Author: News Desk Benkiyabale

ತುಮಕೂರು:         ನಗರ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರೋನಾ ತಡೆಗಾಗಿ ಸರ್ಕಾರ ನೇಮಕ ಮಾಡಿರುವ ಕೋವಿಡ್ ನಿಯಂತ್ರಣ ಉಸ್ತುವಾರಿಯಾಗಿರುವ ಐಜಿಪಿ ಸೀಮಂತಕುಮಾರ್ ಸಿಂಗ್ ಅವರು ನಗರಕ್ಕೆ ಭೇಟಿ ನೀಡಿ ಕೊರೊನಾ ಮಾರ್ಗಸೂಚಿ ಪಾಲನೆ ಸಂಬಂಧ ಪರಿಶೀಲನೆ ನಡೆಸಿದರು.       ನಗರದ ವಿವಿಧ ರಸ್ತೆಗಳು, ಬಡಾವಣೆಗಳಿಗೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ ಅವರೊಂದಿಗೆ ಭೇಟಿ ನೀಡಿದ ಐಜಿಪಿ ಸೀಮಂತಕುಮಾರ್ ಸಿಂಗ್ ಕೊರೊನಾ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಕೋವಿಡ್ ನಿಯಮಗಳ ಬಗ್ಗೆ ನಿರ್ಲಕ್ಷ್ಯ ತೋರದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ಮಾಡಿದರು. ನಗರದ ಬಿ.ಹೆಚ್. ರಸ್ತೆ, ಗಂಗೋತ್ರಿ ರಸ್ತೆ, ಎಸ್‍ಐಟಿ ಮುಖ್ಯ ರಸ್ತೆ, ಎಸ್.ಎಸ್.ಪುರಂ ರಸ್ತೆ, ಅಶೋಕ ರಸ್ತೆ, ರಿಂಗ್ ರಸ್ತೆ ಸೇರಿದಂತೆ ವಿವಿಧೆಡೆಗಳಲ್ಲಿ ಸಂಚರಿಸಿದ ಕೋವಿಡ್ ಉಸ್ತುವಾರಿ ಸೀಮಂತಕುಮಾರ್ ಸಿಂಗ್ ಅವರು ಜಿಲ್ಲಾ ಪೆÇಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಕೋವಿಡ್ ನಿಯಂತ್ರಣ ಕುರಿತು ಕೈಗೊಂಡಿರುವ ಕ್ರಮಗಳ…

Read More

ಮಧುಗಿರಿ:       ಜನರ ಮೂಡನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ವಂಚಿಸುತ್ತಿದ್ದ ವಂಚಕರಿಗೆ ನ್ಯಾಯಾಲಯ ದಿಂದ ಕಠಿಣ ಕಾರಾಗೃಹ ಶಿಕ್ಷೆ ನೀಡಲಾಗಿದೆ.       ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಹಕ್ಕಿಪಿಕ್ಕಿ ಕಾಲೋನಿಯ ಆನಂದ, ದೀಪ, ಜಯ, ಅಜಯ್, ವಿಜಯ ಕುಮಾರ್, ಎನ್ನುವವರು ಜನರಿಗೆ ಐದು ಬೆರಳಿನ ಗೂಬೆ ಮತ್ತು ಎರಡು ತಲೆಗಳ ಹಾವನ್ನು ಮನೆಯಲ್ಲಿ ಇಟ್ಟುಕೊಂಡು ಸಾಕಿದರೆ ಬೇಗ ಶ್ರೀಮಂತರಾಗುತ್ತೀರಾ ಎಂದು ನಂಬಿಸಿ ಹಣ ವಸೂಲಿ ಮಾಡುತ್ತಿದ್ದರು.        ಈ ಮಾಹಿತಿಯನ್ನಾಧರಿಸಿ ಸುವರ್ಣ ನ್ಯೂಸ್ ಚಾನೆಲ್‍ನ ವರದಿಗಾರರಾದ ರಾಘವೇಂದ್ರ ಮತ್ತು ರವಿ ಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅಂದಿನ ಸಿಇಎನ್ ಪೊಲೀಸ್ ಠಾಣೆಯ ರಾಘವೇಂದ್ರ ಕೆ.ಆರ್.ರವರು ತನ್ನ ಸಿಬ್ಬಂದಿಯೊಂದಿಗೆ ಆರೋಪಿತರ ಮೇಲೆ ದಾಳಿ ಮಾಡಿ ಅವರ ಬಳಿ ಇದ್ದ ಕಬ್ಬಿಣದ ಚಾಕು, ರಾಡು ಮತ್ತು ಕಾರದ ಪುಡಿ ವಶಪಡಿಸಿಕೊಂಡಿದ್ದರು.        ಇದರ ಸಂಬಂಧ ಕೊರಟಗೆರೆಯ ನೀರೀಕ್ಷಕರಾದ ಮನಿರಾಜು ಮತ್ತು ಪ್ರಭಾಕರ್ ತನಿಖೆ ನಡೆಸಿ…

Read More

ತುಮಕೂರು: ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಗಳನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸೂಚಿಸಿದರು. ರಾಜ್ಯಾದ್ಯಂತ ಏಪ್ರಿಲ್ 21ರ ರಾತ್ರಿ 9ರಿಂದ ಮೇ.4ರ ಬೆಳಗ್ಗೆ 6ರವರೆಗೆ ರಾತ್ರಿ ಕಫ್ರ್ರ್ಯೂ ವಿಧಿಸಿ ಸರಕಾರ ಮಾರ್ಗಸೂಚಿ ಹೊರಡಿಸಿದೆ. ಅಲ್ಲದೇ ಈ ಅವಧಿಯಲ್ಲಿ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವಿಕೇಂಡ್ ಕಫ್ರ್ರ್ಯೂ ವಿಧಿಸಿದೆ. ಈ ಸಂದರ್ಭದಲ್ಲಿ ಯಾವ್ಯಾವ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡಲಾಗಿದೆ ಹಾಗೂ ನಿಬರ್ಂಧವಿಸಿದಿದೆ. ಎಂಬುದನ್ನು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ. ಅದರಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು. ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಮಾತನಾಡಿ, ಕಫ್ರ್ಯೂ ಸಂದರ್ಭದಲ್ಲಿ ಮಾರ್ಗಸೂಚಿಯನ್ವಯ ರಾತ್ರಿ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಮತ್ತು ಅಗತ್ಯ ಸೇವೆಗಳು ಹೊರತುಪಡಿಸಿ ಉಳಿದೆಲ್ಲ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಬೇಕೆಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಬಹಳಷ್ಟು ಕೈಗಾರಿಕೆಗಳು ಮತ್ತು ಕಾರ್ಖಾನೆಗಳಿದ್ದು, ಇವುಗಳಲ್ಲಿ…

Read More

ತುಮಕೂರು: ಜಗತ್ತಿನಾದ್ಯಂತ ಮಹಾಮಾರಿ ಕೊರೋನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಪಾರಸ್ಥರು ಮೇ.4ರವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ವಿಶ್ವದೆಲ್ಲಡೆ ರಣಕೇಕೆ ಹಾಕುತ್ತಿರುವ ಈ ಕೊರೊನಾ ವೈರಸ್ ಸೋಮಕು ತನ್ನ ಕದಂಬ ಬಾಹುಗಳನ್ನು ಎಲ್ಲೆಡೆ ಚಾಚುತ್ತಾ ಸೋಂಕು ಹರಡಲು ಹವಣಿಸುತ್ತಿರುವ ಬಗ್ಗೆ ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಬಿಹೆಚ್ ರಸ್ತೆ, ಎಂಜಿ ರಸ್ತೆ, ಎಸ್‍ಎಸ್ ಪುರಂ, ಅಶೋಕ ರಸ್ತೆ, ಮಂಡಿಪೇಟೆ ರಸ್ತೆ ಸೇರಿದಂತೆ ಹೆಚ್ಚು ವಹಿವಾಟು ನಡೆಯುವ ಪ್ರದೇಶದಲ್ಲಿ ಜನಸಂದಣಿ ಆಗಬಾರದೆಂದು ವ್ಯಾಪಾರಸ್ಥರಿಗೆ ಸೂಚನೆ ನೀಡಿದ್ದು, ಪೊಲೀಸ್ ಪೇದೆಗಳು ಖುದ್ದು ಪ್ರಮುಖ ರಸ್ತೆಗಳಿಗೆ ಇಳಿದು ಬಂದ್ ಮಾಡುವಂತೆ ಸೂಚಿಸುತ್ತಿದ್ದಾರೆ. ಜನದಟ್ಟಣೆ ಜಾಸ್ತಿ ಇರುವ ಕಡೆ ಈ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆದಷ್ಟು ಜನಸಂಪರ್ಕ ಕಡಿಮೆ ಇರುವಂತೆ ನೋಡಿಕೊಳ್ಳಬೇಕು. ಆನಸಾಮಾನ್ಯರೂ ಸಹ ಜನಸಂದಣಿಗೆ ಅವಕಾಶ ಕೊಡಬಾರದು. ಹೋಟೆಲ್ ಉದ್ಯಮಿಗಳು ಪಾರ್ಸಲ್‍ಗೆ ಅಷ್ಟೇ ಅವಕಾಶ ಕಲ್ಪಿಸಿದ್ದಾರೆ. ಟೀ ಸ್ಟಾಲ್‍ಗಳು,…

Read More

ಹುಳಿಯಾರು:      ಮಾಸ್ಕ್ ಧರಿಸದೆ ರಸ್ತೆಗಳಲ್ಲಿ ತಿರುಗಾಡುವ ಪಾದಾಚಾರಿಗಳಿಗೆ, ವಾಹನ ಸವಾರರಿಗೆ ದಂಡವಿದಿಸುವ ಕಾರ್ಯಕ್ಕೆ ಹುಳಿಯಾರು ಪೊಲೀಸ್ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ, ಅಧಿಕಾರಿಗಳು ಜಂಟಿಯಾಗಿ ಮಂಗಳವಾರದಂದು ಕಾರ್ಯಚಾರಣೆ ನಡೆಸಿ ಬಿಸಿಮುಟಿಸಿದ್ದಾರೆ.       ಕೊರೊನಾ ತಡೆಗಟ್ಟಲು ಜನರು ಮನೆಯಿಂದ ಆಚೆ ಬಂದಾಗ ಮತ್ತು ರಸ್ತೆಯಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸುವಂತೆ ಸರಕಾರ ನಿಯಮವನ್ನ ಪಾಲಿಸುವಂತೆ ಸಾಕಷ್ಟು ಬಾರಿ ಜಾಗೃತಿ ಮೂಡಿಸಿದರು ಸಹಾ ಕೆಲವು ಜನರು ಯಾವುದಕ್ಕು ಜಗ್ಗದೆ ತಿರುಗಾಡುವುದು ಸಾಮಾನ್ಯವಾಗಿದೆ. ಇಂತವರಿಗೆ ಬಿಸಿ ಮುಟ್ಟಿಸುವ ನಿಟ್ಟಿನ್ನಲ್ಲಿ ಪೊಲೀಸರು, ಸ್ಥಳಿಯ ಪಪಂ. ಹಾಗೂ ಆರೋಗ್ಯ ಇಲಾಖೆಯವರು ಜಂಟಿಯಾಗಿ ರಸ್ತೆಗೆ ಇಳಿದು ದಂಡವಿದಿಸುವ ಜೊತೆಗೆ ಕೊರೊನಾ ಪರೀಕ್ಷೆ ನಡೆಸುವ ಮೂಲಕ ಪ್ರತಿಯೋಬ್ಬರು ಸಹಾ ಮಾಸ್ಕ್ ಧರಿಸಿಕೊಂಡು, ಸಮಾಜಿಕ ಅಂತರ ಕಾಪಾಡಿಕೊಂಡು ಸರಕಾರದ ನಿಯಮವನ್ನ ಪಾಲಿಸುವ ಮೂಲಕ ಕೊರೊನಾ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನ ಅನುಸರಿಸುವ ಮೂಲಕ ತಮ್ಮ ಆರೋಗ್ಯವನ್ನ ತಾವೇ ಕಾಪಾಡಿಕೊಳ್ಳುವಂತೆ ಮನವಿಮಾಡಿದರು.

Read More

ತುಮಕೂರು:       ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿದ್ದು, ಸೋಂಕು ಹರಡದಂತೆ ಎಲ್ಲಾ ಮುಂಜಾಗ್ರತಾ ಕ್ರಮ ವಹಿಸಲು ವಾರ್ಡ್‍ವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿ ಕಾರಿ ವೈ.ಎಸ್.ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.       1ನೇ ವಾರ್ಡ್ ನೋಡಲ್ ಅಧಿಕಾರಿ ಜವಳಿ ಮತ್ತು ಕೈಮಗ್ಗ ಇಲಾಖೆ ಉಪ ನಿರ್ದೇಶಕರು(ಮೊ.ಸಂ: 9916143619) 2ನೇ ವಾರ್ಡ್-ಜಿಲ್ಲಾ ವಿಕಲಚೇತನರ ಕಲ್ಯಾಣಾಧಿ ಕಾರಿ(9482916495), 3ನೇ ವಾರ್ಡ್-ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು(9480877002), 4ನೇ ವಾರ್ಡ್-ವಯಸ್ಕರ ಕಲ್ಯಾ ಣಾಧಿಕಾರಿ(9845378563), 5ನೇ ವಾರ್ಡ್-ಜಿಲ್ಲಾ ಸಂಖ್ಯಾ ಸಂಗ್ರಹ ಣಾಧಿಕಾರಿ(9591264934), 6ನೇ ವಾರ್ಡ್-ಅಕ್ಷರ ದಾಸೋಹ ಶಿಕ್ಷಣಾ ಧಿಕಾರಿ(8618093709), 7ನೇ ವಾರ್ಡ್-ಕೃಷಿ ಇಲಾಖೆ ಉಪನಿ ರ್ದೇಶಕರು(8277932801), 8ನೇ ವಾರ್ಡ್-ಭೂ ದಾಖಲೆಗಳ ಉಪನಿರ್ದೇ ಶಕರು ಹಾಗೂ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು(9880166629) 9ನೇ ವಾರ್ಡ್-ಪಿಡಬ್ಲ್ಯೂಡಿ ಕಾರ್ಯಪಾಲಕ ಅಭಿಯಂತರರು(9480558851), 10ನೇ ವಾರ್ಡ್-ಕರ್ನಾಟಕ ಗೃಹ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು(9845600099), 11ನೇ ವಾರ್ಡ್- ಜಿಲ್ಲಾ ಪಂಚಾಯತ್ ಲೆಕ್ಕಾಧಿ ಕಾರಿ(9480877003), 12ನೇ ವಾರ್ಡ್-ಜಿಲ್ಲಾ ವಾಣಿಜ್ಯ…

Read More

ತುಮಕೂರು:        ಕೋವಿಡ್-19ರ 2ನೇ ಅಲೆಯ ಸೋಂಕು ಹೆಚ್ಚಾಗುತ್ತಿದ್ದು, ಸರ್ಕಾರದ ಮಾರ್ಗಸೂಚಿಗಳ ಪಾಲನೆ ಕುರಿತು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ನಗರದ ಮಾಲ್‍ಗಳು, ಚಿತ್ರಮಂದಿರ, ವಾಣಿಜ್ಯ ಮಳಿಗೆಗಳು, ಹೋಟೆಲ್‍ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಗರದ ಎಂ.ಜಿ.ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದ ಡಿಸಿ, ಎಸ್ಪಿ ಇಂದು ಬಿ.ಹೆಚ್.ರಸ್ತೆಯಲ್ಲಿರುವ ಅಂಗಡಿ ಮಳಿಗೆಗಳು, ಮಾಲ್‍ಗಳು, ಗಾಯತ್ರಿ ಚಿತ್ರಮಂದಿರ, ಹೋಟಲ್‍ಗಳು, ಗಂಗೋತ್ರಿ ಬಡಾವಣೆ ಹಾಗೂ ಫುಡ್ ಸ್ಟ್ರೀಟ್‍ಗೆ ತೆರಳಿ ಕೋವಿಡ್ ಮಾರ್ಗಸೂಚಿಯನ್ನು ಪರಿಶೀಲಿಸಿದರು. ಪಾಲನೆ ಮಾಡದವರಿಗೆ ಸ್ಥಳದಲ್ಲಿಯೇ ದಂಡ ವಿಧಿಸಲಾಯಿತು. ಕೆಲವರಿಗೆ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್ ಕುರಿತು ಅರಿವು ಮೂಡಿಸಿ, ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸಿದರು.       ಸರ್ಕಾರವು ಚಿತ್ರಮಂದಿರಗಳಿಗೆ ಶೇ.50ರಷ್ಟು ಸೀಟುಗಳಿಗೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ನಗರದ ಗಾಯಿತ್ರಿ ಚಿತ್ರಮಂದಿರಕ್ಕೆ ಭೇಟಿ ನೀಡಿ ಮಾಸ್ಕ್ ಧರಿಸಿ ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರಾ ಎಂದು ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ…

Read More

ಕೊರಟಗೆರೆ:       ಎತ್ತಿನಹೊಳೆ ಅಧಿಕಾರಿ ವರ್ಗ ರೈತರ ಪರವಾಗಿ ನಿಲ್ಲಬೇಕು. ಗುತ್ತಿಗೆದಾರರ ಪರವಾಗಿ ಕೆಲಸ ಮಾಡುವುದನ್ನು ನಿಲ್ಲಿಸ ಬೇಕು. ರೈತರಿಗೆ ಪರಿಹಾರ ನೀಡದೇ ಈಗಾಗಲೇ ಅವರ ಜಮೀನಿನಲ್ಲಿ ಪೈಪ್‍ಲೈನ್ ಅಳವಡಿಸಿದ್ದೀರಾ. ಬಡ ರೈತರಿಗೆ ಅನ್ಯಾಯ ಮಾಡಿದರೇ ಸುಮ್ಮನಿರೋಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದರು.       ಪಟ್ಟಣದ ತಾಪಂ ಸಭಾಂಗಣದಲ್ಲಿ ಏರ್ಪಡಿಸ ಲಾಗಿದ್ದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಯಲುಸೀಮೆ ಪ್ರದೇಶವಾದ ನಮ್ಮ ಕೊರಟಗೆರೆ, ಮಧುಗಿರಿ, ಪಾವಗಡ ಸೇರಿದಂತೆ ತುಮಕೂರು ಜಿಲ್ಲೆಗೆ ನೀರು ಬರುತ್ತಿರುವ ಒಳ್ಳೆಯ ಕೆಲಸಕ್ಕೆ ಅಡ್ಡಿ ಆಗಬಾರದು ಎನ್ನುವ ಉದ್ದೇಶದಿಂದ ಸುಮ್ಮನಿದ್ದೇವೆ. ನಮ್ಮ ಒಳ್ಳೆಯತನವನ್ನು ದುರುಪಯೋಗ ಮಾಡಿಕೊಳ್ಳುತ್ತೀರಾ. ತುಮಕೂರು ಜಿಲ್ಲೆಯ ಶಾಸಕರು ಮತ್ತು ಸಂಸದರನ್ನು ಗಣನೆಗೆ ತೆಗೆದುಕೊಳ್ಳದಿದ್ದರೇ ತಕ್ಕ ಪರಿಣಾಮ ಎದುರಿಸಲು ಸಿದ್ದರಾಗಿ ಎಂದು ಕೆಂಡಾಮಂಡಲ ಆದರು. ಕೊರೊನಾ ರೋಗದಿಂದ ಜನಸಾಮಾನ್ಯರ ಜೀವನ ಸಂಪೂರ್ಣ ಕುಗ್ಗಿದೆ. ಇಂತಹ ಸಮಯದಲ್ಲಿ ಸರಕಾರಿ ಅಧಿಕಾರಿವರ್ಗ ಬೇಕಾಬಿಟ್ಟಿ ಕೆಲಸ ಮಾಡಿದರೆ ನಿಮ್ಮ ಆಟ ನಡಿಯೋದಿಲ್ಲ.…

Read More

ತುಮಕೂರು  :       ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ನಗರ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸೋಂಕು ಗ್ರಾಮಗಳಿಗೆ ವ್ಯಾಪಿಸದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು.        ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯ ಎಲ್ಲಾ ಗ್ರಾಮಪಂಚಾಯ್ತಿಗಳ ಅಧ್ಯಕ್ಷರು, ಸದಸ್ಯರು, ಪಿಡಿಒಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ನಡೆಸಿ ಮಾತನಾಡಿದ ಅವರು, ಗ್ರಾಪಂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿನ ಕಾರ್ಯಪಡೆಯು ಗ್ರಾಪಂ ವ್ಯಾಪ್ತಿಯ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಬಿಲ್‍ಕಲೆಕ್ಟರ್, ವಾಟರ್‍ಮೆನ್ ಸೇರಿದಂತೆ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಬಳಸಿಕೊಂಡು ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಗ್ರಾಮಗಳಿಗೆ ಕೊರೊನಾ ಸುಳಿಯದಂತೆ ತಡೆಗಟ್ಟಬೇಕು ಎಂದು ನಿರ್ದೇಶಿದರು.       ಅಧಿಕಾರಿಗಳು ಎಲ್ಲಾ ಕೆಲಸಗಳನ್ನು ಬದಿಗೊತ್ತಿ ಕೋವಿಡ್-19 ಹರಡದಂತೆ ತಡೆಗಟ್ಟುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ನಿಯಂತ್ರಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರಲ್ಲದೆ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಕೋವಿಡ್…

Read More

ತುಮಕೂರು:        ಕೋವಿಡ್ ಹಿನ್ನೆಲೆಯಲ್ಲಿ ನಗರದ ಎಂಜಿ ರಸ್ತೆಯಲ್ಲಿಂದು ಜಿಲ್ಲಾಧಿಕಾರಿಗಳಾದ ವೈ.ಎಸ್. ಪಾಟೀಲ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಅವರು ಮಾಸ್ಕ್ ಹಾಗೂ ಕೋವಿಡ್ ಮಾರ್ಗಸೂಚಿ ಪಾಲನೆ ಕುರಿತು ಪರಿಶೀಲನೆ ನಡೆಸಿದರು.       ಮಾಸ್ಕ್ ಹಾಕದವರಿಗೆ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದೇ ಇದ್ದವರಿಗೆ ದಂಡವಿಧಿಸಿದರೆ ಮತ್ತೆ ಕೆಲವರಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಾಗೃತಿ ಮೂಡಿಸಿದರು.       ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು, ಜಿಲ್ಲೆಯಲ್ಲಿ ಸರ್ಕಾ ರದ ಮಾರ್ಗಸೂಚನೆ ಅನ್ವಯ ಕೋವಿಡ್ ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ. ತಹಸೀಲ್ದಾರ್ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಿ ಸರ್ಕಾರದ ಹೊಸ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದರು.       ನಗರದಲ್ಲಿ ಕೋವಿಡ್ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಜೋನ್‍ಗಳನ್ನು ಮಾಡಲು ನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಹೆಚ್ಚು ರ್ಯಾಟ್ ಟೆಸ್ಟ್…

Read More