Author: News Desk Benkiyabale

 ತುಮಕೂರು  :        ತುಮಕೂರು ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರು ಗುರುವಾರ ಅಧಿಕಾರ ವಹಿಸಿಕೊಂಡರು.       ನಿಕಟಪೂರ್ವ ಸಿಇಓ ಜಿ.ಎಂ.ಗಂಗಾಧರಸ್ವಾಮಿ ಅವರಿಂದ ನೂತನ ಸಿಇಓ ವಿದ್ಯಾಕುಮಾರಿ.ಕೆ ಅವರು ಅಧಿಕಾರ ಸ್ವೀಕರಿಸಿದರು.

Read More

ತುಮಕೂರು :         ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಬದುಕಿಗೆ ಬೆಳಕಾಗಿದ್ದ ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಹೆಸರುವಾಸಿಯಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 114ನೇ ಜನ್ಮ ಜಯಂತಿಯನ್ನು ಯಾವುದೇ ಅದ್ದೂರಿ, ಆಡಂಬರ ಇಲ್ಲದೆ ಅತ್ಯಂತ ಸರಳವಾಗಿ ಎಂದಿನಂತೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.       ಮಹಾಮಾರಿ ಕೊರೊನಾ 2ನೇ ಅಲೆ ಹರಡದಂತೆ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಶ್ರೀಮಠದಲ್ಲಿ ಲಿಂಗೈಕ್ಯ ಶ್ರೀಗಳ 114ನೇ ಜನ್ಮ ಜಯಂತಿ ಅದ್ದೂರಿ ಆಚರಣೆ ಇಲ್ಲದೆ ಎಂದಿನಂತೆ ಶ್ರೀಗಳ ಗದ್ದುಗೆಗೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಹರಗುರುಚರಮೂರ್ತಿಗಳ ಸಮ್ಮುಖದಲ್ಲಿ ರುದ್ರಾಭಿಷೇಕ ಹಾಗೂ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮುಂಜಾನೆಯೇ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಇಷ್ಟಲಿಂಗ ಪೂಜೆ ನೆರವೇರಿಸಿ ಶ್ರೀಗಳ ಗದ್ದುಗೆಗೆ ಪೂಜೆ ನೆರವೇರಿಸಿ ಆಶೀರ್ವಾದ ಪಡೆದರು.       ಶ್ರೀಮಠದ ರುದ್ರಾಕ್ಷಿ ಮಂಟಪದಲ್ಲಿದ್ದ…

Read More

 ತುಮಕೂರು  :        ಜಿಲ್ಲೆಯ ಗುಬ್ಬಿ ತಾಲೂಕಿನ ಬಿಕ್ಕೆಗುಡ್ಡ ಕುಡಿಯುವ ನೀರು ಯೋಜನೆಗೆ ಭೂ ಸ್ವಾಧೀನ ಮಾಡಿಕೊಳ್ಳುವ ಜಮೀನಿಗೆ ಹಾಗೂ ಗಿಡ-ಮರ ಬೆಳೆಗಳಿಗೆ ಹೆಚ್ಚಿನ ಪರಿಹಾರ ಒದಗಿಸಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಬಿಕ್ಕೆಗುಡ್ಡ ಕುಡಿಯುವ ನೀರಿನ ಯೋಜನೆಯ ಸಂಬಂಧ ಆ ಭಾಗದ ರೈತರೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರಂಭದಲ್ಲಿ ತೆರೆದ ಕಾಲುವೆ ಮೂಲಕ ನೀರು ಹರಿಸಲು 15 ಮೀಟರ್ ಭೂ-ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ, ಈಗ ಪೈಪ್ ಲೈನ್ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಹಿನ್ನೆಲೆಯಲ್ಲಿ 6 ಮೀಟರ್ ಭೂಮಿಯನ್ನು ಮಾತ್ರ ಸ್ವಾಧೀನ ಪಡಿಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.       ನೀರು ಹರಿಸುವ ಪೈಪ್‍ಲೈನ್ ಕಾಮಗಾರಿ ವೇಳೆ ಜಮೀನಿನಲ್ಲಿರುವ ಗಿಡ-ಮರ, ಬೆಳೆಗಳಿಗೆ ಹಾನಿಯುಂಟಾದರೆ ಮಾರ್ಗಸೂಚಿಯನ್ವಯ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ನಿಗಧಿಪಡಿಸಿದ ದರದಲ್ಲಿ ಹೆಚ್ಚಿನ ಪರಿಹಾರ…

Read More

ಹುಳಿಯಾರು:      ಪಟ್ಟಣ ಪಂಚಾಯ್ತಿಯ ಮೊದಲ ಚುನಾವಣೆಯಲ್ಲಿ ಗಂಡಹೆಂಡತಿ ಇಬ್ಬರೂ ಗೆದ್ದು ಒಟ್ಟಿಗೆ ಸದಸ್ಯರಾಗಿ ಪಂಚಾಯ್ತಿ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.      2 ನೇ ವಾರ್ಡ್‍ನಿಂದ ಕಿರಣ್ ಕುಮಾರ್ ಅವರು ಗೆದ್ದರೆ 13 ನೇ ವಾರ್ಡ್‍ನಿಂದ ಸಂಧ್ಯ ಅವರು ಗೆಲ್ಲುವ ಮೂಲಕ ಈ ಇತಿಹಾಸ ನಿರ್ಮಿಸಿದ್ದಾರೆ. ಜೆಡಿಎಸ್‍ನಿಂದ 7 ನೇ ವಾರ್ಡ್‍ನಲ್ಲಿ ಎಚ್.ಎನ್.ಕುಮಾರ್ ಹಾಗೂ ನಾದಿನಿ ಪ್ರೀತಿ 16 ನೇ ವಾರ್ಡ್‍ನಿಂದ ಸ್ಪರ್ಧಿಸಿದ್ದರು. ಇವರಲ್ಲಿ ಪ್ರೀತಿ ಗೆದ್ದಿದ್ದಾರೆ. 3 ನೇ ವಾರ್ಡ್‍ನಿಂದ ಬಡ್ಡಿಪುಟ್ಟರಾಜು ಹಾಗೂ ಅವರ ಅತ್ತಿಗೆ ಸಿದ್ದಗಂಗಮ್ಮ 15 ನೇ ವಾರ್ಡ್‍ನಿಂದ ಸ್ಪರ್ಧಿಸಿದ್ದರು ಇವರಿಬ್ಬರೂ ಸೋತಿದ್ದಾರೆ.

Read More

ತುಮಕೂರು: ಬೇಸಿಗೆ ಸಮೀಪಿಸುತ್ತಿರುವುದರಿಂದ ಗ್ರಾಮ ಪಂಚಾಯಿತಿಗಳು 15ನೇ ಹಣಕಾಸಿನ ಶೇ.25ರಷ್ಟು ಅನುದಾನವನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.      ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ನೀರು ಮತ್ತು ನೈರ್ಮಲ್ಯ ಮಿಷನ್‍ನ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಗ್ರಾಮ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಅಂತಹ ಪಂಚಾಯತಿಗಳು 15ನೇ ಹಣಕಾಸು ಯೋಜನೆಯ ಶೇಕಡಾ 25%ರಷ್ಟು ಅನುದಾನವನ್ನು ಕುಡಿಯುವ ನೀರು ಪೂರೈಕೆಗೆ ವಿನಿಯೋಗಿಸಬೇಕೇಂದು ಇಓ ಮತ್ತು ಪಿಡಿಓಗಳಿಗೆ ಸೂಚನೆ ನೀಡಲಾಗುವುದು ಎಂದು ಅವರು ತಿಳಿಸಿದರು.       ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ, ಬಳ್ಳಾರಿ ಹಾಗೂ ತುಮಕೂರು ಜಿಲ್ಲೆಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಮೂರು ಜಿಲ್ಲೆಗಳ ಸಮನ್ವಯದಿಂದ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಲುವಾಗಿ ಬಂದಿರುವ ಅನುದಾನವನ್ನು ಸಮಪರ್ಕವಾಗಿ ಖರ್ಚು ಮಾಡಬೇಕು, ಜಲ ಜೀವನ…

Read More

ಹುಳಿಯಾರು:       ಹುಳಿಯಾರು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿದ 3 ವರ್ಷಗಳ ನಂತರ ಮೊದಲ ಬಾರಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಮತದಾರರು ಯಾವ ಪಕ್ಷಕ್ಕೂ ಬಹುಮತ ನೀಡದೆ ಅತಂತ್ರ ಪಂಚಾಯ್ತಿಯ ತೀರ್ಪು ನೀಡಿದ್ದಾರೆ. ಗೆದ್ದಿರುವವರಲ್ಲಿ 8 ಮಂದಿ ಹೊಸಬರು ಹಾಗೂ 8 ಮಂದಿ ಹಳಬರು ಗೆಲುವು ಸಾಧಿಸಿದ್ದಾರೆ.       ಹುಳಿಯಾರು ಪಂಚಾಯ್ತಿ ಚುನಾವಣೆಯನ್ನು 3 ಪಕ್ಷಗಳ ಮುಖಂಡರ ಜೊತೆ ಮಾಜಿ ಶಾಸಕ ಕೆ.ಎಸ್.ಕಿರಣ್‍ಕುಮಾರ್ ಅವರು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದರು. ಬಿ ಫಾರಂ ಹಂಚಿಕೆಯಿಂದ ಆರಂಭವಾದ ಜಿದ್ದಾಜಿದ್ದಿ ಮತದಾನದ ಕೊನೆಯವರೆವಿಗೂ ನಡೆಯಿತು. ಆದರೆ ಮತದಾರರು 6 ಕಡೆ ಬಿಜೆಪಿ, 5 ಕಡೆ ಕಾಂಗ್ರೆಸ್, 3 ಕಡೆ ಜೆಡಿಎಸ್ ಹಾಗೂ ಇಬ್ಬರು ಪಕ್ಷೇತರರನ್ನು ಗೆಲ್ಲಿಸಿ ಅಧ್ಯಕ್ಷ ಗಾದಿಗೂ ಪೈಪೋಟಿ ಬಾಕಿ ಉಳಿಸಿದ್ದಾರೆ.       ಬಿಜೆಪಿ ಪಂಚಾಯ್ತಿ ಅಧಿಕಾರ ಹಿಡಿಯಲೆಂದು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಅನಾರೋಗ್ಯದ ನಡುವೆಯೂ ಪ್ರತಿ ವಾರ್ಡ್‍ನಲ್ಲಿ ಪ್ರಚಾರ ನಡೆಸಿದ್ದರು. ಕಾಂಗ್ರೆಸ್ ಕೂಡ ಪ್ರಚಾರದಲ್ಲಿ…

Read More

ತುಮಕೂರು :        ನಗರದ ಗುಬ್ಬಿಗೇಟ್ ವೃತ್ತಕ್ಕೆ ಶಿಕ್ಷಣ ಭೀಷ್ಮ ಹೆಚ್.ಎಂ. ಗಂಗಾಧರಯ್ಯ ಹಾಗೂ ಭದ್ರಮ್ಮ ವೃತ್ತಕ್ಕೆ ಡಾ. ಬಾಬು ಜಗಜೀವನರಾಂ ಹೆಸರಿಡುವಂತೆ ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಮಹಾನಗರ ಪಾಲಿಕೆಯ ಮೇಯರ್ ಬಿ.ಜಿ. ಕೃಷ್ಣಪ್ಪ ಹಾಗೂ ಆಯುಕ್ತೆ ರೇಣುಕಾರವರಿಗೆ ಮನವಿ ಸಲ್ಲಿಸಲಾಯಿತು.        ಇಲ್ಲಿನ ಮಹಾನಗರ ಪಾಲಿಕೆ ಕಚೇರಿಯಲ್ಲಿ ಆಯುಕ್ತರು ಮತ್ತು ಮೇಯರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಮಿತಿಯ ಪದಾಧಿಕಾರಿಗಳು, ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶಿಕ್ಷಣ ಭೀಷ್ಮ ಹೆಚ್.ಎಂ. ಗಂಗಾಧರಯ್ಯ ಅವರು ಸಿದ್ದಾರ್ಥ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ದೇಶದಲ್ಲಿಯೇ ಮೊದಲ ದಲಿತ ವಿಶ್ವವಿದ್ಯಾಲಯವಾಗಿ ರೂಪುಗೊಳ್ಳಲು ಕಾರಣರಾಗಿದ್ದಾರೆ. ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳಲ್ಲಿ ಕಲಿತ ಲಕ್ಷಾಂತರ ವಿದ್ಯಾರ್ಥಿಗಳು ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದ್ದಾರೆ. ಇವರ ಹೆಸರನ್ನು ಶಾಶ್ವತವಾಗಿ ಜನಮಾನಸದಲ್ಲಿ ಉಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ನಗರ ಪಾಲಿಕೆ ಗುಬ್ಬಿಗೇಟ್ ವೃತ್ತಕ್ಕೆ ಡಾ. ಹೆಚ್.ಎಂ. ಗಂಗಾಧರಯ್ಯನವರ ಹೆಸರಿಡಲು ಕ್ರಮ…

Read More

ತುಮಕೂರು :        ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಅಧ್ಯಕ್ಷ ಹೆಚ್.ಸಿ ಹನುಮಂತಯ್ಯ ತಿಳಿಸಿದರು.       ನಗರದ ಶಿರಾಗೇಟ್ ರಸ್ತೆಯಲ್ಲಿರುವ ಕಾಳಿದಾಸ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ ತುಮಕೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ದೈಹಿಕ ಶಿಕ್ಷಕರಿಗೆ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರಧ್ವಜ ಮತ್ತು ಕೊರೋನಾ ಜಾಗೃತಿ ಮಾಹಿತಿ ಶಿಬಿರದ ಅಧ್ಯಕ್ಷತೆವಹಿಸಿ ಮಾತನಾಡಿ, ದೇಶಪ್ರೇಮದ ಸಂಕೇತವಾಗಿರುವ ನಮ್ಮ ತ್ರಿವರ್ಣ ಧ್ವಜ ಹಲವು ವಿಶೇಷತೆಗಳಿಂದ ಕೂಡಿದ್ದು, ಹಲವು ಸ್ವಾತಂತ್ರ್ಯ ಹೋರಾಟಗಾರರು, ಮಹಾನ್ ನಾಯಕರು ಸೇರಿ ನಮ್ಮ ರಾಷ್ಟ್ರಧ್ವಜಕ್ಕೆ ಸುಂದರ ರೂಪ ನೀಡಿದ್ದಾರೆ ಎಂದರು.        ಕೇಸರಿ ಬಣ್ಣ ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆದ ಬಲಿದಾನಗಳ ಸಂಕೇತವಾಗಿದೆ.…

Read More

ತುಮಕೂರು :       ಮುಂಬರುವ ಶೈಕ್ಷಣಿಕ ವರ್ಷದಿಂದ ತುಮಕೂರು ವಿಶ್ವವಿದ್ಯಾ ನಿಲಯವು ಆಂಶಿಕವಾಗಿ ಬಿದರಕಟ್ಟೆ ಹೊಸ ಕ್ಯಾಂಪಸ್‍ಗೆ ಸ್ಥಳಾಂತ ರವಾಗಲಿದೆ ಎಂದು ಕುಲಪತಿ ಕರ್ನಲ್ (ಪ್ರೊ.) ವೈ. ಎಸ್ ಸಿದ್ದೇಗೌಡ ತಿಳಿಸಿದರು.      ಹೊಸ ಕ್ಯಾಂಪಸ್‍ಗೆ ಮಂಗಳವಾರ ಭೇಟಿ ನೀಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸ್ನಾತಕೋತ್ತರ ಸಮಾಜಕಾರ್ಯ, ಜೀವ ರಸಾಯನಶಾಸ್ತ್ರ, ಸೂಕ್ಷ್ಮಾ ಣು ಜೀವಶಾಸ್ತ್ರ ಹಾಗೂ ಪರಿಸರ ವಿಜ್ಞಾನ ವಿಭಾಗಗಳು ಹೊಸ ಶೈಕ್ಷಣಿಕ ವರ್ಷದಿಂದ ಬಿದರಕಟ್ಟೆಯಲ್ಲಿ ಕಾರ್ಯ ನಿರ್ವಹಿಸಲಿವೆ ಎಂದರು.        ಲಭ್ಯವಿರುವ ಅನುದಾನದಿಂದ 240 ಎಕರೆ ವಿಸ್ತೀರ್ಣದ ಹೊಸ ಕ್ಯಾಂಪಸ್‍ನ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಸುಸಜ್ಜಿತ ಕ್ಯಾಂಪಸ್ ಪೂರ್ಣಗೊಳ್ಳಲಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ದೃಷ್ಟಿಕೋನಕ್ಕೆ ಅನುಗುಣವಾಗಿ ಕ್ಯಾಂಪಸ್ ಮೂಡಿಬರಲಿದೆ ಎಂದರು. ತಲಾ ರೂ. 36 ಕೋಟಿ ವೆಚ್ಚದ ಮೂರು ಶೈಕ್ಷಣಿಕ ಬ್ಲಾಕ್‍ಗಳು ಒಂದೇ ಕಡೆ ತಲೆಯೆತ್ತಲಿದ್ದು, ಈಗಾಗಲೇ ಕಾಮಗಾರಿ ಆರಂಭವಾಗಿದೆ. ಮುಂದಿನ ವರ್ಷದ…

Read More

ತುಮಕೂರು :         ಕೋವಿಡ್-19ನಿಂದ ರಂಗಭೂಮಿ ಸೇರಿದಂತೆ ಎಲ್ಲಾ ರೀತಿಯ ಮನರಂಜನಾ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿ ಆದೇಶಿಸಿದ್ದು, ಕೂಡಲೇ ಮನರಂಜನಾ ಕಾರ್ಯಕ್ರಮಗಳಿಗೆ ವಿನಾಯಿತಿ ನೀಡಿ ಪುನಃ ರಂಗ ಚಟುವಟಿಕೆಗಳು ನಡೆಯಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಮತ್ತು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರಿಗೆ ನಾಟಕ ಅಕಾಡೆಮಿ ಸದಸ್ಯರು, ರಂಗಭೂಮಿ ಕಲಾವಿದರು, ಆರ್ಕೆಸ್ಟ್ರಾ ಕಲಾವಿದರು ಸೇರಿದಂತೆ ವಿವಿಧ ಪ್ರಕಾರಗಳ ಕಲಾವಿದರು ಮಂಗಳವಾರ ಮನವಿ ಸಲ್ಲಿಸಿದರು.         ಈ ಸಂದರ್ಭದಲ್ಲಿ ಮಾತನಾಡಿದ ನಾಟಕ ಅಕಾಡೆಮಿ ಸದಸ್ಯರಾದ ಸದಾಶಿವಯ್ಯ, ಜಿಲ್ಲೆಯ ಪೌರಾಣಿಕ ರಂಗಭೂಮಿ ಕಲಾವಿ ದರು ಆರ್ಕೆಸ್ಟ್ರಾ ಹಾಗೂ ಸುಗಮ ಸಂಗೀತ ಕಲಾವಿದರು, ಸಾಮಾಜಿಕ ನಾಟಕ ಹಾಗೂ ಹವ್ಯಾಸಿ ವೃತ್ತಿ ರಂಗಭೂಮಿ ಕಲಾವಿದರು, ಮಹಿಳಾ ಕಲಾವಿದರು, ಡ್ರಾಮಾ ಸೀನರಿ ಮಾಲೀಕರು, ಹಾರ್ಮೋನಿಯಂ ಮಾಸ್ಟರ್‍ಗಳು, ಪಕ್ಕವಾದ್ಯಗಾರರು, ಡ್ರಾಮಾ ಸೀನರಿ ಮಾಲೀಕರು ಹಾಗೂ ಕಾರ್ಮಿಕರು, ಸಾಂಸ್ಕøತಿಕ ಕಲಾಚಟುವಟಿಕೆಗಳ ಕಲಾವಿದರು, ವಾದ್ಯಗಾರರು ಸೇರಿದಂತೆ ಅನೇಕ ರೀತಿಯ ಕಲಾವಿದರು ಕಳೆದ ಒಂದು ವರ್ಷದಿಂದ…

Read More