ತುಮಕೂರು: ಗುಬ್ಬಿಯ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ತಮ್ಮ ಪಕ್ಷದ ಮುಖಂಡ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, `ಅವನು ಉತ್ತಮನಾ, ಅವನು ಯಾವುದರಲ್ಲಿ ಉತ್ತಮನೆಂದು ಹೇಳಲಿ. ಬೆಳಿಗ್ಗೆ ಒಂದು ಹೇಳುತ್ತಾನೆ, ಸಂಜೆ ಮತ್ತೊಂದು ಹೇಳುತ್ತಾನೆ. ಊಸರವಳ್ಳಿ ಇದ್ದಂತೆ’ ಎಂದು ನಿಂದಿಸಿದರು. ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಶ್ರೀನಿವಾಸ್ ಮತ ಹಾಕಿಲ್ಲ ಎಂಬ ಕಾರಣ ಮುಂದಿಟ್ಟುಕೊಂಡು, ಕುಮಾರಸ್ವಾಮಿ ಹರಿಹಾಯ್ದಿದಿದ್ದರು. ಅಡ್ಡ ಮತದಾನ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿರುವ ಮನೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು. ಇದಕ್ಕೆ ಪ್ರತಿಯಾಗಿ ಶ್ರೀನಿವಾಸ್ ಟೀಕಾ ಪ್ರಹಾರ ನಡೆಸಿದ್ದಾರೆ. `ಇನ್ನು ಮುಂದೆ ನೋಡಲಿ, ಎಲ್ಲವನ್ನೂ ಬಿಚ್ಚಿಡುತ್ತೇನೆ. ಯಾವುದರಲ್ಲಿ ಪರಿಶುದ್ಧವಾಗಿ ಇದ್ದಾನೆ. ಕಚ್ಚೆ ಸರಿ ಇಲ್ಲ, ಬಾಯಿ ಸರಿ ಇಲ್ಲ. ಇನ್ನೊಬ್ಬರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ? ಇವನ ವಿರುದ್ಧ ಹೋರಾಟ ಮಾಡುವುದು ನನ್ನ ಮುಂದಿನ ನಡೆ. ನಾನು ಸೋತರೂ ಪರವಾಗಿಲ್ಲ. ಇವನ ಅಭ್ಯರ್ಥಿಯನ್ನು ಗೆಲ್ಲುವುದಕ್ಕೆ ಬಿಡುವುದಿಲ್ಲ. ಅವನು ಗಂಡಸಾದರೆ ನನ್ನ…
Author: News Desk Benkiyabale
ಗುಬ್ಬಿ: ಜೆಡಿಎಸ್ ಪಕ್ಷದ ಸದಸ್ಯನಾಗಿ ಹಾಗೂ ನಾಲ್ಕು ಬಾರಿ ಶಾಸಕನಾಗಿ ಪಕ್ಷದ ಎಲ್ಲಾ ಸೌಲಭ್ಯಗಳನ್ನು ಪಡೆದು ಪಕ್ಷಕ್ಕೆ ದ್ರೋಹವೆಸಗಿದ ಶಾಸಕ ಎಸ್.ಆರ್.ಶ್ರೀನಿವಾಸ್ ಕೂಡಲೇ ಪಕ್ಷಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಜೆ.ಡಿ.ಎಸ್.ಮುಂಖಡ ಬಿ.ಎಸ್.ನಾಗರಾಜು ಒತ್ತಾಯಿಸಿದರು. ಪಟ್ಟಣದ ಜೆ.ಡಿ.ಎಸ್.ಕಛೇರಿಯಿಂದ ನೂರಾರು ಕಾರ್ಯಕರ್ತರೊಡನೆ ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ದ ಘೋಷಣೆಗಳನ್ನು ಕೂಗುತ್ತಾ ರಸ್ತೆ ತಡೆ ನಡೆಯಿಸಿ ಮಾತನಾಡಿದ ಅವರು ಕಳೆದ ಸುಮಾರು 20 ವರ್ಷಗಳಿಂದ ಗುಬ್ಬಿ ತಾಲ್ಲೂಕಿನ ಮತದಾರರ ಕಣ್ಣಿಗೆ ಮಣ್ಣು ಎರಚಿ ಮತಬ್ಯಾಂಕ್ಗಳನ್ನಾಗಿ ಪರಿವರ್ತಿಸಿದ ಖ್ಯಾತಿ ಈ ಶಾಸಕರದ್ದಾಗಿದೆ. ತಾಲ್ಲೂಕಿನ ಜನತೆಯನ್ನು ಮೂರ್ಖರನ್ನಾಗಿ ಮಾಡಿ ಯಾವುದೇ ಗುರುತಿಸುವಂತಹ ಕೆಲಸವನ್ನು ಈ ತಾಲ್ಲೂಕಿನಲ್ಲಿ ನಡೆಯದೇ ಇರುವುದು ಈ ತಾಲ್ಲೂಕಿನ ಮತದಾರರ ದೌಭಾಗ್ಯವೇ ಸರಿ ಎಂದ ಅವರು ಪಕ್ಷಕ್ಕೆ ದ್ರೋಹವೆಸಗಿ ಬೇರೆ ಪಕ್ಷಕ್ಕೆ ಮತ ನೀಡಿ ತಾನು ನಿಷ್ಟಾವಂತ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂದು ಬಿಂಬಿಸುತ್ತಿರುವುದಕ್ಕೆ ಈ ತಾಲ್ಲೂಕಿನ ಜನರೇನು ದಡ್ಡರೇನು ಅಲ್ಲ. ಆತ್ಮ ಸಾಕ್ಷಿ ಎಂಬುವುದು ಶಾಸಕರಲ್ಲಿ ಇದ್ದರೆ ಈ ಕೂಡಲೇ ಪಕ್ಷದ ಸದಸ್ಯತ್ವಕ್ಕೆ…
ತುಮಕೂರು: ತುಮಕೂರು ನಗರದ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಕವಿತ (21) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ 12.30ರ ಸುಮಾರಿಗೆ ನಡೆದಿದೆ. ಕಾಲೇಜು ಹಾಸ್ಟೆಲ್ನ ಸಂಗಮಿತ್ರ ಬ್ಲಾಕ್ ನಲ್ಲಿ ಘಟನೆ ಸಂಭವಿಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿರುವುದಿಲ್ಲ. ಮೃತ ವಿದ್ಯಾರ್ಥಿನಿ ಕವಿತ ಮೈಸೂರು ಮೂಲದವರು ಎಂದು ತಿಳಿದು ಬಂದಿದೆ. ತಿಲಕ್ಪಾರ್ಕ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯಡಿ ಇಂದು ತಿಪಟೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ನೇಹ ಜೀವನ ಫೌಂಡೇಶನ್ (ಗುಬ್ಬಿ) ಇವರುಗಳ ಸಂಯುಕ್ತಾಶ್ರಯದಲ್ಲಿಂದು ತಿಪಟೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಕಾರ್ಯ ನಿರ್ವಾಹಕ ಅಧಿಕಾರಿ ಸುದರ್ಶನ್ ಅವರು, ಪ್ರತಿಯೊಂದು ಮನೆಗೂ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸುವುದು ಸಮರ್ಪಕವಾದ ಶುದ್ಧವಾದ ನೀರನ್ನು ಎಲ್ಲರಿಗೂ ಸಹ ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿ ಗ್ರಾಮಗಳಲ್ಲೂ ಸರಿಯಾದಂತಹ ನೀರು ಸರಬರಾಜು ವ್ಯವಸ್ಥೆಯನ್ನು ಮಾಡುವಂತಹ ಕೆಲಸಗಳಲ್ಲಿ ಗ್ರಾಮಪಂಚಾಯಿತಿಯ ಪಾತ್ರ ಅತ್ಯಂತ ಮಹತ್ವವಾಗಿದ್ದು, ಗ್ರಾಮ ಪಂಚಾಯಿತಿಯ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಧ್ಯಕ್ಷರುಗಳು ಹೆಚ್ಚಿನ ಆಸಕ್ತಿ ವಹಿಸಿ, ಯೋಜನೆಯ ಲಾಭವನ್ನು ಎಲ್ಲ ಗ್ರಾಮಸ್ಥರುಗಳಿಗೆ ತಲುಪಿಸುವಂತೆ ಕ್ರಮವಹಿಸಬೇಕು. ಯೋಜನೆಯಲ್ಲಿ ಬರುವಂತಹ ಸಮುದಾಯ ವಂತಿಕೆ ಏಕೆ…
ತುಮಕೂರು: ಜಿಲ್ಲಾ ಪಂಚಾಯಿತಿ ತುಮಕೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಕಚೇರಿಗಳಲ್ಲಿನ ಶಿಶುಪಾಲನಾ ಕೇಂದ್ರ ತೆರೆಯ ಬೇಕೆಂಬ ರಾಜ್ಯ ಸರಕಾರದ ನಿರ್ದೇಶನದ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಮರ್ಥ್ ಪೌಂಢೇಷನ್ ಸಹಯೋಗದಲ್ಲಿ ಶಿಶುಪಾಲನಾ ಕೇಂದ್ರವನ್ನು ಉದ್ಘಾಟಿಸಲಾಯಿತು. ಜಿಲ್ಲಾ ಪಂಚಾಯತ್ ಕಚೇರಿಯ ಮೂರನೇ ಮಹಡಿಯಲ್ಲಿ ಶಿಶುಪಾಲನಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಸಿಇಓ ಡಾ.ಕೆ.ವಿದ್ಯಾಕುಮಾರಿ, ಸರಕಾರದ ನಿರ್ದೇಶನದಂತೆ ಮಹಿಳಾ ಸರಕಾರಿ ನೌಕರರ ಅನುಕೂಲಕ್ಕಾಗಿ ನಗರದಲ್ಲಿ ಎರಡು ಕಡೆ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲು ಮುಂದಾಗಿದ್ದು,ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿಯೂ ಇದೇ ರೀತಿಯೇ ಕೇಂದ್ರವನ್ನು ತೆರೆಯಲು ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಖಾಸಗಿ ಕ್ಷೇತ್ರದಲ್ಲಿರುವ ಉದ್ಯೋಗಸ್ತ ಮಹಿಳೆಯರ 0-6 ವರ್ಷದವರೆಗಿನ ಮಕ್ಕಳ ಪಾಲನೆಗಾಗಿ ಜಿಲ್ಲೆಯಲ್ಲಿ ಎರಡು ಕಡೆ ಇದೇ ರೀತಿಯ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲು ಈಗಾಗಲೇ ಜಾಗ ಗುರುತಿಸಿ, ರಾಜ್ಯ ಸರಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಅನುಮೋಧನೆ ದೊರೆತ ಕೂಡಲೇ ತುಮಕೂರು ಮತ್ತು ತಿಪಟೂರಿನಲ್ಲಿ ಈ ಕೇಂದ್ರಗಳು ಆರಂಭಗೊಳ್ಳಲಿವೆ ಎಂದರು. ಜಿಲ್ಲಾ…
ತುಮಕೂರು: ನಗರದ ಸಪ್ತಗಿರಿ ಬಡಾವಣೆಯ ರಾಘವೇಂದ್ರ ನಗರದ ಟಿ.ಪಿ.ಕೈಲಾಸಂ ರಸ್ತೆಯಲ್ಲಿ ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯ ಕಚೇರಿಯನ್ನು ಉದ್ಘಾಟಿಸಲಾಯಿತು. ಭಾರತಾಂಭೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯ ಕಚೇರಿಯನ್ನು ಅಧಿಕೃತವಾಗಿ ಚಾಲನೆಗೆ ದೊರೆಯಿತು. ರಾಷ್ಟ್ರೀಯ ಗೌರವಾಧ್ಯಕ್ಷ ಎಸ್.ಪಿ.ಚಿದಾನಂದ ಮಾತನಾಡಿ, ನಮ್ಮ ಪಡೆಯನ್ನು ಕಟ್ಟಿರುವ ಪ್ರಮುಖ ಉದ್ದೇಶವೆಂದರೆ, ಮಾನವ ಹಕ್ಕುಗಳು ಮತ್ತು ಮಕ್ಕಳ ಹಕ್ಕುಗಳ ಸಂರಕ್ಷಣೆಯ ಜೊತೆಗೆ, ಭ್ರಷ್ಟಾಚಾರವನ್ನು ಕಿತ್ತೊಗೆಯುವುದು. ಗೋಶಾಲೆಗಳ ನಿರ್ವಹಣೆ ಮತ್ತು ಗೋವು ಹಾಗೂ ಅದರ ಸಂತತಿ ರಕ್ಷಣೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕ್ಷೇತ್ರವನ್ನು ಭ್ರಷ್ಟಾಚಾರ ಮುಕ್ತ ಮಾಡಿ, ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವುದು, ಕೃಷಿ ಮತ್ತು ಅದಕ್ಕೆ ಪೂರಕ ಕ್ಷೇತ್ರಗಳನ್ನು ಬಲಿಷ್ಠಗೊಳಿಸುವುದು, ಪರಿಸರದ ಆಪಾಯಕಾರಿ ತ್ಯಾಜ್ಯಗಳಿಂದಾಗುತ್ತಿರುವ ದುಷ್ಪರಿಣಾಮವನ್ನು ಕಡಿಮೆ ಮಾಡುವುದು. ಪ್ರಾಣಿಗಳ ಹಕ್ಕು ಸಂರಕ್ಷಣೆ, ಗ್ರಾಮೀಣ ಮತ್ತು ನಗರಗಳ ಅಭಿವೃದ್ದಿಯಲ್ಲಿ ತೊಡಗಿಸಿಕೊಳ್ಳುವುದು. ಯುವ ಜನರ ಸಬಲೀಕರಣಕ್ಕೆ ಒತ್ತು ನೀಡುವುದು, ವಿಜ್ಞಾನ ಮತ್ತು ತಂತ್ರಜ್ಞಾನದ,ಮಾಹಿತಿ ಸಂವಹನ ಕ್ಷೇತ್ರದಲ್ಲಿ ಯುವಜನರನ್ನು…
ತುಮಕೂರು: ರೈತರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ, ದಬ್ಬಾಳಿಕೆ-ಕಿರುಕುಳ ಖಂಡಿಸಿ, ಬಗರ್ ಹುಕುಂ ಸಾಗುವಳಿದಾರರ ಹಕ್ಕು ರಕ್ಷಣೆಗಾಗಿ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಜೂ. 14 ರಿಂದ ರೈತರ ಬೃಹತ್ ಅನಿರ್ಧಿಷ್ಟಾವಧಿ ಧರಣಿಯನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದೆ. ದೌರ್ಜನ್ಯ, ದಬ್ಬಾಳಿಕೆ ಬಳಸಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಂಡಿರುವ ಬಗರ್ ಹುಕಂ ಸಾಗುವಳಿ ಭೂಮಿ ಮರಳಿಸಲು, ಎಲ್ಲಾ ಬಗರ್ ಹುಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು, ಸಾಗುವಳಿ ಮಂಜೂರಾತಿ ಆದೇಶ ಪಡೆದಿರುವ ಎಲ್ಲಾ ಬಗರ್ಹುಕುಂ ರೈತರಿಗೆ ಪಹಣಿ ವಿತರಿಸಲು, ಬಗರ್ ಹುಕುಂ ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಅವಕಾಶವನ್ನು ವಿಳಂಬ ಮಾಡದೇ ಕಲ್ಪಿಸಲು, ವಸತಿ ರಹಿತರಿಗೆ ಮನೆ-ನಿವೇಶನಕ್ಕಾಗಿ ಸರ್ಕಾರಿ ಭೂಮಿ ಲಭ್ಯ ಇಲ್ಲದ ಕಡೆ ಭೂ ಸ್ವಾಧೀನದ ಮೂಲಕ ಮನೆ -ನಿವೇಶನ ಒದಗಿಸಲು, ವಿವಿಧ ಯೋಜನೆಗಳಿಗೆ ಭೂ ಸ್ವಾಧೀನಕ್ಕೆ ಒಳಗಾದ ಬಗರ್ ಹುಕುಂ ಸಾಗುವಳಿದಾರರು ಸೇರಿದಂತೆ ಎಲ್ಲಾ ರೈತರಿಗೆ ಪರಿಹಾರದ ಹಣ ನೀಡಲು ಆಗ್ರಹಿಸಿ ರೈತರ ಬೃಹತ್ ಧರಣಿಯನ್ನು ನಡೆಸಲಾಗುತ್ತಿದೆ…
ತುಮಕೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂನ್ 16 ಮತ್ತು 17, 2022 ರಂದು ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯು ತುಮಕೂರು ನಗರದ 14, ಶಿರಾ 2 ಮತ್ತು ತಿಪಟೂರಿನ 2 ಪರೀಕ್ಷಾ ಕೇಂದ್ರಗಳಂತೆ ಒಟ್ಟು 18 ಕೇಂದ್ರಗಳಲ್ಲಿ ನಡೆಯಲಿದ್ದು, ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಶಿಷ್ಟಾಚಾರವನ್ನು ಕಾಯ್ದುಕೊಂಡು ನಿಯಮಾನುಸಾರ ಪರೀಕ್ಷೆಯನ್ನು ನಡೆಸುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಕರೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ವಿಡೀಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಸಿಇಟಿ ಪರೀಕ್ಷೆಗೆ ಸಂಬಂಧಿಸಿದ ವಿಡೀಯೊ ಕಾನ್ಫರೆನ್ಸ್ ಸಭೆಯ ನಂತರ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಉದ್ದೇಶಿಸಿ ಈ ಮೇಲಿನಂತೆ ಸೂಚನೆ ನೀಡಿದರು. ತುಮಕೂರು ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ 6264, ಶಿರಾ ತಾಲ್ಲೂಕಿನ 2 ಪರೀಕ್ಷಾ ಕೇಂದ್ರಗಳಲ್ಲಿ 984 ಮತ್ತು ತಿಪಟೂರು ತಾಲ್ಲೂಕಿನ 2 ಕೇಂದ್ರಗಳಲ್ಲಿ 1488 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ…
ತುಮಕೂರು: ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 2022-23ನೇ ಸಾಲಿನಲ್ಲಿ ನಗರದ 12 ಪಾರ್ಕ್ಗಳ ಅಭಿವೃದ್ಧಿಗೆ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇಲ್ಲಿಯ ಮಾರುತಿನಗರ 3ನೇ ಕ್ರಾಸ್ನಲ್ಲಿರುವ ಸಂಜೀವಿನಿ ಉದ್ಯಾನವನದಲ್ಲಿ ಗುರುವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಪಾರ್ಕ್ಗಳ ಅಭಿವೃದ್ಧಿಗೆ ನಾಗರೀಕ ಸಮಿತಿಗಳ ಸಹಕಾರ ಅತೀ ಮುಖ್ಯವಾಗಿದೆ ಎಂದರು. 1.74 ಕೋಟಿ ರೂ. ವೆಚ್ಚದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ 12 ಪಾರ್ಕ್ಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯೇ ಪಾರ್ಕ್ಗಳ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಕರೆಯಲಾಗಿತ್ತು. ಕೋವಿಡ್ ಹಿನ್ನಲೆಯಲ್ಲಿ ಯಾರೂ ಟೆಂಡರ್ ಹಾಕದ ಕಾರಣ, ಟೆಂಡರ್ ವಾಪಸ್ ಹೋಗಿತ್ತು. ಮತ್ತೆ ರೀಟೆಂಡರ್ ಆಗಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ಮಾರುತಿನಗರದ ಸಂಜೀವಿನಿ ಉದ್ಯಾನವನ ದೊಡ್ಡ ಪಾರ್ಕ್ ಆಗಿರುವುದರಿಂದ 22 ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಸ್ಮಾರ್ಟ್ಸಿಟಿಯಿಂದ ಸುಮಾರು 30-35 ಕೋಟಿ ರೂ. ಪಾರ್ಕ್ಗಳ ಅಭಿವೃದ್ಧಿಗೆ ಸಿಕ್ಕಿದೆ. ಇದರ ಜೊತೆಗೆ ಟೂಡಾದವರೂ ಸಹ ಕೈಜೋಡಿಸಿ ಪಾರ್ಕ್ಗಳ…
ತುರುವೇಕೆರೆ: ತಾಲೂಕಿನ ಜಿ.ಮಂಚೇನಹಳ್ಳಿಯ ಗೊಲ್ಲರಹಟ್ಟಿಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಕೇಂದ್ರ ತೆಂಗು ಮತ್ತು ನಾರು ಅಭಿವೃದ್ಧಿ ಮಂಡಲಿಯ ನಿರ್ದೇಶಕ ಎಂ.ಟಿ.ಕೃಷ್ಣಮೂರ್ತಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಜಿ.ಮಂಚೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ಬಹುಪಾಲು ಹಿಂದುಳಿದ ವರ್ಗಗಳ ಜನಾಂಗದ ಜನರು ವಾಸಿಸುತ್ತಿದ್ದಾರೆ. ಇಲ್ಲಿ ಯಾವುದೇ ಮೂಲಭೂತ ಸೌಕರ್ಯವನ್ನು ಒದಗಿಸಲು ತಾಲೂಕು ಆಡಳಿತ ವಿಫಲವಾಗಿದೆ. ಈ ಸಂಬಂಧಿಸಿದಂತೆ ಹತ್ತಾರು ಬಾರಿ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ದೂರಿದರು. ಸಾರ್ವಜನಿಕರ ದೇಣಿಗೆಯಲ್ಲಿ ಗೊಲ್ಲರಹಟ್ಟಿಯ ರಸ್ತೆಯನ್ನು ಸಿಮೆಂಟ್ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲಾಗಿದೆ. ಆದರೆ ದಾರಿಯ ಆರಂಭದಲ್ಲಿರುವ ಜಮೀನಿನ ಮಾಲೀಕರೋರ್ವರು ಇಲ್ಲದ ತಕರಾರು ತೆಗೆದು ರಸ್ತೆಯನ್ನು ಸಂಪೂರ್ಣಗೊಳಿಸಲು ಅವಕಾಶ ನೀಡುತ್ತಿಲ್ಲ. ಇದರಿಂದಾಗಿ ಜನರು ಓಡಾಡಲು ತೊಂದರೆಯಾಗಿದೆ. ಮಳೆ ಬಂದರೆ ಗೊಲ್ಲರಹಟ್ಟಿಯೊಳಗೆ ಜನರು ಬರುವುದು ಅಸಾಧ್ಯವಾಗಿದೆ. ಅಲ್ಲದೇ ಸದರಿ ವ್ಯಕ್ತಿ ಗ್ರಾಮದಲ್ಲಿರುವ ಬಡವರಿಗೆ ಬೆದರಿಕೆ ಒಡ್ಡಿ ಅವರ ಆಸ್ತಿಗಳನ್ನು ಕಿತ್ತುಕೊಂಡಿದ್ದಾನೆ. ಹಲವಾರು ಬಡವರ ಜಮೀನನ್ನು ಬೆದರಿಸಿ ಒತ್ತುವರಿ ಸಹ ಮಾಡಿಕೊಂಡಿದ್ದಾನೆ. ರಾಜಕೀಯವಾಗಿ ಪ್ರಭಾವಿಯಾಗಿರುವ ಈತ ಬಡ…









