ತುಮಕೂರು: ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕನ ಮೃತದೇಹ ಮೂರು ದಿನಗಳ ಸತತ ಕಾರ್ಯಾಚರಣೆಯ ಫಲದಿಂದಾಗಿ ಸೋಮವಾರ ಭೀಮಸಂದ್ರದ ಬಳಿ ಮಣ್ಣಿನಲ್ಲಿ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ನಗರದಲ್ಲಿ ಸುರಿದ ಭಾರೀ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕ ಅಮ್ಜದ್ ಖಾನ್ ಅವರ ಮೃತದೇಹ ಶೋಧನಾ ಕಾರ್ಯವನ್ನು ಎನ್ಡಿಆರ್ಎಫ್ ತಂಡ, ಮಹಾನಗರ ಪಾಲಿಕೆ ಸಿಬ್ಬಂದಿ, ಅಗ್ನಿಶಾಮಕ ದಳದವರು ನಡೆಸಿದ್ದು, ಸೋಮವಾರ ಮಧ್ಯಾಹ್ನ 2.30 ರ ವೇಳೆಗೆ ಮಣ್ಣಿನಲ್ಲಿ ಹೂತಿಕೊಂಡಿದ್ದ ಶವವನ್ನು ಹಿಟಾಚಿ ಯಂತ್ರದ ಮೂಲಕ ಕಾರ್ಯಾಚರಣೆ ನಡೆಸಿ ಹೊರ ತೆಗೆಯಲಾಯಿತು. ಆಟೋ ಚಾಲಕ ಶವ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಶಾಸಕ ಜ್ಯೋತಿಗಣೇಶ್ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು, ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕನ ಮೃತದೇಹ ಎನ್ಡಿಆರ್ಎಫ್ ತಂಡ, ಅಗ್ನಿಶಾಮಕ ದಳ ಸಿಬ್ಬಂದಿಯ ಸತತ ಕಾರ್ಯಾಚರಣೆಯಿಂದಾಗಿ ಪತ್ತೆಯಾಗಿದೆ. ಆಟೋ ಚಾಲಕ ಕೊಚ್ಚಿ ಹೋಗಿದ್ದ ಸ್ಥಳದಿಂದ ಸುಮಾರು 1.05…
Author: News Desk Benkiyabale
ತುಮಕೂರು: ಕೋವಿಡ್-19 ತಡೆಗಟ್ಟಲು ಲಸಿಕಾಕರಣ ಮುಂದುವರೆದಿದೆ. ಮೊದಲ ಎರಡು ಡೋಸ್ ಹಾಕಿಸಿಕೊಂಡು 60 ದಿನ ಕಳೆದ 18 ರಿಂದ 59 ವಯೋಮಾನದ ಎಲ್ಲರೂ ಹತ್ತಿರದ ಸರ್ಕಾರಿ ಲಸಿಕಾ ಕೇಂದ್ರಗಳಿಗೆ ತೆರಳಿ ಮುನ್ನೆಚ್ಚರಿಕಾ(ಬೂಸ್ಟರ್) ಡೋಸ್ ಪಡೆಯಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ ನಂತರ ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮತ್ತೆ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ 75 ದಿನಗಳ ಕಾಲ ವಿಶೇಷ ಅಭಿಯಾನ ನಡೆಯಲಿದ್ದು, ಈಗಾಗಲೇ ಎರಡು ಡೋಸ್ ಪಡೆದು 60 ದಿನ ಆದವರು ಹತ್ತಿರದ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಪಡೆಯಬೇಕೆಂದರು. ಜಿಲ್ಲೆಯಲ್ಲಿ 12-14 ವಯೋಮಾನದ ಮಕ್ಕಳ ಲಸಿಕಾಕರಣ ಮೊದಲ ಡೋಸ್ ಶೇ.113.4ರಷ್ಟು, ಎರಡನೇ ಡೋಸ್ ಶೇ.87.6ರಷ್ಟು ಪೂರ್ಣಗೊಂಡಿದ್ದು, ಶಾಲಾ ಮುಖ್ಯೋಪಾಧ್ಯಾಯರು ಸಂಬಂಧಿಸಿದ ಬಿಇಓ ಅಧಿಕಾರಿಗಳ ಗಮನಕ್ಕೆ ತಂದು ಹತ್ತಿರದ ಲಸಿಕಾ ಕೇಂದ್ರಗಳಿಗೆ ತೆರಳಿ ಲಸಿಕೆಯನ್ನು ಹಾಕಿಸಬೇಕು.…
ತುಮಕೂರು: ದಾವಣಗೆರೆಯಲ್ಲಿ ಆಗಸ್ಟ್ 3 ರಂದು ಮಾಜಿ ಮುಖ್ಯಮಂತ್ರಿ, ರಾಜ್ಯ ವಿಧಾನಸಭೆಯ ವಿಪಕ್ಷನಾಯಕ ಸಿದ್ದರಾಮಯ್ಯ ಅವರ ಜನ್ಮದಿನದ ಅಮೃತೋತ್ಸವ (75 ಜನ್ಮದಿನಜೋತ್ಸವ) ಮತ್ತು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಅಮೃತೋತ್ಸವ ಆಚರಣಾ ಸ್ವಾಗತ ಸಮಿತಿಯ ಅಧ್ಯಕ್ಷರಾದ ಮಾಜಿ ಶಾಸಕ ಹಾಗೂ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ತಿಳಿಸಿದರು. ನಗರದ ಕನ್ನಡಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರು ಎಲ್ಲ ಜಾತಿ, ಧರ್ಮ, ವರ್ಗಗಳಲ್ಲಿನ ತುಳಿತಕ್ಕೆ ಒಳಗಾದವರ, ಬಡವರ, ದೀನದಲಿತರ ನಾಯಕ ಅವರು ಆ ವರ್ಗದ ನಾಯಕರು, ಅವರು ಯಾವುದೇ ಜಾತಿ, ವರ್ಗ, ಪಂಗಡಕ್ಕೆ ಸೀಮಿತವಾದವರಲ್ಲ ಎಂದು ಅವರು ಹೇಳಿದರು. ಅಂತಹ ನಾಯಕನ ಜನ್ಮ ಅಮೃತೋತ್ಸವವನ್ನು ದಾವಣಗೆರೆಯಲ್ಲಿ ಪಕ್ಷತೀತವಾಗಿ ಅವರ ಅಭಿಮಾನಿಗಳು ಆಚರಿಸುತ್ತಿದ್ದಾರೆ ಎಂದರು. ಈ ಕಾರ್ಯಕ್ರಮ ಅಹಿಂದ ಶಕ್ತಿಯನ್ನು ಜಾಗೃತಗೊಳಿಸುವ ಕಾರ್ಯಕ್ರಮ ಯಾರ ವಿರುದ್ದವೂ ಅಲ್ಲ ಎಂದು ಸ್ಪಷ್ಠಪಡಿಸಿದ ಅವರು ರಾಜ್ಯದೆಲ್ಲೆಡೆಯಿಂದ ಐದು ಲಕ್ಷಕ್ಕೂ ಹೆಚ್ಚಿನ ಸಿದ್ದರಾಮಯ್ಯ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು ಸ್ವಾಗತ…
ಗುಬ್ಬಿ: ತಾಲ್ಲೂಕಿನಲ್ಲಿ ನಡೆದಿರುವ 450 ಎಕರೆ ಅಕ್ರಮ ಭೂ ದಾಖಲಾತಿ ವಂಚನೆ ಬಗ್ಗೆ ಯಾರೇ ತಪ್ಪು ಮಾಡಿದ್ದರು ಸಹ ಅವರಿಗೆ ಶಿಕ್ಷೆ ಯಾಗಬೇಕಿದೆ ಮೂಲ ರೈತರಿಗೆ ಅನ್ಯಾಯ ವಾಗಲು ಬಿಡುವುದಿಲ್ಲ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಪಂಚಾಕ್ಷರಿ ತಿಳಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಸರಕಾರ ರೈತರ ಪರವಿದ್ದು ಅವರಿಗೆ ಯಾವುದೇ ರೀತಿಯ ಅನ್ಯಾಯವಾಗಲು ಬಿಡುವುದಿಲ್ಲ ಇದರ ಬಗ್ಗೆ ಕಂದಾಯ ಇಲಾಖೆ ಹೊರತು ಪಡಿಸಿ ಬೇರೆಯವರ ಯಾವುದೇ ಸಂಸ್ಥೆಯಿಂದ ತನಿಖೆಯನ್ನು ಸರ್ಕಾರ ಮಾಡುವಂತೆ ಒತ್ತಾಯ ಮಾಡುತ್ತೇವೆ. ಈಗಾಗಲೇ ಹಲವು ಅಧಿಕಾರಿಗಳನ್ನು ಕಾನೂನಿಗೆ ಒಳಪಡಿಸಿದೆ ಇನ್ನೂ ಹಲವು ಮದ್ಯವರ್ತಿ ಗಳನ್ನು ಶಿಕ್ಷೆಗೆ ಒಳಪಡಿಸಿದ್ದು ಇದರ ಬಗ್ಗೆ ಸೂಕ್ತ ತನಿಖೆ ಮಾಡುವಂತೆ ಸರ್ಕಾರಕ್ಕೆ ನಮ್ಮ ಪಕ್ಷದಿಂದ ಒತ್ತಾಯ ಮಾಡುತ್ತೇನೆ ಎಂದು ತಿಳಿಸಿದರು. ಮುಖಂಡ ಬೆಟ್ಟಸ್ವಾಮಿ ಮಾತನಾಡಿ ಕಾನೂನನ್ನು ಗಾಳಿಗೆ ತೂರಿರುವ ಶಾಸಕರು ಕೇವಲ ರಾಜಕೀಯಕ್ಕಾಗಿ ಹಣಕ್ಕಾಗಿ ಅಧಿಕಾರಿಗಳನ್ನು ಬಳಸಿಕೊಂಡು ತಮಗೆ ಹೇಗೆ ಬೇಕೋ ಹಾಗೆ ತಿದ್ದುಪಡಿ ಮಾಡಿಸಿರುವುದು ಹಾಗೂ…
ಗುಬ್ಬಿ: ತಾಲ್ಲೂಕಿನಲ್ಲಿ ನಡೆದಿರುವ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಎಸ್.ಡಿ ದಿಲೀಪ್ ಕುಮಾರ್ ಮಾಡಿರುವ ಆರೋಪಕ್ಕೆ ಶಾಸಕ ಎಸ್.ಆರ್ ಶ್ರೀನಿವಾಸ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕಲಿ ದಾಖಲೆ ಸೃಷ್ಟಿಸಿ 450 ಎಕರೆ ಸರ್ಕಾರಿ ಜಮೀನು ಕಬಳಿಕೆ ಪ್ರಕರಣದಲ್ಲಿ ಶಾಸಕ ಶ್ರೀನಿವಾಸ್ ಎ1 ಆರೋಪಿ ಎಂದು ಬಿಜೆಪಿಯ ದಿಲೀಪ್ ಆರೋಪಿಸಿರುವುದು ಸರಿಯಲ್ಲ ಅವರಿಗೆ ಸರಿಯಾದ ಮಾಹಿತಿಯ ಕೊರತೆಯಿದೆ. 2004 ರಲ್ಲಿ ಕದ್ದು ಮೈನ್ಸ್ ಹೊಡೆದು ಅವರ 12 ಲಾರಿ ಹಾಗೂ ಹಿಟಾಚಿಯನ್ನು ಪೆÇಲೀಸರು ಸೀಜ್ ಮಾಡಿದ್ದರು. ಅವರನ್ನು ಬರೀ ಚಡ್ಡಿಯಲ್ಲಿ ಸ್ಟೇಷನ್ನಲ್ಲಿ ಕೂರಿಸಿದ್ದರು. ಅವಾಗ ಸ್ಟೇಷನ್ಗೆ ಹೋಗಿ ಬಿಡಿಸಿದ್ದು ನಾನು. ಆ ಮನುಷ್ಯ ಇವತ್ತು ಮಾತನಾಡುತ್ತಾನೆ ಎಂದು ಹಿಂದಿನ ಘಟನೆಯನ್ನು ಕೆದಕಿ ಕಿಡಿಕಾರಿದರು. ಇವಾಗ ಅರೆಸ್ಟ್ ಆಗಿರುವ ಆರೋಪಿ ಕರಿಯಣ್ಣ ಯಾರು? ನನ್ನ ಹಿಂದೆ ಇರುವವನಾ? ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಅಕ್ರಮ ಮಾಡಿರುವ ವಿಚಾರ ನನಗೆ ಮೊದಲು ಗೊತ್ತಾಯಿತು. ಆಗ…
ತುಮಕೂರು: ಭವಿಷ್ಯ ನಿಧಿ, ಸುಪ್ರೀಂಕೋರ್ಟ್ ಆದೇಶ ಪಾಲನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಗರದ ಟೌನ್ಹಾಲ್ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಅಂಗನವಾಡಿ ಕಾರ್ಯಕರ್ತರು, ಗಾಜಿನ ಮನೆಯಲ್ಲಿ ಸಭೆ ನಡೆಸಿದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕಮಲಮ್ಮ ಮಾತನಾಡಿ ಶಾಲಾ ಪೂರ್ವ ಶಿಕ್ಷಣದೊಂದಿಗೆ ಮಕ್ಕಳು, ಗರ್ಭೀಣಿಯರು, ತಾಯಂದಿರಿಗೆ ಆಹಾರ ಭದ್ರತೆ ಒದಗಿಸುವ ಪ್ರಮುಖ ಕೆಲಸ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ಅತ್ಯಲ್ಪ ಗೌರವ ಧನಕ್ಕೆ ಕೆಲಸ ಮಾಡುತ್ತಿದ್ದು, ಸುಪ್ರೀಂಕೋರ್ಟ್ ಆದೇಶದ ಅನ್ವಯ ಭವಿಷ್ಯ ನಿಧಿ ಸೇರಿದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅಂಗನವಾಡಿ ನೌಕರರು ನಿವೃತ್ತರಾದರೆ ಇಡಗಂಟು ನೀಡುವ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಈಗಿನ ಸರ್ಕಾರ ಇಡಗಂಟು ನೀಡುವುದಕ್ಕೆ ಅನುದಾನದ ಕೊರತೆ ಎನ್ನುತ್ತಿದೆ. ಸಮಾನಾಂತರ ಕೆಲಸಕ್ಕೆ ಸಮಾನ…
ತುಮಕೂರು: ನಗರಕ್ಕೆ ಕುಡಿಯುವ ನೀರು ಪೂರೈಸುವ ಬುಗುಡನಹಳ್ಳಿ ಜಲಸಂಗ್ರಹಾಗಾರ ನೀರಿಲ್ಲದೆ ಖಾಲಿಯಾಗಿ ಕುಡಿಯುವ ನೀರಿಗೆ ಅಭಾವ ಸೃಷ್ಠಿಯಾಗುತ್ತಿರುವುದನ್ನು ಮನಗಂಡಿರುವ ರಾಜ್ಯ ಸರ್ಕಾರ ರಾತ್ರಿಯಿಂದಲೇ ಜಿಲ್ಲೆಗೆ ಹೇಮಾವತಿ ಜಲಾಶಯದಿಂದ ನೀರು ಹರಿಸಲು ತೀರ್ಮಾನಿಸಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಠಿಯಾಗುತ್ತಿರುವ ಬಗ್ಗೆ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಶಾಸಕರಾದ ಜ್ಯೋತಿಗಣೇಶ್, ಡಾ. ರಾಜೇಶ್ಗೌಡ ಅವರು ನನ್ನನ್ನು ಭೇಟಿ ಮಾಡಿ ಜಿಲ್ಲೆಗೆ ಕುಡಿಯುವ ನೀರಿಗೆ ಅನುಕೂಲವಾಗುವಂತೆ ಹೇಮಾವತಿ ನೀರು ಹರಿಸುವಂತೆ ಒತ್ತಾಯಿಸಿದ್ದರು. ಜತೆಗೆ ಮಾಜಿ ಸಂಸದ ಮುದ್ದಹನುಮೇಗೌಡ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದನ್ನೆಲ್ಲ ಗಮನಿಸಿ ರಾತ್ರಿಯಿಂದಲೇ ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಹರಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು. ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಜೂ. 17 ರಂದು ಹಮ್ಮಿಕೊಂಡಿರುವ ಬಸವಣ್ಣ ಹಾಗೂ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ…
ತುಮಕೂರು: ನಾಗರಿಕರು ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಕೊಡುಗೆ ನೀಡಬೇಕು. ಹೀಗಾದಾಗ, ಶಿಕ್ಷಣ ಸಂಸ್ಥೆಗಳು ಗುಣಮಟ್ಟದಲ್ಲಿ ಮೇಲ್ದರ್ಜೆಗೇರುವ ಜೊತೆಗೆ ನಾಗರಿಕರ ಸಬಲೀಕರಣವೂ ಸಾಧ್ಯವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ತಿಪಟೂರು ಸ್ನಾತಕೋತ್ತರ ಕೇಂದ್ರ “ಕಲ್ಪಸಿರಿ”ಯ ನಿರ್ಮಾಣಕ್ಕೆ ಹತ್ತಿರದ ರಂಗಾಪುರದಲ್ಲಿ ಸೋಮವಾರ ಭೂಮಿಪೂಜೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಇಪ್ಪತ್ತೊಂದನೇ ಶತಮಾನವು ಜ್ಞಾನಾಧಾರಿತ ಸಮಾಜವಾಗಿದೆ. ಇಂತಹ ಶಿಕ್ಷಣ ಸಂಸ್ಥೆಗಳು ಸುಸ್ಥಿರವಾಗಿರಬೇಕೆಂದರೆ ಗುಣಮಟ್ಟ ಮುಖ್ಯ. ಇಂತಹ ಕೇಂದ್ರಗಳು ಸ್ಥಳೀಯವಾಗಿ ಪ್ರತಿಭೆಯನ್ನು ಉತ್ತೇಜಿಸುವ ಜೊತೆಗೆ ಇಡೀ ದೇಶದೆಲ್ಲೆಡೆಯ ಪ್ರತಿಭೆಗಳನ್ನು ಇಲ್ಲಿಗೆ ಸೆಳೆಯುವ ರೀತಿಯಲ್ಲಿ ಬೆಳೆಯಬೇಕು. ಇದು ಸಾಧ್ಯವಾದಾಗ, ವೈವಿಧ್ಯತೆಯನ್ನು ಉಳಿಸಿಕೊಂಡು ನಮ್ಮತನದ ಛಾಪನ್ನು ಒತ್ತಿದಂತಾಗುತ್ತದೆ ಎಂದು ಸಚಿವರು ವಿವರಿಸಿದರು. ಯಾವ ಜಾಗದಲ್ಲಿ ಗುಣಮಟ್ಟದ ಶಿಕ್ಷಣ ಇರುತ್ತದೋ ಅದು ಸಮೃದ್ಧತೆಯ ತಾಣವಾಗುತ್ತದೆ. ಇಲ್ಲಿ 16 ಎಕರೆ ಕ್ಯಾಂಪಸ್ ತಲೆಯೆತ್ತಲಿದ್ದು, ಎಂ.ಕಾಂ, ಎಂಸಿಎ ಕೋರ್ಸ್ ಗಳು ಇರಲಿವೆ. ಜಿಲ್ಲೆಯ ಬಿದರೆಕಟ್ಟೆಯಲ್ಲಿ 44 ಕೋಟಿ ವೆಚ್ಚದಲ್ಲಿ ಹೊಸ ಕ್ಯಾಂಪಸ್ ನಿರ್ಮಾಣ ಕಾರ್ಯ ನಡೆದಿದೆ. ಸಿರಾದಲ್ಲಿ…
ತುಮಕೂರು: ಕೆನಡಾ ದೇಶದ ಸಂಸದ ಶ್ರೀ ಚಂದ್ರ ಆರ್ಯ ಹಾಗೂ ಅವರ ಕುಟುಂಬ ಸದಸ್ಯರನ್ನು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಅವರು ಸೋಮವಾರ ಭೇಟಿ ಮಾಡಿದರು. ಈ ವೇಳೆ ರಾಜ್ಯ ಮತ್ತು ಕೇಂದ್ರವನ್ನು ಒಳಗೊಂಡಂತೆ ಇತ್ತೀಚಿನ ರಾಜಕೀಯ ವಿದ್ಯಾಮಾನಗಳು ಮತ್ತು ಸಾಮಾಜಿಕ ವಿಚಾರಗಳ ಕುರಿತು ಕೆಲಕಾಲ ಆರ್.ರಾಜೇಂದ್ರ ಅವರು ಸಂಸದರೊಂದಿಗೆ ಚರ್ಚೆಯನ್ನು ನಡೆಸಿದರು. ಇದೇ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಸಿಂಗದಳ್ಳಿ ರಾಜಕುಮಾರ್ ಹಾಗೂ ಮುಂತಾದವರು ಹಾಜರಿದ್ದರು.
ತುಮಕೂರು ನೌಕರರ ವಿರೋಧಿ ನೀತಿಯನ್ನು ಸರ್ಕಾರ ಅನುಸರಿಸುತ್ತಿದೆ.ಇದನ್ನು ಅರಿತು ಸಂಘಟಿತರಾಗಿ ಹೋರಾಟಮಾಡಿದರೆ ಮಾತ್ರ ಹಕ್ಕುಗಳು ಪಡೆದುಕೂಳ್ಳಬಹುದು ಇಲ್ಲದಿದ್ದರೆ ಕೆಲಸದಿಂದ ವಂಚಿತರಾಗಬೇಕಾಗುತ್ತದೆ ಎಂದು ಸಿ.ಐ.ಟಿ.ಯುನ ಜಿಲ್ಲಾಧ್ಯಕ್ಷರಾದ ಸೈಯದ್ ಮುಜಿಬ್ ಎಚ್ಚರಿಸಿದರು.ಕರ್ನಾಟಕ ರಾಜ್ಯ ಗ್ರಾಮ ಪಂಚಾಯಾತಿ ನೌಕರರ ಸಂಘ ಸಿ.ಐ.ಟಿ.ಯು ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಹಮ್ಮಿಕೊಂಡಿದ್ದ ತುಮಕೂರು -ಹಾಸನ ಜಿಲ್ಲಾ ಮಟ್ಟದ ಕಾರ್ಯಗಾರ ಉದ್ಘಾಟಿಸಿ ಮಾತನಾಡುತ್ತಿದ್ದರು. ಆಳುವ ಸರ್ಕಾರಗಳು ಎಲ್ಲಾ ಹಂತದಲ್ಲೂ ನೌಕರರ ವಿರೋಧಿಯಾಗಿ ನಡೆದುಕೂಳ್ಳುತ್ತದೆ.ನೌಕರರಿಗೆ ವೇತನ ಹೆಚ್ಚಳ ಮಾಡಿ ಎಂದರೆ ಹಣಕಾಸಿಕೂರತೆ ಎಂದು ಹೇಳುತ್ತದೆ ಅದರೆ ಶಾಸಕg Àವೇತನವನ್ನು ಬೆಲೆಏರಿಕೆ ನೆಪ ಹೇಳಿ ಸರ್ವಾನು ಮತದಿಂದ ಹೆಚ್ಚಳಮಾಡಿಕೂಳ್ಳುತ್ತಾರೆ. ಕೆಲವರು ನೌಕರರ ನಡುವೆ ಒಡಕನ್ನು ಉಂಟುಮಾಡುವವರ ಮಾತಿಗೆ ಕೀವಿ ಕೂಡದೆ ಹೋರಾಟ ಮಾಡುವ ಸಂಘಟನೆಯೂಂದಿಗೆ ಮುನ್ನಡೆಯಬೇಕೆಂದು ಕರೆ ನೀಡಿದರು. ಗ್ರಾಮ ಪಂಚಾಯಾತಿ ನೌಕರರ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ ಮಾತಾನಾಡುತ್ತಾ ಸತತ ನಾಲ್ಕು ವರ್ಷಗಳ ಹೋರಾಟದ ಪರಿಣಾಮ ಪಂಚಾಯಾತಿ ನೌಕರರ ವೇತನಕ್ಕಾಗಿ ಸರ್ಕಾರವು ಬಜೆಟ್ ನಲ್ಲಿ ಹಣ ಬಿಡುಗಡೆಮಾಡಿದೆ ಕೆಲ…











