ತುಮಕೂರು: ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಪೂರಕವಾಗಿ ಕೈಗೊಂಡಿರುವ ಉಡಿeಥಿ ತಿಚಿಣeಡಿ ಒಚಿಟಿಚಿgemeಟಿಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿಯಲ್ಲಿ ಸೋಮವಾರ ಜರುಗಿದ ತುಮಕೂರು, ಗುಬ್ಬಿ, ಕೊರಟಗೆರೆ ಮತ್ತು ಕುಣಿಗಲ್ ತಾಲ್ಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಂಃಂಖಏ ಕಾರ್ಡ್ ವಿತರಣೆಗೆ ಕ್ರಮವಹಿಸಲು ಸೂಚಿಸಿದರು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ವಾರಕ್ಕೆ 500 ಕಾರ್ಡ್ ವಿತರಿಸಬೇಕು ಎಂದರಲ್ಲದೆ, ಒಉಓಖಇಉಂ ಸಾಮಾಜಿಕ ಪರಿಶೋಧನೆಯಲ್ಲಿ ವಸೂಲಾತಿಗೆ ಸೂಚಿಸಿರುವ ಕಂಡಿಕೆಗಳನ್ನು ತೀರುವಳಿ ಮಾಡಿಸಬೇಕು. ಒಉಓಖಇಉಂ ನಿಗಧಿತ ವೇಳೆಗೆ ಕೂಲಿ ಮೊತ್ತ ಪಾವತಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ 100 ಕೈತೋಟ ಕಾಮಗಾರಿಗಳನ್ನು ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಅನುμÁ್ಠನ ಮಾಡಬೇಕು ಎಂದು ತಿಳಿಸಿದರು. ಈಗಾಗಲೇ ಆಯ್ಕೆಯಾಗಿರುವ 2010-11 ರಿಂದ 2021-22 ರವರೆಗೆ ಮನೆಗಳನ್ನು ಅಕ್ಟೋಬರ್-2022ರೊಳಗೆ ಪೂರ್ಣಗೊಳಿಸಲು ತಿಳಿಸಿದರು. ಡಿಜಿಟಲ್ ಲೈಬ್ರರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸಕಾಲ ಮತ್ತು IPಉಖS…
Author: News Desk Benkiyabale
ತುಮಕೂರು: ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರವನ್ನು ಕೊರತೆಯಾಗದಂತೆ ವಿತರಿಸಬೇಕು, ಸೂರ್ಯಕಾಂತಿ ಸೇರಿದಂತೆ ಕೆಲ ಎಣ್ಣೆಕಾಳು ಬೀಜಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದು, ಅಂತಹವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಿ.ಡಿ.ಜಯಶ್ರೀ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಿ.ಡಿ.ಜಯಶ್ರೀ ಅವರು,ದೇಶ ಕೃಷಿ ಪ್ರಧಾನವಾಗಿದ್ದು, ಇಲ್ಲಿನ ಶೇ 80ರಷ್ಟು ಜನರು ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ.ಕರ್ನಾಟಕದಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದ್ದು, ರೈತರು ಬಿತ್ತನೆ ಕಾರ್ಯಕ್ಕೆ ಸಿದ್ದತೆಗಳನ್ನು ನಡೆಸುತ್ತಿದ್ದಾರೆ. ರಸಗೊಬ್ಬರ ಮತ್ತು ಬಿತ್ತನೆ ಬೀಜದ ಸಂಗ್ರಹಣೆಯಲ್ಲಿ ತೊಡಗಿದ್ದಾರೆ.ಇದರಿಂದಾಗಿ ಜಿಲ್ಲಾ ಕೇಂದ್ರಗಳಲ್ಲಿ ಸಹಜವಾಗಿಯೇ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಬೇಡಿಕೆ ಹೆಚ್ಚಿದೆ. ಆದರೆ ಕೆಲ ಕಾಳಸಂತೆಕೋರರು ಇದನ್ನೇ ಲಾಭ ಮಾಡಿಕೊಂಡು ರೈತರಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ದುಪ್ಪಟ್ಟು ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದರಿಂದ ರೈತರಿಗೆ…
ತುಮಕೂರು: ಹಸಿರಿನ ವನಸಿರಿಯ ನಡುವೆ ಹಕ್ಕಿಗಳ ಕಲರವದೊಂದಿಗೆ ಸೂರ್ಯನ ಮೊದಲ ರಶ್ಮಿ ಭೂರಮೆಗೆ ಮುತ್ತಿಕ್ಕುವ ಸಮಯದಲ್ಲಿ ಸುಕ್ಷೇತ್ರ ಸಿದ್ಧರಬೆಟ್ಟದ ತಪ್ಪಲಲ್ಲಿ ಓಂಕಾರದಿಂದ ಪ್ರಾರಂಭವಾದ ಸಾಮೂಹಿಕ ಯೋಗಾಭ್ಯಾಸ ಎಲ್ಲರಲ್ಲೂ ನವಚೈತನ್ಯ ತಂದುಕೊಟ್ಟಿತು. ಜಿಲ್ಲೆಯ ಕೊರಟಗೆರೆ ತಾಲೂಕು ಸುಕ್ಷೇತ್ರ ಸಿದ್ಧರಬೆಟ್ಟದ ಶ್ರೀ ರಂಭಾಪುರಿ ಖಾಸಾ ಶಾಖಾ ಮಠದ ಆವರಣದಲ್ಲಿ ಮಂಗಳವಾರ ಬೆಳಗಿನ ಜಾವ ಶ್ರೀ ಕ್ಷೇತ್ರದ ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯಸ್ವಾಮಿಗಳು, ಮಠದ ವಿದ್ಯಾರ್ಥಿಗಳು, ವಿವಿಧ ಅಧಿಕಾರಿಗಳು, ಸಂಘ ಸಂಸ್ಥೆಗಳ ಸದಸ್ಯರು ವಿವಿಧ ಯೋಗಾಸನ, ಪ್ರಾಣಾಯಾಮ ಹಾಗು ಧ್ಯಾನಾಭ್ಯಾಸ ಮಾಡುವ ಮೂಲಕ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಸಿದ್ಧರಬೆಟ್ಟದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದ ವೈದ್ಯಾಧಿಕಾರಿ ಡಾ|| ಹೆಚ್.ಬಿ. ಭವ್ಯ ಅವರು ವಿವಿಧ ಆಸನಗಳ ಭಂಗಿಗಳು ಹಾಗೂ ಆಸನಗಳನ್ನು ಅಭ್ಯಾಸ ಮಾಡುವುದರಿಂದಾಗುವ ಪ್ರಯೋಜನಗಳ ಬಗೆ ವಿವರಣೆ ನೀಡಿದರು. ಕಾರ್ಯಕ್ರಮದಲ್ಲಿ ವಜ್ರಾಸನ, ತಾಡಾಸನ, ವೃಕ್ಷಾಸನ, ಪಾದಹಸ್ತಾಸನ, ಅರ್ಧಚಕ್ರಾಸನ, ತ್ರಿಕೋನಾಸಾನ, ವಕ್ರಾಸನ, ಉಷ್ಟ್ರಾಸನ, ಶಶಾಂಕಾಸನ, ಮಕರಾಸನ, ಶಲಭಾಸನ, ಧನುರಾಸನಗಳಲ್ಲದೆ ನಾಡಿಶುದ್ಧಿ ಹಾಗೂ…
ತುಮಕೂರು ನಗರದ ರಾಷ್ಟ್ರೀಯ ಹೆದ್ದಾರಿ ಹಿರೇಹಳ್ಳಿ ನಂಜುಂಡೇಶ್ವರ ಹೋಟೆಲ್ ಸಭಾಂಗಣದಲ್ಲಿ ಡಾ.ಎಂ. ಬಿ. ನವೀನ್ ಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು. ಭಗವದ್ಗೀತೆಯ ಅಧ್ಯಾಯಗಳು ನಮ್ಮ ಸಮಾಜದವರಿಗೆ ಸುಧಾರಣೆಯಾಗಿದೆ. ಹಾಗೆ ನಮ್ಮ ರಾಜ್ಯದ ಪೋಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪೋಲೀಸರು ಅಧ್ಯಾಯದ ಸ್ಥಾನದಲ್ಲಿ ಶ್ರೇಷ್ಠ ತನವನ್ನು ಹೊಂದಿರುತ್ತಾರೆ ಎಂದು ನಿವೃತ್ತ ಹಿರಿಯ ಪೋಲೀಸ್ ಅಧಿಕಾರಿ ಶಂಕರ್ ಬಿದರಿ ತಿಳಿಸಿದರು. ನಮ್ಮ ಇಲಾಖೆ ರಾಜ್ಯದ ಸುಧಾರಣೆಗೆ ವಿವಿಧ ಭಾಗಗಳ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಲು ನಿಷ್ಠಾವಂತ ಪ್ರಾಮಾಣಿಕ ದಕ್ಷ ಕರ್ತವ್ಯ ನಿರ್ವಹಣೆಯಲ್ಲಿ ಸೇವೆ ಸಲ್ಲಿಸಿರುವ ಪೋಲೀಸರ ಕರ್ತವ್ಯಕ್ಕೆ ಸಮಾಜ ಉನ್ನತವಾದ ಸ್ಥಾನಮಾನವನ್ನು ನೀಡುತ್ತಿದೆ ಎಂದು ತಿಳಿಸಿದರು. ತುಮಕೂರು ಹಿರೇಮಠದ ಮಠಧ್ಯಕ್ಷರಾದ ಶ್ರೀ ಡಾ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡುತ್ತಾ ಕರ್ತವ್ಯವೇ ದೇವರೆಂದು ನಂಬಿರುವಂತಹ ಪೋಲೀಸ್ ಇಲಾಖೆಯನ್ನು ಭಗವದ್ಗೀತೆಯ ರೂಪದಲ್ಲಿ ಸತ್ಯ ಪ್ರಾಮಾಣಿಕ ನಿಷ್ಠೆ ಕಾರ್ಯರೂಪ ಯಶಸ್ವಿಯಾಗಲು ಈ ರೀತಿಯ ಹಿರಿಯ ನಿವೃತ್ತ ಪೋಲೀಸ್ ಅಧಿಕಾರಿಗಳಾದ ಶಂಕರ್ ಬಿದರಿ ರವರ ಮಾರ್ಗದರ್ಶನ ಹಾಗೂ ಅವರ…
ತುಮಕೂರು: ಜನಸಾಮಾನ್ಯರ ಸಾರಿಗೆಯೆಂದೇ ಕರೆಯುವ ರೈಲು ಸಾರಿಗೆ ಮತ್ತು ಹೆದ್ದಾರಿ ರಸ್ತೆಗಳನ್ನು ಆಧುನಿಕರಣ ಮಾಡುವ ಕೆಲಸಗಳನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. ನಗರದ ರೈಲ್ವೆ ನಿಲ್ದಾಣದಲ್ಲಿ ತುಮಕೂರು-ಅರಸೀಕರೆ ಮಾರ್ಗ ವಿದ್ಯುತ್ ಚಾಲಿತ ರೈಲು ಸೇವೆಗೆ ಹಸಿರು ನಿಶಾನೆ ತೋರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ತುಮಕೂರು- ಅರಸೀಕೆರೆ ಮಾರ್ಗದಲ್ಲಿ ಸಾಕಷ್ಟು ರೈಲುಗಳಿದ್ದರೂ ಜನಸಾಮಾನ್ಯರ ಓಡಾಟಕ್ಕೆ ಅನುಕೂಲವಾಗುವಂತಹ ರೈಲು ವ್ಯವಸ್ಥೆಯಿರಲಿಲ್ಲ. ಇಂದು ಕೇಂದ್ರ ಸರ್ಕಾರ ಈ ರೈಲ್ವೆ ಮಾರ್ಗವನ್ನು ವಿದ್ಯುದ್ದೀಕರಣಗೊಳಿಸಿ ಹೊಸ ಡೆಮು ರೈಲನ್ನು ಸಾಮಾನ್ಯರ ಓಡಾಟಕ್ಕೆ ಒದಗಿಸಿದೆ ಎಂದರು. ಮೀಟರ್ ಗೇಜ್ ಮತ್ತು ಬ್ರಾಡ್ ಗೇಜ್ ಮಾರ್ಗಗಳ ಕಾಮಗಾರಿಗಳನ್ನು 2018ರಲ್ಲಿ ಪ್ರಾರಂಭಿಸಿ 2022ರಲ್ಲಿ ಲೋಕಾರ್ಪಣೆ ಮಾಡುತ್ತಿರುವುದು ಅಭಿವೃದ್ಧಿಯ ವೇಗವನ್ನು ತಿಳಿಯಬಹುದಾಗಿದೆ ಎಂದರು. ಈ ಹಿಂದೆ ರೈಲು ಅತ್ಯಂತ ವಾಯುಮಾಲಿನ್ಯಕಾರಕ ಸಾರಿಗೆ ಎನ್ನುತ್ತಿದ್ದರು. ಇಂದು ರೈಲ್ವೆ ಮಾರ್ಗಗಳನ್ನು ವಿದ್ಯುದ್ದೀಕರಣಗೊಳಿಸಿ ಮಾಲಿನ್ಯರಹಿತ ಸಾರಿಗೆ ಮಾಡಲಾಗುತ್ತಿದೆ ಎಂದರಲ್ಲದೇ, ರೈಲು ಮತ್ತು ಬಸ್…
ತುಮಕೂರು: ನಗರದ ರಾಷ್ಟ್ರೀಯ ಹೆದ್ದಾರಿ ಹಿರೇಹಳ್ಳಿ ನಂಜುಂಡೇಶ್ವರ ಹೋಟೆಲ್ ಸಭಾಂಗಣದಲ್ಲಿ ಡಾ.ಎಂ. ಬಿ. ನವೀನ್ ಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು. ಭಗವದ್ಗೀತೆಯ ಅಧ್ಯಾಯಗಳು ನಮ್ಮ ಸಮಾಜದವರಿಗೆ ಸುಧಾರಣೆಯಾಗಿದೆ. ಹಾಗೆ ನಮ್ಮ ರಾಜ್ಯದ ಪೆÇಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪೆÇಲೀಸರು ಅಧ್ಯಾಯದ ಸ್ಥಾನದಲ್ಲಿ ಶ್ರೇಷ್ಠ ತನವನ್ನು ಹೊಂದಿರುತ್ತಾರೆ ಎಂದು ನಿವೃತ್ತ ಹಿರಿಯ ಪೆÇಲೀಸ್ ಅಧಿಕಾರಿ ಶಂಕರ್ ಬಿದರಿ ತಿಳಿಸಿದರು. ನಮ್ಮ ಇಲಾಖೆ ರಾಜ್ಯದ ಸುಧಾರಣೆಗೆ ವಿವಿಧ ಭಾಗಗಳ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಲು ನಿಷ್ಠಾವಂತ ಪ್ರಾಮಾಣಿಕ ದಕ್ಷ ಕರ್ತವ್ಯ ನಿರ್ವಹಣೆಯಲ್ಲಿ ಸೇವೆ ಸಲ್ಲಿಸಿರುವ ಪೆÇಲೀಸರ ಕರ್ತವ್ಯಕ್ಕೆ ಸಮಾಜ ಉನ್ನತವಾದ ಸ್ಥಾನಮಾನವನ್ನು ನೀಡುತ್ತಿದೆ ಎಂದು ತಿಳಿಸಿದರು. ತುಮಕೂರು ಹಿರೇಮಠದ ಮಠಧ್ಯಕ್ಷರಾದ ಶ್ರೀ ಡಾ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡುತ್ತಾ ಕರ್ತವ್ಯವೇ ದೇವರೆಂದು ನಂಬಿರುವಂತಹ ಪೆÇಲೀಸ್ ಇಲಾಖೆಯನ್ನು ಭಗವದ್ಗೀತೆಯ ರೂಪದಲ್ಲಿ ಸತ್ಯ ಪ್ರಾಮಾಣಿಕ ನಿಷ್ಠೆ ಕಾರ್ಯರೂಪ ಯಶಸ್ವಿಯಾಗಲು ಈ ರೀತಿಯ ಹಿರಿಯ ನಿವೃತ್ತ ಪೆÇಲೀಸ್ ಅಧಿಕಾರಿಗಳಾದ ಶಂಕರ್ ಬಿದರಿ ರವರ ಮಾರ್ಗದರ್ಶನ ಹಾಗೂ ಅವರ…
ತುಮಕೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, 10ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತಪಟ್ಟಿರುವ ದುರ್ದೈವಿಗಳನ್ನು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂದಿಕೆರೆ ಗ್ರಾಮದ ಗಿರೀಶ್ (37) ಹಾಗೂ ಮಾನ್ಯ (17) ಎಂದು ಗುರುತಿಸಲಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರ ಪೈಕಿ 10ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಗುಬ್ಬಿ ಮತ್ತು ತುಮಕೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ದು ದಾಖಲಿಸಲಾಗಿದೆ. ಗಾಯಗೊಂಡಿರುವವರಲ್ಲಿ ರಾಕೇಶ್ (21) ಎಂಬುವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಇಂದು ಬೆಳಿಗ್ಗೆ ಕಂದಿಕೆರೆ ಗ್ರಾಮದಿಂದ ಗಿರೀಶ್ ಮತ್ತು ಮಾನ್ಯ ಅವರು ಕಾಲೇಜು ದಾಖಲಾತಿಗಾಗಿ ತುಮಕೂರಿನತ್ತ ಕಾರಿನಲ್ಲಿ ಬರುತ್ತಿದ್ದರು. ಮಾರ್ಗಮಧ್ಯೆ ಗುಬ್ಬಿ ಸಮೀಪ ದೊಡ್ಡಗುಣಿ ಬಳಿ ಕಾರು ಬರುತ್ತಿದ್ದಾಗ ತುಮಕೂರು ಕಡೆಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ರಸ್ತೆ ವಿಭಜಕ ದಾಟಿ ಕಾರಿಗೆ ಅಪ್ಪಳಿಸಿದೆ. ಬಸ್ ಡಿಕ್ಕಿ ಹೊಡೆದ…
ತುಮಕೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಿಮಿತ್ತ ಮಾಯಸಂದ್ರ ಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರು ದಲಿತರ ಮನೆಯಲ್ಲಿ ಉಪಹಾರ ಸೇವಿಸಿದರು. ಮಾಯಸಂದ್ರದ ಆದಿಚುಂಚಗಿರಿಯ ಮಠದ ಶಾಲೆಯ ಆಶ್ರಮದಲ್ಲಿ ಶಾಸಕ ಮಸಾಲೆ ಜಯರಾಂ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಉಪವಿಭಾಗಾಧಿಕಾರಿಗಳಾದ ಅಜಯ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ವಾಸ್ತವ್ಯ ಹೂಡಿದ್ದರು. ಅಧಿಕಾರಿಗಳೊಂದಿಗೆ ಗ್ರಾಮದ ಸುತ್ತಾಟ ನಡೆಸಿದ ಸಚಿವ ಅಶೋಕ್ ಅವರು ಬೆಳಿಗ್ಗೆ ಮಾಯಸಂದ್ರದ ಗೂಡಂಗಡಿಗೆ ತೆರಳಿ ಚಹಾ ಸೇವಿಸಿದರು. ನಂತರ ದಲಿತ ಕೇರಿಗೆ ತೆರಳಿದ ಸಚಿವರು ದಲಿತ ಕುಟುಂಬದ ವಿನೋದ್ ಎಂಬುವರ ಮನೆಗೆ ತೆರಳಿ ಅವರ ಮನೆಯಲ್ಲಿ ಸಿದ್ದಪಡಿಸಿದ್ದ ಅಕ್ಕಿರೊಟ್ಟಿ, ಹುಚ್ಚೆಳ್ಳು ಚಟ್ನಿ, ಕೇಸರಿಬಾತ್, ಉಪ್ಪಿಟ್ಟು ಹಾಗೂ ಚಿತ್ರಾನ್ನ ಸವಿದರು. ದಲಿತರ ಕೇರಿಗೆ ರಸ್ತೆ ನಿರ್ಮಾಣ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್ ಅವರು, ಈ ದಲಿತ ಕೇರಿಯಲ್ಲಿ ಸುಮಾರು 80 ಮನೆಗಳಿದ್ದು, ರಸ್ತೆ ಅಭಿವೃದ್ಧಿಯಾಗದಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ಈ…
ತುಮಕೂರು: ಮೊಸರಲ್ಲಿ ಕಲ್ಲು ಹುಡುಕುವುದು, ಟೀಕೆ ಮಾಡುವುದೇ ವಿರೋಧ ಪಕ್ಷಗಳ ಕೆಲಸ. ಪಠ್ಯ ಪುಸ್ತಕಗಳ ಪರಿಷ್ಕರಣೆ ವಿಚಾರದಲ್ಲಿ ನೂರಕ್ಕೆ ನೂರರಷ್ಟು ರಾಜಕಾರಣ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಇಂದಿಲ್ಲಿ ವಾಗ್ದಾಳಿ ನಡೆಸಿದರು. ಕೆಲವರಿಗೆ ಸರ್ಕಾರದ ನೆಗೆಟಿವ್ ಹುಡುಕುವುದೇ ಕಾಯಕವಾಗಿದೆ. ಅವರಿಗೆ ಬೇರೆ ಕೆಲಸ ಇಲ್ಲ. ಸರ್ಕಾರ ಮಾಡಿರುವ ಒಳ್ಳೆಯ ಕೆಲಸಗಳನ್ನು ಅವರು ನೋಡುವುದೇ ಇಲ್ಲ ಎಂದು ವಿಪಕ್ಷಗಳ ವಿರುದ್ಧ ಹರಿಹಾಯ್ದರು. ಮಾಯಸಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಪಠ್ಯ ಪುಸ್ತವನ್ನು ಇನ್ನು ಯಾರು ಓದೇ ಇಲ್ಲ. ಆದರೂ ಕುವೆಂಪು ರವರ ವಿಚಾರವನ್ನು ಮುಂದಿಟ್ಟುಕೊಂಡು ದೊಡ್ಡ ಸದ್ದು ಮಾಡುತ್ತಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಕುವೆಂಪು ಅವರ ವಿಚಾರಕ್ಕೆ ಸಂಬಂಧ ಪಟ್ಟ ಪಠ್ಯವನ್ನು 8 ಪ್ಯಾರಕ್ಕೆ ಮಾಡಿದ್ದೆವು. ಆದರೆ ಸಿದ್ದರಾಮಯ್ಯ ಸರ್ಕಾರ ಬಂದ ಅದರಲ್ಲಿ ಒಂದು ಪ್ಯಾರ ಕಡಿತ ಮಾಡಿ 7 ಪ್ಯಾರಕ್ಕೆ ಇಳಿಸಿದ್ದರು. ಆದರೆ ಮತ್ತೆ ಬಿಜೆಪಿಯ ಬಿ.ಸಿ. ನಾಗೇಶ್ ಶಿಕ್ಷಣ ಸಚಿವರಾದ ಮೇಲೆ ಕುವೆಂಪುರವರ ಪಠ್ಯವನ್ನು…
ತುಮಕೂರು: ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಮಾಯಸಂದ್ರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ ಗ್ರಾಮ ವಾಸ್ತವ್ಯದ ಸವಿ ನೆನಪಿಗಾಗಿ ಮಾಯಸಂದ್ರ ಗ್ರಾಮದ ಅಭಿವೃದ್ಧಿ ಕೆಲಸಕ್ಕೆ 1 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಕಂದಾಯ ಸಚಿವರಾದ ಆರ್. ಆಶೋಕ್ ಅವರು ಇಂದಿಲ್ಲಿ ಘೋಷಿಸಿದರು. ತುರುವೇಕೆರೆ ತಾಲ್ಲೂಕು ಮಾಯಸಂದ್ರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ನಡೆಯಲಿರುವ ಗ್ರಾಮ ಸಭೆಯಲ್ಲಿ ಒಂದು ಕೋಟಿ ರೂ.ಗಳನ್ನು ಯಾವ ಕಾಮಗಾರಿಗೆ ಬಳಸಿಕೊಳ್ಳಬೇಕು ಎಂಬುದನ್ನು ತೀರ್ಮಾನಿಸಲಾಗುವುದು ಎಂದರು. ರಾಜ್ಯದ ಜನತೆ ಪಿಂಚಣಿ, ವಿಧವಾ ವೇತನ, ವೃದ್ಧಾಪ್ಯ ವೇತನ ಮುಂತಾದ ಯೋಜನೆಗಳಿಗೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರ ಕಚೇರಿಗೆ ಅಲೆಡಾಡಬೇಕಿತ್ತು. ಗ್ರಾಮಸ್ಥರ ಈ ಅಲೆದಾಟವನ್ನು ತಪ್ಪಿಸಲೆಂದೇ ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ಗ್ರಾಮದ ಮನೆ ಬಾಗಿಲಿಗೆ ಕರೆತರುವ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಕಂದಾಯ ಇಲಾಖೆಯಲ್ಲಿ ಇದೊಂದು ಕ್ರಾಂತಿಕಾರಕ ಪರಿವರ್ತನೆ ತರಲಾಗಿದೆ. ಇದಲ್ಲದೆ ಜಿಲ್ಲಾಧಿಕಾರಿಗಳು ಪ್ರತಿ…











