ತುಮಕೂರು: ರಾಜಸ್ಥಾನದ ಉದಯಪುರದಲ್ಲಿ ಹಾಡಹಗಲೇ ಹಿಂದೂ ಟೈಲರ್ ಕನ್ನಯ್ಯಲಾಲ್ ಅವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಹಾಗೂ ಇಬ್ಬರು ಕೊಲೆಗಾರರನ್ನು ಶೀಘ್ರ ಗಲ್ಲು ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಟೌನ್ಹಾಲ್ ವೃತ್ತದಲ್ಲಿ ಜಮಾಯಿಸಿದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಕನ್ನಯ್ಯಲಾಲ್ ಶಿರಚ್ಛೇದ ಮಾಡಿರುವ ಮಹಮ್ಮದ್ ರಿಯಾಜ್ ಹಾಗೂ ಮಹಮಗ್ ಗೌಸ್ ಎಂಬುವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿದ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗಳದ ಮಂಜು ಭಾರ್ಗವ್, ರಾಜಸ್ಥಾನದ ಉದಯಪುರದ ಕನ್ನಯ್ಯಲಾಲ್ ಟೈಲರ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದಿರುವ ಈ ಇಬ್ಬರು ಹಂತಕರು ಬಟ್ಟೆ ಅಳತೆ ಕೊಡುವ ನಾಟಕವಾಡಿ ತಮ್ಮ ಸೊಂಟದಲ್ಲಿ ಇಟ್ಟುಕೊಂಡಿದ್ದ ಕತ್ತಿಯನ್ನು ತೆಗೆದು ಅಮಾನುಷವಾಗಿ ಕನ್ನಯ್ಯಲಾಲ್ ಕತ್ತಿಗೆ ಇರಿದು ಅದನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ. ಕನ್ನಯ್ಯಲಾಲ್ ಕೊಲೆ ಮಾಡಿದ ಮುಸ್ಲಿಂ ಜಿಹಾದಿಗಳು…
Author: News Desk Benkiyabale
ಶಿರಾ: ನೇರಲಗುಡ್ಡ ಗ್ರಾಪಂ ವ್ಯಾಪ್ತಿಯ ಗಾಮನಗುಡ್ಡ ಪ್ರದೇಶದಲ್ಲಿ ಜಲಸಂಗ್ರಹಗಾರ ನಿರ್ಮಿಸಲು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಂಸದ ಜಿ.ಎಸ್.ಬಸವರಾಜು ತಿಳಿಸಿದರು. ಬುಕ್ಕಾಪಟ್ಟಣದಲ್ಲಿ ಬುಧವಾರ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ, ಶ್ರೀಗಂಧ ಬೆಳೆಗಾರರ ಸಂಘದ ವತಿಯಿಂದ ಆಯೋಜಿಸಿದ್ದ ಜಲಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೋಬಳಿಯ ಇತರೆ ಕೆರೆಕಟ್ಟೆಗಳನ್ನು ನದಿ ನೀರಿನಿಂದ ತುಂಬಿಸುವುದಾಗಿ ತಿಳಿಸಿ, ಮರಡಿಗುಡ್ಡದ ಬಳಿ ಇರುವ ಪುರಸಕ್ಕನಕೆರೆಗೆ ಭದ್ರಾ ಮೇಲ್ದಂಡೆ ಯೋಜನೆಯಿಂದ ನೀರು ಹರಿಸುವುದು ಅವಶ್ಯವಾಗಿದ್ದು ಈ ಭಾಗದ ರೈತರಿಗೆ ಉಪಯೋಗವಾಗಲಿದೆ, ಜಲಸಂಗ್ರಹಗಾರ ನಿರ್ಮಿಸಲು ಸಂಬಂಧಪಟ್ಟ ಇಲಾಖೆಯ ಅಭಿಯಂತರರಿಗೆ ಸರ್ವೆ ಮಾಡುವ ಕಾರ್ಯಕ್ಕೆ ಶೀಘ್ರ ಚಾಲನೆ ದೊರೆಯಲಿದೆ ಎಂದರು. ಈಗಾಗಲೇ ಹೇಮಾವತಿ ಯೋಜನೆಯಿಂದ ಕಳ್ಳಂಬೆಳ್ಳ, ಶಿರಾ ಹಾಗೂ ಇತರೆ 11 ಕೆರೆಗಳಿಗೆ ನೀರು ಸರಬರಾಜು ಆಗಿರುವುದರಿಂದ ಪುನಃ ಭದ್ರಾ ಮೇಲ್ದಂಡೆ ಯೋಜನೆಯಿಂದ ಆ ಭಾಗಕ್ಕೆ ನೀರು ಹರಿಸುವ ಬದಲು ಇದುವರೆಗೂ ನದಿ ಯೋಜನೆಗೆ ಒಳಪಡದೇ ಇರುವ ಹುಲಿಕುಂಟೆ ಮತ್ತು ಗೌಡಗೆರೆ ಹೋಬಳಿ ಹಾಗೂ ಬುಕ್ಕಾಪಟ್ಟಣ ಹೋಬಳಿಗೆ ಪ್ರಧಾನವಾಗಿ ನೀರು ಹರಿಸುವುದು…
ತುರುವೇಕೆರೆ: ಹೆಂಡತಿ ಮಕ್ಕಳೊಂದಿಗೆ ಕೆರೆಗೆ ಈಜು ಕಲಿಯಲು ಹೋದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ದಂಡಿನಶಿವರ ಹೋಬಳಿಯ ಸಾರಿಗೆಹಳ್ಳಿ ಕೆರೆಯಲ್ಲಿ ನಡೆದಿದಿ. ತಾಲ್ಲೂಕಿನ .ಎಂ.ಬೇವಿನಹಳ್ಳಿ ನಿವಾಸಿ ಯೋಗಾನಂದ (45) ಎಂದಿನಂತೆ ಈಜು ಕಲಿಯಲು ತೆರಳಿ ಸಾವನ್ನಪ್ಪಿದ ಮೃತ ದುರ್ದೈವಿ. ತಾಲ್ಲೂಕಿನ ದಂಡಿನಶಿವರ ಹೋಬಳಿಯ ಸಾರಿಗೆಹಳ್ಳಿ ಕೆರೆಗೆ ಈಜು ಕಲಿಯಲು ಪಟ್ಟಣದವರು ಸೇರಿದಂತೆ ಅಕ್ಕ-ಪಕ್ಕದ ಹಳ್ಳಿಯವರು ತೆರಳುತ್ತಾರೆ. ಈ ರೀತಿ ತರಳುವವರಲ್ಲಿ ಎಲ್ಲಾ ವಯೋಮಾನದವರು ಹಾಗೂ ಹೆಂಗಸರು ಮಕ್ಕಳು ಕಲಿಯಲು ಟ್ಯೂಬ್ ಗಳ ಸಮೇತ ಮುಂಜಾನೆಯೆ ತರಳಿ ಸ್ಥಳೀಯ ಈಜು ಪಟು ದಂಡಿನಶಿವರ ತಿಮ್ಮೇಗೌಡ ಮಾರ್ಗದರ್ಶನದಲ್ಲಿ ಈಜು ಕಲಿಯಲು ಬರುತ್ತಾರೆ. ಆದರೆ ಎರಡು ದಿನಗಳಿಂದ ದಂಡಿನಶಿವರ ತಿಮ್ಮೇಗೌಡ ಅನಾರೋಗ್ಯ ನಿಮಿತ್ತ ನಾನು ಬರುವುದಿಲ್ಲ ಎಂದು ತಿಳಿಸಿದ್ದರೂ, ಸಾರಿಗೆಹಳ್ಳಿ ಕೆರೆಗೆ ಇಂದು ಎಂದಿನಂತೆ ಕುಟುಂಬ ಸಮೇತ ಈಜು ಕಲಿಯಲು ಟ್ಯೂಬ್ ಸಮೇತ ಕೆರೆಯಲ್ಲಿ ಹೆಂಡತಿ ಆಶಾ ಹಾಗೂ ಮೂರು ವರ್ಷದ ಮಗುವಿನೊಂದಿಗೆ ಬಂದ ಯೋಗಾನಂದ್ ಟ್ಯೂಬ್ ನೊಂದಿಗೆ ಈಜಲು ಪ್ರಾರಂಭಿಸಿದನಾದರೂ ಮೇಲಿನಿಂದ…
ತುಮಕೂರು: ಕೋವಿಡ್-19 ತಡೆಗಟ್ಟಲು ಲಸಿಕೆಯನ್ನು ನೀಡಲಾಗುತ್ತಿದ್ದು, ನಿಗಧಿತ ಅವಧಿಯಲ್ಲಿ ಪ್ರಗತಿ ಸಾಧಿಸಲು ವಿಫಲವಾದಲ್ಲಿ ಸಂಬಂಧಿಸಿದ ಆರೋಗ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಎಚ್ಚರಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಇತ್ತಿಚೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, 12-14 ವಯೋಮಾನದ ಮಕ್ಕಳ ಮೊದಲ ಡೋಸ್ ಶೇ.106 ಹಾಗೂ ಎರಡನೇ ಡೋಸ್ ಶೇ.69.2 ಮತ್ತು 15-17 ವಯಸ್ಸಿನ ಮಕ್ಕಳಿಗೆ ನೀಡುತ್ತಿರುವ ಲಸಿಕಾಕರಣ ಮೊದಲ ಡೋಸ್ ಶೇ. 79.4 ಹಾಗೂ ಎರಡನೇ ಡೋಸ್ ಶೇ.71.6 ಆಗಿದ್ದು, ವ್ಯಾಕ್ಸಿನೇಷನ್ ಸಮಾಧಾನಕಾರವಾಗಿಲ್ಲವೆಂದು ಬೇಸರ ವ್ಯಕ್ತಪಡಿಸಿ ಜೂನ್ 30ರವರೆಗೆ ಕಾಲಾವಕಾಶ ನೀಡಿ ಬಾಕಿ ಲಸಿಕಾಕರಣವನ್ನು ಪೂರ್ಣಗೊಳಿಸಲು ಸೂಚಿಸಲಾಯಿತು. ಕೋವಿಡ್ -19 ಪ್ರಕರಣಗಳು ಅಲ್ಲಲ್ಲಿ ಹೆಚ್ಚು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ತಿಪಟೂರು, ಶಿರಾ, ತುಮಕೂರು ನಗರಗಳಲ್ಲಿ ಕೋವಿಡ್ ಲ್ಯಾಬ್ ಇದ್ದು, ತುಮಕೂರು ನಗರದಲ್ಲಿ 200, ತಿಪಟೂರು ಮತ್ತು ಶಿರಾ ತಾಲ್ಲೂಕುಗಳಲ್ಲಿ ತಲಾ 100, ಉಳಿದ ತಾಲ್ಲೂಕುಗಳಲ್ಲಿ…
ತುಮಕೂರು: ನಗರದ ಎಂ.ಜಿ.ರಸ್ತೆಯ ಬಾಲಭವನದ ಆವರಣದಲ್ಲಿರುವ ಶ್ರೀ ಕೃಷ್ಣ ರಾಜೇಂದ್ರ ಬಾಲಕಿಯರ ಪ್ರಾಥಮಿಕ ಶಾಲೆಗೆ ಸೇರಿದ 4.0 ಎಕರೆ ಜಾಗದ ಸರ್ವೆ ವಿಚಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಾಗೂ ಇಲಾಖೆ ಇಲಾಖೆ ನಡುವೆ ಏರ್ಪಟ್ಟಿರುವ ವಿವಾದ ಬಗೆಹರಿಸಲು ಸರ್ವೆಗೆ ಮುಂದಾದ ಪಾಲಿಕೆಯ ಕಂದಾಯ ಅಧಿಕಾರಿಗಳಿಗೆ ಅಡ್ಡಿಪಡಿಸಿರುವ ಘಟನೆ ನಡೆದಿದೆ. 1946ರಲ್ಲಿ ಅಂದಿನ ಮೈಸೂರು ಸಂಸ್ಥಾನದ ರಾಜರಾದ ಶ್ರೀನಾಲ್ಮಡಿ ಕೃಷ್ಣರಾಜ ಒಡೆಯರ್ ಅವರು, ಕೃಷ್ಣರಾಜೇಂದ್ರ ಬಾಲಕಿಯರ ಪಾಠ ಶಾಲೆಗಾಗಿ 4.20 ಜಾಗವನ್ನು ನೀಡಿದ್ದು, 2002ರವರೆಗೆ ಸದರಿ ಜಾಗ ಶಾಲೆಯ ಹೆಸರಿನಲ್ಲಿಯೇ ಇದೆ. ಆದರೆ 2002ರಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಬಾಲಭವನ ನಿರ್ಮಾಣಕ್ಕಾಗಿ ಸರಕಾರ ಸದರಿ ಜಾಗದಲ್ಲಿ 3.14 ಗುಂಟೆಯನ್ನು ಖಾತೆ ಮಾಡಿಕೊಟ್ಟಿದ್ದು,ಸದರಿ ಜಾಗದಲ್ಲಿ ಬಾಲಭವನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಕಾರ್ಯನಿರ್ವಹಿಸುತ್ತಿವೆ. ಆದರೆ ಪ್ರಸ್ತುತ 3.14 ಗುಂಟೆಯಲ್ಲಿ ಕಟ್ಟಡ ಕಟ್ಟಿ ಉಳಿದಿರುವ ಜಾಗದಲ್ಲಿ ಈಜುಕೊಳ ನಿರ್ಮಾಣಕ್ಕೆ ಮುಂದಾಗಿರುವುದು ಈಗ ವಿವಾದಕ್ಕೆ ಕಾರಣವಾಗಿದ್ದು, ಶಾಲೆಯ…
ತುಮಕೂರು: ದೇಶದ ಸರ್ವೋಚ್ಚ ನ್ಯಾಯಾಲಯ 2014ರಲ್ಲಿಯೇ ಯಾವುದೇ ಮುಂಜಾಗ್ರತಾ ಪರಿಕರಗಳಿಲ್ಲದೆ ಪೌರಕಾರ್ಮಿ ಕರನ್ನು ಕೆಲಸಕ್ಕೆ ನಿಯೋಜಿಸಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ಹೇಳಿದೆ. ಆದರೆ ವರ್ಷಕ್ಕೆ ನೂರಾರು ಪಿ.ಕೆ.ಎಸ್ಗಳು ಮಲಗುಂಡಿ ಸ್ವಚ್ಚಗೊಳಿಸುವ ವೇಳೆ ಮೃತಪಟ್ಟರು ಇದುವರೆಗೂ ಯಾವ ಅಧಿಕಾರಿ ವಿರುದ್ದವೂ ಶಿಕ್ಷೆಯಾಗಿಲ್ಲ. ಈ ವಿಚಾರದಲ್ಲಿ ಸರ್ಕಾರವೇ ಮೊದಲ ಅಪರಾಧಿ ಎಂದು ನ್ಯಾ.ನಾಗಮೋಹನ್ ದಾಸ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಬಾಲಭವನದಲ್ಲಿ ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘ ಮುನ್ಸಿಪಲ್ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ರಾಜ್ಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಲಕ್ಷಾಂತರ ಸಂಖ್ಯೆಯಲ್ಲಿರುವ ಮುನ್ಸಿಪಲ್ ನೌಕರರನ್ನು ಕಸ ಗುಡಿಸುವವರು, ಕಸ ಎತ್ತುವವರು, ಸಾಗಿಸುವವರು ಹೀಗೆ ಹಲವು ವಿಭಾಗಗಳಾಗಿ ವಿಂಗಡಿಸಿ, ಒಡೆದು ಆಳುವ ನೀತಿಯನ್ನು ಅನುಸರಿಸುವ ಮೂಲಕ ನಮ್ಮ ದ್ವನಿ ಹೆಚ್ಚಾಗದಂತೆ ಮಾಡುತ್ತಿದೆ ಎಂದರು. ನಿರುದ್ಯೋಗವೆಂದರೆ ಕೇವಲ ಕೆಲಸವಿಲ್ಲದೆ ಇರುವುದು ಎಂದರ್ಥವಲ್ಲ. ಇದರ ಹಿಂದೆ ಕಳ್ಳತನ, ಸುಲಿಗೆ, ದರೋಡೆ, ಭಯೋತ್ಪಾಧನೆ ಯಂತಹ ಸಮಾಜ ವಿದ್ರೋಹಿ…
ತುಮಕೂರು: ಅಕ್ಷರ ಮತ್ತು ಆರ್ಥಿಕತೆಯಿಂದ ದೂರವೇ ಉಳಿದಿದ್ದ ದಲಿತ ಸಮುದಾಯದ ಸಬಲೀಕರಣಕ್ಕೆ ಸ್ವಾತಂತ್ರ ನಂತರದಲ್ಲಿ ಸರಕಾರಗಳು ಹಲವಾರು ಯೋಜನೆಗಳನ್ನು ಹಾಕಿಕೊಂಡಿವೆ. ಇವುಗಳ ಫಲವಾಗಿ ಅಕ್ಷರ ಮತ್ತು ಆರ್ಥಿಕ ವಿಚಾರದಲ್ಲಿ ದಲಿತ ಸಮುದಾಯಗಳು ಕ್ರಾಂತಿಯನ್ನೇ ಮಾಡಿವೆ ಎಂದು ಹಿರೇಮಠದ ಡಾ.ಶ್ರೀಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಶ್ರೀಬಸವೇಶ್ವರ ಸಹಕಾರ ಸಂಘ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದ ಅವರು, ಬಹಳ ಕಾಲ ಅಕ್ಷರ ವಂಚಿತರಾಗಿ, ಆರ್ಥಿಕತೆಯ ಅರಿವೆ ಇಲ್ಲದ ಜನರಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಂತಹ ಮಹಾನ್ ವ್ಯಕ್ತಿಗಳು ಪ್ರವಾಹದ ವಿರುದ್ದ ಈಜಿ ಈ ದೇಶದ ದಲಿತರು ಸ್ವಾಭಿಮಾನದ ಬದುಕು ಕಟ್ಟಿಕೊಡಲು ಶ್ರಮಿಸಿದ್ದಾರೆ ಎಂದರು. ಮಹನೀಯರ ಹೇಳಿದ ರೀತಿಯಲ್ಲಿ ನಡೆದುಕೊಳ್ಳುವ ಮೂಲಕ ನಾವುಗಳ ಅವರನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಮಾಡಬೇಕೆಂದರು. ಸಹಕಾರ ಸಂಘವೆಂಬುದು ಒಂದು ಟೀಮ್ ವರ್ಕ್.ಪರಸ್ವರ ಸಹಕಾರದಿಂದ ಒಂದು ಅರ್ಥಿಕ ಸಂಸ್ಥೆ ಬೆಳೆಯಲು ಸಾಧ್ಯ, ಎಲ್ಲಾ ರಂಗದಲ್ಲಿಯೂ ಒಳ್ಳೆಯದು ಇದೆ,ಕೆಟ್ಟದ್ದು ಇದೆ.ಅವುಗಳಲ್ಲಿ ಬದಲಾವಣೆಗಳನ್ನು ತಂದುಕೊಂಡು…
ತುಮಕೂರು ದೂರದೃಷ್ಟಿ ಮತ್ತು ನಾಡ ಪ್ರೇಮದಿಂದ ಬೆಂಗಳೂರನ್ನು ಕಟ್ಟಿದ ಹೆಮ್ಮೆಯ ಕನ್ನಡಿಗ ನಾಡಪ್ರಭು ಕೆಂಪೇಗೌಡರ ಸಾಧನೆ ನಮಗೆಲ್ಲ ಪ್ರೇರಣೆಯಾಗಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ ತಿಳಿಸಿದರು. ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜಯಂತ್ಯೋತ್ಸವ ಸಮಾರಂಭದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಹಾಗೂ ಅವರ ಕುಟುಂಬ ಸಾಕಷ್ಟು ವರ್ಷಗಳು ಶ್ರಮಿಸಿ ತಮ್ಮ ಕನಸಿನ ರಾಜಧಾನಿ ಬೆಂಗಳೂರು ಸಾಮಾನ್ಯ ಜನರಿಗೆ ಆಸರೆಯಾಗಿರಲೆಂದು ಅಚ್ಚುಕಟ್ಟಾಗಿ ಎಲ್ಲಾ ವ್ಯವಸ್ಥೆಗಳೊಂದಿಗೆ ಕಟ್ಟಿಕೊಟ್ಟವರು ಎಂದರು. ಬೆಂಗಳೂರು ವಿಶಾಲವಾಗಿ ಬೆಳೆಯಬೇಕು. ಎಲ್ಲ ವರ್ಗದವರು ಒಗ್ಗಟ್ಟಿನಿಂದ ಬಾಳಬೇಕೆಂಬ ಆಶಯದಿಂದ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿ ಬೆಳೆಸಿದರು. ರೈತರ ಬೆನ್ನೆಲುಬಾಗಿ ಕೆರೆಗಳನ್ನು ಕಟ್ಟಿದ ಶಕ್ತಿ ಕೆಂಪೇಗೌಡರದು. ಹಲವಾರು ದೇವಾಲಯಗಳು, ಮಹಾದ್ವಾರಗಳು, ಶಾಲೆಗಳನ್ನು ನಿರ್ಮಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಹೇಳಿದರು. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಗೋವಿಂದರಾಜು ಮಾತನಾಡಿ, ಸುಮಾರು 560 ವರ್ಷಗಳ ಹಿಂದೆಯೇ ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು…
ತುಮಕೂರು: ಜಾರಿ ನಿರ್ದೇಶನಾಲಯ ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೇರಿದ್ದಲ್ಲ. ವಿನಾ ಕಾರಣ ಇ.ಡಿ. ಮೇಲೆ ಗೂಬೆ ಕೂರಿಸುವ ಕೆಲಸ ಮಾಡುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಡಿ.ವಿ. ಸದಾನಂದ ಗೌಡ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ದೇಶದ ಸಂವಿಧಾನದಲ್ಲಿ ಹಲವು ತನಿಖಾ ಸಂಸ್ಥೆಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿವೆ. ಹಾಗೆಯೇ ಇ.ಡಿ., ಐ.ಟಿ. ಸೇರಿದಂತೆ ಹಲವು ತನಿಖಾ ಸಂಸ್ಥೆಗಳು ತಮ್ಮ ಕೆಲಸ ಮಾಡುತ್ತಿವೆ. ವಿನಾ ಕಾರಣ ಈ ಸಂಸ್ಥೆಗಳ ಮೇಲೆ ಗೂಬೆ ಕೂರಿಸಬಾರದು ಎಂದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಇಲಾಖೆ, ಸಂಸ್ಥೆಯ ಅಧಿಕಾರಿಗಳನ್ನು ರಾಜಕೀಯವಾಗಿ ನೋಡಬಾರದು. ಹಾಗೊಂದು ಒಂದು ವೇಳೆ ರಾಜಕೀಯವಾಗಿ ನೋಡುವುದಾದರೆ ಸರ್ಕಾರಗಳು ಬದಲಾದಾಗ ಅಧಿಕಾರಿಗಳು ಎಲ್ಲಿಗೆ ಹೋಗಬೇಕು, ಏನು ಮಾಡಬೇಕು ಎಂದು ಪ್ರಶ್ನಿಸಿದರು. ಕಾನೂನಿನ ಮೇಲೆ ವಿಶ್ವಾಸ ಹೊಂದಿರುವ ಪಕ್ಷ ನಮ್ಮದು. ಕಾನೂನು ನ್ಯಾಯ ಕೊಡುತ್ತದೆ ಎಂಬ ನಂಬಿಕೆಯನ್ನು ಹೊಂದಿದ್ದೇವೆ. ಯಾರೂ ಕೂಡಾ ಅದರ ವಿರುದ್ಧ ನಡೆಯುವಂತಿಲ್ಲ. ಯಾರಿಗೆ ಕಾನೂನು, ಸುಪ್ರೀಂ…
ತುಮಕೂರು: ತುಮಕೂರು ಜಿಲ್ಲೆಯನ್ನು ಗೆದ್ದರೆ, ಇಡೀ ರಾಜ್ಯವನ್ನು ಗೆದ್ದಂತೆ ಎನ್ನುವ ಮಾತಿದೆ,ಇಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಶಕ್ತಿ ಮೀರಿ ಶ್ರಮಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ನಗರದ ಡಾ.ಹೆಚ್.ಎಮ್.ಗಂಗಾಧರಯ್ಯ ಮೆಮೋರಿಯಲ್ ಹಾಲ್ನಲ್ಲಿ ನಡೆದ ಕಾಂಗ್ರೆಸ್, ನವ ಸಂಕಲ್ಪ ಶಿಬಿರವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಜಿಲ್ಲೆಯಲ್ಲಿ ಎರಡಂಕಿಯ ಶಾಸಕರನ್ನು ಹೊಂದಬೇಕು, ಬಿಜೆಪಿ, ಜೆಡಿಎಸ್ ಸರಕಾರದ ಆಡಳಿತವನ್ನು ಜಿಲ್ಲೆಯ ಜನರು ನೋಡಿದ್ದಾರೆ, ಸಮರ್ಥ ಆಡಳಿತ ನೀಡಿರುವ ಕಾಂಗ್ರೆಸ್ ಯೋಜನೆ ಬಗ್ಗೆ ಮನೆಮನೆಗೆ ತಿಳಿಸಬೇಕೆಂದರು. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು, ಸಿದ್ದರಾಮಯ್ಯ ನೇತೃತ್ವದ ಸರಕಾರ ಮಾಡಿದ ಕೆಲಸ ಡಬಲ್ ಇಂಜಿನ್ ಸರಕಾರ ಮಾಡುತ್ತಿಲ್ಲ, ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಚಿಂತನಾ ಮಂಥನ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ.ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದೆ.ಆದರೆ ರೈತರು ಬೆಳೆದ ಹಣ್ಣು, ತರಕಾರಿ,ಹಾಲಿನ ದರ ಮಾತ್ರ ಏರಿಕೆ ಮಾಡುತ್ತಿಲ್ಲ ಸಾಮಾನ್ಯ ಜನರ ಬದುಕಿನಲ್ಲಿ ತಾರತಮ್ಯ ಇಂತಹ ಶಿಬಿರಗಳಲ್ಲಿ ಚರ್ಚೆ ಯಾಗಬೇಕು,ರಾಜ್ಯಮಟ್ಟದ ಸಾಮಾಜಿಕ,…











