲ್ಲಿಅನುಷ್ಟಾನಗೊಳಿಸುವ ಜವಾಬ್ಧಾರಿ ನಿಮ್ಮ ಮೇಲಿದೆ ಎಂದರು. ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗಳನ್ನು ಸುಂದರವಾಗಿ, ಕಾರ್ಯಾತ್ಮಕವಾಗಿ ಹಾಗೂ ಆಧುನಿಕ ಆಡಳಿತಕ್ಕೆ ತಕ್ಕಂತೆ ಕಟ್ಟಿಸಿದ್ದಾರೆ.…

Read More

ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗವಲ್ಲಿ ಗ್ರಾಮದ ಕೆರೆ ಕೋಡಿಯ ಅಂಚಿನಲ್ಲಿ ವಾಸವಿದ್ದ ಸುಡುಗಾಡು ಸಿದ್ದ ಸಮುದಾಯದ ೧೯ ಕುಟುಂಬಗಳನ್ನು ಬಳ್ಳಗೆರೆ ಗ್ರಾಮ ಪಂಚಾಯಿತಿ ಹನುಮಂತನಗರಕ್ಕೆ ಸ್ಥಳಾಂತರಿಸಲಾಗಿದ್ದು ಈ ಕೂಡಲೇ ಅವರಿಗೆ ನಿವೇಶನದ ಹಕ್ಕುಪತ್ರ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಳೆಗೆರೆ ಗ್ರಾಮ ಪಂಚಾಯಿತಿ ಹನುಮಂತನಗರಕ್ಕೆ ಸಮಾಜ ಕಲ್ಯಾಣ ಯಾಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ನಿವೇಶನ ನೀಡುವ ಜಾಗವನ್ನು ಶಾಸಕರು ಪರಿಶೀಲಿಸಿದರು. ಸ್ವಾತಂತ್ರ‍್ಯ ಬಂದು ೭೫ ವರ್ಷಗಳು ಕಳೆದರೂ ಇಂದಿಗೂ ಗುಡಿಸಲಿ ನಲ್ಲಿ ವಾಸ ಮಾಡುತ್ತಿರುವುದು ನಮಗೆಲ್ಲ ಅವಮಾನ ಮತ್ತು ಅಪಮಾನ ಎಂದು ಶಾಸಕ ಬಿ ಸುರೇಶ್ ಗೌಡ ಹೇಳಿದರು. ರಾಜ್ಯದಲ್ಲಿ ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಇರುವ ಈ ಸಮುದಾಯವು ಅಳಿವಿನ ಅಂಚಿನಲ್ಲಿ ಇದಾವೆ. ಇಂತಹ ಜನ ಸಮುದಾಯದ ಉಳಿವಿಗಾಗಿ ಅವರಿಗೆ ಉತ್ತಮ ಶಿಕ್ಷಣ ಉತ್ತಮ ಅರೋಗ್ಯ ಹಾಗೂ ಉತ್ತಮ ಜನ ವಸತಿ ಪ್ರದೇಶ ನಿರ್ಮಾಣ ಮಾಡಿಕೊಡಬೇಕು ಈ…

Read More

ತುಮಕೂರು: ಸರಕಾರಿ ಶಾಲೆಗಳನ್ನು ಗುಣಮಟ್ಟದ ಶಿಕ್ಷಣದ ಜೊತೆಗೆ ಮೂಲಭೂತ ಸೌಕರ್ಯಗಳು ಮಕ್ಕಳಿಗೆ ದೊರೆಯುವಂತೆ ಮಾಡಿ, ಸರಕಾರಿ ಶಾಲೆಗಳನ್ನು ಉಳಿಸುವ ಗುರುತರಜವಾಬ್ದಾರಿ ಶಿಕ್ಷಕರು, ಪೋಷಕರು, ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಎಸ್.ಡಿ.ಎಂ.ಸಿ ಸದಸ್ಯರುಗಳ ಮೇಲಿದೆ ಎಂದು ಬಿಇಓ ಹನುಮಂತಪ್ಪ ತಿಳಿಸಿದ್ದಾರೆ. ನಗರದಉತ್ತರಬಡಾವಣೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಆಯೋಜಿಸಿದ್ದ “ನಮ್ಮ ಶಾಲೆ, ನಮ್ಮಜವಾಬ್ದಾರಿ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದಅವರು,ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯತ್ತದೆ ಎಂಬ ನಂಬಿಕೆಯನ್ನು ಮಕ್ಕಳ ಪೋಷಕರಲ್ಲಿಉಂಟು ಮಾಡಿದರೆ, ತಾನಾಗಿಯೇ ಮಕ್ಕಳ ಸಂಖ್ಯೆ ಹೆಚ್ಚಳವಾಗಲಿದೆ.ಈ ನಿಟ್ಟಿನಲ್ಲಿ ಶಿಕ್ಷಕರು,ಎಸ್.ಡಿ.ಎಂಸಿ ಸದಸ್ಯರು ಮತ್ತುಇಲಾಖೆಯಜವಾಬ್ದಾರಿಯೂಇದೆಎಂದರು. ಸರಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದಉಚಿತವಾಗಿ ಪುಸ್ತಕ,ಬಿಸಿಯೂಟ, ಕ್ಷೀರಭಾಗ್ಯ,ಷೂ ಭಾಗ್ಯ ನೀಡುತ್ತಿದೆ.ಅಲ್ಲದೆ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ನಿವಾರಿಸಲುಚಿಕ್ಕಿ, ಬಾಳೆ ಹಣ್ಣು ಮತ್ತು ಮೊಟ್ಟೆಯನ್ನು ನೀಡುತ್ತಿದೆ.ನಾನು ಕೂಡ ಶಾಲೆಯಲ್ಲಿಕೊಡುತ್ತಿದ್ದಗೋಧಿ ನುಚ್ಚಿನಉಪ್ಪಿಟ್ಟುತಿಂದುಕಲಿತವ. ಮಕ್ಕಳ ಬೌದ್ದಿಕ ಮತ್ತು ಶಾಲೆಯ ಭೌತಿಕ ಬೆಳವಣಿಗೆ ಸರಕಾರಎಲ್ಲಾರೀತಿಯ ಸಹಾಯ ಮತ್ತು ಸಹಕಾರ ನೀಡುತ್ತಾ ಬಂದಿದೆ.ಉತ್ತರ ಬಡಾವಣೆಯ…

Read More

ತುಮಕೂರು: ನಗರದ ಶ್ರೀ ಸಿದ್ಧಾರ್ಥ ಪ್ರ ಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ‘ಪ್ಲೇಸ್ಮೆಂಟ್ ಸೆಲ್ ಮತ್ತು ಇಂಟರ್ನಲ್ ಕ್ವಾಲಿಟಿ ಅಸೂರೆನ್ಸ್ ಸೆಲ್’ (ಐಕ್ಯೂಎಸಿ) ವತಿಯಿಂದ “ಮಾಸ್ಟರಿಂಗ್ ದ ಆರ್ಟ್ ಆಫ್ ರೆಸುಮ” ಕಾರ್ಯಗಾರವನ್ನು ಹಮ್ಮಿ ಕೊಳ್ಳಲಾಗಿತ್ತು. ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾರ್ಯಗಾರದ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಕುಮುದಿನಿ, ಹಂತ ಹಂತವಾಗಿ ರೆಸು ಮ್ ತಯಾರಿ ಬಗ್ಗೆ ಹಾಗೂ ಜಾಬ್ ಇಂಟರ್ವ್ಯೂಲ್ಲಿ ಯಾವ ರೀತಿ ಪ್ರಶ್ನೆ ಕೇಳುತ್ತಾರೆ ಹಾಗೂ ಯಾವ ರೀತಿ ಉತ್ತರಿಸಬೇ ಕೆಂದು, ಹೀಗೆ ರೆಸುಮ ತಯಾರಿ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಹೇಮಲತ ಪಿ ಅಧ್ಯಕ್ಷತೆ ವಹಿಸಿ ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ಕ್ಯಾಂಪಸ್ ಡ್ರೈವ್ ಹಮ್ಮಿಕೊಳ್ಳಲಾಗುತ್ತೆ ಅದಕ್ಕೆ ಪೂರಕವಾಗಿ ವಿದ್ಯಾರ್ಥಿಗಳಿಗೆ ರೆಸುಮ್ ತಯಾರಿ ಅತಿ ಮುಖ್ಯವಾದ ಅಂಶ ಎಲ್ಲಾ ವಿದ್ಯಾರ್ಥಿಗಳು ಈ ಕಾರ್ಯಗಾರವನ್ನು ಸಂಪೂರ್ಣವಾಗಿ ಅಳವ ಡಿಸಿಕೊಂಡು ಮುಂದಿನ ದಿನಗಳಲ್ಲಿ ನಿಮ್ಮ ಭವಿ ಷ್ಯವನ್ನು ರೂಪಿಸಿಕೊಳ್ಳಲು ಯಶಸ್ವಿಯಾಗಲಿ ಎಂದು ಹೇಳಿದರು. ಕಾರ್ಯಗಾರದಲ್ಲಿ…

Read More

ಪಾವಗಡ: ಅಧಿಕಾರಿಗಳು ಜನಸಾಮಾನ್ಯರು ಮತ್ತು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ರವರು ಅಧಿಕಾರಿಗಳಿಗೆ ಸೂಚಿಸಿದರು ಕೇಂದ್ರ ವಲಯ ಮತ್ತು ಕೇಂದ್ರ ಪುರಸ್ಕೃತ ಕರ‍್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಹಳ್ಳಿಗಾಡಿನ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಮೊದಲೇ ಶುದ್ದ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿ ಮಾಡಬೇಕು, ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದೊಂದಿಗೆ ವರ್ತಿಸಬೇಕು, ಅಧಿಕಾರಿಗಳು ಹೊಣೆಗಾರಿಕೆಯಿಂದ ತಪ್ಪಿಸಿಕೊಂಡು ಹೋಗಲು ತಾವು ಅವಕಾಶ ನೀಡುವುದಿಲ್ಲ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ,ಜನಪ್ರತಿನಿಧಿಗಳು ಒಗ್ಗೂಡಿ ಕಾರ್ಯನಿರ್ವಸಲು ಬದ್ಧ ರಾಗಿದ್ದೆವೆ. ಇಲಾಖೆವಾರು ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದರೆ ಅವುಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಶಾಶ್ವತ ಬರಪೀಡಿತ ಪ್ರದೇಶವಾದ ಪಾವಗಡ ತಾಲ್ಲೂಕಿನ ಅಭಿವೃದ್ದಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ತನ್ನದೇ ಆದ ಯೋಜ ನೆಯೊಂದನ್ನು ಹಾಕಿಕೊಂಡಿದ್ದೇನೆ ಅದರ ಜಾರಿಗೆ ಅಧಿಕಾರಿಗಳು ಸಹಕಾರ ನೀಡಬೇಕು, ಹಳ್ಳಿಗಾಡಿನ ಪ್ರದೇಶಗಳಲ್ಲಿ ಸಾರಿಗೆ ಬಸ್ ವ್ಯವಸ್ಥೆ ಇಲ್ಲ ಎಂಬ ಬಗ್ಗೆ…

Read More

ತುಮಕೂರು: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮೇ ೨೦ರವರೆಗೆ ಭಾರಿ ಪ್ರಮಾಣದ ಗುಡುಗು-ಸಿಡಿಲು ಸಹಿತ ಗಾಳಿ-ಮಳೆ ಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಂಗಾ ಮಿನಲ್ಲಿ ಈವರೆಗೆ ಶೇ.೧೩೪ರಷ್ಟು ಅಧಿಕ ಮಳೆಯಾಗಿದ್ದು, ಪ್ರವಾಹ/ಭಾರಿ ಮಳೆಯಿಂದ ಯಾವುದೇ ಜನ-ಜಾನುವಾರುಗಳ ಜೀವ ಹಾನಿ ಯಾಗದಂತೆ ಮುಂಜಾಗ್ರತೆವಹಿಸಬೇಕು. ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವುದು/ಮೈಕ್ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ದುರ್ಬ ಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ಎಚ್ಚರವಹಿಸಲು ವ್ಯಾಪಕ ಪ್ರಚಾರ ನೀಡ ಬೇಕು. ಶಾಲಾ/ಅಂಗನವಾಡಿ ಮೇಲ್ಛಾವಣಿ/ಗೋಡೆ ಹಾಗೂ ನದಿ/ಹಳ್ಳ/ಕೆರೆ/ಕಟ್ಟೆ/ರಸ್ತೆ/ಸೇತುವೆ/ವಿದ್ಯುತ್ ಸಂಪರ್ಕ ಇತ್ಯಾದಿ ಮೂಲಭೂತ ಸೌಕರ್ಯಗಳ ಸುಸ್ಥಿತಿ ಬಗ್ಗೆ ಪರಿಶೀಲಿಸಬೇಕು. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ…

Read More