Author: News Desk Benkiyabale

ತುಮಕೂರು: ರಾಷ್ಟ್ರಕವಿ ಕುವೆಂಪು ಅವರ ಬರೆದ ನಾಡಗೀತೆಯನ್ನು ತಿರುಚಿ ಅಪಮಾನ ಮಾಡಿದ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ರೋಹಿತ್ ಚಕ್ರತೀರ್ಥ ಅವರನ್ನು ಸರಕಾರ ಕೂಡಲೇ ಬಂಧಿಸಬೇಕು ಹಾಗೂ ಆತನ ನೇತೃತ್ವದಲ್ಲಿ ನಡೆಯುತ್ತಿರುವ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ಕೂಡಲೇ ವಜಾ ಮಾಡಬೇಕೆಂದು ಆಗ್ರಹಿಸಿ, ತೋಳಿಗೆ ಕಪ್ಪುಪಟ್ಟಿ ಧರಿಸಿ, ರಾಜ್ಯ ಒಕ್ಕಲಿಗರ ಸಂಘ, ತುಮಕೂರು ಜಿಲ್ಲಾ ಒಕ್ಕಲಿಗರ ಸಂಘದವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಬಾಲಗಂಗಾಧರನಾಥಸ್ವಾಮೀಜಿ ವೃತ್ತದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹನುಮಂತರಾಯಪ್ಪ ಅವರ ನೇತೃತ್ವದಲ್ಲಿ ನೂರಾರು ಒಕ್ಕಲಿಗ ಸಮುದಾಯುದ ಮುಖಂಡರು, ಸಾಹಿತಿಗಳು, ಪ್ರಗತಿಪರರು ಪಾಲ್ಗೊಂಡು ರೋಹಿತ್ ಚರ್ಕತೀರ್ಥ ವಿರುದ್ದ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಹನುಮಂತರಾಯಪ್ಪ, ಇಡೀ ನಾಡೇ ಕುವೆಂಪು ಅವರನ್ನು ರಾಷ್ಟ್ರಕವಿ ಎಂದು ಒಪ್ಪಿಕೊಂಡಿದೆ.ಅವರು ನೀಡಿದ ವಿಶ್ವಮಾನವ ಸಂದೇಶವನ್ನು ಇಡೀ ಪ್ರಪಂಚವೇ ಗೌರವಿಸುತ್ತಿರುವ ಸಂದರ್ಭದಲ್ಲಿ ರೋಹಿತ ಚರ್ಕತೀರ್ಥ ಎಂಬು ವ್ಯಕ್ತಿ, ಕುವೆಂಪು ಬರೆದ ನಾಡಗೀತೆಯನ್ನು 2017ರಲ್ಲಿ ತಿರುಚಿ,ಕೆಟ್ಟ ಅರ್ಥ ಬರುವಂತೆ, ಒಂದು…

Read More

ತುಮಕೂರು: 60 ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ತನ್ನ ಆಡಳಿತದಲ್ಲಿ ಲೂಟಿ ಮಾಡಿ ದೇಶವನ್ನು ಮಾರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ರಿಂಗ್ ರಸ್ತೆಯಲ್ಲಿರುವ ಆರ್.ಎಸ್. ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಿಜೆಪಿ ರೈತಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಇಂದು ಬೇಲ್ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಕಳ್ಳರ ಸಂಘವಿದ್ಧಂತೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ವೇಳೆ ಸುಮಾರು 4 ಲಕ್ಷ ಕೋಟಿ ರೂ.ಹಗರಣ ನಡೆದಿದೆ ಎಂದು ಆರೋಪಿಸಿದರು. ಕಳೆದ 8 ವರ್ಷಗಳ ಹಿಂದೆ 20 ಸಾವಿರ ಕೋಟಿ ರೂ ಇರುವ ರೈತರ ಬಜೆಟನ್ನು ಬಿಜೆಪಿ ಸರ್ಕಾರದ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ನರೇಂದ್ರ ಮೋದಿಯವರು 1.20 ಲಕ್ಷ ಕೋಟಿ ರೂ.ಗೆ ಏರಿಸಿ ರೈತರ ಪರವಾಗಿ ನಿಂತಿದ್ದಾರೆ. ಮೋದಿಯವರಿಗೆ ರೈತರ ಪರ ವಿಶೇಷ ಕಾಳಜಿಯನ್ನು ಹೊಂದಿರುವಂತಹ…

Read More

ತುಮಕೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಇಂದು ಯುವಕಾಂಗ್ರೆಸ್ ಕಾರ್ಯಕರ್ತರು ಹಮ್ಮಿಕೊಂಡಿದ್ದ ಜನಾಕ್ರೋಶ ಪ್ರತಿಭಟನಾ ರ್ಯಾಲಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಯುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಶ್ರೀನಿವಾಸ್, ಎಂ.ಎಲ್.ಸಿ. ಆರ್.ರಾಜೇಂದ್ರ ಸೇರಿದಂತೆ ನೂರಾರು ಕಾರ್ಯಕರ್ತರು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು. ನಗರದ ಟೌನ್‍ಹಾಲ್ ವೃತ್ತದಲ್ಲಿ ಸಾರ್ವಜನಿಕ ಸಮಾರಂಭ ನಡೆಸಿ, ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ದ ಘೋಷಣೆ ಕೂಗುತ್ತಾ ಬಿ.ಹೆಚ್.ರಸ್ತೆ, ಎಂ.ಜಿ.ರಸ್ತೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಮಾವೇಶಗೊಂಡ ಯುವ ಕಾಂಗ್ರೆಸ್ ಕಾರ್ಯಕರ್ತರು, ಪೊಲೀಸರು ಹಾಕಿದ್ದ ಬ್ಯಾರಿಕೇಡ್ ತಳ್ಳಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭದಲ್ಲಿ ರಕ್ಷಣೆಗೆಂದು ನಿಯೋಜಿಸಲಾಗಿದ್ದ ಪೊಲೀಸರ ತಂಡ, ಅವರನ್ನು ತಡೆದು ಪೊಲೀಸ್ ವಾಹನಕ್ಕೆ ತುಂಬಲು ಮುಂದಾದಾಗ ಕೆಲ ಕಾಲ ಬೀಗುವಿನ ವಾತಾವರಣ ನಿರ್ಮಾಣವಾಗಿತ್ತು. ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಹರಸಾಹಸ ಪಟ್ಟು ಪೊಲೀಸರು ವಾಹನಕ್ಕೆ ತುಂಬುವಲ್ಲಿ ಯಶಸ್ವಿಯಾದರು. ಇದಕ್ಕೂ ಮುನ್ನ ಟೌನ್‍ಹಾಲ್…

Read More

ತುಮಕೂರು: ಜಿಂಕೆ ಬದುಕಿಗಾಗಿ ಓಡುವ ರೀತಿಯಲ್ಲಿ ವಿದ್ಯಾರ್ಥಿಗಳು ಕಲಿಕೆಯಿಂದೆ ಓಡಬೇಕು. ಜ್ಞಾನವಿಲ್ಲದೆ ನೀವು ಕೌಶಲ್ಯಗಳನ್ನು ಅಧ್ಯಯನ ಮಾಡಲು ಸಾಧ್ಯವಿಲ್ಲ. ಜ್ಞಾನ ವೃತ್ತಿಗೆ ಅಗತ್ಯ. ಮುಂದಿನ ನಿಮ್ಮ ಭವಿಷ್ಯಕ್ಕಾಗಿ ನೀವು ಮುನ್ನುಗ್ಗುವುದನ್ನು ಕಲಿಯಬೇಕು ಎಂದು ಸಾಹೇ ವಿಶ್ವವಿದ್ಯಾಲಯದ ರಿಜಿಸ್ಟರ್ ಡಾ.ಎಂ.ಝಡ್.ಕುರಿಯನ್‍ಅವರು ಕರೆ ನೀಡಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪಿಜಿ ಸಭಾಂಗಣದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಮೂನಿಕೇಷನ್ ಇಂಜಿನಿಯರಿಂಗ್ ವಿಭಾಗ ಏರ್ಪಡಿಸಿದ್ದ ‘ಸಾಮಥ್ರ್ಯ 2022’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ಪರ್ಧೆಗಳಲ್ಲಿ ಭಾಗವಹಿಸುವುದು ವಿದ್ಯಾರ್ಥಿಗಳಿಗೆ ಬಹಳ ಮುಖ್ಯ. ನಿಮಗೆ ಜ್ಞಾನವಿಲ್ಲದೆ ಕೌಶಲ್ಯಗಳನ್ನು ಅಧ್ಯಯನ ಮಾಡಲು ಸಾಧ್ಯವಿಲ್ಲ. ಸತತ ಸಂಶೋಧಕ ಗುಣದಿಂದ ಜ್ಞಾನ ಪಡೆದುಕೊಂಡಾಗ ವೃತ್ತಿಗೆ ಅಗತ್ಯವಾಗುತ್ತದೆ. ಅಲ್ಲದೆ ಮುಂದಿನ ನಿಮ್ಮ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಡಾ.ಕುರಿಯನ್ ಹೇಳಿದರು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಬೆಂಗಳೂರಿನ ಐಇಇಇ ಘಟಕದ ಸಂಸ್ಥಾಪಕ ಅಧ್ಯಕ್ಷರು ಹಾಗೂ ಮೈಸೂರಿನ ಗೀತ ಶಿಶು ಶಿಕ್ಷಣ ಸಂಘ ತಾಂತ್ರಿಕ ಕಾಲೇಜಿನ ಟೆಲಿ ಕಮ್ಮೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು…

Read More

ಕೊರಟಗೆರೆ: ಕೆನರಾ ಬ್ಯಾಂಕಿನ ಕಚೇರಿ ಮತ್ತು ಆವರಣದ ಸಿಸಿಟಿವಿಯೇ ಮಾಯವಾಗಿದೆ. ಬ್ಯಾಂಕಿನ ಕಟ್ಟಡದ ಹಿಂಭಾಗದ ಕೌಪೌಂಡು ಮತ್ತು ಕಿಟಿಕಿಯು ಶಿಥಿಲವಾಗಿದೆ. ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ಕಾವಲುಗಾರನ ಭದ್ರತೆಯ ಜೊತೆ ಬಾಗಿಲು ಇಲ್ಲದಿರುವ ಪರಿಣಾಮ ರಾತ್ರೋರಾತ್ರಿ ಕಳ್ಳನೋರ್ವ ಎಟಿಎಂ ಕೇಂದ್ರದೊಳಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಪಂ ವ್ಯಾಪ್ತಿಯ ಬೈರೇನಹಳ್ಳಿ ಗ್ರಾಮದಲ್ಲಿಯೇ ಈಗಾಗಲೇ ಪೇಟ್ರೊಲ್ ಬಂಕ್, ಮಧ್ಯದ ಅಂಗಡಿ, ಬೇಕರಿ, ಕುರಿಮೇಕೆ ಕಳ್ಳತನ, ಸರಣಿ ಚಿಲ್ಲರೇ ಅಂಗಡಿ ಸೇರಿ ಈಗಾಗಲೇ ಹತ್ತಾರು ಕಳ್ಳತನದ ಪ್ರಕರಣ ನಡೆದಿವೆ. ಈಗ ಕೆನರಾ ಬ್ಯಾಂಕಿನ ಎಟಿಎಂ ಸಿಸಿಟಿವಿ ಮತ್ತು ಕೇಬಲ್ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಗಡಿಭಾಗದ ಬೈರೇನಹಳ್ಳಿ ಗ್ರಾಮದ ಕೆನರಾ ಬ್ಯಾಂಕಿನ ಕಟ್ಟಡವು ಶಿಥಿಲವಾಗಿದೆ. ಕಟ್ಟಡದ ಕೌಪೌಂಡು ಹೊಡೆದು ವರ್ಷಗಳು ಕಳೆದಿವೆ. ಬ್ಯಾಂಕಿನ ಕಿಟಕಿಗಳು ಮುರಿದು ಬಿದ್ದಿವೆ. ಇನ್ನೂ ಬ್ಯಾಂಕಿನ ಸುತ್ತಮುತ್ತಲು ಗಿಡಗಳು ಬೆಳೆದುನಿಂತಿವೆ. ಬ್ಯಾಂಕಿನ ಆವರಣದಲ್ಲಿ ಕಸಕಡ್ಡಿಯಿಂದ ದುರ್ವಾಸನೆ ಬೀಡುತ್ತೀದ್ದರೂ ಸಹ ಗ್ರಾಪಂ ಮತ್ತು ಬ್ಯಾಂಕಿನ ಅಧಿಕಾರಿವರ್ಗ…

Read More

ಚಿಕ್ಕನಾಯಕನಹಳ್ಳಿ: ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಹೊಂದಲು ಸರ್ಕಾರ ಬೀಜಧನವನ್ನು ಸ್ವಸಹಾಯ ಸಂಘಗಳಿಗೆ ಆರ್ಥಿಕ ಅನುದಾನ ನೀಡಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಸಣ್ಣನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು. ಅವರು ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶುಅಭಿವೃದ್ದಿ ಯೋಜನೆ ಹಾಗೂ ಸಂಜೀವಿನ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಆಂದೋಲನದಡಿ ನಡೆದ ಸ್ವಸಹಾಯ ಸಂಘಗಳಿಗೆ ಆರ್ಥಿಕ ಅನುದಾನದ ಚೆಕ್‍ಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ವಸಹಾಯ ಸಂಘಗಳ ಚಟುವಟಿಕೆ ಅನುದಾನದ ಹಣವನ್ನು ಬಡ್ಡಿಗೆಬಿಡುವ ಪರಿಪಾಟವಾಗಿದೆ, ಇದರಿಂದ ಮಹಿಳೆಯೇ ಶೋಷಣೆಗೊಳಗಾಗುತ್ತಿದ್ದಾಳೆ, ಆದರೆ ಸರ್ಕಾರ ಗ್ರಾಮೀಣ ಮಹಿಳೆಯರು ಆರ್ಥಿಕ ಸ್ವಾವಲಂಭನೆಯಾಗುವ ನಿಟ್ಟಿನಲ್ಲಿ ಮುನ್ನಡೆಯಬೇಕೆಂಬ ಕಾರಣಕ್ಕೆ ಈ ಬೀಜಧನವನ್ನು ಸ್ವ ಸಹಾಯ ಸಂಘಗಳಿಗೆ ನೀಡಲಾಗುತ್ತಿದೆ. ಈ ಅನುದಾನದ ಜೊತೆಗೆ ನಿಮ್ಮ ಅಲ್ಪಮೊತ್ತದ ಬಂಡವಾಳ ತೊಡಗಿಸಿ ಸ್ಥಳೀಯವಾಗಿ ಸಿಗುವ ಕಚ್ಚ ಪದಾರ್ಥಗಳಿಂದ ಸಣ್ಣ,ಪುಟ್ಟ ಉದ್ಯಮಗಳನ್ನು ಮಾಡಿರೆಂದರು. ನಮ್ಮಲ್ಲಿ ಇಂತಹ ಸ್ಥಳೀಯ…

Read More

ತುಮಕೂರು: ಒಂದು ಮಠ ಧಾರ್ಮಿಕ ಕಾರ್ಯಗಳಿಗಷ್ಟೇ ಸಿಮೀತವಾಗದೆ ತನ್ನ ಸುತ್ತಮುತ್ತಲಿನ ಜನರ ದುಃಖ ದುಮ್ಮಾನಗಳಿಗೆ ಪರಿಹಾರ ಕಂಡು ಹಿಡಿಯಬಹುದು ಎಂಬುದಕ್ಕೆ ಸಿದ್ದಗಂಗಾ ಮಠದ ಸಾಕ್ಷಿಯಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಹಾಗು ಗೃಹ ಸಚಿವ ಅರಗ ಜ್ಞಾನೇಂದ್ರ ಅಭಿಪ್ರಾಯಪಟ್ಟಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹರಳೂರು ಗ್ರಾಮದಲ್ಲಿ ತ್ರಿವಿಧ ದಾಸೋಹಿ ಡಾ.ಶ್ರೀಶಿವಕುಮಾರಸ್ವಾಮೀಜಿಗಳ 115ನೇ ಜನ್ಮ ಜಯಂತಿ ಹಾಗೂ ಶ್ರೀವೀರಭದ್ರಸ್ವಾಮಿ ದೇವಾಲಯದ ನಿತ್ಯ ದಾಸೋಹ ಪ್ರಾರಂಭ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಮತ್ತು ಹರಳೂರು ಶಿವಕುಮಾರ್ ವಿಚರಿತ ಅರಿವಿನ ಕಣ್ಣು ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಡಾ. ಶ್ರೀಶಿವಕುಮಾರಸ್ವಾಮೀಜಿಗಳು ಇರದಿದ್ದರೆ ಲಕ್ಷಾಂತರ ಮಕ್ಕಳು ವಿದ್ಯೆ ವಂಚಿತರಾಗುವುದಲ್ಲದೆ, ಹಸಿವಿನಿಂದ ಸಾವನ್ನಪ್ಪುತಿದ್ದರು. ಹಾಗಾಗಿ ಮಠಗಳ ಕಾರ್ಯವೈಖರಿಗೆ ಶ್ರೀಸಿದ್ದಗಂಗಾ ಮಠ ಮಾದರಿ ಎಂದರು. ನಾನು ಜಗತ್ತಿನಲ್ಲಿಯೇ ಭಕ್ತಿ ಮತ್ತು ಪ್ರೀತಿಯಿಂದ ಕಾಣುವ ಯಾವುದಾದರೂ ಸ್ವಾಮೀಜಿ ಇದ್ದರೆ ಅದು ಲಿಂಗೈಕ್ಯ ಡಾ.ಶ್ರೀಶಿವಕುಮಾರ ಸ್ವಾಮೀಜಿಗಳು, ಅವರು ನಮಗೆ ನಾವು ಭೂಮಿಯ…

Read More

ತುಮಕೂರು: ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ. ಕನ್ನಡವನ್ನು ಎಲ್ಲೆಡೆ ಕಾಣಿಸುವ ಮತ್ತು ಕೇಳಿಸುವ ಕೆಲಸ ನಮ್ಮೆಲ್ಲರಿಂದ ಆಗಬೇಕು. ನಮ್ಮ ರಾಜ್ಯದ ಆಡಳಿತ ಭಾಷೆಯಾದ ಕನ್ನಡ ಭಾಷೆಯಲ್ಲಿ ನಮ್ಮ ಬದುಕಿದೆ, ಜೀವನಕ್ರಮವಿದೆ ಮತ್ತು ನಮ್ಮಗಳ ಭವಿಷ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಭಿಪ್ರಾಯ ವ್ಯಕ್ತಪಡಿಸಿದರು. ತುಮಕೂರು ಜಿಲ್ಲೆಯಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಬಹು ರಾಷ್ಟ್ರೀಯ ಕಂಪನಿಗಳು ಮತ್ತು ಕೈಗಾರಿಕೆಗಳಲ್ಲಿ ಕಡ್ಡಾಯವಾಗಿ “ಕನ್ನಡ ಘಟಕ” ಕಾರ್ಯ ನಿರ್ವಹಿಸಬೇಕು. ಕನ್ನಡ ಬಳಕೆ ಸುಗಮವಾಗಿ ಸಾಗುವ ರೀತಿ ನೋಡಿಕೊಳ್ಳುವ ಜವಾಬ್ದಾರಿ ಈ ಕನ್ನಡ ಘಟಕದ್ದಾಗಿರುತ್ತದೆ. ಇನ್ನೊಂದು ತಿಂಗಳಲ್ಲಿ ಜಿಲ್ಲೆಯ ಎಲ್ಲಾ ಕೈಗಾರಿಕಾ ವಲಯಗಳಲ್ಲಿ ಕನ್ನಡ ಘಟಕ ಸ್ಥಾಪನೆ ಮತ್ತು ಕಡ್ಡಾಯ ಕನ್ನಡ ಬಳಸುವಿಕೆ ಕುರಿತಂತೆ ಕಟ್ಟುನಿಟ್ಟಾದ ನಿರ್ದೇಶನವನ್ನು ನೀಡುವಂತೆ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ನಾಗೇಶ್ ಅವರಿಗೆ ಸೂಚಿಸಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ, ತುಮಕೂರು ಜಿಲ್ಲೆಯ ಕಚೇರಿಗಳಲ್ಲಿನ ಕನ್ನಡ ಬಳಕೆ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ,…

Read More

ತುಮಕೂರು: ಬಿಜೆಪಿ ತುಮಕೂರು ಸಂಘಟನಾತ್ಮಕ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಹೆಚ್.ಎಸ್. ರವಿಶಂಕರ್ ರವರ ಅಧಿಕಾರ ಪದಗ್ರಹಣ ಸಮಾರಂಭ ಮತ್ತು ಜಿಲ್ಲಾ ಕಾರ್ಯಕಾರಿಣಿಯ ಉದ್ಘಾಟನಾ ಸಮಾರಂಭವು ತುಮಕೂರಿನ ಶಿರಾ ರಸ್ತೆಯಲ್ಲಿರುವ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ದಿನಾಂಕ 24.05.2022ರ ಮಂಗಳವಾರ ಬೆಳೆಗ್ಗೆ 10.30ಕ್ಕೆ ಆರಂಭಗೊಳಲಿದೆ. ಈ ಸಮಾರಂಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯರು ಮತ್ತು ದಾವಣಗೆರೆ ವಿಭಾಗದ ಪ್ರಭಾರಿ ಶ್ರೀ ಕೆ.ಎಸ್.ನವೀನ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ಎಂ.ಬಿ.ನಂದೀಶ್, ರಾಜ್ಯ ಕಾರ್ಯದರ್ಶಿ ಶ್ರೀ ವಿನಯ್ ಬಿದರೆ, ರಾಜ್ಯ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ಎಸ್.ಶಿವಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಶ್ರೀ ಅರಗ ಜ್ಞಾನೇಂದ್ರ, ಸಚಿವರಾದ ಶ್ರೀ ಬಿ.ಸಿ.ನಾಗೇಶ್ ಮತ್ತು ಶ್ರೀ ಜೆ.ಸಿ.ಮಾಧುಸ್ವಾಮಿ, ಸಂಸದರಾದ ಶ್ರೀ ಜಿ.ಎಸ್.ಬಸವರಾಜು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಚಿದಾನಂದ.ಎಂ.ಗೌಡ, ಸಿ.ನಾರಾಯಣಸ್ವಾಮಿ, ಮಾಜಿವಿಧಾನ ಪರಿಷತ್ ಸದಸ್ಯ ಡಾ|| ಎಂ.ಆರ್.ಹುಲಿನಾಯ್ಕ್‍ರ್, ಶಾಸಕರಾದ ಶ್ರೀ ಜಿ.ಬಿ.ಜ್ಯೋತಿಗಣೇಶ್, ಶ್ರೀ ಮಸಾಲೇ ಜಯರಾಮ್, ಶ್ರೀ ಡಾ|| ರಾಜೇಶ್‍ಗೌಡ, ಮಾಜಿ…

Read More

ತುಮಕೂರು: ಕಾಡುಗೊಲ್ಲ ಸಮುದಾಯದಲ್ಲಿ ಹೇರಳವಾದ ಜಾನಪದ ಸಂಪತ್ತಿದ್ದು ಇನ್ನೂ ಹೆಚ್ಚಿನ ಅಧ್ಯಯನ ನಡೆಯಬೇಕಿದೆ ಎಂದು ಕಾಡುಗೊಲ್ಲ ಸಮುದಾಯದ ಹಿರಿಯ ಮುಖಂಡ ಮಾಚೇನಹಳ್ಳಿ ಕರಿಯಪ್ಪ ಸಲಹೆ ನೀಡಿದರು. ತುಮಕೂರಿನ ಪ್ರವಾಸಿ ಮಂದಿರದ ಬಳಿ ಕಾಡುಗೊಲ್ಲ ಸಮುದಾಯದಿಂದ ಆಯೋಜಿಸಿದ್ದ ಜಾನಪದ ವಿದ್ವಾಸ ತೀ.ನಂ.ಶಂಕರನಾರಾಯಣ ಅವರ ಶ್ರದ್ದಾಂಜಲಿ, ನುಡಿನಮನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕಾಡುಗೊಲ್ಲರ ಆಚಾರ ವಿಚಾರಗಳ ಬಗ್ಗೆ ಹೆಚ್ಚು ದಾಖಲೆಗಳು ಲಭ್ಯ ಇಲ್ಲದ ಕಾಲದಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ತೀರ್ಥಪುರದ ತೀ.ನಂ.ಶಂಕರನಾರಾಯಣ ಅವರು 7 ವರ್ಷಗಳ ಕಾಲ ಈ ಬುಡಕಟ್ಟು ಸಮುದಾಯದ ಬಗ್ಗೆ ಅಧ್ಯಯನ ನಡೆಸಿ ಕರ್ನಾಟಕ ಕಾಡುಗೊಲ್ಲರ ಸಂಪ್ರದಾಯಗಳು ಮತ್ತು ನಂಬಿಕೆಗಳು ಕುರಿತ ಪ್ರಬಂಧ ಹೊರತಂದರು. ಆ ನಂತರ ಈ ಜನಾಂಗದ ಅಧ್ಯಯನಕ್ಕೆ ಒಂದು ಹೊಸ ಮಾರ್ಗ ಸಿಕ್ಕಂತಾಯಿತು. ಕಾಡುಗೊಲ್ಲರ ಸಂಪ್ರದಾಯಗಳ ಸಾಕಷ್ಟು ಅಂಶಗಳು ಈ ಗ್ರಂಥದಲ್ಲಿ ಅಡಕವಾಗಿವೆ. ಎಷ್ಟೋ ಕಲಿಕಾ ವಿದ್ಯಾರ್ಥಿಗಳಿಗೆ ಇದೊಂದು ಆಕರ ಗ್ರಂಥವಾಗಿದೆ ಎಂದರು. ಕಾಡುಗೊಲ್ಲ ಸಮುದಾಯ ಬುಡಕಟ್ಟು ಆಚರಣೆಗಳನ್ನು ಪಾಲಿಸುತ್ತಿದ್ದು ಈ ಸಂಪ್ರದಾಯಗಳು ಕೆಲವರಿಗೆ ವಿಭಿನ್ನ ಎನಿಸುತ್ತಿವೆ.…

Read More