Author: News Desk Benkiyabale

ತುಮಕೂರು: ಬಿಜೆಪಿ ಸಂಘಟನೆಯನ್ನು ತಳಮಟ್ಟದಿಂದ ಕಾರ್ಯಕರ್ತರು, ಪ್ರಮುಖರು ಸಂಘಟಿಸಿದರೆ ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಜಿಲ್ಲೆಯ ಎಲ್ಲಾ ಹನ್ನೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಶಾಸಕರನ್ನು ಗೆಲ್ಲಿಸಿಕೊಂಡು ಬರುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಜಿಲ್ಲಾಧ್ಯಕ್ಷರಾದ ಹೆಚ್.ಎಸ್.ರವಿಶಂಕರ್ (ರವಿ ಹೆಬ್ಬಾಕ)ರವರು ತಿಳಿಸಿದರು. ಇವರು ತುಮಕೂರು ತಾಲ್ಲೂಕಿನ ಹೆಬ್ಬೂರಿನ ಹೊರವಲಯದಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನಡೆದ ಡಾ|| ಶ್ಯಾಮ್ ಪ್ರಸಾದ್ ಮುಖರ್ಜಿರವರ ಜೀವನ ಚರಿತ್ರೆ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಮಾತನಾಡುತ್ತ, ಜನಸಂಘದ ಸಂಸ್ಥಾಪಕ ಪ್ರಮುಖರಲ್ಲಿ ಒರ್ವರಾಗಿದ್ದ ಡಾ|| ಶ್ಯಾಮ್‍ಪ್ರಸಾದ್ ಮುಖರ್ಜಿ ದೇಶದ ಏಕತೆ, ಅಖಂಡತೆ, ಸಮಗ್ರತೆಗೆ ಅಂದೇ ಬುನಾದಿಯನ್ನು ಹಾಕಿ, ರಾಷ್ಟ್ರಪ್ರೇಮ-ರಾಷ್ಟ್ರಭಕ್ತಿಗೆ ಅಡಿಪಾಯವನ್ನು ಹಾಕಿ ಸಮಗ್ರ ಭಾರತದ ಅಭಿವೃದ್ಧಿ ಯೋಜನೆಯ ಪರಿಕಲ್ಪನೆಯನ್ನು ಪಕ್ಷದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದ್ದರು ಎಂದರು. ಬಿಜೆಪಿ ರಾಜ್ಯ ಸಹ ವಕ್ತಾರ ವಿಕಾಸ್ ಪುತ್ತೂರುರವರು ಮುಖ್ಯ ಭಾಷಣಕಾರರಾಗಿ ಮಾತನಾಡುತ್ತಾ, ಸ್ವಾತಂತ್ರ್ಯ ಪೂರ್ವ…

Read More

ತುಮಕೂರು: ಹನ್ನೆರಡನೆಯ ಶತಮಾನದಲ್ಲಿ ರಚಿಸಲ್ಪಟ್ಟ ವಚನ ಸಾಹಿತ್ಯವು ಓಲೆಗರಿ, ತಾಲೆ ಎಲೆಗಳಲ್ಲಿತ್ತು. ಅಂತಹ ವಚನಗಳ ಕಟ್ಟನ್ನು ಸಂಗ್ರಹಿಸಿ, ಅಧ್ಯಯನ ಮಾಡಿ ಮುದ್ರಿಸಿ ಜಗತ್ತಿಗೆ ಪರಿಚಯಿಸಿದವರು ಡಾ.ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ಎಂದು ಇತಿಹಾಸ ಸಂಶೋಧಕ ಡಾ.ಡಿ.ಎನ್ ಯೋಗಿಶ್ವರಪ್ಪ ತಿಳಿಸಿದರು. ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಖಿಲ ಭಾರತ ವೀರಶೈವ ಮಹಾಸಭಾ, ನಗರ ವೀರಶೈವ ಸಮಾಜ ಸೇವಾ ಸಮಿತಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಬಸವ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ಜನ್ಮದಿನದ ಹಿನ್ನೆಲೆಯ “ವಚನ ಸಾಹಿತ್ಯ ದಿನಾಚರಣೆಯಲ್ಲಿ” ಪಾಲ್ಗೊಂಡು ಅವರು ಮಾತನಾಡಿದರು. ವಕೀಲಿ ವೃತ್ತಿಯಲ್ಲಿದ್ದ ಹಳಕಟ್ಟಿಯವರು ಬಿಜಾಪುರದ ಹಳ್ಳಿಯೊಂದರಲ್ಲಿ ವಚನಗಳ ಕಟ್ಟೊಂದು ಸಿಕ್ಕಿತ್ತು. ಅದರಲ್ಲಿರುವ ಸಾಹಿತ್ಯವನ್ನು ನೋಡಿ ಆಶ್ಚರ್ಯಚಕಿತರಾಗಿ ಅವುಗಳನ್ನು ಅಧ್ಯಯನ ಮಾಡಿ ಅದನ್ನು ಜಗತ್ತಿಗೆ ಪರಿಚಯಿಸಬೇಕೆಂದು ಪಣತೊಟ್ಟು ಹಳ್ಳಿ-…

Read More

ತುಮಕೂರು: ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ ವ್ಯವಸ್ಥೆಯಡಿಯಲ್ಲಿ ಲೋಪಗಳದಾಗ ಅವುಗಳನ್ನು ವಿಮರ್ಶಿಸಿ ಸರಿಯಾದ ದಾರಿಗೆ ತರುವಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮಗಳ ಪಾತ್ರ ಬಹುಮುಖ್ಯವಾದದ್ದು ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ತಿಳಿಸಿದರು. ತುಮಕೂರು ವಾರ್ತಾ ಭವನದಲ್ಲಿಂದು ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕ ವತಿಯಿಂದ ಏರ್ಪಡಿಸಲಾಗಿದ್ದ, 2022ನೇ ಸಾಲಿನ ‘ಪತ್ರಿಕಾ ದಿನಾಚರಣೆ’ಯನ್ನು ಗಿಡಕ್ಕೆ ನೀರು ಎರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ಸಮಾಜಮುಖಿಯಾಗಿ ಕೆಲಸ ನಿರ್ವಹಿಸಬೇಕು. ಹಸಿರು ತುಮಕೂರಿಗಾಗಿ ಗಿಡಗಳನ್ನು ನೆಡುವುದು, ಉದ್ಯಾನವನಗಳನ್ನು ದತ್ತು ತೆಗೆದುಕೊಳ್ಳುವಂತಹ ಕೆಲಸಗಳಿಗೆ ಸಂಪೂರ್ಣ ಸಹಕಾರ ನೀಡುವಂತೆ ಕೋರಿದರು. ತುಮಕೂರು ಮಹಾನಗರಪಾಲಿಕೆ ಪೂಜ್ಯ ಮಹಾಪೌರರಾದ ಬಿ.ಜಿ.ಕೃಷ್ಣಪ್ಪ ಮಾತನಾಡಿ, ಮಾಧ್ಯಮಗಳು ಇಂದು ಅತೀ ವೇಗವಾಗಿ ಮುಂದುವರೆಯುತ್ತಿವೆ. ಪತ್ರಿಕೆಗಳು ವಾಚಕರಿಗೆಂದೇ ವಾಚಕರ ವಾಣಿಯನ್ನು ಮೀಸಲಿಟ್ಟ ಹಾಗೆ ವಿದ್ಯುನ್ಮಾನ ಮಾಧ್ಯಮಗಳು ಸಾಧನೆಯ ಹಾದಿಯಲ್ಲಿರುವವರ ಯಶೋಗಾಥೆಗೆಂದೇ ಸ್ವಲ್ಪ ಜಾಗವನ್ನು ಮೀಸಲಿಡುವುದರಿಂದ ಸಾರ್ವಜನಿಕರಿಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಮಾಧ್ಯಮ ಮಿತ್ರರಿಗೆ ಸಲಹೆ ನೀಡಿದರು. ತುಮಕೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮ ವಿಭಾಗದ…

Read More

ತುಮಕೂರು: 75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ 2022-23ನೇ ಸಾಲಿನ ಮುಂಗಾರು ಹಂಗಾಮಿನ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯ ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆಯ ಸಹಭಾಗಿತ್ವದಲ್ಲಿ ಜುಲೈ 1 ರಿಂದ 7ರವರೆಗೆ 3ನೇ ಬೆಳೆವಿಮೆ ಸಪ್ತಾಹದ ಅಂಗವಾಗಿ ಪ್ರಚಾರ ಕೈಗೊಳ್ಳುವ ವಾಹನಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು. ಪ್ರಚಾರಾಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿಗಳು, ಇಂದಿನಿಂದ ಜುಲೈ7 ರವರೆಗೆ 3ನೇ ಬೆಳೆ ವಿಮೆ ವಾರವಾಗಿ ಅಭಿಯಾನವನ್ನು ಹಮ್ಮಿಕೊಂಡಿದ್ದು ಜಿಲ್ಲಾದ್ಯಂತ 22 ವಾಹನಗಳು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ.ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 16 ಬೆಳೆಗಳನ್ನು ಗುರುತಿಸಲಾಗಿದೆ ಎಂದರು. ಈ ಯೋಜನೆಯ ಲಾಭವನ್ನು ಎಲ್ಲ ರೈತರು ಪಡೆದುಕೊಳ್ಳಬೇಕು ಎಂಬ ಹಿನ್ನೆಲೆಯಲ್ಲಿ ವಿಮೆಗೆ ನೋಂದಣಿ ಮಾಡಿಸಲು ಕೃಷಿ ಇಲಾಖೆಯಿಂದ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ ಎಂದರಲ್ಲದೇ…

Read More

ತುಮಕೂರು: ಮುನ್ಸಿಪಾಲ್ ಕಾರ್ಮಿಕರ ಸೇವೆಯನ್ನು ಏಕಕಾಲದಲ್ಲಿ ಖಾಯಂಗೊಳಿಸುವಂತೆ ಆಗ್ರಹಿಸಿ ರಾಜ್ಯ ಮುನಿಸಿಫಲ್ ಕಾರ್ಮಿಕರ ಸಂಘ, ಪೌರ ಕಾರ್ಮಿಕರ ಸಂಘ, ಪಾಲಿಕೆ ಆಟೋ ಚಾಲಕರು ಮತ್ತು ಸಹಾಯಕರ ಸಂಘ, ಜಿಲ್ಲಾ ನೀರು ಸರಬರಾಜು ನೌಕರರ ಸಂಘ ಹಾಗೂ ಪೌರ ಕಾರ್ಮಿಕರ ಜಂಟಿ ಹೋರಾಟ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಲಾಗಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪೆಂಡಾಲ್ ಹಾಕಿಕೊಂಡು ಮುಷ್ಕರ ನಡೆಸುತ್ತಿರುವ ಪೌರ ಕಾರ್ಮಿಕರು ಏಕಕಾಲದಲ್ಲಿ ತಮ್ಮ ಸೇವೆಯನ್ನು ಯಾವುದೇ ತಾರತಮ್ಯ ಮಾಡದೆ ಖಾಯಂಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸುವ ಘೋಷಣೆಗಳನ್ನು ಕೂಗಿದರು. ರಾಜ್ಯದ ಎಲ್ಲಾ ನೇರ ಪಾವತಿ, ಗುತ್ತಿಗೆ ಪೌರಕಾರ್ಮಿಕರು, ದಿನಾಗೂಲಿ ಲೋಡರ್ಸ್, ಕಸದ ವಾಹನ ಚಾಲಕರು, ಒಳಚರಂಡಿ ಸ್ವಚ್ಛತಾ, ಪಾರ್ಕ್, ಸ್ಮಶಾನ, ಘನ ತ್ಯಾಜ್ಯ ಘಟಕ, ಯು.ಜಿ.ಡಿ ನೀರು ಸಂಸ್ಕರಣಾ ಘಟಕದ ಕಾರ್ಮಿಕರು, ನೀರು ಸರಬರಾಜು ನೌಕರರನ್ನು ಒಂದೇ ಬಾರಿಗೆ ಖಾಯಂಗೊಳಿಸುವಂತೆ ಮುಷ್ಕರ ನಿರತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ರಾಜ್ಯ ಮುನಿಸಿಫಲ್ ಕಾರ್ಮಿಕರ ಸಂಘದ ಖಜಾಂಚಿ…

Read More

ತುಮಕೂರು: ರಾಜಸ್ಥಾನದ ಉದಯ್‍ಪುರದ ಟೈಲರ್ ವೃತ್ತಿಯ ಕನ್ಹಯ್ಯಲಾಲ್‍ರವರನ್ನು ಮತಾಂಧ, ಜಿಹಾದಿ ಮಾನಸಿಕತೆಯನ್ನು ಹೊಂದಿದ್ದವರು ಭೀಕರ ಹತ್ಯೆ ಮಾಡಿದ್ದನ್ನ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಉಗ್ರವಾಗಿ ಖಂಡಿಸಿದ್ದಾರೆ. ಇವರು ಇಂದು ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜಸ್ಥಾನದ ಕಾಂಗ್ರೆಸ್ ಆಡಳಿತ ಕಾರ್ಯ ವೈಖರಿಯ ಬಗ್ಗೆ ತೀವ್ರ ಅಸಮದಾನ ವ್ಯಕ್ತಪಡಿಸಿ, ನೂಪುರ್ ಶರ್ಮರವರ ಹೇಳಿಕೆಯನ್ನು ಬೆಂಬಲಿಸಿದ್ದ ಕನ್ಹಯ್ಯಲಾಲ್‍ಗೆ ಜೀವ ಬೆದರಿಕೆ ಇದ್ದುದರಿಂದ ಸ್ಥಳೀಯ ಪೋಲೀಸ್ ಠಾಣೆಗೆ ಹೋಗಿ ದೂರನ್ನು ನೀಡದ್ದರೂ, ಸೂಕ್ತ ಭದ್ರತೆ ನೀಡದೆ ಇದ್ದುದರಿಂದ ಮತಾಂಧ ಮುಸ್ಲಿಂ ವ್ಯಕ್ತಿಗಳಿಂದ ಹತ್ಯೆಯ ಬಗ್ಗೆ ವಿಷಾದಿಸಿ ರಾಜಸ್ಥಾನದ ಆಡಳಿದಲ್ಲಿ ದಿನನಿತ್ಯವೂ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರೂ, ಯಾವುದೇ ಕ್ರಮವಾಗದಿರುವುದೇ ಕನ್ಹಯ್ಯಲಾಲ್ ಭೀಕರ ಹತ್ಯೆಗೆ ಕಾರಣವಾಗಿದೆ ಎಂದರು. ಕಾಂಗ್ರೆಸ್‍ನವರು ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ರಾಹುಲ್ ಗಾಂಧೀಯನ್ನು ಇ.ಡಿ.ರವರು ಪ್ರಶ್ನಿಸುತ್ತಾರೆ ಎಂದುದಕ್ಕೆ ದೇಶಾದ್ಯಂತ ಹೋರಾಟ ನಡೆಸಿದರು. ಕಾಶ್ಮೀರದಲ್ಲಿ ಸ್ವಾತಂತ್ರ್ಯ ಬಂದ ನಂತರದಿಂದ ದಿನನಿತ್ಯವೂ ಕಾಶ್ಮೀರಿ ಪಂಡಿತರಿಗೆ ಕಿರುಕುಳ, ಹತ್ಯೆ, ಬೆದರಿಕೆಯನ್ನು ಜಿಹಾದಿ ಮನಸ್ಸಿನ ದೇಶದ್ರೋಹಿ ಮಾತಾಂದರು…

Read More

ಮಧುಗಿರಿ: 2023ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಧುಗಿರಿಯ ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರು ಬೆಂಬಲಿಗರ ಸಭೆಯಲ್ಲಿ ಮಾತನಾಡುತ್ತಾ, ‘ಶೋಕಿಗೆ ರಾಜಕಾರಣ ಮಾಡ್ಬೇಡಿ, ನಾನೇ ಎಂಎಲ್‍ಗೆ ಸ್ಪರ್ಧೆ ಮಾಡ್ತಿನಿ ಅಂತ ತಿಳ್ಕೊಂಡು ಕೆಲಸ ಮಾಡಿ, ನಾನು ಎಂಎಲ್‍ಎ ಆದ್ರೆ ನೀವೆಲ್ಲಾ ಎಂಎಲ್‍ಎಗಳು ಇದ್ದಂಗೆ’ ಎಂದು ಬೆಂಬಲಿಗರಿಗೆ ಹೇಳಿದ್ದಾರೆ. ಅಭಿವೃದ್ಧಿ ಕೆಲಸಗಳ ಬಗ್ಗೆ ಕೇಳೋ ಶಕ್ತಿ ನಿಮಗೆ ಇರಬೇಕು. ಆಗ ಮಾತ್ರ ನಾವು ಗೆಲ್ಲೋಕೆ ಸಾಧ್ಯ. ಇದು ನನ್ನ ಕೊನೆಯ ಚುನಾವಣೆ ಆಮೇಲೆ ನಿಂತ್ಕೋ ಅಂದ್ರು ನಾನು ನಿಲ್ಲಲ್ಲ. ನನಗೆ ಈಗ 72 ವರ್ಷ ಮುಂದಿನ ಚುನಾವಣೆ ಅಂದ್ರೆ 77 ವರ್ಷ ಆಗುತ್ತೆ. ಅಷ್ಟೊತ್ತಿಗೆ ನನ್ನ ಕೈಕಾಲು ಎಲ್ಲ ಅಲ್ಲಾಡುತ್ತಿರುತ್ತೆ. ಅದರಿಂದ ಇದು ನನಗೆ ಕಡೆ ಚುನಾವಣೆ ಎಂದರಲ್ಲದೆ ಕಾಂಗ್ರೆಸ್ ಸರ್ಕಾರ ಬಂದ್ರೆ ನೂರಕ್ಕೆ ನೂರು ನಾನು ಮಂತ್ರಿ ಆಗ್ತಿನಿ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Read More

ತುಮಕೂರು: ಕಠಿಣ ಶ್ರಮ ಮತ್ತು ಆತ್ಮವಿಶ್ವಾಸದಿಂದ ಪ್ರತಿಯೊಬ್ಬ ರೋಗಿಯನ್ನು ಪರೀಕ್ಷಿಸಿ ಸೂಕ್ತ ಚಿಕಿತ್ಸೆ ನೀಡಿ ರೋಗಿಗೆ ಪುನರ್ಜನ್ಮ ನೀಡುವ ವೈದ್ಯರು ದೇವರಿಗೆ ಸಮಾನ ಎಂದು ವರದರಾಜ ಚಾರಿಟಬಲ್ ಟ್ರಸ್ಟ್‍ನ ಮುಖ್ಯಸ್ಥ ಡಾ. ದುರ್ಗಾದಾಸ್ ಆಸ್ರಣ್ಣ ಅಭಿಪ್ರಾಯಪಟ್ಟರು. ವೈದ್ಯರ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ವರದರಾಜ ಚಾರಿಟೆಬಲ್ ಟ್ರಸ್ಟ್‍ನ ವರದರಾಜ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಕಸ್ತೂರ್ ಬಾ ಆಸ್ಪತ್ರೆ ವತಿಯಿಂದ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೋಗಿಗಳ ಭಾವನೆಗಳಿಗೆ ಸ್ಪಂದಿಸಿದಾಗ ಮಾತ್ರ ಸಮಾಜದಲ್ಲಿ ವೈದ್ಯರಿಗೆ ಬೆಲೆ ಸಿಗುತ್ತದೆ. ಈ ನಿಟ್ಟಿನಲ್ಲಿ ವೈದ್ಯರು ಮೊದಲು ರೋಗಿಗಳ ಆರೋಗ್ಯ ಸಮಸ್ಯೆಗಳನ್ನು ಆಲಿಸಿ ಉತ್ತಮ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು. ಮೇಯರ್ ಬಿ.ಜಿ. ಕೃಷ್ಣಪ್ಪ ಮಾತನಾಡಿ ಜನರ ಜೀವವನ್ನು ಉಳಿಸುವ ವೈದ್ಯರಿಗಾಗಿ ಪ್ರತ್ಯೇಕ ದಿನಾಚರಣೆಯನ್ನು ಹಮ್ಮಿಕೊಂಡಿರುವುದು ಸಂತಸದ ವಿಚಾರ. ಕಲ್ಪತರು ನಾಡು, ಶಾರದೆಯ ಬೀಡಾದ ತುಮಕೂರಿನಲ್ಲಿ ಕ್ಯಾನ್ಸರ್ ರೋಗ ಸೇರಿದಂತೆ ಮಾರಣಾಂತಿಕ ಖಾಯಿಲೆಗಳಿಗೆ ಉತ್ತಮ ವೈದ್ಯಕೀಯ…

Read More

ತುಮಕೂರು: ಕಾಂಗ್ರೆಸ್‍ನಲ್ಲಿ ಅಸಮಾಧಾನ ಸೋಟಗೊಂಡಿದೆ. ಮಾಜಿ ಶಾಸಕ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ.ಡಿ. ಲಕ್ಷ್ಮೀನಾರಾಯಣ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಧಾನ ಹೊರ ಹಾಕಿದ್ದಾರೆ. ವಿಧಾನಪರಿಷತ್ ಸದಸ್ಯ ಸ್ಥಾನ ಸಿಗದ ಕಾರಣಕ್ಕೆ ಮಾಜಿ ಸಚಿವ ಎಂ.ಆರ್.ಸೀತಾರಾಂ ಇತ್ತೀಚೆಗಷ್ಟೆ ಬೆಂಬಲಿಗರ ಸಭೆ ನಡೆಸಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಅದರ ಬೆನ್ನಲ್ಲೆ ಎಂ.ಡಿ.ಲಕ್ಷ್ಮೀನಾರಾಯಣ ಕೂಡ ವಿಧಾನ ಪರಿಷತ್ ಸ್ಥಾನ ಸಿಗದ ಕಾರಣಕ್ಕೆ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಿದ್ದು ಪಕ್ಷ ತೊರೆಯುವ ಸಿದ್ಧತೆಯಲ್ಲಿದ್ದಾರೆ. ನನ್ನಹುಟ್ಟುಹಬಕ್ಕೆ ಬಂದು ನೀವು ಮಾತು ಕೊಟ್ಟಿದ್ದೇನು? ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ. ನಾನು ತುರುವೇಕೆರೆ ಕ್ಷೇತ್ರದ ಟಿಕೆಟ್ ಬಯಸಿದ್ದೆ, ನೀವೇ ನನ್ನನ್ನ ಸಮಾಧಾನ ಪಡಿಸಿದ್ದಿರಿ. ಕಾಂತರಾಜುಗೆ ತುರುವೇಕೆರೆ ಟಿಕೆಟ್ ನೀಡುವ ಭರವಸೆ ನೀಡಿದ್ದೇನೆ. ನೀವು ಪಕ್ಷದ ಸಂಘಟನೆಯಲ್ಲಿ ಚೆನ್ನಾಗಿ ಕೆಲಸ ಮಾಡುತ್ತಿದ್ದೀರಾ. ನಿಮ್ಮನ್ನು ವಿಧಾನ ಪರಿಷತ್ ಸದಸ್ಯನ್ನಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದೀರಿ. ಡಿ.ಕೆ.ಶಿವಕುಮಾರ್ ಕೂಡ ಇದೇ ಭರವಸೆ ನೀಡಿದ್ದರು. ಈಗ ಇಬ್ಬರು ಕೊಟ್ಟ ಮಾತನ್ನು ಮರೆತು…

Read More

ತುಮಕೂರು: ರಾಷ್ಟ್ರ ಮಟ್ಟದಲ್ಲಿ ಆಯ್ಕೆಯಾಗಿರುವ 100 ಸ್ಮಾರ್ಟ್‍ಸಿಟಿಗಳಲ್ಲಿ ತುಮಕೂರು ಸ್ಮಾರ್ಟ್‍ಸಿಟಿ ಲಿಮಿಟೆಡ್ ದೇಶದಲ್ಲಿಯೇ 7ನೇ ಶ್ರೇಣಿಯಲ್ಲಿದ್ದು, ಕರ್ನಾಟಕದ 7 ಸ್ಮಾರ್ಟ್‍ಸಿಟಿಗಳ ಪೈಕಿ ಒಂದನೇ ಸ್ಥಾನದಲ್ಲಿದೆ. ಒಟ್ಟು 178 ಕಾಮಗಾರಿಗಳ ಪೈಕಿ 132 ಕಾಮಗಾರಿಗಳನ್ನು ಸುಮಾರು 462 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದ್ದು, ಪ್ರಗತಿಯ ಹಂತದಲ್ಲಿರುವ 50 ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಗೆ ಸಂಬಂಧಿಸಿದಂತೆ ಕರೆಯಲಾದ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಳಗುಂಬ ಮತ್ತು ಚಾಮುಂಡಿ ರಸ್ತೆಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿಗೆ ಕಟ್ಟಡ ತೆರವುಗೊಳಿಸಬೇಕಾಗಿರುವುದರಿಂದ, ತುಮಕೂರು ಮಹನಾಗರಪಾಲಿಕೆ ವತಿಯಿಂದ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಅಡಚಣೆಗಳ ನಿವಾರಣೆ ಹಾಗೂ ಭೂ-ಸ್ವಾಧೀನದ ಬಗ್ಗೆ ಪಾಲಿಕೆ ವತಿಯಿಂದ ನಿರ್ಣಯ ತೆಗೆದುಕೊಂಡು ಸೂಕ್ತ ಕ್ರಮ ಜರುಗಿಸಲು ತುಮಕೂರು ಸ್ಮಾರ್ಟ್‍ಸಿಟಿ ಲಿಮಿಟೆಡ್ ಅವರಿಗೆ ತಿಳಿಸಲು ಸಭೆಯಲ್ಲಿ ಉಪಸ್ಥಿತರಿದ್ದ ಮಹಾನಗರಪಾಲಿಕೆ ಆಯುಕ್ತರಾದ ರೇಣುಕ ಅವರಿಗೆ ಸೂಚಿಸಿದರು. ಗಾರ್ಡನ್ ರಸ್ತೆ(ದಿಬ್ಬೂರು ಜಂಕ್ಷನ್‍ನಿಂದ ಬಿ.ಹೆಚ್ ರಸ್ತೆ) ಹಾಗೂ ವರ್ತುಲ…

Read More