Author: News Desk Benkiyabale

ಚಿಕ್ಕನಾಯಕನಹಳ್ಳಿ: ಪ್ರಕೃತಿ ಕೊಟ್ಟ ಸಾಲವನ್ನು ಹೊತ್ತುಕೊಂಡು ಜೀವನ ಮಾಡುತ್ತಿದ್ದೇವೆ ಆ ಋಣ ತೀರಿಸಬೇಕಾದ ರೆ ಕನಿಷ್ಠಪಕ್ಷ ಪ್ರತಿಯೊಬ್ಬರು ಅರಣ್ಯವನ್ನು ಬೆಳೆಸಬೇಕು ಮುಂದಿನ ಪೀಳಿಗೆಗೆ ಉಳಿಸುವ ಕೆಲಸ ಮಾಡಬೇಕು ಎಂದು ಕಾನೂನು ಸಂಸದೀಯ ವ್ಯವಹಾರಗಳ ಹಾಗೂ ಸಣ್ಣ ನೀರಾವರಿ ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದರು ಅವರು ಪ್ರಾದೇಶಿಕ ಹಾಗೂ ಸಾಮಾಜಿಕ ವಲಯ ಅರಣ್ಯ ಇಲಾಖೆಯು ತಾಲೂಕಿನ ಶೆಟ್ಟಿಕೆರೆ ಹೋಬಳಿ ಸಾಸಲು ಗ್ರಾಮದ ಹೊರವಲಯದ ನಿರ್ಮಾಣಗೊಂಡಿರುವ ಅಂಬೇಡ್ಕರ್ ವಸತಿ ಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು ನಾವೆಲ್ಲಾ ಪ್ರಕೃತಿಯ ಕೂಸುಗಳು ಪ್ರಕೃತಿಯ ನೀಡಿದ ಋಣ ಹೊತ್ತುಕೊಂಡು ಹುಟ್ಟಿದ್ದೇವೆ ಹಾಗೆ ಸಾಯುತ್ತೇವೆ ಪ್ರಕೃತಿ ನಮಗೆ ಕೊಟ್ಟ ಸಾಲವನ್ನು ಋಣ ತೀರಿಸುವ ಕೆಲಸ ಮಾಡಬೇಕಾದರೆ ಅದರ ಸದ್ಬಳಕೆ ಬಳಸಿಕೊಂಡು ಅಭಿವೃದ್ಧಿಪಡಿಸಿ ಮುಂದಿನ ಪೀಳಿಗೆಗೆ ಬಿಟ್ಟು ಹೋಗಬೇಕು ಪ್ರಕೃತಿ ಸಮತೋಲನ ಹೇಗೆ ಮಾಡಬಹುದು ಅನ್ನೋದನ್ನ ಯಾರು ಹೇಳಿ ಕೊಡಬೇಕಾದ ಅವಶ್ಯಕತೆ ಇಲ್ಲ ವಿಜ್ಞಾನಿ…

Read More

ತುರುವೇಕೆರೆ: ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪನವರ ಕಾಲದಲ್ಲಿ ನಡೆದಿರುವ ಅಪೂರ್ಣ ಹಾಗೂ ಕಳಪೆ ಕಾಮಗಾರಿಗಳು ಅವರ ಕಿಕ್ ಬ್ಯಾಕ್ ಹಾಗೂ ಕಮಿಷನ್ ಸಂಸ್ಕೃತಿಯನ್ನು ಸಾರಿ ಹೇಳುತ್ತಿವೆ ನನಗೆ ಗೊತ್ತಿರುವುದು ಅಭಿವೃದ್ಧಿ ಒಂದು ಎಂದು ಶಾಸಕ ಮಸಾಲ ಜಯರಾಮ್ ಎಂ.ಟಿ.ಕೃಷ್ಣಪ್ಪನ ವಿರುದ್ದ ವ್ಯಂಗ್ಯವಾಡಿದರು. ತಾಲ್ಲೂಕಿನ ಮಾಯಸಂದ್ರ ಹೋಬಳಿಯ ತುಯಲಹಳ್ಳಿ ಗ್ರಾಮದ ಹತ್ತಿರ ಸಣ್ಣ ನೀರಾವರಿ ಇಲಾಖೆಯ 1.60ಕೋಟಿ ವೆಚ್ಚದ ಚೆಕ್ ಡ್ಯಾಮ್ ಹಾಗೂ ಬ್ರಿಡ್ಜ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಆಗುತ್ತಿರುವುದನ್ನು ಸಹಿಸದೆ ಮಾಜಿ ಶಾಸಕರು ಕಿಕ್ ಬ್ಯಾಕ್ ಬಗ್ಗೆ ಮಾತನಾಡುತ್ತಾರೆ ನನಗೆ ಅಂತಹ ಸಂಸ್ಕೃತಿಗಳ ಅರಿವಲ್ಲ ಕಾರಣ ನನ್ನ ಕಾಲದ ಅಭಿವೃದ್ಧಿ ಕೆಲಸಗಳು ಎಲ್ಲೂ ಅರ್ಧಕ್ಕೆ ನಿಂತಿಲ್ಲ ನಿರಂತರವಾಗಿ ನಡೆಯುತ್ತಿವೆ ಅವರ ಕಾಲದಲ್ಲಾದ ಪಟ್ಟಣದ ಯುಜಿಡಿ ಅಧ್ವಾನ ಹಾಗೂ ವಾಣಿಜ್ಯ ಸಂಕೀರ್ಣ ಅಪೂರ್ಣ ಕಾಮಗಾರಿ ಹಾಗೂ ಏತನೀರಾವರಿ ಕಳಪೆ ಕಾಮಗಾರಿಗಳು ಅವರ ಕಿಕ್ ಸಂಸ್ಕೃತಿ ಬಗ್ಗೆ ಹೇಳುತ್ತಿವೆ ನಮ್ಮದೇನಿದ್ದರು ಫ್ರೆಂಟ್ ಬ್ಯಾಕ್ ಜನರ ಮುಂದೆ ನನ್ನ ಅಭಿವೃದ್ಧಿ…

Read More

ತುಮಕೂರು: ಮಾಲಿನ್ಯ ನಿಂತ್ರಣ ಮಾಡಿ ಸುಸ್ಥಿರ ಪರಿಸರ ವ್ಯವಸ್ತೆಯನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಶಾಸಕ ರಾಜೇಶ್‍ಗೌಡ ಅಭಿಪ್ರಾಯ ಪಟ್ಟರು. ತುಮಕೂರು ವಿಶ್ವವಿದ್ಯಾನಿಲಯ ಪರಿಸರ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಸಿರಾದ ಸ್ನಾತಕ್ಕೋತ್ತರ ಅಧ್ಯಯನ ಕೇಂದ್ರ ಸಿರಾ ಕ್ಯಾಂಪಸ್‍ನಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನ 2022 ಅನ್ನು ಗಿಡನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪರಿಸರದ ಅವನತಿಗೆ ಕಾರಣವಾಗುವ ಮಾನವನ ಚಟುವಟಿಕೆಗಳು ಮಾಲಿನ್ಯ, ದೋಷಯುಕ್ತ ಪರಿಸರ ನೀತಿಗಳು, ರಾಸಾಯನಿಕಗಳು, ಹಸಿರುಮನೆ ಅನಿಲಗಳು, ಜಾಗತಿಕ ತಾಪಮಾನ ಏರಿಕೆ, ಓಝೋನ್ ಸವಕಳಿ ಇವೆಲ್ಲವೂ ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಇದಲ್ಲದೆ ನೈಸರ್ಗಿಕ ಸಂಪನ್ಮೂಲಗಳ ಅತಿಯಾದ ಬಳಕೆಯು ಮನುಷ್ಯನಿಗೆ ಹಾನಿಯಂಟುಮಾಡಿ, ಜೀವಂತ ಗಾಳಿಯು ಅವಶ್ಯಕತೆಯನ್ನು ಕಲುಶಿತಗೊಳಿಸಿ ಉಸಿರಾಡಲು ಬಾಟಲಿಯ ಆಮ್ಲಜನಕವನ್ನು ಬಳಸಬೇಕಾಗುತ್ತದೆ. ಪರಿಸರವನ್ನು ರಕ್ಷಿಸುವುದು ಅಷ್ಟು ಸುಲಭವಲ್ಲ, ಇದು ಸಾಕಷ್ಟು ಶ್ರಮ ತೆಗೆದುಕೊಳ್ಳುತ್ತದೆ. ಮಾಲಿನ್ಯ ನಿಯಂತ್ರಣಕ್ಕೆ ಜನರು ಕಠಿಣ ಕಾನೂನುಗಳನ್ನು ಅನುಸರಿಸಬೇಕು. ನೀರಿನ ವ್ಯರ್ಥವನ್ನು ಕಡಿಮೆ ಮಾಡುವ ಮೂಲಕ ನೀರನ್ನು ಉಳಿಸಿ. ಶಕ್ತಿ…

Read More

ತುಮಕೂರು: ಜೂನ್ 12ರಂದು ನಡೆಯಲಿರುವ ‘ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ’ದ ಅಂಗವಾಗಿ ಜೂನ್ 9ರಂದು ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಾಭಂಗಣದಲ್ಲಿ ಶನಿವಾರ ನಡೆದ ‘ವಿಶ್ವ ಬಾಲಕಾರ್ಮಿಕ ವಿರೋಧಿ’ ದಿನ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜೂನ್ 12ರಂದು ವಿಶ್ವ ಬಾಲಕಾಮಿಕ ವಿರೋಧಿ ದಿನ ಕಾರ್ಯಕ್ರಮದ ಅಂಗವಾಗಿ ಜೂ. 9ರಂದು ಬೆಳಿಗ್ಗೆ. 10 ಗಂಟೆಗೆ ನಗರದ ಬಾಲಭವನದ ಆವರಣದಲ್ಲಿ ಪ್ರೌಢಶಾಲಾ ಮಕ್ಕಳಿಗೆ ‘ಬಾಲಕಾರ್ಮಿಕರ ಸಂಕಷ್ಟಗಳು’ ವಿಷಯ ಕುರಿತು ಚಿತ್ರಕಲೆ ಸ್ಪರ್ಧೆ, ಪಿಯುಸಿ ವಿದ್ಯಾರ್ಥಿಗಳಿಗೆ ‘ಬಾಲಕಾರ್ಮಿಕತೆಯಿಂದ ಸಮಾಜದ ಮೇಲೆ ಪರಿಣಾಮ’ ವಿಷಯದ ಕುರಿತು ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಪ್ರತಿ ಸ್ಪರ್ಧೆಗಳಲ್ಲೂ ಕನಿಷ್ಠ 10 ಜನ ವಿದ್ಯಾರ್ಥಿಗಳು ಭಾಗವಹಿಸಬೇಕು. ಸ್ಪರ್ಧೆಯ ಸಂಪೂರ್ಣ ಜವಾಬ್ದಾರಿಯನ್ನು ಡಿಡಿಪಿಐ ವಹಿಸಿಕೊಳ್ಳಬೇಕೆಂದು ಡಿಡಿಪಿಐ ನಂಜಯ್ಯನವರಿಗೆ ತಿಳಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳ ಪಟ್ಟಿಯನ್ನು ಜೂನ್ 10ರೊಳಗೆ ಬಾಲಕಾರ್ಮಿಕ ಇಲಾಖೆಗೆ ತಲುಪಿಸುವುದು ಹಾಗೂ ವಿಜೇತರಾದ ಮಕ್ಕಳಿಗೆ…

Read More

ತುಮಕೂರು: ನಗರದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಶಂಭುಕುಮಾರ್ ಅವರನ್ನು ಅಮಾನತ್ತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ತುಮಕೂರು ನಗರ ಲೋಕೋಪಯೋಗಿ ಉಪ ವಿಭಾಗದ ಸಹಾಯಕ ಇಂಜಿನಿಯರ್ ಶಂಭುಕುಮಾರ್ ಅವರನ್ನು ಅಮಾನತ್ತು ಮಾಡಲಾಗಿದ್ದು, ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆಯ ಅಧೀನ ಕಾರ್ಯದರ್ಶಿರವರು ವರದಿ ಪಡೆದು ಅಮಾನತ್ತು ಆದೇಶವನ್ನು ಹೊರಡಿಸಿರುತ್ತಾರೆ. ಸಹಾಯಕ ಇಂಜಿನಿಯರ್ ಮೇಲೆ ದಲಿತ ದೌರ್ಜನ್ಯ ಕಾಯ್ದೆ ಮತ್ತು ಕೊಲೆ ಯತ್ನದ ಪ್ರಕರಣ ದಾಖಲಾಗಿದ್ದು, ತುಮಕೂರು ಜಿಲ್ಲೆಯ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷನನ್ನೇ ಹತ್ಯೆಗೈಯಲು ಮುಂದಾದಾಗ ತಪ್ಪಿಸಿಕೊಂಡ ಬಿಜೆಪಿ ಮುಖಂಡ ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕ್ರಿಮಿನಲ್ ಮೊಕದ್ದಮೆ ದಾಖಲಾದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶಂಭುಕುಮಾರ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ. ಈ ಆರೋಪಿತ ಇಂಜಿನಿಯರ್ ಶಂಭುಕುಮಾರನ ಪತ್ತೆಗೆ ವಿಶೇಷ ತಂಡ ರಚಿಸಿ ಬಂಧಿಸುವ ಸಲುವಾಗಿ ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದ್ದರೂ ಸಹ ಇಲಾಖೆಯ ಕಣ್ಣಿಗೆ ಮಣ್ಣೆರಚಿ ಪ್ರಭಾವಿ ರಾಜಕಾರಣಿಗಳ ಅಭಯಾಸ್ತದಿಂದ ನಿರೀಕ್ಷಣಾ ಜಾಮೀನು ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದ.…

Read More

ತುಮಕೂರು: ತುಮಕೂರು ವಿವಿಯ ಬಿ.ಎ., ಬಿಎಸ್ಸಿ, ಬಿ.ಕಾಮ್‍ನ 2ನೇ ಸೆಮಿಸ್ಟರ್ ಪಠ್ಯದಲ್ಲಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಜಾತಿ ವಿನಾಶ ಲೇಖನವನ್ನು ಪಠ್ಯದಿಂದ ಕೈಬಿಟ್ಟು, ಅಸ್ಪøಷ್ಯತೆ ನಿವಾರಣೆ ಕುರಿತಂತೆ ಅರ್ಟಿಕಲ್ 17ರ ಮೇಲಿನ ಚರ್ಚೆಯಲ್ಲಿ ಸಂವಿಧಾನ ರಚನಾ ಸಮಿತಿಯ ಸದಸ್ಯರಾದ ಬ್ಯಾನರ್ಜಿ ಮತ್ತು ಠಾಕೂರ್ ಅವರುಗಳು ಮಾಡಿರುವ ಭಾಷಣವನ್ನು ಸೇರಿಸಿ, ಅಂಬೇಡ್ಕರ್ ಅವರನ್ನು ಪಠ್ಯದಿಂದ ಹೊರಗಿಡುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿ, ಅಂಬೇಡ್ಕರ್ ಅನುಯಾಯಿಗಳು ವಿವಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪಾಲಿಕೆಯ ವಿರೋಧ ಪಕ್ಷದ ನಾಯಕ ಜೆ.ಕುಮಾರ್, ಅತಿಥಿ ಉಪನ್ಯಾಸಕ ಹೆತ್ತೇನಹಳ್ಳಿ ಮಂಜು, ಹಿಂದುಳಿದ ವರ್ಗಗಳ ಒಕ್ಕೂಟದ ಸಂಚಾಲಕ ಧನಿಯಕುಮಾರ್, ಬೆಳ್ಳಿ ಲೋಕೇಶ್ ಸೇರಿದಂತೆ ಹಲವಾರು ಯುವಜನರು ತುಮಕೂರು ವಿವಿಗೆ ಮುತ್ತಿಗೆ ಹಾಕಿ, ಪಠ್ಯದಿಂದ ತೆಗೆದಿರುವ ಜಾತಿ ವಿನಾಶ ಚಾಪ್ಟರ್ ಸೇರಿಸಬೇಕು ಹಾಗೂ ಪಠ್ಯ ಪರಿಷ್ಕರಣಾ ಸಮಿತಿಯಲ್ಲಿದ್ದ ಸದಸ್ಯರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಪಾಲಿಕೆಯ ವಿರೋಧ ಪಕ್ಷದ ನಾಯಕ ಜೆ.ಕುಮಾರ್, ಇಂದು ಇಡೀ ವಿಶ್ವವೇ…

Read More

ತುಮಕೂರು: ರಾಜ್ಯದಲ್ಲಿ ಹಾಗೂ ದೇಶದಲ್ಲಿ ಯಾವುದೇ ರಾಜಕೀಯ ಪಕ್ಷ ಸುಧೀರ್ಘವಾಗಿ ಆಡಳಿತ ನಡಸಿಲ್ಲ. ಹಾಗಾಗಿ ಪ್ರಾದೇಶಿಕ ಪಕ್ಷಗಳೆಲ್ಲಾ ಒಗ್ಗೂಡಿ ಆಡಳಿತ ನಡೆಸುವ ಕಾಲ ಒಂದಲ,ಒಂದು ದಿನ ಬಂದೇ ಬರುತ್ತದೆ ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಸ ಹೆಚ್.ಡಿ.ದೇವೇಗೌಡ ತೃತೀಯ ರಂಗದ ಸುಳಿವನ್ನು ಬಿಚ್ಚಿಟ್ಟಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಳ್ಳಗೆರೆ ಗ್ರಾಮದ ಶ್ರೀಚಿಕ್ಕಮ್ಮದೇವಿ ಅಮ್ಮನವರ ನೂತನ ದೇವಾಲಯ ಮತ್ತು ಮೂಲಶಿಲಾಬಿಂಬ ಪ್ರತಿಷ್ಟಾಪನೆ ಹಾಗೂ ವಿಮಾನಗೋಪುರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದಲ್ಲಿ ದೇವಾಲಯದ ಲೋಕಾರ್ಪಣೆ ಮಾಡಿ ಮಾತನಾಡುತಿದ್ದ ಅವರು, ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಇದೆ.ರಾಜಧಾನಿಯಲ್ಲಿ ಏನೇನು ನಡೆಯುತ್ತಿದೆ ಎಂಬ ವಿದ್ಯಾಮಾನಗಳ ಅರಿವಿದೆ.ಇದುವರೆಗೂ ರಾಜ್ಯದ ಮತದಾರರು ನಮಗೆ ಪೂರ್ಣ ಬಹುಮತ ನೀಡಿಲ್ಲ. ಹಾಗಿದ್ದೂ ಸಹ ಸಿದ್ದರಾಮಯ್ಯನ ವಿರೋಧದ ನಡುವೆಯೂ 25 ಸಾವಿರ ಕೋಟಿ ಸಾಲ ಮನ್ನಾ ಮಾಡುವ ಮೂಲಕ ಈ ರಾಜ್ಯದ ರೈತರ ಬೆನ್ನಿಗೆ ನಿಂತಿದ್ದೇವೆ ಎಂದರು. ಸಿದ್ದರಾಮಯ್ಯ ಅಹಿಂದ ಸೋಗಿನಲ್ಲಿ ಜನರಲ್ಲಿ ವಿಷ ಬೀಜ ಬಿತ್ತುತಿದ್ದಾರೆ.ನಾವು ಎಲ್ಲಾ ಜನಾಂಗದವರಿಗೂ ಒಳ್ಳೆಯ ಕೆಲಸವನ್ನೇ ಮಾಡಿದ್ದೇವೆ.ಸ್ಥಳೀಯ ಸಂಸ್ಥೆಗಳಲ್ಲಿ…

Read More

ತುಮಕೂರು: ಪ್ರಸ್ತುತ ದಿನಗಳಲ್ಲಿ ಹೊಸ ಹೊಸ ತಂತ್ರಜ್ಞಾನ ಸಮಾಜದ ಅಭಿವೃದ್ಧಿಗೆ ಬಳಕೆಯಾಗಬೇಕು ಎಂದು ಅಸ್ಸಾಂನ ಗುವ್ಹಾಟಿಯ ಐಐಟಿ ಕಾಲೇಜಿನ ಪೆÇ್ರಫೆಸರ್ ಡಾ. ರಾಯ್ ಪಿ. ಪೈಲಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಟೆಕ್ನಿಷಿಯಮ್-2022 ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳು ಬಹಳ ಆಸಕ್ತಿ ವಹಿಸಿ ಸಮಾಜದ ಪ್ರಗತಿಗೆ ಕೊಡುಗೆ ನೀಡಬೇಕು. ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ತಂತ್ರಜ್ಞಾನದ ಬಗ್ಗೆ ಒಲವು ತೋರಬೇಕು ಎಂದು ಅವರು ಹೇಳಿದರು. ನವೀನ ತಂತ್ರಜ್ಞಾನ ಬಳಕೆಯಿಂದ ಭವ್ಯ ಭಾರತ ಮತ್ತು ವಿಜ್ಞಾನಯುತ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು. ವಿದ್ಯಾರ್ಥಿಗಳ ಹವ್ಯಾಸಿ ಮಾದರಿ ಪ್ರದರ್ಶನ ಉದ್ಘಾಟಿಸಿದ ಧಾರವಾಡದ ಐಐಟಿಯ ಪೆÇ್ರ. ಡಾ ಎಸ್.ಆರ್. ಮಹಾದೇವ ಪ್ರಸನ್ನ ಮಾತನಾಡಿ, ಹೊಸ ಹೊಸ ಆಲೋಚನೆಗಳೊಂದಿಗೆ ಯುವ ಸಮುದಾಯ ತಂತ್ರಜ್ಞಾನದ ಸದ್ಭಳಕೆ ಮಾಡಿಕೊಂಡು, ಪ್ರಯೋಗತ್ಮಕ ಮತ್ತು ಸಮುದಾಯ ಸ್ನೇಹಿ ಅನ್ವೇಷಣೆಗಳತ್ತ ಗಮನ ಹರಿಸಬೇಕು ಎಂದರು. 21ನೇ ಶತಮಾನವನ್ನು…

Read More

ತುಮಕೂರು: ಮಕ್ಕಳಿಗೆ ಆತ್ಮವಿಶ್ವಾಸ ತುಂಬಿ, ಬದುಕು ಕಟ್ಟಿಕೊಳ್ಳುವಂತೆ ಪ್ರೇರೆಪಿಸುವ ವ್ಯಕ್ತಿಯೇ ನಿಜವಾದ ಶಿಕ್ಷಕ, ಅದೇ ನಿಜವಾದ ಶಿಕ್ಷಣ ಎಂದು ಚಿಂತಕ ಕೆ.ದೊರೈರಾಜು ಅಭಿಪ್ರಾಯಪಟ್ಟಿದ್ದಾರೆ. ನಗರದ ಕನ್ನಡ ಭವನದಲ್ಲಿ ಶ್ರೀಸಿದ್ದಾರ್ಥ ಪಿಯು ಕಾಲೇಜು ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ನಿವೃತ್ತ ಪ್ರಾಂಶಪಾಲರಾದ ಎಂ.ರಾಜಯ್ಯ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಮಕ್ಕಳ ವ್ಯಕ್ತಿತ್ವ ನಿರ್ಮಾಣದ ಜೊತೆಗೆ, ಬದುಕು ಕಟ್ಟಿಕೊಡುವಂತಹ ಮಾನವೀಯ ಸಂಬಂಧಗಳನ್ನು ಎಂ.ರಾಜಯ್ಯ ರೂಢಿಸಿಕೊಂಡಿದ್ದರು. ಇದರ ಫಲವಾಗಿಯೇ ಇಂದು ಅವರ ಶಿಷ್ಯ ವೃಂದ ಮತ್ತು ಸಹಪಾಠಿಗಳು ಸೇರಿ ಅಭಿನಂದಿಸುತ್ತಿರುವುದು ಅಪರೂಪದ ಕಾರ್ಯಕ್ರಮ ಎಂದರು. ವರ್ತಮಾನದ ಎಚ್ಚರಿಕೆ ಇಲ್ಲದೆ, ಭವಿಷ್ಯ ಕಟ್ಟಲು ಸಾಧ್ಯವಿಲ್ಲ.ಹಾಗಾಗಿ ಶಿಕ್ಷಕರಾದವರಿಗೆ ವರ್ತಮಾನದ ತಲ್ಲಣಗಳಿಗೆ ಉತ್ತರ ಹುಡುಕುತ್ತಾ ಮಕ್ಕಳ ಭವಿಷ್ಯ ರೂಪಿಸುವ ಕೆಲಸ ಆಗಬೇಕಾಗಿದೆ. ನನ್ನ ಜೊತೆಗೆ, ನಾನು ಬದುಕುತ್ತಿರುವ ಸಮಾಜವೂ ಚನ್ನಾಗಿರಬೇಕು ಎಂಬ ಅಂಬೇಡ್ಕರ್ ಅವರ ತತ್ವವನ್ನು ಅಳವಡಿಸಿಕೊಂಡು ಮುನ್ನೆಡೆಯಬೇಕಿದೆ.ಶೋಷಿತ ಸಮುದಾಯಗಳಿಗೆ, ಬಡತನದಿಂದ ಬದುಕುತ್ತಿರುವ ಯುವಜನರಿಗೆ ಶಿಕ್ಷಣವೇ ಬಂಡವಾಳ. ಆದರೆ ಶಿಕ್ಷಣ ಉದ್ಯಮಿಕರಣದಿಂದಾಗಿ ಬಡವರಿಗೆ ಶಿಕ್ಷಣ ಕೈಗೆಟುಕದಂತಾಗಿದೆ.ಇದರ ಬಗ್ಗೆಯೂ…

Read More

ತುಮಕೂರು: ಪಠ್ಯಪುಸ್ತಕದಲ್ಲಿರುವ ಲೋಪದೋಷಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಮುಂದೆ ಪ್ರತಿಭಟನೆ ನಡೆಸುತ್ತಿದ್ದ ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ, ಅವರನ್ನು ಬಂಧಿಸಿ, ಜೈಲಿಗೆ ಹಾಕಿರುವುದ್ನು ಖಂಡಿಸಿರುವ ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ, ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಬಂಧಿತ ಎನ್.ಎಸ್.ಯು.ಐ ಕಾರ್ಯಕರ್ತರಿಗೆ ಸಾಂತ್ವನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದರು. ನಗರದ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಬಂಧಿತರೊಂದಿಗೆ ಕೆಲ ಕಾಲ ಮಾತನಾಡಿ, ಪ್ರಕರಣದ ಸಂಪೂರ್ಣ ವಿವರಣೆ ಪಡೆದ ಆರ್.ರಾಜೇಂದ್ರ ಅವರು,ಬಂಧಿತರಿಗೆ ಧೈರ್ಯ ತುಂಬಿರುವುದಲ್ಲದೆ,ಶಾಂತಿಯುತ ಪ್ರತಿಭಟನೆ ನಡಸಲು ಮುಂದಾದ ಕಾರ್ಯಕರ್ತರನ್ನು ಮನೆಗೆ ಬೆಂಕಿ ಹಚ್ಚಲು ಬಂದಿದ್ದರು ಎಂದು ಸುಳ್ಳು ಆರೋಪ ಹೊರಸಿ ಜೈಲಿಗೆ ಅಟ್ಟಿರುವುದು ಸರಿಯಲ್ಲ.ಶಾಂತಿಯುತ ಪ್ರತಿಭಟನೆಯ ಭಾಗವಾಗಿಯೇ ಆರ್.ಎಸ್.ಎಸ್.ಸಂಕೇತವಾದ ಚಡ್ಡಿಗೆ ಬೆಂಕಿ ಹಚ್ಚಿದ್ದಾರೆ. ಆದರೆ ಇದನ್ನು ಸಹಿಸದ ಬಿಜೆಪಿ ಮುಖಂಡರು, ಎನ್.ಎಸ್.ಯು.ಐ ಕಾರ್ಯಕರ್ತರು ಗುಂಡಾಗಳು ಎಂಬಂತೆ ಬಿಂಬಿಸಿ,ವಿದ್ಯಾರ್ಥಿ ಸಂಘಟನೆಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಂಧನಕ್ಕೆ ಒಳಗಾಗಿರುವ ಎನ್.ಎಸ್.ಯು.ಐ ಕಾರ್ಯಕರ್ತರು ಹೇಳುವ…

Read More