Author: News Desk Benkiyabale

ತುಮಕೂರು : ದೇಶ ಕಂಡಂತಹ ಸಜ್ಜನ ರಾಜಕಾರಣಿ, ಪಕ್ಷದ ನಿಷ್ಠಾವಂತ ನಾಯಕ, ಅಜಾತ ಶತ್ರು ಮಾನವೀಯ ಮೌಲ್ಯಗಳುಳ್ಳ ಕರ್ನಾಟಕ ಸರ್ಕಾರದ ಮಾಜಿ ಉಪ ಮುಖ್ಯಮಂತ್ರಿಗಳು, ಕೊರಟಗೆರೆ ಕ್ಷೇತ್ರದ ಜನಪ್ರಿಯ ಅಭಿವೃದ್ಧಿ ಶಾಸಕರು, ಕೆ.ಪಿ.ಸಿ.ಸಿ. ಅಧ್ಯಕರ ಅವಧಿಯಲ್ಲೇ ಅತೀ ಹೆಚ್ಚು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಮುನ್ನೆಡೆಸಿದವರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಮತ್ತು ಹೈಕಮಾಂಡ್‍ನಲ್ಲಿ ಹಲವು ಪ್ರಭಾವಿ ಹುದ್ದೆಗಳನ್ನು ಜವಾಬ್ದಾರಿಯಿಂದ ಮತ್ತು ಸಮರ್ಥವಾಗಿ ನಿರ್ವಹಿಸಿದ ಕಲ್ಪತರು ನಾಡಿನ ಜನರ ಆಶಾಕಿರಣ ಡಾ.ಜಿ.ಪರಮೇಶ್ವರ ರವರ ಜೀವನದ “ಸವ್ಯಸಾಚಿ’’ ಗೌರವ ಗ್ರಂಥ ಬಿಡುಗಡೆ ಸಮಾರಂಭವನ್ನು ಏಪ್ರಿಲ್.10ರ ಭಾನುವಾರದಂದು ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಸಾವಿರಾರು ಅಭಿಮಾನಿಗಳು, ಸ್ನೇಹಿತರು ಮತ್ತು ಹಿರಿಯರೊಂದಿಗೆ ಬಿಡುಗಡೆಯಾಗುತ್ತಿದೆ. ಡಾ.ಜಿ.ಪರಮೇಶ್ವರ್ ರವರು ಆಸ್ಟ್ರೇಲಿಯಾದ ಹೆಸರಾಂತ ಅಡಿಲೈಡ್ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಪಿ.ಹೆಚ್.ಡಿ ಪದವಿಯನ್ನು ಮುಗಿಸಿಕೊಂಡು ಭಾರತಕ್ಕೆ ಹಿಂದಿರುಗಿದಾಗ 1987 ರಲ್ಲಿ ಶಿಕ್ಷಣ ಭೀಷ್ಮರಾದ ಶ್ರೀಯುತ.ಗಂಗಾಧರಯ್ಯ ರವರ ಆಹ್ವಾನದ ಮೇರೆಗೆ ಸಿದ್ದಾರ್ಥ ವೈದ್ಯಕೀಯ ಸಂಸ್ಥೆಯ ಪ್ರಾರಂಭೋತ್ಸವಕ್ಕೆ ಅಂದಿನ ಪ್ರಧಾನಿಗಳಾದ ರಾಜೀವ್‍ಗಾಂಧಿ ರವರು ಆಗಮಿಸಿದ್ದರು.…

Read More

ತುಮಕೂರು: ನಗರದ ಶ್ರೀ ಸಿದ್ಧಗಂಗಾ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘಕ್ಕೆ ಕಾಲೇಜಿನಲ್ಲಿ ಗಣಿತಶಾಸ್ತ್ರ ವಿಭಾಗದಲ್ಲಿ ಹಿರಿಯ ಪ್ರಾಧ್ಯಾಪಕರಾಗಿ ನಿವೃತ್ತರಾದ ಪ್ರೊ.ಸಿದ್ಧಗಂಗಪ್ಪ ಮತ್ತು ಅವರ ಮಗಳು ಶ್ರೀಮತಿ ಜಲಜರವರು ಒಂದು ಲಕ್ಷ ರೂಗಳ ದೇಣಿಗೆಯನ್ನು ನೀಡಿದ್ದಾರೆ.ಆ ಹಣವನ್ನು ಸಂಘ ನಿಶ್ಚಿತ ಠೇವಣಿ ಇಟ್ಟು ಪ್ರತಿ ವರ್ಷ ಆ ಹಣದಲ್ಲಿ ಬರುವ ಬಡ್ಡಿ ಹಣದಲ್ಲಿ ಕಾಲೇಜಿನಲ್ಲಿ ಓದುವ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವ್ಯಯಿಸುವಂತೆ ಸಂಘಕ್ಕೆ ಮನವಿ ಮಾಡಿದ್ದಾರೆ. ದೇಣಿಗೆ ಸ್ವೀಕರಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರೂ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಡಾ||ಹೆಚ್.ಪಿ.ವೀರಭದ್ರಸ್ವಾಮಿರವರು ಕಾಲೇಜಿನ ಹಿರಿಯ ಪ್ರಾಧ್ಯಾಪಕರಾದ ಪ್ರೊ.ಸಿದ್ಧಗಂಗಪ್ಪ ನವರು ಮತ್ತು ಅವರ ಕುಟುಂಬ ಸದಸ್ಯರು ನೀಡಿದ ಹಣದ ಪ್ರತಿ ರೂಪಾಯಿ ಕಾಲೇಜಿನಲ್ಲಿ ಓದುವ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ನೀಡಲಾಗುವುದು,ಇಂದು ನೀಡಿದ ದೇಣಿಗೆ ಎಲ್ಲರಿಗೂ ಮಾದರಿ ಎಂದು ಪ್ರಶಂಸಿದರು,ಇದೇ ರೀತಿ ಎಲ್ಲರೂ ಸಂಘಕ್ಕೆ ದೇಣಿಗೆ ನೀಡಿ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಈ…

Read More

ತುಮಕೂರು: ಇಂಧನ ಬೆಲೆಗಳ ಹೆಚ್ಚಳ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ,ಪಂಚ ರಾಜ್ಯಗಳ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಇಂಧನ ಬೆಲೆಗಳ ಹೆಚ್ಚಳವನ್ನು ಐದು ತಿಂಗಳ ಕಾಲ ಸ್ಥಗಿತ ಮಾಡಿದ್ದ ಬಿಜೆಪಿ, ಫಲಿತಾಂಶ ಪ್ರಕಟವಾದ ನಂತರ, ನಿರಂತರವಾಗಿ ಇಂಧ ಬೆಲೆಗಳನ್ನು ಹೆಚ್ಚಳ ಮಾಡಿ,ಜನಸಾಮಾನ್ಯರ ಕೈಗೆ ಎಟುಕದಂತೆ ಮಾಡಿವೆ.ಅಡುಗೆ ಅನಿಲ 1100ರ ಗಡಿ ದಾಟಿದೆ.ಇದಕ್ಕೆ ಪೂರಕವೆಂಬಂತೆ ಅಡುಗೆ ಎಣ್ಣೆ,ಅಕ್ಕಿ,ಬೆಳೆ ಬೆಲೆಗಳು ಹೆಚ್ಚಳವಾಗಿ ಜನಸಾಮಾನ್ಯರು ಬದುಕು ಕಷ್ಟಕರವಾಗಿದೆ.ಇದರಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಹಿಜಾಬ್,ಹಲಾಲ್ ಕಟ್,ಆಝಾನ್ ನಂತಹ ಧಾರ್ಮಿಕ ವಿಚಾರಗಳನ್ನು ಜನರ ಮದ್ಯೆ ತಂದು,ದೇಶದ ಕೋಮು ಸೌಹಾರ್ಧತೆಯನ್ನು ಕದಡುತ್ತಿದೆ.ಇದರ ವಿರುದ್ದ ಕಾಂಗ್ರೆಸ್ ಹೋರಾಟ ಆರಂಭಿಸಿದೆ.ಮುಂದಿನ ದಿನಗಳಲ್ಲಿ ಮತ್ತಷ್ಟು ಹೋರಾಟ ರೂಪಿಸಲಿದೆ ಎಂದರು. ದೇಶದಲ್ಲಿ ನೂರಾರು ವರ್ಷಗಳಿಂದ ಹಿಜಾಬ್,ಹಲಾಲ್,ಅಝಾನ್ ಪದ್ದತಿ ಜಾರಿಯಲ್ಲಿದೆ.ಹಲಾಲ್ ಕಟ್ ಮಾಂಸ…

Read More

ತುಮಕೂರು: ಹಿಜಾಬ್, ಹಲಾಲ್ ಕಟ್, ವ್ಯಾಪಾರ ಬಂದ್ ನಂತಹ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು, ಸದ್ದುಗದ್ದಲವಿಲ್ಲದೆ ತೈಲ ಬೆಲೆ, ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿ, ಜನ ಸಾಮಾನ್ಯರ ಜೇಬಿಗೆ ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರ ಕತ್ತರಿ ಹಾಕುತ್ತಿದೆ ಎಂದು ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಮಠ್ ಆರೋಪಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಯುವ ಕಾಂಗ್ರೆಸ್ ವತಿಯಿಂದ ಅಗತ್ಯವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡುತಿದ್ದ ಅವರು, ಜನಸಾಮಾನ್ಯರನ್ನು ಕಿತ್ತು ತಿನ್ನುತ್ತಿರುವ ಬೆಲೆ ಹೆಚ್ಚಳದ ಬಗ್ಗೆ ಮಾತನಾಡದ ಬಿಜೆಪಿ ನಾಯಕರು, ಸಂಘಪರಿವಾರ ಮತ್ತು ಅದರ ಮಿತ್ರಮಂಡಳಿಗಳು ಹೂಡುತ್ತಿರುವ ಷಡ್ಯಂತ್ರಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಾ,ದೇಶವನ್ನು ಅದೋಗತಿಗೆ ತಳ್ಳುತ್ತಿದೆ ಎಂದರು. ಭಾರತ ಒಂದು ಜಾತ್ಯಾತೀತ ರಾಷ್ಟ್ರ.ಇಲ್ಲಿ ಎಲ್ಲ ಧರ್ಮಿಯರು ನೆಮ್ಮದಿಯಿಂದ ವ್ಯಾಪಾರ, ವಹಿವಾಟು ನಡೆಸಿಕೊಂಡು ಹೋಗಲು ಮುಕ್ತ ಅವಕಾಶವಿದೆ.ಆದರೆ ಇತ್ತೀಚಿನ ದಿನಗಳಲ್ಲಿ ಹಲಾಲ್ ಕಟ್ ಹೆಸರಿನಲ್ಲಿ ಮಾಂಸ ವ್ಯಾಪಾರವನ್ನು, ಜಾತ್ರೆಗಳಲ್ಲಿ ಮುಸ್ಲಿಂ ಧರ್ಮಿಯರಿಗೆ ಅವಕಾಶ…

Read More

ತುಮಕೂರು: ನಗರದ ಅಮಾನಿಕೆರೆಗೆ ಅಣೆತೋಟದ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಮಳೆ ನೀರು ಹರಿಯುತ್ತಿರುವ ಕಾಲುವೆಗೆ ತಡೆಗೋಡೆ ನಿರ್ಮಾಣ ಮಾಡುವ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಇಂದು ಚಾಲನೆ ನೀಡಿದರು. ಅಣೆತೋಟದ ಮೂಲಕ ಹಾದು ಹೋಗಿರುವ ಮುಖ್ಯ ಕಾಲುವೆಗೆ ತಡೆಗೋಡೆ ಹಾಗೂ ಅಮಾನಿಕೆರೆಗೆ ಈ ಕಾಲುವೆ ಸೇರಿಕೊಳ್ಳುವ ಜಾಗದಲ್ಲಿ ಚೆಕ್ ಡ್ಯಾಂ ನಿರ್ಮಾಣ ಕಾರ್ಯಕ್ಕೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ನಗರದ ಸತ್ಯಮಂಗಲ ಸೇರಿದಂತೆ ವಿವಿಧೆಡೆಗಳಿಂದ ಮಳೆ ನೀರು ಅಣೆತೋಟದಲ್ಲಿ ಹಾದು ಹೋಗಿರುವ ಮುಖ್ಯ ಕಾಲುವೆ ಮೂಲಕ ಹರಿದು ಅಮಾನಿಕೆರೆಗೆ ಸೇರುತ್ತಿದ್ದು, ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದ ಸಂದರ್ಭದಲ್ಲಿ ಜನತೆಗೆ ತೀವ್ರ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಈ ಭಾಗದ ಪಾಲಿಕೆ ಸದಸ್ಯರುಗಳು, ಸಾರ್ವಜನಿಕರ ಮನವಿ ಮೇರೆಗೆ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ. ಮಾಧುಸ್ವಾಮಿ ಅವರಿಗೆ ಈ ಕಾಲುವೆಗೆ ತಡೆಗೋಡೆ ನಿರ್ಮಿಸಲು ಅನುದಾನ ನೀಡುವಂತೆ ಮನವಿ ಮಾಡಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ಸಚಿವರು ತಡೆಗೋಡೆ ಮತ್ತು ಚೆಕ್ ಡ್ಯಾಂ…

Read More

ತುಮಕೂರು: ತುಮಕೂರು ನಗರದ ರೈಲು ನಿಲ್ದಾಣದಿಂದ ಪ್ರತಿನಿತ್ಯ ತುಮಕೂರು-ಬೆಂಗಳೂರು ನಡುವೆ ಸಂಚರಿಸುವ ಮೆಮು ವಿಶೇಷ ರೈಲು ಸಂಚಾರಕ್ಕೆ ಸಂಸದರಾದ ಶ್ರೀ ಜಿ.ಎಸ್. ಬಸವರಾಜು ಅವರಿಂದು ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆ ಈ ದಿನ ಈಡೇರಿದಂತಾಗಿದೆ. ತುಮಕೂರು ಮತ್ತು ಬೆಂಗಳೂರಿನ ಕೆಎಸ್‍ಆರ್ ರೈಲು ನಿಲ್ದಾಣದ ನಡುವೆ ಸಂಚರಿಸುವ ಈ ವಿದ್ಯುತ್‍ಚಾಲಿತ ರೈಲು ಸೇವೆ(ಮೆಮು)ಯಿಂದ ಮುಖ್ಯವಾಗಿ ಕಾರ್ಮಿಕರು, ರೈತಾಪಿ ವರ್ಗದವರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಬೆಂಗಳೂರು-ತುಮಕೂರು 8 ಭೋಗಿಗಳುಳ್ಳ ಡೆಮು ರೈಲನ್ನು ಪ್ರಯಾಣಿಕರ ಅನುಕೂಲಕ್ಕಾಗಿ 16 ಭೋಗಿಗಳುಳ್ಳ ಮೆಮು ರೈಲನ್ನಾಗಿ ಪರಿವರ್ತಿಸಲಾಗಿದೆ. ಸುಮಾರು 20 ವರ್ಷಗಳಿಂದ ಹೋರಾಟದ ಶ್ರಮದಿಂದ ಎರಡು ಪ್ರಮುಖ ನಗರಗಳ ನಡುವೆ ಸಂಚರಿಸುವ ಈ ಮೆಮು ರೈಲು ಸೇವೆ ಸಾಕಾರವಾಗಿದೆ ಎಂದರಲ್ಲದೆ, 2024ರೊಳಗಾಗಿ ರಾಷ್ಟ್ರದ ಎಲ್ಲಾ ರೈಲು ಮಾರ್ಗಗಳು ಡೀಸೆಲ್ ಮುಕ್ತ ವಿದ್ಯುತ್ ಚಾಲಿತ ರೈಲು ಮಾರ್ಗಗಳಾಗಬೇಕೆಂದು ಪ್ರಧಾನಿ ಮೋದಿಯವರ ದೊಡ್ಡ ಕನಸಾಗಿದೆ. ಇದನ್ನು ನನಸಾಗಿಸಲು ಪ್ರಯಾಣಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದರು.…

Read More

ತುಮಕೂರು : ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಏಪ್ರಿಲ್ 21ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ಸೇವೆಯಲ್ಲಿ ಅತ್ಯುನ್ನತ ಸೇವೆಗೈದ ಜಿಲ್ಲೆಯ ಸರ್ಕಾರಿ ಅಧಿಕಾರಿ/ನೌಕರರು ಸೇರಿದಂತೆ ಹತ್ತು ಮಂದಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯು 10ಸಾವಿರ ರೂ. ನಗದು ಪುರಸ್ಕಾರ ಹಾಗೂ ನೆನಪಿನ ಕಾಣಿಕೆಯನ್ನು ಒಳಗೊಂಡಿರುತ್ತದೆ. ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಎ ಮತ್ತು ಬಿ ಗ್ರೂಪಿನ ತಲಾ 2, ಸಿ ಹಾಗೂ ಡಿ ಗ್ರೂಪಿನ ತಲಾ 3 ಮಂದಿಯನ್ನು ಆಯ್ಕೆ ಮಾಡಲಾಗುವುದು. ಪ್ರಶಸ್ತಿ ಆಯ್ಕೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ತಿಳಿಸಿದರಲ್ಲದೆ, ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಜಿಲ್ಲೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸರ್ಕಾರಿ ಅಧಿಕಾರಿ/ನೌಕರರ ಎರಡು ಹೆಸರುಗಳನ್ನು ರಾಜ್ಯ ಮಟ್ಟದ ಸಮಿತಿಗೆ ಶಿಫಾರಸ್ಸು ಮಾಡಲಾಗುವುದು…

Read More

ತುಮಕೂರು: ಭೂಮಿ ಮತ್ತು ವಸತಿ ವಂಚಿತ ಸಮುದಾಯ ಹಾಗೂ ಭ್ರಷ್ಟಾಚಾರ ನಿಮೂರ್ಲನ ವೇದಿಕೆಯ ವತಿಯಿಂದ ಭೂಮಿ ಮತ್ತು ವಸತಿ ಹಕ್ಕಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಆಹೋರಾತ್ರಿ ಧರಣಿ 17ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಭೇಟಿ ನೀಡಿ ಪ್ರತಿಭಟನಾನಿರತರ ಮನವಿ ಆಲಿಸಿದರು. ಕಳೆದ 17ನೇ ದಿನದಿಂದ ಜಿಲ್ಲೆಯ ವಿವಿಧೆಡೆ ವಸತಿ ಮತ್ತು ಭೂಮಿ ರಹಿತ ಹೋರಾಟಗಾರರು ಒಂದೆಡೆ ಸೇರಿ,ಬಗರ್ ಹುಕಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವ ಜನರಿಗೆ ಕೂಡಲೇ ಸಾಗುವಳಿ ಚೀಟಿ ಬಿಡುಗಡೆ ಮಾಡಬೇಕು ಹಾಗು ದಲಿತ ವಿರೋಧಿ ಧೋರಣೆ ಹೊಂದಿರುವ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಬೇಕೆಂದು ಆಗ್ರಹಿಸಿ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಸಂಚಾಲಕ ಹಂದ್ರಾಳು ನಾಗಭೂಷಣ್ ಅವರ ನೇತೃತ್ವದಲ್ಲಿ ಮಾರ್ಚ್ 21 ರಿಂದ ತಮ್ಮ ಕುಟುಂಬದ ಸದಸ್ಯರು,ಕುರಿ,ಮೇಕೆಗಳೊಂದಿಗೆ ಸ್ಥಳದಲ್ಲಿಯೇ ಅಡುಗೆ ತಯಾರಿಸಿ,ಊಟೋಪಚಾರ ಮಾಡುವ ಮೂಲಕ ಹೋರಾಟ ನಡೆಸುತ್ತಿದ್ದಾರೆ. ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರತಿಭಟನಾ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ವಿಧಾನಪರಿಷತ್ ಸದಸ್ಯರಿಗೆ,ತಮ್ಮ…

Read More

ಬೆಂಗಳೂರು :       ಕರ್ನಾಟಕ ರಾಜ್ಯ ನೌಕರರ ಪ್ರಮುಖ ಬೇಡಿಕೆ ಈಡೇರಿಸುವ ಭರವಸೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು. ರಾಜ್ಯ ಸರ್ಕಾರಿ ನೌಕರ ತುಟ್ಟಿ ಭತ್ಯೆ ಹೆಚ್ಚಳ ಮಾಡುವ ಬಗ್ಗೆ ತಿಳಿಸಿದ್ದು, ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದಿದ್ದಾರೆ.       ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.       ವೇತನ ಪರಿಷ್ಕರಣೆ ಕುರಿತಂತೆ ಆಯೋಗ ರಚನೆಗಾಗಿ ಮಾಜಿ ಸಿಎಂ ಯಡಿಯೂರಪ್ಪ ಪತ್ರ ಬರೆದಿದ್ದರು. ಕಳೆದ ಹಲವು ವರ್ಷಗಳಿಂದ ರಾಜ್ಯ ನೌಕರರ ಸಂಘದ ವತಿಯಿಂದ ಸರ್ಕಾರ ಸಲ್ಲಿಸಿದ ಬೇಡಿಕೆಯಲ್ಲಿ ಈ ಅಂಶ ಪ್ರಮುಖವಾಗಿತ್ತು.        7ನೇ ವೇತನ ಆಯೋಗದಂತೆ ರಾಜ್ಯ ಸರ್ಕಾರಿ ನೌಕರರ…

Read More

ತುಮಕೂರು :       ಬೇಸಿಗೆ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.       ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗದಂತೆ ಗ್ರಾಮೀಣ ಪ್ರದೇಶಗಳಲ್ಲಿ ಆಯಾ ಪಿ.ಡಿ.ಒ ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿಗಳು ಮತ್ತು ನಗರ ಪ್ರದೇಶಗಳಲ್ಲಿ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರಲ್ಲದೆ, ಅಗತ್ಯ ಇರುವ ಕಡೆ ಕೊಳವೆಬಾವಿ ಕೊರೆಸುವುದು, ಪೈಪ್ ಲೈನ್ ಅಳವಡಿಸುವ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಿದರು.       ಜಿಲ್ಲೆಯಲ್ಲಿ ಸಕಾಲ ಯೋಜನೆಯಡಿ ಸರ್ಕಾರಿ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯತ್ತಮವಾಗಿ ಒದಗಿಸುವಲ್ಲಿ ಜಿಲ್ಲೆ ಎರಡನೇ ಸ್ಥಾನ ಪಡೆದುಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಅಭಿನಂದಿಸಿದರಲ್ಲದೆ, ಇನ್ನೂ ಉತ್ತಮ ರೀತಿಯಲ್ಲಿ ಸೇವೆ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.…

Read More