Author: News Desk Benkiyabale

ತುಮಕೂರು: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಸದುಪಯೋಗವನ್ನು ಪಡೆಯಲು ಪ್ರತಿಯೊಬ್ಬ ನಾಗರೀಕನೂ ಆಯುಷ್ಮಾನ್ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಶಾಸಕ ಜಿ.ಬಿ. ಜ್ಯೋತಿ ಗಣೇಶ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನಗರದ ಸರ್ಕಾರಿ ಎಂಪ್ರೆಸ್ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ “ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಹಾಗೂ ಆರೋಗ್ಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಆಯುಷ್ಮಾನ್-ಭಾರತ್ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಪ್ರತಿಯೊಬ್ಬ ನಾಗರೀಕನೂ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಅನುಕೂಲ ಪಡೆದುಕೊಳ್ಳಿ ಎಂದರು. ಇಂದು ಡಿಜಿಟಲೀಕರಣ ಹೆಚ್ಚಾಗಿರುವ ಕಾರಣ ಎಲ್ಲಾ ನಾಗರೀಕರಿಗೂ ಡಿಜಿಟಲ್ ಆರೋಗ್ಯ ಗುರುತಿನ ಐಡಿ ಕಾರ್ಡ್ ಮಾಡಿಕೊಡಲಾಗುತ್ತದೆ. ಈ ಕಾರ್ಯಕ್ರಮವು ದೇಶಾದ್ಯಂತ ಚಾಲನೆಯಲ್ಲಿದೆ. ಸರ್ಕಾರದ ಈ ಯೋಜನೆಯು ಉತ್ತಮ ರೀತಿಯಲ್ಲಿ ಬಳಕೆಯಾಗುವ ಮೂಲಕ ಆಯುಷ್ಮಾನ್ ಕಾರ್ಡ್ ಎಲ್ಲರಿಗೂ…

Read More

ತುಮಕೂರು: ನಗರದ ಬಿ.ಹೆಚ್.ರಸ್ತೆಯ ರಸ್ತೆ ವಿಭಜಕದಲ್ಲಿ ಹಾಕಿದ್ದ ಬೇವಿನ ಮರಗಳನ್ನು ದುಷ್ಕಮಿಗಳು ಕಡಿದಿರುವುದಕ್ಕೂ, ಎಡಿ ಸಿಟಿ ಔಟ್‍ಡೋರ್ ಮೀಡಿಯಾ ಸಲ್ಯೂಷನ್ ಕಂಪನಿಗೂ ಯಾವುದೇ ಸಂಬಂಧವಿಲ್ಲ.ಸಂಸ್ಥೆಯ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದ ಕೆಲವರು ಇಂತಹ ಕೃತ್ಯ ನಡೆಸಿದ್ದು, ನಾವುಗಳು ಸಹ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವುದಾಗಿ ಎಡಿ ಸಿಟಿ ಔಟ್‍ಡೋರ್ ಮೀಡಿಯಾ ಸಲ್ಯೂಷನ್ ಕಂಪನಿಯ ರಂಗನಾಥ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಕಳೆದ 10-15 ವರ್ಷಗಳಿಂದ ರಾಜ್ಯಾಧ್ಯಂತ ಜಾಹಿರಾತು ಫಲಕ ಅಳವಡಿಸುವ ಕೆಲಸವನ್ನು ಸಂಸ್ಥೆ ಮಾಡಿಕೊಂಡು ಬಂದಿದೆ. 2015-16ರಲ್ಲಿ ತುಮಕೂರು ನಗರಪಾಲಿಕೆಯ ವ್ಯಾಪ್ತಿಯಲ್ಲಿಯೂ ಜಾಹೀರಾತು ಬಿತ್ತಿ ಫಲಕಗಳನ್ನು ಹಾಕುವ ಟೆಂಡರ್ ಪಡೆದು ಕಾರ್ಯನಿರ್ವಹಿಸಲಾಗುತ್ತಿದೆ. ಎಲ್ಲಿಯೂ ಫಲಕಗಳಿಗೆ ಅಡ್ಡಲಾಗಿರುವ ಮರಗಳನ್ನ ಕಡಿದಿಲ್ಲ ಎಂದರು. ತುಮಕೂರು ನಗರದಲ್ಲಿ 2022ರ ಜನವರಿ 22ರ ರಾತ್ರಿ ಮತ್ತು ಏಪ್ರಿಲ್ 16ರ ರಾತ್ರಿ ಕೆಲ ಕಿಡಿಗೇಡಿಗಳು ರಸ್ತೆಯಲ್ಲಿ ಹಾಕಿರುವ ಬೇವಿನ ಮರಗಳನ್ನು ಕಡಿದಿದ್ದಾರೆ. ಸಿಸಿಟಿವಿ ಪೂಟೇಜ್‍ನಲ್ಲಿ ಮರಗಳನ್ನು ಕಡಿದವರ ಚಹರೆ ಇದ್ದು, ಅವರನ್ನು ಬಂಧಿಸುವ ಬದಲು ಜಾಹೀರಾತು ಫಲಕ ಅಳವಡಿಸಿರುವ…

Read More

ತುಮಕೂರು: ಕೊರಟಗೆರೆಯಲ್ಲಿ 14.04.2022 ರಂದು ಆಚರಿಸಲಾದ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ|| ಬಿ.ಆರ್.ಆಂಬೇಡ್ಕರ್ ರವರ 131ನೇ ಜಯಂತಿ ಕಾರ್ಯಕ್ರಮದಲ್ಲಿ ಮಾಡಲಾದ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವರಾದ ಮಾನ್ಯ ಡಾ.ಜಿ.ಪರಮೇಶ್ವರ್ ರವರ ಭಾಷಣ ರಾಜ್ಯದ ದಲಿತ ಜನಾಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ ಎಂದು ಭಾ.ಜ.ಪಾ ಜಿಲ್ಲಾ ಉಪಾಧ್ಯಕ್ಷ ವೈ.ಹೆಚ್. ಹುಚ್ಚಯ್ಯ ತಿಳಿಸಿದರು. ನಾನು ಪಿಹೆಚ್‍ಡಿ ಮಾಡಿದ್ದೇನೆ, ವಿದೇಶಗಳಿಗೆ ಹೋಗಿ ಬಂದಿದ್ದೇನೆ, ಹಿಂದೆ ಸಚಿವನಾಗಿದ್ದೆ. ಈಗ ಶಾಸಕನಾಗಿದ್ದೆನೆ. ರಾಜ್ಯದಲ್ಲಿ ಹಿರಿಯ ರಾಜಕಾರಣಿಯಾಗಿದ್ದೇನೆ. ಆದರೂ ದೇವಸ್ಥಾನದ ಒಳಗೆ ಬಿಟ್ಟುಕೊಳ್ಳುವುದಿಲ್ಲ ದೇವಸ್ಥಾನದ ಒಳಗೆ ಬರುತ್ತಾರೆಂದು, ಮಂಗಳಾರತಿಯನ್ನು ಹಿಡಿದು ದೇವಸ್ಥಾನದ ಹೊರಗಡೆ ನಾನಿರುವ ಜಾಗಕ್ಕೆ ಓಡಿ ಬರುತ್ತಾರೆಂದು ತಿಳಿಸಿ, ಪ್ರಪಂಚದ ಯಾವುದೇ ದೇಶದಲ್ಲಿಯೂ ಇಂತಹ ಕೀಳು ಮಟ್ಟದ ವ್ಯವಸ್ಥೆ ಕೇಳಿಲ್ಲ ಎಂದು ಇಷ್ಟೆಲ್ಲಾ ಅಧಿಕಾರ ನಡೆಸಿರುವ ವ್ಯಕ್ತಿಯಾಗಿದ್ದರೂ, ಏನೂ ಮಡಲಾಗದ ಒಬ್ಬ ಅಸಹಾಯಕ ವ್ಯಕ್ತಿಯಂತೆ ಮಾತನಾಡಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದರು. ನನಗೆ ಎಲ್ಲಾ ಅರ್ಹತೆಗಳಿದ್ದರೂ ನನ್ನನ್ನು ದಲಿತ ಎನ್ನುವ ಕಾರಣಕ್ಕೆ ಮುಖ್ಯಮಂತ್ರಿ ಮಾಡಲ್ಲಿಲ್ಲ…

Read More

ತುಮಕೂರು: ನಗರದ ವಾಸಿ ಲಕ್ಷ್ಮೀಕಾಂತ ಅಲಿಯಾಸ್ ಚಂದು ಪೊಲೀಸ್ ಇಲಾಖೆಗೆ ಆತ್ಮಹತ್ಯೆ ಬೆದರಿಕೆ ಹಾಕುವ ಮುಖೇನ ಇಡೀ ಇಲಾಖೆಯನ್ನೇ ಬೆದರಿಸಲು ಹೊರಟಿರುವ ಅಪರೂಪದ ಘಟನೆ ವರದಿಯಾಗಿದೆ. ಸುಮಯ್ಯ ಭಾನು ಎಂಬ ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ಮತ್ತು ಆಕೆಯ ಮಗಳಿಗೂ ತೊಂದರೆ ಕೊಡುವ ಬೆದರಿಕೆಯ ಆರೋಪದ ಮೇಲೆ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ 13.04.2022ರಂದು ದೂರು ದಾಖಲಾಗಿದೆ. ದೂರು ದಾಖಲಾಗಿದ್ದರೂ ಸಹ ಲಕ್ಷ್ಮೀಕಾಂತ ಅಲಿಯಾಸ್ ಚಂದು ಎಂಬ ವಂಚಕನನ್ನು ಪೊಲೀಸರು ಬಂಧಿಸದೆ ಮೀನಾಮೇಷ ಎಣಿಸುತ್ತಿದ್ದಾರೆ. ದೂರು ದಾಖಲಾದ ನಂತರ ತನ್ನ ವಾಟ್ಸಪ್‍ನಿಂದ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಪೂರ್ ವಾಡ್ ಮತ್ತು ಅವರ ಅಧೀನ ಅಧಿಕಾರಿಗಳ ವಿರುದ್ಧ ಪ್ರಾಣ ಬೆದರಿಕೆ ಹಾಕಿದ್ದಾನೆ. ಹಿನ್ನೆಲೆ ಲಕ್ಷ್ಮೀಕಾಂತ ಅಲಿಯಾಸ್ ಚಂದು ತುಮಕೂರು ನಗರದ ವಾಸಿಯಾಗಿದ್ದು, ಮಾಜಿ ಉಪಮುಖ್ಯಮಂತ್ರಿ ಹಾಲಿ ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಅವರ ಸೋದರ ಅಳಿಯನೆಂದು ಬೊಗಳೆ ಬಿಡುತ್ತಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪರಿಚಯಿಸಿಕೊಂಡು ನಮ್ಮ ಮಾವ ಪ್ರಭಾವಿ ರಾಜಕಾರಿಣಿ…

Read More

ತುಮಕೂರು: ನಗರದ ಹೊರವಲಯದ ಹೆಗ್ಗೆರೆಯ ಹೊಸ ಬಡಾವಣೆ ನಾಗರಿಕರ ಹಿತರಕ್ಷಣಾ ವೇದಿಕೆ (ರಿ) ಕಚೇರಿಯಲ್ಲಿಂದು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತ್ಯೋತ್ಸವ ಮತ್ತು ಡಾ. ಬಾಬು ಜಗಜೀವನ್ ರಾಮ್ ರವರ 115ನೇ ಜನ್ಮ ದಿನೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಗ್ಗೆರೆ ಹೊಸ ಬಡಾವಣೆ ನಾಗರಿಕರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಕೃಷ್ಣಯ್ಯ ಎಂ. ಅವರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರ ತತ್ವ-ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸುವುದರ ಮೂಲಕ ಸಮಾಜಕ್ಕೆ ಮಾದರಿಯಾಗುವ ಅವಶ್ಯಕತೆ ಇದೆ. ಪ್ರತಿವರ್ಷ ಅವರ ಜನ್ಮದಿನೋತ್ಸವವನ್ನು ಆಚರಣೆ ಮಾಡುವುದರ ಮೂಲಕ ಅವರ ಕಾರ್ಯಚಟುವಟಿಕೆಗಳನ್ನು ನೆನೆಯುವ ಕೆಲಸವನ್ನು ಮಾಡಬೇಕಾಗಿದೆ ಎಂದರು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮತ್ತು ಡಾ. ಬಾಬು ಜಗಜೀವನರಾಮ್ ಅವರು ಎಲ್ಲ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ, ಎಲ್ಲ ಸಮುದಾಯಗಳ ಉನ್ನತಿಗಾಗಿ ಹಗಲಿರುಳು ಶ್ರಮಿಸಿದರು. ಸರ್ವ ಜನಾಂಗಕ್ಕೂ ಸಮಾನವಾದ ಅವಕಾಶಗಳನ್ನು ನೀಡಲು ಪ್ರಯತ್ನಿಸಿದ ಅವರ…

Read More

ತುಮಕೂರು: ನಗರದ ಬಿ.ಹೆಚ್. ರಸ್ತೆಯಲ್ಲಿ ಕಳೆದ 11 ವರ್ಷದಿಂದ ಬೆಳೆಸಿದ್ದ ಬೇವಿನ ಮರಗಳನ್ನು ಗುತ್ತಿಗೆದಾರರು ಮತ್ತೆ ಯಾವುದೇ ಅನುಮತಿ ಪಡೆಯದೆ ರಾತ್ರೋರಾತ್ರಿ ಕಡಿದು ಹಾಕಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಬಿ.ಹೆಚ್. ರಸ್ತೆಯ ಮಧ್ಯಭಾಗದಲ್ಲಿ ಕಳೆದ 11 ವರ್ಷಗಳಿಂದ ಮರಗಳನ್ನು ಬೆಳೆಸಲಾಗಿತ್ತು. ಈ ಪೈಕಿ ಬೇವಿನ ಮರಗಳು ಅತಿ ಹೆಚ್ಚಾಗಿದ್ದು, ಚೆನ್ನಾಗಿ ಬೆಳೆದು ನಿಂತಿದ್ದವು. ಆದರೆ ಪಾಲಿಕೆಯಿಂದ ಜಾಹೀರಾತು ನಾಮಫಲಕಗಳನ್ನು ಅಳವಡಿಸುವ ಗುತ್ತಿಗೆ ಪಡೆದಿರುವ ಗುತ್ತಿಗೆದಾರ ಪಾಲಿಕೆಯಿಂದಾಗಲೀ ಅಥವಾ ಅರಣ್ಯ ಇಲಾಖೆಯಿಂದಾಗಲೀ ಯಾವುದೇ ಅನುಮತಿ ಪಡೆಯದೇ ಏಕಾಏಕಿ ರಾತ್ರಿ 11 ಬೇವಿನ ಮರಗಳ ಮಾರಣ ಹೋಮ ನಡೆಸಿದ್ದಾರೆ. ಮರಗಳ ಮಾರಣಹೋಮ ನಡೆಸಿರುವುದನ್ನು ಬೆಳಿಗ್ಗೆ ನೋಡಿದ ಪರಿಸರ ಪ್ರೇಮಿಗಳು ತಕ್ಷಣ ರಸ್ತೆಗಿಳಿದು ಮರಗಳನ್ನು ಕಡಿದು ಹಾಕಿರುವ ಗುತ್ತಿಗೆದಾರ ಮತ್ತು ಸಿಬ್ಬಂದಿಯನ್ನು ಬಂಧಿಸಲೇಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಕಳೆದ 3 ತಿಂಗಳ ಹಿಂದೆ ಸದರಿ ಗುತ್ತಿಗೆದಾರ ಇದೇ ರೀತಿಯ ಬಿ.ಹೆಚ್. ರಸ್ತೆಯಲ್ಲಿ ಮರಗಳನ್ನು ಕಡಿದು ಹಾಕಿದ್ದರು. ಇದುವರೆಗೂ ಆತನ ವಿರುದ್ಧ ಯಾವುದೇ ಕ್ರಮ…

Read More

ತುಮಕೂರು: ದೇಶದಲ್ಲಿ ಸಮಾನತೆ, ಭಾತೃತ್ವದ ಚಿಂತನೆ ನೀಡದೆ ಅಂಬೇಡ್ಕರ್ ಅವರ ಆಶಯಗಳಿಗೆ ವಿರುದ್ಧವಾಗಿ ಭಾವನಾತ್ಮಕ ವಿಚಾರಗಳೇ ಮುಖ್ಯವಾಗಿವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್, ಬಾಬುಜಗಜೀವನ್ ರಾಂ ಜಯಂತಿಯಲ್ಲಿ ಅವರು ಮಾತನಾಡಿದ ಅವರು, ಸಂವಿಧಾನ ರಚನೆಯ ವೇಳೆಯಲ್ಲಿಯೇ ಸಮಾನತೆ, ಭಾತೃತ್ವವನ್ನು ಒಪ್ಪಿಕೊಂಡಿದ್ದೆವು, ಆದರೆ ಇಂದು ನಾವು ಬೇರೆ ನೀವು ಬೇರೆ ಎಂದು ಹೇಳಿದರೆ ಒಪ್ಪಿಕೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು. ಅಂಬೇಡ್ಕರ್ ಅಂದರೆ ಎಸ್ಸಿಎಸ್ಟಿ ಎನ್ನುವಂತಹ ಮನೋಭಾವನೆ ಜನರಲ್ಲಿದೆ, ಅಂಬೇಡ್ಕರ್ ಭಾರತ ದೇಶದಲ್ಲಿರುವ ಪ್ರತಿಯೊಂದು ಜೀವಿಗೂ ಸಂವಿಧಾನವನ್ನು ನೀಡಿದ್ದಾರೆ, ದೇಶದ ಆರ್ಥಿಕತೆ ಇಂದು ಸದೃಢವಾಗಿದೆ ಅದಕ್ಕೆ ಕಾರಣ ಅಂಬೇಡ್ಕರ್ ಅವರು, ಕರೆನ್ಸಿಯೇ ಇಲ್ಲದ ದೇಶಕ್ಕೆ ಸಾಮಾನ್ಯ ಕರೆನ್ಸಿಯನ್ನು ನೀಡಿ, ಆರ್ ಬಿಐ ಸ್ಥಾಪಿಸಲು ಅವರ ಮುಂದಾಲೋಚನೆಯೇ ಕಾರಣ ಎಂದರು. ಅಂಬೇಡ್ಕರ್ ಎಂದರೆ ಬರೀ ಮೀಸಲಾತಿ ಎನ್ನುತ್ತಿದ್ದಾರೆ,ಈ ದೇಶಕ್ಕಾಗಿ ಅಂಬೇಡ್ಕರ್ ನೀಡಿರುವ ಕೊಡುಗೆಗಳನ್ನು ಅರ್ಥ ಮಾಡಿಕೊಳ್ಳಬೇಕು, ಪ್ರಪಂಚದ ಯಾವ ದೇಶದಲ್ಲಿ ಇಲ್ಲದಷ್ಟು ಸಮಸ್ಯೆಗಳು ಇರುವ ಭಾರತದಲ್ಲಿ…

Read More

ತುಮಕೂರು : ಸ್ವರಾಜ್ಯದ ಜೊತೆಗೆ ಪ್ರಜಾ ರಾಜ್ಯದ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿ, ಪ್ರಜಾರಾಜ್ಯಕ್ಕಾಗಿ ಮೊಟ್ಟ ಮೊದಲಿಗನಾಗಿ ಧ್ವನಿ ಎತ್ತಿದ ಮಹಾನಾಯಕ ಡಾ|| ಬಿ.ಆರ್. ಅಂಬೇಡ್ಕರ್ ಅವರು, ಮಹಾನ್ ರಾಷ್ಟ್ರ ಭಕ್ತರು ಕೂಡ ಆಗಿದ್ದರು ಎಂದು ಪ್ರೊ. ಶ್ರೀ ಹರಿ ರಾಂ ಅವರು ತಿಳಿಸಿದರು. ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ|| ಬಾಬು ಜಗಜೀವನರಾಂ ಅವರ 115ನೇ ಜನ್ಮದಿನಾಚರಣೆಯಲ್ಲಿ ಮುಖ್ಯ ಭಾಷಣಾಕಾರರಾಗಿ ಭಾಗವಹಿಸಿ ಮಾತನಾಡುತ್ತಾ, ಜಗತ್ತಿನಾದ್ಯಂತ ಜನಸಾಮಾನ್ಯರು ಹಬ್ಬದ ರೀತಿ ಆಚರಿಸಿ ಸಂಭ್ರಮಿಸುವ ಏಕೈಕ ಹಬ್ಬ ಅದುವೇ ಮಹಾನಾಯಕ ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ಎಂದರು. ಮಹಾನಾಯಕ ಅಂಬೇಡ್ಕರ್ ಅವರನ್ನು ಒಂದು ಜಾತಿಗೆ ಸೀಮಿತವಾಗಿಸುವ ಪ್ರಯತ್ನ ನಿರಂತರವಾಗಿ ನಡೆದಿದೆ. ಅವರು ಕೇವಲ ಒಂದು ದೇಶ, ಒಂದು ರಾಜ್ಯ, ಒಂದು ಜಾತಿಗೆ ಸೀಮಿತವಲ್ಲ, ಅವರು ವಿಶ್ವ ನಾಯಕ. ದಲಿತ ಪರ ಹೋರಾಟ, ಮೀಸಲಾತಿ ಹೋರಾಟ ಅಲ್ಲದೇ ದೇಶಕ್ಕಾಗಿ ಸಾಮಾಜಿಕ ಚಳುವಳಿ…

Read More

ತುಮಕೂರು: ನಗರದ ಲೋಕೋಪಯೋಗಿ ಉಪವಿಭಾಗದ ಪ್ರಭಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಂಭುಕುಮಾರ್ ವಿರುದ್ಧ ಬೆಂಗಳೂರಿನ ಮಹಾಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ದಿನಾಂಕ 12.04.2022ರಂದು ಮೊಕದ್ದಮೆ ದಾಖಲಾಗಿದೆ. ಮಹಾಲಕ್ಷ್ಮೀಪುರಂ ಠಾಣೆಯಲ್ಲಿ ಜಾತಿ ನಿಂದನೆ ಮತ್ತು ಕೊಲೆ ಪ್ರಯತ್ನ ಆರೋಪದ ಮೇಲೆ ಒಂದನೇ ಆರೋಪಿಯಾಗಿ ಶಂಭುಕುಮಾರ್, ಎರಡನೇ ಆರೋಪಿಯಾಗಿ ಅಶ್ವಿನಿ ಮತ್ತು ಮೂರನೇ ಆರೋಪಿಯಾಗಿ ಲಕ್ಷ್ಮೀ ಸೇರಿದಂತೆ ಈ ಮೂವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ. ಮೊದಲನೇ ಆರೋಪಿಯಾಗಿರುವ ಶಂಭುಕುಮಾರ್, ಸಹಾಯಕ ಇಂಜಿನಿಯರ್ ಆಗಿ ತುಮಕೂರು ಲೋಕೋಪಯೋಗಿ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಭಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಯನ್ನು ಸಹ ಕಳೆದ ಒಂದೂವರೆ ವರ್ಷದಿಂದ ನಿರ್ವಹಿಸುತ್ತಿದ್ದಾರೆ. ತಮ್ಮ ಕಚೇರಿಯಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಶ್ವಿನಿ ಅವರನ್ನು ತನ್ನ ಬುಟ್ಟಿಗೆ ಹಾಕಿಕೊಂಡು ಅವರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆಕೆಯ ಪತಿ ಲೋಕೋಪಯೋಗಿ ಕಚೇರಿಯ ಮುಂದೆ ಬಂದು ಇಂಜಿನಿಯರ್ ಶಂಭುಕುಮಾರ್ ಅವರಿಗೆ ಬುದ್ದಿ ಹೇಳಿ ಎಚ್ಚರಿಸಿರುವುದಾಗಿ ತಿಳಿದುಬಂದಿತ್ತು. ಆನಂತರವೂ ಸಹ ಅಶ್ವಿನಿಯೊಂದಿಗಿನ ಅಕ್ರಮ ಸಂಬಂಧವನ್ನು ಹಾಗೆಯೇ ಮುಂದುವರಿಸಿದ್ದು, ತದನಂತರ…

Read More

ಗುಬ್ಬಿ: ಸಮಾಜದಲ್ಲಿ ಶಾಂತಿ ಕದಡುವಂತಹ ಸ್ವಾಮಿಗಳನ್ನು ಸಮಾಜದಿಂದ ದೂರವಿಡುವುದು ಒಳಿತು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ತಾಲ್ಲೂಕಿನ ನಿಟ್ಟೂರು ಗ್ರಾಮದ ಜೈನಿಗರ ಬಡಾವಣೆಯಲ್ಲಿ ಸುಮಾರು 24 ಲಕ್ಷ ರೂಗಳ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಕಾಳಿಸ್ವಾಮಿಯ ಬಗ್ಗೆ ಯಾವುದೇ ಮಾತನಾಡಿಲ್ಲ. ಯಾರು ಸಮಾಜದಲ್ಲಿ ಯಾರು ಅಶಾಂತಿ ಮೂಡಿಸುವ ಸ್ವಾಮಿಗಳ ಬಗ್ಗೆ ಮಾತನಾಡಿದ್ದೇನೆ. ಹೊರತು ಈ ಕಾಳಿಸ್ವಾಮಿ ಯಾವ ಕಾರಣಕ್ಕೋಸ್ಕರ ಹೇಳಿಕೆ ನೀಡಿದ್ದಾರೋ ಗೊತ್ತಾಗುತ್ತಿಲ್ಲ. ಮಠಾಧೀಶರು ಹಾಗೂ ಸ್ವಾಮಿಗಳ ಮಾತುಗಳಲ್ಲಿ ಹಿಡಿತವಿರಬೇಕು. ಯಾವುದೇ ಸ್ವಾಮಿಗಳನ್ನು ನೋಡಿದರೆ ಕಾಲು ಮುಟ್ಟಿ ನಮಸ್ಕರಿಸುವಂತಹ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವಂತಹ ಸ್ವಾಮಿಗಳು ಲಕ್ಷಾಂತರ ಭಕ್ತರ ಸೇವೆಯಲ್ಲಿ ಹಾಗೂ ಸಮಾಜವನ್ನು ತಿದ್ದುವಂತಹ ಸ್ವಾಮಿಗಳು ಇದ್ದಾರೆ. ಕಾಳಿಸ್ವಾಮಿ ತುಂಬಿದ ಕೊಡ ಅಲ್ಲ ಅರ್ದಬರ್ದ ನೀರು ತುಂಬದ ಕೊಡ ಅಗಾಗಿ ಸರಿಯಾಗಿ ನಿಲ್ಲಲ್ಲು ಸಾಧ್ಯವಾಗುತ್ತಿಲ್ಲ. ಎಂದು ತಿಳಿಸಿದರು. ಸಮಾಜದಲ್ಲಿ ಹೊಡಕು ಮೂಡಿಸುವಂತಹ ಯಾವುದೇ ವ್ಯಕ್ತಿಯಾಗಲಿ ಆತನನ್ನು ಶಿಕ್ಷಿಸುವುದು ಅತ್ಯವಶ್ಯಕ ಎಮದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಗಳ ಬಳಿ ಹೇಳಿಕೆ ನೀಡಿರುವುದು…

Read More