Author: News Desk Benkiyabale

ತುಮಕೂರು: ಅಂಬೇಡ್ಕರ್ ಕೊಟ್ಟ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ. ಪರಮೇಶ್ ಅಭಿಪ್ರಾಯಪಟ್ಟರು. ಅವರು ತುಮಕೂರಿನ ಕನ್ನಡ ಭವನದಲ್ಲಿ ಝೆನ್ ಟೀಮ್ ವತಿಯಿಂದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಕಾರ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನಡೆದ ಶಿವಮೊಗ್ಗ ರಂಗಾಯಣದವರು ಪ್ರಸ್ತುತಪಡಿಸಿದ ವಿ ದ ಪೀಪಲ್ ಆಫ್ ಇಂಡಿಯಾ ನಾಟಕ ಪ್ರದರ್ಶನಕ್ಕೆ ನಗಾರಿ ಬಾರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಬಾಬಾ ಸಾಹೇಬ್ ಅವರ 125ನೇ ಜಯಂತಿಯನ್ನು ಪ್ರಪಂಚದ 100 ಕ್ಕೂ ಹೆಚ್ಚು ರಾಷ್ಟ್ರಗಳು ಆಚರಣೆ ಮಾಡಿದ್ದನ್ನು ಗಮನಿಸಿದರೆ ಅವರ ಆದರ್ಶ, ವ್ಯಕ್ತಿತ್ವ ಇಡೀ ಪ್ರಪಂಚಕ್ಕೆ ಪಸರಿಸಿದೆ ಎಂಬುದು ತಿಳಿಯುತ್ತದೆ ಎಂದರು. ಅವರು ಮಾಡಿರುವ ಕಾರ್ಯಗಳನ್ನು ನಾವು ಪಾಲಿಸಬೇಕು. ಲೇಬರ್ ಮಂತ್ರಿಯಾಗಿದ್ದಾಗ ಬಹಳಷ್ಟು ಬದಲಾವಣೆ ಮಾಡಿದರು. ಅವರ ಆದರ್ಶ, ಜೀವನ ಪ್ರತಿಯೊಬ್ಬರಿಗೂ ಮಾದರಿ. ಬುದ್ದ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ಈ ದೇಶದ ಮುತ್ತುಗಳಿದ್ದಂತೆ ಎಂದು ಬಣ್ಣಿಸಿದರು. ವಿ ದ ಪೀಪಲ್ ಆಫ್ ಇಂಡಿಯಾ…

Read More

ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆಯು ರೇಷ್ಮೆ, ಹತ್ತಿ ಮತ್ತು ಉಣ್ಣೆ ಕೈಮಗ್ಗ ಉತ್ಪಾದನೆಗಳ ಅಭಿವೃದ್ಧಿಗಾಗಿ ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಠತೆ, ತಾಂತ್ರಿಕತೆ, ಉತ್ಕøಷ್ಟತೆಯ ಉತ್ಪನ್ನ ತಯಾರಿಸಿದ ಕೈಮಗ್ಗ ನೇಕಾರರಿಗೆ 2022-23ನೇ ಸಾಲಿನಲ್ಲಿ “ರಾಜ್ಯ ಮಟ್ಟದ ಪ್ರಶಸ್ತಿ” ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಹರು ಕೈಮಗ್ಗ ಉತ್ಪಾದನೆಗಳ ಅಭಿವೃದ್ದಿಗಾಗಿ ಕೈಮಗ್ಗ ನೇಯ್ಗೆಯ ಅಸಾಧಾರಣ ಕೌಶಲ್ಯದಲ್ಲಿ ಸುಮಾರು ಕನಿಷ್ಠ 30 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷಗಳ ಅನುಭವ ಹೊಂದಿರಬೇಕು. ಆಸಕ್ತರು ಸೀರೆ ಉತ್ಪನ್ನದ ಮಾದರಿ, ಬಣ್ಣದ ಛಾಯಾಚಿತ್ರ ಹಾಗೂ ವಿವಿಧ ಹಂತದ ವಿಡಿಯೋದೊಂದಿಗೆ ಅರ್ಜಿಯನ್ನು ಮೇ 5ರೊಳಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ತುಮಕೂರು. ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816-2275370ಯನ್ನು ಸಂಪರ್ಕಿಸಬೇಕೆಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕಿ ಡಿ. ಸುಮಲತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ತುಮಕೂರು : ಜಿಲ್ಲೆಯಲ್ಲಿ ಏಪ್ರಿಲ್ 22 ರಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ದೋಷರಹಿತವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಪರೀಕ್ಷಾ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿ ಹಾಗೂ ಸಿಬ್ಬಂದಿಗಳ ಪೂರ್ವಾಪರಗಳನ್ನು ಪರಿಶೀಲಿಸಿದ ಬಳಿಕ ಪರೀಕ್ಷಾ ಕಾರ್ಯಗಳಿಗೆ ನಿಯೋಜಿಸಬೇಕು. ಪರೀಕ್ಷಾ ನಿರ್ವಹಣೆಗಾಗಿ ನಿಯೋಜಿಸಿದವರು ಜಿಲ್ಲಾ ಖಜಾನೆ ಹಾಗೂ ಮಧುಗಿರಿ ತಾಲೂಕು ಖಾಜಾನಾಧಿಕಾರಿಗಳ ಕಚೇರಿಯಲ್ಲಿ ಕಡ್ಡಾಯವಾಗಿ ಏಪ್ರಿಲ್ 18ರೊಳಗಾಗಿ ಬಯೋಮೆಟ್ರಿಕ್ ನೋಂದಣಿ ಮಾಡಿಸಿ ಗುರುತಿನ ಚೀಟಿ ಪಡೆಯಬೇಕು ಎಂದು ನಿರ್ದೇಶನ ನೀಡಿದರು. ಪರೀಕ್ಷಾ ಗೌಪ್ಯ ವಸ್ತುಗಳ ಲೋಡಿಂಗ್, ಅನ್‍ಲೋಡಿಂಗ್, ಠೇವಣಿಸುವ, ವಿತರಿಸುವ ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಬಂಡಲ್‍ಗಳನ್ನು ತೆರೆಯುವ ಮತ್ತು ಉತ್ತರ ಪತ್ರಿಕೆಗಳನ್ನು ಸ್ವೀಕರಿಸಿ ಬಂಡಲ್ ಮಾಡುವ ಕಾರ್ಯಗಳನ್ನು ಸಿಸಿಟಿವಿ ವೀಕ್ಷಣೆಯಡಿ ನಿರ್ವಹಿಸಬೇಕು ಎಂದು ಸೂಚಿಸಿದರು. ಪರೀಕ್ಷೆ ನಡೆಯುವ ದಿನಗಳಂದು ಕೇಂದ್ರಗಳ ಸುತ್ತಲಿನ…

Read More

ತುಮಕೂರು: ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಆಯ್ದ ಗ್ರಾಮಗಳಲ್ಲಿ ಏಪ್ರಿಲ್ 16ರಂದು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಗಧಿಪಡಿಸಿದ ತಾಲ್ಲೂಕಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಡೀಸಿ ಸೂಚನೆ:- ಸರ್ಕಾರದ ನಿರ್ದೇಶನದಂತೆ ಪ್ರತಿ ತಿಂಗಳ 3ನೇ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನ ಕಾರ್ಯಕ್ರಮದಡಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಆಯಾ ತಾಲ್ಲೂಕು ತಹಶೀಲ್ದಾರರು ನಿಗಧಿಪಡಿಸಿರುವ ಗ್ರಾಮಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಗ್ರಾಮ ವಾಸ್ತವ್ಯ ಮಾಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಂಡು ಕೈಗೊಂಡ ಕ್ರಮದ ಬಗ್ಗೆ ಜಿಲ್ಲಾಧಿಕಾರಿಗಳ ಕಛೇರಿಗೆ ವರದಿ ಸಲ್ಲಿಸಬೇಕು. ಉಪವಿಭಾಗಾಧಿಕಾರಿಗಳು ಆಯಾ ಉಪವಿಭಾಗದ ಒಂದು ತಾಲ್ಲೂಕಿನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಸೂಚಿಸಿದ್ದಾರೆ. ಕೊರಟಗೆರೆ ತಾಲ್ಲೂಕು ಕೋಳಾಲ ಹೋಬಳಿಯ ದೊಡ್ಡಪಾಲನಹಳ್ಳಿಯಲ್ಲಿ ನಡೆಯಲಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು…

Read More

ತುಮಕೂರು: ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರ ಹುಟ್ಟು ಹಬ್ಬದ ಕಾರ್ಯಕ್ರಮದ ಅಂಗವಾಗಿ ಬುಧವಾರ ಕ್ಯಾತ್ಸಂದ್ರದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಪೌರಕಾರ್ಮಿಕರು, ಸಾರ್ವಜನಿಕರಿಗಾಗಿ ಬೃಹತ್ ಆರೋಗ್ಯ ಮೇಳ ಏರ್ಪಡಿಸಲಾಗಿತ್ತು. ರಾಜಣ್ಣ ಅವರ ಹುಟ್ಟು ಹಬ್ಬದ ಅಂಗವಾಗಿ ಬೆಳಗ್ಗೆ 6 ಗಂಟೆಯಿಂದ ಅವರ ಅಭಿಮಾನಿಗಳು, ಸಾರ್ವಜನಿಕರು ಕ್ಯಾತ್ಸಂದ್ರದ ಅವರ ಮನೆಗೆ ತೆರಳಿ ಹಾರ, ತುರಾಯಿ ತೊಡಿಸಿ, ತಮ್ಮ ಅಭಿನಂದನೆ ಸಲ್ಲಿಸಿದರು.ಬಂದವರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಮಾತನಾಡಿದ ಕೆ.ಎನ್.ರಾಜಣ್ಣ ಅವರು,ಕಳೆದ ಎರಡು ವರ್ಷಗಳ ಕಾಲ ಕೋರೋನದಿಂದಾಗಿ ಅಭಿಮಾನಿಗಳ ಒತ್ತಡವಿದ್ದರೂ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಅವಕಾಶ ನೀಡಿರಲಿಲ್ಲ. ಆದರೆ ಈ ಬಾರಿ ಜನರ ಒತ್ತಡ ಮಣಿದು ಹುಟ್ಟು ಹಬ್ಬ ಆಚರಿಸಿಕೊಳ್ಳುತಿದ್ದೇನೆ. ಇಡೀ ಜಿಲ್ಲೆಯ ಜನರು ಬಂದು ತಮ್ಮ ಅಭಿಮಾನ ತೋರಿಸುತ್ತಿದ್ದಾರೆ. ಇದಕ್ಕಿಂತ ಸೌಭಾಗ್ಯ ಮತ್ತೊಂದು ಇಲ್ಲ ಎಂದರು. ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸÀಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ನಿಜಕ್ಕೂ ಇಡೀ ರಾಜಕೀಯ ವಲಯವೇ ತಲೆ ತಗ್ಗಿಸುವಂತಹ ವಿಚಾರವಾಗಿದೆ.ಅತ್ಮಹತ್ಯೆಗೆ…

Read More

ತುಮಕೂರು : ಮಾನ್ಯ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆ ಇಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿಗಳು, 2021-22 ನೇ ಸಾಲಿನ ಅವಧಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಕುರಿತ ಮತ್ತು ಅಲ್ಪಸಂಖ್ಯಾತ ವರ್ಗದವರಿಗೆ ಸಂಬಂಧಿಸಿ, ವಿವಿಧ ಇಲಾಖೆಗಳು ಮಾರ್ಚ್-22ರ ಅಂತ್ಯದವರೆಗೆ ಸಾಧಿಸಿರುವ ಪ್ರಗತಿಯನ್ನು ಕೂಲಂಕುಶವಾಗಿ ಪರಿಶೀಲಿಸಿದರು. ಕೆಎಸ್‍ಡಿಬಿ ತುಮಕೂರು ವಿಭಾಗೀಯ ಕಚೇರಿ ವತಿಯಿಂದ, ಜಿಲ್ಲೆಯ ತುಮಕೂರು ನಗರ, ಚಿ.ನಾ ಹಳ್ಳಿ, ಗುಬ್ಬಿ, ತಿಪಟೂರು, ಕೊರಟಗೆರೆ ತಾಲ್ಲೂಕಿನಲ್ಲಿ ನಿರ್ಮಿಸಲಾಗುತ್ತಿರುವ ವಸತಿ ಯೋಜನೆಗಳು, ಅಲ್ಪಸಂಖ್ಯಾತರನ್ನು ವಿವಿಧ ಸಹಕಾರ ಸಂಘಗಳಲ್ಲಿ ಸದಸ್ಯರಾಗಿ ನೋಂದಾಯಿಸಲು ಸಹಾಯಧನ ನೀಡುವ ಯೋಜನೆಯಡಿ, ರಾಜ್ಯ ವಲಯ ಯೋಜನೆಯಡಿ ಅಲ್ಪಸಂಖ್ಯಾತ ವರ್ಗದವರಿಗೆ ಮೀನುಗಾರಿಕೆ ಸಲಕರಣೆ ಕಿಟ್ಟು ವಿತರಣೆ ಮತ್ತು ಮೀನುಮರಿ ಖರೀದಿಗೆ ಸಹಾಯ ಯೋಜನೆ ಮತ್ತು ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನು ಮಾರುಕಟ್ಟೆ ನಿರ್ಮಾಣ ಮತ್ತು ಮಾರಾಟ ಯೋಜನೆ, ಪಿಎಂಇಜಿಪಿ…

Read More

ತುಮಕೂರು: ಮನುಷ್ಯನ ಆರೋಗ್ಯಕ್ಕೆ ದಂತ ಬಹಳ ಮುಖ್ಯ. ಹಾಗಾಗಿ ಪ್ರತಿಯೊಬ್ಬರೂ ದಂತದ ರಕ್ಷಣೆಯ ಬಗ್ಗೆ ಗಮನ ಹರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗಳಾದ ರಾಘವೇಂದ್ರ ಶೆಟ್ಟಿಗಾರ್ ಹೇಳಿದರು. ನಗರದ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾರಾಗೃಹ, ಶ್ರೀ ಸಿದ್ದಾರ್ಥ ದಂತ ವೈದ್ಯಕೀಯ ಕಾಲೇಜು ಮತ್ತು ಕಾನೂನು ಸೇವೆಗಳ ಕಾರ್ಯಪಡೆಯ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ದಂತ ತಪಾಸಣೆ ಮತ್ತು ಕಾನೂನು ಅರಿವು ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯ ಸದಾ ಲವಲವಿಕೆಯಿಂದ ಆರೋಗ್ಯದಿಂದಿರಲು ಹಾಗೂ ಬಾಹ್ಯ ಸೌಂದರ್ಯಕ್ಕೂ ಸಹ ದಂತ ಬಹು ಮುಖ್ಯ. ದಂತ ಆರೋಗ್ಯವಾಗಿದ್ದರೆ ಮನುಷ್ಯ ಸಂಪೂರ್ಣ ಆರೋಗ್ಯವಾಗಿದ್ದಂತೆ. ಇದನ್ನು ಗಮನದಲ್ಲಿಟ್ಟುಕೊಂಡು ದಂತ ರಕ್ಷಣೆಗೆ ಮುಂದಾಗಬೇಕು. ಯಾರೂ ಸಹ ದಂತ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂದರು. ನಾವು ಸೇವಿಸುವ ಆಹಾರವನ್ನು ಚೆನ್ನಾಗಿ ಜಗಿದರೆ ಮಾತ್ರ ಉತ್ತಮ ಆರೋಗ್ಯ ಪ್ರಾಪ್ತಿಯಾಗುತ್ತದೆ. ಆಹಾರ ಜಗಿಯಬೇಕಾದರೆ ದಂತ…

Read More

ತುಮಕೂರು: ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯನವರ 1043ನೇ ಜಯಂತಿ ಅಂಗವಾಗಿ ದೇವರದಾಸಿಮಯ್ಯನವರ ಭಾವಚಿತ್ರ ಮೆರವಣಿಗೆಯು ನಗರದಲ್ಲಿ ಅದ್ದೂರಿಯಾಗಿ ನಡೆಯಿತು. ನಗರದ ಟೌನ್‍ಹಾಲ್ ವೃತ್ತದಲ್ಲಿ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಆರಂಭವಾದ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಆರ್. ರಾಜೇಂದ್ರ ಅವರು, 2015 ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅವಧಿಯಲ್ಲಿ ದೇವರ ದಾಸಿಮಯ್ಯನವರ ಜಯಂತಿಯನ್ನು ಪ್ರಾರಂಭಿಸಲಾಯಿತು. ಅಂದಿನಿಂದ ಈ ಜಯಂತಿಯನ್ನು ಆಚರಿಸುತ್ತಾ ಬರಲಾಗುತ್ತಿದೆ.ಹಿಂದುಳಿದ ವರ್ಗಗಳಲ್ಲಿ ಒಂದಾದ ನೇಕಾರರ ಸಮುದಾಯ ರಾಜಕೀಯ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಮುಂದೆ ಬರಬೇಕು. ಈ ಸಮುದಾಯದ ಏಳ್ಗೆಗೆ ತಾವು ಸದಾ ಶ್ರಮಿಸುವುದಾಗಿ ಹೇಳಿದರು. ರಾಜಕೀಯವಾಗಿ ಈ ಜನಾಂಗ ಅತ್ಯಂತ ಹಿಂದುಳಿದಿದೆ. ಇತ್ತೀಚೆಗೆ ನಡೆದ ಗ್ರಾ.ಪಂ. ಚುನಾವಣೆಯಲ್ಲಿ ಬೆರಳೆಣಿಕೆಯಷ್ಟು ಮಂದಿ ಮಾತ್ರ ಸ್ಪರ್ಧಿಸಿ ಗೆದ್ದಿದ್ದಾರೆ. ಆದ್ದರಿಂದ ನಾವೆಲ್ಲರೂ ಪಕ್ಷಾತೀತಾಗಿ ಈ ಹಿಂದುಳಿದ ಜನಾಂಗದ ಏಳ್ಗೆಗೆ ಶ್ರಮಿಸುವ ಅಗತ್ಯವಿದೆ.ಈ ಜನಾಂಗದ ಅಭಿವೃದ್ಧಿಗಾಗಿ ಸದಾ ಜತೆಯಲ್ಲಿರುತ್ತೇನೆ. ಹಾಗೆಯೇ ಎಲ್ಲ ಪಕ್ಷಗಳ…

Read More

ತುಮಕೂರು: 60 ವರ್ಷ ವಯೋಮಾನ ನೆಪವೊಡ್ಡಿ 19 ವರ್ಷ ಸೇವೆಸಲ್ಲಿಸಿದ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಬರಿಗೈಲ್ಲಿ ಕಳಿಸುವ ಸರ್ಕಾರದ ಅಮಾನವೀಯ ನಡೆಗೆ ಖಂಡನೆ. ಕನಿಷ್ಟ 1ಲಕ್ಷ ಇಡಿಗಂಟು ನೀಡಲು ಒತ್ತಾಯ. ಮಧ್ಯಾನ್ಹದ ಬಿಸಿಯೂಟ ಯೋಜನೆಯು ಪ್ರಾರಂಭವಾದ ವರ್ಷದಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿಗೆ, ಮಕ್ಕಳ ಗೈರುಹಾಜರಿ ತಡೆಗಟ್ಟಲು ಶಿಕ್ಷಣ ಇಲಾಖೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿಕೊಂಡು ಬಂದಿರುವ ಅಡುಗೆಯವರನ್ನು 60 ವರ್ಷ ವಯೋಮಾನ ನೆಪವೊಡ್ಡಿ 19 ವರ್ಷ ಸೇವೆ ಸಲ್ಲಿಸಿದ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆ ಮಾಡಿರುವ ಕ್ರಮವನ್ನು ಅಕ್ಷರದಾಸೋಹ ನೌಕರರ ಸಂಘ (ಸಿಐಟಿಯು ಸಂಯೋಜಿತ) ತೀವ್ರವಾಗಿ ಖಂಡಿಸಿ ದಿನಾಂಕ;11-04-2022 ರಂದು ಜಿಲ್ಲಾ ಪಂಚಾಯತಿ ಎದರು ಪ್ರತಿಭಟನೆ ನಡೆಸಿ ಉಪಕಾರ್ಯದರ್ಶಿ-1 ರವರಿಗೆ ಮನವಿ ಸಲ್ಲಿಸಲಾಯಿತು. ಸರ್ಕಾರ ನಿವೃತ್ತಿ ವೇತನ ನಿಗದಿ ಮಾಡುವವರೆಗೆ ಈ ತಕ್ಷಣದಲ್ಲಿ ಬಿಡುಗಡೆಮಾಡುವ ಬಿಸಿಯೂಟ ನೌಕರರಿಗೆ ಇಡಿಗಂಟು ರೂ. 1,00,000/-(ಒಂದು ಲಕ್ಷ ರೂಪಾಯಿಗಳು) ಪರಿಹಾರ ನೀಡಬೇಕು. ಇದಕ್ಕೆ ಸಂಬಂದಿಸಿದಂತೆ ನಮ್ಮ ಬೇಡಿಕೆಗಳ…

Read More

ತುಮಕೂರು : ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ದ ವಾರಸುದಾರರಿಗೆ ಪರಿಹಾರ ನೀಡಲು ಅರ್ಜಿ ಸ್ವೀಕಾರ ಹಾಗೂ ಅರ್ಹ ವ್ಯಕ್ತಿಗಳಿಗೆ ಪರಿಹಾರ ಪಾವತಿಸುವ ಕುರಿತು ಸುಪ್ರೀಂಕೋರ್ಟ್ ನೀಡಲಾಗಿರುವ ನಿರ್ದೇಶನಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಕೋವಿಡ್-19 ವೈರಾಣುವಿನಿಂದ ಮೃತಪಟ್ಟ ಕುಟುಂಬದವರಿಗೆ ಕೇಂದ್ರ ಸರ್ಕಾರ Sಆಖಈ ಮಾರ್ಗಸೂಚಿಯನ್ವಯ ತಲಾ 50,000 ರೂ.ಗಳ ಪರಿಹಾರ ಧನ ವಿತರಿಸಲಾಗುತ್ತಿದೆ ಎಂದ ಅವರು ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಮಾರ್ಚ್ 20, 2022ಕ್ಕೂ ಮೊದಲು ಕೋವಿಡ್ -19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪ್ರಕರಣಗಳಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಮಾರ್ಚ್ 20 2022 ರಿಂದ 60 ದಿನಗಳ ಕಾಲಮಿತಿಯನ್ನು ನಿಗದಿಗೊಳಿಸಿದೆ ಎಂದರು. ದಿನಾಂಕ 2022 ಮಾರ್ಚ್ 20ರ ನಂತರ ಕೋವಿಡ್ ನಿಂದ ಮೃತಪಟ್ಟ ವಾರಸುದಾರರು ಅರ್ಜಿ ಸಲ್ಲಿಸಲು ಮರಣ ಸಂಭವಿಸಿದ ದಿನಾಂಕದಿಂದ 90 ದಿನಗಳ ಕಾಲಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು. ಸ್ವೀಕೃತವಾದ…

Read More