ತುಮಕೂರು: ಎರಡು ವರ್ಷದ ನಂತರ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಪ್ರಾರಂಭವಾಗುತ್ತಿರುವುದು ಸಂತಸ ತಂದಿದೆ. ಕೋವಿಡ್ನಿಂದಾಗಿ ಶಾಲೆಗಳಲ್ಲಿ ಭೌತಿಕವಾಗಿ ತರಗತಿಗಳು ನಿರಂತರವಾಗಿ ನಡೆಯದ ಕಾರಣ ಪಠ್ಯ ಕ್ರಮ ಹಿಂದುಳಿದಿದ್ದು, ಇದನ್ನು ಸರಿದೂಗಿಸಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಕಲಿಕಾ ಅಂತರವನ್ನು ಸರಿದೂಗಿಸಲೆಂದೇ 2022-23ನೇ ಶೈಕ್ಷಣಿಕ ವರ್ಷವನ್ನು “ಕಲಿಕಾ ಚೇತರಿಕೆ” ವರ್ಷ ಎಂದು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರು ತಿಳಿಸಿದರು. ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಏರ್ಪಡಿಸಲಾಗಿದ್ದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯ ಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ವರ್ಷದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು. ಶಾಲಾ ಪ್ರಾರಂಭೋತ್ಸವ ಒಂದು ಮಹತ್ವದ ಕಾರ್ಯಕ್ರಮ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಕರುನಾಡ ಮಕ್ಕಳಿಗೆ ಗುಣಮಟ್ಟದ ಮೂಲಭೂತ ಶಿಕ್ಷಣ ಅತ್ಯವಶ್ಯಕ. ಮಕ್ಕಳಿಗೆ ಅಕ್ಷರ ಜ್ಞಾನ ಮತ್ತು ಸಂಖ್ಯಾ ಜ್ಞಾನದ ಕೊರತೆ ಉಂಟಾಗಬಾರದು.…
Author: News Desk Benkiyabale
ತುಮಕೂರು: ನಗರದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿಯನ್ನು ಪ್ರೆಸ್ ಕ್ಲಬ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಸ್ತಾಂತರಿಸಿದರು. ನಗರದ ಜ್ಯೂನಿಯರ್ ಕಾಲೇಜು ಆವರಣದಲ್ಲಿರುವ ಆಲದಮರದ ಪಾರ್ಕ್ನಲ್ಲಿ ಆಲದ ಸಸಿ ನೆಟ್ಟು ನೀರೆರೆಯುವ ಮೂಲಕ ಪ್ರೆಸ್ಕ್ಲಬ್ ಕಾರ್ಯ ಚಟುವಟಿಕೆಗೆ ವಿದ್ಯುಕ್ತ ಚಾಲನೆ ನೀಡಿದರು. ಆಲದಮರದ ಪಾರ್ಕ್ನಲ್ಲಿ ಸಿದ್ದಗೊಳಿಸಿದ್ದ ವೇದಿಕೆಯಲ್ಲಿ ಪ್ರೆಸ್ಕ್ಲಬ್ನ ಉಪಾಧ್ಯಕ್ಷರುಗಳಾದ ಶ್ರೀನಿವಾಸರೆಡ್ಡಿ, ಕರುಣಾಕರ್, ಮಾರುತಿ ಗಂಗಹನುಮಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಯೋಗೀಶ್ ಅವರಿಗೆ ಆಲದ ಮರದ ಪಾರ್ಕ್ ನಿರ್ವಹಣೆ ಹೊಣೆಯನ್ನು ದಾಖಲಾತಿ ಹಸ್ತಾಂತರಿಸುವ ಮೂಲಕ ಮುಖ್ಯಮಂತ್ರಿಗಳು ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸ್ಮಾರ್ಟ್ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಆಲದ ಮರದ ಪಾರ್ಕ್ನ ನಿರ್ವಹಣೆಯ ಜವಾಬ್ದಾರಿಯನ್ನು ಪ್ರೆಸ್ಕ್ಲಬ್ಗೆ ವಹಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಇದರಿಂದ ಪ್ರೆಸ್ಕ್ಲಪ್ನವರಿಗೆ ಸಾಮಾಜಿಕ ಹೊಣೆಗಾರಿಕೆ, ಪರಿಸರ ಕಾಳಜಿ ಎಷ್ಟಿದೆ ಎಂಬುದು ಗೊತ್ತಾಗುತ್ತದೆ ಎಂದರು. ಸಾಮಾಜಿಕ ಹೊಣೆಗಾರಿಕೆ ಎಂಬುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಪ್ರತಿಯೊಂದು ಸಂಘ ಸಂಸ್ಥೆಗಳು ಸಹ ಪ್ರಯತ್ನಗಳನ್ನು ನಡೆಸಲಿ ಎಂದು…
ತುಮಕೂರು: ಪತ್ರಕರ್ತರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಬಾಳನಕಟ್ಟೆಯ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿರುವ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಂಘದಿಂದ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾ ಭವನ ನವೀಕರಣ ಕಾಮಗಾರಿಗೆ ಚಾಲನೆ ನೀಡಿ, ಪತ್ರಕರ್ತರ ನಾಮಫಲಕ ಅನಾವರಣಗೊಳಿಸಿ ಮಾತನಾಡಿದ ಅವರು, ರಾಜ್ಯದ ಗ್ರಾಮೀಣ ಪ್ರದೇಶದ ಪತ್ರಕರ್ತರ ಸಮಸ್ಯೆಗಳನ್ನು ಬಗೆ ಹರಿಸುವುದರ ಜೊತೆಗೆ ನಗರ ಪ್ರದೇಶದ ಪತ್ರಕರ್ತರ ಸಮಸ್ಯೆಗಳನ್ನೂ ಬಗೆ ಹರಿಸಲು ಮುಂದಾಗಿರುವುದಾಗಿ ತಿಳಿಸಿದರು. ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತುಮಕೂರು ಜಿಲ್ಲಾ ಪತ್ರಿಕಾ ಭವನ ನಿರ್ಮಾಣಕ್ಕೆ 25 ಲಕ್ಷ ರೂ. ಅನುದಾನ ನೀಡಿದ್ದರ ಹಿನ್ನಲೆಯಲ್ಲಿ ಪತ್ರಿಕಾ ಭವನ ನಿರ್ಮಾಣವಾಗಿತ್ತು. ತಂತ್ರಜ್ಞಾನ ಬೆಳೆದಂತೆಲ್ಲಾ ಸಮಾಜದ ಓರೆ ಕೋರೆಗಳನ್ನು ತಿದ್ದುವ ಪತ್ರಕರ್ತರ ಸಂಖ್ಯೆಯೂ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ ಪತ್ರಿಕಾ ಭವನ ಇನ್ನೂ ಉತ್ತಮ ರೀತಿಯಲ್ಲಿ ನಿರ್ಮಾಣವಾಗಬೇಕೆಂಬ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಂಘದ ಮನವಿ ಮೇರೆಗೆ ಇದರ ನವೀಕರಣಕ್ಕೆ 18 ಲಕ್ಷ ರೂ.…
ತುಮಕೂರು: ಸಮವಸ್ತ್ರದಲ್ಲಿರುವ ನಮ್ಮ ವರ್ತನೆಗಳನ್ನು ಸಮಾಜವು ಸೂಕ್ಷ್ಮವಾಗಿ ಗಮನಿಸುತ್ತದೆ ಆದ್ದರಿಂದ ಯಾವುದೇ ಇಲಾಖೆಯ ಸಮವಸ್ತ್ರಧಾರಿ ಸಿಬ್ಬಂದಿಗೆ ವರ್ತನೆ ಎಂಬುದು ಬಹಳ ಮುಖ್ಯ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಟಿ.ಜೆ.ಉದೇಶ್ ಅಭಿಪ್ರಾಯಪಟ್ಟರು. ಜಿಲ್ಲಾ ಗೃಹ ರಕ್ಷಕ ದಳವು ಶನಿವಾರ ಸಿದ್ಧಗಂಗಾಮಠದಲ್ಲಿ ನೂತನ ಗೃಹ ರಕ್ಷಕರಿಗೆ ಆಯೋಜಿಸಿದ್ದ 10 ದಿನಗಳ ಮೂಲ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಪೊಲೀಸ್, ಅಗ್ನಿಶಾಮಕ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ಒಬ್ಬರಿಗೊಬ್ಬರು ಪೂರಕವಾಗಿ ಸಮನ್ವಯದಿಂದ ಕರ್ತವ್ಯ ನಿರ್ವಹಿಸುತ್ತಾರೆ. ಕರ್ತವ್ಯದ ವೇಳೆ ನಾವೆಲ್ಲ ನಮ್ಮ ಸಮವಸ್ತ್ರದ ಶರ್ಟಿನ ತೋಳನ್ನು ಅರ್ಧಕ್ಕೆ ಮಡಚಿರುತ್ತೇವೆ. ಶರ್ಟಿನ ತೋಳನ್ನು ಪೂರ್ತಿ ಬಿಟ್ಟುಕೊಂಡು ಓಡಾಡಬಹುದು ಆದರೆ ನಾವು ಆ ರೀತಿ ಮಾಡುವುದಿಲ್ಲ, ಶರ್ಟಿನ ಅರ್ಧ ತೋಳನ್ನು ಮಡಚುವುದು ನಾವು ಸದಾ ಕಾಲ ಕರ್ತವ್ಯಕ್ಕೆ ಸಿದ್ಧ ಎಂಬುದನ್ನು ಸಂಕೇತಿಸುತ್ತದೆ ಎಂದು ಗೃಹ ರಕ್ಷಕ ದಳದ ಪ್ರಶಿಕ್ಷಾಣಾರ್ಥಿಗಳಿಗೆ ಹುಮ್ಮಸ್ಸು ತುಂಬಿದ ಅವರು, ಮುಂದಿನ ದಿನಗಳಲ್ಲಿ ನಿಮ್ಮನ್ನು ವಿವಿಧ ಇಲಾಖೆಗಳಿಗೆ ನಿಯೋಜನೆ ಮಾಡಲಾಗುತ್ತದೆ…
ಗುಬ್ಬಿ : ತಾಲ್ಲೂಕಿನ ದಲಿತ ಸಮುದಾಯದವರಿಗೆ ರುದ್ರ ಭೂಮಿ ಮಂಜೂರಾತಿ ಮಾಡಬೇಕು ಎಂದು ದಲಿತ ಮುಖಂಡರು ಸಭೆಯಲ್ಲಿ ತಾಲೂಕು ಆಡಳಿತವನ್ನು ಆಗ್ರಹಿಸಿದರು. ದ.ಸಂ.ಸ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಮಾತನಾಡಿ ತಾಲೂಕು ಆಡಳಿತದ ವತಿಯಿಂದ ತಾಲೂಕು ಪಂಚಾಯಿತಿ ಸಂಭಾಗಣದಲ್ಲಿ ಆಯೋಜಿಸಿದ್ದ ದಲಿತರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಮುಖಂಡರು ತಾಲ್ಲೂಕಿನ ಯಾವುದೇ ದಲಿತ ಗ್ರಾಮದಲ್ಲಿ ದಲಿತರಿಗೆ ಸ್ಮಶಾನ ವಿಲ್ಲ ಇರುವ ಕಡೆ ಪ್ರಭಾವಿಗಳು ಜಾಗವನ್ನು ಒತ್ತುವರಿ ಹಾಗೂ ಖಾತೆ ಮಾಡಿಸಿಕೊಂಡಿದ್ದಾರೆ ದಲಿತರು ಸತ್ತರೆ ಶವ ಸಂಸ್ಕಾರಕ್ಕೆ ಬಹಳ ತೊಂದರೆ ಯಾಗುತ್ತಿದೆ.ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ದಲಿತರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಂದಾಗುತ್ತಿಲ್ಲ ಕೇವಲ ಸಭೆಯಲ್ಲಿ ಮಾತ್ರ ದಲಿತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳುವ ಅಧಿಕಾರಿಗಳು ಇದುವರೆವಿಗೂ ಸಮಸ್ಯೆ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖಂಡ ನಿಟ್ಟೂರು ನಾಗರಾಜ್ ಮಾತನಾಡಿ ತಾಲ್ಲೂಕಿನಲ್ಲಿ ದಲಿತರ ಜಮೀನು ಒತ್ತುವರಿಯಾಗಿದೆ ಕೆಲವು ಗ್ರಾಮದಲ್ಲಿ ದಲಿತರಿಗೆ ಮೀಸಲಿರುವ ಜಮೀನು ಮಂಜೂರಾತಿ ಮಾಡುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ .ಜಮೀನುಗಳು ಪ್ರಭಾವಿಗಳ ಪಾಲಾಗುತ್ತಿದೆ ಕಂದಾಯ…
ಕೊರಟಗೆರೆ: ಶಾಸಕರಾದ ಡಾ.ಜಿ.ಪರಮೇಶ್ವರ್ ಇಚ್ಚಾಶಕ್ತಿ ಕೊರತೆ ಮತ್ತು ಅಭಿವೃದ್ದಿ ನಿರ್ಲಕ್ಷದಿಂದ ಶಾಶ್ವತ ಯೋಜನೆಯ ಅನುಷ್ಠಾನವೇ ಸ್ಥಗೀತವಾಗಿ ಕೊರಟಗೆರೆ ಕ್ಷೇತ್ರವು ಅಭಿವೃದ್ದಿಯಿಂದ ಸಂಪೂರ್ಣವಾಗಿ ವಂಚಿತವಾಗಿದೆ ಎಂದು ಮಾಜಿ ತೆಂಗುನಾರು ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ವೆಂಕಟಾಚಲಯ್ಯ ಆರೋಪ ಮಾಡಿದರು. ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಯಮಂಗಳಿ ಮತ್ತು ಸುವರ್ಣಮುಖಿ ನದಿಪಾತ್ರದ ರೈತರ ಶಾಶ್ವತ ನೀರಿಗಾಗಿ ಹೋರಾಟ ಸಮಿತಿ ಮತ್ತು ರೈತಸಂಘದಿಂದ ಇತ್ತೀಚಿಗೆ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು. ಬಯಲುಸೀಮೆ ಕ್ಷೇತ್ರವಾದ ಕೊರಟಗೆರೆಗೆ ಈಗಾಗಲೇ ಹೇಮಾವತಿ ನೀರು ಮರೀಚಿಕೆ ಆಗಿದೆ. ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ನಿರ್ಲಕ್ಷದಿಂದ ಈಗ ಎತ್ತಿನಹೊಳೆ ಯೋಜನೆಯ ಬಫರ್ಡ್ಯಾಂ ಸಹ ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ ಸ್ಥಳಾಂತರ ಮಾಡುವ ಹುನ್ನಾರ ನಡೆಯುತ್ತೀದೆ. ಮೇ.16ರಂದು ಕೊರಟಗೆರೆ ಪಟ್ಟಣದಲ್ಲಿ ಶಾಶ್ವತ ನೀರಿಗಾಗಿ ಸಾವಿರಾರು ರೈತರಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ರೈತಸಂಘದ ಕೊರಟಗೆರೆ ಅಧ್ಯಕ್ಷ ಕೋಡ್ಲಹಳ್ಳಿ ಸಿದ್ದರಾಜು ಮಾತನಾಡಿ ಬಹುರ್ ಹುಕ್ಕುಂ ಕಮಿಟಿ ರಚನೆಯಾಗಿ ಈಗಾಗಲೇ 4ತಿಂಗಳು ಕಳೆದಿದೆ. ಕಳೆದ 4ವರ್ಷದಿಂದ ಒಬ್ಬರಿಗೂ ಸಾಗುವಳಿ ಚೀಟಿ…
ತುಮಕೂರು : ರೋಗಿಗಳನ್ನು ಆರೈಕೆ ಮಾಡುವಾಗ ಅವರ ಸಮಸ್ಯೆಯನ್ನು ಗುರುತಿಸಿ, ಮಾನವೀಯ ನೆಲೆಗಟ್ಟಿನಲ್ಲಿ ಸೇವೆ ಮಾಡಬೇಕು, ದಾದಿಯರು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ರೋಗಿಗಳ ಸೇವೆ ಮಾಡಲು ಸದಾ ಸಿದ್ದರಿರಬೇಕು. ಕೋವಿಡ್- 19 ಸಂದರ್ಭದಲ್ಲಿ ದಿನದ 24 ಗಂಟೆಯೂ ಕೆಲಸ ನಿರ್ವಹಿಸುತ್ತಿದ್ದ ನಿಜಕ್ಕೂ ಶ್ಲಾಘನೀಯವಾಗಿದೆ. ಅತ್ಯುತ್ತಮ ಕೆಲಸ ನಿರ್ವಹಿಸುತ್ತಿರುವ 5 ಜನ ನರ್ಸ್ರವರಿಗೆ 10 ಸಾವಿರ ರೂ ನಗದು ಮತ್ತು ಚಿನ್ನದ ಪದಕ ನೀಡ ಗೌರವಿಸಲಾಗುವುದು ಎಂದು ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್ರವರು ತಿಳಿಸಿದರು. ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ ಯನ್ನು ಮೇ 12 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಶ್ರೀದೇವಿ ಅಡಿಟೋರಿಯಂ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶ್ರೀದೇವಿ ವೈದ್ಯಕೀಯ ನಿದೇಶಕರಾದ ಡಾ.ರಮಣ್ ಆರ್ ಹುಲಿನಾಯ್ಕರ್ರವರು ಮಾತನಾಡುತ್ತಾ ವೃತ್ತಿ ಜೀವನದಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡುತ್ತಾ. ನರ್ಸಿಂಗ್ ಕ್ಷೇತ್ರದಲ್ಲಿ ಶುಶ್ರೂಷಕ ರಾಗಲು ಅಗತ್ಯವಾದ ಗುಣಗಳನ್ನು ಬೆÀಳೆಸಿಕೊಳ್ಳಬೇಕು…
ತುಮಕೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಮೇ 21 ಹಾಗೂ 22, 2022ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯು ಜಿಲ್ಲೆಯ 11 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಅತ್ಯಂತ ಗೌಪ್ಯತೆ, ಸುರಕ್ಷತೆ ಮತ್ತು ವ್ಯವಸ್ಥಿತವಾಗಿ ಯಾವುದೇ ಸಣ್ಣ ಲೋಪದೋಷಕ್ಕೂ ಆಸ್ಪದ ನೀಡದಂತೆ ನಿಯಮಾನುಸಾರ ನಡೆಸಲು ಸಕಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಎಲ್ಲಾ ಕೇಂದ್ರಗಳ ಪ್ರತಿಯೊಂದು ಪರೀಕ್ಷಾ ಆವರಣ ಮತ್ತು ಕೊಠಡಿಗಳಲ್ಲೂ ಸಹ ಸಿಸಿ ಕ್ಯಾಮೆರಾ ಅಳವಡಿಸುವಂತೆ ಮತ್ತು ಎಲ್ಲಾ ಕೇಂದ್ರಗಳಲ್ಲೂ ಮೆಟಲ್ ಡಿಟೆಕ್ಟರ್ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಶಿಕ್ಷಣ ಇಲಾಖೆಯ ಜಿಲ್ಲಾ ನೋಡಲ್ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯದ ಉಸ್ತುವಾರಿಗಳನ್ನಾಗಿ ನೇಮಿಸುವಂತೆ ಮತ್ತು ಗ್ರೂಪ್-ಎ ಅಧಿಕಾರಿಗಳನ್ನು ಸಿಟ್ಟಿಂಗ್ ಸ್ಕ್ವಾಡ್ಗಳಾಗಿ ತೊಡಗಿಸಿಕೊಳ್ಳುವಂತೆ ತಿಳಿಸಿದರು.…
ತುಮಕೂರು: ಸಚಿವ ಸಂಪುಟಕ್ಕೆ ವಿಜಯೇಂದ್ರ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ, ರಾಜ್ಯ ನಾಯಕರ ಅಪೇಕ್ಷೆ ಏನಿದೆ. ಸಮಯ ಸಂದರ್ಭ ನೋಡಿಕೊಂಡು ನಿರ್ಧಾರ ಮಾಡುತ್ತಾರೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದ್ದರೂ ನಿಭಾಯಿಸುತ್ತೀನಿ ಎಂದರು. ತುಮಕೂರಿನ ಕಾರ್ಯಕ್ರಮವೊಂದಕ್ಕೆ ಭಾಗಿಯಾಗಿ ಮಾತನಾಡಿದ ಅವರು, ಮುಂದಿನ ಬಾರಿ ತುಮಕೂರಿನಲ್ಲಿ ತಮ್ಮ ಸ್ಪರ್ಧೆ ವಿಚಾರಕ್ಕೆ ಸಂಬಂಧಪಟ್ಟಂತೆ ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ. ಶಿರಾ ಮತ್ತು ಕೆ.ಆರ್ ಪೇಟೆ ಚುನಾವಣೆಯಲ್ಲಿ ಕೆಲಸ ಮಾಡಿದ್ದೆ ಕಾರ್ಯಕರ್ತರ ಜೊತೆ ಕೆಲಸ ಮಾಡಿದ್ದಕ್ಕೆ ಸಂತೋಷ ಸಿಕ್ಕಿದೆ. ಸ್ವಾಮೀಜಿ ಹುಟ್ಟುಹಬ್ಬದ ನೆಪದಲ್ಲಿ ರಾಜಕೀಯ ಮಾಡುವ ಪ್ರಮೇಯ ಉದ್ಭವ ಆಗಿಲ್ಲ ಎಂದರು. ಪಿಎಸ್ಐ ನೇಮಕಾತಿಯಲ್ಲಿ ಅಕ್ರಮದ ವಿಚಾರಕ್ಕೆ ಪ್ರತಿಕ್ರಿಯಿಸಿ ಕಾಂಗ್ರೆಸ್ ಪಕ್ಷದ ಮುಖಂಡರು ಮೂರ್ಖರಿದ್ದಾರೆ. 50 ರಿಂದ 60 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರುವ ಮಾನಸಿಕತೆಯಲ್ಲಿ ಇಲ್ಲ. ಹೀಗಾಗಿ ಬಿಜೆಪಿ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಾರೆ. ಚುನಾವಣೆ ಯಾವಾಗ ಬರುತ್ತೆ…
ಗುಬ್ಬಿ: ಬಗರ್ ಹುಕ್ಕುಂ ಸಾಗುವಳಿದಾರರ ಹೋರಾಟ ಸಮಿತಿಗಳು ಮತ್ತು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಮಟ್ಟದ ಭೂ ಸಮಾವೇಶವನ್ನು ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿ ಕೇಂದ್ರದಲ್ಲಿ ನಡೆಸಲಾಯಿತು. ಸಮಾವೇಶವನ್ನು ಉದ್ಘಾಟಿಸಿದ ಕೆ.ಪಿ.ಆರ್.ಎಸ್ ನ ರಾಜ್ಯ ಕಾರ್ಯದರ್ಶಿ ಯಶವಂತ್ ಮತನಾಡಿ ರೈತ ಹೋರಾಟಗಳನ್ನು ರಾಜ್ಯ ಸರ್ಕಾರ ಗುರುತಿಸಬೇಕು ಬರಿ ಬಾಯಿಮಾತಿನಿ ರೈತ ಪರ ಕಾಳಜಿ ಬಿಟ್ಟು ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಒತ್ತಾಯಿಸಿದರು. ಪ್ರಸ್ತಾವಿಕ ಮತನಾಡಿದ ಜಿಲ್ಲಾ ಸಂಚಾಲಕ ಅಜ್ಜಪ್ಪ ಮತನಾಡಿ ಅರಣ್ಯ ಇಲಾಖೆಯ ಅಧಿಕಾರಿಗಳ ಮೂಲಕ ಸರ್ಕಾರ ಕಿರುಕುಳ ನೀಡುವದನ್ನು ನಿಲ್ಲಿಸಬೇಕು ಹಿಂದಿನ ಉಸ್ತುವಾರಿ ಸಚಿವರ ಬರವಸೆಯೆಂತೆ ರೈತ ಮತ್ತು ಅರಣ್ಯ ಇಲಾಖೆಯ ನಡುವೆ ಇರುವ ಭುವಿವಾದ ಪರಿಹಾರಕ್ಕೆ ಸರ್ವೆ ಮೂಲಕ ಪರಿಹಾರ ಮಾಡಬೇಕೆಂದರು. ಕೆ.ಪಿ.ಆರ್ ಎಸ್ನ ರಾಜ್ಯಧ್ಯಕ್ಷ ಜಿ.ಸಿ ಬಯ್ಯರೆಡ್ಡಿ ರವರು ಮತನಾಡಿ ಹಿಂದಿನ ಕಂಧಾಯ ಸಚಿವ ಕಾಗೋಡು ತಿಮ್ಮಪ್ಪನವರು ರೈತ ಹೊರಾಟ ಪರಿಗಣಿಸಿ ಸಾಗುವಳಿ ಪತ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ…











