Author: News Desk Benkiyabale

ತುರುವೇಕೆರೆ: ಕಳೆದ ಐವತ್ತಕ್ಕೂ ಹೆಚ್ಚು ವರ್ಷದಿಂದ ತಮ್ಮ ಅನುಭವದಲ್ಲಿರುವ ಜಮೀನಿನ ದಾಖಲೆಗಳನ್ನು ಕೆಲವು ವ್ಯಕ್ತಿಗಳು ಕಂದಾಯ ಇಲಾಖೆಗೆ ತಪ್ಪು ಮಾಹಿತಿ ನೀಡಿ ಬೇರೆಯವರ ಹೆಸರಿಗೆ ಮಾಡಿಸಿಕೊಂಡು ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆಂದು ಆರೋಪಿಸಿ ಕರಡಗೆರೆ ಗ್ರಾಮದ ಶಿವಪ್ಪನವರ ಕುಟುಂಬದ ಸದಸ್ಯರು ಗ್ರಾಮಸ್ಥರೊಡನೆ ಇಲ್ಲಿಯ ಪೊಲೀಸ್ ಠಾಣೆ ಮುಂಭಾಗ ಕೆಲ ಕಾಲ ಪ್ರತಿಭಟನೆ ಮಾಡಿದ ಘಟನೆ ನಡೆಯಿತು. ಕರಡಗೆರೆಯಲ್ಲಿ ಕಳೆದ ಐವತ್ತು ವರ್ಷಗಳಿಗೂ ಹಿಂದೆ ಪೂಜಾರ್ ಹುಚ್ಚಪ್ಪ ಎಂಬುವವರು ಶಿವಪ್ಪ ಎಂಬುವವರ ಕುಟುಂಬಕ್ಕೆ ಕೆಲ ಜಮೀನನ್ನು ಮಾರಾಟ ಮಾಡಿದ್ದರು. ನಂತರ ಶಿವಪ್ಪನವರ ಕುಟುಂಬ ಆ ಜಮೀನಿನ ಅಭಿವೃದ್ಧಿ ಮಾಡಿಕೊಂಡು ಜೀವನ ನಿರ್ವಹಣೆ ಮಾಡಿಕೊಂಡಿದ್ದರು. ಈಗ ಅದೇ ಗ್ರಾಮದ ಹನುಮಂತಯ್ಯ ಎಂಬುವವರ ಕುಟುಂಬದ ಸದಸ್ಯರು ಸದರಿ ಜಮೀನು ತಮಗೆ ಸೇರಿದ್ದು ಎಂದು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಶಾಮೀಲಾಗಿ ತಮ್ಮ ಜಮೀನನ್ನು ಅವರ ಹೆಸರಿಗೆ ಮಾಡಿಕೊಂಡು ತಮಗೆ ವಂಚಿಸಿದ್ದಾರೆ0ದು ಶಿವಪ್ಪನವರ ಕುಟುಂಬದ ಸದಸ್ಯರು ದೂರಿದ್ದಾರೆ. ಮಂಗಳವಾರ ಶಿವಪ್ಪನವರ ಜಮೀನಿನ ಬಳಿ ಬಂದ ಕೆಲವು ಮಂದಿ ಜಮೀನನ್ನು ವಶಪಡಿಸಿಕೊಳ್ಳಲು…

Read More

ತುಮಕೂರು: ನಮ್ಮ ದೇಶದ ಜಿಡಿಪಿಯ ಬೆಳವಣಿಗೆಯಲ್ಲಿ ಸಾಫ್ಟ್ ವೇರ್ ಕ್ಷೇತ್ರದ ಕೊಡುಗೆ ಸಾಕಷ್ಟಿದೆ, ಅಭಿವೃದ್ಧಿಯ ಸ್ಫರ್ಧೆಯಲ್ಲಿರುವ ಪ್ರಪಂಚದಲ್ಲಿ ನಮ್ಮ ದೇಶ ಬೇರೆ ದೇಶಗ ಳೊಂದಿಗೆ ಸ್ಫರ್ಧೆಯ ಮುಂಚೂಣೆಯಲ್ಲಿ ಇದೆ ಎಂದರೆ ಅದಕ್ಕೆ ಮುಖ್ಯ ಕಾರಣ ಭಾರತದಲ್ಲಾದ ತಂತ್ರಜ್ಞಾನದ ಕ್ಷೇತ್ರದಲ್ಲಾದ ಬೆಳವಣಿಗೆಯಿಂದ ಎಂದು ಸಾಹೇ ವಿವಿಯ ಕುಲಾಧಿಪತಿಗಳು ಹಾಗೂ ರಾಜ್ಯದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ತಿಳಿಸಿದರು. ನಗರದ ಹೊರವಲಯದಲ್ಲಿರುವ ಕ್ಯಾತ್ಸಂತ್ರದ ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿ0ಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಹಳೇ ವಿದ್ಯಾರ್ಥಿಗಳ ಸಮಾಗಮ “ಐಕ್ಯಂ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂಜಿನಿಯರ್‌ಗಳು ಭಾರತವನ್ನು ಬಲಿಷ್ಟ ಭಾರತವನ್ನಾಗಿ ಮಾಡಲು ಬಹಳಷ್ಟು ಶ್ರಮಿಸುತ್ತಿದ್ದಾರೆ. ಇಂಜಿನಿರ‍್ಸ್ ಗಳು ಅಭಿವೃದ್ಧಿಯ ಯೋಜನೆಯ ಕನಸನ್ನು ಕಂಡು ಅದನ್ನು ನನಸಾಗಿಸಲು ಪ್ರತಿನಿತ್ಯ ದುಡಿಯುತ್ತಿದ್ದಾರೆ. ಇಂದು ಹೆಚ್ಚಾಗು ತ್ತಿರುವ ಕೃತಕ ಬುದ್ದಿಮತ್ತೆಯು ಜಗತ್ತನ್ನು ಆಳುತ್ತವೆ, ಇದನ್ನು ನಮ್ಮೊಂದಿಗೆ ಅಳವಡಿಸಿಕೊಂಡು ಮುಂದೆ ಸಾಗಿದರೆ ನಮ್ಮ ವೇಗ ಹೆಚ್ಚುತ್ತದೆ ಎಂದು ಹೇಳಿದರು. ಸರ್ಕಾರಗಳು ಯೋಜನೆಗಳನ್ನು ಸಿದ್ದಗೊಳಿಸುವಾಗ ಯಾವಾಗಲೂ ಮುಂದಿನ ತಲೆಮಾರುಗಳನ್ನು ಗಮನದಲ್ಲಿ…

Read More

ತುಮಕೂರು: ನಗರದಲ್ಲಿ ಶುಕ್ರವಾರ ಬೆಳಗ್ಗೆ ೧೧ ಕ್ಕೆ ನಾಟಕಮನೆ ತುಮಕೂರುರವರು ಆಯೋಜಿ ಸಿದ್ದ ವಿಶ್ವ ರಂಗಭೂಮಿ ದಿನಾಚರಣೆ-೨೦೨೬ ನಗರದ ಡಾ. ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಮೊದಲು ಪ್ರಕಾಶ್ ಎನ್.ಆರ್‌ರವರು ಅಮೇರಿಕಾದ ಹೆಸರಾಂತ ರಂಗಭೂಮಿ ಮತ್ತು ಸಿನಾಮಾ ಕಲಾವಿದರಾದ ವಿಲಿಯಮ್ ಡೆಫೋರವರು ನೀಡಿರುವ ೨೦೨೬ರ ವಿಶ್ವ ರಂಗಭೂಮಿ ದಿನದ ರಂಗಸ0ದೇಶವನ್ನು ವಾಚನ ಮಾಡಿದರು. ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರೊ. ಮೋಹನ್ ಹೆಚ್.ಎಸ್. ಮಾನ್ಯ ಕುಲಸಚಿವರು, ಪರೀಕ್ಷಾಂಗ, ತುಮಕೂರು ವಿಶ್ವವಿ ದ್ಯಾನಿಲಯ ರಂಗಭೂಮಿ ಪ್ರತಿಯೊಬ್ಬರ ಜೀವನದಲ್ಲಿ ಎಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿರುತ್ತದೆ ಎಂಬು ದನ್ನು ಪ್ರೇಕ್ಷಕರಿಗೆ ತಿಳಿಸಿಕೊಟ್ಟರು ಮತ್ತು ಶಿಕ್ಷಣದಲ್ಲಿ ರಂಗ ಭೂಮಿಯ ಮಹತ್ವದ ಬಗ್ಗೆ ಬೆಳಕು ಚೆಲ್ಲಿದರು. ನಂತರ ಮಾತನಾಡಿದ ಶಿವಣ್ಣ ತಿಮ್ಲಾಪುರರವರು ರಂಗಭೂಮಿಯ ಹುಟ್ಟು, ಅದರ ಬೆಳವಣಿಗೆ ಮತ್ತು ರಂಗಭೂಮಿಯಲ್ಲಿನ ಸಾಧ್ಯತೆಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊ0ಡು ವಿಶ್ವರಂಗಭೂಮಿ ದಿನಾಚರಣೆಗೆ ಎಲ್ಲ ರಂಗಕರ್ಮಿಗಳಿಗೆ ಶುಭಾಷಯಗಳನ್ನು ತಿಳಿಸಿದರು. ನಂತರ ಮಾತನಾಡಿದ ವಿಶ್ವವಿದ್ಯಾನಿಲಯ ಕಲಾ ಕಾಲೇಜು, ತುಮಕೂರು ಪ್ರಾಂಶು ಪಾಲರಾದ ಡಾ.ದಾಕ್ಷಾಯಿಣಿ…

Read More

ಕೊರಟಗೆರೆ: ಪ್ರಸಕ್ತ ಆಧುನಿಕ ಯುಗದಲ್ಲಿ ಯಾಂತ್ರಿಕೃತ ಕೃಷಿ ಪದ್ಧತಿ ಹೆಚ್ಚಾಗುತ್ತಿದ್ದರೂ, ಹೈನುಗಾರಿಕೆಯಲ್ಲಿ ಇಂದಿಗೂ ರೈತನಿಗೂ ಮತ್ತು ಹಸುವಿಗೂ ಇರುವ ಅವಿನಾಭಾವ ಸಂಬAಧವನ್ನು ಸಾರುವ ‘ಹಾಲು ಕರೆಯುವ ಸ್ಪರ್ಧೆ’ಯೊಂದು ವಿಜೃಂಭಣೆಯಿ0ದ ಜರುಗಿತು. ಕೊರಟಗೆರೆ ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಆವರಣದಲ್ಲಿ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘದ ಒಕ್ಕೂಟ ನಿಯಮಿತ ತುಮಕೂರು ಹಾಗೂ ತಾಲೂಕು ಘಟಕ , ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕೊರಟಗೆರೆ , ತುಮಕೂರು ಜಿಲ್ಲಾ ರೈತರ ಮತ್ತು ಎಂಪಿ ಸಿಎಸ್ ನೌಕರರ ಮತ್ತು ಸಾಮಾನ್ಯ ಕಲ್ಯಾಣ ಟ್ರಸ್ಟ್ ಮಲ್ಲಸಂದ್ರ ಹಾಗೂ ಕುಂಚೀಟಿಗ ಮಹಾ ಸಂಸ್ಥಾನ ಮಠದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಿಶ್ರ ತಳಿರಾಸುಗಳ ಹಾಲು ಕರೆಯುವ ಸ್ಪರ್ಧೆ ಹಾಗೂ ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ ಕಾರ್ಯಕ್ರಮ ತುಂಬಾ ಯಶಸ್ವಿಯಾಗಿ ಜರಗಿ ಈ ಕಾರ್ಯಕ್ರಮ ಕೇವಲ ಸ್ಪರ್ಧೆಯಾಗಿ ಉಳಿಯದೆ, ರೈತರ ಶ್ರಮ ಮತ್ತು ಪಶುಸಂಗೋಪನೆಯ ಮಹತ್ವವನ್ನು ಸಾರುವ ವೇದಿಕೆಯಾಗಿ ಮಾರ್ಪಟ್ಟಿತ್ತು. ಕಾರ್ಯಕ್ರಮ ಸತತ ಎರಡು ದಿನಗಳ…

Read More

ತುಮಕೂರು: ಪರಿಶ್ರಮದ ದುಡಿಮೆ ಮಾಡುತ್ತಾ ಸ್ವಾಭಿಮಾನದಿಂದ ಬದುಕುತ್ತಿರುವ ಶ್ರಮಜೀವಿ ತಿಗಳ ಸಮಾಜದವರು ಇತರರಿಗೆ ಮಾದರಿಯಾಗಿದ್ದಾರೆ. ತಿಗಳ ಜನಾಂಗದವರು ಇತ್ತೀಚೆಗೆ ತಮ್ಮ ಮಕ್ಕಳಿಗೆ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ಇನ್ನೂ ಹೆಚ್ಚಿನ ಒತ್ತು ನೀಡಿ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹಿಸಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು. ಶನಿವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಆಚರಣೆ ಅಂಗವಾಗಿ ಅಗ್ನಿಬನ್ನಿರಾಯಸ್ವಾಮಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡ ಗೌರವ ಸಲ್ಲಿಸಿ ಮಾತನಾಡಿದ ಶಾಸಕರು, ಶಿಕ್ಷಣದಿಂದ ಆರ್ಥಿಕ ಸಬಲತೆ, ಸಾಮಾಜಿಕ ಮಾನ್ಯತೆ ಹೆಚ್ಚಾಗುತ್ತದೆ ಎಂದರು. ತಿಗಳ ಸಮಾಜದವರು ಜೊತೆಗಿದ್ದು ತಮಗೆ ಶಕ್ತಿ ತುಂಬಿದ್ದಾರೆ. ತಾವೂ ಸಹ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದ ಶಾಸಕರು, ಅಗ್ನಿಬನ್ನಿರಾಯಸ್ವಾಮಿ ಜಯಂತಿ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಮಾಜಮುಖಿ ಕೆಲಸ ಮಾಡುತ್ತಿರುವ ತಿಗಳ ಸಮಾಜದ ಸಾಧಕರನ್ನು ಸನ್ಮಾನಿಸಿ ಗೌರವಿಸುತ್ತಿರುವುದು ಒಳ್ಳೆಯ ಸಂಪ್ರದಾಯ. ಇದರಿಂದ ಮತ್ತಷ್ಟು ಜನರಿಗೆ ಪ್ರೇರಣೆಯಾಗುತ್ತದೆ ಎಂದು ತಿಳಿಸಿದರು. ತಿಗಳ ಸಮಾಜ ಮುಖಂಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ…

Read More

ತುಮಕೂರು: ನಗರ ಮತ್ತು ಗ್ರಾಮೀಣ ಪರಿಸರದಲ್ಲಿ ಗುಬ್ಬಚ್ಚಿಗಳ ಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದ್ದು, ಪರಿಸರದ ಸಮತೋಲನವನ್ನು ಕಾಪಾಡುವಲ್ಲಿ ಇವುಗಳ ಪಾತ್ರ ಅತ್ಯಂತ ದೊಡ್ಡದಿದೆ. ಗುಬ್ಬಚ್ಚಿಗಳ ರಕ್ಷಣೆ ಮತ್ತು ಅವುಗಳ ಸಂತತಿ ಅಭಿವೃದ್ಧಿಗಾಗಿ ವಿದ್ಯಾರ್ಥಿ ಸಮುದಾಯವು ಹೆಚ್ಚಿನ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕೆಂದು ಆರ್ಡರ್ ಸಂಸ್ಥೆಯ ಯೋಜನಾ ನಿರ್ದೇಶಕರಾದ ಜಿ.ವಿ. ರಘು ಕರೆ ನೀಡಿದರು. ತುಮಕೂರು ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಪುಣೆಯ ಸುಜಲಾನ್ ಫೌಂಡೇಶನ್ ಮತ್ತು ತುಮಕೂರಿನ ಆರ್ಡರ್ ಸಂಸ್ಥೆಯ ಸಹಯೋಗದಲ್ಲಿ ಇತ್ತೀಚೆಗೆ ಮಾ. ೨೫ ರಂದು ಆಯೋಜಿಸಿದ್ದ “ಗುಬ್ಬಚ್ಚಿಗಳ ಸಂರಕ್ಷಣಾ ಜಾಗೃತಿ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಆಧುನಿಕ ನಗರೀಕರಣ, ಕೈಗಾರಿಕೀಕರಣ ಮತ್ತು ವಾಣಿಜ್ಯ ಕೃಷಿ ಪದ್ಧತಿಯಿಂದಾಗಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಇದರಿಂದಾಗಿ ಮನುಷ್ಯನ ಸಹಚರನಂತೆ ಬದುಕುತ್ತಿದ್ದ ಗುಬ್ಬಚ್ಚಿಗಳು ಇಂದು ಅಳಿವಿನ ಅಂಚಿಗೆ ತಲುಪಿವೆ. ಈ ಪುಟ್ಟ ಜೀವಿಗಳನ್ನು ಉಳಿಸಿಕೊಳ್ಳಲು ನಮ್ಮ ಮನೆಯ ಸುತ್ತ ಉತ್ತಮ ಪರಿಸರವನ್ನು ಕಾಯ್ದುಕೊಳ್ಳುವುದು, ಕೃತಕ ಗೂಡುಗಳನ್ನು ಅಳವಡಿಸುವುದು ಹಾಗೂ ಅವುಗಳಿಗೆ ಆಹಾರ ಮತ್ತು ನೀರನ್ನು…

Read More

ತುಮಕೂರು: ಐ.ಎ.ಎಸ್,ಐಪಿಎಸ್, ನ್ಯಾಯಾಧೀಶರು ಮಾತ್ರ ಸಾಧನೆ ಮಾಡಿದವರಲ್ಲ.ಮಕ್ಕಳಿಗೆ ಒಳ್ಳೆಯ ತಾಯಿ ಯಾಗಿ, ಗಂಡನಿಗೆ ಒಳ್ಳೆಯ ಸಂಗಾತಿಯಾಗಿ, ಅತ್ತೆ,ಮಾವನಿಗೆ ಒಳ್ಳೆಯ ಸೊಸೆಯಾಗಿ, ಕೊರತೆಗಳ ನಡುವೆಯೂ ಸಂಸಾರವನ್ನು ಸರಿದೂಗಿಸುವ ಮಹಿಳೆಯು ಸಹ ಸಾಧಕಿಯೇ ಎಂದು ಡಿ.ಎಲ್.ಆರ್.ಸಿ. ಕಾರ್ಯದರ್ಶಿ ಹಾಗೂ ನ್ಯಾ.ನೂರುನ್ನಿಸಾ ಅಭಿಪ್ರಾಯಪಟ್ಟಿದ್ದಾರೆ. ನಗರದ ಮರಳೂರು ದಿಣ್ಣೆಯ ಪ್ರಗತಿ ಬಡಾವಣೆಯ ಶೈನಾ ಅಧ್ಯಯನ ಸಂಸ್ಥೆ(ರಿ), ತುಮಕೂರು ಜಿಲ್ಲಾ ಮಹಿಳಾ ಸಂಘಟನೆ(ರಿ), ವತಿಯಿಂದ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಾಗೂ ಜಿಲ್ಲಾ ಮಹಿಳಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು,ನಮ್ಮನ್ನು ನೋಡಿ ನಮ್ಮ ಮಕ್ಕಳು ನಮ್ಮಂತಾಗುವ ಬಯಕೆ ಹೊಂದಬೇಕು. ಅದೇ ನಿಜವಾದ ಸಾಧನೆ ಎಂದರು. ಮಹಿಳಾ ಎಲ್ಲಾ ರಂಗದಲ್ಲಿಯೂ ತನ್ನ ಸಾಧನೆಯ ಗುರುತನ್ನು ಬಿಟ್ಟಿದ್ದಾಳೆ, ಆ ದರೂ ಇಂದಿಗೂ ಕೂಡ ಆಕೆಯ ಮೇಲಿನ ಕೌಟುಂಬಿಕ ದೌರ್ಜನ್ಯ ನಿಂತಿಲ್ಲ.ತಾನು ಸ್ವತಹಃ ದುಡಿಯುತ್ತಿದ್ದರೂ ತನ್ನ ವೇತನವನ್ನು ಮನಸೋಇಚ್ಚೆ ಖರ್ಚು ಮಾಡುವಂತಿಲ್ಲ. ಇಂದಿಗೂ ಗಂಡನ, ಇಲ್ಲವೇ ಅತ್ತೆ, ಮಾವನ ಕೇಳುವಂತಹ ಪರಿಸ್ಥಿತಿ ಇದೆ. ಇದು ನಿಜವಾದ ಸ್ವಾತಂತ್ರವೇ ಎಂಬ…

Read More

ತುಮಕೂರು: ಏಪ್ರಿಲ್ ೧ರಂದು ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭಾಗವಹಿಸಲಿದ್ದು, ಸಂಬ0ಧಿಸಿದ0ತೆ ತುಮಕೂರು ನಗರದಾದ್ಯಂತ ಅಂದು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಇರಲಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಅತಿಗಣ್ಯರ ಭದ್ರತೆಯ ಪೂರ್ವಭಾವಿ ಸಭೆಯ ಅಧ್ಕಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಈಗಾಗಲೇ ತುಮಕೂರು ಜಿಲ್ಲೆಗೆ ಉಪರಾಷ್ಟ್ರಪತಿ, ಕೇಂದ್ರ ಗೃಹ ಸಚಿವರು, ರಾಜ್ಯಪಾಲರು ಸೇರಿದಂತೆ ಗಣ್ಯರು ಆಗಮಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೂಕ್ತ ಭದ್ರತೆಯನ್ನು ಒದಗಿಸಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ಜರುಗಿಸಲಾಗಿದೆ. ಪ್ರಸ್ತುತ ರಾಷ್ಟçಪತಿಯವರ ಕಾರ್ಯಕ್ರಮ ಅತಿಗಣ್ಯರ ಭದ್ರತೆ ಹೊಂದಿರುವುದರಿ0ದ ಯಾವುದೇ ಲೋಪವಿಲ್ಲದಂತೆ ಭದ್ರತೆ ಒದಗಿಸುವ ಸಲುವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ನಿಯೋಜನೆ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಭದ್ರತೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್ ಅವರು, ದೇಶದ ಪ್ರಥಮ ಪ್ರಜೆ ರಾಷ್ಟçಪತಿ ಅವರ ಆಗಮನದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು…

Read More

ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿಯ ಮತ್ತಿಹಳ್ಳಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮೂರು ನಮ್ಮ ಕೆರೆ ಅಡಿಯಲ್ಲಿ ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ, ಸೂರಿಲ್ಲದ ನಿರ್ಗತಿಕರಾದ ಶಂಕರಮ್ಮನವರಿಗೆ ಶ್ರೀ ಕ್ಷೇತ್ರದ ವತಿಯಿಂದ ನಿರ್ಮಿಸಲಾದ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಬೆಂಚ್ ಡೆಸ್ಕ್ಗಳ ವಿತರಣೆ ಕಾರ್ಯಕ್ರಮ ಗುರುವಾರ ನಡೆಯಿತು. ಮತ್ತಿಹಳ್ಳಿ ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಮ್.ಸುದರ್ಶನ್ ಮಾತಾನಾಡಿ ಧರ್ಮಸ್ಥಳ ಕ್ಷೇತ್ರದಿಂದ ನಾನಾ ಕಾರ್ಯಗಳು ನೆಡೆಯುತ್ತಿದ್ದು, ಕೆರೆಗಳಲ್ಲಿ ಮಣ್ಣು ತೆಗೆಯುವ ಮೂಲಕ ಪರಿಸರ ಸಂರಕ್ಷಣೆಗೆ ಹೆಚ್ಚಿನ ಅಧ್ಯತೆ ನೀಡಲಾಗಿದೆ. ಹಸ್ತಾಂತರಗೊ0ಡ ಕೆರೆಯನ್ನು ಉಸ್ತುವಾರಿ ಸಮಿತಿಯು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದಾಗ ಮಾತ್ರ ಮಾಡಿದ ಕಾರ್ಯಕ್ಕೆ ಬೆಲೆಸಿಗುತ್ತದೆ ಎಂದರು. ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿತರಣಾ ಕಾರ್ಯಕ್ರಮವನ್ನು ತಾಲ್ಲೂಕು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುದರ್ಶನ್ ರವರ ಸಮ್ಮುಖದಲ್ಲಿ ಹಮ್ಮಿಕೊಳ್ಳಲಾಗಿತ್ತು.ಮೊದಲಿಗೆ ಯೋಜನೆಯ ವತಿಯಿಂದ ಮಾಶಾಸನ ಪಡೆಯುತ್ತಿರುವ ಸೂರಿಲ್ಲದ ಶಂಕರಮ್ಮರವರಿಗೆ…

Read More

ಕೊರಟಗೆರೆ: ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತರಿಂದ ಕೊಟ್ಯಂತರ ಶುಲ್ಕ ವಸೂಲು ಮಾಡಿಕೊಂಡು ನಮ್ಮನ್ನು ೨೬ ವರ್ಷಗಳಿಂದ ದುಡಿಸಿಕೊಂಡು ಅನ್ಯಾಯ ಮಾಡಿಕೊಂಡು ಬರುತ್ತಿದೆ ಎಂದು ತಾಲ್ಲೂಕು ಪರವಾನಗಿ ಭೂಮಾಪಕರ ಸಂಘದ ಅದ್ಯಕ್ಷ ಡಿ.ನಾರಾಯಣರಾಜು ಆರೋಪಿಸಿದರು. ಅವರು ಕೊರಟಗೆರೆ ಪಟ್ಟಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತ ನಾಡಿ ಸರ್ಕಾರವು ರೈತರಿಂದ ಕ್ರಯ, ಧಾನ, ಹದ್ದುಭಸ್ತು, ತತ್ಕಾಲ್ ಪೋಡಿ ಸೇರಿದಂತೆ ಹಲವು ಪ್ರಕರಣಗಳಿಗೆ ಭೂಮಾಪನಾ ಕಾರ್ಯ ನಿರ್ವಹಿಸಲು ರೈತರಿಂದ ಸಾವಿರಾರು ರೂಗಳ ಶುಲ್ಕವನ್ನು ಪರವಾನಗಿ ಭೂಮಾಪಕರಿಗೆ ನೀಡಬೇಕೆಂದು ವಸೂಲು ಮಾಡುತ್ತಿದೆ, ನಮಗೆ ಅದರಲ್ಲಿ ಕಾಲು ಭಾಗ ಮಾತ್ರ ನೀಡಿ ಮುಕ್ಕಾಲು ಭಾಗ ಸರ್ಕಾರ ಇಟ್ಟುಕೊಳ್ಳುತ್ತಿದೆ, ಈ ಕಾಲು ಭಾಗದ ಹಣದಲ್ಲಿ ನಾವು ಬಾಂದು ಜವಾನರನ್ನು ಹಣ ನೀಡಿ ಕರೆದುಕೊಂಡು ಹೋಗಬೇಕು, ರೈತರ ಜಮೀನಿನ ಹತ್ತಿರದ ಪ್ರಯಾಣ ದರವನ್ನು ನಾವೇ ಭರಸಿಕೊಳ್ಳಬೇಕು ನಮಗೆ ಯಾವುದೇ ಭದ್ರತೆ, ಸೌಲಭ್ಯ ಇಲ್ಲ ಈ ೨೬ ವರ್ಷಗಳ ಅನ್ಯಾಯದ ವಿರುದ್ದ ನಾವು ಒಂದು ತಿಂಗಳಿನಿAದ ರಾಜ್ಯಾದ್ಯಂತ ಮುಷ್ಕರ ಮಾಡುತ್ತಿದ್ದು ನಮಗೆ ಸಮಾನ ಕೆಲಸಕ್ಕೆ…

Read More