ಚಿಕ್ಕನಾಯಕನಹಳ್ಳಿ: ಮುಂದಿನ ಪೀಳಿಗೆಗೆ ನೀರನ್ನುಳಿಸುವ ಸಲುವಾಗಿ ಪ್ರತಿಯೊಬ್ಬರೂ ನೀರಿನ ರಕ್ಷಣಾ ಕ್ರಮಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ಎಂ.ಎಸ್. ಕುಸುಮ ತಿಳಿಸಿದರು. ಪಟ್ಟಣದ ನವೋದಯ ಪದವಿ ಕಾಲೇಜಿನಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆ ಹಾಗೂ ಎನ್ಎಸ್ಎಸ್ ವತಿಯಿಂದ ನಡೆದ ಅಟಲ್ ಭೂಜಲ್ ಯೋಜನೆಯಡಿ ಅಂತರ್ಜಲ ಅಭಿವೃದ್ದಿ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ನಾವು ಬಳಸುವ ನೀರಿನ ಬಗ್ಗೆ ನಮಗೆ ಅರಿವಿರಬೇಕು, ನಿತ್ಯ ಜೀವನದಲ್ಲಿ ವೃಥಾ ಹೆಚ್ಚುವರಿ ನೀರಿನ ಬಳಕೆ ಮಾಡುತ್ತಿರುತ್ತೇವೆ, ಇದಕ್ಕೆ ಪ್ರತಿಯೊಬ್ಬರೂ ಕಡಿವಾಣ ಹಾಕಿದಾಗ ಜಲಸಂರಕ್ಷಣೆಗೆ ದೊಡ್ಡಕೊಡುಗೆಯಾಗಲಿದೆ. ನೀರಿನ ಪೋಲಿನಿಂದ ಪರಿಸರದಮೇಲೆ ಪರಿಣಾಮವಾಗಲಿದೆ,ಸರ್ಕಾರದ ಉಪಯುಕ್ತ ಯೋಜನೆಗಳಿಗೆ ಸಮೂಹ ಕೈ ಜೋಡಿಸಿದಾಗ ಅದರ ಆಶಯಗಳು ಈಡೇರಲಿದೆ ಎಂದರು. ಸಣ್ಣ ನೀರಾವರಿ ಇಲಾಖೆಯ ಐಇಸಿ ತಜ್ಞ ರಾಘವೇಂದ್ರ ಮಾತನಾಡಿ ನೀರಿನ ಮಿತವ್ಯಯದ ಬಳಕೆ ಹಾಗೂ ಸಂರಕ್ಷಣೆ ಎಲ್ಲರ ಸ್ವಭಾವವಾಗಬೇಕು, ಮಳೆ ನೀರನ್ನು ತಡೆದು ನಿಲ್ಲಿಸುವುದು, ಅಂತರ್ಜಲ ಮರು ಪೂರ ಣಗೊಳಿಸುವುದು, ಹರಿಯುವ ನೀರನ್ನು ತಡೆದು ಕಟ್ಟೆ, ಚೆಕ್ಡ್ಯಾಂ, ಕೃಷಿ ಹೊಂಡಗಳಲ್ಲಿ…
Author: News Desk Benkiyabale
ತುಮಕೂರು: ಕಾಶ್ಮೀರದಲ್ಲಿ ನಡೆದ ಪ್ರವಾಸಿಗರ ಹತ್ಯೆಗೆ ಪ್ರತೀಕಾರಾಗಿ ಭಾರತದ ಸೈನ್ಯ ಆಪರೇಷನ್ ಸಿಂಧೂರ ಯಶಸ್ವಿ ಯಾಗಿ ನಡೆಸಿ, ಪಾಕಿಸ್ತಾನದ ಉಗ್ರರನ್ನು ಮತ್ತು ಉಗ್ರರ ನೆಲೆಗಳನ್ನು ನಾಶಪಡಿಸಿ ಮತ್ತು ಪಾಕಿಸ್ಥಾನದ ಸೈನಿಕರನ್ನು ಸಹ ಹಿಮ್ಮೆಟ್ಟಿಸಿ ಭಾರತದ ಸಾರ್ವಭೌಮತೆಯನ್ನು ಯಾವ ವಿದೇಶಿ ಶಕ್ತಿಗಳು ಊಹಿಸಿಲಾಗದಂತೆ ಉತ್ತರವನ್ನು ಸಮರ್ಪಕ ಹೋರಾಟದ ಮೂಲಕ ತೋರಿಸಿಕೊಟ್ಟಿದ್ದಾರೆ.ಇದಕ್ಕಾಗಿ ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸುವುದಾಗಿ ಅಮ್ ಆದ್ಮಿ ಪಾರ್ಟಿಯ ತುಮ ಕೂರು ಜಿಲ್ಲಾಧ್ಯಕ್ಷ ಜಯರಾಮಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಅಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತೀಯ ಸೇನೆ ಉಗ್ರರ ನೆಲೆಗಳನ್ನು ದ್ವಂಸಗೊಳಿಸುವ ಮೂಲಕ ಪ್ರತ್ಯುತ್ತರ ನೀಡಿ ಉಗ್ರರ ದಾಳಿಯಲ್ಲಿ ಮಡಿದ ಜನರ ಆತ್ಮಕ್ಕೆ ಶಾಂತಿ ದೊರಕಿಸಿದೆ.ಅಲ್ಲದೆ ಈ ಘಟನೆ ಉಗ್ರವಾದವನ್ನು ಬೆಂಬಲಿಸುವ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದರು. ನಮ್ಮ ನೆರೆ ರಾಷ್ಟ್ರ ಪಾಕಿಸ್ಥಾನವು ಸದಾ ಕುತಂತ್ರ ಬುದ್ಧಿಯನ್ನು ಅನುಸರಿಸುತ್ತಾ ಬಂದಿದೆ. ಸಾಮಾಜಿಕ ನ್ಯಾಯದ ಚೌಕಟ್ಟಿನಲ್ಲಿ ದೇಶದ ಆಡಳಿತವನ್ನು ನಡೆಸದೆ,ಉಗ್ರವಾದ ಮತ್ತು ಅರಾಜಕತೆಯ ಮೂಲಕ ಜನರ ಜೀವನದ ಜೊತೆ ಆಟವಾಡುತ್ತಾ ಕಾಲಹರಣ ಮಾಡುತ್ತಿದೆ.ಇದು ಸಲ್ಲದು,ಭಾರತದ…
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಕಾನೂನು ಕ್ರಮ ಹಾಗೂ ಹಲವು ರೈತರ ಜ್ವಲಂತ ಸಮಸ್ಯೆಗಳ ನಿವಾರಣಗೆ ಆಡಳಿತಾತ್ಮಕ ಕ್ರಮಕ್ಕೆ ಆಗ್ರಹಿಸಿ ಕೆಆರ್ಎಸ್ ಪಕ್ಷದಿಂದ ಜಿಲ್ಲಾ ಉಸ್ತುವಾರಿ ಹಾಗು ಗೃಹಸಚಿವರಾದ ಡಾ. ಜಿ. ಪರಮೇಶ್ವರ್ರವರಿಗೆ ಮನವಿ ಸಲ್ಲಿಸಲಾಯಿತು. ಪಟ್ಟಣದ ತೀನಂಶ್ರೀ ಭವನದಲ್ಲಿ ಡಾ. ಜಿ. ಪರಮೇಶ್ವರ್ರವರು ಪ್ರಗತಿಪರಿಶೀಲನಾ ಸಭೆಯನ್ನು ನಡೆಸಿದ ನಂತರ ಗೃಹಸಚಿವರಿಗೆ ಕೆಆರ್ಎಸ್ ಪಕ್ಷದ ಕಾರ್ಯಕರ್ತರು ತಮ್ಮ ಮನವಿ ಸಲ್ಲಿಸಿದರು. ತಾಲ್ಲೂಕಿನಲ್ಲಿ ರೈತರಿಗೆ ಸಸ್ಯಪೋಷಕಾಂಶಗಳ ಬಗ್ಗೆ ಒಂದು ದಿನದ ತರಬೇತಿ ನೀಡುವ ಬಗ್ಗೆ ಒಂದು ವರ್ಷದ ಹಿಂದೆ ನಿರ್ಣಯವಾಗಿದ್ದರೂ ಇನ್ನೂ ನೀಡಿಲ್ಲ ತಕ್ಷಣ ತರಬೇತಿ ಕಾರ್ಯಕ್ರಮ ಹಮ್ಮಿ ಕೊಳ್ಳಬೇಕು. ತಾಲ್ಲೂಕಿನಲ್ಲಿ ನಕಲಿ ದಾಖಲೆ, ನಕಲಿ ವಾರಸುದಾರರನ್ನು ಸೃಷ್ಠಿಸಿ ರೈತರ ಜಮೀನುಗಳನ್ನು ಅಕ್ರಮಖಾತೆ ಮಾಡುವ ದಂಧೆ ಕೋರರ ತಂಡ ಕಾರ್ಯಪ್ರವೃತ್ತರಾಗಿದ್ದಾರೆ. ಇಂತಹ ಪ್ರಕರಣಗಳು ದಿನೇ ದಿನೇ ಬೆಳಕಿಗೆ ಬಂದಿದ್ದರೂ ತಪ್ಪಿತಸ್ಥರಿಗೆ ಯಾವುದೇ ಶಿಕ್ಷೆಯಾಗಿಲ್ಲ, ಇವರೊಂದಿಗೆ ಕೈ ಜೋಡಿಸಿರುವ ಇಲಾಖೆ ಅಧಿಕಾರಿಗಳ ತಪ್ಪು ಸಾಬೀತಾದರೂ ಯಾವುದೇ ಕಾನೂನು ಕ್ರಮ ಜರುಗಿಸದ ಕಾರಣ ದಂಧೆಕೋರರ…
ತುಮಕೂರು: ನಗರದ ಟೂಡಾ ಕಚೇರಿ ಎದುರಿನ ಸಾಯಿಬಾಬಾ ನಗರದ ಶಿರಡಿ ಸಾಯಿಬಾಬಾ ಮಂದಿರದ ೧೪ನೇ ವಾರ್ಷಿಕೋತ್ಸವ ಸಮಾರಂಭ ಗುರುವಾರ ವೈಭವದಿಂದ ನೆರವೇರಿತು. ಇದರ ಅಂಗವಾಗಿ ವಿಶೇಷ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದರ ಅಂಗವಾಗಿ ದೇವಸ್ಥಾನವನ್ನು ವಿಶೇಷವಾಗಿ ಅಲಂಕರಿಸಿ ಸಿಂಗರಿಸಲಾಗಿತ್ತು. ಬೆಳಿಗ್ಗೆ ಶಿರಡಿ ಸಾಯಿಬಾಬಾ ಮೂರ್ತಿಗೆ ಕಾಕಡ ಆರತಿ, ಮಂಗಳ ಸ್ನಾನ ನಂತರ ಮಹಾ ಮಂಗಳಾರತಿ, ಮಧ್ಯಾಹ್ನ ಸಾಮೂಹಿಕ ವಿಷ್ಣು ಸಹಸ್ರನಾಮ, ಸಾಯಿಬಾಬಾ ಅಷ್ಟೋತ್ತರ ಪಠಣ, ಸಂಜೆ ಧೂಪ ಆರತಿ, ರಾತ್ರಿ ತೇಜಾರತಿ ಮಾಡಲಾಯಿತು. ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ಮಲ್ಲಿಕಾರ್ಜುನ್ ಮತ್ತು ತಂಡದವರಿAದ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮವಿತ್ತು. ಬೆಳಗಿನಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶಿರಡಿ ಸಾಯಿಬಾಬಾರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಶಿರಡಿ ಸಾಯಿಬಾಬಾ ಮಂದಿರ ಟ್ರಸ್ಟ್ ಅಧ್ಯಕ್ಷ ನಟರಾಜ ಶೆಟ್ಟರು, ಟ್ರಸ್ಟ್ನಿಂದ ನಿರಂತರವಾಗಿ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಬಡ…
ತುಮಕೂರು: ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲ ಮಂತ್ರ ಅಭಿವೃದ್ಧಿ ಕೆಲಸಗಳನ್ನು ಮಾಡಿಸುವುದು ಎಂದರೆ ನನಗೆ ಇನ್ನಿಲ್ಲದ ಪ್ರೀತಿ ಎಂದು ಹೇಳಿದ ಶಾಸಕರು ಅಭಿವೃದ್ಧಿ ವಿಚಾರದಲ್ಲಿ ಮತ್ತು ಗುಣಮಟ್ಟದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವಂತಹ ಸ್ವಭಾವ ನನ್ನದಲ್ಲ. ಹಿಡಿದ ಕೆಲಸವನ್ನು ನಿಗದಿತ ಕಾಲ ಮಿತಿಯಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆ ಗೊಳ್ಳುವವರೆಗೂ ಕೂಡ ಕಾಮಗಾರಿಯ ಹಿಂದೆ ಇರುತ್ತೇನೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ ತಿಳಿಸಿದರು. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸಬಾ ಹೋಬಳಿ ಬೆಳಗುಂಬ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದೂರು ಗ್ರಾಮದಲ್ಲಿ ಇಂದು ರೂ೧೨ ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಿಜೆಪಿ ಶಾಸಕರಾದ ಬಿ. ಸುರೇಶ್ ಗೌಡ ಹಾಗೂ ಜ್ಯೋತಿಗಣೇಶ್ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ತುಮಕೂರು ಗ್ರಾಮಾಂತರ ಹಾಗೂ ನಗರ ವಿಧಾನಸಭಾ ಕ್ಷೇತ್ರಗಳನ್ನು ಸಂಪರ್ಕಿಸುವ ದೇವರಾಯಪಟ್ಟಣದಿಂದ ಮಾರನಾಯಕನಪಾಳ್ಯ ಮಾರ್ಗವಾಗಿ ಕುಂದೂರು, ಕುಂದೂರು ಕ್ರಾಸ್ ಗೆ ಸಂಪರ್ಕಿಸುವ ರಸ್ತೆಯನ್ನು ೧೦ ಕೋಟಿಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು. ಇದರಲ್ಲಿ ನಗರ…
ತುಮಕೂರು: ಮೊದಲು ಮದ್ಯಪಾನ, ಧೂಮಪಾನ, ಇಂತವುಗಳನ್ನ ಬಿಡಿಸುವಂತಹ ಶಿಬಿರಗಳು ನಡೆಯುತ್ತಿದ್ದವು. ಇತ್ತೀಚೆಗೆ ಮೊಬೈ ಲ್ ಗೀಳಿನಿಂದ ಹೊರ ತರುವ ಶಿಬಿರಗಳು ಮುಂಬೈ, ಬೆಂಗಳೂರಿನಲ್ಲಿ ನಡೆಯುತ್ತಿವೆ. ಅಂತಹ ಶಿಬಿರಗಳಲ್ಲಿ ಮಕ್ಕಳು ಅದರಿಂದ ಗುಣವಾಗುತ್ತಾರೋ ಇಲ್ಲವೋ ತಿಳಿದಿಲ್ಲ ಆ ದರೆ ಇಂತಹ ಬಣ್ಣದ ಶಿಬಿರಗಳಲ್ಲಿ ಖಂಡಿತವಾಗಿ ಆ ಗೀಳಿನಿಂದ ಹೊರಗೆ ಬರುತ್ತಾರೆ. ಆದ್ದರಿಂದ ಈ ರೀತಿಯ ಶಿಬಿರಗಳ ಪ್ರಯೋಜನ ಪಡೆದುಕೊಂಡ ಪೋಷಕರೇ ಭಾಗ್ಯವಂತರು ಎಂದು ಕೇರಿಂಗ್ ವಿಥ್ ಕರ್ಸ್ ಸಂಸ್ಥಾಪಕರಾದ ಡಾ. ಪ್ರಸನ್ನ ಕುಮಾರ್ ಅಭಿಪ್ರಾಯಪಟ್ಟರು. ಇವರು ತುಮಕೂರು ತಾಲ್ಲೂಕಿನ ಮೆಳೇಹ ಳ್ಳಿಯ ವಿ. ರಾಮಮೂರ್ತಿ ರಂಗಸ್ಥಳದಲ್ಲಿ ಶನಿವಾ ರ ಸಂಜೆ ಡಮರುಗ ರಂಗ ತಂಡದ ಒಂದು ತಿಂಗಳ ಚಿಣ್ಣರ ಬಣ್ಣದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ರಾಷ್ಟಿçÃಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಮಧುಸೂದನ್ ರಾವ್ ಮಾತನಾಡಿ, ಪುರಾ ಣವೊಂದರ ಎಳೆ ಇಟ್ಟುಕೊಂಡು ವರ್ತಮಾನದ ಸಮಸ್ಯೆಗಳನ್ನ ಮಕ್ಕಳಿಗೆ ಪರಿಚಯಿಸುತ್ತ, ಮಕ್ಕ ಳು ಸ್ಪಷ್ಟ, ನಿಖರ ಮತ್ತು ನಿರರ್ಗಳವಾಗಿ ಮಾತ ನಾಡುವಂತೆ ಮಾಡಲು ಶಾಲೆಯಲ್ಲಿ ಶಿಕ್ಷಕರು…
ಚಿಕ್ಕನಾಯಕನಹಳ್ಳಿ: ನನ್ನ ವಿಧಾನ ಸಭಾ ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ದಿ ಪಡಿಸುವುದರೊಂದಿಗೆ ಇಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಅವರ ಸ್ವಂತ ಜೀವನ ರೂಪಿಸಿಕೊಂಡರೆ ಅದೇ ನನಗೆ ಹಾಗೂ ಈ ಕ್ಷೇತ್ರಕ್ಕೆ ಮತ್ತು ಪೋಷಕರಿಗೆ ನೀಡುವ ಗೌರವ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು. ಪಟ್ಟಣದ ತೀನಂಶ್ರೀ ಭವನದಲ್ಲಿ ಸೋಮವಾರ ಎಸ್.ಬಿ.ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ನಮ್ಮಗೆ ಪ್ರೇರಣೆ ನಮ್ಮ ಮೇಷ್ಟ್ರು ಎಂಬ ವಿಶೇಷ ಶಿರ್ಷಿಕೆಯಡಿಯಲ್ಲಿ ತಾಲ್ಲೂಕಿನ ೪೪ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿಯಲ್ಲಿ ೬೨೫ಕ್ಕೆ ೬೦೦ಕ್ಕು ಹೆಚ್ಚು ಅಧಿಕ ಅಂಕಗಳನ್ನು ಪಡೆದಿದ್ದು ಇವರ ಸಾಧನೆಗೆ ಪ್ರೇರಣಾದಾಯಿಗಳಾದ ಶಿಕ್ಷಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ತಾಲ್ಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ,ಅನುದಾನರಹಿತ ಶಾಲೆಯ ಎಲ್ಲಾ ಶಿಕ್ಷಕರನ್ನೊಳಗೊಂಡ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಬಿಇಒ ನೇತೃತ್ವದಲ್ಲಿ ಉತ್ತಮವಾದ ಪ್ರೇರಣಾ ಶಿಬಿರಗಳೊಂದಿಗೆ ಮಕ್ಕಳ ಹಾಗೂ ಪೋಷಕರೊಂದಿಗೆ ಉತ್ತಮ ಬಾಂದ್ಯವನ್ನು ಇಟ್ಟುಕೊಂಡು ಈ ಬಾರಿ ನಮ್ಮ ಕ್ಷೇತ್ರದಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ೬೦೦ಕ್ಕು ಅಧಿಕ ಅಂಕಗಳನ್ನು…
ತುಮಕೂರು: ಗ್ಯಾರಂಟಿ ಯೋಜನೆಗಳ ಮೂಲಕ ಇದೂವರೆ ಸುಮಾರು ೬೦ ಸಾವಿರ ಕೋಟಿ ರೂ.ಗಳಿಂದ ರಾಜ್ಯದ ಬಡ ಕುಟುಂಬಗಳಿಗೆ ಅನುಕೂಲವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಸಹಾಯವಾಗುತ್ತದೆ ಎಂದು ಹೇಳಿದ ಪೌರಾಡಳಿತ ಮತ್ತು ವಕ್ಫ್ ಖಾತೆ ಸಚಿವ ರಹೀಮ್ ಖಾನ್, ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರಿಗೆ ತಿರುಗೇಟು ನೀಡಿದರು. ಬುಧವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವರು, ವಿರೋಧಿಗಳು ಏನೇ ಹೇಳಿಕೊಳ್ಳಲಿ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ಹಲವು ರೀತಿಯ ಸಹಾಯವಾಗಿದೆ. ಕುಟುಂಬದ ವಿವಿಧ ಖರ್ಚು, ಔಷಧಿ ಮತ್ತಿತರ ವೆಚ್ಚಕ್ಕೆ ಗೃಹಲಕ್ಷಿö್ಮ ಯೋಜನೆ ಹಣ ಉಪಯೋಗವಾಗುತ್ತಿದೆ. ಉಚಿತ ವಿದ್ಯುತ್ ಬಡವರ ಮನೆ ಬೆಳಗಿದೆ. ಶಕ್ತಿ ಯೋಜನೆಯಡಿ ಹೆಣ್ಣುಮಕ್ಕಳಿಗೆ ಉಚಿತ ಪ್ರಯಾಣ ಇವೆಲ್ಲವೂ ಬಡವರಿಗೆ ಅನುಕೂಲವಾಗುವ ಕಾರ್ಯಕ್ರಮ ಎಂದರು. ಸರ್ಕಾರ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಮುಖ್ಯವಾಗಿ ರಾಜ್ಯದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣಕ್ಕೆ ಒತ್ತು ನಿಡಲಾಗಿದೆ. ಅಶಾಂತಿ ಉಂಟುಮಾಡುವ ಪ್ರಯತ್ನಗಳ ವಿರುದ್ಧ ಸರ್ಕಾರ ತಕ್ಷಣ…
ಸಿರಾ: ಆರೋಪಿ ಹರೀಶ್ ರವರು ನೊಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಶಿರಾ ಟೌನ್ ಪೊಲೀಸ್ ಠಾಣೆ ಮೋ. ನಂ ೪೩/೨೦೨೩ ಕಲಂ- ಇಲಂ:೩೭೬(೨)(ಟಿ) ಐಪಿಸಿ ಜೊತೆಗೆ ಕಲಂ-೬ Poಛಿso ಂಛಿಣ-೨೦೧೨ ಪ್ರಕರಣವನ್ನು, ಪ್ರಕಾಶ್.ಕೆ ಪೊಲೀಸ್ ಇನ್ಸ್ಪೆಕ್ಟರ್ ಶಿರಾ ನಗರ ಪೊಲೀಸ್ ಠಾಣೆಯ ರವರು ತನಿಖೆ ಕೈಗೊಂಡು ಪ್ರಕರಣದ ಆರೋಪಿಯಾದ ಹರೀಶ್.ಇ ಬಿನ್ ಈರಣ್ಣ, ೨೨ ವರ್ಷ, ಶಿರಾ ತಾಲ್ಲೂಕು ರವರನ್ನು ದಸ್ತಗಿರಿ ಮಾಡಿ ತನಿಖೆಯನ್ನು ಪೂರ್ಣಗೊಳಿಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣವು ತುಮಕೂರು ಜಿಲ್ಲಾ ಈಖಿSಅ-೧ ನ್ಯಾಯಾಲಯದಲ್ಲಿ ಸ್ಪೇಷಲ್ ಸಿ.ಸಿ ನಂಬರ್-೨೯೩/೨೦೨೩ ರಲ್ಲಿ ವಿಚಾರಣೆ ನಡೆದು ಆರೋಪಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ದಿನಾಂಕ-೦೮-೦೫-೨೦೨೫ ರಂದು ಪ್ರಕರಣದ ಆರೋಪಿ ಹರೀಶ್ ರವರಿಗೆ ೪೦ ವರ್ಷ ಜೈಲು ಶಿಕ್ಷೆ ಹಾಗೂ ೨ ಲಕ್ಷದ ೫೦ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿರುತ್ತದೆ. ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರು ಆಶಾ.ಕೆ.ಎಸ್ ರವರು ವಾದ ಮಂಡಿಸಿರುತ್ತಾರೆ.…
ಚಿಕ್ಕನಾಯಕನಹಳ್ಳಿ :ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಹಾಗೂ ಗಣಿ ಬಾದಿತ ಪ್ರದೇಶಾಭಿವೃದ್ದಿ ಹಣದಲ್ಲಿ ತಾಲ್ಲೂಕಿಗೆ ಹಂಚಿಕೆಯಾಗಿರುವ ಹಣವನ್ನು ಸಮರ್ಪಕವಾಗಿ ಬಳಸಿ ಅಭಿವೃದ್ದಿ ಪಡಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಹಾಗೂ ಗೃಹ ಮಂತ್ತಿ ಜಿ.ಪರಮೇಶ್ವರ್ ತಿಳಿಸಿದರು. ಪಟ್ಟಣದ ತೀನಂಶ್ರೀ ಭವನದಲ್ಲಿ ಮಂಗಳವಾರ ನಡೆದ ತಾಲ್ಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಮಾತನಾಡಿದ ಅವರು ಕೃಷಿ, ತೋಟಗಾರಿಕೆ ರೇಷ್ಮೆ , ಪಶು ಸಂಗೋಪನೆ ಇಲಾಖೆಗಳು ಸೇರಿದಂತೆ ಶಿಕ್ಷಣ ಇಲಾಖೆಗಳು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡಲು ಸೂಚನೆ ನೀಡಿದ ಅವರು ಕೃಷಿ ಇಲಾಖೆಯಿಂದ ರೈತರಿಗೆ ಸಿಗಬೇಕಾಗಿರುವಂತಹ ಬಿತ್ತನೆ ಬೀಜ, ರಸಗೊಬ್ಬರದ ಸಮಸ್ಯೆ ಬಾರದಂತೆ ಕ್ರಮವಹಿಸವಂತೆ ತಿಳಿಸಿದರು, ಆಹಾರ ಇಲಾಖೆಯಿಂದ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುವುದನ್ನು ತಪ್ಪಿಸಲು ಕ್ರಮಕೈಗೊಳ್ಳುವಂತೆ ತಿಳಿಸಿದರು, ಈ ತಾಲ್ಲೂಕಿಗೆ ಭದ್ರಮೇಲ್ದಂಡೆ, ಎತ್ತಿನಹೊಳೆ, ಹೇಮಾವತಿ ಮೂರು ನೀರಾವರಿ ಯೋಜನೆಗಳಿದ್ದು ಅವುಗಳು ಸಮಪರ್ಕವಾಗಿ ಆಗಬೇಕಾಗಿದ್ದು ಈ…