ಗುಬ್ಬಿ: ತಾಲೂಕಿನ ನಿಟ್ಟೂರಿನಲ್ಲಿ ಹಾದು ಹೋಗಿರುವ ಎನ್.ಎಚ್ 206 ನಲ್ಲಿ ಅಂಡರ್ ಪಾಸ್ ನೀಡುವಂತೆ ಏನ್ ಎಚ್ 206 ಅಧಿಕಾರಿಗಳ ವಿರುದ್ದ ಗ್ರಾಮದ ಸಾರ್ವಜನಿಕರು ರೈತರು ವ್ಯಾಪಾರಸ್ಥರು ಹಾಗೂ ಈ ಮುಖಂಡರುಗಳು ರಸ್ತೆ ತಡೆದು ಬೃಹತ್ ಪ್ರತಿಭಟನೆ ಮಾಡಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯ ಏನ್.ಸಿ ಗಿರೀಶ್ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಜನರು ಈ ಭಾಗದಲ್ಲಿ ದಿನನಿತ್ಯ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಓಡಾಟ ಮಾಡುತ್ತಾರೆ ಆದರೆ ಇಲ್ಲಿ ಅಂಡರ್ ಪಾಸ್ ಇಟ್ಟಿಲ್ಲ ಹಲವು ಬಾರಿ ಮನವಿ ಮಾಡಿದರು ಅಧಿಕಾರಿಗಳು ಇದರ ಬಗ್ಗೆ ತಲೆ ಕೆಡಿಸಿ ಕೊಂಡಿಲ್ಲ ಇಡೀ ಊರನ್ನೇ ಎರಡು ಭಾಗ ಮಾಡಿದ್ದಾರೆ ಪ್ರತಿನಿತ್ಯ ರೈತರು ದನಕರು, ಹಸು, ಒಡೆದು ಕೊಂಡು ತೋಟಗಳಿಗೆ ಹೋಗಬೇಕು ಅಂದರೆ ಅರ್ಧ ಕಿ. ಮೀ ಗೂ ಹೆಚ್ಚು ದೂರ ಸಾಗಬೇಕಿದೆ ಇದರಿಂದ ಸಾಕಷ್ಟು ಸಮಸ್ಯೆ ಇದೆ ಇದನ್ನು ಕೊಡಲೇ ಬಗೆ ಹರಿಸಬೇಕು ಇಲ್ಲ ದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ…
Author: News Desk Benkiyabale
ತುಮಕೂರು: ಶುಕ್ರವಾರ ಏಕಾಏಕಿ ದಿಢೀರನೇ ಮಾರುಕಟ್ಟೆಗೆ ಎಪಿಎಂಸಿ ಅಧ್ಯಕ್ಷ ಉಮೇಶ್ ಗೌಡ ನೇತೃತ್ವದ ಅಧಿಕಾರಿಗಳು ಹಾಗೂ ಎಪಿಎಂಸಿ ಸದಸ್ಯರ ತಂಡ ಬೇಟಿ ನೀಡಿ ಅನದಿಕೃತ ಅಂಗಡಿ ಮಳಿಗೆಗಳಿಗೆ ಶಾಕ್ ನೀಡಿದ್ದಲ್ಲದೇ ಅನಧಿಕೃತ ಅಂಗಡಿ ಮಳಿಗೆಗಳು ಹಾಗೂ ಸ್ವಚ್ಚತೆ ಕಾಪಾಡದ ಅಂಗಡಿಗಳಿಗೆÉ 1,07,500-00 ದಂಡ ವಿಧಿಸಿದ್ದಾರೆ. ಸ್ವಚ್ಚತೆ ಇಲ್ಲದವರಿಗೆ ಒತ್ತುವರಿಯವರಿಗೂ ದಂಡ: ಅಂಗಡಿ ಮಳಿಗೆಗಳ ಮುಂದೆ ಕಸಕಡ್ಡಿ, ತ್ಯಾಜ್ಯ ಎಸೆದು ಸರಿಯಾಗಿ ಬಳಕೆ ಮಾಡದೆ, ರೋಗರುಜಿನಗಳು ಉದ್ಬವವಾಗುವಂತೆ ಸ್ವಚ್ಚತೆ ಕಾಪಾಡದ ಅಂಗಡಿಗಳನ್ನಾ, ಸ್ವತಃ ಕಾಲ್ನೆಡಿಗೆಯ ಮೂಲಕ ಸುತ್ತಿ ಹುಡುಕಿ ದಂಡ ವಿದಿಸಲಾಯಿತು. ಹಾಗೆಯೇ ಎಪಿಎಂಸಿ ನೀಡಿದ ಜಾಗ ಬಿಟ್ಟು ರಸ್ತೆ ತುಂಬಾ ತರಕಾರಿ ಸುರಿದು ವಾಹನಗಳಿಗೆ, ಸಾರ್ವಜನಿಕರಿಗೆ ತೊಂದರೆಯುಂಟುಮಾಡುತ್ತಿದ್ದ ವರ್ತಕರಿಗೆ ಸ್ಥಳದಲ್ಲೇ ದಂಡ ವಿಧಿಸಲಾಗಿದೆ. ಅನಧಿಕೃತ ಅಂಗಡಿಗಳಿಗೆ ಶುಕ್ರವಾರದವರೆಗೆ ಗಡುವು..! ಅನದಿಕೃತವಾಗಿ ಸಿಕ್ಕಸಿಕ್ಕ ಜಾಗದಲ್ಲೇ ಶೆಡ್ ನಿರ್ಮಿಸಿಕೊಂಡು, ನೈಜ ವ್ಯಾಪಾರಸ್ಥರಿಗೆ ತೊಂದರೆಯುಂಟು ಮಾಡುತ್ತಿದ್ದ ಅನಧಿಕೃತ ವ್ಯಾಪಾರಸ್ಥರಿಗೆ ಸ್ಥಳದಲ್ಲೇ ಚಳಿಬಿಡಿಸಿದ ಸಮಿತಿ, ಶುಕ್ರವಾರದೊಳಗೆ ಅನಧಿಕೃತ ಅಂಗಡಿಗಳನ್ನಾ ಮುಚ್ಚಲು ಡೆಡ್ಲೈನ್ ನೀಡಿದೆ. ಮಾರುಕಟ್ಟೆ ಸಮಯ ಮೊದಲಿನಂತೆ..…
ತುಮಕೂರು: ಜಿಲ್ಲೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡುವ ಪ್ರಮಾಣ ಜಾಸ್ತಿಯಾಗಿದ್ದು, ಇದನ್ನು ತಗ್ಗಿಸುವ ಅಗತ್ಯವಿದೆ. ಆಸ್ಪತ್ರೆಗಳಿಗೆ ದಾಖಲಾಗುವ ಗರ್ಭಿಣಿಯರಿಗೆ ಅಗತ್ಯ ಪರೀಕ್ಷೆಗಳನ್ನು ನಡೆಸಿ, ಅನಗತ್ಯವಾಗಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸುವುದನ್ನು ಕಡಿಮೆ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ಜರುಗಿದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ತಾಯಿ ಮತ್ತು ಶಿಶುಗಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ರಚಿಸಿ ಕರ್ತವ್ಯವನ್ನು ನಿರ್ವಹಿಸಬೇಕೆಂದು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಕಳೆದ ಏಪ್ರಿಲ್ 2021 ರಿಂದ 2022ರ ಮಾರ್ಚ್ವರೆಗೆ ಒಟ್ಟು 37 ತಾಯಿ ಮರಣ ಹಾಗೂ 23 ಶಿಶು ಮರಣ ಪ್ರಕರಣ ದಾಖಲಾಗಿದ್ದು, ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ತಗ್ಗಿಸಲು ಅಗತ್ಯ ಕ್ರಮವಹಿಸಬೇಕು ಇಲ್ಲವಾದಲ್ಲಿ ತಮ್ಮಗಳ ವಿರುದ್ಧ ಸೂಕ್ತಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆಯನ್ನು ನೀಡಿದರು. ಗರ್ಭಿಣಿ ಮತ್ತು ಶಿಶುಗಳಿಗೆ ನೀಡುವ ಚುಚ್ಚುಮದ್ದು ಪ್ರಗತಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು…
ತುರುವೇಕೆರೆ: ರೈತ ನಾಯಕ ಟಿಕಾಯತ್ಗೆ ಮಸಿ ಬಳಿದಿರುವ ಘಟನೆಯನ್ನು ಖಂಡಿಸಿ ರೈತ ಸಂಘ, ಸಿ.ಐ.ಟಿ.ಯು. ಸೇರಿದಂತೆ ವಿವಿದ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು ಕೃಷಿ ಪ್ರಧಾನ ರಾಷ್ಟ್ರದಲ್ಲಿ ರೈತ ನಾಯಕನಿಗೆ ಮಸಿ ಬಳಿದಿರುವುದು ಇಡೀ ದೇಶದ ರೈತ ಸಂಕುಲವನ್ನು ಅವಮಾನಿಸಿದಂತಾಗಿದೆ. ಬಿ.ಜೆ.ಪಿ. ಪಕ್ಷವು ಪರೋಕ್ಷವಾಗಿ ತನ್ನದೇ ಪಕ್ಷದ ಗೂಂಡಾಗಳಿಂದ ಕೃತ್ಯವೆಗಿರುವುದು ನಾಚಿಕೆಗೇಡು. ರೈತ ನಾಯಕನೆಂದು ಬಿಂಬಿಸಿಕೊಂಡು ವಸೂಲಿ ದಂದೆಗಿಳಿದಿರುವ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ದ ಸರಕಾರ ತನಿಖೆ ನಡೆಸಲಿ ಎಂದು ಆಗ್ರಹಿಸಿದರು. ಸಿ.ಐ.ಟಿ.ಯು ಕಾರ್ಯದಶೀ ಸತೀಶ್ ಮಾತನಾಡಿ ದೇಶದಲ್ಲಿ ದಿನಗಳೆದಂತೆ ಮಾನವೀಯ ಮೌಲ್ಯಗಳು ಮರೆಯಾಗುತ್ತಿವೆ. ಬಿ.ಜೆ.ಪಿ. ಸರಕಾರ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ರೈತರು ಬಡ ಜನರನ್ನು ಶೋಷಣೆ ಮಾಡಲು ಮುಂದಾಗಿದೆ. ಹೋರಾಟಗಾರನ್ನು ಸಹ ಬಿಡದೇ ಅವಮಾನಿಸುತ್ತಿರುವುದು ದೇಶವಾಸಿಗಳಿಗೆ ಮಾಡಿದ ಅವಮಾನ, ದಿನಕ್ಕೊಂದು ಅನಗತ್ಯಗಳು ರಾಜ್ಯದಲ್ಲಿ ಘಟಿಸುತ್ತಿದ್ದು ರಾಜ್ಯ ಸರಕಾರದ ಆಡಳಿತ ನಿಷ್ಕ್ರಿಯವಾಗಿದ್ದು ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ರೈತ ಟಿಕಾಯತ್ ಅವರಿಗೆ ಮಸಿ ಬಳಿದಿರುವ…
ತುಮಕೂರು: ನಗರದ ಬೆಳಗುಂಬ ರಸ್ತೆ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಮೀಪದಲ್ಲಿ ನೂತನವಾಗಿ ಆರಂಭಗೊಂಡಿರುವ ಕರುನಾಡ ಮಿತ್ರ ಫೌಂಡೇಷನ್ (ರಿ.) ಕಚೇರಿಯನ್ನು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಟೂಡಾ ಅಧ್ಯಕ್ಷ ಬಾವಿಕಟ್ಟೆ ಬಿ.ಎಸ್.ನಾಗೇಶ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಸಮಾಜಸೇವೆಯನ್ನು ಗುರಿಯಾಗಿಸಿಕೊಂಡು ಅನೇಕರು ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿರುತ್ತಾರೆ, ಅವರ ಸಾಲಿನಲ್ಲಿ ಟೂಡಾ ಸದಸ್ಯರಾದ ಜೆ.ಜಗದೀಶ್ ಅವರೂ ಸಹ ಹಲವಾರು ವರ್ಷಗಳಿಂದಲೂ ಸಮಾಜಸೇವೆಯಲ್ಲಿ ತೊಡಗಿದ್ದಾರೆ. ಜೊತೆಗೆ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಯುವಕರಿಗೆ ಉತ್ತೇಜನ ನೀಡುತ್ತಿದ್ದಾರೆ. ಈಗ ಕರುನಾಡಮಿತ್ರ ಫೌಂಡೇಷನ್ ಆರಂಭಿಸಿದ್ದು, ಇದರಡಿಯಲ್ಲಿ ಇವರ ಸೇವಾ ಕಾರ್ಯ ಮತ್ತಷ್ಟು ಮುಂದುವರೆಯಲಿ ಎಂದು ಶುಭ ಹಾರೈಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್ ಮಾತನಾಡಿ, ಯುವಕರಿಗೆ ಸ್ಪೂರ್ತಿಯಾಗಿರುವ ಜಗದೀಶ್ ಅವರು, ಸೇವಾ ಮನೋಭಾವದಿಂದ ಕರುನಾಡಮಿತ್ರ ಫೌಂಡೇಷನ್ ಆರಂಭಿಸಿದ್ದು, ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹಾರೈಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾವಿಕಟ್ಟೆ ಬಿ.ಎಸ್.ನಾಗೇಶ್ ಮಾತನಾಡಿ, ಹಲವಾರು ವರ್ಷಗಳಿಂದಲೂ ಜಗದೀಶ್ ಅವರ ಸೇವಾ…
ತುಮಕೂರು: ಶೋಷಣೆ ರಹಿತ ಸಮಾನತೆಯ ಸಮಾಜದ ಸೃಷ್ಟಿಗಾಗಿ ಹೋರಾಡಿದ ಸಾಮಾಜಿಕ ಹರಿಕಾರ ವಿಶ್ವಗುರು ಬಸವಣ್ಣ ಹಾಗೂ ಮೋಕ್ಷ ಸಾಧಿಸಲು ಕರುಣೆ ಮತ್ತು ಶಾಂತಿಯ ದೂತರಾದ ಬುದ್ಧನ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು ಎಂದು ಮೈಸೂರಿನ ಬಸವ ಧ್ಯಾನಮಂದಿರದ ಶ್ರೀ ಬಸವಲಿಂಗಮೂರ್ತಿ ಶರಣರು ಕರೆ ನಿಡಿದರು. ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ಕನ್ನಡ ವಿಭಾಗ ಮತ್ತು ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಬುದ್ಧ ಮತ್ತು ಬಸವಣ್ಣನವರ ಜನ್ಮದಿನಾಚರಣೆ ಹಾಗೂ ಡಾ.ಹೆಚ್.ಎಂ.ಗಂಗಾಧರಯ್ಯ ಸ್ಮಾರಕ ಉಪನ್ಯಾಸ ಮಾಲೆ-2 ಅಂಗವಾಗಿ ‘ಬುದ್ಧ-ಬಸವಣ್ಣನವರ’ ವಿಚಾರಧಾರೆ ಕಾರ್ಯಕ್ರಮದಲ್ಲಿ ಬುದ್ಧ ಹಾಗೂ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಇಡೀ ಜಗತ್ತಿಗೆ ಬೆಳಕನ್ನು ನೀಡಿದ ಬುದ್ಧ-ಬಸವಣ್ಣನವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಆದರ್ಶ ಬದುಕು ಸಾಗಿಸಬೇಕು. ಬುದ್ಧ-ಬಸವಣ್ಣನವರ ಕಾಲಮಿತಿ ಬೇರೆಯಾದರು ಅವರಿಬ್ಬರು ಸಮಾನ ಮನಸ್ಕರು. ಜನರಿಗೆ ತಿಳುವಳಿಕೆ ಹೇಳುವ ಮೂಲಕ ಸಮಾಜದಲ್ಲಿ ಮೇಲು-ಕೀಳು ಇಲ್ಲದೇ ಎಲ್ಲರೂ ಸಮಾನತೆಯಿಂದ ಬದುಕುವ ಸಂಕಲ್ಪ ಅವರದಾಗಿತ್ತು…
ತುಮಕೂರು: ನಗರದ ಎನ್.ಆರ್ ಕಾಲೋನಿ ಶೈಕ್ಷಣೀಕ ಭವನದಲ್ಲಿ ತುಮಕೂರು ನಗರ ಪೋಲಿಸ್ ಠಾಣೆಯಿಂದ ಜನಸಂಪರ್ಕ ಸಭೆ ನಡೆಯಿತು. ಈ ಸಭೆಯನ್ನು ಉದ್ದೇಶಿ ತುಮಕೂರು ಪೋಲಿಸ್ ಉಪ ಅದೀಕ್ಷಕರಾದ ಶ್ರೀನಿವಾಸ್ ರವರು ಮಾತನಾಡಿ ಜನರ ಸಮಸ್ಯೆಗಳನ್ನು ಬಗೆಹರಸಿಲು ಪೋಲಿಸ್ ಇಲಾಖೆ ಸದಾ ಸಿದ್ದವಾಗಿದೆ, ಯಾವುದೇ ಅಶುಬ್ದ ಘಟನೆಗಳಿಗೆ ಅವಕಾಶ ಕೊಡದೇ ಸಾರ್ವಜನಿಕರು ಇಲಾಖೆಯ ಸಹಭಾಗಿತ್ವದಿಂದ ಕ್ರೈಮ್ ನಡೆಯದಂತೆ ನೋಡಿಕೊಳ್ಳಲು ಸಹಕರಿಸಬೇಕು ಮತ್ತು ಎನ್.ಆರ್ ಕಾಲೋನಿ, ಉರಳಿತೋಟ, ನಿರ್ವಾಣಿಲೇ ಔಟ್, ಅಂಬೇಡ್ಕರ್ ನಗರ, ಆದರ್ಶನಗರ. ಶಾರದಾ ದೇವಿ ನಗರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಇಲ್ಲಿನ ನಾಗರೀಕರು. ಪೋಷಕರು ತುರ್ತು ಸಂಧರ್ಬದಲ್ಲಿ 112 ಗೆ ಎಮೆರ್ಜೆನ್ಸಿ ಕರೆ ಮಾಡಿ ದೂರು ಸಲ್ಲಿಸಬಹುದು ಈ ವ್ಯಾಪ್ತಿಯಲ್ಲಿ ಗಾಂಜಾ. ಮಧ್ಯಪಾನ, ಸಲ್ಯೂಷನ್ ಇತರೆ ವಹಿವಾಟುಗಳು ಗಮನಿಸಿದಲ್ಲಿ ತಕ್ಷಣಾ ಮಾಹಿತಿ ನೀಡಿ ಭವಿಷ್ಯದಲ್ಲಿ ಸುಂಧರ ವಾತವರಣ ನಿರ್ಮಿಸಲು ನಾಗರೀಕರ ಸಹಭಾಗಿತ್ವ ಮತ್ತು ಸಹಕಾರವು ಮುಖ್ಯ. ಕಾಲೋನಿಗಳಲ್ಲಿ ಪ್ರತಿ ದಿನ ಬೆಳಗ್ಗೆ ಮತ್ತು ರಾತ್ರಿ ಭೀಟ್ ಪೋಲಿಸ್ ಕಡ್ಡಾಯವಾಗಿ…
ತುಮಕೂರು: ಸ್ಮಾರ್ಟ್ಸಿಟಿ ಲಿಮಿಟೆಡ್ ವತಿಯಿಂದ ಬೀದಿಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಸುಸಜ್ಜಿತವಾದ ಹಾಗೂ ನೈರ್ಮಲ್ಯಯುತವಾದ ಆಹಾರ ನೀಡಲು ರೂ. 65 ಲಕ್ಷ ವೆಚ್ಚದಲ್ಲಿ ಆಹಾರ ಮಾರಾಟದ ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಈ ಮಳಿಗೆಗಳನ್ನು ಇಂದು ಸಂತೋಷದಿಂದ ಲೋಕಾರ್ಪಣೆಗೊಳಿಸುತ್ತಿದ್ದೇನೆ ಎಂದು ನಗರಾಭಿವೃದ್ಧಿ ಸಚಿವರಾದ ಬಿ.ಎ. ಬಸವರಾಜು(ಭೈರತಿ) ತಿಳಿಸಿದರು. ತುಮಕೂರು ನಗರ ಅತ್ಯಾಧುನಿಕ ನಗರವಾಗಿ ಹೊರ ಹೊಮ್ಮುತ್ತಿದೆ, ಬೆಂಗಳೂರಿಗೆ ಹತ್ತಿರದಲ್ಲಿರುವ ಕಾರಣ ತುಮಕೂರು ನಗರಕ್ಕೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸುಸುಜ್ಜಿತ ಆಧುನಿಕ ಬಸ್ ನಿಲ್ದಾಣ ಮತ್ತು ಸ್ಟೇಡಿಯಂ ಸೇರಿದಂತೆ ಇತರೆ ಪೂರ್ಣಗೊಂಡ ಯೋಜನೆಗಳನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದರು. ಆಹಾರ ಮಳಿಗೆಗಳ ಫಲಾನುಭವಿಗಳು ಮಳಿಗೆಗಳನ್ನು ತಮ್ಮ ಮನೆಯ ರೀತಿಯಲ್ಲಿ ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದು ಕರೆ ನೀಡಿದ ಸಚಿವರು ಮತ್ತು ಅಧಿಕಾರಿಗಳು ಈ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ನೀಡಲಿದ್ದು, ಈ ಮೂಲಕ ಫಲಾನುಭವಿಗಳು ತಮ್ಮ ಜೀವನೋಪಾಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ರಾಜ್ಯದೆಲ್ಲೆಡೆ ಸ್ಮಾರ್ಟ್ಸಿಟಿ ಯೋಜನೆಗಳ ಕಾಮಗಾರಿಗಳು ಶೇ. 85ರಷ್ಟು ಪೂರ್ಣಗೊಂಡಿದ್ದು, ಬಸ್ಸ್ಟ್ಯಾಂಡ್, ಕ್ರೀಡಾಂಗಣ ಮುಂತಾದ ದೊಡ್ಡ ಸಂಕೀರ್ಣಗಳ…
ತುಮಕೂರು: ತಂಬಾಕಿನಿಂದ ಮನುಷ್ಯರಿಗಷ್ಟೇ ಅಲ್ಲ, ಪರಿಸರಕ್ಕೂ ಮಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಭಿಪ್ರಾಯಪಟ್ಟರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆಯೋಜಿಸಲಾಗಿದ್ದ ‘ವಿಶ್ವ ತಂಬಾಕು ರಹಿತ ದಿನಾಚರಣೆ-2022’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಂಬಾಕು ಉತ್ಪನ್ನಗಳ ಸೇವನೆ ಮಾಡುವುದರಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಮಾತ್ರ ಈವರೆಗೂ ಚರ್ಚಿಸಲಾಗುತ್ತಿತ್ತು. ಆದರೆ ತಂಬಾಕು ಉತ್ಪನ್ನಗಳನ್ನು ತಯಾರಿಸಲು ಮರಗಳನ್ನು ಕಡಿಯುವುದರಿಂದ ಪರಿಸರ ಮಾಲಿನ್ಯ, ತಂಬಾಕು ಉತ್ಪನ್ನ ತಯಾರಿಸುವ ಕಾರ್ಖಾನೆಗಳು ಹೊರಬಿಡುವವ ಹೊಗೆಯಿಂದ ವಾಯುಮಾಲಿನ್ಯ, ಕಾರ್ಖಾನೆಯ ಮಲಿನವನ್ನು ನೀರಿಗೆ ಬಿಡುವುದರಿಂದ ಜಲಮಾಲಿನ್ಯ ಉಂಟಾಗುತ್ತದೆ. ಇದರಿಂದ ಪರಿಸರಕ್ಕೂ ಮಾರಕವೆಂದು ತಿಳಿಸಿದರು. ಪ್ರಸಕ್ತ ವರ್ಷದ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ‘ತಂಬಾಕು ಪರಿಸರಕ್ಕೆ ಮಾರಕ’ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದ್ದು, ತಂಬಾಕು ಬೆಳೆಯುವುದನ್ನು ನಿಲ್ಲಿಸಿದಾಗ ಮಾತ್ರ ಜನರ ಹಾಗೂ ಪರಿಸರದ ಆರೋಗ್ಯವನ್ನು ರಕ್ಷಿಸಬಹುದು. ಅಲ್ಲದೆ ತಂಬಾಕು ಸೇವನೆಯಿಂದ ಉಂಟಾಗುವ ವಿವಿಧ ಬಗೆಯ ಕ್ಯಾನ್ಸರ್ ರೋಗವನ್ನು ತಡೆಗಟ್ಟಬಹುದು ಎಂದು ತಿಳಿಸಿದರು. ತಂಬಾಕು ವ್ಯಸನವನ್ನಷ್ಟೇ ಅಲ್ಲದೆ ಪರಿಸರ, ಮುಂದಿನ ಪೀಳಿಗೆ, ಆರೋಗ್ಯಕ್ಕೆ ಮಾರಕವಾಗುವಂತಹ…
ತುಮಕೂರು: ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥರವರನ್ನು ಯಾರೋ ಏನೋ ಹೇಳುತ್ತಾರೆ ಎಂದು ಗಡಿಪಾರು ಮಾಡಲು ಆಗುವುದಿಲ್ಲ. ಅಷ್ಟಕ್ಕೂ ಅವರು ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಇಂದಿಲ್ಲಿ ಪ್ರಶ್ನಿಸಿದರು. ನಗರದಲ್ಲಿ ಜಿ.ಪಂ. ಕೆಡಿಪಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿಪಾರು ಮಾಡಬೇಕೆಂದರೆ ಅದಕ್ಕೆ ಆದಂತಹ ನಿಯಮಾವಳಿಗಳಿವೆ. ಈ ರೀತಿ ಮಾತನಾಡುವವರಿಗೆ ಆ ನಿಯಮಾವಳಿಗಳ ಬಗ್ಗೆ ಗೊತ್ತಿಲ್ಲ ಎಂದರು. ರೋಹಿತ್ ಚಕ್ರತೀರ್ಥ ಗಡಿಪಾರು ಆಗುವಂತಹ ಅಪರಾಧ ಏನು ಮಾಡಿದ್ದಾರೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಯಾರೋ ಏನೋ ಹೇಳುತ್ತಾರೆ ಎಂದು ಅದನ್ನೆಲ್ಲ ನಾವು ಕೇಳಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಬಸವಣ್ಣನ ಪಠ್ಯ ತಿರುಚಲಾಗಿದೆ ಎಂದು ಸ್ವಾಮೀಜಿಯವರು ಸಿಟ್ಟಾಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಶಿಕ್ಷಣ ಸಚಿವರು ಆ ಬಗ್ಗೆ ಉತ್ತರ ಕೊಟ್ಟಿದ್ದಾರೆ. ಅಲ್ಲದೆ ಸ್ವಾಮೀಜಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು. ಈ ಘಟನೆ 2017 ರಲ್ಲಿ ಆಗಿರುವಂತಹದ್ದು.…










