Author: News Desk Benkiyabale

ತುಮಕೂರು: ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಾದ ಬಿ.ಕೃಷ್ಣಪ್ಪನವರ 84ನೇ ಜಯಂತಿಯನ್ನು ಎನ್,ಆರ್ ಕಾಲೋನಿಯ ಶೈಕ್ಷಣಿಕ ಭವನದಲ್ಲಿ ಸಾಮಾಜಿಕ ಪರಿವರ್ತನೆಗಾಗಿ ಬಿ,ಕೃಷ್ಣಪ್ಪ ಪ್ರತಿಷ್ಠಾನ(ರಿ)ದಿಂದ ಆಯೋಜಿಸಲಾಗಿತ್ತು. ಬಿ.ಕೃಷ್ಣಪ್ಪ ನವರ ಅನುಯಾಯಿಗಳು ಮತ್ತು ದಸಂಸದ ಪ್ರಾರಂಭದ ದಿನಗಳಲ್ಲಿ ಬಿ.ಕೆ ಯವರ ಜೊತೆ ತುಮಕೂರು ಜಿಲ್ಲೆಯಲ್ಲಿ ದಲಿತ ಚಳುವಳಿಯನ್ನು ಕಟ್ಟಿದ ಕೆ.ದೊರೈರಾಜ್ ನುಡಿ ನೆನಪುಗಳ ಮೂಲಕ ಅಂದಿನ ಹೋರಾಟದ ದಿನಗಳನ್ನು ಎನ್.ಆರ್ ಕಾಲೋನಿಯ ಯುವಜನರೊಂದಿಗೆ ಹಂಚಿಕೊಂಡರು ನಮ್ಮ ವಿಮೋಚನೆಗೆ ಶ್ರಮಿಸಿದವರನ್ನು ಸ್ಮರಿಸಿಕೊಂಡು ಗೌರವಿಸುವುದು ನಮ್ಮ ಜವಾಬ್ದಾರಿ ಇದರಿಂದ ತುಳಿತಕ್ಕೆ ಒಳಪಟ್ಟಿರುವ ಜನರ ವಿಮೋಚನೆಗೆ ನಾವು ಪ್ರೇರಣೆಗೊಳ್ಳುತ್ತೇವೆ. ಭಾರತದಲ್ಲಿ ಮಾದರಿ ಚಳುವಳಿಯನ್ನು ಕಟ್ಟಿದವರು ಬಿ.ಕೆಯವರು ನಮ್ಮ ಜನಾಂಗದ ಧೌರ್ಬಲ್ಯ ನಮ್ಮ ಜೊತೆಗಿನ ನಾಯಕತ್ವವನ್ನು ಒಪ್ಪಿಕೊಳ್ಳುವುದಿಲ್ಲ. ಕಾರಣ ನಮ್ಮಲ್ಲಿರುವ ಗುಲಾಮಗಿರಿ ಆದರೆ 70ರ ದಶಕದಲ್ಲಿ ದಲಿತ ಚಳುವಳಿಯ ಮೂಲಕ ಅಸ್ಪøಶ್ಯ ಜನಾಂಗಕ್ಕೆ ಸ್ವಾಭಿಮಾನದ ನಡೆಯನ್ನು ಕಲಿಸಿ ಇಡೀ ರಾಜ್ಯಕ್ಕೆ ವಿಚಾರದ ನಾಯಕತ್ವವನ್ನು ಕೃಷ್ಣಪ್ಪ ಕೊಟ್ಟರು. 1977 ರಲ್ಲಿ ಎನ್.ಆರ್ ಕಾಲೋನಿಗೆ ಪ್ರಪ್ರಥಮ ಭೇಟಿ ಕೊಟ್ಟ ಬಿ.ಕೆ ಕಾಲೋನಿಯ ಹೋರಾಟದಲ್ಲಿ “ಹೆಂಡಾ…

Read More

ತುಮಕೂರು: ತಿಪಟೂರು ನಗರದಲ್ಲಿ ಶಿಕ್ಷಣ ಸಚಿವರ ಮನೆ ಮುಂದೆ ಎನ್‍ಎಸ್‍ಯುಐ ಕಾರ್ಯಕರ್ತರು ನಡೆಸಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಕಾರಾಗೃಹದಲ್ಲಿರುವ 25 ಮಂದಿ ಎನ್‍ಎಸ್‍ಯುಐ ಕಾರ್ಯಕರ್ತರಿಗೆ ಗೌರವಾನ್ವಿತ ನ್ಯಾಯಾಲಯ ಬುಧವಾರ ಸಂಜೆ ಜಾಮೀನು ಮಂಜೂರು ಮಾಡಿದ್ದು, ಸತ್ಯಕ್ಕೆ ಸಿಕ್ಕ ಜಯ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಪಟೂರು ಜಿಲ್ಲಾ ಸತ್ರ ನ್ಯಾಯಾಧೀಶರಾದ ಪುಷ್ಪಾವತಿ ಅವರು ಬೇಲ್ ಮಂಜೂರು ಮಾಡಿ ಆದೇಶಿಸಿದ್ದು, ಆದೇಶ ಪತ್ರದಲ್ಲಿ ಒಬ್ಬರಿಗೆ ಇಬ್ಬರು ಶ್ಯೂರಿಟಿ ನೀಡಬೇಕೆಂದು ಆ ಆದೇಶದಲ್ಲಿ ತಿಳಿಸಲಾಗಿದೆ. ನ್ಯಾಯಾಲಯದ ವಿಧಿ ವಿಧಾನಗಳು ಕಾರಾಗೃಹದ ಮುಖ್ಯಸ್ಥರಿಗೆ ತಲುಪಿದ ನಂತರ ಬಂಧಿಯಾಗಿರುವ ಎಲ್ಲಾ ಎನ್ ಎಸ್‍ಯುಐ ಕಾರ್ಯಕರ್ತರು ಗುರುವಾರ ಬಿಡುಗಡೆಯಾಗಲಿದ್ದಾರೆ ಎಂದು ಹೇಳಿದರು. ವಿದ್ಯಾರ್ಥಿಗಳು ಪಠ್ಯ ಪರಿಷ್ಕರಣೆ ವಿರೋಧಿಸಿ ಹಾಗೂ ಇದುವರೆಗೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಸರಬರಾಜು ಮಾಡದೇ ಇರುವುದನ್ನು ಖಂಡಿಸಿ ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆಯೇ ವಿನಃ ಯಾವುದೇ ದುರುದ್ಧೇಶ ಪೂರ್ವಕವಲ್ಲ ಎಂದರು.…

Read More

ತುಮಕೂರು: ರಾಜ್ಯದಾದ್ಯಂತ ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ನಡೆಸುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿ, ಇಂದು ಜಿಲ್ಲಾ ಬಿಜೆಪಿ ಎಸ್.ಸಿ.ಮೋರ್ಚಾ ಅಧ್ಯಕ್ಷ ಓಂಕಾರ್ ನೇತೃತ್ವದಲ್ಲಿ ಇಂದು ಚಡ್ಡಿ ರವಾನಿಸುವ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರದ ಟೌನ್‍ಹಾಲ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೇರಿದ್ದ ಬಿಜೆಪಿ ಹಿರಿಯ, ಕಿರಿಯ ಮುಖಂಡರು ಹಾಗೂ ಎಸ್ಸಿ ಮೋರ್ಚಾದ ಪದಾಧಿಕಾರಿಗಳು, ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಓಂಕಾರ್, ಬಿಜೆಪಿಗೆ ಆರ್.ಎಸ್.ಎಸ್ ಮಾತೃ ಸಮಾನ. ನನ್ನಂತಹ ಲಕ್ಷಾಂತರ ಜನರನ್ನು ಬೆಳೆಸಿ, ಪಕ್ಷದಲ್ಲಿ ಹಲವು ಹುದ್ದೆಗಳನ್ನು ನೀಡಿದೆ. ಇದರ ಅರಿವಿಲ್ಲದ ಸಿದ್ದರಾಮಯ್ಯ ಆರ್.ಎಸ್.ಎಸ್.ನಲ್ಲಿ ದಲಿತರನ್ನು ಕೀಳಾಗಿ ಕಾಣಲಾಗುತ್ತಿದೆ.ನಿಮ್ಮ ಯೋಗ್ಯತೆ ಇಷ್ಟೇ ಎಂದು ಚಡ್ಡಿ ರವಾನೆ ಆಂದೋಲನದ ನೇತೃತ್ವ ವಹಿಸಿರುವ ಚಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ ಎಂದರು. ಸಿದ್ದರಾಮಯ್ಯ ಅವರು ತಮ್ಮ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಂರನ್ನು ಓಲೈಸಿ, ದಲಿತರು,…

Read More

ತುಮಕೂರು: ಜಾತ್ರೆ, ಉತ್ಸವ, ಹಾಗೂ ಅಕ್ಷಯ ತೃತೀಯ ಮುಂತಾದ ಹಬ್ಬ ಹಾಗೂ ಜಯಂತಿಗಳಲ್ಲಿ ವಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಿದ್ದು, ಸದರಿ ದಿನಗಳಂದು ಯಾವುದೇ ಬಾಲ್ಯ ವಿವಾಹಗಳು ನಡೆಯದಂತೆ ಎಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕರೆಯಲಾಗಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮ ಸಹಾಯಕಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂಚಿತವಾಗಿ ಬಾಲ್ಯ ವಿವಾಹ ನಡೆಯುವ ಬಗ್ಗೆ ವರದಿ ಪಡೆದು, ಬಾಲ್ಯ ವಿವಾಹ ಪ್ರಕರಣ ನಡೆಯದಂತೆ ತಡೆಗಟ್ಟಲು ಶ್ರಮಿಸಬೇಕು ಎಂದು ಕರೆ ನೀಡಿದರು. ಅತ್ಯಾಚಾರ/ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಾಲೋಚನೆ, ವೈದ್ಯಕೀಯ ನೆರವು, ಕಾನೂನು ಸಲಹೆ, ಪೊಲೀಸ್ ನೆರವನ್ನು…

Read More

ತುಮಕೂರು: ಕುಂಚಿಟಿಗ ಒಕ್ಕಲಿಗರ ಸಂಘ ಆರಂಭವಾಗಿ 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂಘದವತಿ ಯಿಂದ ಜೂನ್ 25 ರಂದು ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ರಾಜ್ಯಮಟ್ಟದ ಕುಂಚಿಟಿಗ ಸಮುದಾಯದ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ದಿ ಸಂಘದ ಕಾರ್ಯಾಧ್ಯಕ್ಷ ಆರ್.ಕಾಮರಾಜು ತಿಳಿಸಿದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜೂನ್ 25 ರಂದು ಬೆಳಗ್ಗೆ 10 ಗಂಟೆಗೆ ಕುಂಚಿಟಿಗ ಸಮುದಾಯದ ಎಲ್ಲಾ ಪಂಗಡ, ಉಪಪಂಗಡಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ತುಮಕೂರಿನ ಅಮಾನಿಕೆರೆಯಲ್ಲಿರುವ ಗಾಜಿನ ಮನೆಯಲ್ಲಿ ಕುಂಚಿಟಿಗರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು. ಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ದಿ ಸಂಘವನ್ನು 1963ರಲ್ಲಿ ಸ್ಥಾಪಿಸಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಜನಾಂಗದ ಅಭಿವೃದ್ದಿಗೆ ಶ್ರಮಿಸಿದ ಬಿ.ರಂಗಣ್ಣ ಅವರ ಪುತ್ಥಳಿಯನ್ನು ಕುಂಚಟಿಗ ಭವನದ ಮುಂಭಾಗದಲ್ಲಿ ಆನಾವರಣ ಮಾಡಲಾಗುವುದು. ಅವರು ಸಂಘಕ್ಕೆ ನೀಡಿದ ಜಾಗದಲ್ಲಿ ಇಂದು ಗಂಡು ಮತ್ತು ಹೆಣ್ಣು ಮಕ್ಕಳ ಹಾಸ್ಟಲ್ ನಡೆಯುತ್ತಿದೆ.ಅಲ್ಲದೆ ಸರಕಾರದಿಂದ ಅವರ ಕಾಲದಲ್ಲಿ ಮಂಜೂರಾದ ಜಾಗದಲ್ಲಿ ಇಂದು ನಾಲ್ಕು ಕೋಟಿ ರೂ ವೆಚ್ಚದಲ್ಲಿ ಕುಂಚಟಿಗ ಭವನ ನಿರ್ಮಾಣ…

Read More

ತುಮಕೂರು: ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆಯಲು ಬರುವ ಸಾರ್ವಜನಿಕರಿಗೆ ಬಿಪಿಎಲ್/ಎಪಿಎಲ್ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಿ ಎಲ್ಲರಿಗೂ ಆಯುμÁ್ಮನ್ ಆರೋಗ್ಯ ಕಾರ್ಡುಗಳನ್ನು ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು , ಜಿಲ್ಲೆಯಲ್ಲಿ 28 ಲಕ್ಷ ಕಾರ್ಡುಗಳನ್ನು ನೀಡುವ ಗುರಿಯನ್ನು ಹೊಂದಿದ್ದು, ಈವರೆಗೆ 7.4 ಲಕ್ಷ ಕಾರ್ಡುಗಳನ್ನು ವಿತರಿಸಲಾಗಿದೆ. ಇದೇ ಜೂ.8 ರಿಂದ 14 ರವರೆಗೆ ಆಯುμÁ್ಮನ್ ಕಾರ್ಡುಗಳನ್ನು ನೀಡಲು ಅಭಿಯಾನವನ್ನು ಹಮ್ಮಿಕೊಂಡಿದ್ದು, ಒಂದು ತಾಲ್ಲೂಕಿಗೆ 20 ಸಾವಿರ ಕಾರ್ಡುಗಳನ್ನು ವಿತರಿಸಲು ಸೂಚನೆ ನೀಡಲಾಯಿತು. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳು, ಸಾಮಾನ್ಯ ಸೇವಾ ಕೇಂದ್ರಗಳು, ಸೇವಾಸಿಂಧು ಕೇಂದ್ರಗಳಲ್ಲಿ ಆದ್ಯತೆಯ ಕಾರ್ಡುಗಳನ್ನು ವಿತರಿಸಿ ನಿಗಧಿಪಡಿಸಿರುವ ಗುರಿಯನ್ನು ತಲುಪಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಯಲು…

Read More

ತುಮಕೂರು: ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯಡಿ ಕೈಗೊಳ್ಳುವ ಪರಿಶಿಷ್ಟ ಕಲ್ಯಾಣಾಭಿವೃದ್ದಿ ಕಾಮಗಾರಿಗಳನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ನಿಗಧಿತ ಅವಧಿಯಲ್ಲಿ ಅನುμÁ್ಠನ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ಪರಿಶಿಷ್ಟ ಜಾತಿ ಉಪಯೋಜನೆ/ ಗಿರಿಜನ ಉಪಯೋಜನೆ 2013&2017ರ ಅನುμÁ್ಠನ ಕುರಿತ ಜಿಲ್ಲಾ ಮೇಲ್ವಿಚಾರಣ ಸಮಿತಿ ಸಭೆಗೆ ಮಾರ್ಚ್ 2022ರ ಮಾಹೆಯ ಅಂತ್ಯಕ್ಕೆ ವಿವಿಧ ಇಲಾಖೆಗಳ ಅನುμÁ್ಠನಾಧಿಕಾರಿಗಳು ಸಾಧಿಸಿರುವ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು. ಪರಿಶಿಷ್ಟರ ಕಲ್ಯಾಣಕ್ಕಾಗಿ ಸರ್ಕಾರವು ಹಲವು ಯೋಜನೆಗಳನ್ನು ಅನುμÁ್ಠನಕ್ಕೆ ತಂದಿದ್ದು ಅಧಿಕಾರಿಗಳು ಯಾವುದೇ ರೀತಿಯ ವಿಳಂಬ ಮಾಡದೇ ತ್ವರಿತಗತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು. ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ/ ಗಿರಿಜನ ಉಪಯೋಜನೆಯಡಿ ಸರ್ಕಾರವು ಸಾಕಷ್ಟು ಅನುದಾನವನ್ನು ಒದಗಿಸಿದ್ದು ಯಾವುದೇ ಕಾರಣಕ್ಕೂ ಪರಿಶಿಷ್ಟರ ಕಲ್ಯಾಣಕ್ಕೆ ಒದಗಿಸಿರುವ ಅನುದಾನ ವಾಪಸ್ಸಾಗಬಾರದು.ಶೀಘ್ರಗತಿಯಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಮಾಜ ಕಲ್ಯಾಣ…

Read More

ತುಮಕೂರು: ಕುವೆಂಪು, ಬಸವಣ್ಣ ಅವರನ್ನು ಪಠ್ಯ ಪುಸ್ತಕದಲ್ಲಿ ಅವಹೇಳನ ಮಾಡಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ, ಆದರೆ ಜಾಮೀನು ರಹಿತ ಪ್ರಕರಣಗಳನ್ನು ದಾಖಲಿಸಿರುವುದು ಸರಿಯಲ್ಲ ಎಂದು ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲಾ ಕಾರಾಗೃಹದಲ್ಲಿರುವ ಎನ್.ಎಸ್.ಯು.ಐ. ಕಾರ್ಯಕರ್ತರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದ 24 ಮಂದಿ ಮೇಲೆ ಪ್ರಕರಣ ದಾಖಲಿಸಿದ್ದಾರೆ, ಪ್ರತಿಭಟಿಸಿದ ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ವಿಡಿಯೋಗಳಿದ್ದರು ಸಹ ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆಯೇ ಹಲ್ಲೆ ಪ್ರಕರಣ ದಾಖಲಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು. ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿ, ಚೆಡ್ಡಿಗೆ ಬೆಂಕಿ ಹಚ್ಚಲು ಹೋದಾಗ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಆದರೆ ಮನೆಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ ಎಂದು ರಾಜಕೀಯ ಪ್ರೇರಿತ ದೂರು ದಾಖಲಿಸಿದ್ದಾರೆ, ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ವಿಡಿಯೋವನ್ನು ಎಡಿಟ್ ಮಾಡಿ ಹಲ್ಲೆ ಪ್ರಕರಣದಿಂದ…

Read More

ತುಮಕೂರು: ಚುನಾವಣಾ ಪೂರ್ವದಲ್ಲಿ ಹಿಂದುಳಿದ ವರ್ಗಗಳಿಗೆ ಮೊದಲ ಅದ್ಯತೆ ನೀಡುವುದಾಗಿ ಹೇಳಿದ್ದ ತುಮಕೂರು ನಗರ ಶಾಸಕರು, ನಗರದಲ್ಲಿ ನಿರ್ಮಾಣವಾದ ದೇವರಾಜು ಅರಸು ಭವನ ಉದ್ಘಾಟನೆಗೆ ಹಿಂದುಳಿದ ವರ್ಗಗಳ ಮುಖಂಡರಿಗೆ ಕನಿಷ್ಠ ಆಹ್ವಾನವನ್ನು ನೀಡದೆ ಅಪಮಾನ ಮಾಡಿದ್ದಾರೆ. ಇದು ಖಂಡನೀಯ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಸಂಚಾಲಕ ಧನಿಯಕುಮಾರ್ ಆರೋಪಿಸಿದ್ದಾರೆ. ನಗರದ ಯಾದವ ಹಾಸ್ಟಲ್‍ನಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ 40ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದುಳಿದ ವರ್ಗದವರು ನನ್ನನ್ನು ಬೆಂಬಲಿಸಿ, ನಾನು ನಿಮ್ಮ ಬೆನ್ನಿಗೆ ನಿಂತು ಕೆಲಸ ಮಾಡುತ್ತೇನೆ ಎಂದಿದ್ದ ಶಾಸಕರು, ಈಗ ಉಲ್ಟಾ ಹೊಡೆದಿದ್ದಾರೆ ಎಂದರು. ದೇವರಾಜ ಅರಸು ಎಂಬುದು ಒಂದು ಹೆಸರಲ್ಲ. ಅದು ಹಿಂದುಳಿದ ವರ್ಗಗಳ ಶಕ್ತಿ. ಸಣ್ಣ ಸಣ್ಣ ಶ್ರಮ ಸಂಸ್ಕøತಿಯ ಜಾತಿಗಳನ್ನು ಗುರುತಿಸಿ, ಅವರಿಗೆ ರಾಜಕೀಯ ಅಧಿಕಾರ ನೀಡುವ ಮೂಲಕ ನಿಮ್ನ ವರ್ಗಗಳಿಗೆ ಅವಕಾಶದ ಭಾಗಿಲುಗಳು ತೆರೆದುಕೊಳ್ಳುವಂತೆ ಮಾಡಿ, ಸಮಾಜದ ಮುಖ್ಯವಾಹಿನಿಗೆ ಬರಲು ಕಾರಣಕರ್ತರಾದರು. ಜೀತಪದ್ದತಿ ರದ್ದು, ಉಳುವವನೇ ಭೂಮಿಯ…

Read More

ತುಮಕೂರು: ಇಂದಿನ ದಿನಗಳಲ್ಲಿ ವಿಚಾರಕ್ಕಿಂತ ಆಚಾರ ಮುಖ್ಯ. ವಿಕೇಂದ್ರಿಕರಣ ಇಂದಿನ ಜಾಗತಿಕ ಅಗತ್ಯ ಸ್ಥಳೀಕರಣ ಮತ್ತು ವಿಕೇಂದ್ರಿಕರಣಕ್ಕೆ ಇಂದು ಜನಾಂದೋಲನದ ಅಗತ್ಯವಿದೆ ಎಂದು ಗ್ರಾಮ ಸೇವಾ ಸಂಘದ ರಂಗಕರ್ಮಿ ಪ್ರಸನ್ನ ಅಭಿಪ್ರಾಯಪಟ್ಟರು. ಕೃಷಿ ಗ್ರಾಮೀಣಾಭಿವೃದ್ಧಿಯ ಹೃದಯ. ಅದು ಇಂದು ಭೂ ಹಿಡುವಳಿ ವಿಶಿಷ್ಟವಾಗಬೇಕು. ಹಾಗಾದರೆ ಮಾತ್ರ ಕೃಷಿ ವಾಯುಗುಣ ವೈಪರಿತ್ಯದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವೆಂದು ಸಹಜ ಬೇಸಾಯ ಶಾಲೆಯ ಕೃಷಿ ತಜ್ಞಾ ಡಾ|| ಹೆಚ್ ಮಂಜುನಾಥ ಹೇಳಿದರು. ಇಂದಿನ ಪರಿಸರ ಅಸಮತೋಲನ ಹಾಗೂ ವಿನಾಶಗಳ ದುಶ್ಪರಿಣಾಮಗಳನ್ನು ಎದುರಿಸಲು ವಿಕೇಂದ್ರಿಕರಣ ಅತ್ಯಗತ್ಯ ಎಂದು ಸಿ. ಯತಿರಾಜ ಹೇಳಿದರು. ಸುಮನವನದ ಸಂಜೀವಕುಲಕರ್ಣಿ ಮಾತನಾಡಿ ಗಾಂಧೀ ತೊರಿದ ವಿಕೇಂದ್ರಿಕರಣದ ಹಾದಿಯಲ್ಲಿ ನಾವಿಂದು ಸಾಗಬೇಕಾದ ಅನಿವಾಂiÀರ್iತೆ ಇದೆ ಎಂದರು. ವಿಕೇಂದ್ರೀಕರಣ ಜನಾಂದೋಲನದಲ್ಲಿ ಜಿ.ಹೆಚ್. ಪಟೇಲ್ ಟ್ರಸ್ಟ್ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಹೇಳಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಉದ್ದರಿಸಲು ವಿಕೇಂದ್ರಕರಣದಿಂದ ಮಾತ್ರ ಸಾಧ್ಯ ಶಿಕ್ಷಣ, ಅರೋಗ್ಯ ಸೌಲಭ್ಯಗಳನ್ನು ಬಡಜನರಿಗೆ ನೀಡಲು ಗ್ರಾಮ ಪಂಚಾಯಿತಿ ವ್ಯವಸ್ತೆ ಮುಂದಾಗಬೇಕೆಂದು…

Read More