Author: News Desk Benkiyabale

 ತುಮಕೂರು :       ಕೋವಿಡ್ ಟೆಸ್ಟ್‍ಗಳನ್ನು ಹೆಚ್ಚುಗೊಳಿಸಿ ಅಗತ್ಯ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪಾಸಿಟಿವಿಟಿ ಪ್ರಮಾಣ ಇಳಿಕೆಗೆ ಕ್ರಮವಹಿಸುವಂತೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣ ಸಂಬಂಧ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಸಚಿವರು, ಸರ್ಕಾರ ಜಿಲ್ಲೆಯಲ್ಲಿ ನಿತ್ಯ 5,400 ಕೋವಿಡ್ ಪರೀಕ್ಷೆಗಳನ್ನು ನಡೆಸುವಂತೆ ಗುರಿ ನಿಗಧಿಪಡಿಸಿದೆ. ಆದರೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ 7000 ಕೋವಿಡ್ ಟೆಸ್ಟ್‍ಗಳನ್ನು ಕಡ್ಡಾಯವಾಗಿ ಮಾಡಬೇಕು ಎಂದು ಸೂಚನೆ ನೀಡಿದರು. ಖಾಸಗಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರಿದ್ದರೆ ಅವರನ್ನು ಜಿಲ್ಲಾಸ್ಪತ್ರೆಗೆ ನಿಯೋಜಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರಿಗೆ ಸೂಚಿಸಿದರು. ಕೊರೋನಾ ಸೋಂಕಿತರ ಆರೈಕೆ ಕೇಂದ್ರಗಳಲ್ಲಿನ ಆಹಾರ ವಿತರಣೆ ಬಗ್ಗೆ ಪರಿಶೀಲನೆ ನಡೆಸಿದ ಸಚಿವರು, ಪ್ರತಿ ಕೋವಿಡ್ ಆರೈಕೆ ಕೇಂದ್ರಕ್ಕೆ ವೈದ್ಯರು ಮತ್ತು ಪೊಲೀಸರನ್ನು ನಿಯೋಜಿಸಬೇಕು. ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಸ್ವಚ್ಛತೆಯನ್ನು ಕಾಪಾಡಬೇಕು…

Read More

ತುಮಕೂರು:        ಕಾನೂನು ಮಾಪನಶಾಸ್ತ್ರ ಇಲಾಖೆಯು ಕೋವಿಡ್ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್, ಆಕ್ಸಿಮೀಟರ್ ಗಳನ್ನು ಎಂಆರ್‍ಪಿ ಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ 6 ಮೆಡಿಕಲ್ ಸ್ಟೋರ್ ಗಳ ವಿರುದ್ಧ ಮೊಕದ್ದಮೆ ದಾಖಲಿಸಿದೆ. ಜಿಲ್ಲೆಯಲ್ಲಿ ಮೇ ಮಾಹೆಯಲ್ಲಿ ನಡೆಸಿದ ತಪಾಸಣೆಯಲ್ಲಿ ಈ ಮೊಕದ್ದಮೆ ದಾಖಲಿಸಲಾಗಿದೆ. ಸಹಾಯಕ ನಿಯಂತ್ರಕರ ನೇತೃತ್ವದಲ್ಲಿ ತುಮಕೂರು ಉಪವಿಭಾಗ-1 ಹಾಗೂ 2, ತಿಪಟೂರು ಉಪವಿಭಾಗ ಮತ್ತು ಮಧುಗಿರಿ ಉಪವಿಭಾಗದ ನಾಲ್ಕು ನಿರೀಕ್ಷಕರ ತಂಡ ತಪಾಸಣೆ ನಡೆಸಿದ್ದು, ಎಂಆರ್ ಪಿ ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ 6 ಔಷಧಿ ಮಳಿಗೆ ಸೇರಿದಂತೆ ಪೊಟ್ಟಣ ಸಾಮಾಗ್ರಿ ರೂಪದ ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ 4 ದಿನಸಿ ಅಂಗಡಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.       ಒಟ್ಟಾರೆ 26 ಔಷಧಿ ಮಳಿಗೆ, 64 ದಿನಸಿ ಅಂಗಡಿ ಹಾಗೂ 14 ನ್ಯಾಯ ಬೆಲೆ ಅಂಗಡಿಗಳನ್ನು ತಪಾಸಣೆ ಮಾಡಲಾಗಿದೆ. ತಪಾಸಣೆ ಸಂದರ್ಭದಲ್ಲಿ ಮೆಡಿಕಲ್ ಸ್ಟೋರ್ ಗಳಿಂದ 7500…

Read More

ತುಮಕೂರು:       ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಗಣನೀಯವಾಗಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 20ಕ್ಕಿಂತ ಹೆಚ್ಚು ಕೋವಿಡ್ ಸಕ್ರಿಯ ಸೋಂಕಿತರಿರುವ ಗ್ರಾಮಗಳನ್ನು ರೆಡ್ ಝೋನ್ ಎಂದು ಗುರುತಿಸಿ ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.       ಪ್ರತಿ ಗ್ರಾಮಗಳಲ್ಲಿ ಕೋವಿಡ್ ಸೋಂಕಿನ ನಿಗ್ರಹಕ್ಕಾಗಿ ಹೆಚ್ಚು 20ಕ್ಕಿಂತ ಹೆಚ್ಚು ಪ್ರಕರಣಗಳಿರುವ ಗ್ರಾಮಗಳನ್ನು ರೆಡ್‍ಝೋನ್ (ಕೆಂಪು ವಲಯ) ಪ್ರದೇಶವೆಂದು ಹಾಗೂ 11ಕ್ಕಿಂತ ಹೆಚ್ಚು 20ಕ್ಕಿಂತ ಕಡಿಮೆ ಸೋಂಕಿತರಿರುವ ಗ್ರಾಮಗಳನ್ನು ಹಾಟ್ ಸ್ಪಾಟ್ ಪ್ರದೇಶಗಳೆಂದು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದ್ದಾರೆ.        ಕೆಂಪುವಲಯ ಹಾಗೂ ಹಾಟ್ ಸ್ಪಾಟ್ ವಲಯದ ಗ್ರಾಮಗಳಲ್ಲಿ ಸೋಂಕು ದೃಢಪಟ್ಟ ವ್ಯಕ್ತಿಯ ಕುಟುಂಬದ ಎಲ್ಲಾ ಸದಸ್ಯರು ಮತ್ತು ಸೋಂಕಿನ ಲಕ್ಷಣಗಳಿರುವ ಎಲ್ಲರಿಗೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡುವುದರ ಜೊತೆಗೆ ಐಇಸಿ ಕಾರ್ಯಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಬೇಕು. ಇದಲ್ಲದೆ, ಸ್ಥಳೀಯ ಪಿಹೆಚ್‍ಸಿ ವೈದ್ಯರು ಹಾಗೂ…

Read More

ತುಮಕೂರು:       ಕೊರೊನಾ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಜನಸಾಮಾನ್ಯರ ಮನೆ ಬಾಗಿಲಿಗೆ ತಾಜಾ ತರಕಾರಿ ತಲುಪಿಸಲು ತೋಟಗಾರಿಕೆ ಇಲಾಖೆ ಹಾಗೂ ಹಾಪ್‍ಕಾಮ್ಸ್ ಮುಂದಾಗಿದ್ದು, ಸಂಚಾರಿ ತರಕಾರಿ, ಹಣ್ಣು ಮಾರಾಟದ ವಾಹನಕ್ಕೆ ಚಾಲನೆ ನೀಡಲಾಯಿತು.        ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಜನಸಾಮಾನ್ಯರಿಗೆ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ತರಕಾರಿ, ದಿನ ಪದಾರ್ಥ ಖರೀದಿಸಲು ಅವಕಾಶ ನೀಡಲಾಗಿದೆ. ಆದರೆ ಜನರು ಕೊರೊನಾ ಸೋಂಕಿನ ಭೀತಿಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ನಗರದ ಜನರ ಮನೆ ಬಾಗಿಲಿಗೆ ತರಕಾರಿ ತಲುಪಿಸಲು ಸಂಚಾರಿ ತರಕಾರಿ ಮಾರಾಟ ಮಳಿಗೆ ಕಾರ್ಯಾರಂಭ ಮಾಡಿದೆ.       ಸಂಚಾರಿ ತರಕಾರಿ ಮಾರಾಟ ವಾಹನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಹಾಪ್‍ಕಾಮ್ಸ್ ಅಧ್ಯಕ್ಷ ವಿಜಯಗೌಡ, ಕಳೆದ ಬಾರಿ ಕೊರೊನಾ ಲಾಕ್‍ಡೌನ್ ಜಾರಿಯಲ್ಲಿದ್ದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸುಮಾರು 40 ರಿಂದ 45 ಸಂಚಾರಿ ತರಕಾರಿ, ಹಣ್ಣು ಮಾರಾಟ ವಾಹನಗಳನ್ನು ಬಿಡಲಾಗಿತ್ತು. ಅದರಂತೆ ಈ ಬಾರಿ ಮೊದಲ…

Read More

ತುಮಕೂರು :       ಗ್ರಾಮಗಳು ಕೊರೋನಾ ಬಾಧಿತ ಪ್ರದೇಶಗಳಾಗದಂತೆ ಸೋಂಕಿನ ಸಂಪೂರ್ಣ ನಿಯಂತ್ರಣಕ್ಕೆ ಕಟ್ಟುನಿಟ್ಟಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಸೋಂಕು ಪತ್ತೆಯಾಗಿರುವ ಗ್ರಾಮಗಳಲ್ಲಿ ಸೋಂಕಿನ ನಿಯಂತ್ರಣಕ್ಕೆ ಗರಿಷ್ಠ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂದು ನಿರ್ದೇಶಿಸಿದರು.       ಸೋಂಕಿತರನ್ನು ಕಡ್ಡಾಯವಾಗಿ ಕೊರೋನಾ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಕೊರೋನಾ ಆರೈಕೆ ಕೇಂದ್ರಕ್ಕೆ ಬರಲು ಹಿಂದೇಟು ಹಾಕುವ ಸೋಂಕಿತರಿಗೆ ಆಯಾ ಸ್ಥಳೀಯ ಜನಪ್ರತಿನಿಧಿಗಳು ಅವರಿಗೆ ಮನವರಿಕೆ ಮಾಡಿ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಲು ಹೆಚ್ಚು ಜವಾಬ್ದಾರಿವಹಿಸಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.       ಹೆಚ್ಚು ಪ್ರಕರಣಗಳಿರುವ ಗ್ರಾಮಗಳನ್ನು ಸಂಪೂರ್ಣ ಲಾಕ್ ಮಾಡಿ, ಸಾರ್ವಜನಿಕರ ಅನಗತ್ಯ ಸಂಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಈಗಾಗಲೇ ನಿಗಧಿಯಾಗಿರುವ ಮದುವೆಗಳು ನಡೆಯಲು…

Read More

 ಹುಳಿಯಾರು:       ಪಟ್ಟಣದ 4ನೇವಾರ್ಡ್ ಇಂದಿರನಗರ ಬಡಾವಣೆಯ ರಸ್ತೆಯಲ್ಲಿ ಮತ್ತು ಮನೆಯ ಮುಂಭಾಗ ಒಳಚರಂಡಿಯ ಕೊಳಚೆ ನೀರು ಮತ್ತು ಮಳೆಯ ನೀರು ನಿಂತು ಜನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸುವಂತೆ ಸ್ಥಳಿಯ ನಿವಾಸಿಗಳು ಒತ್ತಾಯಿಸಿದ್ದಾರೆ.      ಹುಳಿಯಾರು ಇಂಧಿರನಗರ ಬಡಾವಣೆಯ ಈ ರಸ್ತೆಯಲ್ಲಿ ಒಳಚರಂಡಿ ಮತ್ತು ಸಿಸಿರಸ್ತೆ ಕಾಮಗಾರಿಯನ್ನ ನಡೆಸಲಾಗಿದೆ. ಆದರೆ ಈ ರಸ್ತೆಯ ಅಕ್ಕಪಕ್ಕದಲ್ಲಿ ಒಳಚರಂಡಿ ಕಾಮಗಾರಿಯನ್ನ ನಡೆಸಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಈ ಒಳಚರಂಡಿಯಲ್ಲಿ ಹರಿಯುವ ಕೊಳಚೆ ನೀರು ಕೊನೆಗೆ ಎಲ್ಲಿಗೆ ಹೋಗಿ ಸೆರಬೇಕು ಎಂದು ದಾರಿತೊರಿಸಿಲ್ಲ.       ಅಲ್ಲದೆ ಈ ರಸ್ತೆಯಲ್ಲಿ ನಿರ್ಮಾಣವಾಗಿರುವ ಒಳಚರಂಡಿ ಕಾಮಗಾರಿಯು ಪೂರ್ತಿಗೊಳ್ಳದೆ ಸ್ವಲ್ಪಭಾಗ ಕಾಮಗಾರಿಯೆ ನಡೆದಿಲ್ಲಾ. ಪರಿಣಾಮ ನೂತನವಾಗಿ ನಿರ್ಮಾಣಗೊಂಡಿರುವ ಒಳಚರಂಡಿ ಯಿಂದ ಹರಿಯುವ ಕೊಳಚೆ ನೀರು ಕಾಮಗಾರಿ ನಡೆಯದೆ ಇರುವ ಭಾಗದ ಮನೆಗಳ ಮುಂದೆ ಮತ್ತು ತಿರುಗಾಡುವ ರಸ್ತೆಯಲ್ಲಿ ನಿಲ್ಲುತ್ತ ದುರ್ವಾಸನೆ ಬೀರುತ್ತ ಇಲ್ಲಿನ ನಿವಾಸಿಗಳಿಗೆ ಮತ್ತು ರಸ್ತೆ ಸಂಚಾರಕ್ಕೆ…

Read More

ತುಮಕೂರು:        ಜಿಲ್ಲೆಯಾದ್ಯಂತ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿಯೂ ಅಕ್ರಮವಾಗಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಗಳ ಮೇಲೆ ಮೇ.1 ರಿಂದ 19 ರವರೆಗೆ ಪೊಲೀಸರ ಕಾರ್ಯಾಚರಣೆಯಲ್ಲಿ ಅನೇಕ ಪ್ರಕರಣಗಳು ಬೆಳಕಿಗೆ ಬಂದಿವೆ. ಜೂಜಾಟದಲ್ಲಿ ಭಾಗಿಯಾಗಿದ್ದ 203 ಜೂಜುಕೋರರನ್ನು ಬಂಧಿಸಿ 37 ಪ್ರಕರಣ ದಾಖಲಿಸಿ ಪಣಕ್ಕೆ ಇಟ್ಟಿದ್ದ 2,51, 190 ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.       ಅದೇ ರೀತಿ ಮಟ್ಕಾ ದಂಧೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ 2 ಪ್ರಕರಣಗಳನ್ನು ದಾಖಲಿಸಿ ಅವರಿಂದ 8,161 ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ 71 ಜನರನ್ನು ಬಂಧಿಸಿ 286 ಲೀ. ಮಧ್ಯವನ್ನು ವಶಪಡಿಸಿಕೊಂಡು 66 ಪ್ರಕರಣ ದಾಖಲಿಸಲಾಗಿದೆ.       ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ 21 ಜನರ ಮೇಲೆ 9 ಪ್ರಕರಣ ದಾಖಲಿಸಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 6 ಕೆ.ಜಿ 451 ಗ್ರಾಂ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಯಾವುದೇ ರೀತಿಯ ಕಾನೂನು ಬಾಹಿರ…

Read More

ತುಮಕೂರು:      ಕೊರೋನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ 18-44 ವರ್ಷದ ಒಳಗಿನ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಮಂಚೂಣಿ ಕಾರ್ಯಕರ್ತರ ಇಲಾಖಾ ಮುಖ್ಯಸ್ಥರೊಂದಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸಭೆ ನಡೆಸಿದರು.        ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸಭೆ ನಡೆಸಿ ಮಾತನಾಡಿ, ಜಿಲ್ಲಾಧಿಕಾರಿಗಳು ಕೋವಿಡ್ ನಿಗ್ರಹಕ್ಕೆ ಮಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಇಲಾಖೆ ಮುಖ್ಯಸ್ಥರು ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಬೇಕು. ನಿಗಧಿ ಪಡಿಸಿದ ದಿನಾಂಕಗಳಂದು ಆಯಾ ಇಲಾಖೆ ಮುಖ್ಯಸ್ಥರು ತಮ್ಮ ವ್ಯಾಪ್ತಿಯ ಕಾರ್ಯಕರ್ತರನ್ನು ಗುರುತಿಸಿ ಚಿಟಿಟಿexuಡಿe-3 ಅನುಬಂಧ ಪತ್ರದಲ್ಲಿ ಪ್ರಮಾಣೀಕರಿಸಿ ಅವರಿಗೆ ಹತ್ತಿರದ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದರು.       ಕೊರೋನಾ ಮುಂಚೂಣಿ ಕಾರ್ಯ ಕರ್ತರೆಂದು ಗುರುತಿಸಲಾದ ಅಂಗವೈಕಲ್ಯ ಹೊಂದಿರುವ ಫಲಾನುಭವಿಗಳು ಮತ್ತು ಒಬ್ಬ ಆರೈಕೆದಾರರು, ಖೈದಿಗಳು, ಚಿತಾಗಾರ, ಸ್ಮಶಾನ, ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಸ್ವಸಹಾಯಕರಿಗೆ ಮೇ. 22ರಂದು ಕೋವಿಡ್ ಲಸಿಕೆ ಹಾಕುವ ಕಾರ್ಯ ಪೂರ್ಣಗೊಳ್ಳಬೇಕು.  …

Read More

 ತುಮಕೂರು : ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಗೋಚರಿಸಿದ್ದು, ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸದ್ಯ ಸೋಂಕಿನ ಹರಡುವಿಕೆ ಮತ್ತು ಸಾವಿನ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರಕಾರದ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಹೇಳಿದರು. ಜಿಲ್ಲೆಗೆ ನಾಲ್ಕು ಆಕ್ಸಿಜನ್ ಪ್ಲಾಂಟ್ ಅಳವಡಿಸಲು ಆದೇಶಿಸಲಾಗಿತ್ತು. ಉಸ್ತುವಾರಿ ಸಚಿವರು ಹೆಚ್ಚುವರಿಯಾಗಿ ಮಧುಗಿರಿಗೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಅಲ್ಲಿಗೆ ಒಂದು ಸೇರಿ ಒಟ್ಟು ಐದು ಪ್ಲಾಂಟ್ ಕೊಡಲಾಗುವುದು. ಅಲ್ಲದೆ 25 ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗಿದೆ. ಹೆಚ್ಚುವರಿಯಾಗಿ ಅಗತ್ಯವಿರುವ ಎಲ್ಲಾ ಔಷಧಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಆರಂಭದಲ್ಲೇ ಸೋಂಕು ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಕ್ರಮ ಕೈಗೊಂಡರೆ ಹೆಚ್ಚಿನ…

Read More

ತುಮಕೂರು:       ರಾಜ್ಯದ ಎಲ್ಲರಿಗೂ 2021ರ ವರ್ಷದ ಅಂತ್ಯದೊಳಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಪೋರ್ಟಲ್‍ನಲ್ಲಿ ಯಾರು ಎಲ್ಲಿಯಾದರೂ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬಹುದಾದ ವ್ಯವಸ್ಥೆಯಿರುವುದರಿಂದ ಬೆಂಗಳೂರಿಗರು ಅಕ್ಕಪಕ್ಕದ ನೆರೆಯ ಜಿಲ್ಲೆಯಲ್ಲಿ ಲಸಿಕೆ ಪಡೆಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಆಯಾ ಜಿಲ್ಲೆಯ ಜನರು ಜಿಲ್ಲೆಯಲ್ಲಿ ಮಾತ್ರ ಲಸಿಕೆ ಪಡೆಯುವಂತೆ ಮಾಡುವ ಸಲುವಾಗಿ ರಾಜ್ಯಮಟ್ಟದ ಪೋರ್ಟಲ್ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.       ರಾಜ್ಯದಲ್ಲಿ 2015 ವೈದ್ಯರ ನೇಮಕಾತಿ ಆದೇಶ ಆಗಿದ್ದು, ನೇಮಕಾತಿ ಆದೆ ೀಶ ನೀಡಲಾಗುತ್ತಿದೆ. ತುಮಕೂರು ಜಿಲ್ಲೆಯಲ್ಲಿಯೂ ಖಾಲಿ ಇರುವ ಎಲ್ಲಾ ಹುದ್ದೆಗಳಿಗೆ ವೈದ್ಯರು ನೇಮಕಗೊಳ್ಳಲಿದ್ದಾರೆ. ಸೋಮವಾರದಿಂದ ಬುಧವಾರದೊಳಗೆ ನೇಮಕಗೊಂಡ ವೈದ್ಯರು ಸೇವೆಗೆ ಹಾಜರಾಗಲಿದ್ದಾರೆ. ಇದರಿಂದ ವೈದ್ಯರ ಕೊರತೆ ಸಮಸ್ಯೆ ಬಗೆಹರಿಯಲಿದೆ. ಇದರ ಜೊತೆಗೆ…

Read More