ತುಮಕೂರು: ದೇವರು, ಧರ್ಮ, ಆಹಾರದ ವಿಚಾರದಲ್ಲಿ ಜನರ ನಡುವೆ ವಿಷ ಬೀಜ ಬಿತ್ತುತ್ತಿರುವ ಆರ್.ಎಸ್.ಎಸ್. ಬಜರಂಗದಳ, ವಿಶ್ವ ಹಿಂದೂ ಪರಿಷತ್ ಬಗ್ಗೆ ಅಲ್ಪಸಂಖ್ಯಾತ ಸಮುದಾಯ ಎಚ್ಚರಿಕೆಯಿಂದ ಇರುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ನಗರದ ಗಾಜಿನಮನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದವತಿಯಿಂದ ಆಯೋಜಿಸಿದ್ದ ಜಿಲ್ಲಾ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು,ನಮ್ಮ ಸಂವಿಧಾನದಲ್ಲಿ ಧರ್ಮ ನಿರಪೇಕ್ಷತೆಯನ್ನು ಪ್ರತಿಪಾದಿಸಲಾಗಿದೆ.ನಾನು ಆಚರಿಸುವ ಧರ್ಮದ ಬಗ್ಗೆ ಗೌರವದಿಂದ ಇರುವುದರ ಜೊತೆಗೆ, ಇತರೆ ಧರ್ಮಗಳ ಬಗ್ಗೆ ಪ್ರೀತಿ ಬೆಳೆಸಿಕೊಳ್ಳಬೇಕು.ಅದೇ ನಿಜವಾದ ಭಾರತ ಎಂದರು. ನಾನು ಯಾವ ಧರ್ಮದಲ್ಲಿ ಹುಟ್ಟಿದ್ದೇನೆ ಎಂಬುದು ಮುಖ್ಯವಲ್ಲ. ನಾವ್ಯಾರು ಇಂತಹ ಧರ್ಮ, ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟಿದವರಲ್ಲ.ಆದರೆ ನಾವೆಲ್ಲರೂ ಭಾರತೀಯರು ಎಂಬುದನ್ನು ಮರೆಯಬಾರದು.ಈ ದೇಶ ಒಂದು ಧರ್ಮಕ್ಕೆ ಸೇರಿದಲ್ಲ.ಎಲ್ಲರಿಗೂ ಸಮಾನ ಅವಕಾಶವಿದ.ಭಾರತದಲ್ಲಿರುವ ಎಲ್ಲಾ ಧರ್ಮಗಳ ಜನರ ನಡುವೆ ಸಹಬಾಳ್ವೆ ಆಗತ್ಯ.ಇದನ್ನೇ ನಮ್ಮ ಸಂವಿಧಾನವೂ ಪ್ರತಿಪಾದಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಹಲವು…
Author: News Desk Benkiyabale
ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಿಗೊಂಡನಹಳ್ಳಿ ಸಮೀಪ ಯಡಿಯೂರು ಕಲ್ಲೂರು ಮುಖ್ಯರಸ್ತೆಯಲ್ಲಿ ಏಕಕಾಲದಲ್ಲಿ ಮೂರು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಜಲಧಿಗೆರೆ ಕಡೆಯಿಂದ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಕಲ್ಲೂರು ಕಡೆಗೆ ಡಿಸ್ ಕವರ್ ಮತ್ತು ಪಲ್ಸರ್ ಬೈಕ್ ಗಳಲ್ಲಿ ತೆರಳುತ್ತಿದ್ದ ನಾಲ್ವರು ತೆರಳುತ್ತಿದ್ದರು ಎನ್ನಲಾಗಿದ್ದು ಇತ್ತ ಕಲ್ಲೂರು ಕಡೆಯಿಂದ ಸ್ಪೆಂಡರ್ ಬೈಕಿನಲ್ಲಿ ಇಬ್ಬರು ಬರುತ್ತಿದ್ದರು ಎನ್ನಲಾಗಿದೆ. ಈ ಮೂರು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ಕು ಸಾವನ್ನಪ್ಪಿದ್ದಾರೆ. ಇನ್ನು ಓರ್ವನ ಸ್ಥಿತಿ ಗಂಬೀರವಾಗಿದ್ದು ಸ್ಥಳೀಯರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಒಬ್ಬ ಅಪಾಯದಿಂದ ಪಾರಾಗಿದ್ದಾನೆ. ಮಾಯಸಂದ್ರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೊರಟಗೆರೆ: ವಿಧವಾ ಮಹಿಳೆಯೊಬ್ಬರು ವಿಎಸ್ಎಸ್ಎನ್ ಸೊಸೈಟಿಯಲ್ಲಿ ಇಟ್ಟಿದ್ದ ಭದ್ರತಾ ಠೇವಣಿಯನ್ನು ಆ ಮಹಿಳೆಗೆ ಕೊಡಿಸುವಂತೆ ಮಹಿಳಾ ಮೂಲಭೂತ ಹಕ್ಕುಗಳ ಸಂರಕ್ಷಣಾ ಸಮಿತಿಯ ತಾಲ್ಲೂಕು ಅಧ್ಯಕ್ಷೆ ಜಿ.ನಾಗಲಕ್ಷ್ಮಿ ಅವರು, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ತಾಲ್ಲೂಕಿನ ವಡ್ಡಗೆರೆ ಗಾಮದ ಪದ್ಮಲತಾ ಎಂಬುವವರು ವಿಎಸ್ಎಸ್ಎನ್ ಸೊಸೈಟಿಯಲ್ಲಿ 2015 ಆಗಸ್ಟ್ 29 ರಂದು 60,000 (ಅರವತ್ತು ಸಾವಿರ) ರೂ.ಗಳನ್ನು ಭದ್ರತಾ ಠೇವಣಿ ಇಟ್ಟಿದ್ದು, ಇದರ ಕಾಲಾವಧಿ ಏಳು ವರ್ಷಗಳು ಇದ್ದು ಈಗ ಬಡ್ಡಿ ಸೇರಿ 1,20,000 (ಒಂದು ಲಕ್ಷ ಇಪ್ಪತ್ತು ಸಾವಿರ) ರೂ.ಗಳು ನೀಡಬೇಕಾಗಿದೆ. ಪದ್ಮಲತಾ ಒಬ್ಬಂಟಿ ಮಹಿಳೆಯಾಗಿದ್ದು, ತುರ್ತಾಗಿ ಮೊಣಕಾಲಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಬೇಕಾಗಿದೆ. ಆದರೆ ವಿಎಸ್ಎಸ್ಎನ್ ಸೊಸೈಟಿಯಲ್ಲಿ ಇಟ್ಟಿದ್ದ ಬಾಂಡ್ ಮೆಚ್ಯೂರಿಟಿ ಆಗಿದ್ದು, ಕಾರ್ಯನಿರ್ವಹಣಾಧಿಕಾರಿ ಬೋರೇಗೌಡ ಎಂಬುವವರು ನಮ್ಮ ಬಳಿ ಹಣದ ಕೊರತೆ ಇದೆ. ಆಡಿಟ್ ಆಗಬೇಕು, ಕೇಂದ್ರ ಕಚೇರಿಯಿಂದ ಅನುದಾನ ಬರಬೇಕು ಎಂಬ ಸಬೂಬು ಹೇಳಿ ಆ ಮಹಿಳೆಗೆ ಹಣ ನೀಡದೆ…
ತುಮಕೂರು: ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ರಾಜನಹಳ್ಳಿಯ ಶ್ರೀವಾಲ್ಮೀಕಿ ಮಹರ್ಷಿಗಳು ನಡೆಸುತ್ತಿರುವ ಧರಣಿಗೆ ಬೆಂಬಲ ವ್ಯಕ್ತಪಡಿಸಿ ಇಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್ಹಾಲ್ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮುಖಂಡರುಗಳು ಸರಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಅಶೋಕ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಮಾವೇಶಗೊಂಡ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯೆ ಹಾಗೂ ಶಬರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಶ್ರೀಮತಿ ಶಾಂತಲಾ ರಾಜಣ್ಣ,ಮೀಸಲಾತಿ ಹೆಚ್ಚಳ ಮಾಡಿ ಎಂದು ನಮ್ಮ ಸಂವಿಧಾನ ಬದ್ದವಾದ ಹಕ್ಕನ್ನು ಕೇಳುತ್ತಿದ್ದೆವೆಯೇ ಹೊರತು ಭೀಕ್ಷೆಯನ್ನಲ್ಲ.ಸಂವಿಧಾನದ ಪ್ರಕಾರ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹಂಚಿಕೆಯಾಗಬೇಕು. ಈ ಮೊದಲು ನಾವು ಮೀಸಲಾತಿ ಹೆಚ್ಚಳ ಮಾಡಿ ಎಂದು ಕೇಳಿದರೆ ಅಂಕಿ…
ತುಮಕೂರು: ಯುವತಿ-ಯುವಕರಿಗೆ ಸೂಕ್ತ ಕೌಶಲ್ಯ ತರಬೇತಿ ನೀಡಿ, ಅಧಿಕೃತ ಪ್ರಮಾಣ ಪತ್ರ ವಿತರಿಸಿ, ಅವರ ಭವಿಷ್ಯ ಉಜ್ವಲವಾಗುವಂತೆ ನೋಡಿಕೊಳ್ಳುವುದು ಜಿಲ್ಲಾ ಕೌಶಲ್ಯ ಸಮಿತಿಯ ಜವಾಬ್ದಾರಿಯಾಗಿದೆ ಎಂದು ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ವಿದ್ಯಾಕುಮಾರಿ ತಿಳಿಸಿದರು. ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯಕ್ರಮಗಳ ಅನುಷ್ಟಾನದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳು ಜಿಲ್ಲೆಯಲ್ಲಿ ವಿಫುಲ ಉದ್ಯೋಗದ ಅವಕಾಶ ತೆರೆದಿವೆ. ಸ್ಥಳಿಯ ಯುವತಿ-ಯುವಕರಿಗೆ ಹೆಚ್ಚಿನ ಅವಕಾಶ ಕಲ್ಪಿಸಿ, ಉನ್ನತ ಗುಣಮಟ್ಟದ ಕೈಗಾರಿಕೆಗಳು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಂದ ಯುವತಿ-ಯುವಕರಿಗೆ ತರಬೇತಿ ನೀಡಬೇಕು. ದುರ್ಬಲ ಆರ್ಥಿಕ ಪರಿಸ್ಥಿತಿಯ ಕುಟುಂಬದ ವಿದ್ಯಾರ್ಥಿಗಳಿಗೆ ಈ ತರಬೇತಿಯು ಅವರ ಭವಿಷ್ಯವನ್ನು ಉತ್ತಮವಾಗಿ ರೂಪಿಸುತ್ತದೆ, ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬದ ಯುವಕರಿಗೆ ಕೌಶಲ್ಯ ಅಭಿವೃದ್ಧಿಯ ತರಬೇತಿ ನೀಡಿ ಅವರ ಜೀವನೋಪಾಯಕ್ಕೆ ಸಹಾಯವಾಗುವಂತೆ…
ತುಮಕೂರು: ತುಮಕೂರಿನ ನಾಗರೀಕರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಉತ್ತಮ ಆರೋಗ್ಯ, ಬೀದಿ ದೀಪ ವ್ಯವಸ್ಥೆ, ಒಳಚರಂಡಿ, ಉದ್ಯಾನವನಗಳ ಅಭಿವೃದ್ಧಿ ಮೂಲಕ ಸ್ವಚ್ಛ ಮತ್ತು ಹಸಿರು ತುಮಕೂರು ನಿರ್ಮಾಣಕ್ಕೆ 2022-23ನೇ ಸಾಲಿನ ಆಯವ್ಯಯದಲ್ಲಿ ಆದ್ಯತೆ ನೀಡಲಾಗಿದ್ದು, ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ ಉತ್ತಮ ಸಾರಿಗೆ, ಸಿಸಿ ಟಿವಿ ಅಳವಡಿಕೆ, ಕ್ರೀಡಾಂಗಣ ಅಭಿವೃದ್ಧಿ, ಗ್ಯಾಸ್ಲೈನ್ ಜೋಡಣೆ ಮುಂತಾದ ಸಾರ್ವಜನಿಕ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಗತಿಯಲ್ಲಿರುತ್ತವೆ ಎಂದು ತುಮಕೂರು ಮಹಾನಗರಪಾಲಿಕೆ ತೆರಿಗೆ ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ನಳಿನ ಇಂದ್ರಕುಮಾರ್ ಅವರು ತಿಳಿಸಿದರು. ಅವರು ತುಮಕೂರು ಮಹಾನಗರಪಾಲಿಕೆಯ 2022-23ನೇ ಸಾಲಿನ ಆಯವ್ಯಯ ಅಂದಾಜು ಮೇಲಿನ ಭಾಷಣ ಮಾಡುತ್ತಾ, ಪಾಲಿಕೆಯು ತನ್ನ ಆರ್ಥಿಕ ಇತಿಮಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲ ಬಳಸಿಕೊಂಡು ಆಯವ್ಯಯ ಅಂದಾಜು ತಯಾರಿಸಿದ್ದು, ಒಟ್ಟು ರೂ. 415.94ಲಕ್ಷಗಳ ಉಳಿತಾಯ ಬಜೆಟ್ ಮಂಡಿಸಲು ಸಂತಸವಾಗುತ್ತಿದೆ ಎಂದು ನುಡಿದರು. 2022-23ನೇ ಸಾಲಿಗೆ ತುಮಕೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು ರೂ. 20811.15 ಲಕ್ಷಗಳ ಒಟ್ಟು ಸ್ವೀಕೃತಿಯನ್ನು ನಿರೀಕ್ಷಿಸಲಾಗಿದೆ.…
ಕೊರಟಗೆರೆ: ಪಟ್ಟಣದ ದೊಡ್ಡಪೇಟೆ ಬಡಾವಣೆಯ ಗಿರಿಜಮ್ಮ ರೇಣುಕಪ್ಪ ಎಂಬ ವೃದ್ಧ ದಂಪತಿ ಮನೆಯಲ್ಲಿ ಬೆಳಿಗ್ಗೆ 9ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಣ್ಣಿನ ಆಪರೇಶನ್ ಮಾಡಿಸಿದರೆ ಹತ್ತು ಸಾವಿರ ಉಚಿತ ಹಣವನ್ನು ಕೊಡುತ್ತಾರೆ ಎನ್ನುವ ನೆಪದಲ್ಲಿ ಮನೆಯೊಳಗೆ ಬಂದ ಆಸಾಮಿ ಅಜ್ಜಿ ಮತ್ತು ತಾತ ನನ್ನ ನಂಬಿಸಲು ಆಧಾರ್ ಕಾರ್ಡ್ ರೇಷನ್ ಕಾರ್ಡ್ ಹಾಗೂ ಪೆನ್ಷನ್ ಕ್ಲಿಪ್ ಪಡೆದು ಅಧಿಕಾರಿಗಳಿಗೆ ಕಾಲ್ ಮಾಡುವಂತೆ ಮಾಡಿದೆ ಅಜ್ಜಿ ತಾತನನ್ನು ನಂಬಿಸಿದ್ದಾನೆ. ನಂತರ ಅಜ್ಜಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ತನ್ನ ಬೈಕ್ ನಲ್ಲಿ ಕೂರಿಸಿಕೊಂಡು ಆಸ್ಪತ್ರೆಯ ಬಳಿ ಹೋದಾಗ ಆಪರೇಷನ್ ಮಾಡುತ್ತಾರೆ ಯಾರಾದರೂ ಒಡವೆಗಳನ್ನು ಕೇಳುತ್ತಾರೆ ಆದ್ದರಿಂದ ನನ್ನ ಬಳಿ ಕೊಡಿ ಎಂದು ಎಂದು ನಂಬಿಸಿ ಒಡವೆಗಳನ್ನೆಲ್ಲ ತೆಗೆದುಕೊಂಡು ಆತ ತಿರುಗಿ ನೋಡುವಷ್ಟರಲ್ಲಿ ಅಪರಿಚಿತ ವ್ಯಕ್ತಿಯು ನಾಪತ್ತೆಯಾಗಿರುತ್ತಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಟಗೆರೆ ಪೆÇಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ ಎನ್ನಲಾಗಿದೆ.
ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ರಾಶ್ರಯದಲ್ಲಿ ಇಂದು ನಡೆದ ಮಕ್ಕಳ ಸಹಾಯವಾಣಿ 1098 ದಿನಾಚರಣೆ ಮತ್ತು ಮಾಸಾಚರಣೆ ಕುರಿತ ಜಾಥಾ ಕಾರ್ಯಕ್ರಮಕ್ಕೆ ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು, ಜಾಥಾ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಬುದ್ದಿವಂತರು, ವಿಚಾರ ಮಾಡುವ ಶಕ್ತಿಯುಳ್ಳವರು, ಸಾಧಿಸುವಂತ ಛಲವುಳ್ಳರಾಗಿರಬೇಕು ಎಂದರಲ್ಲದೇ, ಮಕ್ಕಳ ಯಾವುದೇ ರೀತಿಯ ಸಹಾಯಕ್ಕಾಗಿ 1098 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಅಗತ್ಯ ರಕ್ಷಣೆ ಮತ್ತು ಪೋಷಣೆ ನೀಡಲಾಗುವುದು ಎಂದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ರಾಘವೇಂದ್ರ ಶೆಟ್ಟಿಗಾರ್ ಮಾತನಾಡಿ, ಮಕ್ಕಳ ಮೇಲೆ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಮಕ್ಕಳು ಯಾವುದೇ ತೊಂದರೆಗೆ ಒಳಗಾದಾಗ ಮಕ್ಕಳ ಸಹಾಯವಾಣಿ ಸಂಖ್ಯೆ1098 ಕರೆ ಮಾಡಿದರೆ ಇಲಾಖಾಧಿಕಾರಿಗಳು ಭೇಟಿ ನೀಡಿ ಅಗತ್ಯ ರಕ್ಷಣೆ ನೀಡುತ್ತಾರೆಂದರು. ಜಿಲ್ಲಾ ಮಕ್ಕಳ…
ತುಮಕೂರು: ಶಿಕ್ಷಣದಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ಇವುಗಳಲ್ಲಿ ಯಾವುದು ಕೀಳಲ್ಲ. ನಿರಂತರ ಪರಿಶ್ರಮದಿಂದ ನಿಗಧಿತ ಗುರಿಯನ್ನು ತಲುಪಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಬಾಲಭವನದಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆ ಆಯೋಜಿಸಿದ್ದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಕಲಾ ವಿಭಾಗದಲ್ಲಿ ಓದುವವರು ದಡ್ಡರು, ಬಡವರು ಎಂಬ ಕೀಳಿರಿಮೆ ಬೇಡ. ಆರ್ಟ್ ವಿಷಯ ಓದಿಯೇ ಇಂದು ನ್ಯಾಯಾಧೀಶನಾಗಿದ್ದೇನೆ. ಹಾಗಾಗಿ ಯಾವುದು ಕೀಳಲ್ಲ. ಮೇಲಲ್ಲ. ಗುರಿ ತಲುಪಲು ನಾವು ಅಡ್ಡದಾರಿ ಹಿಡಿಯದೆ ಸರಿಯಾದ ದಾರಿಯಲ್ಲಿ ಮುನ್ನೆಡೆದರೆ ಮಾತ್ರ ಸಾಧನೆಯ ಶಿಖರ ಹೇರಲು ಸಾಧ್ಯ ಎಂದರು. ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಗೆ ಬಡತನ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಇಂದು ಸರಕಾರದ ಜೊತೆಗೆ, ಶ್ರೀರಾಮ್ ಫೈನಾನ್ಸ್ ನಂತಹ ಹಲವಾರು ಸಂಘ ಸಂಸ್ಥೆಗಳು ಶಿಕ್ಷಣಕ್ಕೆ ಉತ್ತೇಜನ ನೀಡಲು ಕೈಜೋಡಿವೆ. ನಾವುಗಳು ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಮುನ್ನೆಡೆಯಬೇಕು.ಹಕ್ಕು ಮತ್ತು ಕರ್ತವ್ಯಗಳನ್ನು ಸಮಾನವಾಗಿ ಸ್ವೀಕರಿಸುವ…
ತುಮಕೂರು: ಜಿಲ್ಲೆಯ ಜನರ ಆರೋಗ್ಯ ರಕ್ಷಣೆಗಾಗಿ ಗ್ರಾಮ-ಒನ್, ತುಮಕೂರು ಒನ್, ಸಾಮಾನ್ಯ ಸೇವಾ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗಳ ಮೂಲಕ ಅರ್ಹರಿಗೆ ಆಯುμÁ್ಮನ್ ಭಾರತ್-ಆರೋಗ್ಯ ಕರ್ನಾಟಕ(ಂಃಂಖಏ) ಕಾರ್ಡುಗಳನ್ನು ವಿತರಿಸಲು ತುರ್ತಾಗಿ ಕ್ರಮಕೈಗೊಳ್ಳಲು ಆಯಾ ತಹಶೀಲ್ದಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳು, ಪಾಲಿಕೆ ಆಯುಕ್ತರು ಹಾಗೂ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಈಗಾಗಲೇ 7 ಲಕ್ಷ ಂಃಂಖಏ ಕಾರ್ಡುಗಳನ್ನು ವಿತರಿಸಲಾಗಿದ್ದು, ತಾಲ್ಲೂಕುವಾರು ಗ್ರಾಮವಾರು ಈ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಲಾಯಿತು. ಕೋವಿಡ್-19 ತಡೆಗಟ್ಟಲು ಲಸಿಕಾಕರಣ ಮುಂದುವರೆದಿದ್ದು, 12 ರಿಂದ 14 ಮತ್ತು 15-17 ವಯಸ್ಸಿನೊಳಗಿನ ಮಕ್ಕಳಿಗೆ ನೀಡುವ ಲಸಿಕೆಯನ್ನು ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದರಲ್ಲದೇ, ಮೇ 16ರಿಂದ ಶಾಲೆಗಳು ಪ್ರಾರಂಭವಾಗಿದ್ದು, ಎಲ್ಲಾ ತಾಲ್ಲೂಕು ವೈದ್ಯಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳು ತಾಲ್ಲೂಕು ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ವ್ಯಾಕ್ಸಿನೇಷನ್ ಪ್ರಗತಿ ಸಾಧಿಸಲು ಸೂಚಿಸಿದರು. ಅಂಗನವಾಡಿ ಕೇಂದ್ರಗಳಿಗೆ ನಿವೇಶನ…











