Author: News Desk Benkiyabale

ತುಮಕೂರು: ರಾಜ್ಯದಲ್ಲಿ ಮತ್ತಷ್ಟು ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗ ಸೃಷ್ಠಿಸುವ ಸಲುವಾಗಿ ಮುಂಬರುವ ನವೆಂಬರ್ ತಿಂಗಳಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ನವೆಂಬರ್ 2, 3 ಮತ್ತು 4 ರಂದು ಮೂರು ದಿನಗಳ ಅರಮನೆ ಮೈದಾನದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು. ನಗರದಲ್ಲಿ ಹೊರವಲಯದ ಗಂಗಾಧರಯ್ಯ ಮೆಮೋರಿಯಲ್ ಹಾಲ್‍ನಲ್ಲಿ ಏರ್ಪಡಿಸಲಾಗಿರುವ ಉದ್ಯಮಿಯಾಗು ಉದ್ಯೋಗ ನೀಡು ಹಾಗೂ ಕೈಗಾರಿಕಾ ಅದಾಲತ್ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2010 ಮತ್ತು 2012 ರಲ್ಲಿ ಆಯೋಜಿಸಿದ್ದ ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್ ಬಹಳ ಯಶಸ್ವಿಯಾಗಿತ್ತು. ಇದರಿಂದ 15 ಲಕ್ಷ ಜನರಿಗೆ ಉದ್ಯೋಗಾವಕಾಶ ದೊರೆತ್ತಿತ್ತು. ಹಾಗಾಗಿಯೇ ಮತ್ತೆ ನವೆಂಬರ್‍ನಲ್ಲೂ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗುತ್ತಿದೆ ಎಂದರು. ಕರ್ನಾಟಕ ರಾಜ್ಯ ಕೈಗಾರಿಕೆಯಲ್ಲಿ ಹಾಗೂ ಬಂಡವಾಳ ಆಕರ್ಷಿಸುವಲ್ಲಿ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ. ಮುಖ್ಯಮಂತ್ರಿಗಳು ಮತ್ತು ನಾನು ದಾವೂಸ್‍ಗೆ…

Read More

ತುರುವೇಕೆರೆ: ದೀನ ದಲಿತರ ಆರ್ಥಿಕ ಸಬಲೀಕರಣದ ಉದ್ದೇಶ ಈಡೇರಬೇಕಾದರೆ ಸಹಕಾರ ಸಂಘಗಳ ಅವಶ್ಯಕತೆಯಿದೆ ಎಂದು ಮೈಸೂರಿನ ಉರಿಲಿಂಗಿಪೆದ್ದಿಮಠದ ಜ್ನಾನ ಪ್ರಕಾಶ್ ಸ್ವಾಮೀಜಿ ತಿಳಿಸಿದರು. ಪಟ್ಟಣದ ಮಾಯಸಂದ್ರ ರಸ್ತೆಯ ಪೆÇೀಲೀಸ್ ಠಾಣೆ ಮುಂಭಾಗ ಅಂಬೇಡ್ಕರ್ ವಿವಿದುದ್ದೇಶ ಸಹಕಾರ ಸಂಘಕ್ಕೆ ಬೌದ್ದ ಧರ್ಮದ ಪ್ರಕಾರ ಪೂಜೆ ಮಾಡುವ ಮೂಲಕ ಸಂಘಕ್ಕೆ ಅಧಿಕೃತ ಚಾಲನೆ ನೀಡಿ ಮಾತನಾಡಿದ ಅವರು ದೀನ ದಲಿತರ ಆರ್ಥಿಕ ಪ್ರಗತಿಯನ್ನು ಸಹಕಾರ ಸಂಘದ ಮೂಲಕ ಉನ್ನತೀಕರಿಸುವ ದೃಷ್ಟಿಯಿಂದ ಅಂಬೇಡ್ಕರ್ ವಿವಿದುದ್ದೇಶ ಸಹಕಾರ ಸಂಘ ಈಡೀ ರಾಜ್ಯದಲ್ಲಿ ತನ್ನ ಶಾಖೆಗಳನ್ನು ತರೆಯುತ್ತಿದೆ ಈ ನಿಟ್ಟಿನಲ್ಲಿ ತುರುವೇಕೆರೆಯಲ್ಲಿ ಸಂಘದ ನೂತನ ಶಾಖೆಯನ್ನು ತೆರದಿದ್ದು ಈ ಸಹಕಾರ ಸಂಘ ಉನ್ನತ ಮಟ್ಟಕ್ಕೆ ಬೆಳೆಯಲಿ ಕೋಟ್ಯಾಂತರ ರೂಪಾಯಿ ವಹಿವಾಟು ಮಾಡುವ ಹಂತಕ್ಕೆ ತಲುಪಲಿ. ಸಂಘಕ್ಕೆ ಅಂಬೇಡ್ಕರ್ ಅನುಯಾಯಿಗಳು ಜಾತ್ಯಾತೀತವಾಗಿ ಸಂಘದ ಸದಸ್ಯತ್ವ ಪಡೆದು ಸಂಘದಿಂದ ದೊರೆಯುವ ಸವಲತ್ತುಗಳನ್ನು ಸದ್ವಿನಿಯೋಗ ಮಾಡಿಕೊಳ್ಳಲಿ ಎಂದು ಆಶಿಸಿ ಸಂಘದ ಸದಸ್ಯರುಗಳಿಗೆ ಶುಭಕೋರಿದರು. ಸಂಘದ ಸಂಸ್ಥಾಪಕ ಅಧ್ಯಕ್ಷ ತುಂಬಲ ರಾಮಣ್ಣ ಮಾತನಾಡಿ ನಮ್ಮ…

Read More

ಗುಬ್ಬಿ: ಕಾಸು ಕರಿಮಣಿ ಕೊಟ್ಟು ಎಂಎಲ್‍ಸಿ ಆಗಿರುವ ಶರವಣನಿಗೆ ನನ್ನ ಬಗ್ಗೆ ಏನು ಗೊತ್ತಿದೆ ಇಲ್ಲಿಗೆ ಬಂದು ಗ್ರಾಮ ಪಂಚಾಯತಿ ಚುನಾವಣೆ ಗೆಲ್ಲಲಿ ಎಂದು ಶಾಸಕ ಎಸ್.ಆರ್ ಶ್ರೀನಿವಾಸ್ ಸಾವಲ್ ಹಾಕಿದರು. ಪಟ್ಟಣದ ಉಪನೊಂದಣಾಧಿಕಾರಿಗಳು ಹಾಗೂ ವಿವಾಹ ನೋಂದಣಾಧಿಕಾರಿಗಳ ನೂತನ ಕಚೇರಿ ಕಟ್ಟಡದ ಉದ್ಘಾಟನೆ ಮಾಡಿ ಮಾತನಾಡಿದ ಅವರು ಭಾಷಣದಲ್ಲಿ ಮಾತನಾಡುವಂತಹ ವೆಂಕ, ಸಿನಾ, ನಾಣಿಗೆ ಉತ್ತರ ಕೊಡುವ ಅವಶ್ಯಕತೆ ನನಗಿಲ್ಲ ಎಂದ ಅವರು ಗೌರಿಶಂಕರ್ ಒಂದು ಪಕ್ಷದಿಂದ ಒಂದು ಪಕ್ಷಕ್ಕೆ ಓಡಿಹೋಗುವ ವ್ಯಕ್ತಿ, ಆದರೆ ನಾನು 20 ವರ್ಷದಿಂದ ಇಲ್ಲಿಯೇ ಇದ್ದೇನೆ, ಗೌರಿಶಂಕರ ರಿಗೆ ಇಲ್ಲಿಗೆ ಬರಬೇಡ ಎಂದು ಯಾರಾದರೂ ಸ್ಟೇ ತಂದಿದ್ದಾರ ಇಂದು ಪ್ರಶ್ನೆ ಕೇಳಿದ ಅವರು ಭದ್ರಾವತಿಯಲ್ಲಿ 50000 ಮುಸ್ಲಿಂ ಮತದಾರರರು ಇದ್ದರು ತೆಗೆದು ಕೊಂಡಿದು 18000 ಮತ ಎಂದ ಮೇಲೆ ಇಲ್ಲಿಗೆ ಬಂದು ಏನು ಮಾಡಲು ಸಾಧ್ಯ. ಕೇವಲ ವೇದಿಕೆಯಲ್ಲಿ ಮಾತನಾಡುವುದಕ್ಕೆ ಭಾಷಣ ಮಾಡುವುದಕ್ಕೆ ಪಕ್ಷದಲ್ಲಿ ಇಟ್ಟುಕೊಂಡಿದ್ದಾರೆ ಹೊರತು ಇವರಿಂದ ಏನೂ ಆಗುವುದಿಲ್ಲ ಎಂದು ಇಬ್ರಾಹಿಂ…

Read More

ತುಮಕೂರು: ಕಳೆದ 2 ವರ್ಷಗಳಿಂದ ಕೋವಿಡ್-19 ನಿಂದಾಗಿ ಶ್ರೀ ಮಾರಿಯಮ್ಮ ದೇವಿಯ ಕರಗ ಮಹೋತ್ಸವವನ್ನು ಮಾಡಲು ಸಾಧ್ಯವಾಗಿರಲಿಲ್ಲ ಇಂದು ವಿಜೃಂಭಣೆಯಿಂದ ಶ್ರೀ ಮಾರಿಯಮ್ಮ ದೇವಿಯ ಕರಗವನ್ನು ತುಮಕೂರು ಅಮಾನಿಕೆರೆಯಿಂದ ಮಾರಿಯಮ್ಮ ನಗರ ವಸತಿ ಸಮುಚ್ಛಯ ಮತ್ತು ನೆಲೆ ದೇವಸ್ಥಾನದವರೆಗೆ ಮೆರವಣಿಗೆಯನ್ನು ಮಾಡಲಾಯಿತು. ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ತುಮಕೂರು ನಗರ ಶಾಸಕರಾದ ಜ್ಯೋತಿಗಣೇಶ್ ಮಾರಿಯಮ್ಮ ನಗರದಲ್ಲಿರುವ ಜನರು ಶ್ರಮ ಜೀವಿಗಳು ಮಂಡಿಪೇಟೆಯ ಆರ್ಥಿಕ ವಹಿವಾಟಿಗೆ ಬೇಕಾದ ಮಾನವ ಸಂಪತ್ತನ್ನು ಹೊಂದಿದ್ದು ನಿರಂತರ ಪರಿಶ್ರಮದಿಂದ ಸುಸಜ್ಜಿತವಾದ ಮನೆಗಳನ್ನು ನಗರದ ಮಧ್ಯೆ ಭಾಗದಲ್ಲಿ ಪಡೆದಿದ್ದಾರೆ ಈಗಿರುವ ಮಾರಿಯಮ್ಮ ದೇವಸ್ಥಾನ ಸರ್ವೇ ನಂ 120 ರ ಖರಾಬ್‍ನಲ್ಲಿದ್ದು ಈ ಮೂಲ ದೇವಸ್ಥಾನವನ್ನು ಅಭಿವೃದ್ಧಿಪಡಿಸಿ ಮಾರಿಯಮ್ಮ ನಗರದ ಜನರ ಧಾರ್ಮಿಕ ಆಚರಣೆಗಳಿಗೆ ಅನುಕೂಲ ಕಲ್ಪಿಸಿಕೊಡಲಾಗುವುದೆಂದರು. ಶ್ರೀ ಮಾರಿಯಮ್ಮ ಶಕ್ತಿ ಕರಗಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಸ್ಲಂ ಸಮಿತಿ ಗೌರವಧ್ಯಕ್ಷರಾದ ದೀಪಿಕಾ 59ನೇ ವರ್ಷದ ಈ ಕರಗ ವಿಶೇಷವಾಗಿದ್ದು ತುಮಕೂರಿನಲ್ಲಿ ಏಕಕಾಲದಲ್ಲಿ ಹಸಿ ಮತ್ತು ಹೂವಿನ ಮೂರು ಕರಗಗಳ…

Read More

ತುಮಕೂರು: ನಗರದ ಎಪಿಎಂಸಿ ಯಾರ್ಡ್‍ನ ಶ್ರಮಿಕರ ಭವನದಲ್ಲಿ ತುಮಕೂರು ಜಿಲ್ಲಾ ಹಮಾಲ ಮಂಡಿ ಮತ್ತು ಕೂಲಿ ಕಾರ್ಮಿಕರ ಸಂಘದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಜಗಜೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮವನ್ನು ಸಂಘದ ಗೌರವಾಧ್ಯಕ್ಷ ಬಿ.ಹೆಚ್.ಗಂಗಾಧರ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಸಂಘದ ಸದಸ್ಯರಿಗೆ ಇ-ಶ್ರಮ ಕಾರ್ಡು ವಿತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಬಿ.ಜೋತಿಗಣೇಶ್, ಶ್ರಮ ಜೀವಿಗಳಿಗೆ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಇ-ಶ್ರಮ ಕಾರ್ಡು ಜಾರಿಗೆ ತಂದಿದ್ದು, ಇದರ ಪ್ರಯೋಜನವನ್ನು ಎಲ್ಲ ಶ್ರಮಿಕರು ಪಡೆಯಬೇಕು. ಇ-ಶ್ರಮ ಕಾರ್ಡಿನಿಂದ ಭವಿಷ್ಯದಲ್ಲಿ ಶ್ರಮಜೀವಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.ಪ್ರಧಾನಮಂತ್ರಿ ಜೀವನ್ ಭೀಮಾ ವಿಮೆ ಜೊತೆಗೆ ಜಾರಿಯಲ್ಲಿರುವ ವಿಮಾ ಯೋಜನೆಗಳು ಲಾಭ ದೊರೆಯಲಿದೆ.ಮೊದಲು ಕಟ್ಟಡ ಕಾರ್ಮಿಕರಿಗೆ ಮಾತ್ರ ಲಭ್ಯವಾಗುತ್ತಿದ್ದ ಎಲ್ಲಾ ಪ್ರಯೋಜನಗಳು, ಈಗ ಸುಮಾರು 60ಕ್ಕೂ ಹೆಚ್ಚು ಕೆಲಸಗಳನ್ನು ಗುರುತಿಸಲಾಗಿದೆ. ಹಾಗಾಗಿ ಎಲ್ಲ ಶ್ರಮ ಜೀವಿಗಳಿಗೆ ಇದರ ಪ್ರಯೋಜನ ಲಭ್ಯವಾಗಲಿವೆ ಎಂದರು. ಕೊರೋನ ಸಂದರ್ಭದಲ್ಲಿ ಕೆಲವರು ಸರಕಾರದ…

Read More

ತುಮಕೂರು: ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ತುಮಕೂರು ಜಿಲ್ಲೆಯ ಯುವ ವಿಕಲಚೇತನರಿಗಾಗಿ ಜೂ.25 ರಂದು ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಸಭಾಂಗಣದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಸಮರ್ಥನಂ ಸಂಸ್ಥೆಯ ಅಖಿಲ ಭಾರತ ಉದ್ಯೋಗ ಅಧಿಕಾರಿ ಸತೀಶ್ ಕೆ. ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 18 ವರ್ಷದಿಂದ 35 ವರ್ಷದ ಒಳಗಿನ ಎಸ್.ಎಸ್.ಎಲ್.ಸಿ ಉತ್ತೀರ್ಣ, ಪಿ.ಯು.ಸಿ., ಡಿಪೆÇ್ಲಮಾ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ವಿಕಲಚೇತನರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದರು. ದೇಶಾದ್ಯಂತ ಒಟ್ಟು 48 ಉದ್ಯೋಗ ಮೇಳಗಳನ್ನು ಆಯೋಜನೆ ಮಾಡುವ ಜೊತೆಗೆ ಕನಿಷ್ಟ 10 ಸಾವಿರ ವಿಕಲಚೇತನರಿಗೆ ಉದ್ಯೋಗ ಕೊಡಿಸುವ ಉದ್ದೇಶವನ್ನು ಸಮರ್ಥನಂ ಸಂಸ್ಥೆ ಹೊಂದಿದೆ ಎಂದು ಹೇಳಿದರು. ಕೊವಿಡ್ ಸಾಂಕ್ರಾಮಿಕ ರೋಗದಿಂದಾಗಿ ಕೆಲಸ ಕಳೆದುಕೊಂಡಿರುವ ವಿಕಲಚೇತನ (ಯುವಕರಿಗೆ) ಹಾಗೂ ವಿಕಲಚೇತನ ಉದ್ಯೋಗಾಕಾಂಕ್ಷಿಗಳಿಗೆ ಮರಳಿ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಸಲುವಾಗಿ ಉದ್ಯೋಗದಾತರ ಹಾಗೂ ಯುವ ವಿಕಲಚೇತನ ಉದ್ಯೋಗಾಕಾಂಕ್ಷಿಗಳ ನಡುವೆ ಅಮೂಲ್ಯವಾದ…

Read More

ತುಮಕೂರು: ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಹೆಚ್.ಜಿ. ಚಂದ್ರಶೇಖರ್ ಅವರು ಬುಧವಾರ ನಿರ್ಗಮಿತ ಅಧ್ಯಕ್ಷ ಬಿ.ಎಸ್. ನಾಗೇಶ್ ಅವರಿಂದ ಅಧಿಕಾರ ಸ್ವೀಕರಿಸಿದರು. ನೂತನ ಅಧ್ಯಕ್ಷ ಚಂದ್ರಶೇಖರ್ ಅವರು ದಾಖಲಾತಿಗೆ ಸಹಿ ಮಾಡುವ ಮೂಲಕ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರ ವಹಿಸಿಕೊಂಡರು. ಇದೇ ವೇಳೆ ನೂತನ ಸದಸ್ಯರುಗಳಾಗಿ ಎನ್.ಹೆಚ್. ಜಗದೀಶ್, ಪಿ.ಹೆಚ್. ನಾಗರತ್ನಮ್ಮ, ಮಾಯರಂಗಣ್ಣ, ಎಲ್.ಪಿ. ಸುಧೀಂದ್ರ ಅವರೂ ಸಹ ಪದಗ್ರಹಣ ಮಾಡಿದರು. ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರು ಮತ್ತು ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಕಳೆದ 22 ತಿಂಗಳಿನಿಂದ ನಿರ್ಗಮಿತ ಅಧ್ಯಕ್ಷ ಬಾವಿಕಟ್ಟೆ ನಾಗಣ್ಣ ಮತ್ತು ಅವರ ತಂಡದವರು ತುಮಕೂರಿನ ಸಮಗ್ರ ಅಭಿವೃದ್ಧಿಗೆ ಶ್ರಮ ವಹಿಸಿ ಕೆಲಸ ಮಾಡಿದ್ದಾರೆ. ರಿಂಗ್ ರಸ್ತೆ ಸೇರಿದಂತೆ ನಗರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವಲ್ಲೂ ಸಹ ನಮ್ಮೊಂದಿಗೆ ಕೈಜೋಡಿಸಿದ್ದಾರೆ ಎಂದು ಸ್ಮರಿಸಿದರು. ಟೂಡಾಗೆ ಮತ್ತೊಬ್ಬ ಸದಸ್ಯರ ನೇಮಕ ಆಗಬೇಕಿತ್ತು. ಕೆಲ ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ಸದ್ಯದಲ್ಲೇ ಬಾಕಿ ಇರುವ ಮತ್ತೊಬ್ಬ ಸದಸ್ಯರ ನೇಮಕಾತಿ ಆಗಲಿದೆ…

Read More

ತುಮಕೂರು: ನಗರದ ಅಮಾನಿಕೆರೆ ಸರ್ವೆನಂಬರ್‍ನಲ್ಲಿ ಬರುವ ಗಾರ್ಡನ್ ರಸ್ತೆಯಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ಟೂಡಾವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಬ್ಯಾಡ್ಮಿಂಟನ್ ಮತ್ತು ಲಾನ್ ಟೆನ್ನಿಸ್ ಕೋರ್ಟುಗಳುಳ್ಳ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಗುದ್ದಲಿಪೂಜೆ ನರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಟೂಡಾ ಅಧ್ಯಕ್ಷರಾದ ಬಿ.ಎಸ್.ನಾಗಣ್ಣ ಅವರ ಮುತ್ತುವರ್ಜಿಯಿಂದಾಗಿ, ಸುಮಾರು 25-30 ಸಾವಿರ ಚದುರ ಅಡಿಗಳಲ್ಲಿ ಈ ಕ್ರೀಡಾಂಗಣಕ್ಕೆ ಚಾಲನೆ ನೀಡಲಾಗಿದೆ. ಇದು ನಗರದ ಕ್ರೀಡಾಪಟುಗಳ ಬಹುದಿನದ ಬೇಡಿಕೆಯಾಗಿತ್ತು. 90 ಲಕ್ಷದಿಂದ 1 ಕೋಟಿ ರೂಗಳಲ್ಲಿ ಕಟ್ಟಡ ಮತ್ತು ಉಳಿದ ಹಣದಲ್ಲಿ ಕೋರ್ಟುಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ಇದೊಂದು ಅಂತರರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣವಾಗಿದೆ ಎಂದರು. ನಗರದ ಕೆಲವು ಕಡೆಗಳಲ್ಲಿ ಟೆನ್ನಿಸ್ ಮತ್ತು ಬ್ಯಾಡ್ಮಿಂಟನ್ ಕೋರ್ಟುಗಳಿದ್ದರೂ ಸಾರ್ವಜನಿಕರಿಗೆ ಪ್ರವೇಶ ಇರಲಿಲ್ಲ. ಸದಸ್ಯರಾದವರಿಗೆ ಮಾತ್ರ ಆಟವಾಡಲು ಅವಕಾಶವಿದೆ.ಹಾಗಾಗಿ ಸಾರ್ವಜನಿಕರಿಗಾಗಿ ಇದನ್ನು ನಿರ್ಮಿಸಲಾಗುತ್ತಿದೆ. ಸಣ್ಣ ಪ್ರಮಾಣದ ಶುಲ್ಕ ವಿಧಿಸಿ, ನಿರ್ವಹಣೆಯನ್ನು ಟೂಡಾ ಮಾಡಲಿದೆ. ಇದರ ಜೊತೆಗೆ ಗುಬ್ಬಿ ಗೇಟ್‍ನಿಂದ ಶಿರಾಗೇಟ್‍ವರೆಗಿನ ವರ್ತುಲ ರಸ್ತೆಗೆ…

Read More

ತುಮಕೂರು: ಕಳೆದ 12 ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ, ಮೂರು ವರ್ಷಗಳಿಂದ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರೊಂದಿಗೆ ಬೇರೆತು, ಅವರ ಕಷ್ಟ ಸುಖಃಗಳಿಗೆ ಸ್ಪಂದಿಸುತ್ತಿರುವ ನನಗೆ ಮುಂಬರುವ 2023ರ ವಿಧಾನಸಭಾ ಟಿಕೇಟ್ ನೀಡುವಂತೆ ಬಿಜೆಪಿ ಮುಖಂಡ ಕೆ.ಎಂ.ಮುನಿಯಪ್ಪ ಪಕ್ಷವನ್ನು ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಲತಃ ಕೋಲಾರ ಜಿಲ್ಲೆ ಆನೆಕಲ್ ತಾಲೂಕಿನವನಾದ ನಾನು,ಬೋವಿ ಸಮುದಾಯಕ್ಕೆ ಸೇರಿದ್ದೇನೆ. ಕೊರಟಗೆರೆ ಕ್ಷೇತ್ರದ ಪುರುವರ ಗ್ರಾಮದ ಬಳಿ 50 ಎಕರೆಗೂ ಹೆಚ್ಚು ಕೃಷಿ ಜಮೀನು ಹೊಂದಿದ್ದು, ಕೃಷಿಯ ಜೊತೆಗೆ ಗುತ್ತಿಗೆದಾರನಾಗಿ, ರಿಯಲ್ ಎಸ್ಟೇಟ್ ಉದ್ಯಮಿಯಾಗಿ ಕಾರ್ಯನಿರ್ವಹಿಸುತ್ತಿರುತ್ತೇನೆ. ಕೃಷಿಕಾರ್ಯ ಗಳಿಗೆ ಕೊರಟಗೆರೆಗೆ ಬಂದು ಹೋಗುವ ಸಂದರ್ಭದಲ್ಲಿ ರಾಜಕೀಯ ಆಸಕ್ತಿಯಿಂದ ಮೀಸಲು ಕ್ಷೇತ್ರವಾಗಿರುವ ಕೊರಟಗೆರೆ ಯಿಂದ ಸ್ಪರ್ಧಿಸಲು ಅವಕಾಶ ಸಿಗಬಹುದೆ ಎಂಬ ಇಚ್ಚೆಯನ್ನು ಬಿಜೆಪಿ ಜಿಲ್ಲಾ ಮತ್ತು ತಾಲೂಕು ಮುಖಂಡರ ಬಳಿ ವ್ಯಕ್ತಪಡಿಸಿದಾಗ, ಕೊರಟಗೆರೆ ಮಂಡಲ ಅಧ್ಯಕ್ಷರಾದ ಪವನ್ ಕುಮಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಮ್ಮಜ್ಜರವರುಗಳು ನೀವು ಕ್ಷೇತ್ರದಲ್ಲಿ ಕೆಲಸ ಮಾಡಿ,ಪಕ್ಷದಿಂದ ನಿಮಗೆ ಟಿಕೇಟ್ ದೊರಕಿಸಿಕೊಡುವ…

Read More

ತುಮಕೂರು: ಗಿಡಗಳನ್ನು ನೆಟ್ಟು ಒಂದು ಹಂತದವರೆಗೆ ಪೋಷಿಸಿದರೆ ಸಾಕು. ಅವುಗಳು ಮರವಾಗಿ ಮುಂದೆ ನಮಗೆ ನೆರಳಾಗಿ ನಮ್ಮನ್ನು ನೋಡಿಕೊಳ್ಳುತ್ತವೆ ಎಂದು ವಾಸವಿ ಪೀಠದ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಕರೆ ನೀಡಿದರು. ನಗರದ ಕೋತಿತೋಪಿನ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸೋಮವಾರ ಕರ್ನಾಟಕ ಆರ್ಯ ವೈಶ್ಯ ಮಹಾಸಭಾ, ಶ್ರೀ ವಾಸವಿ ಸಂಘ ಮತ್ತು ಪ್ರೆಸ್‍ಕ್ಲಬ್ ತುಮಕೂರು ಸಹಯೋಗದಲ್ಲಿ ನಡೆದ ಪರಿಸರ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ನೋಟ್‍ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರು ಗಿಡಗಳನ್ನು ನೆಟ್ಟು ಉಳಿಸುವ ಪ್ರಯತ್ನ ಮಾಡಬೇಕು. ಶಾಲೆಗೆ ಬಂದಿರುವುದಕ್ಕೆ ಸಂತೋಷವಾಗುತ್ತಿದೆ.ವಿದ್ಯಾರ್ಥಿಗಳು ಚೆನ್ನಾಗಿ ಓದಿಕೊಂಡು ವಿದ್ಯಾವಂತರಾಗಿ ಎಂದು ಕರೆ ನೀಡಿದರು. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಸಸಿಗಳನ್ನು ನೆಟ್ಟು ಪೋಷಿಸುವುದು, ಗಿಡ-ಮರಗಳನ್ನು ಉಳಿಸುವುದು ಪ್ರತಿಯೊಬ್ಬ ನಾಗರಿಕರ ಜವಬ್ದಾರಿಯಾಗಿದ್ದು, ಎಲ್ಲರೂ ಗಿಡ-ಮರಗಳ ಸಂರಕ್ಷಣೆ ಜವಬ್ದಾರಿ ನಿಭಾಯಿಸಿದರೆ ಖಂಡಿತಾ ಹಸಿರು ತುಮಕೂರು ಸಾಧ್ಯ, ಸಸಿಗಳನ್ನು ನೆಡುವುದರ ಜತೆಗೆ ಉಳಿಸಿ ಬೆಳೆಸಬೇಕು. ಸಾಧ್ಯವೆಂದು ಆಶಿಸಿದರು. ವೃಕ್ಷಮಿತ್ರ ಪೋ.ಕೆ.ಸಿದ್ಧಪ್ಪ ಅವರು ಮರಗಳನ್ನು ಮಕ್ಕಳಂತೆ…

Read More