ತುಮಕೂರು: ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ, ಮುರುಳೀಧರ ಹಾಲಪ್ಪ ನೇತೃತ್ವದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಅಗ್ನಿಪಥ್ ಯೋಜನೆಯ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಕೂಡಲೇ ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿದ ಮಾತನಾಡಿದ ಜಿಲ್ಲಾ ಕಾಂಗ್ರಸ್ ಅಧ್ಯಕ್ಷ ಆರ್. ರಾಮಕೃಷ್ಣ, ಕೇಂದ್ರದ ಬಿಜೆಪಿ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ಅಡ್ಡಾದಿಡ್ಡಿ ಬೆಲೆಗೆ ಅವರಿಗೆ ಬೇಕಾದವರಿಗೆ ಮಾರಾಟ ಮಾಡುತ್ತಿದೆ. ದೇಶದ ಗಡಿಯಲ್ಲಿ ಕೆಲಸ ಮಾಡುವ ಸೈನಿಕರನ್ನು 4 ವರ್ಷ ಕೆಲಸ ಮಾಡಿ ಮನೆಗೆ ಹೋಗಿ ಎಂದರೆ ಏನರ್ಥ. ಇವರು ಬೇಕಾದರೆ 4 ವರ್ಷ ಕೆಲಸ ಮಾಡಿ ಮನೆಗೆ ಹೋಗಲಿ ಎಂದು ಆಕ್ರೋಶ ಹೊರ ಹಾಕಿದರು. ಬಿಜೆಪಿಯವರಿಗೆ ಉನ್ನತ ಹುದ್ದೆಗಳು ಬೇಕು, ಸವಲತ್ತುಗಳು ಬೇಕು. ಆದರೆ ಗಡಿಯಲ್ಲಿ ದೇಶ ಕಾಯುವ…
Author: News Desk Benkiyabale
ತುಮಕೂರು: ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿಯನ್ನು ಜಿಲ್ಲಾಡಳಿತದಿಂದ ಸೋಮವಾರ ಸಾಂಕೇತಿಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಸ್ಪಾರ್ಚನೆ ಸಲ್ಲಿಸಿ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರು, ನಾಡಪ್ರಭು ಕೆಂಪೇಗೌಡರ ಕೊಡುಗೆ ಕರ್ನಾಟಕದ ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿದ್ದು ಬೆಂಗಳೂರು ಮುಖಾಂತರ ಎಂದು ಎಲ್ಲರಿಗೂ ತಿಳಿದ ವಿಷಯ. ಬೆಂಗಳೂರಿನ ನಿರ್ಮಾತೃ, ಬೆಂಗಳೂರನ್ನು ಇದೇ ರೀತಿಯಲ್ಲಿ ಕಟ್ಟಬೇಕೆಂಬ ದೂರದೃಷ್ಠಿಯ ಕನಸನ್ನು ಹೊಂದಿದ್ದವರು ಎಂದು ಬಣ್ಣಿಸಿದರು. ಬೆಂಗಳೂರು ಸೇರಿದಂತೆ ಅವರು ಆಳಿದ ಜಿಲ್ಲೆಗಳಲ್ಲಿ ತುಮಕೂರು ಕೂಡ ನೇರವಾದ ಆಡಳಿತದಲ್ಲಿ ಒಳಪಟ್ಟಂತಹ ಜಿಲ್ಲೆಯಾಗಿದೆ. ಎಲ್ಲರಿಗೂ ಆಹಾರವನ್ನು ನೀಡುವಂತಹವರು ರೈತರು ಆ ರೈತರಿಗೆ ನಮ್ಮ ಜಿಲ್ಲೆಯಲ್ಲಿ ಕೆರೆಗಳನ್ನು ಕಟ್ಟಿ ಅನುಕೂಲ ಕಲ್ಪಿಸಿದಂತಹ ಮಹಾನ್ ವ್ಯಕ್ತಿ ಎಂದರೆ ಕೆಂಪೇಗೌಡರು ಎಂದರು. ಕೆಲವು ದೊಡ್ಡ ದೊಡ್ಡ ನಗರಗಳು ಸಮುದ್ರದ ತಟದಲ್ಲಿ ಅಪಾಯದಲ್ಲಿವೆ. ಆದರೆ ಬೆಂಗಳೂರು ನಗರ ನಿರ್ಮಾಣ ಮಾಡಿರುವುದು ಸಮುದ್ರ ತಟಕ್ಕಿಂತ 3000 ಅಡಿಗಳಷ್ಟು ಮೇಲ್ಬಾಗದಲ್ಲಿದೆ. ಭೂಕಂಪ ಆದರೂ ಸಹ ಅಷ್ಟು ಪ್ರಭಾವ ಬೀರುವುದಿಲ್ಲ, ಇಂತಹ ಪರಿಕಲ್ಪನೆಯನ್ನು ಹೊಂದಿ…
ತುಮಕೂರು: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಜಲಜೀವನ ಮಿಷನ್ ಯೋಜನೆ ಯಸಸ್ವಿಯಾಗಬೇಕೆಂದರೆ ಸಮುದಾಯದ ಸಹಭಾಗಿತ್ವ ಮುಖ್ಯವಾಗಿರುತ್ತದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಜೋಸೆಫ್ ತಿಳಿಸಿದರು. ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ನೇಹ ಜೀವನ ಫೌಂಡೇಶನ್ (ಗುಬ್ಬಿ) ಇವರ ಸಹಯೋಗದಲ್ಲಿಂದು ಕುಣಿಗಲ್ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಜೀವನ್ ಮಿಷನ್ ಯೋಜನೆಗೆ ಸಮುದಾಯದವರು ಸಹಕಾರ ನೀಡಬೇಕು. ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಜಲಜೀವನ್ ಮಿಷನ್ ಕಾರ್ಯಕ್ರಮ ನಮ್ಮಲ್ಲಿ ತಡವಾಗಿ ಪ್ರಾರಂಭವಾಗಿದೆ ಕೇಂದ್ರ ಸರ್ಕಾರ 2024ರೊಳಗಾಗಿ ಪ್ರತಿ ಮನೆಗೆ ನಳ ಸಂಪರ್ಕ ನೀಡಿ ಶುದ್ಧ ನೀರನ್ನು ಒದಗಿಸಬೇಕು ಎಂಬ ಗುರಿ ಹೊಂದಿದೆ. ಇದಕ್ಕೆ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗುತ್ತದೆ. ಜೀವನ್ ಮಿಷನ್ ಯೋಜನೆಯಡಿ ಪ್ರತಿ…
ತುಮಕೂರು: ಜಿಲ್ಲೆಯ ಗುಬ್ಬಿ ಪಟ್ಟಣದ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಕೊಲೆ ಪ್ರಕರಣದ 13 ಮಂದಿಯನ್ನು ಗುಬ್ಬಿ ಪೆÇಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಜೂನ್ 15 ರಂದು ಹಾಡು ಹಗಲೇ ರಸ್ತೆಯಲ್ಲಿ ಕುರಿ ಮೂರ್ತಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈದು ಕೊಲೆಗಾರರು ತಲೆಮರೆಸಿಕೊಂಡಿದ್ದರು. ಏಳು ಮಂದಿ ಆರೋಪಿಗಳು ಗುಬ್ಬಿ ಪಟ್ಟಣದ ವರಾಗಿದ್ದು ಉಳಿದ ಆರು ಮಂದಿ ವಿವಿಧ ಜಿಲ್ಲೆಗಳವರೆಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಿಯಲ್ ಎಸ್ಟೇಟ್ ವಿವಾದವೇ ಘಟನೆಗೆವೆನ್ನಲಾಗಿದೆ. ಶಿರಾ ಡಿವೈಎಸ್ಪಿ ಕುಮಾರಪ್ಪ ಇನ್ಸ್ ಪೆಕ್ಟರ್ ಗಳಾದ ನದಾಫ್, ಅವಿನಾಶ್, ರವಿಕುಮಾರ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಪತ್ತೆ ಹಚ್ಚಲು ಶ್ರಮಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ ಆರು ಮಂದಿ ಆರೋಪಿಗಳು ರೌಡಿಶೀಟರ್ ಗಳೆಂದು ಹೇಳಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಬಂದಿಸಿ ಕೊಲೆ ಪ್ರಕರಣ ಬೆಳಕಿಗೆ ತರುವಲ್ಲಿ ಶ್ರಮಿಸಿದ ಡಿವೈಎಸ್ಪಿ ಕುಮಾರಪ್ಪ ಮತ್ತು ಸಿಬ್ಬಂದಿ ವರ್ಗದ ಕಾರ್ಯವೈಕರಿ ಬಗ್ಗೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್…
ತುಮಕೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಂತೆ ಜೂನ್ 26ರ ಭಾನುವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರಗೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರುಗಳಿಗಾಗಿ ನವಚೈತನ್ಯ ಚಿಂತನಾ ಶಿಬಿರವನ್ನು ಶ್ರೀಸಿದ್ದಾರ್ಥ ಮೆಡಿಕಲ್ ಕಾಲೇಜು ಆವರಣದಲ್ಲಿರುವ ಡಾ.ಹೆಚ್.ಎಂ.ಗಂಗಾಧರಯ್ಯ ಮೆಮೋರಿಯಲ್ ಹಾಲ್ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ತುಮಕೂರು ಉಸ್ತುವಾರಿಗಳಾದ ವಿಧಾನಪರಿಷತ್ ಸದಸ್ಯ ರಮೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ರೈತರು, ಕಾರ್ಮಿಕರು, ಸಾರ್ವಜನಿಕರು ಹಾಗೂ ಯುವಜನತೆಯನ್ನು ಒಳಗೊಂಡು ಸಮಾಜದ ಎಲ್ಲಾ ವರ್ಗಗಳ ಬೇಡಿಕೆಗಳ ಕುರಿತು ಆರು ವಿಭಾಗಗಳಲ್ಲಿ ಚಿಂತನೆ ನಡೆಸಿ,ಅಂತಿಮ ನಿರ್ಣಯವನ್ನು ಸಂಜೆ ಪ್ರಕಟಿಸಲಿದ್ದೇವೆ.ಈ ಚಿಂತನ ಸಭೆಯಲ್ಲಿ ವ್ಯಕ್ತವಾದ ಮಾಹಿತಿಗಳನ್ನು ಆಧಾರಿಸಿ, ಮುಂಬರುವ 2023ರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಾಣಾಳಿಕೆಗಳು ಸಿದ್ದಗೊಳ್ಳಲಿವೆ ಎಂದರು. ನಡೆದ ಪೂರ್ವಭಾವಿ ಸಭೆಯಲ್ಲಿ ಕೈಗೊಳ್ಳಲಾದ ತೀರ್ಮಾನದಂತೆ ಆರು ಪ್ರಮುಖ ವಿಚಾರಗಳ ಕುರಿತು ಪ್ರತ್ಯೇಕ ತಲಾ 100 ಜನ ಸದಸ್ಯರನ್ನು ಒಳಗೊಂಡ ಸಮಿತಿಗಳನ್ನು ರಚಿಸಲಾಗಿದೆ. ಮಾಜಿ ಸಚಿವ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಅರ್ಥಿಕ ವ್ಯವಹಾರ…
ತುಮಕೂರು: ನಗರದ ಸರ್ವತೋಮುಖ ಅಭಿವೃದ್ಧಿಯ ಹೆಗ್ಗಳಿಕೆ ಪ್ರಧಾನಿ ನರೇಂದ್ರ ಮೋದಿಯವರ ಸ್ಮಾರ್ಟ್ಸಿಟಿ ಯೋಜನೆಗೆ ಸಲ್ಲಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದರು. ತುಮಕೂರು ನಗರ ಸ್ಮಾರ್ಟ್ಸಿಟಿ ಯೋಜನೆಗೆ ಆಯ್ಕೆಯಾಗದಿದ್ದರೆ ನಗರದ ಸ್ಥಿತಿ ಏನಾಗುತ್ತಿತ್ತು ಎಂಬುದನ್ನು ಊಹಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ 2ನೇ ಹಂತದಲ್ಲಿ ತುಮಕೂರು ಸ್ಮಾರ್ಟ್ಸಿಟಿ ಯೋಜನೆಗೆ ಆಯ್ಕೆಯಾದ ನಂತರ ಸುಮಾರು 900 ಕೋಟಿ ರೂ. ವೆಚ್ಚದಲ್ಲಿ 128 ಅಭಿವೃದ್ಧಿ ಯೋಜನೆಗಳು ಪೂರ್ಣಗೊಂಡಿವೆ ಎಂದರು. ನಗರದ ಆಲದಮರ ಪಾರ್ಕ್ನಲ್ಲಿ ಏರ್ಪಡಿಸಿದ್ದ ಸ್ಮಾರ್ಟ್ಸಿಟಿ ಯೋಜನೆಯ 7ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ 2015ರ ಜೂನ್ 25 ರಂದು ಸ್ಮಾರ್ಟ್ಸಿಟಿ ಯೋಜನೆ ಘೋಷಣೆಯಾಗಿ ಇಂದಿಗೆ 7 ವರ್ಷ ಸಂದಿದೆ. ಈ ಯೋಜನೆಗೆ ತುಮಕೂರು ಆಯ್ಕೆಯಾಗಿ 5 ವರ್ಷವಾಗಿದ್ದು, ನಗರದಲ್ಲಿ ಸುಮಾರು 151 ಅಭಿವೃದ್ಧಿ ಯೋಜನೆಗಳು ಚಾಲನೆಯಲ್ಲಿವೆ. ಹೊಸದಾಗಿ 27 ಯೋಜನೆಗಳು ಟೆಂಡರ್ ಹಂತದಲ್ಲಿದ್ದು, ಒಟ್ಟು 178 ಯೋಜನೆಗಳು ಸುಮಾರು 900 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿವೆ ಎಂದರು. ನಗರದ ಮಧ್ಯೆ ಭಾಗದಲ್ಲಿರುವ ಬಡಾವಣೆಗಳನ್ನು…
ಗುಬ್ಬಿ: ಯಾವುದೇ ವಿವಾದವನ್ನು ಪೊಲೀಸ್ ಠಾಣೆ ಮೂಲಕ ಬಗೆಹರಿಸಿಕೊಳ್ಳಬೇಕು. ಕಾನೂನು ಹೊರತಾದ ಘಾತುಕರ ಬಳಕೆಗೆ ಮುಂದಾದ ಸಂದರ್ಭದಲ್ಲಿ ಅಪರಾಧ ಕೃತ್ಯಗಳ ಹೆಚ್ಚಳವಾಗುತ್ತದೆ. ಈ ನಿಟ್ಟಿನಲ್ಲಿ ಜನ ಸಾಮಾನ್ಯರು ಪೊಲೀಸ್ ಕೆಲಸಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪೂರ್ ವಾಡ್ ಮನವಿ ಮಾಡಿದರು. ಪಟ್ಟಣದ ಬಾವಿಮನೆ ಕಲ್ಯಾಣ ಮಂಟಪದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು ಈಚೆಗೆ ಭೂಮಿಗೆ ಬೆಲೆ ಬಂದ ಹಿನ್ನಲೆ ಈ ಭಾಗದಲ್ಲಿ ವಿವಾದಗಳು ತಲೆ ಎತ್ತುತ್ತಿವೆ. ಈ ಹಿನ್ನೆಲೆಯಲ್ಲಿ ಮಾಫಿಯಾಗಳು ತಲೆ ಎತ್ತುತ್ತವೆ. ಯಾವುದೇ ಭೂ ವಿವಾದ ಇದ್ದಲ್ಲಿ ಠಾಣೆಯನ್ನೇ ಸಂಪರ್ಕಿಸಿ ಎಂದು ಸಲಹೆ ನೀಡಿದರು. ಕಾನೂನಾತ್ಮಕ ಹಂತಗಳನ್ನು ಬಳಸಿಕೊಂಡು ನ್ಯಾಯಯುತ ಹೋರಾಟ ಮಾಡಲು ಮುಂದಾಗಬೇಕು. ಸಮಾಜ ಸ್ವಾಸ್ಥ್ಯ ಕಾಪಾಡುವ ಹೊಣೆ ಸಾರ್ವಜನಿಕರ ಮೇಲಿದೆ ಎಂದ ಅವರು ಠಾಣೆಯಲ್ಲಿ ಸ್ಪಂದನೆ ಸಿಕ್ಕಿಲ್ಲ ಎಂಬ ದೂರುಗಳು ಸಾಕಷ್ಟು ಬಂದಿವೆ. ಕೂಡಲೇ ಸರಿಪಡಿಸುವ ಕ್ರಮ ವಹಿಸಲಾಗುವುದು. ಕರ್ತವ್ಯ ಲೋಪ ಹಿನ್ನಲೆ ಗುಬ್ಬಿ…
ತುಮಕೂರು: ನಮ್ಮ ಯುವಜನರು ಶಿಕ್ಷಣ ಪೂರೈಸಿದ ನಂತರ ಕೆಲಸ ಹುಡುಕುವ ಬದಲು ಅವರೇ ಉದ್ಯಮ ಸ್ಥಾಪಿಸಿ ಇತರರಿಗೆ ಉದ್ಯೋಗ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮಾಹಿತಿ ಒದಗಿಸಲು ಕೈಗಾರಿಕಾ ಇಲಾಖೆಯು ತುಮಕೂರಿನಲ್ಲಿ ಜೂನ್ 23ರಂದು ಒಂದು ದಿನದ ಕಾರ್ಯಾಗಾರ ಆಯೋಜಿಸಲಿದೆ ಎಂದು ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ತಿಳಿಸಿದರು. ಈ ಕುರಿತು ಇಂದು ತುಮಕೂರಿನ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗೂ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದರು. ತುಮಕೂರಿನ ಗಂಗಾಧರಯ್ಯ ಮೆಮೋರಿಯಲ್ ಹಾಲ್ನಲ್ಲಿ ‘ಉದ್ಯಮಿಯಾಗು ಉದ್ಯೋಗ ನೀಡು’ ಹಾಗೂ ‘ಕೈಗಾರಿಕಾ ಅದಾಲತ್’ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ. ಮುರುಗೇಶ ಆರ್ ನಿರಾಣಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಳೆದ ವರ್ಷ ಅಕ್ಟೋಬರ್ 11ರಂದು ಬೆಂಗಳೂರಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.…
ಚಿಕ್ಕನಾಯಕನಹಳ್ಳಿ: ಕೆರೆ ಏರಿ ಸುಭದ್ರತೆ ಮಾಡಿದರೆ ಮಾತ್ರ ನೀರು ಶೇಖರಣೆ ಅವಕಾಶವಾಗುತ್ತದೆ ಕೇವಲ ಹೂಳೆತ್ತುವುದು ರಿಂದ ಸರ್ಕಾರದ ಹಣ ಪೋಲಾಗುತ್ತದೆ ಎಂದು ಸದಸ್ಯ ಸಿ.ಡಿ ಸುರೇಶ್ ಆಗ್ರಹಿಸಿದರು. ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಪುರಸಭಾ ಅಧ್ಯಕ್ಷೆ ಪುಷ್ಪ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ವಿಶೇಷ ಸಭೆಯಲ್ಲಿ ಅವರು ಸಲಹೆ ನೀಡಿದರು. 15ನೇ ಹಣಕಾಸು ಯೋಜನೆಯ ಸಾಮಾನ್ಯ ಮೂಲ ಅನುಧಾನ ಕ್ರಿಯಾ ಯೋಜನೆಯ 155 ಲಕ್ಷ ಅನುದಾನದಲ್ಲಿ ಕುಡಿಯುವ ನೀರು ಕಾಮಗಾರಿಗೆ ಹಾಗೂ ಘನತ್ಯಾಜ್ಯ ವಸ್ತು ವಿಲೇವಾರಿ ನಿರ್ವಾಣ ಕಾಮಗಾರಿಗೆ ಮೀಸಲಿರಿಸಿದ್ದ 93 ಲಕ್ಷ ರೂಗಳನ್ನು ಸಚಿವರು ಕೆರೆಯ ಹೂಳೆತ್ತಿ ರಿವಿಟ್ಮೆಂಟ್ ನಾವು ಮಾಡುತ್ತೇವೆ ನೀವು ನೀರು ಶೇಖರಿಸುವ ಕಾರ್ಯವನ್ನು ಮಾಡಿ ಎಂದು ಸಭೆಗೆ ಸೂಚಿಸಿದರು. ಇದಕ್ಕೆ ಸಹಮತಿಸದೇ ಕೆಲವು ಸದಸ್ಯರಾದ ಸಿಡಿ ಸುರೇಶ್ ಮಾತನಾಡುತ್ತಾ ಹೂಳ್ ಎತ್ತುವುದಾದರೆ ಕೇವಲ ಹತ್ತರಿಂದ ಹದಿನೈದು ಲಕ್ಷದಲ್ಲಿ ಕಾಮಗಾರಿ ಮುಗಿಸಬಹುದು ಆದರೆ ಏರಿಯಾ ಭದ್ರತೆ ಹಾಗೂ ಅದರ ಸುರಕ್ಷತೆ ಜೊತೆಗೆ ಸುತ್ತಮುತ್ತಲಿನ ಗಿಡಗಳನ್ನು ತೆಗೆಯುವುದರಿಂದ ಅಭಿವೃದ್ಧಿ ಸಾಧ್ಯವಾಗುತ್ತದೆ ಇದರ…
ತುಮಕೂರು: ಕಳೆದ ಎರಡು ದಶಕಗಳಿಗೂ ಅಧಿಕ ಕಾಲದಿಂದ ತುಂಬದೇ ಇದ್ದ ನಗರದ ಮರಳೂರು ಕೆರೆ ಈ ಬಾರಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಭರ್ತಿಯಾಗಿ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಾಸಕ ಜ್ಯೋತಿಗಣೇಶ್, ಪಾಲಿಕೆ ಮೇಯರ್ ಬಿ.ಜಿ. ಕೃಷ್ಣಪ್ಪ ಹಾಗೂ ಸದಸ್ಯ ಧರಣೇಂದ್ರಕುಮಾರ್ ಅವರು ಕೆರೆಗೆ ಬಾಗಿನ ಅರ್ಪಿಸಿದರು. ನಗರದ ದಕ್ಷಿಣ ಭಾಗದಲ್ಲಿರುವ ಮರಳೂರು ಕೆರೆ 22 ವರ್ಷಗಳಿಂದ ತುಂಬಿರಲಿಲ್ಲ. ಆದ ರೆ ಈ ಬಾರಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭರ್ತಿಯಾಗಿ ಕೋಡಿ ಹರಿಯುತ್ತಿರುವುದರಿಂದ ಮರಳೂರು, ಗಂಗಸಂದ್ರ ಗ್ರಾಮಸ್ಥರ ಸಮ್ಮುಖದಲ್ಲಿ ಧಾರ್ಮಿಕ ವಿಧಿವತ್ತಾಗಿ ಕೆರೆಗೆ ಬಾಗಿನ ಅರ್ಪಿಸಿ ಗಂಗಾ ಪೂಜೆ ನೆರವೇರಿಸಲಾಯಿತು. ಕೆರೆಗೆ ಬಾಗಿನ ಸಲ್ಲಿಸಿದ ನಂತರ ಮಾತನಾಡಿದ ಶಾಸಕ ಜಿ.ಬಿ. ಜ್ಯೋತಿಗಣೇಶ್, ನಗರದ ದಕ್ಷಿಣ ಭಾಗದಲ್ಲಿರುವ ಮರಳೂರು ಕೆರೆ 22 ವರ್ಷದ ನಂತರ ಮಳೆ ನೀರಿನಿಂದ ಕೋಡಿ ಬಿದ್ದಿರುವುದು ತುಂಬಾ ಸಂತೋಷ ತಂದಿದೆ ಎಂದರು. ಈ ಮರಳೂರು ಕೆರೆ ಮರಳೂರು ಗ್ರಾಮ ಮತ್ತು ಗಂಗಸಂದ್ರ ಗ್ರಾಮಗಳಿಗೆ ಕಲ್ಪತರು ಇದ್ದಂತೆ. ಈ…











