ತುಮಕೂರು: ಜ್ಯುವೆಲ್ಲರಿ ಶಾಪ್ ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಅಂತರ್ ರಾಜ್ಯ ದರೋಡೆ ಕೋರರನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ಓರ್ವ ಅಪ್ರಾಪ್ತ ಬಾಲಕ ಸೇರಿ 4 ಜನ ಆರೋಪಿಗಳನ್ನು ಬಂಧನ ಮಾಡಲಾಗಿದ್ದು, ಮಹಾರಾಷ್ಟ್ರ ಮೂಲದ ದಿಗಂಬರ್ ಕಿರಣ್ ಕುಂಡ್ಲಿಕ್ ಸುಳೆ, ರಾಜಸ್ಥಾನ ಮೂಲದ ಸಿದ್ದನಾಥ ರಾಮಚಂದ್ರ ಪಡಾಲ್ಕರ್, ಹರ್ಷವರ್ಧನ್ ಬಾಳಿರಾಂ ಮಾನೆ, ವಿವೇಕ್ ದೌಲತ್ ರಾವ್ ಮೇಟ್ ಕರಿ ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 53 ಲಕ್ಷದ 33 ಸಾವಿರ ಬೆಲೆಬಾಳುವ 1 ಕೆಜಿ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇನ್ನು ಜ್ಯುವೆಲ್ಲರಿ ಶಾಪ್ ನಲ್ಲಿ ಕೆಲಸದವನಿಂದಲೇ ಕಳ್ಳತನಕ್ಕೆ ಪ್ಲಾನ್ ರೂಪಿಸಲಾಗಿತ್ತು ಮಬುದು ಮತ್ತೊಂದು ವಿಶೇಷ. ಅದಲ್ಲದೇ ತುಮಕೂರು ನಗರದ ಗೋಲ್ಡ್ ಟೆಸ್ಟಿಂಗ್ ಶಾಪ್ ಒಂದರಲ್ಲಿ ಕೆಲಸಕ್ಕಿದ್ದ ಪ್ರಮುಖ ಆರೋಪಿ ದಿಗಂಬರ್ ಕಿರಣ್ ಎಂಬಾತ ರಜೆ ನಿಮಿತ್ತ ರಾಜಸ್ಥಾನಕ್ಕೆ ಹೋದಾಗ ತನ್ನ ಸ್ನೇಹಿತರಿಗೆ ಸುಲಭವಾಗಿ ಹಣ ಗಳಿಸುವ ಬಗ್ಗೆ ಪ್ಲಾನ್ ನೀಡಿದ್ದ. ಅದರಂತೆ ಬೆಂಗಳೂರಿನಿಂದ ತುಮಕೂರಿಗೆ ಚಿನ್ನಾಭರಣಗಳನ್ನ ಸರಬರಾಜು ಮಾಡುತ್ತಿದ್ದವನನ್ನು ಅಟ್ಯಾಕ್ ಮಾಡಿದ್ರೆ ಸುಲಭವಾಗಿ…
Author: News Desk Benkiyabale
ತುಮಕೂರು: ಎಲ್ಸಿಡಿಸಿ ಕುಷ್ಠರೋಗ ಪತ್ತೆಹಚ್ಚುವ ಅಂದೋಲನ ಆಗಸ್ಟ್ 16 ರಿಂದ ಸೆಪ್ಟೆಂಬರ್ 02ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರು ಕುಷ್ಠರೋಗ ಪತ್ತೆಹಚ್ಚುವ ಕಾರ್ಯಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮ, ರೋಗ ನಿಯಂತ್ರಣದ ಬಗ್ಗೆ ಕ್ರಮಗಳನ್ನು ಆಂದೋಲನದಡಿ ಕೈಗೊಳ್ಳುವಂತೆ ಸೂಚಿಸಿದರು. ಡಿಹೆಚ್ಓ ಡಾ.ಮಂಜುನಾಥ್ ಡಿ.ಎನ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಎಲ್ಸಿಡಿಸಿ ಕುಷ್ಠರೋಗ ಪತ್ತೆಹಚ್ಚುವ ಅಂದೋಲನ ಜಿಲ್ಲಾದ್ಯಂತ ನಡೆಯುವುದೆಂದು ತಿಳಿಸಿ, ಪಿಬಿ ಹಂತದಲ್ಲೇ ಗುರುತಿಸುವಂತೆ ಹಾಗೂ ಅಂಗವೈಕಲ್ಯ ಆಗದಂತೆ ಗುಣಮಟ್ಟ ಸಮೀಕ್ಷೆಯನ್ನು ಮಾಡುವಂತೆ ತಿಳಿಸಿದರು. ಆಂದೋಲನದಲ್ಲಿ ಅಗತ್ಯವಿರುವೆಡೆ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸುವಂತೆ ನಿರ್ದೇಶಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಅವರಿಗೆ ಸೂಚಿಸಿದರು. ಎಲ್ಲಾ ತಾಲ್ಲೂಕುಗಳಲ್ಲಿ ಆಶಾ ಕಾರ್ಯಕರ್ತೆಯರು ಮನೆ- ಮನೆ ಭೇಟಿ ನೀಡಿ ಈ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಿ ಸಮೀಕ್ಷೆ ಮಾಡಬೇಕು ಹಾಗೂ…
ತುಮಕೂರು: ಕುಣಿಗಲ್ ಶಾಸಕರ ಹೆಸರಿನಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ಸುತ್ತಮುತ್ತಲ ಗ್ರಾಮಗಳ ಜನರಿಗೆ ಆಗುತ್ತಿರುವ ತೊಂದರೆ ಕುರಿತಂತೆ ಪ್ರತಿಭಟನೆ ಮಾಡಿದ್ದನ್ನೇ ನೆಪ ಮಾಡಿಕೊಂಡು ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ ಹಾಗೂ ಅವರ ಸಂಗಡಿಗರ ವಿರುದ್ದ ಪೊಲೀಸರು ಐಪಿಸಿ ಕಲಂ 307ರ ಅಡಿಯಲ್ಲಿ ಕೇಸು ದಾಖಲಿಸಿದ್ದು, ಕೂಡಲೇ ಕೇಸು ಹಿಂಪಡೆಯುವಂತೆ ಆಗ್ರಹಿಸಿ ಇಂದು ರೈತ ಸಂಘದ ಪದಾಧಿಕಾರಿಗಳು, ಕೆ.ಆರ್.ಎಸ್ ಪಾರ್ಟಿಯ ಸಹಕಾರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರೈತ ಸಂಘದ ರಾಜ್ಯ ಕಾರ್ಯದರ್ಶಿ ವೀರಣ್ಣ ಅವರ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿ, ರೈತ ಮುಖಂಡರು, ಬೀಸೆಗೌಡನದೊಡ್ಡಿ, ರಾಜಪ್ಪನದೊಡ್ಡಿ, ಹೊನ್ನಮಾಚನಹಳ್ಳಿ, ಹೊಸಹಳ್ಳಿದೊಡ್ಡಿ,ನಿಡಶಾಲೆ ಗ್ರಾಮಪಂಚಾಯಿತಿಗಳ ಸಾರ್ವಜನಿಕರ ಮೇಲೆ ಶಾಸಕರ ಕುಮ್ಮಕ್ಕಿನಿಂದ ಕೊಲೆಯತ್ನ ಪ್ರಕರಣ ದಾಖಲು ಮಾಡಿರುವುದು ಖಂಡನೀಯ.ಕೂಡಲೇ ಕೇಸ್ಗೆ ಬಿ.ರಿಪೋರ್ಟ್ ಹಾಕಿ, ಶಾಸಕರ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವಂತೆ ಒತ್ತಾಯಿಸಿದರು. ಪ್ರತಿಭಟನೆ ನಿರತ ರೈತ ಸಂಘದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ…
ತುಮಕೂರು: ತುಮಕೂರು ನಗರದ ವ್ಯಾಪ್ತಿಯಲ್ಲಿನ ರೌಡಿಗಳಿಗೆ ಶುಕ್ರವಾರ ನಸುಕಿನ ಜಾವದಲ್ಲಿಯೇ ಶಾಕ್ ಕೊಟ್ಟು ಚಳಿ ಬಿಡಿಸಿದ ಎಸ್ಪಿ ರಾಹುಲ್ಕುಮಾರ್ ಶಹಪೂರ್ ವಾಡ್ ರವರ ಬಗ್ಗೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಗರದಲ್ಲಿ ಇತ್ತೀಚೆಗೆ ಕುಖ್ಯಾತ ರೌಡಿಗಳನ್ನು ಎಡೆಮುಡಿ ಕಟ್ಟಲಾಗಿತ್ತು. ನಟೋರಿಯಸ್ ಎಂಬ ಹಣೆಪಟ್ಟಿಯನ್ನು ಕಟ್ಟಿಕೊಳ್ಳಬೇಕೆಂಬ ಹುಮ್ಮಸ್ಸಿನಲ್ಲಿದ್ದ ಕುಖ್ಯಾತ ರೌಡಿಗಳನ್ನು ನಡ ಮುರಿದು ಜೈಲಿಗಟ್ಟಲಾಗಿತ್ತು. ಕೆಲವರು ಜಾಮೀನಿನ ಮೇಲೆ ಹೊರಗಿದ್ದರೆ ಇನ್ನು ಕೆಲವರು ಜೈಲಿನೊಳಗೆ ಇದ್ದಾರೆ. ಕುಖ್ಯಾತ ರೌಡಿ ಪಟ್ಟ ಕಟ್ಟಿಕೊಳಲು ಹೊರಟವರು ಬೀದಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡರೂ ಸಹ ಬುದ್ದಿಕಲಿಯದ ಪುಂಡರು ತನ್ನ ಕುಕೃತ್ಯಗಳಿಂದ ಪೊಲೀಸರ ಗುಂಡೇಟಿಗೆ ತನ್ನ ಕಾಲು ಕಳೆದುಕೊಂಡಿದ್ದರೂ ಸಹ ರೌಡಿಗಳ ಪಾಲಿಗೆ ನಾಯಕನಾಗಬೇಕೆಂಬ ಹಪಾಹಪಿಯಲ್ಲಿ ತೆರೆಮರೆಯೊಳಗೆ ತಮ್ಮ ಕೃತ್ಯಗಳನ್ನು ಪುಂಡಾಟಿಕೆಗಳನ್ನು ನಡೆಸುತ್ತಲೇ ಇದ್ದರು. ಭೂಮಾಫಿಯಾ ಮತ್ತು ವಸೂಲಿಯಂತಹ ಕುಕೃತ್ಯಗಳನ್ನು ಹವ್ಯಾಹತವಾಗಿ ಸಾಗುತ್ತಲೇ ಇತ್ತು. ಇದೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದ ತುಮಕೂರು ನಗರದ ಖಾಕಿ ಪಡೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದು ಮುಂದಾಗಬಹುದಾದ ಘೋರ ಅಪರಾಧಗಳ ಮಾಹಿತಿಯನ್ನು ವಿವರವಾಗಿ…
ತುಮಕೂರು: ತುಮಕೂರು ವಿಶ್ವ ವಿದ್ಯಾಲಯದ ಘಟಿಕೋತ್ಸವ ದಲ್ಲಿ ಭಾಗವಹಿಸಿದ ನಂತರ ರಾಜ್ಯ ಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶಿವಕುಮಾರ್ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಗದ್ದುಗೆಗೆ ನಮಿಸಿ ಪೂಜೆ ಸಲ್ಲಿಸಿ ದರ್ಶನ ಪಡೆದರು. ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು, ಸಮಾಲೋಚನೆ ನಡೆಸಿದರು. ರಾಜ್ಯಪಾಲರು ಸಿದ್ಧಗಂಗಾ ಮಠಕ್ಕೆ ಆಗಮಿಸುತ್ತಿದ್ದಂತೆ ಸಾಲಾಗಿ ಕುಳಿತಿದ್ದ ಮಕ್ಕಳು ಚಪ್ಪಾಳೆ ತಟ್ಟುವ ಮೂಲಕ ರಾಜ್ಯಪಾಲರಿಗೆ ಸ್ವಾಗತ ಕೋರಿದರು. ನನ್ನ ಪ್ರೀತಿಯ ಮಕ್ಕಳೇ ತಮ್ಮೆಲರಿಗೂ ಶುಭಾಶಯಗಳು ಎಂದು ರಾಜ್ಯಪಾಲರು ಕನ್ನಡದಲ್ಲಿ ಮಾತ ನಾಡುತ್ತಿದ್ದಂತೆ ವಿದ್ಯಾರ್ಥಿ ಗಳ ಹರ್ಷೋದ್ಘಾರ ಮುಗಿಲು ಮುಟ್ಟಿತು. ನಂತರ ಹಿಂದಿಯಲ್ಲಿ ಮಾತುಗಳನ್ನು ಮುಂದುವರೆಸಿದ ರಾಜ್ಯಪಾಲರು, ಮಕ್ಕಳೇ ನೀವುಗಳೇ ನಮ್ಮ ದೇಶದ ಭವಿಷ್ಯ. ಭಾರತೀಯ ಸಂಸ್ಕೃತಿ, ಧರ್ಮ, ಶಿಸ್ತು ಅರಿತು ದೇಶದ ನಿರ್ಮಾಣದಲ್ಲಿ ಪಾಲುದಾರರಾಗಿ. ವಸುದೈವ ಕುಟುಂಬಕಂ ಎಂಬ ಭಾವನೆಯನ್ನು ಅರಿತು ನಾವೆಲ್ಲರೂ ಒಂದೇ ಎಂದು ಮುನ್ನುಗ್ಗಿ, ವಿಶ್ವದಾದ್ಯಂತ…
ತುಮಕೂರು: ರಾಜಕೀಯವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಕುಂಚಟಿಗ ಒಕ್ಕಲಿಗ ಸಮುದಾಯವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮತ್ತು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಓಬಿಸಿ ಜಾತಿಗಳ ಪಟ್ಟಿಗೆ ಸೇರಿಸುವಂತೆ ಶೀಘ್ರದಲ್ಲಿಯೇ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕುಂಚಟಿಗ ಒಕ್ಕಲಿಗ ಸಮುದಾಯ ಕೇಂದ್ರ ಮತ್ತು ರಾಜ್ಯದ ಒಬಿಸಿ ಜಾತಿಗಳ ಪಟ್ಟಿಯಲ್ಲಿತ್ತು. ಆದರೆ 2002ರಲ್ಲಿ ಅಂದಿನ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಕೆಲ ತಪ್ಪು ತಿಳುವಳಿಕೆಯಿಂದ, ಕೇಂದ್ರ ಓಬಿಸಿ ಪಟ್ಟಿಯಿಂದ ಕೈಬಿಟ್ಟ ಪರಿಣಾಮ ಕೇಂದ್ರ ಸರಕಾರದ ಯಾವುದೇ ಹುದ್ದೆಗಳಲ್ಲಿ ನಮ್ಮ ಮಕ್ಕಳಿಗೆ ಮೀಸಲಾತಿ ಇಲ್ಲದಂತಾಗಿದೆ.ಇದರಿಂದ ಸಮುದಾಯಕ್ಕೆ ಶೈಕ್ಷಣಿಕವಾಗಿ ಬಹಳ ನಷ್ಟ ಉಂಟಾಗುತ್ತಿದೆ. ನಮ್ಮ ಮಕ್ಕಳು ಯುಪಿಎಸ್,ರೈಲ್ವೆ, ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಸಾಮಾನ್ಯವರ್ಗದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಿ, ಉತ್ತಮ ಅಂಕ ಪಡೆದರೂ ಐಎಎಸ್ ನಂತಹ ಹುದ್ದೆಗಳು ದೊರೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜೂನ್ 25ರ ರಾಜ್ಯಸಮಾವೇಶದ ತೀರ್ಮಾನದಂತೆ ಹಾಗೂ ಕೇಂದ್ರದ ಸಚಿವರುಗಳ…
ತುಮಕೂರು: ಕಣ್ವ ಫ್ಯಾಷನ್ ಲಿಮಿಟೆಡ್ ಸಂಸ್ಥೆಯೂ ಕಾರ್ಮಿಕರಿಗೆ ನೀಡಬೇಕಾದ ಸಂಬಳ ಮತ್ತು ಕಾರ್ಮಿಕರ ಭವಿಷ್ಯ ನಿಧಿಯನ್ನು ನೀಡದೇ ಹೆಣಗಾಡಿಸುತ್ತಿದ್ದು, ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕಾರ್ಮಿಕರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಮಿಕರು, ಕೊರಟಗೆರೆ ತಾಲ್ಲೂಕು ಕೊಂಗೇನಹಳ್ಳಿಯಲ್ಲಿ ಪ್ರಾರಂಭಿಸಿದ್ದ ಸಂಸ್ಥೆಯೂ 300ಕ್ಕೂ ಹೆಚ್ಚು ಕಾರ್ಮಿಕರಿಗೆ ಸಂಬಳ, ಭವಿಷ್ಯ ನಿಧಿ, ಉಪಧನ, ಕ್ಲೋಜರ್ ಪರಿಹಾರಿ ಯಾವುದನ್ನು ನೀಡದೆ ಏಕಾಏಕಿ ಕಾರ್ಖಾನೆಯನ್ನು ಮುಚ್ಚಿದ್ದು, ಕಾರ್ಮಿಕರು ಬೀದಿಗೆ ಬೀಳುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಅವರು, ಕಾರ್ಮಿಕ ಕಾಯ್ದೆಯನ್ನು ಉಲ್ಲಂಘಿಸಿ ಕಾರ್ಖಾನೆ ಮಾಲೀಕರು ಏಕಾಏಕಿ ಸಂಸ್ಥೆಯನ್ನು ಮುಚ್ಚಿದ್ದು, ಗ್ರಾಮೀಣ ಪ್ರದೇಶದಿಂದ ಬದುಕು ಕಟ್ಟಿಕೊಂಡಿದ್ದ ಕಾರ್ಮಿಕರು ಕೆಲಸವಿಲ್ಲದೆ ಪರದಾಡುವಂತಾಗಿದ್ದು, ಇವರನ್ನು ನಂಬಿಕೊಂಡಿದ್ದ ಕುಟುಂಬಗಳು ಇಂದು ಉದ್ಯೋಗವಿಲ್ಲದಂತ ಸ್ಥಿತಿಯಲ್ಲಿವೆ ಎಂದರು. ತಿಂಗಳ ಸಂಬಳವನ್ನೇ ನೆಚ್ಚಿ ಬದುಕುತಿದ್ದ ಕಾರ್ಮಿಕರ ಕುಟುಂಬಗಳಿಗೆ ಕಣ್ವ ಫ್ಯಾಷನ್ ಲಿಮಿಟೆಡ್ ಸಂಸ್ಥೆಯೂ ಸಂಬಳ,…
ತುಮಕೂರು: ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್ ಅಪ್, ಸ್ಟಾಂಡ್ ಅಪ್, ವೆಂಚರ್ ಕ್ಯಾಪಿಟಲ್ ಫಂಡ್ ಮುಂತಾದ ಯೋಜನೆಗಳ ಸದುಪಯೋಗವನ್ನು ಪಡೆಯುವ ಮೂಲಕ ಶ್ರೇಷ್ಠ ಭಾರತ, ಮತ್ತು ಆತ್ಮನಿರ್ಭರ ಭಾರತದ ನಿರ್ಮಾಣ ಮಾಡಲು ಸಂಕಲ್ಪ ತೊಡುವಂತೆ ಹಾಗೂ ಈ ಮೂಲಕ ಉದ್ಯೋಗದ ಹೊಸ ಅವಕಾಶಗಳ ಭರವಸೆಯನ್ನು ಮೂಡಿಸುವಂತೆ ಗೌರಾವಾನ್ವಿತ ರಾಜ್ಯಾಪಾಲರು ಹಾಗೂ ತುಮಕೂರು ವಿ.ವಿ ಕುಲಾಧಿಪತಿಗಳಾದಂತಹ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ತುಮಕೂರು ವಿಶ್ವವಿದ್ಯಾನಿಲಯದ 15ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತುಮಕೂರು ವಿಶ್ವವಿದ್ಯಾನಿಲಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಂತಹ ವಿದ್ಯಾರ್ಥಿಗಳಾದ ನೀವು ಇಂದಿನಿಂದ ಹೊಸ ಸವಾಲಿನ ಪರಿಸರಕ್ಕೆ ಪ್ರವೇಶಿಸಲಿದ್ದೀರಿ. ಈ ವಿಶ್ವವಿದ್ಯಾನಿಲಯದಿಂದ ಗುಣಾತ್ಮಕ ಹಾಗೂ ಗಟ್ಟಿ ಶಿಕ್ಷಣದ ಜ್ಞಾನವನ್ನು ಪಡೆದಂತಹ ನೀವುಗಳು ನಿಮ್ಮ ವೃತ್ತಿ ಜೀವನದಲ್ಲಿ ಯಶಸ್ವಿಯಾಗುತ್ತೀರ ಎಂಬ ಭರವಸೆ ನನಗಿದೆ ಎಂದು ಶುಭ ಹಾರೈಸಿದರು. ದೇಶ ಇಂದು 75ನೇ ವರ್ಷದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ಈ…
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ 15ನೇ ವಾರ್ಷಿಕ ಘಟಿಕೋತ್ಸವವು ಜುಲೈ 5 ರಂದು ಬೆಳಿಗ್ಗೆ 11.30 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದ ಶ್ರೀ ಡಾ: ಶಿವಕುಮಾರ ಮಹಾಸ್ವಾಮೀಜಿ ಸಭಾಂಗಣದಲ್ಲಿ ನಡೆಯಲಿದೆ. ಗೌರವಾನ್ವಿತ ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳು ಆದ ಘನತೆವೆತ್ತ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸುವರು. ಮಾನ್ಯ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳ ಸಚಿವರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹಕುಲಾಧಿಪತಿಗಳಾದ ಡಾ: ಸಿ.ಎನ್. ಅಶ್ವತ್ಥ್ ನಾರಾಯಣ ಉಪಸ್ಥಿತರಿರುವರು. ನವದೆಹಲಿ ಯುಜಿಸಿ ಸದಸ್ಯರು ಹಾಗೂ ವಿಶ್ರಾಂತ ಸಹ ಕುಲಪತಿಗಳು, ಇಂದಿರಾಗಾಂಧಿ, ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯ, ನವದೆಹಲಿ ಮತ್ತು ವಿಶ್ರಾಂತ ಕುಲಪತಿಗಳು, ಬಿ.ಪಿ.ಎಸ್. ಮಹಿಳಾ ವಿಶ್ವವಿದ್ಯಾನಿಲಯ, ಹರಿಯಾಣದ ಪ್ರೊ.ಸುಷ್ಮಾ ಯಾದವ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಘಟಿಕೋತ್ಸವ ಭಾಷಣ ಮಾಡುವರು. ತುಮಕೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿಗಳಾದ ಪ್ರೊ. ಕೇಶವ ಅವರು ವಿಶ್ವವಿದ್ಯಾನಿಲಯದ ವಾರ್ಷಿಕ ವರದಿ ಮಂಡಿಸುವರು.
ತುಮಕೂರು: ಹಾವೇರಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಹಾಗೂ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹಾಗೂ ನಗರದ ಎಲ್ಲಾ ಪತ್ರಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾನಿರತರನ್ನುದ್ಧೇಶಿಸಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್, ಹಾವೇರಿ ಜಿಲ್ಲೆಯ ಖಾಸಗಿ ವಾಹಿನಿಯ ವರದಿಗಾರರಾದ ವೀರಯ್ಯ ಹಿರೇಮಠ, ಶಿವು ಮಡಿವಾಳರ್ ಹಾಗೂ ಕ್ಯಾಮೆರಾಮೆನ್ ಪ್ರಕಾಶ್ ಮುಳ್ಳಳ್ಳಿ ಅವರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ ಎಂದರು. ಈ ಘಟನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕವು ತೀವ್ರವಾಗಿ ಖಂಡಿಸುತ್ತದೆ. ರೈತಪರ ಹೋರಾಟರ್ಗಾತಿಯ ಹೆಸರಿನ ಮಂಜುಳಾ ಪೂಜಾರ್ ಅಸಲಿ ಮುಖವಾಡವನ್ನು ಸುದ್ದಿ ವಾಹಿನಿ ಚುಟುಕು ಕಾರ್ಯಚರಣೆ ಮೂಲಕ ಬಯಲು ಮಾಡಿದ್ದರ ಹಿನ್ನೆಲೆಯಲ್ಲಿ ಜು.2ರಂದು ಶನಿವಾರ ಮಧ್ಯಾಹ್ನ ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಮಂಜುಳಾ ಪೂಜಾರ್ ಹಾಗೂ ಅವರ ಸಹಚರರು ಸುದ್ದಿಗೋಷ್ಠಿ ನಡೆಸಿ ಹೊರ…











