ತುಮಕೂರು: ನಗರದ ಹೊರವಲಯದ ಕ್ಯಾತ್ಸಂದ್ರದ ಮೈದಾಳ ರಸ್ತೆಯ (ಬಸವಾಪಟ್ಟಣ)ಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಿ. ದೇವರಾಜ ಅರಸು ಭವನವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಇಂದು ಲೋಕಾರ್ಪಣೆಗೊಳಿಸಿದರು. ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಡಿ. ದೇವರಾಜ ಅರಸು ಭವನ ನೂತನ ಕಟ್ಟಡವನ್ನು ಉದ್ಘಾಟಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ದೇವರಾಜ ಅರಸು ಭವನ ಹಿಂದುಳಿದ ವರ್ಗದ ಇಲಾಖೆ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಭವನವನ್ನು ಇಂದು ಉದ್ಘಾಟನೆ ಮಾಡಿದ್ದೇನೆ ಎಂದರು. ಬಿಸಿಎಂ ಇಲಾಖೆಯಿಂದ ಹಿಂದುಳಿದ ವರ್ಗದ ಜನರನ್ನು ಮೇಲೆತ್ತುವ ಮತ್ತು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಕೆಲಸಕ್ಕೆ ರಾಜ್ಯ ಸರ್ಕಾರ ಉತ್ತೇಜನ ನೀಡುತ್ತಿದೆ. ಇಂತಹ ಭವನಗಳನ್ನು ನಿರ್ಮಾಣ ಮಾಡುವ ಮೂಲಕ ಹಿಂದುಳಿದ ವರ್ಗದ ಜನರಿಗೆ ಬೇಕಾಗಿರುವ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡುವ ಕೆಲಸ ನಡೆಯುತ್ತಿದೆ…
Author: News Desk Benkiyabale
ತುಮಕೂರು: ಜಿಲ್ಲೆಯಲ್ಲಿ ನಡೆದ ಮೂರು ವಿವಿಧ ಸಮುದಾಯಗಳ ಸಮಾವೇಶಕ್ಕೆ ಗೈರಾಗಿದ್ದರೂ ಎಂಬುದನ್ನೇ ನೆಪ ಮಾಡಿಕೊಂಡು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಕಾಂಗ್ರೆಸ್ ಪಕ್ಷದ ತೊರೆಯಲಿದ್ದಾರೆ ಎಂದು ಗುಲ್ಲೆಬ್ಬಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದು, ಇದು ಖಂಡನೀಯ ಎಂದು ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವಸೈನ್ಯದ ರಾಜ್ಯಾಧ್ಯಕ್ಷ ನಗುತಾ ರಂಗನಾಥ್ ತಿಳಿಸಿದ್ದಾರೆ. ಖಾಸಗಿ ಹೊಟೇಲ್ವೊಂದರಲ್ಲಿ ಸಂಘದ ಸಭೆ ನಡೆಸಿ ಮಾತನಾಡಿದ ಅವರು, ಡಾ.ಜಿ.ಪರಮೇಶ್ವರ್ ಅವರ ತಂದೆಯ ಕಾಲದಿಂದಲೂ ಕಾಂಗ್ರೆಸ್ ಪಕ್ಷವನ್ನು ಅಪ್ಪಿ,ಒಪ್ಪಿ, ಅದರ ಸಂಘಟನೆಗೆ ಹಗಲಿರುಳೆನ್ನದೆ ದುಡಿದ್ದಾರೆ. ಬೇರೆ ನಾಯಕರಂತೆ ಅಧಿಕಾರಕ್ಕಾಗಿ, ರಾಜಕೀಯ ಅವಕಾಶಕ್ಕಾಗಿ ಮತ್ತೊಂದು ಪಕ್ಷಕ್ಕೆ ಹೋಗಿಲ್ಲ. ಆನಾರೋಗ್ಯದ ಸಂಬಂಧ ಮೇ.22 ರಂದು ನಡೆದ ಮಡಿವಾಳರ ರಾಜ್ಯ ಸಮಾವೇಶ ಹಾಗೂ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ ಮತ್ತು ಮೇ.28 ರಂದು ನಡೆದ ಕುರುಬ ಸಮುದಾಯದ ಜಿಲ್ಲಾ ಸಮಾವೇಶಕ್ಕೆ ಬರಲು ಆಗಿಲ್ಲ. ಇದನ್ನೇ ನೆಪ ಮಾಡಿಕೊಂಡ ಕೆಲವರು ಡಾ.ಜಿ.ಪರಮೇಶ್ವರ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಲಿದ್ದಾರೆ. ಹಾಗಾಗಿ ಮೂರು ಸಮಾವೇಶಗಳಿಗೆ ಗೈರಾಗಿದ್ದಾರೆ. ರಾಜ್ಯದ ನಾಯಕರೊಂದಿಗೆ ಭಿನ್ನಾಭಿಪ್ರಾಯವಿದೆ…
ಚಿಕ್ಕನಾಯಕನಹಳ್ಳಿ: ದೇವಾಲಯ ಕಟ್ಟಡ ಕಾರ್ಯದಲ್ಲಿ ತನು-ಮನ-ಧನ ಎಲ್ಲವನ್ನೂ ಅರ್ಪಿಸುವ ಮೂಲಕ ನಾನು ಮಣ್ಣಿಗೆ ಹೋಗೋವರೆಗೂ ನಿಮ್ಮೊಂದಿಗೆ ಇರುತ್ತೇನೆ ಎಂದು ತಮ್ಮಡಿಹಳ್ಳಿ ವಿರಕ್ತ ಮಠಾಧೀಶ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು ತಾಲೂಕಿನ ಹಂದನಕೆರೆ ಹೋಬಳಿ ಬೇವಿನಹಳ್ಳಿ ಗ್ರಾಮದಲ್ಲಿರುವ ಅಂತರಘಟ್ಟೆ ಕರಿಯಮ್ಮದೇವಿ ದೇವಾಲಯದ ಕಟ್ಟಡ ಕಾಮಗಾರಿಗೆ ರಸೀತಿ ವಿತರಿಸುವ ಕಾರ್ಯಕ್ರಮ ಹಾಗೂ ಎಸೆಸೆಲ್ಸಿ ಉತ್ತೀರ್ಣರಾದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಭಾಗವಹಿಸಿ ಮಾತನಾಡುತ್ತಾ, 36 ಹಳ್ಳಿಗಳ ಗ್ರಾಮದೇವತೆ ಜಗನ್ಮಾತೆಯ ಕಾರ್ಯ ಯಾರ್ಯಾರ ಕೈಯಲ್ಲಿ ಕಾರ್ಯ ಮಾಡಿಸುವವಳೋ ಈ ಕ್ಷೇತ್ರ ಎಲ್ಲರ ಸಹಕಾರದಿಂದ ಅಭಿವೃದ್ಧಿ ಆಗಬೇಕು ನಾವು ಸಹ ಕ್ಷೇತ್ರಕ್ಕೆ ಸಂದರ್ಭದಲ್ಲಿ ಸಹಕರಿಸುವ ಮೂಲಕ ನಾನು ನಿಮ್ಮೊಂದಿಗೆ ಇರುತ್ತೇನೆ ಎಂದರು. ತುಮಕೂರು ಜಿಲ್ಲಾ ಪೆÇೀಲಿಸ್ ಅಧೀಕ್ಷಕ ರಾಹುಲ್ ಕುಮಾರ್ ಶಹಪುರ್ ವಾಡ್ ಇವರು ಮಾತನಾಡುತ್ತಾ ನಾನು ವಿರಕ್ತಮಠದ ಭಕ್ತನಾಗಿದ್ದು ನನ್ನ ನಂಬಿಕೆಗೆ ದೇವರು ಸತ್ಯವಾಗಿದ್ದರೆ ನನ್ನ ಕುಟುಂಬದೊಂದಿಗೆ ಇಲ್ಲಿಗೆ ಆಗಮಿಸಿ ಭಕ್ತಿ ಸಮರ್ಥಿಸಿದ್ದಾನೆ ಅದೇ ರೀತಿ ಅಂತರಘಟ್ಟೆ ಕರಿಯಮ್ಮದೇವಿ ಅಮ್ಮನವರ ನೂತನ…
ತುಮಕೂರು: ಕೇಂದ್ರ ಸರ್ಕಾರದ ವತಿಯಿಂದ ಪ್ರಾಯೋಜನೆಗೊಂಡ ವಿವಿಧ ಯೋಜನೆ/ ಕಾರ್ಯಕ್ರಮಗಳ ಕುರಿತಾದ ಗರೀಬ್ ಕಲ್ಯಾಣ ಸಮ್ಮೇಳನವನ್ನು ದೇಶಾದ್ಯಂತ ಇರುವ ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಸಂವಾದ ನಡೆಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್ ಪ್ರಧಾನ ಮಂತ್ರಿಗಳ ನೇರ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಭಾಂಗಣದಲ್ಲಿ ನೆರೆದಿದ್ದ ಫಲಾನುಭವಿಗಳೊಂದಿಗೆ ಮಾತನಾಡಿದ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಸ್ವಾತಂತ್ರ್ಯ ಬಂದು 75 ವರ್ಷವಾದ ಹಿನ್ನೆಲೆಯಲ್ಲಿ ಮಾನ್ಯ ಪ್ರಧಾನಮಂತ್ರಿಗಳು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನಕಲ್ಯಾಣ ಯೋಜನೆಗಳು ಜನಸಾಮಾನ್ಯರಿಗೆ ಯಾವ ರೀತಿಯಲ್ಲಿ ಫಲಪ್ರದವಾಗಿವೆ ಎಂಬುದನ್ನು ತಿಳಿಯಲು ಗರೀಬ್ ಕಲ್ಯಾಣ ಸಮ್ಮೇಳನ ನಡೆಸುತ್ತಿದ್ದಾರೆ ಎಂದರು ಪ್ರಧಾನಮಂತ್ರಿ ಆವಾಜ್ ಯೋಜನೆ (ಗ್ರಾಮೀಣ ಮತ್ತು ನಗರ), ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪಿ.ಎಂ ಉಜ್ವಲ ಯೋಜನಾ, ಪೋಷಣ್ ಅಭಿಯಾನ್, ಮಾತೃವಂದನಾ ಯೋಜನಾ, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ ಮತ್ತು ನಗರ), ಜಲಜೀವನ್ ಮತ್ತು ಅಮೃತ್ ಯೋಜನೆ, ಪ್ರಧಾನಮಂತ್ರಿ ಸ್ವನಿಧಿ ಯೋಜನೆ, ಒಂದು ರಾಷ್ಟ್ರ ಒಂದು…
ಚಿಕ್ಕನಾಯಕನಹಳ್ಳಿ: ಕುರುಬರ ಜಾಗೃತಿ ಸಮಾವೇಶದ ಕಾರ್ಯಕ್ರಮವೊಂದರಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಸಿ.ಬಿ ಸುರೇಶ್ ಬಾಬು ಅಭಿಮಾನಿಗಳು ಸಮಾರಂಭದಲ್ಲಿ ಸುರೇಶ್ಬಾಬು ಹೆಸರನ್ನು ಕೈಬಿಟ್ಟಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಭಿಮಾನಿಗಳ ಕೀರಾಟ ಸಂಘಟನಾಕಾರರು ಸುರೇಶ್ ಬಾಬು ಅವರ ಅನುಪಸ್ಥಿತಿಯಲ್ಲಿ ಕಾರ್ಯಕ್ರಮ ಆರಂಭವಾಯಿತು. ಈ ಸಂದರ್ಭದಲ್ಲಿ ಮಧುಗಿರಿಯ ಮಾಜಿ ಶಾಸಕ ಕೆ ಎನ್ ರಾಜಣ್ಣನವರು ಸುರೇಶ್ ಬಾಬು ಅವರ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಇಡೀ ಸಮಾಜದ ಎದುರು ಸವಾಲೆಸೆಯುವ ಮೂಲಕ ಆಹ್ವಾನ ನೀಡಿ ಸುರೇಶ್ ಬಾಬು ಅಭಿಮಾನಿಗಳ ಆಕ್ರೋಶಕ್ಕೆ ಕಾರಣರಾದರು. ಈ ಸುದ್ದಿ ಇಡೀ ಜಿಲ್ಲೆಯಾದ್ಯಂತ ಹರಡುತ್ತಿದ್ದಂತೆ ಮಾಜಿ ಶಾಸಕ ಸಿ ಬಿ ಸುರೇಶ್ ಬಾಬು ಅವರಲ್ಲಿ ಅವರ ಅಭಿಮಾನಿಗಳು ಆಕ್ರೋಶವನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ವತಹ ಮಾಜಿ ಶಾಸಕ ಸುರೇಶ್ ಬಾಬು ಮಾತನಾಡಿ, ಮಾಜಿ ಶಾಸಕ ಕೆ ಎನ್ ರಾಜಣ್ಣನವರು ಅವರ ಸದುದ್ದೇಶ ಒಳ್ಳೆಯದೇ ಆಗಿರಬಹುದು ಆದರೆ ಮೂಲತಹ ಕೆ ಎನ್ ರಾಜಣ್ಣನವರು ಕಾಂಗ್ರೆಸ್ಸಿನಲ್ಲಿ ಇದ್ದರೂ ಅವರಿಗೆ ವಿಧಾನಪರಿಷತ್ ಟಿಕೆಟ್ ಕಾಂಗ್ರೆಸ್…
ತುಮಕೂರು: ತುಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ತಂಬಾಕು ಪರಿಸರಕ್ಕೆ ಮಾರಕ ಎಂಬ ಘೋಷವಾಕ್ಯದೊಂದಿಗೆ ನಗರದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಾರ್ವಜನಿಕ ಆರೋಗ್ಯ ರಕ್ಷಣೆ ಉದ್ದೇಶದಿಂದ ನಗರದ ಜಿಲ್ಲಾಸ್ಪತ್ರೆ ಆವರಣದಿಂದ ಹಮ್ಮಿಕೊಂಡಿದ್ದ ಜಾಥಾಗೆ ಕಾನೂನು ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿಗಳೂ ಆದ ನ್ಯಾಯಮೂರ್ತಿ ರಾಘವೇಂದ್ರ ಶೆಟ್ಟಿಗಾರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ನ್ಯಾಯಾಧೀಶರು, ಲಕ್ಷಾಂತರ ಮಂದಿ ತಂಬಾಕು ಸೇವನೆಯಿಂದ ಕ್ಯಾನ್ಸರ್, ಶ್ವಾಸಕೋಶಗಳ ಸಮಸ್ಯೆಗೆ ತುತ್ತಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು. ಪ್ರತಿಯೊಬ್ಬರೂ ತಂಬಾಕು ಸೇವಿಸುವುದನ್ನು ನಿಲ್ಲಿಸಬೇಕು. ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಬೇಕು. ಈ ನಿಟ್ಟಿನಲ್ಲಿ ಜಾಥಾ ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಅವರು…
ತುಮಕೂರು: ಮೇರು ಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿ ಕುವೆಂಪು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಹಾಗೂ ಕುವೆಂಪು ಅವರ ನಾಡಗೀತೆಯನ್ನು ತಿರುಚಿರುವ ರೋಹಿತ್ ಚರ್ಕತೀರ್ಥ ಎಂಬ ವ್ಯಕ್ತಿಯನ್ನು ಬಂಧಿಸಿ, ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ತುಮಕೂರು ಜಿಲ್ಲಾಧ್ಯಕ್ಷ ಕೆ.ಎನ್.ಮಂಜುನಾಥಗೌಡ ಅವರ ನೇತೃತ್ವದಲ್ಲಿ ಹಲವಾರು ಕಾರ್ಯಕರ್ತರು ಗುಂಚಿ ಚೌಕದಲ್ಲಿರುವ ಕರವೇ ಕಾರ್ಯಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ರೋಹಿತ ಚರ್ಕತೀರ್ಥನನ್ನು ಬಂಧಿಸಿ, ಗಡಿಪಾರು ಮಾಡಬೇಕು ಹಾಗು ಆತನನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದ ಮನವಿ ಪತ್ರವನ್ನು ಸಲ್ಲಿಸಿದರು. ಈ ವೇಳೆ ಮಾತನಾಡಿದ ಕೆ.ಎನ್.ಮಂಜುನಾಥಗೌಡ, ಕುವೆಂಪು ಈ ದೇಶ ಕಂಡ ನೆಲಮೂಲ ಸಂಸ್ಕøತಿಯ ಕವಿ. ತಮ್ಮ ಕವಿತೆ, ನಾಟಕ, ಕಾದಂಬರಿ, ಬರಹಗಳ ಮೂಲಕ ಇಡೀ ವಿಶ್ವಕ್ಕೆ ವಿಶ್ವಮಾನವ ಸಂದೇಶವನ್ನು ಸಾರಿದವರು.ಇಂತಹವರು ರಚಿಸಿರುವ ನಾಡಗೀತೆ ಜೈ…
ತುಮಕೂರು: ರೈತ ನಾಯಕ ರಾಕೇಶ್ಸಿಂಗ್ ಟಿಕಾಯತ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ, ಕರ್ನಾಟಕದ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ರೈತರ ಕ್ಷಮೆ ಕೇಳಬೇಕು ಹಾಗೂ ಕೃತ್ಯಕ್ಕೆ ಕಾರಣರಾದವರನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ ರೈತರು, ಪ್ರಗತಿಪರ ಚಿಂತಕರು,ಕರವೇ ಕಾರ್ಯಕರ್ತರು ಸಂಯುಕ್ತ ಹೋರಾಟ ಕರ್ನಾಟಕದ ಅಡಿಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ನೇತ್ರತ್ವದ್ಲಲ್ಲಿ ರೈತರು, ಪ್ರಗತಿಪರ ಚಿಂತಕರು, ದಲಿತ ಸಂಘರ್ಷ ಸಮಿತಿ ಸದಸ್ಯರು, ಮಹಿಳಾ ಹೋರಾಟಗಾರರು, ಕನ್ನಡಪರ ಸಂಘಟನೆಗಳ ಸದಸ್ಯರು ಪಾಲ್ಗೊಂಡು, ಸರಕಾರದ ವಿರುದ್ದ, ಗೃಹಮಂತ್ರಿಗಳ ವಿರುದ್ದ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಕರ್ನಾಟಕ ರಾಜ್ಯದ ಇತಿಹಾಸದಲ್ಲಿಯೇ ನಿನ್ನೇಯ ಘಟನೆ ತಲೆ ತಗ್ಗಿಸುವಂತಹ ವಿಚಾರವಾಗಿದೆ.ಅತಿಥಿ ದೇವೋಭವ ಎಂಬುದು ಕರ್ನಾಟಕದ ಸಂಸ್ಕøತಿ.ಇದಕ್ಕೆ ವಿರುದ್ದ ವೆಂಬಂತೆ ರಾಜ್ಯಕ್ಕೆ ಅತಿಥಿಯಾಗಿ ಬಂದ ರೈತ ನಾಯಕ ರಾಕೇಶ್ಸಿಂಗ್ ಟಿಕಾಯತ್ ಅವರ…
ಕೊರಟಗೆರೆ: ಅಕ್ರಮವಾಗಿ ಗೋವುಗಳ ಮಾಂಸ ಮಾರಾಟ ಮಾಡುತ್ತೀದ್ದ ಕಸಾಯಿ ಖಾನೆಯ ಅಂಗಡಿಯ ಮೇಲೆ ಸಿಪಿಐ ಸಿದ್ದರಾಮೇಶ್ವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ 4ಜನ ಆರೋಪಿಗಳ ಜೊತೆ 6ಜಾನುವಾರು ರಕ್ಷಣೆ ಮಾಡಿರುವ ಘಟನೆ ಭಾನುವಾರ ನಡೆದಿದೆ. ಕೊರಟಗೆರೆ ಪಟ್ಟಣದ 4 ಮತ್ತು 5ನೇ ವಾರ್ಡಿನ ಚಿಕ್ಕಮಸೀದಿ ಬಳಿಯಲ್ಲಿ ಅಕ್ರಮವಾಗಿ ಗೋವಿನ ಮಾಂಸ ಮಾರಾಟ ಮಾಡುತ್ತೀದ್ದ ವೇಳೆ ದಿಡೀರ್ ದಾಳಿ ನಡೆಸಿರುವ ಪೊಲೀಸರ ತಂಡ 4ಜನ ಆರೋಪಿಗಳ ಜೊತೆಯಲ್ಲಿ ಟಾಟಾಎಸಿ ಮತ್ತು ಹತ್ತಾರು ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ. ಕುಣಿಗಲ್ನ ಗೌಗ್ಯಾನ್ ಪೌಂಡೇಷನ್ ಸ್ವಯಂ ಸೇವಕ ಮಂಜುನಾಥ ಎಂಬಾತನ ದೂರಿನ ಅನ್ವಯ ಕೊರಟಗೆರೆ ಸಿಪಿಐ ಸಿದ್ದರಾಮೇಶ್ವರ ನೇತೃತ್ವದ ಪೊಲೀಸರ ತಂಡ ದಿಡೀರ್ ನಡೆಸಿದೆ. ವಾಸದ ಮನೆ ಮತ್ತು ಅಂಗಡಿಯಲ್ಲಿ ಶೇಖರಣೆ ಮಾಡಲಾಗಿದ್ದ 1ಟನ್ಗೂ ಅಧಿಕ ಗೋಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೌಗ್ಯಾನ್ ಪೌಂಡೇಷನ್ನ ಸ್ವಯಂ ಸೇವಕ ಮಂಜುನಾಥ ಮಾತನಾಡಿ ಕೊರಟಗೆರೆ ಪಟ್ಟಣದಲ್ಲಿ ಅಕ್ರಮ ಕಸಾಯಿ ಖಾನೆಯಲ್ಲಿ ಎಗ್ಗಿಲ್ಲದೇ ಜಾನುವಾರುಗಳ ಹತ್ಯೆ ನಡೆಯುತ್ತೀದೆ. ಗೌಗ್ಯಾನ್ ಪೌಂಡೇಷನ್…
ತುಮಕೂರು: ರೈತರ ಮಧ್ಯೆ ಸಾಕಷ್ಟು ಸಮಸ್ಯೆಗಳಿವೆ. ಅದರ ಬಗ್ಗೆ ನಾವ್ಯಾರೂ ಕೂತು ಚರ್ಚೆ ಮಾಡುತ್ತಿಲ್ಲ. ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕಾಗಿದೆ. ಆಗ ಮಾತ್ರ ಜನಪ್ರತಿನಿಧಿಗಳು ರಾಜಕೀಯವಾಗಿ ಯಶಸ್ವಿಯಾಗಲು ಸಾಧ್ಯ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ಯಾವ ಪಕ್ಷದಲ್ಲಿ ರೈತರು ಇಂತಹ ಕೆಲಸ ಆಗಬೇಕು ಎಂದು ಹೇಳಿದಾಗ ಆ ಕೆಲಸ ಪ್ರಾಮಾಣಿಕವಾಗಿ ಆಗುತ್ತದೋ ಅಂತಹ ಪಕ್ಷ ಯಶಸ್ವಿಯಾಗುತ್ತದೆ ಎಂದು ತಿಳಿಸಿದರು. ನಗರದ ರಿಂಗ್ ರಸ್ತೆಯಲ್ಲಿರುವ ಆರ್.ಎಸ್. ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಪಕ್ಷದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದು ಯಶಸ್ಸಿನ ಮೂಲ. ಇದರೊಂದಿಗೆ ಗ್ರಾಮೀಣರ ಬದುಕು, ಕೃಷಿ ಬದುಕನ್ನು ಅರ್ಥ ಮಾಡಿಕೊಳ್ಳಬೇಕು. ಸಣ್ಣ ಸಣ್ಣ ರೈತರ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಬೇಕು. ಈ ಸಂಬಂಧ ಸರ್ಕಾರಕ್ಕೂ ಆಗಿಂದಾಗ್ಗೆ ಸಲಹೆ ಕೊಡಬೇಕು. ಈ ಮೂಲಕ ರೈತರ ಸಮಸ್ಯೆಯನ್ನು ಒಂದೊಂದೇ ಈಡೇರಿಸಲು ಮುಂದಾದರೆ ಸರ್ಕಾರಕ್ಕೂ…











