ತುಮಕೂರು: ರಾಜ್ಯದಲ್ಲಿ ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಿರುವ ಕೋವಿಡ್-19 ಸೋಂಕು ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ವಾರಾಂತ್ಯ ಲಾಕ್ಡೌನ್ಗೆ ಕಲ್ಪತರುನಾಡಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಗರ ಸೇರಿದಂತೆ ಜಿಲ್ಲೆಯ 10 ತಾಲ್ಲೂಕುಗಳು ಸಂಪೂರ್ಣ ಸ್ತಬ್ದವಾಗಿದ್ದವು. ಕೋವಿಡ್ ಕರ್ಫ್ಯೂ ಹೇರಿರುವ ರಾಜ್ಯ ಸರ್ಕಾರ ಸಾರ್ವಜನಿಕರ ಅನುಕೂಲಕ್ಕಾಗಿ ಕೆಲ ನಿಯಮಗಳನ್ನು ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳಾದ ಹಾಲು, ಮೊಸರು, ತರಕಾರಿ ಮತ್ತು ದಿನಸಿ ಪದಾರ್ಥಗಳಿಗೆ ಸಂಬಂಧಿಸಿದ ಅಂಗಡಿ ಮುಂಗಟ್ಟುಗಳು ಬಾಗಿಲು ತೆರೆದಿದ್ದವು. ಈ ಅವಧಿಯಲ್ಲಿ ಸಾರ್ವಜನಿಕರು ಸಹ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಅಂಗಡಿಗಳಿಂದ ಅಗತ್ಯ ವಸ್ತುಗಳನ್ನು ಖರೀದಿಸಿ ಮನೆಗಳತ್ತ ತೆರಳಿದ ದೃಶ್ಯಗಳು ಕಂಡು ಬಂದವು. ಮಾಂಸಪ್ರಿಯರು ಕೋಳಿ, ಮಟನ್, ಮೀನಿನ ಅಂಗಡಿಗಳಿಗೆ ತೆರಳಿ ತಮಗಿಷ್ಟವಾದ ಮಾಂಸವನ್ನು ಖರೀದಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು. 10 ಗಂಟೆ ಬಳಿಕ ಮಾಂಸ ಮಾರಾಟದ ಅಂಗಡಿಗಳು ಸಹ ಬಾಗಿಲು…
Author: News Desk Benkiyabale
ತುಮಕೂರು : ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹೊರಡಿಸಿರುವ ವಾರಾಂತ್ಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಹಾಗೂ ಜಿಲ್ಲೆಯಲ್ಲಿ ಇಂದೇ ಕೋವಿಡ್ ಕೇರ್ ಸೆಂಟರ್ಗಳು ಕಾರ್ಯಾರಂಭ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಮೂಲಕ ತಹಸೀಲ್ದಾರರು ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕಿನ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿ ಅವರು ಸೂಚನೆಗಳನ್ನು ನೀಡಿದರು. ವಾರಾಂತ್ಯದ ಕಪ್ರ್ಯೂ ಅವಧಿಯಲ್ಲಿ ಯಾವ್ಯಾವ ಚಟುವಟಿಕೆಗಳಿಗೆ ನಡೆಸಲು ಅವಕಾಶ ನೀಡಲಾಗಿದೆಯೋ ಅವುಗಳಿಗೆ ಅವಕಾಶ ಮಾಡಿಕೊಡಿ. ವಾರಾಂತ್ಯದ ಕಪ್ರ್ಯೂ ಮಾರ್ಗಸೂಚಿಗಳನ್ನು ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಕೊವೀಡ್ ಕೇರ್ ಸೆಂಟರ್ ಗಳಲ್ಲಿ ಸ್ವಚ್ಚತೆಯನ್ನು ಕಾಪಾಡಬೇಕು. ಪ್ರತಿನಿತ್ಯ ಕ್ಲಿನಿಂಗ್ ಮಾಡಬೇಕು ಎಂದರು. ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಆರಂಭಿಸುವ ಕೋವಿಡ್ ಕೇರ್ ಸೆಂಟರ್ ಗಳಲ್ಲಿ…
ಹುಳಿಯಾರು: ಮಂಗಳೂರು ವಿಶಾಖಪಟ್ಟಣ ರಾಷ್ಟ್ರೀಯ ಹೆದ್ದಾರಿ 234ರ ಭಾಗದ ವಿಸ್ತರಣೆಯ ಕಾಮಗಾರಿ 3 ವರ್ಷ ಕಳೆದರೂ ಮುಗಿಯದೆ ಕುಟುಂತ ಸಾಗುತ್ತಿದೆ. ಪರಿಣಾಮ ವಾಹನ ಸವಾರ ರು ಬೇಸಿಗೆಯಲ್ಲಿ ಧೂಳಿನ ಮಜ್ಜನ, ಮಳೆಗಾಲದಲ್ಲಿ ಬಿದುಎದ್ದು ತಳ್ಳಿ ಪ್ರಯಾಣಿಸುವ ಅನಿವಾರ್ಯ ಕರ್ಮ ಸೃಷ್ಠಿಯಾಗಿದೆ. ಹೌದು ರಸ್ತೆ ನಿರ್ಮಾಣದ ಭರದಲ್ಲಿ ಡಾಂಬರ್ ರಸ್ತೆಯನ್ನು ಕಿತ್ತು ಜಲ್ಲಿ ಹಾಗೂ ಜಲ್ಲಿಯ ಪುಡಿ ಹಾಕಿ ಹಾಗೆಯೇ ಬಿಟ್ಟಿರುವುದರಿಂದ ಧೂಳು ಎದ್ದು ಪ್ರಮಾಣಿಕರಿಗೆ ಧೂಳಿನ ಸ್ನಾನ ಮಾಡಿಸುತ್ತಿದ್ದರೆ ಮಳೆಗಾಲದಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಚರಂಡಿ ಮತ್ತು ರಸ್ತೆ ಕಾಮಗಾರಿಯಿಂದ ಅಲ್ಪಸ್ವಲ್ಪ ಮಳೆಯಾದರೂ ಸಹ ಮೊಳಕಾಲುದ್ದ ನೀರು ನಿಂತು ವಾಹನ ಸವಾರರಿಗೆ ಗುಂಡಿ ಕಾಣದೆ ಬಿದ್ದುಎದ್ದು ಓಡಾಡುವಂತಾಗಿದೆ. ಗುರುವಾರ ರಾತ್ರಿ ಹುಳಿಯಾರಿನಲ್ಲಿ ಬಿದ್ದ ಮಳೆಗೆ ರಾಮಗೋಪಾಲ್ ಸರ್ಕಲ್ ಬಳಿಯ ಅರ್ಧಕ್ಕೆ ಸ್ಥಗಿತಗೊಂಡಿರುವ ರಸ್ತೆಯಲ್ಲಿ ಮೊಳಕಾಲುದ್ದ ನೀರು ನಿಂತು ವಾಹನಸವಾರರಿಗೆ ಸಿಕ್ಕಾಪಟ್ಟೆ ಕಿರಿಕಿರಿ ತಂದೊಡ್ಡಿತ್ತು. ಮಳೆ ನೀರಿನ ಜೊತೆಗೆ ಅವೈಜ್ಞಾನಿಕ…
ತುಮಕೂರು : ಕೋವಿಡ್-19 ನಿಯಂತ್ರಣಾ ಸಂಬಂಧ ನಗರದ ಹೊರ ವಲಯದ ಕ್ಯಾತ್ರಂದ್ರದಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್ಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋವಿಡ್ ಕೇರ್ ಸೆಂಟರ್ನಲ್ಲಿ ಕೋವಿಡ್ ಸೋಂಕಿತರಿಗೆ ಒದಗಿಸಲಿರುವ ಚಿಕಿತ್ಸಾ ವ್ಯವಸ್ಥೆ, ಹಾಸಿಗೆ ಸೇರಿದಂತೆ ಮಾರ್ಗಸೂಚಿಗಳನ್ವಯ ಕಲ್ಪಿಸಬೇಕಾಗಿರುವ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ, ಅಧಿಕಾರಿಗಳಿಗೆ ಕೆಲವೊಂದು ನಿರ್ದೇಶನಗಳನ್ನು ನೀಡಿದರು. ಕೋವಿಡ್ ಪ್ರಕರಣಗಳು ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಕೋವಿಡ್ ದೃಢಪಟ್ಟು ಹೋಂ ಐಸೋಲೇಷನಲ್ಲಿರುವ ಸೋಂಕಿತರು ಹೋ ಐಸೋಲೇಷನಲ್ಲಿರದೆ ಎಲ್ಲೆಂದರಲ್ಲಿ ಓಡಾಡುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸೋಂಕಿತರನ್ನು ಈ ಕೋವಿಡ್ ಕೇರ್ಗೆ ಸ್ಥಳಾಂತರ ಮಾಡಲಾಗುವುದು. ತುಮಕೂರಿನ ಕ್ಯಾತ್ಸಂದ್ರದಲ್ಲಿ ಕೋವಿಡ್ ಕೇರ್ ಸೆಂಟರ್ ಅನ್ನು ಕಳೆದ ಬಾರಿಯಂತೆಯೇ ಈ ಬಾರಿಯೂ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಕೋವಿಡ್ ಕೇರ್ ಸೆಂಟರ್ನಲ್ಲಿ 200 ಹಾಸಿಗೆಗಳಿದ್ದು, 24*7 ವೈದ್ಯರು ಮತ್ತು…
ತುಮಕೂರು: ನಗರ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರೋನಾ ತಡೆಗಾಗಿ ಸರ್ಕಾರ ನೇಮಕ ಮಾಡಿರುವ ಕೋವಿಡ್ ನಿಯಂತ್ರಣ ಉಸ್ತುವಾರಿಯಾಗಿರುವ ಐಜಿಪಿ ಸೀಮಂತಕುಮಾರ್ ಸಿಂಗ್ ಅವರು ನಗರಕ್ಕೆ ಭೇಟಿ ನೀಡಿ ಕೊರೊನಾ ಮಾರ್ಗಸೂಚಿ ಪಾಲನೆ ಸಂಬಂಧ ಪರಿಶೀಲನೆ ನಡೆಸಿದರು. ನಗರದ ವಿವಿಧ ರಸ್ತೆಗಳು, ಬಡಾವಣೆಗಳಿಗೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ ಅವರೊಂದಿಗೆ ಭೇಟಿ ನೀಡಿದ ಐಜಿಪಿ ಸೀಮಂತಕುಮಾರ್ ಸಿಂಗ್ ಕೊರೊನಾ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಕೋವಿಡ್ ನಿಯಮಗಳ ಬಗ್ಗೆ ನಿರ್ಲಕ್ಷ್ಯ ತೋರದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ಮಾಡಿದರು. ನಗರದ ಬಿ.ಹೆಚ್. ರಸ್ತೆ, ಗಂಗೋತ್ರಿ ರಸ್ತೆ, ಎಸ್ಐಟಿ ಮುಖ್ಯ ರಸ್ತೆ, ಎಸ್.ಎಸ್.ಪುರಂ ರಸ್ತೆ, ಅಶೋಕ ರಸ್ತೆ, ರಿಂಗ್ ರಸ್ತೆ ಸೇರಿದಂತೆ ವಿವಿಧೆಡೆಗಳಲ್ಲಿ ಸಂಚರಿಸಿದ ಕೋವಿಡ್ ಉಸ್ತುವಾರಿ ಸೀಮಂತಕುಮಾರ್ ಸಿಂಗ್ ಅವರು ಜಿಲ್ಲಾ ಪೆÇಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಕೋವಿಡ್ ನಿಯಂತ್ರಣ ಕುರಿತು ಕೈಗೊಂಡಿರುವ ಕ್ರಮಗಳ…
ಮಧುಗಿರಿ: ಜನರ ಮೂಡನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ವಂಚಿಸುತ್ತಿದ್ದ ವಂಚಕರಿಗೆ ನ್ಯಾಯಾಲಯ ದಿಂದ ಕಠಿಣ ಕಾರಾಗೃಹ ಶಿಕ್ಷೆ ನೀಡಲಾಗಿದೆ. ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಹಕ್ಕಿಪಿಕ್ಕಿ ಕಾಲೋನಿಯ ಆನಂದ, ದೀಪ, ಜಯ, ಅಜಯ್, ವಿಜಯ ಕುಮಾರ್, ಎನ್ನುವವರು ಜನರಿಗೆ ಐದು ಬೆರಳಿನ ಗೂಬೆ ಮತ್ತು ಎರಡು ತಲೆಗಳ ಹಾವನ್ನು ಮನೆಯಲ್ಲಿ ಇಟ್ಟುಕೊಂಡು ಸಾಕಿದರೆ ಬೇಗ ಶ್ರೀಮಂತರಾಗುತ್ತೀರಾ ಎಂದು ನಂಬಿಸಿ ಹಣ ವಸೂಲಿ ಮಾಡುತ್ತಿದ್ದರು. ಈ ಮಾಹಿತಿಯನ್ನಾಧರಿಸಿ ಸುವರ್ಣ ನ್ಯೂಸ್ ಚಾನೆಲ್ನ ವರದಿಗಾರರಾದ ರಾಘವೇಂದ್ರ ಮತ್ತು ರವಿ ಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅಂದಿನ ಸಿಇಎನ್ ಪೊಲೀಸ್ ಠಾಣೆಯ ರಾಘವೇಂದ್ರ ಕೆ.ಆರ್.ರವರು ತನ್ನ ಸಿಬ್ಬಂದಿಯೊಂದಿಗೆ ಆರೋಪಿತರ ಮೇಲೆ ದಾಳಿ ಮಾಡಿ ಅವರ ಬಳಿ ಇದ್ದ ಕಬ್ಬಿಣದ ಚಾಕು, ರಾಡು ಮತ್ತು ಕಾರದ ಪುಡಿ ವಶಪಡಿಸಿಕೊಂಡಿದ್ದರು. ಇದರ ಸಂಬಂಧ ಕೊರಟಗೆರೆಯ ನೀರೀಕ್ಷಕರಾದ ಮನಿರಾಜು ಮತ್ತು ಪ್ರಭಾಕರ್ ತನಿಖೆ ನಡೆಸಿ…
ತುಮಕೂರು: ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಗಳನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸೂಚಿಸಿದರು. ರಾಜ್ಯಾದ್ಯಂತ ಏಪ್ರಿಲ್ 21ರ ರಾತ್ರಿ 9ರಿಂದ ಮೇ.4ರ ಬೆಳಗ್ಗೆ 6ರವರೆಗೆ ರಾತ್ರಿ ಕಫ್ರ್ರ್ಯೂ ವಿಧಿಸಿ ಸರಕಾರ ಮಾರ್ಗಸೂಚಿ ಹೊರಡಿಸಿದೆ. ಅಲ್ಲದೇ ಈ ಅವಧಿಯಲ್ಲಿ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವಿಕೇಂಡ್ ಕಫ್ರ್ರ್ಯೂ ವಿಧಿಸಿದೆ. ಈ ಸಂದರ್ಭದಲ್ಲಿ ಯಾವ್ಯಾವ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡಲಾಗಿದೆ ಹಾಗೂ ನಿಬರ್ಂಧವಿಸಿದಿದೆ. ಎಂಬುದನ್ನು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ. ಅದರಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು. ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಮಾತನಾಡಿ, ಕಫ್ರ್ಯೂ ಸಂದರ್ಭದಲ್ಲಿ ಮಾರ್ಗಸೂಚಿಯನ್ವಯ ರಾತ್ರಿ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಮತ್ತು ಅಗತ್ಯ ಸೇವೆಗಳು ಹೊರತುಪಡಿಸಿ ಉಳಿದೆಲ್ಲ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಬೇಕೆಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಬಹಳಷ್ಟು ಕೈಗಾರಿಕೆಗಳು ಮತ್ತು ಕಾರ್ಖಾನೆಗಳಿದ್ದು, ಇವುಗಳಲ್ಲಿ…
ತುಮಕೂರು: ಜಗತ್ತಿನಾದ್ಯಂತ ಮಹಾಮಾರಿ ಕೊರೋನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಪಾರಸ್ಥರು ಮೇ.4ರವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ವಿಶ್ವದೆಲ್ಲಡೆ ರಣಕೇಕೆ ಹಾಕುತ್ತಿರುವ ಈ ಕೊರೊನಾ ವೈರಸ್ ಸೋಮಕು ತನ್ನ ಕದಂಬ ಬಾಹುಗಳನ್ನು ಎಲ್ಲೆಡೆ ಚಾಚುತ್ತಾ ಸೋಂಕು ಹರಡಲು ಹವಣಿಸುತ್ತಿರುವ ಬಗ್ಗೆ ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಬಿಹೆಚ್ ರಸ್ತೆ, ಎಂಜಿ ರಸ್ತೆ, ಎಸ್ಎಸ್ ಪುರಂ, ಅಶೋಕ ರಸ್ತೆ, ಮಂಡಿಪೇಟೆ ರಸ್ತೆ ಸೇರಿದಂತೆ ಹೆಚ್ಚು ವಹಿವಾಟು ನಡೆಯುವ ಪ್ರದೇಶದಲ್ಲಿ ಜನಸಂದಣಿ ಆಗಬಾರದೆಂದು ವ್ಯಾಪಾರಸ್ಥರಿಗೆ ಸೂಚನೆ ನೀಡಿದ್ದು, ಪೊಲೀಸ್ ಪೇದೆಗಳು ಖುದ್ದು ಪ್ರಮುಖ ರಸ್ತೆಗಳಿಗೆ ಇಳಿದು ಬಂದ್ ಮಾಡುವಂತೆ ಸೂಚಿಸುತ್ತಿದ್ದಾರೆ. ಜನದಟ್ಟಣೆ ಜಾಸ್ತಿ ಇರುವ ಕಡೆ ಈ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆದಷ್ಟು ಜನಸಂಪರ್ಕ ಕಡಿಮೆ ಇರುವಂತೆ ನೋಡಿಕೊಳ್ಳಬೇಕು. ಆನಸಾಮಾನ್ಯರೂ ಸಹ ಜನಸಂದಣಿಗೆ ಅವಕಾಶ ಕೊಡಬಾರದು. ಹೋಟೆಲ್ ಉದ್ಯಮಿಗಳು ಪಾರ್ಸಲ್ಗೆ ಅಷ್ಟೇ ಅವಕಾಶ ಕಲ್ಪಿಸಿದ್ದಾರೆ. ಟೀ ಸ್ಟಾಲ್ಗಳು,…
ಹುಳಿಯಾರು: ಮಾಸ್ಕ್ ಧರಿಸದೆ ರಸ್ತೆಗಳಲ್ಲಿ ತಿರುಗಾಡುವ ಪಾದಾಚಾರಿಗಳಿಗೆ, ವಾಹನ ಸವಾರರಿಗೆ ದಂಡವಿದಿಸುವ ಕಾರ್ಯಕ್ಕೆ ಹುಳಿಯಾರು ಪೊಲೀಸ್ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ, ಅಧಿಕಾರಿಗಳು ಜಂಟಿಯಾಗಿ ಮಂಗಳವಾರದಂದು ಕಾರ್ಯಚಾರಣೆ ನಡೆಸಿ ಬಿಸಿಮುಟಿಸಿದ್ದಾರೆ. ಕೊರೊನಾ ತಡೆಗಟ್ಟಲು ಜನರು ಮನೆಯಿಂದ ಆಚೆ ಬಂದಾಗ ಮತ್ತು ರಸ್ತೆಯಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸುವಂತೆ ಸರಕಾರ ನಿಯಮವನ್ನ ಪಾಲಿಸುವಂತೆ ಸಾಕಷ್ಟು ಬಾರಿ ಜಾಗೃತಿ ಮೂಡಿಸಿದರು ಸಹಾ ಕೆಲವು ಜನರು ಯಾವುದಕ್ಕು ಜಗ್ಗದೆ ತಿರುಗಾಡುವುದು ಸಾಮಾನ್ಯವಾಗಿದೆ. ಇಂತವರಿಗೆ ಬಿಸಿ ಮುಟ್ಟಿಸುವ ನಿಟ್ಟಿನ್ನಲ್ಲಿ ಪೊಲೀಸರು, ಸ್ಥಳಿಯ ಪಪಂ. ಹಾಗೂ ಆರೋಗ್ಯ ಇಲಾಖೆಯವರು ಜಂಟಿಯಾಗಿ ರಸ್ತೆಗೆ ಇಳಿದು ದಂಡವಿದಿಸುವ ಜೊತೆಗೆ ಕೊರೊನಾ ಪರೀಕ್ಷೆ ನಡೆಸುವ ಮೂಲಕ ಪ್ರತಿಯೋಬ್ಬರು ಸಹಾ ಮಾಸ್ಕ್ ಧರಿಸಿಕೊಂಡು, ಸಮಾಜಿಕ ಅಂತರ ಕಾಪಾಡಿಕೊಂಡು ಸರಕಾರದ ನಿಯಮವನ್ನ ಪಾಲಿಸುವ ಮೂಲಕ ಕೊರೊನಾ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನ ಅನುಸರಿಸುವ ಮೂಲಕ ತಮ್ಮ ಆರೋಗ್ಯವನ್ನ ತಾವೇ ಕಾಪಾಡಿಕೊಳ್ಳುವಂತೆ ಮನವಿಮಾಡಿದರು.
ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿದ್ದು, ಸೋಂಕು ಹರಡದಂತೆ ಎಲ್ಲಾ ಮುಂಜಾಗ್ರತಾ ಕ್ರಮ ವಹಿಸಲು ವಾರ್ಡ್ವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿ ಕಾರಿ ವೈ.ಎಸ್.ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ. 1ನೇ ವಾರ್ಡ್ ನೋಡಲ್ ಅಧಿಕಾರಿ ಜವಳಿ ಮತ್ತು ಕೈಮಗ್ಗ ಇಲಾಖೆ ಉಪ ನಿರ್ದೇಶಕರು(ಮೊ.ಸಂ: 9916143619) 2ನೇ ವಾರ್ಡ್-ಜಿಲ್ಲಾ ವಿಕಲಚೇತನರ ಕಲ್ಯಾಣಾಧಿ ಕಾರಿ(9482916495), 3ನೇ ವಾರ್ಡ್-ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು(9480877002), 4ನೇ ವಾರ್ಡ್-ವಯಸ್ಕರ ಕಲ್ಯಾ ಣಾಧಿಕಾರಿ(9845378563), 5ನೇ ವಾರ್ಡ್-ಜಿಲ್ಲಾ ಸಂಖ್ಯಾ ಸಂಗ್ರಹ ಣಾಧಿಕಾರಿ(9591264934), 6ನೇ ವಾರ್ಡ್-ಅಕ್ಷರ ದಾಸೋಹ ಶಿಕ್ಷಣಾ ಧಿಕಾರಿ(8618093709), 7ನೇ ವಾರ್ಡ್-ಕೃಷಿ ಇಲಾಖೆ ಉಪನಿ ರ್ದೇಶಕರು(8277932801), 8ನೇ ವಾರ್ಡ್-ಭೂ ದಾಖಲೆಗಳ ಉಪನಿರ್ದೇ ಶಕರು ಹಾಗೂ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು(9880166629) 9ನೇ ವಾರ್ಡ್-ಪಿಡಬ್ಲ್ಯೂಡಿ ಕಾರ್ಯಪಾಲಕ ಅಭಿಯಂತರರು(9480558851), 10ನೇ ವಾರ್ಡ್-ಕರ್ನಾಟಕ ಗೃಹ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು(9845600099), 11ನೇ ವಾರ್ಡ್- ಜಿಲ್ಲಾ ಪಂಚಾಯತ್ ಲೆಕ್ಕಾಧಿ ಕಾರಿ(9480877003), 12ನೇ ವಾರ್ಡ್-ಜಿಲ್ಲಾ ವಾಣಿಜ್ಯ…