ತುಮಕೂರು: ತುಮಕೂರು ವಿಶ್ವ ವಿದ್ಯಾಲಯದ ಘಟಿಕೋತ್ಸವ ದಲ್ಲಿ ಭಾಗವಹಿಸಿದ ನಂತರ ರಾಜ್ಯ ಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶಿವಕುಮಾರ್ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಗದ್ದುಗೆಗೆ ನಮಿಸಿ ಪೂಜೆ ಸಲ್ಲಿಸಿ ದರ್ಶನ ಪಡೆದರು. ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು, ಸಮಾಲೋಚನೆ ನಡೆಸಿದರು. ರಾಜ್ಯಪಾಲರು ಸಿದ್ಧಗಂಗಾ ಮಠಕ್ಕೆ ಆಗಮಿಸುತ್ತಿದ್ದಂತೆ ಸಾಲಾಗಿ ಕುಳಿತಿದ್ದ ಮಕ್ಕಳು ಚಪ್ಪಾಳೆ ತಟ್ಟುವ ಮೂಲಕ ರಾಜ್ಯಪಾಲರಿಗೆ ಸ್ವಾಗತ ಕೋರಿದರು. ನನ್ನ ಪ್ರೀತಿಯ ಮಕ್ಕಳೇ ತಮ್ಮೆಲರಿಗೂ ಶುಭಾಶಯಗಳು ಎಂದು ರಾಜ್ಯಪಾಲರು ಕನ್ನಡದಲ್ಲಿ ಮಾತ ನಾಡುತ್ತಿದ್ದಂತೆ ವಿದ್ಯಾರ್ಥಿ ಗಳ ಹರ್ಷೋದ್ಘಾರ ಮುಗಿಲು ಮುಟ್ಟಿತು. ನಂತರ ಹಿಂದಿಯಲ್ಲಿ ಮಾತುಗಳನ್ನು ಮುಂದುವರೆಸಿದ ರಾಜ್ಯಪಾಲರು, ಮಕ್ಕಳೇ ನೀವುಗಳೇ ನಮ್ಮ ದೇಶದ ಭವಿಷ್ಯ. ಭಾರತೀಯ ಸಂಸ್ಕೃತಿ, ಧರ್ಮ, ಶಿಸ್ತು ಅರಿತು ದೇಶದ ನಿರ್ಮಾಣದಲ್ಲಿ ಪಾಲುದಾರರಾಗಿ. ವಸುದೈವ ಕುಟುಂಬಕಂ ಎಂಬ ಭಾವನೆಯನ್ನು ಅರಿತು ನಾವೆಲ್ಲರೂ ಒಂದೇ ಎಂದು ಮುನ್ನುಗ್ಗಿ, ವಿಶ್ವದಾದ್ಯಂತ…
Author: News Desk Benkiyabale
ತುಮಕೂರು: ರಾಜಕೀಯವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಕುಂಚಟಿಗ ಒಕ್ಕಲಿಗ ಸಮುದಾಯವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮತ್ತು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಓಬಿಸಿ ಜಾತಿಗಳ ಪಟ್ಟಿಗೆ ಸೇರಿಸುವಂತೆ ಶೀಘ್ರದಲ್ಲಿಯೇ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕುಂಚಟಿಗ ಒಕ್ಕಲಿಗ ಸಮುದಾಯ ಕೇಂದ್ರ ಮತ್ತು ರಾಜ್ಯದ ಒಬಿಸಿ ಜಾತಿಗಳ ಪಟ್ಟಿಯಲ್ಲಿತ್ತು. ಆದರೆ 2002ರಲ್ಲಿ ಅಂದಿನ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಕೆಲ ತಪ್ಪು ತಿಳುವಳಿಕೆಯಿಂದ, ಕೇಂದ್ರ ಓಬಿಸಿ ಪಟ್ಟಿಯಿಂದ ಕೈಬಿಟ್ಟ ಪರಿಣಾಮ ಕೇಂದ್ರ ಸರಕಾರದ ಯಾವುದೇ ಹುದ್ದೆಗಳಲ್ಲಿ ನಮ್ಮ ಮಕ್ಕಳಿಗೆ ಮೀಸಲಾತಿ ಇಲ್ಲದಂತಾಗಿದೆ.ಇದರಿಂದ ಸಮುದಾಯಕ್ಕೆ ಶೈಕ್ಷಣಿಕವಾಗಿ ಬಹಳ ನಷ್ಟ ಉಂಟಾಗುತ್ತಿದೆ. ನಮ್ಮ ಮಕ್ಕಳು ಯುಪಿಎಸ್,ರೈಲ್ವೆ, ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಸಾಮಾನ್ಯವರ್ಗದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಿ, ಉತ್ತಮ ಅಂಕ ಪಡೆದರೂ ಐಎಎಸ್ ನಂತಹ ಹುದ್ದೆಗಳು ದೊರೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜೂನ್ 25ರ ರಾಜ್ಯಸಮಾವೇಶದ ತೀರ್ಮಾನದಂತೆ ಹಾಗೂ ಕೇಂದ್ರದ ಸಚಿವರುಗಳ…
ತುಮಕೂರು: ಕಣ್ವ ಫ್ಯಾಷನ್ ಲಿಮಿಟೆಡ್ ಸಂಸ್ಥೆಯೂ ಕಾರ್ಮಿಕರಿಗೆ ನೀಡಬೇಕಾದ ಸಂಬಳ ಮತ್ತು ಕಾರ್ಮಿಕರ ಭವಿಷ್ಯ ನಿಧಿಯನ್ನು ನೀಡದೇ ಹೆಣಗಾಡಿಸುತ್ತಿದ್ದು, ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕಾರ್ಮಿಕರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಮಿಕರು, ಕೊರಟಗೆರೆ ತಾಲ್ಲೂಕು ಕೊಂಗೇನಹಳ್ಳಿಯಲ್ಲಿ ಪ್ರಾರಂಭಿಸಿದ್ದ ಸಂಸ್ಥೆಯೂ 300ಕ್ಕೂ ಹೆಚ್ಚು ಕಾರ್ಮಿಕರಿಗೆ ಸಂಬಳ, ಭವಿಷ್ಯ ನಿಧಿ, ಉಪಧನ, ಕ್ಲೋಜರ್ ಪರಿಹಾರಿ ಯಾವುದನ್ನು ನೀಡದೆ ಏಕಾಏಕಿ ಕಾರ್ಖಾನೆಯನ್ನು ಮುಚ್ಚಿದ್ದು, ಕಾರ್ಮಿಕರು ಬೀದಿಗೆ ಬೀಳುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಅವರು, ಕಾರ್ಮಿಕ ಕಾಯ್ದೆಯನ್ನು ಉಲ್ಲಂಘಿಸಿ ಕಾರ್ಖಾನೆ ಮಾಲೀಕರು ಏಕಾಏಕಿ ಸಂಸ್ಥೆಯನ್ನು ಮುಚ್ಚಿದ್ದು, ಗ್ರಾಮೀಣ ಪ್ರದೇಶದಿಂದ ಬದುಕು ಕಟ್ಟಿಕೊಂಡಿದ್ದ ಕಾರ್ಮಿಕರು ಕೆಲಸವಿಲ್ಲದೆ ಪರದಾಡುವಂತಾಗಿದ್ದು, ಇವರನ್ನು ನಂಬಿಕೊಂಡಿದ್ದ ಕುಟುಂಬಗಳು ಇಂದು ಉದ್ಯೋಗವಿಲ್ಲದಂತ ಸ್ಥಿತಿಯಲ್ಲಿವೆ ಎಂದರು. ತಿಂಗಳ ಸಂಬಳವನ್ನೇ ನೆಚ್ಚಿ ಬದುಕುತಿದ್ದ ಕಾರ್ಮಿಕರ ಕುಟುಂಬಗಳಿಗೆ ಕಣ್ವ ಫ್ಯಾಷನ್ ಲಿಮಿಟೆಡ್ ಸಂಸ್ಥೆಯೂ ಸಂಬಳ,…
ತುಮಕೂರು: ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್ ಅಪ್, ಸ್ಟಾಂಡ್ ಅಪ್, ವೆಂಚರ್ ಕ್ಯಾಪಿಟಲ್ ಫಂಡ್ ಮುಂತಾದ ಯೋಜನೆಗಳ ಸದುಪಯೋಗವನ್ನು ಪಡೆಯುವ ಮೂಲಕ ಶ್ರೇಷ್ಠ ಭಾರತ, ಮತ್ತು ಆತ್ಮನಿರ್ಭರ ಭಾರತದ ನಿರ್ಮಾಣ ಮಾಡಲು ಸಂಕಲ್ಪ ತೊಡುವಂತೆ ಹಾಗೂ ಈ ಮೂಲಕ ಉದ್ಯೋಗದ ಹೊಸ ಅವಕಾಶಗಳ ಭರವಸೆಯನ್ನು ಮೂಡಿಸುವಂತೆ ಗೌರಾವಾನ್ವಿತ ರಾಜ್ಯಾಪಾಲರು ಹಾಗೂ ತುಮಕೂರು ವಿ.ವಿ ಕುಲಾಧಿಪತಿಗಳಾದಂತಹ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ತುಮಕೂರು ವಿಶ್ವವಿದ್ಯಾನಿಲಯದ 15ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತುಮಕೂರು ವಿಶ್ವವಿದ್ಯಾನಿಲಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಂತಹ ವಿದ್ಯಾರ್ಥಿಗಳಾದ ನೀವು ಇಂದಿನಿಂದ ಹೊಸ ಸವಾಲಿನ ಪರಿಸರಕ್ಕೆ ಪ್ರವೇಶಿಸಲಿದ್ದೀರಿ. ಈ ವಿಶ್ವವಿದ್ಯಾನಿಲಯದಿಂದ ಗುಣಾತ್ಮಕ ಹಾಗೂ ಗಟ್ಟಿ ಶಿಕ್ಷಣದ ಜ್ಞಾನವನ್ನು ಪಡೆದಂತಹ ನೀವುಗಳು ನಿಮ್ಮ ವೃತ್ತಿ ಜೀವನದಲ್ಲಿ ಯಶಸ್ವಿಯಾಗುತ್ತೀರ ಎಂಬ ಭರವಸೆ ನನಗಿದೆ ಎಂದು ಶುಭ ಹಾರೈಸಿದರು. ದೇಶ ಇಂದು 75ನೇ ವರ್ಷದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ಈ…
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ 15ನೇ ವಾರ್ಷಿಕ ಘಟಿಕೋತ್ಸವವು ಜುಲೈ 5 ರಂದು ಬೆಳಿಗ್ಗೆ 11.30 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದ ಶ್ರೀ ಡಾ: ಶಿವಕುಮಾರ ಮಹಾಸ್ವಾಮೀಜಿ ಸಭಾಂಗಣದಲ್ಲಿ ನಡೆಯಲಿದೆ. ಗೌರವಾನ್ವಿತ ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳು ಆದ ಘನತೆವೆತ್ತ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸುವರು. ಮಾನ್ಯ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳ ಸಚಿವರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹಕುಲಾಧಿಪತಿಗಳಾದ ಡಾ: ಸಿ.ಎನ್. ಅಶ್ವತ್ಥ್ ನಾರಾಯಣ ಉಪಸ್ಥಿತರಿರುವರು. ನವದೆಹಲಿ ಯುಜಿಸಿ ಸದಸ್ಯರು ಹಾಗೂ ವಿಶ್ರಾಂತ ಸಹ ಕುಲಪತಿಗಳು, ಇಂದಿರಾಗಾಂಧಿ, ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯ, ನವದೆಹಲಿ ಮತ್ತು ವಿಶ್ರಾಂತ ಕುಲಪತಿಗಳು, ಬಿ.ಪಿ.ಎಸ್. ಮಹಿಳಾ ವಿಶ್ವವಿದ್ಯಾನಿಲಯ, ಹರಿಯಾಣದ ಪ್ರೊ.ಸುಷ್ಮಾ ಯಾದವ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಘಟಿಕೋತ್ಸವ ಭಾಷಣ ಮಾಡುವರು. ತುಮಕೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿಗಳಾದ ಪ್ರೊ. ಕೇಶವ ಅವರು ವಿಶ್ವವಿದ್ಯಾನಿಲಯದ ವಾರ್ಷಿಕ ವರದಿ ಮಂಡಿಸುವರು.
ತುಮಕೂರು: ಹಾವೇರಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಹಾಗೂ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹಾಗೂ ನಗರದ ಎಲ್ಲಾ ಪತ್ರಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾನಿರತರನ್ನುದ್ಧೇಶಿಸಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್, ಹಾವೇರಿ ಜಿಲ್ಲೆಯ ಖಾಸಗಿ ವಾಹಿನಿಯ ವರದಿಗಾರರಾದ ವೀರಯ್ಯ ಹಿರೇಮಠ, ಶಿವು ಮಡಿವಾಳರ್ ಹಾಗೂ ಕ್ಯಾಮೆರಾಮೆನ್ ಪ್ರಕಾಶ್ ಮುಳ್ಳಳ್ಳಿ ಅವರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ ಎಂದರು. ಈ ಘಟನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕವು ತೀವ್ರವಾಗಿ ಖಂಡಿಸುತ್ತದೆ. ರೈತಪರ ಹೋರಾಟರ್ಗಾತಿಯ ಹೆಸರಿನ ಮಂಜುಳಾ ಪೂಜಾರ್ ಅಸಲಿ ಮುಖವಾಡವನ್ನು ಸುದ್ದಿ ವಾಹಿನಿ ಚುಟುಕು ಕಾರ್ಯಚರಣೆ ಮೂಲಕ ಬಯಲು ಮಾಡಿದ್ದರ ಹಿನ್ನೆಲೆಯಲ್ಲಿ ಜು.2ರಂದು ಶನಿವಾರ ಮಧ್ಯಾಹ್ನ ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಮಂಜುಳಾ ಪೂಜಾರ್ ಹಾಗೂ ಅವರ ಸಹಚರರು ಸುದ್ದಿಗೋಷ್ಠಿ ನಡೆಸಿ ಹೊರ…
ತುಮಕೂರು: ಪ್ರಧಾನಿ ನರೇಂದ್ರ ಮೋದಿಯವರ 8 ವರ್ಷದ ಸಾಧನೆಯ ಅಂಗವಾಗಿ ನಡೆದ ಸಮಾರಂಭದಲ್ಲಿ ಫಲಾನುಭವಿಗಳಿಗೆ ಇ-ಶ್ರಮ್ ಕಾರ್ಡ್ ವಿತರಣೆ ಮಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಮೋದಿ ಸರ್ಕಾರದ ಸಾಧನೆ, ಯೋಜನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಮನವಿ ಮಾಡಿದರು. ನಗರದ 32ನೇ ವಾರ್ಡಿನ ಗೋಕುಲ ಬಡಾವಣೆಯಲ್ಲಿ ಭಾನುವಾರ ಸಂಜೆ ಜಿಲ್ಲಾ ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಯ ಸಂಭ್ರಮ ಆಚರಿಸಲಾಯಿತು. ಮೋದಿ ಸರ್ಕಾರದ ಸಾಧನೆಯ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿದ ಶಾಸಕ ಬಿ.ಜಿ.ಜ್ಯೋತಿಗಣೇಶ್, ಇವತ್ತು ತುಮಕೂರು ನಗರ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿಯಾಗುತ್ತಿರುವುದು ಮೋದಿಯವರು ಕೊಟ್ಟ ಕೊಡುಗೆ, ನಗರವನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆ ಮಾಡಿ ನಾಗರೀಕರಿಗೆ ಅಗತ್ಯ ಸೌಲಭ್ಯ ನೀಡಲು ಸಹಕರಿಸಿದ ಪ್ರಧಾನಿಯವರ ಕೊಡುಗೆ ಶ್ಲಾಘನೀಯ ಎಂದರು. ಪ್ರಧಾನಿಯವರು ಎಲ್ಲಾ ವರ್ಗದವರಿಗೂ ಹಲವಾರು ಜನಪರ ಯೋಜನೆಗಳನ್ನು ನೀಡಿದ್ದಾರೆ. ಜನಸಾಮಾನ್ಯರಿಗೆ ಯೋಜನೆಯ ಪರಿಚಯ, ಫಲ ದೊರೆಯಬೇಕು. ಬಿಜೆಪಿ ಕಾರ್ಯಕರ್ತರು ಯೋಜನೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸಲು ಶ್ರಮಿಸಬೇಕು…
ತುಮಕೂರು: ಜಿಲ್ಲೆಯಲ್ಲಿ ವಿದ್ಯಾರ್ಥಿ ಪಾಸ್ನ ವಿತರಣೆಯಲ್ಲಿ ಕೆಎಸ್ಆರ್ಟಿಸಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದು, ಕೂಡಲೇ ಹೆಚ್ಚುವರಿ ಕೌಂಟರ್ಗಳನ್ನು ತೆರೆದು ಶಾಲಾ-ಕಾಲೇಜು ವಿದ್ಯಾರ್ಥಿಗಳು ಅನುಕೂಲ ಕಲ್ಪಿಸಬೇಕೆಂದು ಎನ್ಎಸ್ಯುಐ ವಿದ್ಯಾರ್ಥಿ ಸಂಘಟನೆಯೊಂದಿಗೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ಒತ್ತಾಯಿಸಿದರು. ನಗರದ ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡು ಕೆಎಸ್ಆರ್ಟಿಸಿ ಜಿಲ್ಲಾಧಿಕಾರಿ ಬಸವರಾಜು ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಬಸ್ ಪಾಸ್ಗಾಗಿಯೇ ದಿನಗಟ್ಟಲೆ ಕ್ಯೂನಲ್ಲಿ ನಿಲ್ಲುವಂತಾಗಿದೆ. ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳಿಗೆ ಈಗತಾನೆ ಪ್ರವೇಶ ಪಡೆಯುತ್ತಿದ್ದಾರೆ. ಹಲವಾರು ವಿದ್ಯಾರ್ಥಿಗಳು ಕಾಲೇಜುಗಳಿಗೆ ಗೈರು ಹಾಜರಾಗಿ ಬಸ್ ಪಾಸ್ ಪಡೆಯಲು ದಿನಗಟ್ಟಲೇ ಕ್ಯೂ ನಿಲ್ಲುತ್ತಿದ್ದಾರೆ ಎಂದರು. ಕಾಲೇಜಿಗೆ ಸೇರಿದ ಪ್ರವೇಶ ಪತ್ರವಿದ್ದರೆ ಸಾಕೇ ಅಥವಾ ಮತ್ಯಾವುದಾದರೂ ದಾಖಲಾತಿ ಬೇಕಾ ಎಂಬುದನ್ನು ಕೆಎಸ್ಆರ್ಟಿಸಿ ಅಧಿಕಾರಿಗಳು ಸ್ಪಷ್ಟವಾಗಿ ವಿದ್ಯಾರ್ಥಿಗಳಿಗೆ ತಿಳಿಸಬೇಕು, ಇಲ್ಲಿಯವರೆಗೆ ಒಟ್ಟಾರೆ ಎಷ್ಟು ಪಾಸ್ಗಳು ವಿತರಣೆಯಾಗಬೇಕಿತ್ತು, ಇಲ್ಲಿಯವರೆಗೆ ಎಷ್ಟು ವಿತರಣೆಯಾಗಿವೆ ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದರು. ಕಾಲೇಜಿನಿಂದ ಡಿಪೋಗೆ ಮೂರ್ನಾಲ್ಕು ಸಲ ವಿದ್ಯಾರ್ಥಿಗಳು ಬಸ್ಪಾಸ್ಗಾಗಿ ಓಡಾಡುವಂತಹ ಪರಿಸ್ಥಿತಿ…
ತುಮಕೂರು: ನ್ಯಾ.ಎ.ಜೆ.ಸದಾಶಿವ ವರದಿ ಜಾರಿಗೆ ಒತ್ತಾಯಿಸಿ, ಮಾದಿಗ ದಂಡೋರ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಅವರ ಸೂಚನೆಯಂತೆ ಇಂದು ಮಾದಿಗ ದಂಡೋರ ರಾಜ್ಯ ವಕ್ತಾರ ಎಂ.ವಿ.ರಾಘವೇಂದ್ರಸ್ವಾಮಿ ಅವರ ನೇತೃತ್ವದಲ್ಲಿ ಕ್ಯಾತ್ಸಂದ್ರ ಸರ್ಕಲ್ನಲ್ಲಿ ರಸ್ತೆ ತಡೆ ನಡೆಸಿದರು. ಶನಿವಾರ ಮಧ್ಯಾಹ್ನ 12:30ರ ಸುಮಾರಿಗೆ ಹತ್ತಾರು ಸಂಖ್ಯೆಯಲ್ಲಿದ್ದ ಮಾದಿಗ ದಂಡೋರ ಕಾರ್ಯಕರ್ತರು, ರಾಷ್ಟ್ರೀಯ ಹೆದ್ದಾರಿ ಹೊಸ 48 ರ ಕ್ಯಾತ್ಸಂದ್ರ ಸರ್ಕಲ್ಬಳಿ ರಸ್ತೆ ತಡೆ ನಡೆಸಿ, ಕೂಡಲೇ ಸರಕಾರ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಮಾದಿಗ ದಂಡೋರ ರಾಜ್ಯ ವಕ್ತಾರ ಎಂ.ವಿ.ರಾಘವೇಂದ್ರ, ಮಾದಿಗ ಸಮುದಾಯದ ನಿರಂತರ ಹೋರಾಟದ ಫಲವಾಗಿ 2004ರಲ್ಲಿ ಎಸ್.ಎಂ.ಕೃಷ್ಣ ಅವರು ಪರಿಶಿಷ್ಟ ಜಾತಿಯಲ್ಲಿರುವ 101 ಸಮುದಾಯಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಮಾಡುವ ನಿಟ್ಟಿನಲ್ಲಿ ವೈಜ್ಞಾನಿಕ ವರದಿ ತಯಾರಿಸಲು ನ್ಯಾ.ಎ.ಜೆ.ಸದಾಶಿವ ಅವರ ನೇತೃತ್ವದಲ್ಲಿ ಆಯೋಗ ರಚಿಸಿದ್ದರು. ಸದರಿ ಆಯೋಗ 2011ರಲ್ಲಿ ವರದಿ ಸಲ್ಲಿಸಿದೆ.ಸರಕಾರಕ್ಕೆ ವರದಿ ಸಲ್ಲಿಕೆಯಾಗಿ 11 ವರ್ಷ ಕಳೆದರು ಸರಕಾರ ಸದರಿ ವರದಿಯನ್ನು…
ತುಮಕೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾ.ನಾಗಮೋಹನ್ ದಾಸ್ ವರದಿ ಜಾರಿಗೆ ಒತ್ತಾಯಿಸಿ 140 ದಿನಗಳಿಂದ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವಧಿ ಧರಣಿ ಕೈಗೊಂಡಿರುವ ರಾಜನಹಳ್ಳಿಯ ಶ್ರೀವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳ ಕರೆಯ ಮೇರೆಗೆ ಜುಲೈ 11ರ ಸೋಮವಾರ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು ಕÀರ್ನಾಟಕ ಸ್ವಾಭಿಮಾನಿ ಎಸ್ಸಿ, ಎಸ್ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಹೋರಾಟಗಾರರಾದ ಮೋಹನರಾಜ್ ತಿಳಿಸಿದ್ದಾರೆ. ನಗರದ ವಾಲ್ಮೀಕಿ ಸನಿವಾಸ ಪ್ರೌಢಶಾಲೆಯ ಆವರಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾವಿರಾರು ವರ್ಷಗಳಿಂದ ಶೋಷಣೆ ಅನುಭವಿಸಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಒಗ್ಗೂಡಿ ಈ ಹೋರಾಟವನ್ನು ರೂಪಿಸುತ್ತಿದ್ದು,ಇದು ನನ್ನ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಸಂವಿಧಾನದ ಅಡಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು.ಆದರೆ ಭೂಮಿ, ಸಂಪತ್ತು ಹಂಚಿಕೆಯಲ್ಲಿ ಸಾಕಷ್ಟು ತಾರತಮ್ಯವಿದ್ದು, ಇದನ್ನು ಹೋಗಲಾಡಿಸುವ ಜಾರಿಗೆ…











