ತುಮಕೂರು ದೆಹಲಿಯಲ್ಲಿ ನಿರಂತರ ಮೂರನೆ ಬಾರಿಗೆ ಅಧಿಕಾರಕ್ಕೆ ಬಂದಿರುವ ನಂತರ ಪಂಜಾಬಿನಲ್ಲಿ ಈ ಬಾರಿ ಅಧಿಕಾರ ಗದ್ದುಗೆ ಏರಿರುವ ಆಮ್ ಆದ್ಮಿ ಪಾರ್ಟಿ ಕರ್ನಾಟಕದಲ್ಲೂ ಕೂಡ ಸಂಘಟನೆ ಚುರುಕುಗೊಳಿಸಿದ್ದು ಜೂ.18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಡಾ. ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಪಕ್ಷದ ಸಮಾವೇಶ ಹಮ್ಮಿಕೊಂಡಿರುವುದಾಗಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಬಿ.ಎಲ್.ವಿಶ್ವನಾಥ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ದೆಹಲಿ ಮುಖ್ಯಮಂತ್ರಿ ಕೆಜ್ರಿವಾಲ್ ಅವರ ಭ್ರಷ್ಟಾಚಾರರಹಿತ ನಿಷ್ಪಕ್ಷಪಾತ ಹಾಗೂ ಪಾರದರ್ಶಿಕ ಆಡಳಿತ ನೋಡಿ ದೇಶದ ಜನ ಬದಲಾವಣೆ ಬಯಸಿದ್ದು, ಎಎಪಿ ಪಕ್ಷ ಸೇರ್ಪಡೆಗೊಳ್ಳುವ ಮೂಲಕ ವ್ಯಾಪಕ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದರು. ದೇಶದ ಪ್ರಮುಖ 3 ರಾಜಕೀಯ ಪಕ್ಷಗಳಿಗಿಂತ ವೇಗವಾಗಿ ಬೆಳೆಯುತ್ತಿರುವ ಎಎಪಿಗೆ ಸಾಕಷ್ಟು ಜನಬೆಂಬಲ ವ್ಯಕ್ತವಾಗುತ್ತಿದ್ದು, ತುಮಕೂರು ಜಿಲ್ಲೆಯಾದ್ಯಂತ ಜೂ.18 ರಿಂದ ಸೆ.15ರವರೆಗೆ ಗ್ರಾಮ ಸಂಪರ್ಕ ಅಭಿಯಾನವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಜಿಲ್ಲೆಯ ಎಲ್ಲ ತಾಲೂಕು ಕೇಂದ್ರ ಸೇರಿದಂತೆ ಜಿ.ಪಂ., ತಾ.ಪಂ. ಕ್ಷೇತ್ರಗಳಲ್ಲಿ ನಿರ್ವಹಣಾ ಸಮಿತಿಗಳನ್ನು…
Author: News Desk Benkiyabale
ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಘಟಕದ ಅಧಿಕಾರ ಸ್ವೀಕಾರ ಹಾಗೂ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗೆ ಹೆಚ್ಚು ನೆರವು ನೀಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭವನ್ನು ಜೂ.15ರಂದು ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ. ಸಿದ್ಧಗಂಗಾ ಮಠಾಧ್ಯಕ್ಷ ಶ್ರೀಸಿದ್ಧಲಿಂಗಸ್ವಾಮೀಜಿ ಸಾನಿಧ್ಯದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಿ ಅಭಿನಂದನೆ ಸ್ವೀಕರಿಸುವರು. ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನಾ ನುಡಿಯಾಡಲಿದ್ದು, ಗೃಹಸಚಿವ ಆರಗ ಜ್ಞಾನೇಂದ್ರ ನೂತನ ಸದಸ್ಯರಿಗೆ ಪ್ರಮಾಣ ಪತ್ರ ವಿತರಿಸುವರು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಅಧ್ಯಕ್ಷತೆ ವಹಿಸುವರು. ಐಎಫ್ಡಬ್ಲ್ಯೂಜೆ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದು, ಮುಖ್ಯ ಅತಿಥಿಯಾಗಿ ಸಂಸದ ಜಿ.ಎಸ್.ಬಸವರಾಜು, ಶಾಸಕ ಜಿ.ಬಿ.ಜ್ಯೋತಿಗಣೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಮಾಜಿ ಶಾಸಕರಾದÀ ಶಿವಣ್ಣ, ಗಂಗಹನುಮಯ್ಯ, ಡಿಸಿ ವೈ.ಎಸ್.ಪಾಟೀಲ್, ಎಸ್ಪಿ ರಾಹುಲ್ಕುಮಾರ್ಶಹಾಪುರವಾಡ್, ಆಯುಕ್ತೆ ರೇಣುಕಾ ಪಾಲ್ಗೊಳ್ಳುವರು. , ಪದಗ್ರಹಣ ಸ್ವೀಕರಿಸುವವರು: ಚಿ.ನಿ.ಪುರುಷೋತ್ತಮ್(ಅಧ್ಯಕ್ಷ), ಎಲ್.ಚಿಕ್ಕೀರಪ್ಪ, ಶ್ಯಾ.ನ.ಪ್ರಸನ್ನಮೂರ್ತಿ, ತಿಪಟೂರು ಕೃಷ್ಣ(ಉಪಾಧ್ಯಕ್ಷರು), ಟಿ.ಇ.ರಘುರಾಂ(ಪ್ರಧಾನ ಕಾರ್ಯದರ್ಶಿ), ಎಲ್.ರಂಗಧಾಮಯ್ಯ,…
ತುಮಕೂರು: ದೌರ್ಜನ್ಯ, ದಬ್ಬಾಳಿಕೆ ಬಳಸಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಂಡಿರುವ ಬಗರ್ ಹುಕಂ ಸಾಗುವಳಿ ಭೂಮಿ ಮರಳಿಸಲು ಹಾಗೂ ಎಲ್ಲಾ ಬಗರ್ ಹುಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರಾಂತ ರೈತ ಸಂಘ ನಗರದ ಜಿಲ್ಲಾಧಿಕಾರಿ ಅನಿರ್ಧಿಷ್ಠಾವಧಿ ಧರಣಿ ಆರಂಭಿಸಿದೆ. ಸಾಗುವಳಿ ಮಂಜೂರಾತಿ ಆದೇಶ ಪಡೆದಿರುವ ಎಲ್ಲಾ ಬಗರ್ ಹುಕಂ ರೈತರಿಗೆ ದುರಸ್ತು ಮಾಡಿ ಪಹಣಿ ವಿತರಿಸಬೇಕು. ಬಗರ್ ಹುಕಂ ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಅವಕಾಶವನ್ನು ವಿಳಂಬ ಮಾಡದೇ ಕಲ್ಪಿಸಬೇಕು. ವಸತಿ ರಹಿತರಿಗೆ ಮನೆ-ನಿವೇಶನಕ್ಕಾಗಿ ಸರ್ಕಾರಿ ಭೂಮಿ ಲಭ್ಯ ಇಲ್ಲದ ಕಡೆ ಭೂ ಸ್ವಾಧೀನದ ಮೂಲಕ ಮನೆ-ನಿವೇಶನ ಒದಗಿಸಬೇಕು. ವಿವಿಧ ಯೋಜನೆಗಳಿಗೆ ಭೂ ಸ್ವಾಧೀನಕ್ಕೆ ಒಳಗಾದ ಬಗರ್ ಹುಕುಂ ಸಾಗುವಳಿದಾರರು ಸೇರಿದಂತೆ ಎಲ್ಲಾ ರೈತರಿಗೆ ಪರಿಹಾರದ ಹಣ ನೀಡುವಂತೆ ಒತ್ತಾಯಿಸಿ ಅನಿರ್ಧಿಷ್ಟ ಧರಣಿ ನಡೆಸಲಾಗುತ್ತಿದೆ. ಪ್ರತಿಭಟನಾ ಧರಣಿಗೆ ಚಾಲನೆ ನೀಡಿ ಮಾತಾನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ. ಬಯ್ಯಾರೆಡ್ಡಿ ಮಾತನಾಡಿ, ಕೋವಿಡ್ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಅರಣ್ಯ ಇಲಾಖೆಯವರು…
ಕೊರಟಗೆರೆ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರ ಗೊರವನಹಳ್ಳಿ ಲಕ್ಷ್ಮಿ ಸನ್ನಿಧಿ ಆಸುಪಾಸಿನಲ್ಲಿ ಕಳೆದ 3 ವರ್ಷಗಳ ಹಿಂದೆ ಯುವತಿಯೊಬ್ಬಳು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ಬೆನ್ನತ್ತಿದ ಕೊರಟಗೆರೆ ಪೆÇಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಇತ್ತೀಚಿಗೆ ಯಶಸ್ವಿಯಾಗಿದೆ. 2019 ರಲ್ಲಿ ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಸನ್ನಿಧಿಯ ಹತ್ತಿರದಲ್ಲಿ 17ವರ್ಷದ ಯುವತಿಯೋರ್ವಳ ಅರೆಬರೆ ಬೆಂದ ಸ್ಥಿತಿಯಲ್ಲಿ ಯಾರೋ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಯಿಸಲಾದ ಪ್ರಕರಣ ಬೆನ್ನತ್ತಿದ್ದ ಕೊರಟಗೆರೆ ಪೆÇಲೀಸ್ ತಂಡ ಬೆಳಗಾಂ ನಲ್ಲಿ ಅಡಗಿದ್ದ ಆರೋಪಿಯ ಹೆಡೆಮುರಿ ಕಟ್ಟಿ ಜೈಲಿಗಟ್ಟಲಾಗಿದೆ. ಬೆಳಗಾಂನ ಆರೋಪಿ ರೂಪೇಶ್ ಕಳೆದ 3 ವರ್ಷಗಳ ಹಿಂದೆ ಅಂದರೆ 2019ರಲ್ಲಿ 17 ವರ್ಷದ ಮಹಿಳೆಯೊಬ್ಬಳನ್ನ ಡ್ರಾಪ್ ನೀಡುವ ನೆಪದಲ್ಲಿ ಕಾರಿನಲ್ಲಿ ಹತ್ತಿಸಿಕೊಂಡು ಬಂದವನು ಒಡವೆ ಹಾಗೂ ಹಣಕ್ಕಾಗಿ ಈ ಕೃತ್ಯ ಎಸಗಿದ್ದಾಗಿ ಪೆÇಲೀಸರ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಾಪುರ್, ಅಡಿಷನಲ್ ಎಸ್ಪಿ ಉದೇಶ್, ಡಿವೈಎಸ್ಪಿ…
ತುಮಕೂರು: ಬಾಲ ಕಾರ್ಮಿಕತೆಯನ್ನು ಹೋಗಲಾಡಿಸಿ, ಮಕ್ಕಳಿಗೆ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಎಲ್ಲರೂ ಕೈಜೊಡಿಸಬೇಕಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಜಿ ಕೃಷ್ಣಪ್ಪ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಜೀವನ ನಿರ್ವಹಣೆ ಮಾಡಲು ಕಷ್ಟವಿರುವ ಕುಟುಂಬಗಳಲ್ಲಿ ಚಿಕ್ಕ ಮಕ್ಕಳನ್ನು ವಿವಿಧ ಕೆಲಸಗಳಿಗೆ ಕಾರ್ಮಿಕರನ್ನಾಗಿ ಮಾಡಿ ದುಡಿಸಿಕೊಳ್ಳಲಾಗುತ್ತಿದೆ ಎಂದ ಅವರು ಚಿಂದಿ ಆಯುವುದು, ಸರ್ಕಲ್ಗಳಲ್ಲಿ ಭಿಕ್ಷೆ ಬೇಡುವ ಕೆಲಸಗಳಲ್ಲಿ ಭಾಗಿಯಾಗುವುದನ್ನು ತಪ್ಪಿಸಿ ಅವರಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ರಾಘವೇಂದ್ರ ಶೆಟ್ಟಿಗಾರ್ ಮಾತನಾಡಿ ಬಾಲಕಾರ್ಮಿ ಕತೆಗೆ ಬಡತನ ಮತ್ತು ಅನಕ್ಷರತೆ ಮುಖ್ಯ ಕಾರಣಗಳಾಗಿದ್ದು, ಸರಕಾರಗಳು ಇವುಗಳನ್ನು ಹೋಗಲಾಡಿಸಲು ಅನೇಕ ಪೂರಕ ಕ್ರಮಗಳನ್ನು ಕೈಗೊಂಡಿದೆ.6 ರಂದ 14…
ತುಮಕೂರು ಮಹಾನಗರ ಪಾಲಿಕೆ ಅಧಿಕಾರಿಗಳ ಧೋರಣೆ ಖಂಡಿಸಿ ಕಸದ ಆಟೋ ಚಾಲಕರು ಹಾಗೂ ಕೆಲಸಗಾರರು ಇಂದು ಬೆಳಿಗ್ಗೆ ದಿಢೀರನೆ ಪಾಲಿಕೆ ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದರು. ಮಹಾನಗರ ಪಾಲಿಕೆ ಇಂಜಿನಿಯರ್ ಮಧುಕರ್ ಅವರು ಪಾಲಿಕೆಯ ಕಸದ ಪ್ರತಿ ಆಟೋ ಚಾಲಕರು ಮತ್ತು ಕೆಲಸಗಾರರಿಗೆ ಪ್ರತಿದಿನ 100 ಕೆ.ಜಿ. ಪ್ಲಾಸ್ಟಿಕ್ ಸಂಗ್ರಹಿಸಿಕೊಂಡು ಬರಲೇಬೇಕು ಎಂದು ತಾಕೀತು ಮಾಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ಧೋರಣೆ ಖಂಡಿಸಿ ಕಸದ ಆಟೋ ಚಾಲಕರು ಹಾಗೂ ಕೆಲಸಗಾರರು ದಿಢೀರ್ ಪ್ರತಿಭಟನೆಗೆ ಮುಂದಾದರು. ಪಾಲಿಕೆಯ ಇಂಜಿನಿಯರ್ ಮಧುಕರ್ ಅವರು ಪ್ರತಿ ಕಸದ ಆಟೋ 100 ಕೆ.ಜಿ. ಪ್ಲಾಸ್ಟಿಕ್ ಸಂಗ್ರಹಿಸಲೇಬೇಕು ಎಂದು ತಾಕೀತು ಮಾಡಿದ್ದಾರೆ. ಹಾಗಾಗಿ ಸೂಪರ್ವೈಸರ್ಗಳು ನಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಪ್ರತಿ ಆಟೋಗೆ ದಿನನಿತ್ಯ 10 ಕೆ.ಜಿ. ಪ್ಲಾಸ್ಟಿಕ್ ಸಿಗುವುದೇ ಕಷ್ಟ. ಹೀಗಿರುವಾಗ 100 ಕೆ.ಜಿ. ಎಲ್ಲಿಂದ ತಂದು ಕೊಡುವುದು. ನಮಗೆ ಸಿಗುವಷ್ಟು ತಂದು ಕೊಡುತ್ತೇವೆ ಎಂದರೆ ನೀವೇನು ನಿಮ್ಮ ಮನೆಯಿಂದ ತಂದು ಕೊಡುತ್ತೀರಾ, ಅದು ಕಾಪೆರ್Çೀರೇಷನ್ ಸ್ವತ್ತು ತಂದು…
ತುಮಕೂರು: ಸರ್ಕಾರದ ಬಹು ನಿರೀಕ್ಷಿತ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮವು ಜೂನ್ 18ರಂದು ಜಿಲ್ಲೆಯ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಗ್ರಾಮದಲ್ಲಿ ನಡೆಯಲಿದ್ದು, ಕಂದಾಯ ಸಚಿವ ಆರ್.ಅಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಎಲ್ಲಾ ಇಲಾಖೆಗಳು ತಮ್ಮ ಇಲಾಖೆಯ ಪ್ರಯೋಜನಗಳನ್ನು ತಿಳಿಸಲು 30ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಮಾಹಿತಿ ನೀಡಬೇಕಲ್ಲದೇ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಸೂಚಿಸಿದರು. ಆರೋಗ್ಯ ಇಲಾಖಾಧಿಕಾರಿಗಳು ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಬೇಕಲ್ಲದೆ ಶಿಬಿರದಲ್ಲಿ ಆಯುμÁ್ಮನ್ ಕಾರ್ಡು ವಿತರಣೆ ಹಾಗೂ ಕಣ್ಣಿನ ತಪಾಸಣೆ ನಡೆಸಿ ಕನ್ನಡಕಗಳನ್ನು ವಿತರಣೆ ಮಾಡಬೇಕು ಎಂದು ನಿರ್ದೇಶಿಸಿದರು. ಸಾರ್ವಜನಿಕರು ನೀಡುವ ಅಹವಾಲುಗಳನ್ನು ಸ್ವೀಕರಿಸುವ ಹಾಗೂ ಪರಿಹಾರ ಕಲ್ಪಿಸುವ ಸಂಬಂಧ…
ಕೊರಟಗೆರೆ: ಬೆಂಗಳೂರು ಮೂಲದ ವ್ಯಕ್ತಿಯೋರ್ವ ಜಮೀನು ಕೊಂಡುಕೊಳ್ಳಲು ಕಾರಿನಲ್ಲಿ ಇಟ್ಟಿದ್ದ 15 ಲಕ್ಷ ರೂ. ಹಣವನ್ನು ಬಿಹಾರ್ ಮೂಲದ ಡ್ರೈವರ್ ಕೊರಟಗೆರೆ ಸರಹದ್ದಿನಲ್ಲಿ ಕದ್ದು ಪರಾರಿಯಾಗಿರುವ ಪ್ರಕರಣ ಕೊರಟಗೆರೆ police ತಂಡ ಆರೋಪಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಮೂಲದ ಸತೀಶ್ ಎಂಬ ವ್ಯಕ್ತಿ ಕೊರಟಗೆರೆ ಪಟ್ಟಣದ ಓಲ್ಡ್ ಗೆರೆ ಕ್ರಾಸ್ ನ ಬಳಿ ಜಮೀನು ಕೊಳ್ಳಲು ಅಡ್ವಾನ್ಸ್ ನೀಡುವುದಕ್ಕಾಗಿ ತರಲಾಗಿದ್ದ 15ಲಕ್ಷ ರೂ ಹಣವನ್ನ ಆತನ ಡ್ರೈವರ್ ಬಿಹಾರ ಮೂಲದ ಬಿಪಿನ್ ಕೊರಟಗೆರೆ ಪಟ್ಟಣದ ಓಲ್ಡ್ ಗೆರೆ ಕ್ರಾಸ್ ನ ಬಳಿ ಕಾರಿನಲ್ಲಿ ಇಟ್ಟ ಹಣವನ್ನ ತೆಗೆದುಕೊಂಡು ಪರಾರಿಯಾಗಿದ್ದ ಪ್ರಕರಣದ ಆರೋಪಿಯನ್ನ ಇತ್ತೀಚಿಗೆ ಕೊರಟಗೆರೆ ಪೆÇಲೀಸ್ ತಂಡ ಸೆರೆ ಹಿಡಿದು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದಾರೆ. ಜಮೀನು ಕೊಳ್ಳಲು ಬೆಂಗಳೂರಿನ ಮೂಲದ ಸತೀಶ್ ಎಂಬ ವ್ಯಕ್ತಿ ಅಡ್ವಾನ್ಸ್ ನೀಡಲು 15 ಲಕ್ಷಣವನ್ನು ಕಾರಿನ ಡ್ರಾನಲ್ಲಿ ಇಟ್ಟು ಜಮೀನು ನೋಡಲು ಹೋದಾಗ ಡ್ರೈವರ್ ಗೆ ಹಣ ಇದೆ ಕಾರಿನಲ್ಲಿಯೇ ಕುಳಿತುಕೋ ಎಂದು ಹೇಳಿ ಪರಿಚಯಸ್ಥರ…
ತುಮಕೂರು ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ, ದಬ್ಬಾಳಿಕೆ-ಕಿರುಕುಳ ಖಂಡಿಸಿ, ಬಗರ್ ಹುಕಂ ಸಾಗುವಳಿದಾರರ ಹಕ್ಕು ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಛೇರಿ ಎದುರು ಜೂನ್ 14 ರಿಂದ ರೈತರ ಬೃಹತ್ ಅನಿರ್ದಿಷ್ಟ ಧರಣಿ ನಡೆಯಲಿದೆ. ದೌರ್ಜನ್ಯ, ದಬ್ಬಾಳಿಕೆ ಬಳಸಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಂಡಿರುವ ಬಗರ್ ಹುಕಂ ಸಾಗುವಳಿ ಭೂಮಿ ಮರಳಿಸಲು ,ಎಲ್ಲಾ ಬಗರ್ ಹುಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ,ಸಾಗುವಳಿ ಮಂಜೂರಾತಿ ಆದೇಶ ಪಡೆದಿರುವ ಎಲ್ಲಾ ಬಗರ್ ಹುಕಂ ರೈತರಿಗೆ ದುರಸ್ತು ಮಾಡಿ ಪಹಣಿ ವಿತರಿಸಲು, ಬಗರ್ ಹುಕಂ ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಅವಕಾಶವನ್ನು ವಿಳಂಬ ಮಾಡದೇ ಕಲ್ಪಿಸಲು ,ವಸತಿ ರಹಿತರಿಗೆ ಮನೆ-ನಿವೇಶನಕ್ಕಾಗಿ ಸರ್ಕಾರಿ ಭೂಮಿ ಲಭ್ಯ ಇಲ್ಲದ ಕಡೆ ಭೂ ಸ್ವಾಧೀನದ ಮೂಲಕ ಮನೆ -ನಿವೇಶನ ಒದಗಿಸಲು ,ವಿವಿಧ ಯೋಜನೆಗಳಿಗೆ ಭೂ ಸ್ವಾಧೀನಕ್ಕೆ ಒಳಗಾದ ಬಗರ್ ಹುಕಂ ಸಾಗುವಳಿದಾರರು ಸೇರಿದಂತೆ ಎಲ್ಲಾ ರೈತರಿಗೆ ಪರಿಹಾರದ ಹಣ ನೀಡಲು ಆಗ್ರಹಿಸಿ ಜೂನ್ 14 ರಿಂದ ತುಮಕೂರು ಜಿಲ್ಲಾಧಿಕಾರಿ ಕಛೇರಿ ಎದುರು…
ತುಮಕೂರು ಕೆಲವು ಪಠ್ಯಗಳಲ್ಲಿ ಇರಬಹುದಾದ ಸೂಕ್ಷ್ಮ ಸಂಕೀರ್ಣ ವಿಷಯಗಳ ಕುರಿತು ಪರಿಶೀಲಿಸಿ ವರದಿ ನೀಡುವುದಕ್ಕೆ ರಚಿಸಲಾದ ರೋಹಿತ್ ಚಕ್ರವರ್ತಿ ಅಧ್ಯಕ್ಷೀಯ ಸಮಿತಿ ತನಗೆ ವಹಿಸಿದ ಜವಾಬ್ದಾರಿಯನ್ನು ಮೀರಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾದ ದುಷ್ಕøತ್ಯವನ್ನು ಭಾರತ ಕಮ್ಯುನಿಸ್ಟ್ ಪಕ್ಷ ( ಮಾಕ್ರ್ಸವಾದಿ) ತುಮಕೂರು ಜಿಲ್ಲಾ ಸಮಿತಿ ಬಲವಾಗಿ ಖಂಡಿಸುತ್ತದೆ. ಈ ಸರಕಾರದಲ್ಲಿ ಯಾರು ಹೇಗೆ ಬೇಕಾದರೂ ವರ್ತಿಸಬಹುದೆಂಬುದನ್ನು ಮತ್ತು ಆಡಳಿತದ ಮೇಲೆ ಸರಕಾರದ ಯಾವುದೇ ನಿಯಂತ್ರಣವಿಲ್ಲವೆಂಬುದನ್ನು ಮತ್ತೊಮ್ಮೆ ಸ್ಪಷ್ಠ ಪಡಿಸುತ್ತದೆ. ಯಾವುದೇ ಸೂಕ್ತ ವೇದಿಕೆಗಳಲ್ಲಿ ಚರ್ಚಿಸದೇ, ಸೂಕ್ತ ಆದೇಶ ಹೊರಡಿಸದೇ ತಮಗೆ ತಿಳಿದಂತೆ ಕಾರ್ಯ ನಿರ್ವಹಿಸುವುದು, ಇಲ್ಲವೇ ಮತ್ಯಾವುದೋ ಅವಿತಿಟ್ಟುಕೊಂಡ ದುಷ್ಠ ಶಕ್ತಿಯ ನಿಯಂತ್ರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವುದನ್ನು ಇದು ಮತ್ತೊಮ್ಮೆ ಎತ್ತಿ ತೋರಿಸುತ್ತದೆ. ಈ ಅಧಿಕಾರ ದುರುಪಯೋಗದಿಂದ ಮತ್ತು ತಜ್ಞರಲ್ಲದವರ ದುರ್ನಡೆಯಿಂದ ನಾಡಿನ ಗಣ್ಯ ವ್ಯಕ್ತಿಗಳು ಅಪಮಾನಿತರಾಗುವಂತಾಯಿತು. ರಾಜ್ಯದ ದಶ ಲಕ್ಷಾಂತರ ಶಾಲಾ ಮಕ್ಕಳು ಪಠ್ಯ ಪುಸ್ತಕ ಲಭ್ಯವಿಲ್ಲದೇ ಶೈಕ್ಷಣಿಕವಾಗಿ ಈ ವರ್ಷವೂ ತೊಂದರೆಗೀಡಾಗುವಂತಾಯಿತು. ಮಾತ್ರವಲ್ಲಾ, ರಾಜ್ಯದ ಬೊಕ್ಕಸದ ನೂರಾರು ಕೋಟಿ…










