ಹುಳಿಯಾರು: ಕೊರೋನಾ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಸರ್ಕಾರ ಕೊರೋನಾ ನಿರ್ಬಂಧ ಸಡಿಸಿಲಿದೆ. ಪರಿಣಾಮ ಹುಳಿಯಾರು ಪಟ್ಟಣಕ್ಕೆ ಬರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಪಟ್ಟಣ ಪಂಚಾಯ್ತಿ ಮತ್ತು ಆರೋಗ್ಯ ಇಲಾಖೆ ರಸ್ತೆಯಲ್ಲಿ ಸಂಚರಿಸುವವರಿಗೆ ಕೊರೋನಾ ಪರೀಕ್ಷೆ ಮಾಡುವ ಮೂಲಕ ಮುನ್ನೆಚ್ಚರಿಕೆ ಕ್ರಮ ವಹಿಸಿದೆ. ಹುಳಿಯಾರಿನ ಪೊಲೀಸ್ ಸ್ಟೇಷನ್ ಸರ್ಕಲ್ಗೆ ನಾಲ್ಕು ದಿಕ್ಕಿನ ರಸ್ತೆ ಸೇರುತ್ತದೆ. ಅಲ್ಲದೆ ಹಳ್ಳಿಗಳಿಂದ ಪಟ್ಟಣಕ್ಕೆ ಬರುವವರು ಈ ಸರ್ಕಲ್ ಮೂಲಕ ಓಡಾಡಲೇ ಬೇಕಿದೆ. ಹಾಗಾಗಿ ಸರ್ಕಲ್ನಲ್ಲಿ ಬಳಿ ಜನರ ಕೊರೋನಾ ಪರೀಕ್ಷೆಗೆ ಮುಂದಾಗಿದ್ದರು. ಅತ್ತ ಪಪಂ ಸಿಬ್ಬಂದಿ ಬೈಕ್ನಲ್ಲಿ ತೆರಳುವವರನ್ನು ನಿಲ್ಲಿಸಿ ಕೊರೋನಾ ಪರೀಕ್ಷೆ ಮಾಡಿಸುವಂತೆ ಸೂಚಿಸುತ್ತಿದ್ದರು. ಇತ್ತ ಆರೋಗ್ಯ ಸಿಬ್ಬಂದಿ ಆರ್ಟಿಪಿಸಿಆರ್ ಪರೀಕ್ಷೆ ಮಾಡುತ್ತಿದ್ದರು. ಕೊರೋನಾ ಪರೀಕ್ಷೆ ಮಾಡಿಸುವಂತೆ ತಿಳಿಸಿದಾಗ ಕೆಲವರು ಈಗಾಗಲೇ ಮಾಡಿಸಿದ್ದು ನೆಗೆಟಿವ್ ಬಂದಿದೆ ಎಂದು ಮೊಬೈಲ್ ಮೆಸೇಜ್ ತೋರಿಸಿ ತೆರಳುತ್ತಿದ್ದರು. ಇನ್ನೂ ಕೆಲವರು ಟೆಸ್ಟ್ ಸ್ಥಳಕ್ಕೆ ಹೋಗಿ ಸ್ವಲ್ಪ ಸಮಯ ಅಲ್ಲಿದ್ದು ಟೆಸ್ಟ್…
Author: News Desk Benkiyabale
ತುಮಕೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸೆಮಿ ಲಾಕ್ಡೌನ್ ಜಾರಿಗೊಳಿಸಿರುವುದರಿಂದ ಕಲ್ಪತರುನಾಡು ತುಮಕೂರಿನಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆಯಾದರೂ ರಸ್ತೆಗಿಳಿದಿರುವ ವಾಹನಗಳ ಸಂಚಾರ ಭರಾಟೆ, ಜನರ ಓಡಾಟ ಮತ್ತಷ್ಟು ಆತಂಕ ಸೃಷ್ಠಿಸಿದೆ. ಸರ್ಕಾರ, ಜಿಲ್ಲಾಡಳಿತಗಳು ಏನೇ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಜಾರಿ ಮಾಡಿದರೂ ಅದಕ್ಕೆ ಕ್ಯಾರೆ ಎನ್ನದೆ ಜನರು ಮಾತ್ರ ತಮಗಿಷ್ಟ ಬಂದಂತೆ ಅಡ್ಡಾಡುತ್ತಿರುವುದು ನಿಯಂತ್ರಣಕ್ಕೆ ಬರುತ್ತಿರುವ ಕೊರೋನಾ ಸೋಂಕು ಮತ್ತೆ ಹಬ್ಬುವ ಲಕ್ಷಣಗಳು ಗೋಚರಿಸುತ್ತಿವೆ. ಬೆಳಿಗ್ಗೆಯಿಂದಲೇ ಆಟೋ ರಿಕ್ಷಾಗಳು, ಕಾರುಗಳು, ದ್ವಿಚಕ್ರ ವಾಹನಗಳು ಎಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆಗಿಳಿದಿದ್ದು, ಯಾರ ಭಯವೂ ಇಲ್ಲದೆ ಸಂಚರಿಸುತ್ತಿರುವುದು ಕಂಡು ಬರುತ್ತಿದೆ. ಇನ್ನು ಆಟೋ ರಿಕ್ಷಾಗಳಿಗೆ ಇಬ್ಬರು ಪ್ರಯಾಣಿಕರನ್ನು ಮಾತ್ರ ಕೂರಿಸಿಕೊಳ್ಳುವಂತೆ ಆದೇಶ ಮಾಡಿದ್ದರೂ ಕೆಲ ಆಟೋಗಳವರು ಮೂರು, ನಾಲ್ವರನ್ನು ಕೂರಿಸಿಕೊಂಡಿದ್ದರೆ, ಮತ್ತೆ ಕೆಲವರು ನಿಯಮದಂತೆ ಇಬ್ಬರನ್ನು ಕೂರಿಸಿಕೊಂಡು ಅವರಿಂದ ದುಬಾರಿ ಪ್ರಯಾಣ ದರ ವಸೂಲಿ ಮಾಡುತ್ತಿರುವುದು ಕಂಡು…
ತುಮಕೂರು : ತಾಲ್ಲೂಕಿನ ಗೂಳೂರು ಹೋಬಳಿ, ಕೆ.ಪಾಲಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಮನೆಗಳಿಗೆ ಬೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬಿದ, ಮಾಜಿ ಶಾಸಕ ಹಾಗೂ ಬಿ.ಜೆ.ಪಿ. ಜಿಲ್ಲಾದ್ಯಕ್ಷ ಬಿ.ಸುರೇಶ್ ಗೌಡರು, ಕೋವಿಡ್ನಿಂದ ಆಕಾಲಿಕ ಮರಣ ಹೊಂದಿದ ಲೋಕೇಶ್(ಕೋಳಿ) ಕುಟುಂಬಕ್ಕೆ 25000 ರೂ ಮತ್ತು ಅವರ ತಮ್ಮನಾದ ಮೃತ ರಾಮಚಂದ್ರ ಕುಟುಂಬಕ್ಕೆ 25000 ರೂ, ದಲಿತ ಮುಖಂಡರಾದ ದಿ|| ನಾರಾಯಣ್ ಮತ್ತು ಸಾರಂಗಿರಾಜು ಕುಟುಂಬಕ್ಕೆ ತಲಾ 25000 ರೂ, ಕಿತ್ತಗಾನಹಳ್ಳಿ ಗ್ರಾಮದ ಮುನಿಸ್ವಾಮಯ್ಯ ರವರ ಕಾಲು ಶಸ್ತ್ರ ಚಿಕಿತ್ಸೆಗೆ ಹಾಗೂ ಪಾಶ್ರ್ವವಾಯು ಪೀಡಿತ ನರಸಿಂಹರಾಜು ರವರಿಗೆ ಧನ ಸಹಾಯ ಮಾಡಿ ಎಲ್ಲಾ ರಾಜಕರಣಿಗಳಿಗೂ ಅಗ್ರ ಮೇಲ್ಪಂಕ್ತಿ ಹಾಕಿ ಕೊಟ್ಟರು, ನಿಧನರಾದ ಕುಟುಂಬದ ಸದಸ್ಯನ ಸ್ಥಾನವನ್ನು ಯಾರು ತುಂಬಲಾರರು, ನೀವು ದೃತಿಗೆಡದೆ ದೈರ್ಯವಾಗಿರಿ ನಿಮ್ಮ ಕುಟುಂಬಗಳಿಗೆ ಹೆಗಲಾಗಿರುತ್ತೇನೆ ಎಂದರು, ಮತ್ತು ಮೃತ ಜೀವಗಳ ಆತ್ಮಗಳಿಗೆ ಸದ್ಗತಿ ಸಿಗಲಿ ಹಾಗೂ ಕುಟುಂಬದ ಸದಸ್ಯರಿಗೆ…
ಬೆಂಗಳೂರು : ದಲಿತ ಕವಿ, ಹಿರಿಯ ಸಾಹಿತಿ ಡಾ|| ಸಿದ್ದಲಿಂಗಯ್ಯ ಅವರು ನಿಧನರಾಗಿದ್ದಾರೆ. ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ (67) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿದ್ದಲಿಂಗಯ್ಯ ಅವರು ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು. ಇಂದು ಸಂಜೆ 4.45ರ ಸುಮಾರಿಗೆ ಸಿದ್ದಲಿಂಗಯ್ಯ ಅವರು ನಿಧನರಾಗಿದ್ದು, ಇಂದೇ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿದ್ದಲಿಂಗಯ್ಯ ಅವರು ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿದ್ದರು. ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದರು.
ತುಮಕೂರು : ಕೇಂದ್ರ ಸರಕಾರ ಇಂಧನ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಹೊರಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ವಿವಿಧ ಮಂಚೂಣಿ ಘಟಕಗಳ ಮುಖಂಡರುಗಳು ಪೆಟ್ರೊಲ್ ಬಂಕ್ ಎದುರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನಾನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಡಾ.ರಫೀಕ್ ಅಹಮದ್, ಭಾರತದ ಜನರಿಗೆ ಅಚ್ಚೆ ದಿನದ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರದ ಕಾರ್ಪೋರೇಟ್ ಪರ ನೀತಿಗಳಿಂದಾಗಿ ಜನಸಾಮಾನ್ಯರು ಬೆಲೆ ಹೆಚ್ಚಳದಿಂದ ಪರದಾಡುವಂತಾಗಿದೆ. 2014ರಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಾಗಿದ್ದರೂ, ಜನಸಾಮಾನ್ಯರ ಮೇಲೆ ಅತಿ ಕಡಿಮೆ ತೆರಿಗೆ ವಿಧಿಸುವ ಮೂಲಕ ಜನಸಾಮಾರಿಗೆ ಕೈಗೆಟುವ ದರದಲ್ಲಿ ಪೆಟ್ರೋಲ್, ಡಿಸೇಲ್ ಸಿಗುವಂತೆ ಮಾಡಿದ್ದರು. ಆದರೆ ಇಂದಿನ ಸರಕಾರ ಅತಿಯಾದ ಸೆಸ್ ವಿಧಿಸುವ…
ತುಮಕೂರು: ಅತಿಥಿ ಗೃಹ ಬಿಟ್ಟುಕೊಡುವ ಬಗ್ಗೆ ಜಮೀರ್ ಅಹಮದ್ ಅವರು ಕುಮಾರಸ್ವಾಮಿ ಬಗ್ಗೆ ಮಾತನಾಡುವಾಗ ನಾಲಿಗೆ ಹಿಡಿತದಲ್ಲಿಟ್ಟುಕೊಳ್ಳಬೇಕು, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು ಅಂತವರ ಬಗ್ಗೆ ಸರಿಯಾಗಿ ಮಾತನಾಡಲಿ ಎಂದರು. ಹದಿನೈದು ವರ್ಷದಿಂದ ಮೇಖ್ರಿ ಸರ್ಕ¯ನ ಅತಿಥಿಗೃಹವನ್ನು ಕುಮಾರಸ್ವಾಮಿ ಅವರೇ ಬಳಸುತ್ತಿದ್ದರು. ಅದು ಎಲ್ಲರಿಗೂ ಗೊತ್ತಿರುವ ವಿಚಾರ. ಕಳೆದ ಏಳೆಂಟು ವರ್ಷಗಳಿಂದ ಕುಮಾರ ಸ್ವಾಮಿ ಅಲ್ಲಿಗೆ ಹೋಗಿಲ್ಲ, ನನ್ನ ಕೆಲಸ ಮಾಡುವ ಕೆಲ ಹುಡುಗರು ಅಲ್ಲಿದ್ದರು, ಜೊತೆಗೆ ನನ್ನ ಶೂಟಿಂಗ್ ಉಪಕರಣಗಳು ಇದ್ದವು ಎಂದರು. ಕಳೆದ ಎರಡು ಮೂರು ದಿನದ ಹಿಂದೆ ಮನೆ ಖಾಲಿ ಮಾಡುವಂತೆ ತಿಳಿಸಿದ್ದರು ಆzರೆ ಹುಡುಗರೆಲ್ಲ ಕೊರೋನಾ ಕಾರಣದಿಂದ ಮನೆಗೆ ಹೋಗಿದ್ದರಿಂದ ಖಾಲಿ ಮಾಡಲು ಆಗಿರಲಿಲ್ಲ, ಅವರೇ ಹೋಗಿ ಮನೆ ಕಿ ಹೊಡೆದದಿದ್ದಾರೆ, ಅದನ್ನು ನಮ್ಮ ಹುಡುಗರು ಪ್ರಶ್ನಿಸಿದ್ದಕ್ಕೆ ವಾಗ್ವಾದವಾಗಿದೆ ಅಷ್ಟೇ ಹಲ್ಲೆ ಆಗಿಲ್ಲ, ಗೊಂದಲ ಸೃಷ್ಟಿಸಲು ಈ ರೀತಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು. …
ತುಮಕೂರು: ನಗರದ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯಲ್ಲಿ ರಸ್ತೆ, ಚರಂಡಿ ನಿರ್ಮಾಣ ಮಾಡಲು ಜೆಸಿಬಿಯಿಂದ ಆವರಣದ ರಸ್ತೆಗಳನ್ನು ಅಗೆದ ಕಾರಣ, ವ್ಯಾಪಾರ ವಹಿವಾಟಿಗೆ ಅಡಚಣೆಯಾಗಿ ಗುರುವಾರ ವ್ಯವಹಾರ ಚಟುವಟಿಕೆಗಳು ಅಸ್ತವ್ಯಸ್ತವಾದವು. ಕಾಮಗಾರಿ ಆರಂಭಿಸುವ ಬಗ್ಗೆ ಇಲ್ಲಿನ ವರ್ತಕರಿಗೆ ಮಾಹಿತಿ ನೀಡದೆ, ವ್ಯಾಪಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡದೆ ಏಕಾಏಕಿ ಕಾಮಗಾರಿಗೆ ಮುಂದಾಗಿರುವ ಬಗ್ಗೆ ವರ್ತಕರು ಎಪಿಎಂಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಳೆಗಾಲದಲ್ಲಿ ಮಳೆ ನೀರು ಮಾರುಕಟ್ಟೆ ಒಳಗೆ ನುಗ್ಗಿ ಅವಾಂತರವಾಗುತ್ತಿತ್ತು. ಇಲ್ಲಿ ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ, ಎಪಿಎಂಸಿಯಿಂದ ಸುವ್ಯವಸ್ಥಿತ ಚರಂಡಿ ನಿರ್ಮಿಸಿ, ಆವರಣದಲ್ಲಿ ಸಿಮೆಂಟ್ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಮಾರುಕಟ್ಟೆ ಅಭಿವೃದ್ಧಿಗೆ ನಾವು ವಿರೋಧ ಮಾಡುವುದಿಲ್ಲ, ಸುಸಜ್ಜಿತ ಮಾರುಕಟ್ಟೆ ನಿರ್ಮಾಣ ಆಗಬೇಕು ಎಂಬ ಒತ್ತಾಯ ಮಾಡುತ್ತಲೇ ಬಂದಿದ್ದೇವೆ. ಆದರೆ, ಕಾಮಗಾರಿ ಆರಂಭಿಸುವ ಮೊದಲು ಇಲ್ಲಿನ ವ್ಯಾಪಾರಿಗಳಿಗಾಗಲಿ, ವ್ಯಾಪಾರಿಗಳ ಸಂಘಕ್ಕಾಗಲಿ ಎಪಿಎಂಸಿ ಅಧಿಕಾರಿಗಳು ಮಾಹಿತಿ ನೀಡಿಲ್ಲ, ಜೆಸಿಬಿ…
ತುಮಕೂರು: ಗ್ರಾಮಾಂತರ ಜನರ ಕಷ್ಟದಲ್ಲಿ ಜೊತೆಯಾಗಿರುವ ಶಾಸಕ ಡಿ.ಸಿ.ಗೌರಿಶಂಕರ್ ಅವರಂತೆ ಉಳಿದ ಜನಪ್ರತಿನಿಧಿಗಳು ಕಾರ್ಯನಿರ್ವಹಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಭಿಪ್ರಾಯಪಟ್ಟರು. ಗ್ರಾಮಾಂತರ ಕ್ಷೇತ್ರದ ಬಳ್ಳಗೆರೆಯಲ್ಲಿ ಬಡವರಿಗೆ ಹಾಗೂ ಕೊರೋನಾ ವಾರಿಯರ್ಸ್ಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಕ್ಷೇತ್ರದ ಜನರ ನೆರವಿಗೆ ನಿಲ್ಲಬೇಕಿರುವುದು ಜನಪ್ರತಿನಿಧಿಗಳ ಕೆಲಸ, ಕೊರೋನಾ ಸಂಕಷ್ಟದ ಸಮಯದಲ್ಲಿ ಜನರಿಗೆ ಅವಶ್ಯಕವಿರುವ, ಪಡಿತರ, ಔಷಧವನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಿರುವ ಗೌರಿಶಂಕರ್ ಅವರ ಕಾರ್ಯ ಮಾದರಿಯಾದದ್ದು ಎಂದರು. ಸರ್ಕಾರ ಕೋವಿಡ್ ಕೇರ್ಗಳನ್ನು ಮಾತ್ರ ಮಾಡುತ್ತದೆ, ಅದೆಷ್ಟೋ ಕೋವಿಡ್ ಕೇಂದ್ರಗಳು ನಿರ್ವಹಣೆ ಕೊರತೆಯನ್ನು ಎದುರಿಸುತ್ತಿವೆ, ಗೌರಿಶಂಕರ್ ಅವರು ಕೋವಿಡ್ ಕೇಂದ್ರವನ್ನು ಸ್ವಂತ ಹಣದಲ್ಲಿ ಆಕ್ಸಿಜನ್ ಸಹಿತ ಕೇಂದ್ರವನ್ನಾಗಿ ಮಾರ್ಪಡಿಸಿರುವುದಲ್ಲದೇ, ಉತ್ತಮವಾಗಿ ನಿರ್ವಹಣೆ ಮಾಡುವ ಮೂಲಕ ಕ್ಷೇತ್ರದ ಜನರಿಗೆ ಆರೋಗ್ಯ ಸೇವೆ ಒದಗಿಸಿರುವುದು ಶ್ಲಾಘನೀಯ ಎಂದರು. ಜಿಲ್ಲೆಯಲ್ಲಿ ಗೌರಿಶಂಕರ್…
ತುಮಕೂರು: ಮುಂಗಾರು ಹಂಗಾಮಿನ ಕೃಷಿ ಪರೀಕ್ಷೆಯಲ್ಲಿ ಗುಣಮಟ್ಟದ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ರೈತರಿಗೆ ಸಮರ್ಪಕವಾಗಿ ಹಂಚಿಕೆ ಮಾಡಲು ಕ್ರಮ ವಹಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಲಭ್ಯತೆ ಹಾಗೂ ಪೂರ್ವ ಸಿದ್ಧತೆ ಕುರಿತು ಮುಂಗಾರು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಕೃಷಿ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಬಿತ್ತನೆ ಬೀಜಗಳನ್ನು ವಿತರಿಸುವಾಗ ಗುಣಮಟ್ಟ ಖಾತ್ರಿಪಡಿಸಿಕೊಂಡೇ ರೈತರಿಗೆ ಪೂರೈಸಬೇಕು. ಕಳಪೆ ಗುಣಮಟ್ಟದ ಬಿತ್ತನೆ ಬೀಜ ವಿತರಣೆಯಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿರಬೇಕು ಎಂದು ನಿರ್ದೇಶಿದರು. ಉತ್ತಮ ಗುಣಮಟ್ಟದ ಬಿತ್ತನೆ ಬೀಜ ವಿತರಣೆ ಮಾಡಬೇಕು. ಎಲ್ಲಿಯೂ ರೈತರಿಗೆ ಬೀಜದ ಸಮಸ್ಯೆ ಎದುರಾಗಬಾರದು. ಬೇಡಿಕೆಗೆ ಅನುಗುಣವಾಗಿ ವಿತರಣೆ ಮಾಡಬೇಕು. ಬಿತ್ತನೆ ಬೀಜದ ಗ್ರೇಡಿಂಗ್…
ತುಮಕೂರು: ಕೊರೋನಾ ಲಾಕ್ಡೌನ್ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿರುವ ಹೊರ ರಾಜ್ಯದ ಸುಮಾರು 250 ಮಂದಿ ಕೂಲಿ ಕಾರ್ಮಿಕರಿಗೆ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಸ್ವಾಮಿ ವಿವೇಕಾನಂದ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ವತಿಯಿಂದ ನೀಡಲಾದ ಆಹಾರ ಪದಾರ್ಥದ ಕಿಟ್ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ವಿತರಿಸಿದರು. ಕೋವಿಡ್ ಸಂಕಷ್ಟದ ಸಮಯದಲ್ಲಿ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಈ ಕೂಲಿ ಕಾರ್ಮಿಕರು ಹೊರ ರಾಜ್ಯದವರಾಗಿರುವುದರಿಂದ ಈವರೆಗೆ ಯಾವುದೇ ಸಂಘ ಸಂಸ್ಥೆಗಳವರು ಇವರನ್ನು ಗುರುತಿಸಿ ನೆರವಿಗೆ ಧಾವಿಸಿರಲಿಲ್ಲ. ಆದರೆ ಸ್ವಾಮಿ ವಿವೇಕಾನಂದ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಸಂಸ್ಥೆ ಹೊರ ರಾಜ್ಯದಿಂದ ಬಂದು ಹಲವು ದಿನಗಳಿಂದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿರುವ ಈ ಕೂಲಿ ಕಾರ್ಮಿಕರ ಸಂಕಷ್ಟವನ್ನು ಅರಿತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಮೂಲಕ ಅಗತ್ಯ ಇರುವ ದಿನಸಿ ಕಿಟ್ಗಳನ್ನು ವಿತರಣೆ…