ತುಮಕೂರು: ಸರಕಾರಿ ಶಾಲೆಗಳು ಸಶಕ್ತವಾದರೆ, ಕಾನ್ವೆಂಟ್ ಪಿಡುಗಿನಿಂದ ಜನಸಾಮಾನ್ಯರನ್ನು ರಕ್ಷಿಸಬಹುದಾಗಿದೆ ಎಂದು ತುಮಕೂರು ಮೇಯರ್ ಬಿ.ಜಿ.ಕೃಪ್ಷಪ್ಪ ಅಭಿಪ್ರಾಯ ಪಟ್ಟಿದ್ದಾರೆ. ನಗರದ ಶಿರಾಗೇಟ್ ಉತ್ತರ ಬಡಾವಣೆಯ ಹಿರಿಯ ಮಾದರಿ ಪಾಠಶಾಲೆ ಮಕ್ಕಳಿಗೆ ಕೆ.ಎನ್.ಆರ್.ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿದ್ದ ಲೇಖನ ಸಾಮಗ್ರಿಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ದಾನಿಗಳು, ಸಂಘ ಸಂಸ್ಥೆಗಳು ಇಂತಹ ಸರಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಕೈಜೋಡಿಸಿದರೆ ದೇಶಕ್ಕೆ ಉತ್ತಮ ಪ್ರಜೆಗಳನ್ನು ಕೊಡುಗೆಯಾಗಿ ನೀಡಬಹುದೆಂದರು. ಸರಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದೆ. ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂಗಳನ್ನು ನೀಡುವುದರ ಜೊತೆಗೆ, ಮಧ್ಯಾಹ್ನದ ಬಿಸಿಯೂಟ, ಹಾಲು ಇನ್ನಿತರ ಸವಲತ್ತುಗಳನ್ನು ನೀಡಿ ವಿದ್ಯೆಗೆ ಪೆÇ್ರೀತ್ಸಾಹ ನೀಡುವ ಕೆಲಸ ಮಾಡುತ್ತಿದೆ. ಹಾಗಾಗಿ ಮಕ್ಕಳ ಗೈರುಹಾಜರಿ ಕಡಿಮೆಯಾಗಿದೆ. ಸದರಿ ಶಾಲೆಯ ಅಭಿವೃದ್ದಿಗೆ ಪಾಲಿಕೆ ವತಿಯಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ದೊರಕಿಸಿಕೊಡುವ ಭರವಸೆಯನ್ನು ಮೇಯರ್ ಕೃಷ್ಣಪ್ಪ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿದ ಉತ್ತರ ಬಡಾವಣೆ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಜಬೀನಾ ಮಾತನಾಡಿ,ಬಡ ಮಕ್ಕಳೇ ಒದುವ ಈ…
Author: News Desk Benkiyabale
ತುಮಕೂರು: ಯುವ ಪೀಳಿಗೆಗೆ ದೇಶವನ್ನು ಮುನ್ನಡೆಸುವ ಜವಾಬ್ದಾರಿ ಹೊರಿಸುವಾಗ ಅವರಿಗೆ ಯಾವ ರೀತಿಯ ಶಿಕ್ಷಣ ನೀಡಬೇಕು ಎಂಬ ಆಲೋಚನೆ ಅಗತ್ಯ. ಅವರಲ್ಲಿ ದೇಶಾಭಿಮಾನ, ಸಾಮಾಜಿಕ ಕಾಳಜಿ ತುಂಬುವ ಶಿಕ್ಷಣ ಕೊಡಬೇಕಾಗಿದೆ. ಈ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದವರ ಕೊಡುಗೆ, ಆಶಯಗಳನ್ನು ಪರಿಚಯಿಸಬೇಕಾಗಿದೆ. ತಾನು ಈ ದೇಶಕ್ಕಾಗಿ, ಈ ಸಮಾಜಕ್ಕಾಗಿ ಏನು ಮಾಡಬೇಕೆಂಬ ಚಿಂತನೆಯ ಶಿಕ್ಷಣವನ್ನು ನಮ್ಮ ಮಕ್ಕಳಿಗೆ ಕೊಡಬೇಕು ಎಂದು ಕುಡಚಿ ಶಾಸಕ ಪಿ.ರಾಜೀವ್ ಹೇಳಿದರು. ನಗರದ ಕನ್ನಡ ಭವನದಲ್ಲಿ ಶುಕ್ರವಾರ ಸಂಜೆ ಚಿಂತಕರ ಚಾವಡಿ ಏರ್ಪಡಿಸಿದ್ದ ಪಠ್ಯ ರಾಜಕಾರಣ ಕಾಳಜಿಯೇ? ಲೆಕ್ಕಾಚಾರವೇ? ಎಂಬ ವಿಷಯ ಕುರಿತ ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ನಮ್ಮ ದೇಶದ ಆಸ್ಮಿತೆ, ಸಂಸ್ಕøತಿ, ಆಚಾರ ವಿಚಾರಗಳನ್ನು ಅವಹೇಳನ ಮಾಡಿದ, ಇತಿಹಾಸದ ಸತ್ಯ ಮರೆಮಾಚಿದ್ದ ಈವರೆಗಿನ ಪಠ್ಯ ಸಮಿತಿಗಳು ಮಾಡಿದ್ದ ರಾದ್ಧಾಂತ ಈಗ ಎಲ್ಲರಿಗೂ ಗೊತ್ತಾಗಿದೆ. ನಮ್ಮ ಮಕ್ಕಳು ಯಾವ ರೀತಿಯ ಶಿಕ್ಷಣ ಕಲಿಯಬೇಕು ಎಂದು ಪೋಷಕರು ಚಿಂತಿಸುವತಾಗಿದೆ ಎಂದರು. ಸನಾತನ ಧರ್ಮದ ಭಾರತ…
ತುಮಕೂರು: ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ತುಮಕೂರು ನಗರದ ವಿದ್ಯಾವಾಹಿನಿ ಸ್ವತಂತ್ರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಸಹನ ಜಿಲ್ಲೆಗೆ ಟಾಪರ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600ಕ್ಕೆ 595 ಅಂಕಗಳನ್ನು ಪಡೆದಿರುವ ಸಹನ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ಆರನೇ ರ್ಯಾಂಕ್ ಗಳಿಸಿ ಕೀರ್ತಿ ತಂದಿದ್ದಾರೆ. ಈಕೆಯು ತುಮಕೂರಿನ ಕುವೆಂಪು ನಗರದ ರಮೇಶ್ ಮತ್ತು ಶಶಿಲಕಾ ದಂಪತಿಗಳ ಪುತ್ರಿಯಾಗಿದ್ದು, ಇವರ ಸಾಧನೆಗೆ ನಗರ ಶಾಸಕ ಜ್ಯೋತಿಗಣೇಶ್ ಅಭಿನಂದನೆ ತಿಳಿಸಿದ್ದಾರೆ.
ತುಮಕೂರು: ಗುಜರಾತ್ನಲ್ಲಿ ನಡೆದ ಅಥ್ಲೇಟಿಕ್ಸ್ ಫೆಡರೇಶನ್ ಬಾಲಕರ ವಿಭಾಗದಲ್ಲಿ 110 ಮೀಟರ್ ಓಟವನ್ನು ಕೇವಲ 14.2 ಸೆಕೆಂಡ್ಗಳಲ್ಲಿ ಓಡಿ ಗುರಿಮುಟ್ಟಿ ಚಿನ್ನದ ಪದಕ ಪಡೆದು ಕೊಲಂಬಿಯದಲ್ಲಿ ನಡೆಯಲಿರುವ ವಿಶ್ವಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಭಾರತವನ್ನು ಪ್ರತಿನಿಧಿಸುವ ಅವಕಾಶವನ್ನು ತುಮಕೂರು ನಗರದ ಮಂಜುನಾಥ ಪುತ್ರ ಕೃಷಿಕ್ ಪಡೆದು ನಾಡಿಗೆ ಕೀರ್ತಿಯನ್ನು ತಂದಿದ್ದಾರೆ. ವಿಶ್ವಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ತುಮಕೂರು ನಗರದ ಕೃಷಿಕ್ ಅವರನ್ನ ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಮುಂಜಾನೆ ಗೆಳೆಯರ ಬಳಗದ ವತಿಯಿಂದ ಅಂತರಾಷ್ಟ್ರೀಯ ಹಿರಿಯ ಕ್ರೀಡಾಪಟು ಟಿ.ಕೆ ಆನಂದ್ ಮತ್ತು ಸದಸ್ಯರು ಅಭಿನಂದಿಸಿದರು. ಪತ್ರಕರ್ತ ಎಸ್ ನಾಗಣ್ಣ ಮಾತನಾಡಿ ಶತಮಾನಗಳಿಂದಲೂ ತುಮಕೂರು ನಗರದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಅನೇಕ ದಿಗ್ಗಜರು ಇಲ್ಲಿ ಇದ್ದಾರೆ 12 ವರ್ಷಗಳಿಂದ ತುಮಕೂರು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದೆ ಇಂದಿನ ಮಕ್ಕಳು ಐಎಎಸ್ ಐಪಿಎಸ್ ಮತ್ತು ಇಂಜಿನಿಯರಿಂಗ್ ಪದವಿಗಳನ್ನು ಪಡೆದು ಉನ್ನತ ಹುದ್ದೆಗಳಿಗೆ ಆಸೆ ಪಡುತ್ತಿರುವ ಕಾಲಘಟ್ಟದಲ್ಲಿ ಕ್ರೀಡಾ ಕ್ಷೇತ್ರವನ್ನು ತನ್ನ ಉಸಿರಾಗಿಸಿಕೊಂಡು…
ಕೊರಟಗೆರೆ: ರೈತಪರ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಣ್ಣ ವಿರುದ್ದ ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್ ನೀಡಿರುವ ನಿಂದನೆಯೇ ಹೇಳಿಕೆ ಖಂಡನೀಯ. ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್ ತಕ್ಷಣ ಜೆಡಿಎಸ್ ಕಾರ್ಯಕರ್ತರ ಕ್ಷಮೆಯಾಚನೆ ಮಾಡಬೇಕು ಎಂದು ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಆಗ್ರಹ ಮಾಡಿದರು. ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಾತ್ಯಾತೀತಾ ಜನತಾದಳ ಪಕ್ಷದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು. ಗುಬ್ಬಿ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಗೆದ್ದು ಸಚಿವ ಸ್ಥಾನ ಅನುಭವಿಸಿ ಈಗ ಪಕ್ಷದ ವರಿಷ್ಠರ ವಿರುದ್ದವಾಗಿ ಹೇಳಿಕೆ ನೀಡಿರುವುದು ಶೋಭೆ ತರುವುದಿಲ್ಲ. ಪಕ್ಷ ಬಿಡುವುದು ಅವರ ವೈಯಕ್ತಿಕ ವಿಚಾರ. ಆದರೇ ಪಕ್ಷವನ್ನು ನಿಂದನೆ ಮಾಡಿರುವುದೇ ಖಂಡನೀಯ. ರಾಜ್ಯದ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಕ್ಷಮೆ ಕೇಳುಬೇಕು ಎಂದು ಒತ್ತಾಯ ಮಾಡಿದರು. ತುಮಕೂರು ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಮಹಾಲಿಂಗಪ್ಪ ಮಾತನಾಡಿ ತುಮಕೂರು ಜಿಲ್ಲೆಯ ನಾಯಕತ್ವವನ್ನು ಜೆಡಿಎಸ್ ಪಕ್ಷದ ವರೀಷ್ಠರು ಶ್ರೀನಿವಾಸ್ಗೆ ನೀಡಿ ಗೌರವ ನೀಡಿದ್ದಾರೆ. ಪಕ್ಷದ ಚಿಹ್ನೆಯ ಮೂಲಕ ಶಾಸಕರಾಗಿ…
ತುಮಕೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ವಿವಿಧ ಬಡಾವಣೆಗಳ ಪ್ರಾಥಮಿಕ ಶಾಲೆಗಳ ಆವರಣದಲ್ಲಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ದುಸ್ಥಿತಿಯಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ಗುರುತಿಸಿ ಸುಸಜ್ಜಿತವಾಗಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು. ನಗರದ 20ನೇ ವಾರ್ಡಿನ ಬಿ.ಎ.ಗುಡಿ ಪಾಳ್ಯದ ಸರ್ಕಾರಿ ಶಾಲೆ ಆವರಣದಲ್ಲಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡ ಉದ್ಘಾಟಿಸಿ, ಶಾಲಾ ಆವರಣದಲ್ಲೇ ಅಂಗನವಾಡಿಗಳನ್ನು ಸ್ಥಾಪಿಸಿದರೆ ಮಕ್ಕಳ ಮುಂದಿನ ಶಿಕ್ಷಣಕ್ಕೆ ಸೂಕ್ತ ವಾತಾವರಣ ರೂಪಿಸಿದಂತಾಗುತ್ತದೆ. ಶಾಲೆಯಿಂದ ದೂರ ಅಂಗನವಾಡಿಗಳು ಇರುವುದಕ್ಕೆ ಬದಲು ಶಾಲಾವರಣದಲ್ಲಿ ಇದ್ದರೆ ಉತ್ತಮ ಎಂದರು. ನಗರದ ಅನೇಕ ಕಡೆ ಅಂಗನವಾಡಿ ಕಟ್ಟಡಗಳು ದುಸ್ಥಿತಿಯಲ್ಲಿವೆ. ಅಗತ್ಯ ಸೌಕರ್ಯಗಳಿಲ್ಲದ ಕೊಟ್ಟಿಗೆಯಂತಿವೆ. ಅಂತಹ ಕಡೆ ಉತ್ತಮ ಕಟ್ಟಡ ಕಟ್ಟಲಾಗುವುದು ಎಂದು ಹೇಳಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ 5-6 ಕೋಟಿ ರೂ.ಗಳನ್ನು ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಬಳಸಲಾಗುತ್ತದೆ. ಪ್ರತಿ ಕಟ್ಟಡಕ್ಕೆ ಸುಮಾರು 16 ಲಕ್ಷ ರೂ. ವೆಚ್ಚವಾಗುತ್ತದೆ ಎಂದು ಶಾಸಕರು ಹೇಳಿದರು. ಮೇಯರ್ ಬಿ.ಜಿ.ಕೃಷ್ಣಪ್ಪ, ಪಾಲಿಕೆ ಸದಸ್ಯರಾದ ಶ್ರೀನಿವಾಸ್, ನರಸಿಂಹಮೂರ್ತಿ, ಟೂಡಾ ಸದಸ್ಯ…
ತುಮಕೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಗ್ರಾಮದಲ್ಲಿ ಮತ್ತು 19, 2022 ರಂದು ಎರಡು ದಿನಗಳ ಕಾಲ ನಡೆಯಲಿರುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ’ ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಆರ್. ಅಶೋಕ್ ಅವರು ಭಾಗವಹಿಸಲಿದ್ದು, ಕಾರ್ಯಕ್ರಮದ ವಿವರಗಳು ಈ ಕೆಳಕಂಡಂತಿದೆ. ದಿನಾಂಕ 18-06-2022ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಕಂದಾಯ ಸಚಿವರ ಆಗಮನ ಮತ್ತು ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ, 11.10 ರಿಂದ 11.30 ರವರೆಗೆ ದೇವಸ್ಥಾನದಿಂದ ಕಾರ್ಯಕ್ರಮದ ಸ್ಥಳಕ್ಕೆ ಸಚಿವರ ಆಗಮನ(ಎತ್ತಿನ ಗಾಡಿ/ಟ್ರ್ಯಾಕ್ಟರ್ ಮೂಲಕ), 11.30 ರಿಂದ 12 ಗಂಟೆ ಆರೋಗ್ಯ ಶಿಬಿರ ಉದ್ಘಾಟನೆ ಮತ್ತು ವಿವಿಧ ಮಳಿಗೆಗಳ ವೀಕ್ಷಣೆ, 12 ಗಂಟೆ ವೇದಿಕೆಗೆ ಆಗಮನ, ನಂತರ ಪ್ರಾರ್ಥನೆ, ನಾಡಗೀತೆ, ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿ ಶಾಸಕರು ತುರುವೇಕೆರೆ ಅವರಿಂದ. ನಂತರ 12.20 ರಿಂದ 12.25 ಮಾನ್ಯ ಕಂದಾಯ ಸಚಿವರಿಂದ ಕಾರ್ಯಕ್ರಮ ಉದ್ಘಾಟನೆ ಮತ್ತು ಉದ್ಘಾಟಕರ ಭಾಷಣ, ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ವಿವಿಧ ಇಲಾಖೆಗಳಿಂದ ಸವಲತ್ತುಗಳ ವಿತರಣೆ, ಮಧ್ಯಾಹ್ನ…
ಚಿಕ್ಕನಾಯಕನಹಳ್ಳಿ: ಬೌದ್ಧ ಧರ್ಮಕ್ಕೆ ಸೇರಿದ್ದರೂ ಪರವಾಗಿಲ್ಲ ಕ್ರಿಶ್ಚಿಯನ್ ಆಗಬಾರದು ಎಂದು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದರು. ಅವರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟವರ್ಗದ ಹಿತರಕ್ಷಣಾ ಸಮಿತಿಯ ಸಭೆಯಲ್ಲಿ ಈ ರೀತಿ ಹೇಳಿದರು. ಸಭೆಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಮಂದಿ ಹಾಜರಾಗಿದ್ದರು ಗಮನಿಸಿದ ಅವರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಇದು ಸಭೆಯ ಅಥವಾ ಸಮಾರಂಭನ ಎಂದು ಪ್ರಶ್ನಿಸುತ್ತಾ ಕೇವಲ ಮುಖಂಡರುಗಳಿಗೆ ಮಾತ್ರ ಸಭೆಗೆ ಹಾಜರಾಗಲು ಸೂಚಿಸಬೇಕು ಇದು ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮಾಜಗಳಿಗೆ ಸೇರಿದ ಕುಂದು ಕೊರತೆಯ ಸಭೆ ಇಲ್ಲಿ ಖಾಸಗಿ ವೈಯಕ್ತಿಕ ಅಭಿಪ್ರಾಯಗಳು ಹೆಚ್ಚು ಬರುವುದು ಬೇಡ ಎಂದು ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಮುಖಂಡರಿಗೆ ಅಷ್ಟೇ ಆಹ್ವಾನ ನೀಡಬೇಕು ಎಂದು ಖಡಕ್ಕಾಗಿ ಅಧಿಕಾರಿಗೆ ಸೂಚಿಸಿದರು. ದುಗಡಿಹಳ್ಳಿ ಗ್ರಾಮ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಮನಸಾರೆ ಜಾಬ್ ಕಾರ್ಡ್ ಬಳಸಿಕೊಂಡು ಅವರಿಗೆ ಬೇಕಾದ ಸದಸ್ಯರುಗಳಿಗೆ ಮತ್ತು ಅವರ ಹಿಂಬಾಲಕರಿಗೆ ಉದ್ಯೋಗ ಖಾತ್ರಿ ಕಾಮಗಾರಿ ನೀಡುತ್ತಿರುವ ಬಗ್ಗೆ ಹೆಸರಹಳ್ಳಿ…
ತುಮಕೂರು: ಮಹಾನಗರಪಾಲಿಕೆಯ ವಾರ್ಡ್ ನಂ.17ರ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ ರಾಮ್ಜೋಯಿಷ್ನಗರ ಮತ್ತು ಅಮರಜ್ಯೋತಿನಗರ, ಗೂಡ್ಶೆಡ್ ಕಾಲೋನಿಯಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಮತ್ತು ಶಾಂತಿನಗರ ರೈಲ್ವೆ ಅಂಡರ್ಪಾಸ್ ನಿಂದ ಗಾಂಧಿನಗರಕ್ಕೆ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ರವರು ಭೂಮಿ ಪೂಜೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಮಾನ್ಯ ಶಾಸಕರು ಈ ಭಾಗದಲ್ಲಿ ಸದರಿ ಕಾಮಗಾರಿಗಳು ರೂ.80.00 ಲಕ್ಷಗಳ ವೆಚ್ಚದಲ್ಲಿ ನಡೆಯಲಿದ್ದು, ಸುಮಾರು ವರ್ಷಗಳಿಂದ ಈ ಭಾಗದಿಂದ ಗಾಂಧಿನಗರ, ಟೌನ್ಹಾಲ್ ಕಡೇ ಹೋಗಬೇಕಾದರೆ ಇರೋದಕ್ಕೆ ಒಂದೇ ರಸ್ತೆ ಇರುವುದರಿಂದ ರೈಲ್ವೇ ನಿಯಮದಂತೆ ಮಾಡಬೇಕು ಎಂದು ನಿರ್ಧರಿಸಲಾಯಿತು. ಕೆಲವು ಜಾಗದ ತಕರಾರಿನಿಂದಾಗಿ ಸುಮಾರು 3 ವರ್ಷಗಳಿಂದ ಕೆಲಸ ಆರಂಭಿಸಲು ಸಾಧ್ಯವಾಗಿರುವುದಿಲ್ಲ. ಈ ವಿಚಾರವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವೊಲಿಸಿ ಹಾಗೂ ಪ್ರಸ್ತುತ ಸಂಬಂಧಪಟ್ಟ ಜಾಗದ ಮಾಲೀಕರು ಸಹ ಸ್ವಾಧೀನಪಡಿಸಿಕೊಳ್ಳಲು ಒಪ್ಪಿದ್ದಾರೆ. ಈ ವಿಚಾರವಾಗಿ ಈ ಭಾಗದಲ್ಲಿ ಸಾಕಷ್ಟು ಮುಖಂಡರು ಹೋರಾಡಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ನಾಗರೀಕ…
ತುಮಕೂರು: ಬ್ರಿಟಿಷರ ಕಾಲದಿಂದಲೂ ನೀರಾವರಿಯಲ್ಲಿ ನಿರ್ಲಕ್ಷಕ್ಕೆ ಒಳಗಾಗಿದ್ದ ಹಳೆ ಮೈಸೂರು ಭಾಗಕ್ಕೆ ಸೇರಿದ ಮದ್ಯಕರ್ನಾಟಕ ಜಿಲ್ಲೆಗಳಿಗೆ ಕುಡಿಯಲು ಮತ್ತು ನೀರಾವರಿಗೆ ಅದ್ಯತೆ ನೀಡಿದವರು ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಜಲ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ದಿ.ಹುಚ್ಚು ಮಾಸ್ತಿಗೌಡ ಒತ್ತಾಯದ ಫಲವಾಗಿ ಹೇಮಾವತಿ ಜಲಾಶಯ ನಿರ್ಮಾಣಕ್ಕೆ ದೇವರಾಜ ಅರಸು ಮುಂದಾದರು.ಇದರ ಭಾಗವಾಗಿ ತುಮಕೂರು ಜಿಲ್ಲೆಯ ಹಲವು ತಾಲೂಕುಗಳಲ್ಲಿ ಸಂವೃದ್ದಿಯ ಕೃಷಿ, ತೋಟಗಾರಿಕೆ ಜೊತೆಗೆ, ಕುಡಿಯುವ ನೀರಿನ ಬರ ಹಿಂಗಿದೆ.ಇದರ ಜೊತೆಗೆ ಎಸ್.ಎಂ.ಕೃಷ್ಣ ಅವರು ಸಹ ಸಾಕಷ್ಟು ಅನುದಾನವನ್ನು ನೀಡಿ. ನೀರಾವರಿ ಅಭಿವೃದ್ದಿಗೆ ಕಾರಣರಾಗಿದ್ದಾರೆ ಎಂದರು. ನೀರಾವರಿ ವಿಚಾರದಲ್ಲಿ ಮೊದಲಿನಿಂದಲೂ ಕರ್ನಾಟಕ ಮತ್ತು ತೆಮಿಳುನಾಡು ನಡುವೆ ವೈಮನಸ್ಸು ಇದ್ದೇ ಇದೆ.ಇದಕ್ಕೆ ಪೂರಕವೆಂಬಂತೆ ಕೆಲ ಅಧಿಕಾರಿಗಳು ಸಹ ವರ್ತನೆ ಮಾಡಿದ್ದರ ಫಲವಾಗಿ ಹಲವಾರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ…











