ತುಮಕೂರು: ದಲಿತರು, ಆದಿವಾಸಿಗಳು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ ) ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಅಶೋಕ ರಸ್ತೆಯಲ್ಲಿರುವ ಬಿಎಸ್ಎನ್ಎಲ್ ಕಚೇರಿ ಮುಂಭಾಗ ಅಖಿಲ ಭಾರತ ಪ್ರತಿಭಟನಾ ದಿನದ ಅಂಗವಾಗಿ ಭಾರತ ಕಮ್ಯುನಿಸ್ಟ್ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ದಲಿತರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತೀವ್ರವಾಗಿ ಖಂಡಿಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್, ಭಾರತದ ಇತಿಹಾಸದಲ್ಲಿ ಶತ ಶತಮಾನಗಳಿಂದಲೂ ದಬ್ಬಾಳಿಕೆ, ಶೋಷಣೆಗಳಿಗೆ ಬಲಿಯಾದ ದಲಿತ, ಆದಿವಾಸಿ ಮತ್ತು ಮಹಿಳಾ ಸಮುದಾಯಗಳು ಇಂದಿಗೂ ದೌರ್ಜನ್ಯದಿಂದ ಮುಕ್ತವಾಗಿಲ್ಲ. ಬದಲಾಗಿ ಇಂದಿಗೂ ಸಹ ಅವುಗಳು ಅವ್ಯಾಹತವಾಗಿ ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಹಾರದ ಚುನಾವಣೆಯಲ್ಲಿ ಬಿಜೆಪಿ ಅಭಿವೃದ್ಧಿಗಾಗಿ ಗೆದ್ದಿದೆ ಎಂಬುದು ಸುಳ್ಳು. ಚುನಾವಣೆಗೆ ೩೦ ದಿನಕ್ಕಿಂತ ಮುಂಚೆ ಸಾರ್ವಜನಿಕರ ತೆರಿಗೆ ಹಣವನ್ನು ಮಹಿಳೆಯರ ಖಾತೆಗಳಿಗೆ ವರ್ಗಾವಣೆ ಮಾಡಿದೆ. ಹಾಗಾಗಿ ಚುನಾವಣೆಯಲ್ಲಿ ಗೆದ್ದಿದೆ ಎಂದು ದೂರಿದರು. ಮಹಿಳೆಯರು, ಆದಿವಾಸಿಗಳು, ಅಲ್ಪಸಂಖ್ಯಾತರ ಮತಗಳನ್ನು…
Author: News Desk Benkiyabale
ತುಮಕೂರು: ವ್ಯಕ್ತಿ ಮತ್ತು ಘಟನೆಗಳಿಂದ ಅನೇಕರು ಸ್ಪೂರ್ತಿ ಪಡೆದುಕೊಳ್ಳುತ್ತಾರೆ. ಹಾಗಾಗಿ ಶ್ರೀಸಿದ್ದಗಂಗಾ ಮಹಿಳಾ ಪದವಿ ಕಾಲೇಜಿನಲ್ಲಿ ಓದಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಅಧಿಕಾರಿಗಳು,ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಈಗಿನ ವಿದ್ಯಾರ್ಥಿಗಳಿಗೆ ಪರಿಚಯಿಸುವ ಮೂಲಕ ಸಾಧನೆಯ ಮೆಟ್ಟಿಲು ಹತ್ತಲು ಸ್ಪೂರ್ತಿ ನೀಡಬೇಕೆಂದು ಶ್ರೀಸಿದ್ದಗಂಗಾ ಶಿಕ್ಷಣ ಸಂಸ್ಥೆಯ ಜಂಟಿ ನಿರ್ದೇಶಕ ಡಾ.ಶಿವಕುಮಾರಯ್ಯ ಸಲಹೆ ನೀಡಿದ್ದಾರೆ. ನಗರದ ಶ್ರೀಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಪದವಿ ಕಾಲೇಜು ವತಿಯಿಂದ ಆಯೋಜಿಸಿದ್ದ ವಾರ್ಷಿಕ ಚುಟುವಟಿಕೆಗಳ ಸ್ಪೂರ್ತಿ, ಎನ್.ಎಸ್.ಎಸ್, ಯುವ ರೆಡ್ಕ್ರಾಸ್ ಮತ್ತು ಕ್ರೀಡಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಎಸ್.ಐ.ಟಿಯಲ್ಲಿ ಅಲ್ಯೂಮಿನಿ ಮೀಟ್ ಹೆಸರಿನಲ್ಲಿ ಇಂಜಿನಿಯರಿ0ಗ್,ಉದ್ದಿಮೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಳೆಯ ವಿದ್ಯಾರ್ಥಿಗಳನ್ನು ಗುರುತಿಸಿ, ಸನ್ಮಾನಿಸುವ ಮೂಲಕ ಹೊಸಬರಿಗೆ ಉತ್ತೇಜನ ನೀಡಲಾಗುತ್ತಿದೆ. ಹಾಗೆಯೇ ಈ ಕಾಲೇಜಿನಲ್ಲಿ ಓದಿ ಐಎಎಸ್, ಐಪಿಎಸ್,ಕೆ.ಎ.ಎಸ್ ಹುದ್ದೆಯಲ್ಲಿರುವ, ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಹಳೆಯ ವಿದ್ಯಾರ್ಥಿಗಳನ್ನು ಗುರುತಿಸಿ,ಸನ್ಮಾನಿಸುವ ಮೂಲಕ ವಿದ್ಯಾರ್ಥಿಗಳಿಗೆ ಸಾಧನೆಯ ಮೆಟ್ಟಿಲುಗಳ ಪರಿಚಯಿಸಬೇಕೆಂದರು. ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ, ಪಠ್ಯೇತರ…
ತುಮಕೂರು: ಪ್ರಗತಿಪರ ಸಂಘಟನೆಗಳ ಒಕ್ಕೂಟ ತುಮಕೂರು ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಂವಿಧಾನ ಸ್ನೇಹಿ ಬಳಗ ಬೆಂಗಳೂರು ಇವರುಗಳ ಆ ಶ್ರಯದಲ್ಲಿ ನ.೨೨ ರಿಂದ ೨೬ರವರೆಗೆ ಮನ-ಮನೆಗೂ ಸಂವಿಧಾನ ಕಾರ್ಯಕ್ರಮ ಆಯೋಜಿಸಿದ್ದು, ನ.೨೨ರಂದು ಬೆಳಗ್ಗೆ ೧೦.೩೦ಕ್ಕೆ ಆರ್.ಟಿ.ನಗರದ ಬಾಪೂಜಿ ರವೀಂದ್ರ ಕಲಾಮಹಾವಿದ್ಯಾಲಯದಲ್ಲಿ ಚಾಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅವರು ನಗರದ ಪತ್ರಿಕಾ ಭವನದಲ್ಲಿ ಜರುಗಿದ ಪತ್ರಿಕಾ ಗೋಷ್ಠಿಯಲ್ಲಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿದ ಸಂಘಟನೆಯ ಮುಖಂಡರುಗಳು ಅಭಿಯಾನದ ಮಾಹಿತಿ ನೀಡಿದರು. ನ.೨೩ ರಂದು ಸ್ಲಂಗಳಲ್ಲಿ ಜಾಗೃತಿ ಸಭೆ ನಡೆಯಲಿದ್ದು, ಎ.ನರಸಿಂಹಮೂರ್ತಿ, ಶಂಕರಪ್ಪ, ಜಾಬೀರ್ ಖಾನ್ ಅವರುಗಳು ಉಪಸ್ಥಿತರಿರುವರು. ಸಂಜೆ ೫.೩೦ಕ್ಕೆ ಮಾನಿಕೆರೆಯಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದ್ದು, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಉಮೇಶ್ ಚಂದ್ರ ಅವರು ಉಪಸ್ಥಿತರಿರುವರು. ನ.೨೪ ರಂದು ಕನ್ನಡ ವಿಭಾಗ, ತುಮಕೂರು ವಿಶ್ವವಿದ್ಯಾಲಯದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಮುಖ್ಯ ಅತಿಥಿಗಳಾಗಿ ಜನಾರ್ಧನ ಕೆಸರಗದ್ದೆ, ಡಾ.ರವಿಕುಮಾರ್ ನೀಹಾ ಅವರುಗಳು ಆಗಮಿಸುವರು. ನ.೨೫ ರಂದು ಗ್ಲೋಬಲ್ ಶಾಹೀನ್ ಮಹಿಳಾ ಕಾಲೇಜು, ತುಮಕೂರು ಇಲ್ಲಿ ನಡೆಯಲಿದ್ದು,…
ತುಮಕೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೆ.ಎನ್.ರಾಜಣ್ಣನವರನ್ನು ಮಂತ್ರಿಮ0ಡಲಕ್ಕೆ ಸೇರಿಸಿಕೊಂಡು, ಅವರ ಆಸಕ್ತಿಯ ಹಾಗೂ ಪರಿಣತಿ ಹೊಂದಿರುವ ಸಹಕಾರ ಖಾತೆಯನ್ನೇ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿ ಜಿಲ್ಲೆಯ ಹಿಂದುಳಿದ ವರ್ಗಗಳ ಸಮಾಜಗಳ ಮುಖಂಡರು ಇನ್ನೆರಡು ದಿನಗಳನ್ನು ಮುಖ್ಯಮಂತ್ರಿ ಬಳಿ ನಿಯೋಗ ತೆರಳಲಿದ್ದಾರೆ. ತುಮಕೂರು ಜಿಲ್ಲೆಯ ಪ್ರಭಾವಿ ನಾಯಕ, ಹಿಂದುಳಿದ ವರ್ಗಗಳ ಆಶಾಕಿರಣವಾಗಿರುವ ಕೆ.ಎನ್.ರಾಜಣ್ಣನವರು ಯಾವುದೇ ತಪ್ಪು, ಭ್ರಷ್ಟಾಚಾರ ಮಾಡದಿದ್ದರೂ ಕ್ಷಲ್ಲಕ ಕಾರಣವೊಡ್ಡಿ ಅವರನ್ನು ಸಚಿವ ಸ್ಥಾನದಿಂದ ತೆಗೆದು ಅವಮಾನ ಮಾಡಿರುವುದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ತೀವ್ರ ನೋವಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಡಾ.ಧನಿಯಾಕುಮಾರ್ ಹೇಳಿದ್ದಾರೆ. ಕೆ.ಎನ್.ಆರ್. ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಮುಖಂಡರ ಸಹಿ ಸಂಗ್ರಹಿಸಿದ ಮನವಿ ಪತ್ರವನ್ನು ಈಗಾಗಲೇ ಎಐಸಿಸಿ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಲುಪಿಸಲಾಗಿದೆ. ಈಗ ಮಂತ್ರಿಮ0ಡಲ ವಿಸರ್ಜನೆಯ ಚರ್ಚೆಗಳು ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಕೆ.ಎನ್.ರಾಜಣ್ಣನವರಿಗೆ ಮಂತ್ರಿ…
ತುಮಕೂರು: ಸೂಚಿತ ಪಠ್ಯ ವಿಷಯಗಳಲ್ಲಿ ನೈಪುಣ್ಯತೆ ಹೊಂದಿದ್ದರೆ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ ಎಂದು ಎಸ್ ರವಿಶಂಕರ್ ಅಭಿಪ್ರಾಯಪಟ್ಟರು. ಅವರು ವಿಜ್ಞಾನ ಬಿಂದು ಸಂಸ್ಥೆ ಮ್ಯಾಥ್ ಲ್ಯಾಬ್ ಸಹಯೋಗದಲ್ಲಿ ನವೋದಯ-ಸೈನಿಕ್ ಶಾಲೆ ಪ್ರವೇಶ ಆಕಾಂಕ್ಷಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಅಣಕು ಪರೀಕ್ಷೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಷ್ಟಮಟ್ಟದಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳುದೃಷ್ಟಿಕೋನದಲ್ಲಿ ಅಭ್ಯರ್ಥಿಗಳ ಬುದ್ಧಿಮತ್ತೆಯನ್ನು ಪರೀಕ್ಷಿಸಲಿವೆ. ಭವಿಷ್ಯದ ಬೆಳವಣಿಗೆ, ಅಭಿವೃದ್ಧಿಗೆ ಸಹಕಾರಿಯಾಗುವ ಕೌಶಲ್ಯಯುತ ಮಾನವ ಸಂಪನ್ಮೂಲ ಸೃಷ್ಟಿ ಸ್ಪರ್ಧಾತ್ಮಕ ಪರೀಕ್ಷೆಗಳ ಉದ್ಧೇಶವಾಗಿದೆ. ಆದ್ದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳ ಪೋಷಕರು ಪ್ರಾಥಮಿಕ ಹಂತದಿ0ದಲೇ ಅಕ್ಷರ ಜ್ಞಾನ, ಸರಳ ಗಣಿತ, ಸಂವಹನ, ಅನ್ವಯಿಕ ಕೌಶಲ್ಯಗಳು ಸಮಯ ನಿರ್ವಹಣೆ ಬಗ್ಗೆ ಮಕ್ಕಳಲ್ಲಿ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನದಿಂದ ಜಾಗೃತಿ ಮೂಡಿಸಬೇಕೆಂದರು. ಮುಖ್ಯ ಪರೀಕ್ಷೆಗಳ ರೂಪುರೇಷೆ, ಅಭ್ಯರ್ಥಿಗಳು ಪರೀಕ್ಷೆಗೆ ನಡೆಸಿರುವ ಸಿದ್ಧತೆಯ ಅವಲೋಕನ, ಕಲಿಯಬೇಕಾಗಿರುವ ಅಭ್ಯಾಸ ಮತ್ತು ಪರೀಕ್ಷಾ ಕೌಶಲ್ಯಗಳ ಬಗ್ಗೆ ಗಮನ ನೀಡಲು ಅಣಕು ಪರೀಕ್ಷೆ ಹೆಚ್ಚು ಸಹಕಾರಿ ಎಂದರು. ಜಿಲ್ಲೆಯ ವಿವಿಧ ತಾಲ್ಲೂಕುಗಳ ನವೋದಯ-ಸೈನಿಕ್ ಶಾಲೆ ಪ್ರವೇಶ…
ತುಮಕೂರು: ವಿದ್ಯಾರ್ಥಿ ಜೀವನದಲ್ಲೇ ಸಂಶೋಧನಾ ಹವ್ಯಾಸ ರೂಢಿಸಿಕೊಂಡರೆ ಮುಂದಿನ ದಿನಗಳಲ್ಲಿ ನಮಗೆ ಅನೇಕ ಹೊಸ ಹೊಸ ವಿಚಾರಧಾರೆಗಳಿಗೆ ಆಧಾರವಾಗುವ ಪಾರಂಪರಿಕ ಸಂಗತಿಗಳನ್ನು ತಿಳಿಯಲು ಸಹಾಯವಾಗುತ್ತದೆ. ಕಾಲಗರ್ಭದಲ್ಲಿ ಹುದುಗಿ ಹೋಗಿರುವ ಅನೇಕ ಸಂಗತಿಗಳು ಬೆಳಕಿಗೆ ಬರುವುದರ ಜೊತೆಗೆ ಸಮಾಜಕ್ಕೆ ಉಪಯುಕ್ತ ಸಂಗತಿಗಳನ್ನು ಒದಗಿಸಿದ ಸಂತೃಪ್ತಿ ಸಂಶೋಧಕನಿಗೆ ನೀಡುತ್ತದೆ ಎಂದು ಇತಿಹಾಸ ಸಂಶೋಧಕ ಡಾ ಡಿ ಎನ್ ಯೋಗೀಶ್ವರಪ್ಪ ನುಡಿದರು. ಅವರು ನಗರದ ಶ್ರೀ ಸಿದ್ಧಗಂಗಾ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಿದ್ದ ಹೆರಿಟೇಜ್ ಕ್ಲಬ್ ಮತ್ತು ಐತಿಹಾಸಿಕ ದಾಖಲೆಗಳ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಜಗತ್ತಿನಲ್ಲಿ ಮೊದಲಿಗೆ ಕಬ್ಬಿಣದ ಮಹತ್ವ ಕಂಡುಹಿಡಿದವರು ಭಾರತೀಯರು ಎರಡನೇ ಚಂದ್ರಗುಪ್ತ ಮರ್ಯ ದೆಹಲಿಯಲ್ಲಿ ಸ್ಥಾಪಿಸಿರುವ ಕಬ್ಬಿಣದ ಸ್ತಂಭಕ್ಕೆ ೨೩೦೦ ವರ್ಷಗಳ ಇತಿಹಾಸವಿದೆ ಇಂದಿಗೂ ಅದು ತುಕ್ಕು ಹಿಡಿದಿಲ್ಲ ಈ ಕುರಿತು ದೇಶವಿದೇಶಗಳಲ್ಲಿ ಅನೇಕ ಸಂಶೊಧನೆಗಳು ನಡೆದಿವೆ ಆದರೂ ಇದರ ಕುರಿತು ಭಾರತದಲ್ಲಿ ಹೆಚ್ಚು ಸಂಶೋಧನೆಗಳಾಗಿಲ್ಲ ಈ ಸ್ತಂಭ ಭಾರತೀಯರ ತಂತ್ರಜ್ಞಾನದ ನಿಪುಣತೆಗೆ ಸಾಕ್ಷಿಯಾಗಿದೆ ಎಂದರು. ತುಮಕೂರು ಜಿಲ್ಲೆಯಲ್ಲಿ ಸಂಶೋಧನೆಗೆ ವಿಪುಲವಾದ ಅವಕಾಶಗಳಿವೆ…
ತುಮಕೂರು: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯ ದರ್ಶಿಗಳಿಗಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್-೨೦೨೫ರಡಿಯಲ್ಲಿ ಬರುವ ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗ ಳಿಗೆ ಸಂಬ0ಧಿಸಿದ ನಿಯಮಗಳ ಕುರಿತು ತರಬೇತಿ ಏರ್ಪಡಿಸಲಾಗಿತ್ತು. ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಅಭಿವೃದ್ಧಿ) ಕೆ.ಪಿ. ಸಂಜೀವಪ್ಪ ೨೦೨೫-೨೬ನೇ ಸಾಲಿನ ಬಜೆಟ್ ಕಂಡಿಕೆಗಳು (ಕಂಡಿಕೆ-೨೭೨) ಆಯವ್ಯಯ ಘೋಷಣೆಯಂತೆ ಪಂಚಾ ಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಮತ್ತು ಗ್ರಾಮೀಣ ಜನರಿಗೆ ವ್ಯವಸ್ಥಿತ ರೀತಿಯಲ್ಲಿ ಸೇವೆಗಳನ್ನು ಒದಗಿಸುವ ಹಿತದೃಷ್ಟಿಯಿಂದ ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿ ರುವ ಆಸ್ತಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲು ಇ-ಸ್ವತ್ತು ಅಭಿಯಾನವನ್ನು ಪ್ರಾರಂಭಿಸಲಾಗುವುದು ಎಂದರು. ತರಬೇತಿಯಲ್ಲಿ ತೆರಿಗೆ ದರಕ್ಕೆ ಒಳಪಡುವ ಆಸ್ತಿಗಳು, ತೆರಿಗೆ, ದರ ಮತ್ತು ಶುಲ್ಕವನ್ನು ವಿಧಿಸುವುದಕ್ಕಾಗಿ ಪ್ರಕ್ರಿಯೆ, ಹೊಸ ಆಸ್ತಿಗಳ ಸೇರ್ಪಡೆ, ಹೊಸ ಆಸ್ತಿಗಳ ಸೇರ್ಪಡೆ ಮೇಲ್ಮನವಿ, ತೆರಿಗೆ ನಿರ್ಧರಣಾ ವಿಧಾನ, ಗ್ರಾಮ…
ಹುಳಿಯಾರು: ತುಮಕೂರು ಜಿಲ್ಲೆ ಚಿ.ನಾ.ಹಳ್ಳಿ ತಾಲ್ಲೂಕಿನ ಬರಗೂರು-ಬೆಳಗುಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ೨೦೧೮-೧೯ ನೇ ಸಾಲಿನಲ್ಲಿ ವಾಣಿಜ್ಯ ವಿಭಾಗ ಸಂಯೋಜನೆ ಮಂಜೂರಾಗಿದ್ದರೂ ಸಹ ಇಲ್ಲಿಯವರೆವಿಗೆ ಉಪನ್ಯಾಸಕರ ಹುದ್ದೆ ಮಂಜೂರು ಮಾಡದೆ ಕಲಿಕೆಗೆ ತೊಡಕಾಗಿದ್ದು ತಕ್ಷಣ ಹುದ್ದೆಯನ್ನು ಮಂಜೂರು ಮಾಡಿ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವಂತೆ ಪೋಷಕರು ಒತ್ತಾಯಿಸಿದ್ದಾರೆ. ಈ ಸಂಬ0ಧ ಪತ್ರಿಕಾ ಹೇಳಿಕೆ ನೀಡಿರುವ ಪೋಷಕರು ವಾಣಿಜ್ಯ ವಿಭಾಗ ಆರಂಭವಾದ ದಿನದಿಂದಲೂ ವಾಣಿಜ್ಯ ಉಪನ್ಯಾಸಕರ ಹುದ್ದೆ ಮಂಜೂರಾಗಿರುವುದಿಲ್ಲ. ಆದರೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳಿಗೆ ತೊಂದರೆಯಾಗದ0ತೆ ವಾಣಿಜ್ಯ ವಿಷಯಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆದರೆ ಇವರಿಗೆ ಸಮಯಕ್ಕೆ ಸರಿಯಾಗಿ ಗೌರವಧನ ಬಿಡುಗಡೆಯಾಗದೆ ತೊಂದರೆಯಾಗುತ್ತಿದ್ದರೂ ವಿದ್ಯಾರ್ಥಿಗಳಿಗೆ ತೊಂದರೆ ಮಾಡದೆ ಉಪನ್ಯಾಸ ನೀಡುತ್ತಿದ್ದಾರೆ. ಪರಿಣಾಮ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಳೆದ ಐದು ವರ್ಷಗಳಿಂದ ಶೇ.೧೦೦ ಫಲಿತಾಂಶ ಬರುತ್ತಿದೆ. ಫಲಿತಾಂಶದ ಜೊತೆಗೆ ಉತ್ತಮ ಅಂಕಗಳನ್ನು ಪಡೆಯುವ ಹಾಗೂ ಮತ್ತೊಷ್ಟು ವಿದ್ಯಾರ್ಥಿಗಳು ಕಾಲೇಜಿಗೆ ಪ್ರವೇಶ ಪಡೆದು ಗ್ರಾಮೀಣ ಪ್ರದೇಶದಲ್ಲಿನ ಕಾಲೇಜಿನಲ್ಲಿ…
ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅಭಿಮತ ಬೆ0ಗಳೂರು: ರಾಜಕಾರಣ ಮತ್ತು ಮಾಧ್ಯಮ ಸಮಾಜದ ಎರಡು ಕಣ್ಣುಗಳಂತೆ. ಇವುಗಳೆರಡು ಸಮಾನವಾಗಿ, ಸಾಮರಸ್ಯದಿಂದ ಕೆಲಸ ಮಾಡಿದರೆ ಉತ್ತಮ ಸಮಾಜ ನಿರ್ಮಾಣ ಮಾಡಬಹುದು. ಒಂದು ಕಣ್ಣು ಸಮಾಜದ ಸಮಸ್ಯೆಗಳನ್ನು ತಿಳಿಸುತ್ತದೆ. ಆಗ ಇನ್ನೊಂದು ಕಣ್ಣು ಅದಕ್ಕೆ ಪರಿಹಾರ ಒದಗಿಸುತ್ತದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಹೇಳಿದರು. ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಧ್ಯಮ ಮತ್ತು ರಾಜಕಾರಣ ಎಂಬ ಎರಡು ಕಣ್ಣುಗಳು ಸತ್ಯವನ್ನು ಅರ್ಥ ಮಾಡಿಕೊಳ್ಳುವುದರಲ್ಲಿ ವಿಫಲವಾದರೆ ಸಮಾಜ ಕತ್ತಲೆಗೆ ಜಾರುತ್ತದೆ. ಇವುಗಳು ಜೊತೆ ಜೊತೆಯಾಗಿ ಇದ್ದರೆ ಸಮಾಜದಲ್ಲಿ ಶಾಂತಿ ಇರುತ್ತದೆ. ಆಗ ಮಾತ್ರ ಶುದ್ಧ ಭಾರತ ನಿರ್ಮಾಣ ಮಾಡಬಹುದು. ನಮ್ಮ ಸಮಾಜದಲ್ಲಿ ಏಕತೆ ಮತ್ತು ಸಾಮರಸ್ಯ ಕಾಪಾಡಲು ಹಿಂದೆಯೂ ಮಾಧ್ಯಮಗಳು ಕೊಡುಗೆ…
ತುಮಕೂರು: ಜಿಲ್ಲೆಯಲ್ಲಿ ರಂಗ ಚಟುವಟಿಕೆಗಳು ಜಾಸ್ತಿಯಾಗುತ್ತಿದೆ ಎಂದು ಪ್ರಗತಿ ಪರ ಚಿಂತಕ ದೊರೈರಾಜು ಅವರು ಅಭಿಪ್ರಾಯಪಟ್ಟರು. ಅವರು ತುಮಕೂರಿನ ಗುಬ್ಬಿ ವೀರಣ್ಣ ರಂಗಮ0ದಿರದಲ್ಲಿ ಮೈಸೂರು ರಂಗಾಯಣ ವತಿಯಿಂದ ಆಯೋಜಿಸಲಾಗಿದ್ದ ರಂಗ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಮೈಸೂರಿನ ರಂಗಾಯಣ ತುಮಕೂರಿನಲ್ಲಿ ಒಂದು ವಾರಗಳ ಕಾಲ ರಂಗ ಉತ್ಸವ ಆಚರಿಸುತ್ತಿರುವುದು ಖುಷಿಯ ಸಂಗತಿ. ಈ ಮೂಲಕ ರಂಗಭೂಮಿ ಹೆಚ್ಚೆಚ್ಚು ಸಕ್ರಿಯಗೊಳ್ಳುವಂತಾಗಬೇಕು ಎಂದು ತಿಳಿಸಿದರು. ಮಕ್ಕಳಲ್ಲಿ ಜೀವನೋತ್ಸಾಹ ತುಂಬುವ0ತಹ ಕಥಾ ಹಂದರಗಳುಳ್ಳ ನಾಟಕಗಳು ಹೆಚ್ಚೆಚ್ಚು ಬರಲಿ ಎಂದ ಅವರು ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ಕುಟುಂಬದ ಎಲ್ಲರಿಗಾಗಿ ಈ ನಾಟಕ ಆಯೋಜಿಸುತ್ತಿರುವುದು ಸ್ವಾಗತಾರ್ಹ ಎಂದರು. ಮೈಸೂರು ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ಮಾತನಾಡಿ ರಂಗಾಯಣ ಮೈಸೂರು ಶಿಕ್ಷಣದಲ್ಲಿ ರಂಗಭೂಮಿ ಯೋಜನೆಯ ಮೂಲಕ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಎಲ್ಲರ ಮಾನಸಿಕ ಹಾಗೂ ದೈಹಿಕ ಸಹಜ ವಿಕಾಸಕ್ಕೆ ಪೂರಕವಾಗುವಂತೆ ಈ ರಂಗ ಉತ್ಸವ ಹಮ್ಮಿಕೊಂಡಿದೆ ಎಂದರು. ನಾಟಕಗಳನ್ನು ಪ್ರದರ್ಶಿಸುವ ಮೂಲಕ ಆರೋಗ್ಯಕರ ರಂಜನೆ…











