ತುಮಕೂರು : ತಮ್ಮ ಸೇವಾ ಅವಧಿಯಲ್ಲಿ ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಹೊಂದಿರುವ ಆರೋಪದ ಮೇಲೆ ತುಮಕೂರಿನ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿವೈಎಸ್ಪಿ ಟಿ.ಆರ್.ಕೃಷ್ಣಮೂರ್ತಿ ಅವರಿಗೆ ಗೌರವಾನ್ವಿತ 7ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಧೀಶರಾದ ಎಸ್.ಸುಧೀಂದ್ರನಾಥ್ ಅವರು ಮಾರ್ಚ್ 20ರಂದು 4 ವರ್ಷ ಸಾದಾ ಸಜೆ ಮತ್ತು 17 ಲಕ್ಷ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಆರೋಪಿ ಡಿವೈಎಸ್ಪಿ ಟಿ.ಆರ್.ಕೃಷ್ಣಮೂರ್ತಿ ಅವರು ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಯನ್ನು ಹೊಂದಿರುವ ಬಗ್ಗೆ 2008ರಲ್ಲಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ತನಿಖೆ ಕೈಗೊಂಡು ಆರೋಪಿಯ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಲಾಗಿತ್ತು. ಆರೋಪಿ ಕೃಷ್ಣಮೂರ್ತಿ ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಹೊಂದಿರುವುದು ದೀರ್ಘಕಾಲದ ವಿಚಾರಣೆಯಿಂದ ಸಾಬೀತಾಗಿರುವುದರಿಂದ ಆರೋಪಿತನಿಗೆ ಕಲಂ 248(2) ಸಿಆರ್ಪಿಸಿ ಅಡಿ 4 ವರ್ಷಗಳ ಸಾದಾ ಸಜೆ ಮತ್ತು 17 ಲಕ್ಷ ರೂ.ಗಳ…
Author: News Desk Benkiyabale
ತುಮಕೂರು : ಮಕ್ಕಳ ಸಾಧನೆಗೆ ಶಿಕ್ಷಣ ಮತ್ತು ಪೌಷ್ಠಿಕತೆ ಅತ್ಯಾವಶ್ಯಕವೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತುಮಕೂರು ನಗರ ಮತ್ತು ಗ್ರಾಮಾಂತರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸಂಯುಕ್ತಾಶ್ರದಲ್ಲಿ ನಗರದ ಜಿಲ್ಲಾ ಬಾಲ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ್ ಯೋಜನೆಯ “ಪೋಷಣ್ ಪಕ್ವಾಡ್’’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಮಗು ಮತ್ತು ತಾಯಿ ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿರಬೇಕೆಂದರೆ ಪೌಷ್ಠಿಕ ಆಹಾರ ಬಹಳ ಮುಖ್ಯ. ಪೌಷ್ಠಿಕ ಆಹಾರದ ಕೊರತೆಯಿಂದ ಮಗುವಿನ ಬುದ್ಧಿ ಬೆಳವಣಿಗೆಯಲ್ಲಿ ಹಿನ್ನೆಡೆಯಾಗುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರವು ತಾಯಿ ಹಾಗೂ ಮಗುವಿನಲ್ಲಿ ಪೌಷ್ಠಿಕತೆ ಹೆಚ್ಚಿಸಲು ಅಂಗನವಾಡಿಗಳ ಮೂಲಕ ಪೌಷ್ಠಿಕ ಆಹಾರವನ್ನು ವಿತರಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯ ಬಡ ತಾಯಂದಿರು ಮತ್ತು ಮಕ್ಕಳಿಗೆ ಈ ಯೋಜನೆಯು…
ತುಮಕೂರು : ಹೆಚ್ಚು ಅನುದಾನ ಬಿಡುಗಡೆ ಮಾಡುವ ಮೂಲಕ ರಾಜ್ಯದ ಸಮಗ್ರ ನೀರಾವರಿ ಅಭಿವೃದ್ಧಿಗೆ ಒತ್ತು ನೀಡಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ತಿಪಟೂರು ಪಟ್ಟಣದಲ್ಲಿಂದು ಮಿನಿ ವಿಧಾನಸೌಧ, ನಗರ ಸಭೆ ಕಚೇರಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಕಟ್ಟಡಗಳ ಉದ್ಘಾಟನೆ ನಂತರ ಸರ್ಕಾರಿ ಬಾಲಕರ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಷ್ಟೇ ಕಷ್ಟವಾದರೂ ರಾಜ್ಯದ ಸಮಗ್ರ ನೀರಾವರಿ ಯೋಜನೆಗೆ ಹೆಚ್ಚು ಅನುದಾನ ಬಿಡುಗಡೆ ಮಾಡಿ, ಕೇಂದ್ರ ಸರಕಾರದ ಸಹಕಾರ ಪಡೆದು ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಕೆರೆ-ಕಟ್ಟೆ ತುಂಬಿಸಿ ಅಂತರ್ಜಲ ಮಟ್ಟದ ಕುಸಿತ ತಪ್ಪಿಸಲಾಗುವುದು ಎಂದರಲ್ಲದೆ ಕಳೆದ ಹತ್ತಾರು ವರ್ಷಗಳಿಗಿಂತಲೂ ರೈತರು ಈ ಬಾರಿ ದಾಖಲೆ ಪ್ರಮಾಣದ ಬೆಳೆ ಬೆಳೆದಿದ್ದು, ಹಗಲು-ರಾತ್ರಿ ದುಡಿಯುವ ಅನ್ನದಾತರಿಗೆ ನಾಡಿನ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ತಿಪಟೂರಿನಲ್ಲಿ ಆಗಬಹುದಾದ ಕೆಲಸಗಳನ್ನು ಹಂತ…
ತುಮಕೂರು : ಮಧುಗಿರಿ ತಾಲ್ಲೂಕಿನಲ್ಲಿ ಜಿಲ್ಲಾ ಪಂಚಾಯತಿ ಕ್ಷೇತ್ರಗಳನ್ನು ಅವೈಜ್ಞಾನಿಕವಾಗಿ ಮರುವಿಗಂಡಣೆ ಮಾಡಿದ್ದು, ಹೋಬಳಿ ಕೇಂದ್ರವಾಗಿರುವ ದೊಡ್ಡೇರಿ ಜಿಲ್ಲಾ ಪಂಚಾಯತಿ ಕ್ಷೇತ್ರವನ್ನು ಉಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಜಿ.ಪಂ. ಸದಸ್ಯ ಚೌಡಪ್ಪ ಅವರು, ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ಬಂದಾಗಿನಿಂದಲೂ ದೊಡ್ಡೇರಿ ಕ್ಷೇತ್ರ ಅಸ್ತಿತ್ವದಲ್ಲಿ ಇದೆ, ಹೋಬಳಿ ಕೇಂದ್ರ ಹಾಗೂ ಕಂದಾಯ ಗ್ರಾಮವನ್ನು ಒಳಗೊಂಡಿರುವ ದೊಡ್ಡೇರಿ ಕ್ಷೇತ್ರವನ್ನು ಅವೈಜ್ಞಾನಿಕವಾಗಿ ಚುನಾವಣಾ ಆಯೋಗ ಬದಲಿಸಲು ಮುಂದಾಗಿದೆ ಎಂದು ಆರೋಪಿಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡೇರಿ ಕ್ಷೇತ್ರವನ್ನು ಬದಲಿಸಿ ಬೇರೆ ಹೋಬಳಿಗಳ ಗ್ರಾಮಗಳನ್ನು ಒಳಗೊಂಡಂತೆ ಬೇರೆ ಕ್ಷೇತ್ರವನ್ನು ಮಾಡಲು ಮುಂದಾಗಿದೆ, ದೊಡ್ಡೇರಿ ಜಿಲ್ಲಾ ಪಂಚಾಯತಿ ಕ್ಷೇತ್ರಕ್ಕೆ ಮೂವತ್ತು ಕೀಮಿ ದೂರದ ಗ್ರಾಮಗಳನ್ನು ಸೇರಿಸಿ, ಹೊಸ ಕ್ಷೇತ್ರವನ್ನು ಸೃಜಿಸಲು ಮುಂದಾಗಿದ್ದು, ಈ ಹಿಂದೆ ಎರಡು ಬಾರಿ ಕ್ಷೇತ್ರ ಪುನರ್ ವಿಗಂಡಣೆಯಾದಾಗಲೂ ದೊಡ್ಡೇರಿ ಕ್ಷೇತ್ರವನ್ನು ಉಳಿಸಿ, ಪುನರ್ ವಿಗಂಡಸಿಲಾಗಿತ್ತು. ಈಗ ಅವೈಜ್ಞಾನಿಕವಾಗಿರುವ ಮರುವಿಗಂಡಣೆಯನ್ನು ಕೈಬಿಡುವಂತೆ…
ತುಮಕೂರು: ರಾಜ್ಯದಲ್ಲಿ ಕರೋನ ಸೋಂಕು ಕಳೆದ ಕೆಲವು ದಿನಗಳಿಂದ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಸೋಂಕನ್ನು ನಿಯಂತ್ರಣದಲ್ಲಿಡಲು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವ, ಸಾಮಾಜಿಕ ಅಂತರ(6 ಅಡಿ) ಕಾಪಾಡಿಕೊಳ್ಳುವ, ಪದೇ ಪದೇ ಸಾಬೂನಿನಿಂದ ಕೈ ಸ್ವಚ್ಛ ಮಾಡಿಕೊಳ್ಳುವ ಮೂಲಕ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ಮನವಿ ಮಾಡಿದ್ದಾರೆ. ಸಾರ್ವಜನಿಕರು ಅಗತ್ಯವಿದ್ದಲ್ಲಿ ಮಾತ್ರ ಹೊರಗೆ ಹೋಗಬೇಕು. ಜನಸಂದಣಿ ಪ್ರದೇಶಗಳಿಗೆ ಅನಗತ್ಯವಾಗಿ ಹೋಗಬಾರದು. ಸಭೆ/ಸಮಾರಂಭ, ಧಾರ್ಮಿಕ ಸಮಾರಂಭಗಳಲ್ಲಿ ಹೆಚ್ಚಾಗಿ ಜನ ಸೇರಬಾರದು. ಹೋಗಲೇಬೇಕಾದ ಸಂದರ್ಭದಲ್ಲಿ ಕಡ್ಡಾಯವಾಗಿ ಕೋವಿಡ್-19ರ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ವಿಶೇಷವಾಗಿ ದೀರ್ಘಾವಧಿ ಖಾಯಿಲೆಯಿಂದ ಬಳಲುತ್ತಿರುವವರು, ಬಿ.ಪಿ./ಸಕ್ಕರೆ ಖಾಯಿಲೆ ಉಳ್ಳವರು ಕಡ್ಡಾಯವಾಗಿ ಮನೆಗಳಲ್ಲೆ(ತುರ್ತು ಸಂದರ್ಭ ಹೊರತುಪಡಿಸಿ) ಉಳಿಯಬೇಕು. ಎಲ್ಲಾ 60 ವರ್ಷ ವಯೋಮಾನದವರು ಮತ್ತು 45 ವರ್ಷ ತುಂಬಿದ ದೀರ್ಘಾವಧಿ ಖಾಯಿಲೆ ಉಳ್ಳವರು ಕೋವಿಡ್ ಲಸಿಕೆಯನ್ನು ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ತಪ್ಪದೇ ಪಡೆಯಬೇಕು. ಅಲ್ಲದೆ ಸಾರ್ವಜನಿಕ ಪ್ರದೇಶಗಳಲ್ಲಿ…
ತುಮಕೂರು : ಡಿಜಿಟಲ್ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದು ಇನ್ಪೋಸಿಸ್ ಧ್ಯೇಯವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿ ಇನ್ಪೋಸಿಸ್ ಹೆಡ್ ಸ್ಟಾರ್ಟ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಇನ್ಪೋಸಿಸ್ ಹೆಡ್ ಸ್ಟಾರ್ಟ್ ಪ್ರೋಗ್ರಾಂ ಮ್ಯಾನೇಜರ್ ಕಿರಣ್ ತಿಳಿಸಿದರು. ನಗರದ ರೈಲ್ವೇ ಸ್ಟೇಷನ್ ರಸ್ತೆಯ ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಎಚ್.ಡಿ.ಎಸ್.ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಇನ್ಪೋಸಿಸ್ ಹೆಡ್ ಸ್ಟಾರ್ಟ್ ವಿದ್ಯಾನಿಕೇತನ’ ಎಂಬ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆ ಹಾಗೂ ಬದಲಾವಣೆ ತರುವ ಕಲ್ಪನೆಯೇ ಇನ್ಪೋಸಿಸ್ ಸಂಸ್ಥೆಯ ಹೆಡ್ ಸ್ಟಾರ್ಟ್ ಕಾರ್ಯಕ್ರಮವಾಗಿದೆ. ರಾಜ್ಯದಲ್ಲಿ ದ್ವಿತೀಯ ಹಾಗೂ ತುಮಕೂರು ಜಿಲ್ಲೆಯಲ್ಲಿ ಪ್ರಥಮವಾಗಿ ಈ ಹೆಡ್ಸ್ಮಾರ್ಟ್ ಕಾರ್ಯಕ್ರಮವನ್ನು ವಿದ್ಯಾನಿಕೇತನ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು. ಹೆಡ್ ಸ್ಟಾರ್ಟ್ ಕಾರ್ಯಕ್ರಮದ ಮೂಲಕ ಮುಂದಿನ ಹತ್ತು ವರ್ಷಗಳಲ್ಲಿ ಒಂದು ಕೋಟಿ…
ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯ್ತಿ ಚುನಾವಣೆಯ ನಾಮಪತ್ರ ಪರಿಶೀಲನೆ ವೇಳೆ ಚುನಾವಣಾಧಿಕಾರಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಪ್ರಸಂಗ ನಡೆದಿದೆ. 3 ನೇ ವಾರ್ಡ್ನ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಂ.ಗಣೇಶ್ ಹಾಗೂ 5 ವಾರ್ಡ್ನಿಂದ ಪಕ್ಷೇತರ ಅಭ್ಯರ್ಥಿ ಪುಟ್ಟಮ್ಮ ಅವರು ಕರ್ನಾಟಕ ಪಂಚಾಯಿತಿ ರಾಜ್ ಅಧಿನಿಯಮದಡಿ ಪ್ರಕರಣ ದಾಖಲಾಗಿರುವ ಕಾರಣ ನಾಮಪತ್ರಗಳನ್ನು ತಿರಸ್ಕೃತಗೊಳಿಸುವಂತೆ ಜಿಲ್ಲಾಧಿಕಾರಿಗಳು ಇ ಮೇಲೆ ಸಂದೇಶ ಕಳುಹಿಸಿದ್ದು ಈ ಮಾತಿನ ಚಕಮಕಿಗೆ ಕಾರಣವಾಗಿದೆ. ಜಿಲ್ಲಾಧಿಕಾರಿಗಳ ಪತ್ರದಂತೆ ಇಬ್ಬರ ನಾಮಪತ್ರವನ್ನು ತಿರಸ್ಕರಿಸುವುದಾಗಿ ಚುನಾವಣಾಧಿಕಾರಿ ಹೊನ್ನಪ್ಪ ಅವರು ಇವರಿಬ್ಬರಿಗೆ ತಿಳಿಸಿದರು. ಚುನಾಣಾಧಿಕಾರಿಗಳ ಈ ಅನಿರಿಕ್ಷಿತ ನಡೆಯಿಂದ ವಿಚಲಿತರಾದ ಗಣೇಶ್ ಮತ್ತು ಪುಟ್ಟಮ್ಮ ತಮ್ಮ ಬೆಂಬಲಿಗರೊಂದಿಗೆ ಪಪಂ ಕಛೇರಿಗೆ ಆಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳಿಂದ ಬಂದಿರುವ ಪತ್ರದಲ್ಲಿ ಸಹಿ ಮತ್ತು ಮೊಹರಿಲ್ಲ. ಅಲ್ಲದೆ ಈ ಪ್ರಕರಣದ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು ತೀರ್ಪು ಬರುವವರೆವಿಗೂ ನಾವು ಅಪರಾಧಿಗಳಲ್ಲ,…
ತುಮಕೂರು : ಪಾವಗಡದ ಶ್ರೀರಾಮಕೃಷ್ಣ ಸೇವಾ ಆಶ್ರಮದವತಿಯಿಂದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ನಾಲ್ಕು ತಾಲೂಕುಗಳ 7 ರಿಂದ 10ನೇ ತರಗತಿಯ ಮಕ್ಕಳಿಗಾಗಿ ದೂರ ತರಂಗ ಶಿಕ್ಷಣ ಹಾಗೂ ಕೌಶಲ್ಯ ನೈಪುಣ್ಯ ಯೋಜನೆ ಗಳನ್ನು ಆರಂಭಿಸಲಾಗಿದೆ ಎಂದು ಸ್ವಾಮೀ ಜಪಾನಂದ ಜೀ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮ, ಸ್ವಾಮೀ ವಿವೇಕಾನಂದ ಗ್ರಾಮೀಣ ಆರೋಗ್ಯ ಕೇಂದ್ರ ಹಾಗೂ ಶ್ರೀಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದವತಿಯಿಂದ ಕೇಂದ್ರದ ಸುತ್ತಮುತ್ತಲ 500 ಹಳ್ಳಿಗಳ ಆರೋಗ್ಯ,ಅಕ್ಷರ,ಆಸರೆ ಮತ್ತು ಆಧ್ಯಾತ್ಮಕ್ಕೆ ಸಂಬಂಧಿಸಿದಂತೆ 27 ಯೋಜನೆಗಳನ್ನು ಹಮ್ಮಿ ಕೊಂಡಿದ್ದು, ಆನ್ಲೈನ್ ತರಗತಿಗಳಿಂದ ವಂಚಿತರಾಗುತ್ತಿದ್ದ ಗಡಿನಾಡಿನ ಮಕ್ಕಳನ್ನು ಗಮನದಲ್ಲಿಸಿಕೊಂಡು ದೂರ ತರಂಗ ಶಿಕ್ಷಣ ಮತ್ತು ಕೌಶಲ್ಯ ನೈಪುಣ್ಯ ಯೋಜನೆ ಜಾರಿಗೆ ತರಲಾಗಿದೆ ಎಂದರು. 30 ವರ್ಷಗಳ ನಿರಂತರ ಸೇವೆಯ ಪಕ್ಷಿನೋಟ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಂಸ್ಥೆಯ ಬಗ್ಗೆ ಬರೆದ ಮೆಚ್ಚುಗೆಯ ಪತ್ರವನ್ನು ಕುರಿತು…
ತುಮಕೂರು: ತುಮಕೂರು ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷರ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಎಲ್ಲಾ ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾದರು. ಲೆಕ್ಕಪತ್ರಗಳ ಸ್ಥಾಯಿ ಸಮಿತಿ ಹಾಗೂ ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾದರೆ, ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಫೀಲುಗಳ ಸ್ಥಾಯಿ ಸಮಿತಿಯು ಬಿಜೆಪಿ ಮತ್ತು ಪಟ್ಟಣ ಯೋಜನೆ ಮತ್ತು ಸುಧಾರಣೆಗಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಜೆಡಿಎಸ್ ಪಾಲಾಯಿತು. ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಫೀಲುಗಳ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ-1ನೇ ವಾರ್ಡ್ ನಳಿನಾ ಇಂದ್ರಕುಮಾರ್, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ 8ನೇ ವಾರ್ಡ್ನ ಸೈಯದ್ ನಯಾಜ್, ಪಟ್ಟಣ ಯೋಜನೆ ಮತ್ತು ಸುಧಾರಣೆಗಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ 28 ನೇ ವಾರ್ಡ್ನ ಧರಣೇಂದ್ರ ಕುಮಾರ್(ರಾಜು), ಲೆಕ್ಕಪತ್ರಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ 18ನೇ ಮುಜಿದಾ…
ಮಧುಗಿರಿ: 2021-22ನೇ ಸಾಲಿನ ಆಯವ್ಯಯ ( ಬಜೆಟ್ ) ಕುರಿತು ಮೇಲ್ಮನೆಯಲ್ಲಿ ಚರ್ಚಿಸಲು ಸಾರ್ವಜನಿಕರಿಂದ ಸಲಹೆ ಸೂಚನೆ ನೀಡುವಂತೆ ವಿಧಾನ ಪರಿಷತ್ ಸದಸ್ಯ ಎಂ.ಚಿದಾನಂದ ಗೌಡ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ. 2021-22ನೇ ಸಾಲಿನ ಆಯವ್ಯಯ ( ಬಜೆಟ್ ) ಮೇಲಿನ ಚರ್ಚೆಯು ಮೇಲ್ಮನೆಯಲ್ಲಿ ನಡೆಯುತ್ತಿದ್ದು ಶಿರಾ ತಾಲ್ಲೂಕು ಸೇರಿದಂತೆ ತುಮಕೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಶಾಸಕನಾದ ನಾನು , ನನ್ನ ಕ್ಷೇತ್ರದ ಕುಂದು ಕೊರತೆಗಳನ್ನು ಗುರುತಿಸಿ , ಸರ್ಕಾರದ ಗಮನಕ್ಕೆ ತರುವುದು ನನ್ನ ಜವಾಬ್ದಾರಿ , ಆದ್ದರಿಂದ ಈ ಭಾಗದ ಶಿಕ್ಷಣ , ಕೃಷಿ , ಆರೋಗ್ಯ , ನಿರುದ್ಯೋಗ , ನೀರಾವರಿ , ಪಡಿತರ ಚೀಟಿ , ತೋಟಗಾರಿಕೆ , ವಸತಿ , ಪಶುಸಂಗೋಪನೆ , ಅರಣ್ಯ ಹಾಗೂ ಕಛೇರಿಗಳಲ್ಲಿನ ಭ್ರಷ್ಟಾಗೆಚಾರ , ಅಧಿಕಾರಿಗಳ ಬೇಜವಾಬ್ದಾರಿತನ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳ ಬಗ್ಗೆ ಸರ್ಕಾರದ…