Author: News Desk Benkiyabale

ತುಮಕೂರು: ಜೀವನದಲ್ಲಿ ಬಸವಣ್ಣನವರ ಆದರ್ಶಗಳನ್ನು ರೂಢಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಕರೆ ನೀಡಿದರು. ನಗರದ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು, 12ನೇ ಶತಮಾನದಲ್ಲೇ ಬಸವಣ್ಣನವರು ಸಮಾನತೆಯ ಸಂದೇಶವನ್ನು ಸಾರಿದ್ದರು. ಇಂದು ಅದನ್ನು ಪ್ರತಿಯೊಬ್ಬರು ಚಾಚೂತಪ್ಪದೇ ಪಾಲಿಸಬೇಕು ಎಂದರು. ವಿದ್ಯಾರ್ಥಿಗಳು ಬಸವಣ್ಣನವರ ಸಂದೇಶ, ವಚನಗಳನ್ನು ತಿಳಿದುಕೊಳ್ಳುವ ಮೂಲಕ ತಮ್ಮ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಬಸವಣ್ಣನವರ ಕಾಯಕವೇ ಕೈಲಾಸ ಮಾತನ್ನು ಚಾಚೂತಪ್ಪದೇ ಯುವಕರು ಪಾಲಿಸಬೇಕು. ಆಗ ಮಾತ್ರ ಬದುಕಿನಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಾವೆಲ್ಲರೂ ಬದುಕು ನಡೆಸೋಣ ಎಂದರು. ಉಪನ್ಯಾಸ ನೀಡಿದ ಡಾ. ನಂಜುಂಡಸ್ವಾಮಿ ಅವರು, ಬಸವ ಜಯಂತಿ ಆಚರಣೆಗೆ ಬಂದ ರೀತಿ, ಬಸವಣ್ಣನವರ ಕಾಲದ ವಚನಗಳ ಸಂಶೋಧನೆ, ಸಂರಕ್ಷಣೆ ಬಗ್ಗೆ ತಿಳಿಸಿದರು. ಕಾಲೇಜಿನ ನಿರ್ದೇಶಕರಾದ ಡಾ. ಎಂ.ಎನ್. ಚನ್ನಬಸಪ್ಪ, ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ಶಿವಕುಮಾರಯ್ಯ, ಪ್ರಾಂಶುಪಾಲರು ಮಾತನಾಡಿದರು. ಇದೇ ಸಂದರ್ಭದಲ್ಲಿ…

Read More

ತುಮಕೂರು: ಕೇಂದ್ರದ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆಯ ನಿರ್ದೇಶಕರಾದ ವೇದಪ್ರಕಾಶ್ ಮಿಶ್ರಾ ಅವರಿಂದು, ಜಿಲ್ಲೆಯಲ್ಲಿ ‘ಜಲಶಕ್ತಿ ಅಭಿಯಾನ’ದಡಿ ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳಲಾದ ಯೋಜನೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ‘ಜಲಶಕ್ತಿ ಅಭಿಯಾನ’ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕುಡಿಯುವ ನೀರು ಮಾನವನ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದ್ದು, ಜಲಮೂಲ ಪ್ರದೇಶಗಳ ಅತಿಕ್ರಮಣ ಕಾನೂನು ಬಾಹಿರ. ಅಂತರ್ಜಲ ಅಭಿವೃದ್ಧಿಯತ್ತ ನಾವುಗಳು ಇಂದು ಗಮನಹರಿಸಬೇಕಾಗಿದೆ. ಹಿಂದಿನ ದಿನಗಳಲ್ಲಿ ಅಂತರ್ಜಲ ಮಟ್ಟ ಸಂತೃಪ್ತ ವಲಯದಲ್ಲಿರುತ್ತಿತ್ತು ಆದರೆ, ಈಗ ಅಂತರ್ಜಲ 1000 ಅಡಿಗೂ ಕೆಳಮಟ್ಟ ತಲುಪಿದ್ದು, ಮಾನವನ ನಿಯಂತ್ರಣಕ್ಕೆ ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಫೀಡಿಂಗ್ ಕಾಲುವೆಗಳಲ್ಲೂ ಸಹ ಅತಿಕ್ರಮಣ ಆಗದ ಹಾಗೆ ನೋಡಿಕೊಳ್ಳಬೇಕಿದೆ, ಹೀಗಾದಲ್ಲಿ ಮಾತ್ರ ಜಲ ಮೂಲಗಳು ಸಂರಕ್ಷಿಸಲ್ಪಡುತ್ತವೆ. ಕೊಳವೆ ಬಾವಿಗಳು, ಅಚ್ಚುಕಟ್ಟು ಪ್ರದೇಶಗಳು ಮತ್ತು ಜಲ ಮೂಲಗಳ ಪುನರುಜ್ಜೀವನ ಯೋಜನೆಗಳು ನಿರಂತರವಾಗಿ ನಡೆಯುತ್ತಿರಬೇಕು. ಮಹಿಳೆಯರು ಸಹ ಜಲ ಜಾಗೃತಿ ಅಭಿಯಾನಗಳಲ್ಲಿ ಹೆಚ್ಚು ಭಾಗವಹಿಸುವಂತಾಗಬೇಕು ಮತ್ತು ಜಲ ಅಭಿಯಾನದಲ್ಲಿ…

Read More

ತುಮಕೂರು: ಬ್ರಕೀದ್ ಹಬ್ಬ ಹಿನ್ನೆಲೆಯಲ್ಲಿ ಮಾಂಸಕ್ಕಾಗಿ ಗೋವುಗಳನ್ನು ಕಡಿಯಲು ಯತ್ನಿಸಿದ ಮೂವರನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಅಮೃತೂರು ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಮೃತೂರು ಸಮೀಪದ ಬಿಸಿನೆಲೆ ಅರಣ್ಯ ಪ್ರದೇಶದಲ್ಲಿ 16 ಹಸುಗಳು ಹಾಗೂ 13 ಕೋಣಗಳನ್ನು ತೆಗೆದುಕೊಂಡು ಹೋಗಿ ಹತ್ಯ ಮಾಡಲು ಯತ್ನಿಸಿದರು. ಈ ವಿಚಾರ ತಿಳಿಯುತ್ತಿದ್ದಂತೆ ಡಿವೈಎಸ್ ಪಿ ನೇತೃತ್ವದಲಲಿ ರಮೇಶ್ ಹಾಗೂ ಸರ್ಕಲ್ ಇನ್ಸೆಪೆಕ್ಟರ್ ಗುರುಪ್ರಸಾದ್ ತಂಡ ನೇತೃತ್ವದಲ್ಲಿ ದಾಳಿ ನಡೆಸಿ, 15 ಹಸುಗಳು ಹಾಗೂ 13 ಕೋಣಗಳನ್ನು ರಕ್ಷಿಸಲಾಗಿದೆ. ಪೆÇಲೀಸರು ಸ್ಥಳಕ್ಕೆ ಧಾವಿಸುವ ವೇಳೆಗಾಗ್ಲೇ ಒಂದು ಹಸುವನ್ನು ಹತ್ಯೆಮಾಡಿ ಮಾಂಸವನ್ನು ತುಂಡುತಾಂಡಾಗಿಸಿದ್ದರು, ಗೋವುಗಳನ್ನು ಕಡಿಯುತ್ತಿದ್ದ ಜಗದೀಶ್, ಮಂಜುನಾಥ್ ಹಾಗೂ ಶಿವು ಎಂಬ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಜಾನುವಾರುಗಳನ್ನು ಸಾಗಿಸಲು ಬಳಸಿದ್ದ ಇಂದು ಟಾಟಾ ಏಸ್ ಹಾಗೂ ಎರಡು ಬೈಕ್‍ಗಳು ಜೊತೆಗೆ ಹಸುವಿನ ಮಾಂಸವನ್ನು ವಶ ಪಡಿಸಿದ್ದಾರೆ. ಅಮೃತೂರು ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Read More

ತುಮಕೂರು: ಕಾಂಗ್ರೆಸ್ ಸಂಪ್ರದಾಯಕ ಮತದಾರರಾದ ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಮುಂಬರುವ ಸೆಪ್ಟಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ತಿಂಗಳಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ, ವರ್ಗದ ಕಾರ್ಯಕರ್ತರ ಬೃಹತ್ ಸಮಾವೇಶ ಹಮ್ಮಿಕÉೂಳ್ಳಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಿ.ಜಿ.ನಿಂಗರಾಜು ತಿಳಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷ ನೀಡುತ್ತಿರುವ ಸುಳ್ಳು ಭರವಸೆಗಳನ್ನು ನಂಬಿ, ದಲಿತ ಯುವಕರು ಕಾಂಗ್ರೆಸ್ ಪಕ್ಷದಿಂದ ದೂರವಾಗುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ವರ್ಗಗಳ ಯುವಜನತೆಗೆ ಬಿಜೆಪಿ ಹಿಡನ್ ಅಜೆಂಡಾವನ್ನು ತಿಳಿಸಿ, ಕಾಂಗ್ರೆಸ್ ಪಕ್ಷ ತನ್ನ ಆಡಳಿತದ ಅವಧಿಯಲ್ಲಿ ತಳಸಮುದಾಯದ ಏಳಿಗೆಗೆ ನೀಡಿರುವ ಕೊಡುಗೆಗಳನ್ನು ನೆನಪು ಮಾಡಿ, ಅವರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯುವ ನಿಟ್ಟಿನಲ್ಲಿ ಈ ಸಮಾವೇಶ ಮಹತ್ವವನ್ನು ಪಡೆದುಕೊಳ್ಳಲಿದೆ ಎಂದರು. ಕಾಂಗ್ರೆಸ್…

Read More

ಗುಬ್ಬಿ: ತಾಲೂಕಿನ ಭೂ ಹಗರಣದಲ್ಲಿ ನನ್ನ ಹಿಂಬಾಲಕರಾಗಲಿ ಅಥವಾ ನನ್ನ ಒಡಹುಟ್ಟಿದವರು ಆಗಲಿ ಎಲ್ಲರನ್ನು ಜೈಲಿಗೆ ಕಳಿಸುತ್ತೇನೆ ಎಂದು ಶಾಸಕ ಎಸ್ ಆರ್. ಶ್ರೀನಿವಾಸ್ ತಿಳಿಸಿದರು. ತಾಲೂಕಿನ ಕಸಬಾ ಹೋಬಳಿಯ ಹಳೇಗುಬ್ಬಿ, ಜ್ಯೋತಿನಗರ ಮತ್ತು ತೊರೇಹಳ್ಳಿ ಗ್ರಾಮದಲ್ಲಿ 39 ಲಕ್ಷ ರೂಗಳ ಸಿ.ಸಿ.ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ನಂತರ ಮಾತನಾಡಿದ ಅವರು ರೈತರಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ ತಾಲೂಕಿನಲ್ಲಿ ಎಷ್ಟು ಭೂಮಿ ಲಭ್ಯವಿದೆ ಎಂದು ಹುಡುಕಾಟ ನಡೆಸಿದಾಗ ಈ ಭೂ ದಂಧೆಯ ಅ ವ್ಯವಹಾರ ಬೆಳಕಿಗೆ ಬಂದಿದ್ದು ತಕ್ಷಣವೇ ಉಪ ವಿಭಾಗಾಧಿಕಾರಿ ಹಾಗೂ ತಾಲೂಕು ದಂಡಾಧಿಕಾರಿಗಳನ್ನು ಕರೆಯಿಸಿ ಎಲ್ಲಿ ವ್ಯತ್ಯಾಸವಾಗಿದೆ ಎಂಬುದನ್ನು ಕಂಡು ಹಿಡಿಯಲು ಹೋದಾಗ ಸುಮಾರು 99 ರಿಂದ 2002 ರವರೆಗೆ ಆಗಿನ ತಹಸಿಲ್ದಾರ್ ಅವರೇ ಜಮೀನನ್ನು ರೈತರಿಗೆ ನೀಡುತ್ತಿದ್ದು ಕೈಬರಹದ ಪಹಣಿಗಳನ್ನು ಹಾಗೂ ಎಂ ಆರ್ ಪುಸ್ತಕದಲ್ಲಿ ನೊಂದಣಿ ಮಾಡಿದ ಕಾರಣ ಈ ದಂದೆಗೆ ನಾಂದಿ ಹಾಡಲು ದಾರಿಯಾಗಿದೆ. ಸುಮಾರು ವರ್ಷಗಳಿಂದ ಯಾವುದೇ ದಾಖಲಾತಿಗಳು ಇಲ್ಲದೆ ಜಮೀನನ್ನು…

Read More

ಕೊರಟಗೆರೆ: ಖಚಿತ ಮಾಹಿತಿಯ ಆಧಾರದ ಮೇಲೆ, ಜೂಜು ಅಡ್ಡೆ ಮೇಲೆ ಪೊಲೀಸರು ಮಿಂಚಿನ ದಾಳಿ ನಡೆಸಿದ ಪೊಲೀಸರು, 15 ಮಂದಿಯನ್ನು ಬಂಧಿಸಿ, 7 ಲಕ್ಷ ಸೇರಿದಂತೆ 4 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕೊರಟಗೆರೆ ಬಳಿಯ ನಾಗೇನಹಳ್ಳಿಯ ಸಿ.ಜೆ ಎಲೈಟ್ ರೆಸಾರ್ಟ್ ಮೇಲೆ ದಾಳಿ ನಡೆಸಿದ ಕೊರಟಗೆರೆ ಸಿಪಿಐ, ಸಿದ್ದರಾಮೇಶ್ವರ, ಪಿಎಸ್ಸೈ ನಾಗರಾಜು, ಬಡವನಹಳ್ಳಿ ಇನ್ಸೆಪೆಕ್ಟರ್ ಹನುಮಂತರಾಯಪ್ಪ ನೇತೃತ್ವದಲ್ಲಿ ತಂಡ 7,00,650 ರೂಪಾಯಿ ಹಣ ಹಾಗೂ 4 ಕಾರು, 15 ಮೊಬೈಲ್ ಜಪ್ತಿಮಾಡಿ, ಜೂಜಾಟದಲ್ಲಿ ತೊಡಗಿದ್ದ 15 ಜನ ಆರೋಪಿಗಳು ಪೊಲೀಸರ ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತರು ಬೆಂಗಳೂರು- ತುಮಕೂರು- ಮಧುಗಿರಿ ಮತ್ತು ಕೋಳಾಲ ಮೂಲದ ಜೂಜುಕೋರರು ಎಂದು ಹೇಳಲಾಗಿದೆ. ದಾಳಿ ಸಂದರ್ಭದಲ್ಲಿ ಮಧುಗಿರಿ ಡಿವೈಎಸ್‍ಪಿ ರಾಮಕೃಷ್ಣ, ಕೊರಟಗೆರೆಯ ಸಿಪಿಐ ಸಿದ್ಧರಾಮೇಶ್ವರ, ಪಿಎಸ್‍ಐ ನಾಗರಾಜು, ಬಡವನಹಳ್ಳಿಯ ಇನ್ಸ್‍ಪೆಕ್ಟರ್ ಹನುಮಂತರಾಯಪ್ಪ, ಸಿಬ್ಬಂದಿ, ಧರ್ಮಪಾಲ್ ನಾಯಕ್ ಶಶಿಕುಮಾರ್, ಸತೀಶ್ ಸೇರಿದಂತೆ ಮಿಂಚಿನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು: ಜ್ಯುವೆಲ್ಲರಿ ಶಾಪ್ ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಅಂತರ್ ರಾಜ್ಯ ದರೋಡೆ ಕೋರರನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ಓರ್ವ ಅಪ್ರಾಪ್ತ ಬಾಲಕ ಸೇರಿ 4 ಜನ ಆರೋಪಿಗಳನ್ನು ಬಂಧನ ಮಾಡಲಾಗಿದ್ದು, ಮಹಾರಾಷ್ಟ್ರ ಮೂಲದ ದಿಗಂಬರ್ ಕಿರಣ್ ಕುಂಡ್ಲಿಕ್ ಸುಳೆ, ರಾಜಸ್ಥಾನ ಮೂಲದ ಸಿದ್ದನಾಥ ರಾಮಚಂದ್ರ ಪಡಾಲ್ಕರ್, ಹರ್ಷವರ್ಧನ್ ಬಾಳಿರಾಂ ಮಾನೆ, ವಿವೇಕ್ ದೌಲತ್ ರಾವ್ ಮೇಟ್ ಕರಿ ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 53 ಲಕ್ಷದ 33 ಸಾವಿರ ಬೆಲೆಬಾಳುವ 1 ಕೆಜಿ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇನ್ನು ಜ್ಯುವೆಲ್ಲರಿ ಶಾಪ್ ನಲ್ಲಿ ಕೆಲಸದವನಿಂದಲೇ ಕಳ್ಳತನಕ್ಕೆ ಪ್ಲಾನ್ ರೂಪಿಸಲಾಗಿತ್ತು ಮಬುದು ಮತ್ತೊಂದು ವಿಶೇಷ. ಅದಲ್ಲದೇ ತುಮಕೂರು ನಗರದ ಗೋಲ್ಡ್ ಟೆಸ್ಟಿಂಗ್ ಶಾಪ್ ಒಂದರಲ್ಲಿ ಕೆಲಸಕ್ಕಿದ್ದ ಪ್ರಮುಖ ಆರೋಪಿ ದಿಗಂಬರ್ ಕಿರಣ್ ಎಂಬಾತ ರಜೆ ನಿಮಿತ್ತ ರಾಜಸ್ಥಾನಕ್ಕೆ ಹೋದಾಗ ತನ್ನ ಸ್ನೇಹಿತರಿಗೆ ಸುಲಭವಾಗಿ ಹಣ ಗಳಿಸುವ ಬಗ್ಗೆ ಪ್ಲಾನ್ ನೀಡಿದ್ದ. ಅದರಂತೆ ಬೆಂಗಳೂರಿನಿಂದ ತುಮಕೂರಿಗೆ ಚಿನ್ನಾಭರಣಗಳನ್ನ ಸರಬರಾಜು ಮಾಡುತ್ತಿದ್ದವನನ್ನು ಅಟ್ಯಾಕ್ ಮಾಡಿದ್ರೆ ಸುಲಭವಾಗಿ…

Read More

ತುಮಕೂರು: ಎಲ್‍ಸಿಡಿಸಿ ಕುಷ್ಠರೋಗ ಪತ್ತೆಹಚ್ಚುವ ಅಂದೋಲನ ಆಗಸ್ಟ್ 16 ರಿಂದ ಸೆಪ್ಟೆಂಬರ್ 02ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರು ಕುಷ್ಠರೋಗ ಪತ್ತೆಹಚ್ಚುವ ಕಾರ್ಯಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮ, ರೋಗ ನಿಯಂತ್ರಣದ ಬಗ್ಗೆ ಕ್ರಮಗಳನ್ನು ಆಂದೋಲನದಡಿ ಕೈಗೊಳ್ಳುವಂತೆ ಸೂಚಿಸಿದರು. ಡಿಹೆಚ್‍ಓ ಡಾ.ಮಂಜುನಾಥ್ ಡಿ.ಎನ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಎಲ್‍ಸಿಡಿಸಿ ಕುಷ್ಠರೋಗ ಪತ್ತೆಹಚ್ಚುವ ಅಂದೋಲನ ಜಿಲ್ಲಾದ್ಯಂತ ನಡೆಯುವುದೆಂದು ತಿಳಿಸಿ, ಪಿಬಿ ಹಂತದಲ್ಲೇ ಗುರುತಿಸುವಂತೆ ಹಾಗೂ ಅಂಗವೈಕಲ್ಯ ಆಗದಂತೆ ಗುಣಮಟ್ಟ ಸಮೀಕ್ಷೆಯನ್ನು ಮಾಡುವಂತೆ ತಿಳಿಸಿದರು. ಆಂದೋಲನದಲ್ಲಿ ಅಗತ್ಯವಿರುವೆಡೆ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸುವಂತೆ ನಿರ್ದೇಶಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಅವರಿಗೆ ಸೂಚಿಸಿದರು. ಎಲ್ಲಾ ತಾಲ್ಲೂಕುಗಳಲ್ಲಿ ಆಶಾ ಕಾರ್ಯಕರ್ತೆಯರು ಮನೆ- ಮನೆ ಭೇಟಿ ನೀಡಿ ಈ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಿ ಸಮೀಕ್ಷೆ ಮಾಡಬೇಕು ಹಾಗೂ…

Read More

ತುಮಕೂರು: ಕುಣಿಗಲ್ ಶಾಸಕರ ಹೆಸರಿನಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ಸುತ್ತಮುತ್ತಲ ಗ್ರಾಮಗಳ ಜನರಿಗೆ ಆಗುತ್ತಿರುವ ತೊಂದರೆ ಕುರಿತಂತೆ ಪ್ರತಿಭಟನೆ ಮಾಡಿದ್ದನ್ನೇ ನೆಪ ಮಾಡಿಕೊಂಡು ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ ಹಾಗೂ ಅವರ ಸಂಗಡಿಗರ ವಿರುದ್ದ ಪೊಲೀಸರು ಐಪಿಸಿ ಕಲಂ 307ರ ಅಡಿಯಲ್ಲಿ ಕೇಸು ದಾಖಲಿಸಿದ್ದು, ಕೂಡಲೇ ಕೇಸು ಹಿಂಪಡೆಯುವಂತೆ ಆಗ್ರಹಿಸಿ ಇಂದು ರೈತ ಸಂಘದ ಪದಾಧಿಕಾರಿಗಳು, ಕೆ.ಆರ್.ಎಸ್ ಪಾರ್ಟಿಯ ಸಹಕಾರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರೈತ ಸಂಘದ ರಾಜ್ಯ ಕಾರ್ಯದರ್ಶಿ ವೀರಣ್ಣ ಅವರ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿ, ರೈತ ಮುಖಂಡರು, ಬೀಸೆಗೌಡನದೊಡ್ಡಿ, ರಾಜಪ್ಪನದೊಡ್ಡಿ, ಹೊನ್ನಮಾಚನಹಳ್ಳಿ, ಹೊಸಹಳ್ಳಿದೊಡ್ಡಿ,ನಿಡಶಾಲೆ ಗ್ರಾಮಪಂಚಾಯಿತಿಗಳ ಸಾರ್ವಜನಿಕರ ಮೇಲೆ ಶಾಸಕರ ಕುಮ್ಮಕ್ಕಿನಿಂದ ಕೊಲೆಯತ್ನ ಪ್ರಕರಣ ದಾಖಲು ಮಾಡಿರುವುದು ಖಂಡನೀಯ.ಕೂಡಲೇ ಕೇಸ್‍ಗೆ ಬಿ.ರಿಪೋರ್ಟ್ ಹಾಕಿ, ಶಾಸಕರ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವಂತೆ ಒತ್ತಾಯಿಸಿದರು. ಪ್ರತಿಭಟನೆ ನಿರತ ರೈತ ಸಂಘದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ…

Read More

ತುಮಕೂರು: ತುಮಕೂರು ನಗರದ ವ್ಯಾಪ್ತಿಯಲ್ಲಿನ ರೌಡಿಗಳಿಗೆ ಶುಕ್ರವಾರ ನಸುಕಿನ ಜಾವದಲ್ಲಿಯೇ ಶಾಕ್ ಕೊಟ್ಟು ಚಳಿ ಬಿಡಿಸಿದ ಎಸ್ಪಿ ರಾಹುಲ್‍ಕುಮಾರ್ ಶಹಪೂರ್ ವಾಡ್ ರವರ ಬಗ್ಗೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಗರದಲ್ಲಿ ಇತ್ತೀಚೆಗೆ ಕುಖ್ಯಾತ ರೌಡಿಗಳನ್ನು ಎಡೆಮುಡಿ ಕಟ್ಟಲಾಗಿತ್ತು. ನಟೋರಿಯಸ್ ಎಂಬ ಹಣೆಪಟ್ಟಿಯನ್ನು ಕಟ್ಟಿಕೊಳ್ಳಬೇಕೆಂಬ ಹುಮ್ಮಸ್ಸಿನಲ್ಲಿದ್ದ ಕುಖ್ಯಾತ ರೌಡಿಗಳನ್ನು ನಡ ಮುರಿದು ಜೈಲಿಗಟ್ಟಲಾಗಿತ್ತು. ಕೆಲವರು ಜಾಮೀನಿನ ಮೇಲೆ ಹೊರಗಿದ್ದರೆ ಇನ್ನು ಕೆಲವರು ಜೈಲಿನೊಳಗೆ ಇದ್ದಾರೆ. ಕುಖ್ಯಾತ ರೌಡಿ ಪಟ್ಟ ಕಟ್ಟಿಕೊಳಲು ಹೊರಟವರು ಬೀದಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡರೂ ಸಹ ಬುದ್ದಿಕಲಿಯದ ಪುಂಡರು ತನ್ನ ಕುಕೃತ್ಯಗಳಿಂದ ಪೊಲೀಸರ ಗುಂಡೇಟಿಗೆ ತನ್ನ ಕಾಲು ಕಳೆದುಕೊಂಡಿದ್ದರೂ ಸಹ ರೌಡಿಗಳ ಪಾಲಿಗೆ ನಾಯಕನಾಗಬೇಕೆಂಬ ಹಪಾಹಪಿಯಲ್ಲಿ ತೆರೆಮರೆಯೊಳಗೆ ತಮ್ಮ ಕೃತ್ಯಗಳನ್ನು ಪುಂಡಾಟಿಕೆಗಳನ್ನು ನಡೆಸುತ್ತಲೇ ಇದ್ದರು. ಭೂಮಾಫಿಯಾ ಮತ್ತು ವಸೂಲಿಯಂತಹ ಕುಕೃತ್ಯಗಳನ್ನು ಹವ್ಯಾಹತವಾಗಿ ಸಾಗುತ್ತಲೇ ಇತ್ತು. ಇದೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದ ತುಮಕೂರು ನಗರದ ಖಾಕಿ ಪಡೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದು ಮುಂದಾಗಬಹುದಾದ ಘೋರ ಅಪರಾಧಗಳ ಮಾಹಿತಿಯನ್ನು ವಿವರವಾಗಿ…

Read More