Author: News Desk Benkiyabale

ಗುಬ್ಬಿ: ಬುಧವಾರ ನಡೆದ ಬರ್ಬರ ಹತ್ಯೆ ಇಂದಾಗಿ ಗುಬ್ಬಿ ನಗರದ ಜನತೆಯು ಭಯಭೀತರಾಗಿದ್ದು ಇತಿಹಾಸದಲ್ಲಿ ಈ ರೀತಿಯ ಬರ್ಬರ ಕೃತ್ಯ ಯು ಎಂದೂ ಕಾಣದಂತಹ ಕೃತ್ಯವನ್ನೂ ಎಸಗಿ ದಲಿತ ಮುಖಂಡನನ್ನು ಹಾಡುಹಗಲೇ ಜನನಿ ಬಿಡಾದ ರಸ್ತೆಯಲ್ಲಿ ಕೊಚ್ಚಿ ಹಾಕಿ ಪರಾರಿಯಾಗಿರುವ ಘಟನೆ ಯಿಂದ ತಾಲೂಕಿನಾದ್ಯಂತ ಭಯದ ವಾತಾವರಣ ತುಂಬಿದ್ದು ಕಂಡುಬಂದಿದೆ. ದಿ.15 ರಂದು ಸುಮಾರು 1-30 ರ ಸಮಯದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಜಿ.ಸಿ. ನರಸಿಂಹಮೂರ್ತಿ (ಕುರಿ ಮೂರ್ತಿ) ರಾಷ್ಟ್ರೀಯ ಹೆದ್ದಾರಿ 206 ರ ಟೀ ಅಂಗಡಿಯ ಮುಂದೆ ಕುಳಿತು ತನ್ನ ಸಹಚರರೊಡನೆ ದಲಿತ ಕುಂದು ಕೊರತೆ ಸಭೆಗೆ ಶಿರಾಕ್ಕೆ ಹೋಗಲು ತನ್ನ ಕಾರ್ಯಕರ್ತರ ಜೊತೆ ಚರ್ಚಿಸಲು ಕುಳಿತಿದ್ದು ಒಂದೆಡೆಯಾದರೆ ಆದಿನ ನಡೆಯಬೇಕಿದ್ದ ದಲಿತ ಕುಂದು ಕೊರತೆ ಸಭೆಯನ್ನು ಮುಂದೂಡಲಾಗಿದೆ ಎಂದು ದೂರವಾಣಿ ಮುಖಾಂತರ ತಿಳಿಸಿದಾಗ ತನ್ನ ಕಾರ್ಯಕರ್ತರನ್ನು ತಾಲೂಕಿನಲ್ಲಿ ದಲಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿದ್ದು ತಡೆಗಟ್ಟುವ ನಿಟ್ಟಿನಲ್ಲಿ ಯಾವ ಕ್ರಮವನ್ನು ಕೈಗೊಳ್ಳಬೇಕೆಂದು ಚರ್ಚಿಸಿದ ನಂತರ ಕೇವಲ…

Read More

ತುಮಕೂರು: ಭಾರತದ ಪ್ರಜೆಗಳಾದ ನಮ್ಮೆಲ್ಲರಿಗೂ ಗೌರವಯುತವಾಗಿ ಬದುಕುವ ಹಕ್ಕನ್ನು ನಮ್ಮ ಸಂವಿಧಾನವು ಒದಗಿಸಿಕೊಟ್ಟಿದೆ. ಆದರೆ ಮಲ ಹೊರುವ ಪದ್ಧತಿ (ಮ್ಯಾನ್ಯುಯಲ್ ಸ್ಕ್ಯಾವೆಂಜರ್)ಯಂತಹ ಅನಿಷ್ಟ ವ್ಯವಸ್ಥೆಯಿಂದಾಗಿ ಹಲವರು ಇಂದಿಗೂ ಸಹಾ ಈ ಹಕ್ಕಿನಿಂದ ವಂಚಿತರಾಗಿದ್ದಾರೆ. ಗತಕಾಲದಿಂದ ನಡೆಯುತ್ತಿರುವ ಈ ಅನ್ಯಾಯವನ್ನು ಮತ್ತು ಅಗೌರವದ ಬದುಕನ್ನು ಸರಿಪಡಿಸುವ ಸಲುವಾಗಿ ‘ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013’ನ್ನು ಜಾರಿಗೆ ತರಲಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ. ಶಿವಣ್ಣ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇಂದು ಆಯೋಜಿಸಲಾಗಿದ್ದ, ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‍ಗಳ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013ರ ಕಾಯ್ದೆ ಹಾಗೂ ನಿಯಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಕಾಯ್ದೆಯ ಕುರಿತು ಮನದಟ್ಟು ಮಾಡುತ್ತಾ, ಈ ಮೇಲಿನಂತೆ ಅವರು ತಿಳಿಸಿದರು. ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೆಪ್ಟಿಕ್ ಟ್ಯಾಂಕ್/ಯುಜಿಡಿಗಳನ್ನು ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರಗಳ ಮೂಲಕ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಮಲವನ್ನು ಕೈಯಿಂದ…

Read More

ತುಮಕೂರು ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ಉಲ್ಬಣವಾಗದಂತೆ ಕಟ್ಟೆಚ್ಚರ ವಹಿಸಬೇಕು. ಆರೋಗ್ಯ ಇಲಾಖೆ ಈ ಬಗ್ಗೆ ಹೆಚ್ಚು ನಿಗಾ ವಹಿಸಿ, ಕೋವಿಡ್-19 ತಪಾಸಣೆಯನ್ನು 500ಕ್ಕೆ ಹೆಚ್ಚಿಸಬೇಕು ಮತ್ತು ಪ್ರತಿ ತಾಲ್ಲೂಕಿನಲ್ಲಿಯೂ ಕಣ್ಗಾವಲು ಸಮಿತಿಯನ್ನು ರಚಿಸುವಂತೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ ಅವರು ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಹಿರಿಯ ಅಧಿಕಾರಿಗಳೊಂದಿಗೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಯಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಮತ್ತು ಶುಚಿತ್ವ ಪಾಲಿಸಬೇಕು ಎಂದರಲ್ಲದೇ, ಕೋವಿಡ್-19 ತಡೆಗಟ್ಟಲು ಜಿಲ್ಲಾಡಳಿತ ಸಿದ್ಧತೆ ಕೈಗೊಳ್ಳಬೇಕು ಮತ್ತು ಹೆಚ್ಚಿನ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಮತ್ತು 60 ವರ್ಷ ಮೇಲ್ಪಟ್ಟವರಿಗೆ ಮುಂಜಾಗ್ರತಾ ಲಸಿಕೆಯನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಜನತಾ ಬಜಾರ್ ಕೇಂದ್ರದಲ್ಲಿ ಇನ್ನೊಂದು ವಾರದೊಳಗಾಗಿ ಜನೌಷಧಿಗಳು ಲಭ್ಯವಿರುವಂತೆ ಕ್ರಮ ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ…

Read More

ತುಮಕೂರು: ಸಮಾಜದಲ್ಲಿ “ಪತ್ರಕರ್ತರೆಂದರೆ ಕೇವಲ ಟೀಕೆ ಮಾಡುವವರಲ್ಲ. ತಪ್ಪಾದಾಗ ಎಚ್ಚರಿಸಿ, ಒಳ್ಳೆಯ ಕೆಲಸ ಮಾಡಿದಾಗ ಬೆನ್ನು ತಟ್ಟುವ ನೇರ ಮತ್ತು ನಿಷ್ಠುರವಾದಿಗಳು” ಎಂದು ಪತ್ರಕರ್ತರನ್ನುದ್ದೇಶಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ ಮಾತುಗಳಿವು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿದ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಬುಧವಾರ ಏರ್ಪಡಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕಕ್ಕೆ ಆಯ್ಕೆಯಾಧ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಸುದ್ದಿ ಮಾಧ್ಯಮಗಳು ಸುದ್ದಿ ಬಿತ್ತರಿಸುವ ರಭಸದಲ್ಲಿ ವಸ್ತುಸ್ಥಿತಿಯನ್ನು ಮರೆಮಾಚಬಾರದು ಎಂದು ಕಿವಿ ಮಾತು ಹೇಳಿದರು. ಮೊದಲಿನಿಂದಲೂ ಪತ್ರಕರ್ತರೊಂದಿಗೆ ನಾನು ಉತ್ತಮ ಬಾಂಧವ್ಯವನ್ನು ಹೊಂದಿದ್ದೇನೆ. ಅಧಿಕಾರದಲ್ಲಿದ್ದಾಗ ಪತ್ರಕರ್ತರ ಅಭ್ಯುದಯಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೇನೆಂಬ ಆತ್ಮತೃಪ್ತಿ, ಸಂತಸ ನನಗಿದೆ. ಸಂವಿಧಾನದ 4ನೇ ಅಂಗವಾದ ಪತ್ರಿಕಾ ರಂಗವು ಕೋವಿಡ್ ಸಂದರ್ಭದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡಿರುವುದು ಶ್ಲಾಘನೀಯವಾದುದು. ಈ ಹಿನ್ನೆಲೆಯಲ್ಲಿ ಪತ್ರಕರ್ತರನ್ನು ಕೋವಿಡ್ ವಾರಿಯರ್‍ಗಳೆಂದು ಘೋಷಿಸಿ ಪತ್ರಿಕಾ ವಿತರಕರೂ ಸೇರಿದಂತೆ ಸುಮಾರು 25000ಕ್ಕೂ…

Read More

ತುಮಕೂರು ಗುಬ್ಬಿಯಲ್ಲಿ ಡಿಎಸ್‍ಎಸ್ ಮುಖಂಡ ನರಸಿಂಹಮೂರ್ತಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿ ದಲಿತ ಮುಖಂಡ ನರಸಿಂಹಮೂರ್ತಿ ಅವರ ಶವ ವೀಕ್ಷಿಸಿದರು. ಇದರೊಂದಿಗೆ ಪರಿಶೀಲನೆ ನಡೆಸಿ ಪೆÇಲೀಸ್ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು. ಇದೇ ಸಂದರ್ಭದಲ್ಲಿ ತುಮಕೂರಿನ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಹತ್ಯೆಯಾಗಿರುವ ಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಶವ ತಂದಿರುವ ಹಿನ್ನೆಲೆಯಲ್ಲಿ ನೂರಾರು ದಲಿತ ಸಂಘಟನೆಗಳ ಮುಖಂಡರುಗಳು ಸ್ಥಳದಲ್ಲಿ ಜಮಾಯಿಸಿದ್ದರು.

Read More

ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಜೆಡಿಎಸ್ ಗುಬ್ಬಿ ಶ್ರೀನಿವಾಸ್ ಮತ್ತು ಶ್ರೀನಿವಾಸ್ ಗೌಡರನ್ನು ಉಚ್ಚಾಟನೆ ಮಾಡಲು ಜೆಡಿಎಸ್‍ನಿಂದ ತೀರ್ಮಾನ ಮಾಡಲಾಗಿದೆ. ಈ ಸಂಬಂಧ ನಾಳೆಯೇ ಆದೇಶ ಹೊರಡಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಇಬ್ಬರನ್ನು ಅಮಾನತು ಮಾಡಲಾಗಿದೆ. ಕುಮಾರಸ್ವಾಮಿ ಅವರು ಬೆಂಗಳೂರಿನ ಹೊರಗೆ ಇದ್ದಾರೆ. ನಾಳೆ ಅವರ ಬಳಿ ಸಹಿ ಪಡೆದ ಬಳಿಕ ನಾಳೆ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದರು. ಇಬ್ಬರ ಸದಸ್ಯತ್ವ ರದ್ದು ಮಾಡಲು ಬುಧವಾರ ಸ್ಪೀಕರ್‍ಗೆ ದೂರು ಕೊಡುತ್ತೇವೆ. ಇಬ್ಬರು ಪಕ್ಷದ ವಿಪ್ ಉಲ್ಲಂಘನೆ ಮಾಡಿದ್ದಾರೆ. ಕಾಂಗ್ರೆಸ್-ಬಿಜೆಪಿ ಒಟ್ಟಾಗಿ ಅಡ್ಡ ಮತದಾನ ಮಾಡಿಸಿದ್ದಾರೆ. ಹೀಗಾಗಿ ಅನರ್ಹ ಮಾಡಿ ಎಂದು ಮನವಿ ಮಾಡುತ್ತೇವೆ. ಈಗ ಇರುವ ಸ್ಪೀಕರ್ ಸಂವಿಧಾನ ಬದ್ಧವಾಗಿ ಕೆಲಸ ಮಾಡುತ್ತಾರೆ ಎನ್ನುವ ನಂಬಿಕೆ ಇದೆ. ಒಂದು ವೇಳೆ ಸ್ಪೀಕರ್ ಸರಿಯಾಗಿ ನಿರ್ಣಯ ಮಾಡದೇ ಹೋದರೆ ಕೋರ್ಟ್ ಮೊರೆ ಹೋಗುತ್ತೇವೆ ಎಂದು ತಿಳಿಸಿದರು.…

Read More

ಗುಬ್ಬಿ ಹಾಡುಹಗಲೇ ಡಿಎಸ್‍ಎಸ್ ತಾಲೂಕು ಸಂಚಾಲಕ ನರಸಿಂಹಮೂರ್ತಿ ಎಂಬುವವನ ಬರ್ಬರ ಕೊಲೆ ಮಾಡಲಾಗಿದೆ. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಟೀ ಅಂಗಡಿ ಮುಂದೆ ಕುಳಿತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ನರಸಿಂಹಮೂರ್ತಿ ಕುರಿ ಮೂರ್ತಿ(45) ಕೊಲೆಯಾದ ವ್ಯಕ್ತಿ. ಡಿಎಸ್‍ಎಸ್ ಸಂಘದ ತಾಲ್ಲೂಕು ಸಂಚಾಲಕನಾಗಿದ್ದ ಕುರಿ ಮೂರ್ತಿಯವರು. ಇನ್ನು ಸ್ಥಳಕ್ಕೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೊಲೆಗೈದವರ ಪತ್ತೆಗೆ ಬಲೆ ಬೀಸಿದ್ದಾರೆ

Read More

ತುಮಕೂರು: ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಪುರ ಗ್ರಾಮದ 22 ವರ್ಷದ ಅಜಿತ್ ಕುಮಾರ್ ಕಾಣೆಯಾಗಿದ್ದು, ಈತನ ಪತ್ನಿ ಶ್ವೇತ ಎನ್.ಜೆ. ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯು ಅಂಗಡಿಗೆ ಹೋಗಿ ಬರುವುದಾಗಿ ಮನೆಯಿಂದ ಹೋದವನು ಮರಳಿ ಬಂದಿಲ್ಲದಿರುವುದರಿಂದ ಈತನ ಸ್ನೇಹಿತ ಹರ್ಷನಿಗೆ ಕರೆ ಮಾಡಿದರೂ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಈತನ ಬಗ್ಗೆ ಸುಳಿವು ಸಿಕ್ಕಿರುವುದಿಲ್ಲ. ಕಾಣೆಯಾದ ವ್ಯಕ್ತಿಯು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ದುಂಡು ಮುಖ, ಗೋಧಿ ಮೈಬಣ್ಣ, ಮನೆಯಿಂದ ಹೋಗುವಾಗ ಕಪ್ಪು ಮತ್ತು ನೀಲಿಯ ಬಣ್ಣದ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಈತನು ತೆಲುಗು ಮತ್ತು ತಮಿಳು ಭಾಷೆ ಮಾತನಾಡುತ್ತಾನೆ. ಈತನ ಬಗ್ಗೆ ಮಾಹಿತಿ ಸಿಕ್ಕವರು ದೂ.ವಾ. 08132-225229/220294, 0816-2278000 ಅಥವಾ ಮೊ.ಸಂ. 9480802963/36/00ಯನ್ನು ಸಂಪಕಿಸಬಹುದೆಂದು ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಮನವಿ ಮಾಡಿದ್ದಾರೆ.

Read More

ತುಮಕೂರು: ಕುಣಿಗಲ್ ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಮೃತೂರು ಗ್ರಾಮದ ಸುಮಾರು 26 ವರ್ಷದ ನಾಗರತ್ನ ಎಂಬ ಮಹಿಳೆಯು 6 ವರ್ಷದ ಪ್ರಭಾಸ್, 5 ವರ್ಷದ ಪ್ರವೀಣ್ ಕುಮಾರ್ ಎಂಬ ತನ್ನ ಮಕ್ಕಳೊಂದಿಗೆ ಕಾಣೆಯಾಗಿದ್ದಾಳೆ ಎಂದು ಪತಿ ಮಂಜು ಠಾಣೆಗೆ ದೂರು ನೀಡಿದ್ದಾರೆ. ಈಕೆಯು ತನ್ನ ಮಕ್ಕಳೊಂದಿಗೆ ಅಮೃತೂರು ಸರ್ಕಾರಿ ಆಸ್ಪತ್ರೆಯ ಲ್ಯಾಬ್ ಬಳಿ ಹೋಗಿ ಬರುವುದಾಗಿ ಮನೆಯಿಂದ ಹೋದವರು ಮರಳಿ ಮನೆಗೆ ಬಂದಿರುವುದಿಲ್ಲ. ನಾಗರತ್ನ :- ಕಾಣೆಯಾದ ಮಹಿಳೆಯು 4.5 ಅಡಿ ಎತ್ತರ, ಕಪ್ಪು ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಹಸಿರು ಹೂಗಳಿರುವ ಬಿಳಿ ಬಣ್ಣದ ಟಾಪ್, ಕಪ್ಪು ಬಣ್ಣದ ಲೆಗ್ಗಿನ್ಸ್, ಕಪ್ಪು ಬಣ್ಣದ ವೇಲ್ ಧರಿಸಿದ್ದಾಳೆ. ಪ್ರಭಾಸ್ :- 3.5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ, ತೆಳ್ಳನೆ ಮೈಕಟ್ಟು ಹೊಂದಿದ್ದು, ಬಿಳಿ ಬಣ್ಣದ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಪ್ರವೀಣ್ ಕುಮಾರ್ :- 3 ಅಡಿ ಎತ್ತರ, ಎಣ್ಣೆಗೆಂಪು…

Read More

ಚಿಕ್ಕನಾಯಕನಹಳ್ಳಿ: ಅಗತ್ಯವಿರುವಷ್ಟು ರಕ್ತ ಪೂರೈಕೆ ಆಗುತ್ತಿಲ್ಲ ಇದರಿಂದ ಪ್ರತಿ ಜೀವದ ಮೌಲ್ಯ ಎಲ್ಲರೂ ಅರಿಯುವ ಮೂಲಕ ರಕ್ತದಾನ ಅತ್ಯವಶ್ಯಕ ಎಂದು ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಕೆ.ಎಸ್ ಇಂದು ಹೇಳಿದರು. ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ವೈದ್ಯಾಧಿಕಾರಿಗಳ ಕಛೇರಿ ಸಾರ್ವಜನಿಕ ಆಸ್ಪತ್ರೆ ಜಿಲ್ಲಾ ರಕ್ತನಿಧಿ ಕೇಂದ್ರ ಪುರಸಭೆ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಡೆಸಿದ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರಾಜ್ಯದಲ್ಲಿ ಏಳು ಕೋಟಿ ಜನಸಂಖ್ಯೆ ಹೊಂದಿದ್ದರೂ ಕೇವಲ ಒಂದು ಪರ್ಸೆಂಟ್ ರಕ್ತ ಕೂಡ ಶೇಖರಣೆ ಆಗುತ್ತಿಲ್ಲ ನಮಗೆ ಅಗತ್ಯವಿರುವ ಸುಮಾರು 8ಲಕ್ಷ ಯುನಿಟ್ ರಕ್ತ ಅಗತ್ಯತೆ ಹೊಂದಿದ್ದು 2 ಲಕ್ಷ ಯುನಿಟ್ ರಕ್ತ ಕೊರತೆ ಎದ್ದುಕಾಣುತ್ತಿದೆ. ರಕ್ತ ನೀಡುವ ಕಾರ್ಯದಲ್ಲಿ ಪುರುಷರಷ್ಟೇ ಮಹಿಳೆಯರೂ ಸಮಾನಾರ್ ಇದ್ದಾರೆ ಮಹಿಳೆಯರು ಯಾರು ಆತಂಕಕ್ಕೆ ಒಳಗಾಗಬಾರದು ಅವರು ರಕ್ತ ನೀಡುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುವುದರ ಜೊತೆಗೆ ಹೃದಯಾಘಾತಗಳು ಕೂಡ ಕಡಿಮೆಯಾಗುತ್ತವೆ ಹೀಗಿರುವಾಗ 4 ತಿಂಗಳಿಗೊಮ್ಮೆಯಾದರೂ ಮಹಿಳೆಯರು ಕೂಡ ರಕ್ತ…

Read More