ತುಮಕೂರು: ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಪರಿಸರ ಪ್ರಜ್ಞೆಯ ಜೊತೆಗೆ, ನಮ್ಮ ಸಂಸ್ಕøತಿ, ಸಾಂಸ್ಕøತಿಕ ಪ್ರಜ್ಞೆಯನ್ನು ಮೂಡಿಸುವುದರಿಂದ ಭವಿಷ್ಯದಲ್ಲಿ ಅವರು ಜವಾಬ್ದಾರಿಯುತ ಸತ್ಪ್ರಜೆಗಳಾಗಿ ರೂಪುಗೊಳ್ಳಲು ಅನುಕೂಲವಾಗುತ್ತದೆ ಎಂದು ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ ಕನ್ನಡ ಕಲರವ ಮಕ್ಕಳ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡುತಿದ್ದ ಅವರು,ಇಂದು ಜನರಲ್ಲಿ ಪರಿಸರ ಪ್ರಜ್ಞೆ ಕಡಿಮೆಯಾಗುತ್ತಿರುವುದರ ಭಾಗವಾಗಿ ಪ್ರಾಕೃತಿಕ ವಿಕೋಪಗಳನ್ನು ಕಾಣುತ್ತಿದ್ದವೆ. ಇಂತಹ ಅವಘಡಗಳನ್ನು ತಡೆಗಟ್ಟಲು ಮಕ್ಕಳಿಗೆ ಚಿಕ್ಕಂದಿನದಲ್ಲಿಯೇ ಪರಿಸರ ಪ್ರಜ್ಞೆ ಬೆಳೆಸುವುದು ಸೂಕ್ತ ಎಂದರು. ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ವಿವಿಧ ಕಲಾ ಪ್ರಕಾರಗಳ ಪರಿಚಯದ ಜೊತೆಗೆ, ತುಮಕೂರು ಅಮಾನಿಕೆರೆಯಲ್ಲಿ ಪಕ್ಷಿಗಳ ವೀಕ್ಷಣೆಗೆ ಅವಕಾಶ ಕಲ್ಪಿಸಿರುವುದು ಒಳ್ಳೆಯ ಬೆಳವಣಿಗೆ,ಮಕ್ಕಳಿಗೆ ತಮ್ಮ ಸುತ್ತಮುತ್ತಲಿನ ಕೆರೆ,ಕಟ್ಟೆಗಳು,ಪಕ್ಷಿಗಳ ಪರಿಚಯವಾದರೆ, ಅವುಗಳೊಂದಿಗೆ ಅನುಸಂಧಾನ ನಡೆಸಲು ಸಹಕಾರಿಯಾಗುತ್ತವೆ.ಕಳೆದ ಎರಡು ವರ್ಷಗಳಿಂದ ಬೌತಿಕ ತರಗತಿಗಳಿಲ್ಲದೆ,ಸ್ನೇಹಿತರ ಒಡನಾಟವಿಲ್ಲದೆ ಇದ್ದ ಮಕ್ಕಳಿಗೆ ಈ ಬೇಸಿಗೆ ಶಿಬಿರ ಅತ್ಯಂತ ಉಪಯೋಗಕಾರಿಯಾಗಿದೆ.ಇದಕ್ಕಾಗಿ ಕಸಾಪ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಆಯೋಜಕರಿಗೆ…
Author: News Desk Benkiyabale
ತುಮಕೂರು: ನಾವುಗಳು ಮೇಲ್ನೋಟಕ್ಕೆ ಅಂಬೇಡ್ಕರ್ ಅನುಯಾಯಿಗಳಾಗುವುದರಿಂದ ಸಮಾಜಕ್ಕೆ ಯಾವುದೇ ಪ್ರಯೋಜನವಿಲ್ಲ. ಅವರ ತತ್ವಗಳನ್ನು ಪಾಲಿಸಿದ್ದರೆ ಇಂದು ದೇಶದಲ್ಲಿ ಅಸ್ಪøಷ್ಯತೆ ಎಂಬುದೇ ಇರುತ್ತಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಬಾಲಭವನದಲ್ಲಿ ತುಮಕೂರು ಜಿಲ್ಲಾ ಛಲವಾದಿ ಸಂಘಟನೆಗಳ ಒಕ್ಕೂಟದವತಿಯಿಂದ ಆಯೋಜಿಸಿದ್ದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ಅಂಬೇಡ್ಕರ್ ಅವರ ಸಿದ್ದಾಂತಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ದೇಶದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದರು. ನಾನು ತಿಳಿದಂತೆ ಪ್ರಪಂಚದ ಯಾವುದೇ ದೇಶದಲ್ಲಿ ಈ ರೀತಿಯ ಶ್ರೇಣಿಕೃತ ಜಾತಿ ವ್ಯವಸ್ಥೆ ಇಲ್ಲ.ಮೊದಲು ಕುಲಕಸುಬನ ಗಳಾಗಿದ್ದ ಸಮಾಜಗಳು ನಂತರ ಜಾತಿಗಳಾಗಿ ಪರಿವರ್ತನೆಯಾಗಿದ್ದು ವಿಪರ್ಯಾಸ.ಅದರಿಂದಾಗುವ ತೊಂದರೆಗಳು ಅಪಾರ. ಇಡೀ ವಿಶ್ವವೇ ಅಂಬೇಡ್ಕರ್ ಅವರ ವಿದ್ವತ್ಗೆ ಮಾರು ಹೋಗಿ,ವಿಶ್ವನಾಯಕ ಎಂದು ಕೋಡಾಡಿದರೂ ಸಹ ಭಾರತದಲ್ಲಿ ಮಾತ್ರ ಅಂಬೇಡ್ಕರ್ ಅವರನ್ನು ಇಂದಿಗೂ ಜಾತಿಯ ಹೆಸರಿನಲ್ಲಿಯೇ ಗುರುತಿಸಲಾಗುತ್ತಿದೆ.ಇದಕ್ಕಿಂತ ದೊಡ್ಡ ದುರಂತ ಮತ್ತೊಂದು ಇದೆಯೇ ಎಂದು ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದರು. ಅಂಬೇಡ್ಕರ್ ಅವರು ಭಾರತದ…
ತುಮಕೂರು; ಮಲೇರಿಯಾ, ಡೆಂಗ್ಯೂ, ಚಿಕನ್ಗುನ್ಯ, ಮೆದುಳು ಜ್ವರದಂತಹ ರೋಗವಾಹಕ ಆಶ್ರಿತ ರೋಗಗಳ ಬಗ್ಗೆ ನಾವು ಈಗಾಗಲೇ ಸಾಕಷ್ಟು ಪಾಠ ಕಲಿತಿದ್ದೇವೆ. ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಮೇ ತಿಂಗಳಿನಿಂದ ಡಿಸೆಂಬರ್ವರೆಗೆ ಇಂತಹ ರೋಗಗಳು ಹರಡುವ ಸಾಧ್ಯತೆ ಇದ್ದು, ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸಿ, ತಮ್ಮ ಸುತ್ತ-ಮುತ್ತಲಿನ ಪರಿಸರದ ಸ್ವಚ್ಛತೆ ಬಗ್ಗೆ ಗಮನಹರಿಸಿ ರೋಗ ನಿಯಂತ್ರಣಕ್ಕೆ ಸಹಕರಿಸುವಂತೆ ಜಿಲ್ಲಾ ಮುಖ್ಯ ಕಾರ್ಯನಿವಾಹಕಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ ನೀಡಿದರು. ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ ವತಿಯಿಂದ “ರಾಷ್ಟ್ರೀಯ ಡೆಂಗ್ಯೂ ದಿನ”ದ ಪ್ರಯುಕ್ತ ನಡೆದ ‘ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಕೋವಿಡ್-19ರಿಂದ ನಾವು ಅನೇಕ ಸಮಸ್ಯೆಗಳನ್ನು ಈಗಾಗಲೇ ಎದುರಿಸಿದ್ದೇವೆ. ಜೀವನ ಪೂರ್ತಿ ಮರೆಯದ ಪಾಠ ಕಲಿತಿದ್ದೇವೆ. ಆದುದರಿಂದ ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೋಗವಾಹಕ ರೋಗಗಳು…
ತುಮಕೂರು ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಮಹಾತ್ಮಗಾಂಧೀಜಿ ಅವರ ಗ್ರಾಮ ಸ್ವರಾಜ್ ಕನಸನ್ನು ನನಸು ಮಾಡುವಲ್ಲಿ ಕರ್ನಾಟಕದಲ್ಲಿ ಬಹು ಹಿಂದಿನಿಂದಲೇ ಪ್ರಯತ್ನಗಳು ನಡೆದಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ: ಕೆ.ವಿದ್ಯಾಕುಮಾರಿ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ರಾಜ್ಯ ಪಂಚಾಯತ್ ರಾಜ್ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಂವಿಧಾನಕ್ಕೆ 73ನೇ ತಿದ್ದುಪಡಿ ಮಾಡಿ ದೇಶದಾದ್ಯಂತ ಮೂರು ಹಂತದ ವಿಕೇಂದ್ರಿಕರಣ ವ್ಯವಸ್ಥೆಯನ್ನು ಭಾರತ ಸರ್ಕಾರ ಶಾಸನಬದ್ದವಾಗಿ ಜಾರಿಗೊಳಿಸಿದ್ದು, ಈ ಕೀರ್ತಿಯು ಕರ್ನಾಟಕ ರಾಜ್ಯಕ್ಕೆ ಸಲ್ಲುತ್ತದೆ ಎಂದ ಅವರು 1993ರ ಮೇ 10 ರಂದು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ ಅಧಿಕೃತವಾಗಿ ಆಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಪಂಚಾಯತ್ ರಾಜ್ ದಿನವನ್ನು ಆಚರಿಸಲಾಗುತ್ತದೆ ಎಂದು ವಿವರಿಸಿದರು. ಸಂವಿಧಾನದ 73ನೇ ತಿದ್ದುಪಡಿಯನ್ವಯ 3 ಹಂತದ ಆಡಳಿತ ವ್ಯವಸ್ಥೆಗಳಾದ ಗ್ರಾಮಪಂಚಾಯತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಆಸ್ತಿತ್ವಕ್ಕೆ ಬಂದಿದೆ. ಪಂಚಾಯತ್ ವಿಕೇಂದ್ರೀಕರಣದ ಮೂಲ ಉದ್ದೇಶಗಳಾದ ಮಹಿಳೆಯರ ಅಭಿವೃದ್ಧಿ, ಮಕ್ಕಳ ಹಕ್ಕುಗಳ ರಕ್ಷಣೆ,…
ತುಮಕೂರು: ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ, ರಾಜ್ಯ ಸರಕಾರದ ರೈತವಿರೋಧಿ ನೀತಿಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಮೇ.16ರ ಸೋಮವಾರ ಬೆಳಗ್ಗೆ 11 ಗಂಟೆಗೆ ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕಚೇರಿ ಎದುರು ರೈತರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದ್ದಾರೆ. ಜನಚಳವಳಿ ಕೇಂದ್ರದಲ್ಲಿ ಆಯೋಜಸಿದ್ದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತಂದು,ಸೇವಾ ಕ್ಷೇತ್ರವಾಗಿದ್ದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದರಿಂದ ಇದುವರೆಗೂ ಉಚಿತ ವಿದ್ಯುತ್ ಪಡೆಯುತ್ತಿದ್ದ ರೈತರ ಪಂಪ್ಸೆಟ್ಗಳಿಗೆ,ಭಾಗ್ಯ ಜೋತಿ,ಕುಟೀರ ಜೋತಿ ಯೋಜನೆಗಳ ಮನೆಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಹುನ್ನಾರ ನಡೆದಿದೆ.ಇದನ್ನು ಎಲ್ಲಾ ರೈತರು, ಬಡವರು ವಿರೋಧಿಸಬೇಕಿದೆ. ಈ ಹಿನ್ನೇಲೆಯಲ್ಲಿ ಮೇ.16ರ ಬೃಹತ್ ಹೋರಾಟವನ್ನು ರೂಪಿಸಲಾಗಿದೆ ಎಂದರು. ರಾಜ್ಯ ಸರಕಾರ ರೈತರಿಗೆ ಪ್ರತಿದಿನ ಏಳು ಗಂಟೆ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಆದರೆ ಇದು ಸುಳ್ಳು,ದಿನವೊಂದಕ್ಕೆ 2-3 ಗಂಟೆ ಮಾತ್ರ ವಿದ್ಯುತ್…
ಪಾವಗಡ: ತಾಲ್ಲೂಕಿನ ಗುಮ್ಮಘಟ್ಟ ಗ್ರಾಮದಲ್ಲಿ ಮಳೆ ಹಾಗೂ ಗಾಳಿ ಆರ್ಭಟಕ್ಕೆ ಮೂರು ಕುಟುಂಬಗಳ ಮನೆಯ ಚಾವಣಿ ಶೀಟ್ಗಳು ಹಾರಿ ಹೋಗಿದ್ದು, ಮೂರು ಕುಟುಂಬಗಳು ನೇಕಾರ ವೃತ್ತಿಯನ್ನು ಅವಲಂಬಿಸಿದ್ದು, ಈಗ ಎರಡು ಲಕ್ಷಕ್ಕೂ ಅಧಿಕ ಪ್ರಮಾಣದ ನಷ್ಟ ಉಂಟಾಗಿದೆ. ದೊಮ್ಮತಮರಿ ಗ್ರಾ.ಪಂ.ವ್ಯಾಪ್ತಿಯ ಗುಮ್ಮಘಟ್ಟ ಗ್ರಾಮದ ಮುರುಳಿ, ಶ್ರೀನಿವಾಸ, ಶಂಕರ ಅವರಿಗೆ ಸೇರಿದ ಮನೆ ಚಾವಣಿಯ ಸಿಮೆಂಟ್ ಸೀಟುಗಳು ಇದ್ದಕ್ಕಿದ್ದಂತೆ ಬೀಸಿದ ಗಾಳಿಗೆ ಹಾರಿ ಪುಡಿಪುಡಿಯಾಗಿವೆ. ನೇಕಾರರಾದ ಮುರುಳಿ ಮತ್ತು ಶ್ರೀನಿವಾಸ್ ಅವರ ಮನೆಗಳ ಚಾವಣಿ ಶೀಟ್ಗಳು ವಿದ್ಯುತ್ ಮಗ್ಗದ ಮೇಲೆ ಬಿದ್ದಿದ್ದು, ಡಿಸೈನ್ ಕಾರ್ಡ್, ವಾರ್ಪು, ಪಾಗಡಿಗಳು, ರೇಷ್ಮೆ, ಕೋನ್ ಗಳು ಸಂಪೂರ್ಣ ಹಾಳಾಗಿದ್ದು, ಅಪಾರ ನಷ್ಟವಾಗಿದೆ. ಇದರಿಂದಾಗಿ ನೇಕಾರರ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯ್ ಕುಮಾರ್, ರೆವಿನ್ಯೂ ಸೆಕರೇಟರಿ ಶ್ರೀನಿವಾಸ್, ತಾಲ್ಲೂಕು ಆರ್ ಎಂಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡಿ.ಎನ್. ವಿಶ್ವೇಶ್ವರಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸೂಕ್ತ ಪರಿಹಾರವನ್ನು ಘೋಷಿಸಬೇಕೆಂದು…
ತುಮಕೂರು: ಇಂದಿನ ಮಕ್ಕಳಿಗೆ ಹೇಮರೆಡ್ಡಿ ಮಲ್ಲಮ್ಮಳ ಆದರ್ಶಗಳನ್ನು ಕಲಿಸುವುದು ಬಹಳ ಮುಖ್ಯವಾಗಿದೆ ಎಂದು ಸಂಸದರಾದ ಜಿ.ಎಸ್. ಬಸವರಾಜು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ರೆಡ್ಡಿ ಜನಸಂಘ(ರಿ) ಇವರ ಸಂಯುಕ್ತಾಶ್ರಯದಲ್ಲಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಂದು ಭಾವಚಿತ್ರಕ್ಕೆ ಪುμÁ್ಪರ್ಚನೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಸಮಾಜದಲ್ಲಿ ಕುಟುಂಬಗಳಲ್ಲಿ ಹೊಂದಾಣಿಕೆ ಇಲ್ಲದೆ ವೃದ್ಧಾಶ್ರಮಗಳು, ಅನಾಥಾಶ್ರಮಗಳು ಹೆಚ್ಚಾಗಿವೆ. ಹೇಮರೆಡ್ಡಿ ಮಲ್ಲಮ್ಮ ಸಂಪದ್ಭರಿತವಾದ ಸಮಾಜವನ್ನು ಕಟ್ಟಿದವರು. ಇಂದಿನ ಯುವಜನರು ಹೇಮರೆಡ್ಡಿ ಮಲ್ಲಮ್ಮ ಮತ್ತು ಮಹಾಯೋಗಿ ವೇಮನರ ಜೀವನ ಆದರ್ಶಗಳನ್ನು ತಿಳಿದುಕೊಳ್ಳಬೇಕು ಎಂದರು. ಕರ್ನಾಟಕದಲ್ಲಿ ಮನೆ ಮಾತಾಗಿರುವ ಶರಣೆಯರಾದ ಅಕ್ಕ ಮಾಹಾದೇವಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಮಹಾಸಾಧ್ವಿಯರಾಗಿದ್ದರು. ಸಮಾಜದಲ್ಲಿ ಬಡತನ, ಕೆಟ್ಟ ಆಲೋಚನೆಗಳನ್ನು ದೂರವಾಗಿಸಿ ದಾನ ಧರ್ಮಗಳನ್ನು ಅಳವಡಿಸಿಕೊಂಡವರು ಎಂದು ತಿಳಿಸಿದರು. ಕ.ಸಾ.ಪ ಅಧ್ಯಕ್ಷ…
ಚಿಕ್ಕನಾಯಕನಹಳ್ಳಿ: ಸುಮಾರು 25 ವರ್ಷಗಳಿಂದ ಹೊರಗುತ್ತಿಗೆ ನೌಕರನಾಗಿ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರೇಣುಕಪ್ಪ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದ ವ್ಯಕ್ತಿಯ ಶವವನ್ನು ಪುರಸಭೆಯ ಆವರಣದಲ್ಲಿ ಇಟ್ಟು ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಮಗನಿಗೆ ನೌಕರಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು ಮೃತ ರೇಣುಕಪ್ಪ 50 ವರ್ಷದವನಾಗಿದ್ದು ಸುಮಾರು 25 ವರ್ಷಗಳಿಂದ ಪುರಸಭೆಯ ಟ್ರ್ಯಾಕ್ಟರ್ ಚಾಲಕನಾಗಿ ಹೊರಗುತ್ತಿಗೆ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂದು ತಿಳಿಯಲಾಗಿದೆ ಕಳೆದ ರಾತ್ರಿ ಸುಮಾರು ಎಂಟು ಗಂಟೆ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ನರಸಿಂಹ ಚಿತ್ರಮಂದಿರದ ಎದುರು ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈತನಲ್ಲಿ ರಕ್ತಸ್ರಾವ ಹೆಚ್ಚಾಗಿ ರಾತ್ರಿಯೇ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಈತನ ಶವವನ್ನು ಪುರಸಭಾ ಕಚೇರಿ ಆವರಣಕ್ಕೆ ಪುರಸಭಾ ಸಿಬ್ಬಂದಿಗಳು ಕರೆತರುವ ಮೂಲಕ ಪ್ರತಿಭಟಿಸಿದರು. ಪಟ್ಟಣದ ಸ್ವಚ್ಛತೆಗೆ 25 ವರ್ಷಗಳಿಂದ ದೇಹವನ್ನು ಸವೆಸಿದ್ದು ಯಾವುದೇ ಪರಿಹಾರ ಇಲ್ಲವಾಗಿದೆ ಈಗಾಗಲೇ ಹೊರಗುತ್ತಿಗೆ ನೌಕರರು ಆತನನ್ನು ತೆಗೆದುಹಾಕಿದ್ದು ಆತ ಇಲ್ಲಿಯವರೆಗೂ ದುಡಿದ ಸಲುವಾಗಿ ಪುರಸಭೆಯಿಂದ 10 ಲಕ್ಷ ಪರಿಹಾರ ಧನ…
ತುಮಕೂರು: ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಇಲ್ಲಿನ ಜಯನಗರ ಪೆÇಲೀಸರು ಬಂಧಿಸಿ, 2.5 ಲಕ್ಷ ರೂ. ಮೌಲ್ಯದ 5 ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಕಳೆದ ಕೆಲವು ದಿನಗಳಿಂದ ಬೈಕ್ ಕಳವು ಪ್ರಕರಣಗಳು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಕಳ್ಳರ ಪತ್ತೆಗಾಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ವಿಶೇಷ ತನಿಖಾ ತಂಡವನ್ನು ರಚಿಸದ್ದರು. ಅಂದಿನ ತಿಲಕ್ ಪಾರ್ಕ್ ಸಿಪಿಐ ಮುನಿರಾಜು ನೇತೃತ್ವದಲ್ಲಿ ಜಯನಗರ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಿ.ಸಿ ಮಂಜುನಾಥ್, ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಶ್ರಮಿಸಿದ್ದಾರೆ. ಬಂಧಿತರಾಗಿದ್ದ ನಾಲ್ವರ ಪೈಕಿ ಇಬ್ಬರು ಅಪ್ರಾಪ್ತ ಬಾಲಕರಾಗಿದ್ದು, ಇಬ್ಬರು ಪ್ರಾಪ್ತ ವಯಸ್ಕರಾಗಿದ್ದಾರೆ ಎಂದು ತಿಳಿದು ಬಂದಿದೆ. ಸದರಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣೆ ಪತ್ರ ಸಲ್ಲಿಸಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ. ಇನ್ನು ನಗರದಲ್ಲಿ ದಿನೇ ದಿನೆ ಬೈಕ್ ವ್ಹೀಲಿಂಗ್ ಮಾಡುವ ಪುಂಡರ ಹಾವಳಿ ಹೆಚ್ವಾಗಿದ್ದು, ಇಂತಹ ಪುಂಡರಿಗೆ ಪೆÇಲೀಸರು ಬಿಸಿ ಮುಟ್ಟಿಸಿದ್ದಾರೆ.…
ತುಮಕೂರು: ಜನಸಾಮಾನ್ಯರಿಗೆ ಅವರ ಕಷ್ಟ ಸುಖಗಳಿಗೆ ಸ್ಪಂದಿಸಿ ನಿವಾರಣೆ ಮಾಡಿಕೊಡಲು ಸರ್ಕಾರ ಉದ್ಯೋಗ ನೀಡಿರುತ್ತದೆ. ಅದರಂತೆ ಕೆಲಸ ಮಾಡಿ ನಿವೃತ್ತರಾಗುತ್ತೇವೆ. ವೃತ್ತಿಯಲ್ಲಿದ್ದಾಗ ಒಂದು ರೀತಿ ನಿವೃತ್ತರಾದ ನಂತರ ಒಂದು ರೀತಿ ಸಮಸ್ಯೆಗಳಿರುತ್ತವೆ. ನಾಯಕತ್ವ ವಹಿಸಿ ಸಂಘಟನಾತ್ಮಕವಾಗಿ ಕೆಲಸ ಮಾಡಿ, ಉತ್ತಮ ಮಾರ್ಗದಲ್ಲಿ ನಡೆದರೆ ಅದಕ್ಕೆ ಸೂಕ್ತ ಪ್ರತಿಫಲ ಸಿಕ್ಕೇ ಸಿಗುತ್ತದೆ. ಸಂಘ-ಸಂಘಟನೆಗಳು ಸದಸ್ಯರ ಸಮಸ್ಯೆಗಳನ್ನು ಗುರುತಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವುದೇ ಸಂಘದ ಗುರಿಯಾಗಿರಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಡಾ. ಎಲ್. ಭೈರಪ್ಪ ಅಭಿಪ್ರಾಯಪಟ್ಟರು. ಅವರು ಇಂದು ತುಮಕೂರು ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘವು ಸಂಘಟಿಸಿದ್ದ ಮಾಸಿಕ ಸಭೆ ಮತ್ತು ಸಂಘದ ಕರಪತ್ರ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ನಿವೃತ್ತರ ಬೇಡಿಕೆಗಳ ಈಡೇರಿಕೆಗಾಗಿ 2019 ರಿಂದಲೂ ಸಂಘ ಹೋರಾಟ ಮಾಡುತ್ತ ಬಂದಿದ್ದರೂ ಇನ್ನೂವರೆಗು ನಮ್ಮ ಯಾವ ಬೇಡಿಕೆಯೂ ಈಡೇರಿಲ್ಲ. ಆದರೆ ಮುಖ್ಯಮಂತ್ರಿಗಳೂ ನಮ್ಮ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅದರಲ್ಲಿ ನಗದು ರಹಿತ…










