Author: News Desk Benkiyabale

ತುಮಕೂರು :         ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತುಮಕೂರು ಹೊರವಲಯದ ಅಂತರಸನಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.       ಇಂದು ಬೆಳಗಿನ ಜಾವ 3.50 ರ ಸುಮಾರಿಗೆ ಘಟನೆ ಸಂಭವಿಸಿದ್ದು,   ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಬಂದು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.       ಖಾಸಗಿ ಬಸ್ ಸೊರಬದಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

Read More

      ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಒದಗಿಸುವ ಸಲುವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಕಾಲ ಯೋಜನೆಯಡಿ ಸೇವೆ ನೀಡುವಲ್ಲಿ ತುಮಕೂರು ಜಿಲ್ಲೆ 2ನೇ ಸ್ಥಾನ ಪಡೆದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಸ್ವೀಕಾರ:       ನಾಗರಿಕರ ಸೇವೆಗೆ ಸಾರ್ಥಕತೆ ತಂದ ಸಕಾಲ ಸೇವೆ ಜಾರಿಗೆ ಬಂದು 2022ರ ಏಪ್ರಿಲ್ 2ಕ್ಕೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿಂದು ಜರುಗಿದ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ಅವರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರಿಗೆ ಪ್ರಶಸ್ತಿ ಹಾಗೂ ಪ್ರಶಂಸನಾ ಪ್ರಮಾಣ ಪತ್ರ ನೀಡಿ ಗೌರವಿಸಿದರು.      ಜಿಲ್ಲೆಯಲ್ಲಿ ಸಕಾಲ ಸೇವೆ ಅನುಷ್ಠಾನದಲ್ಲಿ 2022ರ ಮಾರ್ಚ್ ಮಾಹೆಯ ಪ್ರಗತಿಯನ್ನಾಧರಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. 1,55,378 ಅರ್ಜಿ ವಿಲೇವಾರಿ        ನಾಗರಿಕರು ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಸರ್ಕಾರದ ಸೇವೆಗಳನ್ನು ನಿಗಧಿತ…

Read More

ತುಮಕೂರು :       ವಿದ್ಯುಧೀಕರಣ ಪೂರ್ಣಗೊಂಡಿರುವ ತುಮಕೂರು ಬೆಂಗಳೂರು ನಡುವಿನ ಮಾರ್ಗದಲ್ಲಿ 16 ಕೋಚಿನ ಮೆಮು ರೈಲು (ವಿದ್ಯುತ್ ರೈಲು) ಸಂಚಾರಕ್ಕೆ ನೈರುತ್ಯ ವಲಯದ ರೈಲ್ವೆ ಅಧಿಕಾರಿಗಳಿಂದ ಹಸಿರು ನಿಶಾನೆ ದೊರಕಿದ್ದು, ಏಪ್ರಿಲ್ 8, 2022 ರಿಂದ ರೈಲು ಸಂಚಾರ ಆರಂಭಗೊಳ್ಳಿಲಿದೆ ಎಂದು ಸಂಸದ ಜಿ.ಎಸ್.ಬಸವರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.       ಅಂತೆಯೇ ಅರಸಿಕೆರೆ-ತಿಪಟೂರು-ಬಾಣಸಂದ್ರ-ನಿಟ್ಟೂರು-ಗುಬ್ಬಿ-ತುಮಕೂರು-ಬೆಂಗಳೂರು ನಡುವೆ ಸದ್ಯ ಓಡುತ್ತಿರುವ 8 ಕೋಚಿನ ಬದಲಾಗಿ 18 ಕೋಚಿನ ಐಸಿಎಫ್ ಕೋಚ್ ರೈಲು ಏಪ್ರಿಲ್ 8 ರಿಂದ ಸಂಚಾರ ಪ್ರಾರಂಭಿಸಲಿದ್ದು ಇದಕ್ಕಾಗಿ ಮಾನ್ಯ ರೈಲ್ವೇ ಸಚಿವರಿಗೆ ಮತ್ತು ವಲಯ ಮಟ್ಟ ವಿಭಾಗೀಯ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಲು ಹರ್ಷಿಸುವುದಾಗಿ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.       ತುಮಕೂರು – ಯಶವಂತಪುರ ನಡುವೆ ಹಾಲಿ 8 ಕೋಚಿನ ಡೆಮು ಸೇವೆ ಚಾಲನೆಯಲ್ಲಿದ್ದು ಪ್ರತಿನಿತ್ಯ ಬೆಂಗಳೂರಿಗೆ ಕೆಲಸಕ್ಕೆ ಹೋಗುವ ಸಾವಿರಾರು ಪ್ರಯಾಣಿಕರು ಜನದಟ್ಟನೆಯಿಂದಾಗಿ ನಿಂತುಕೊಂಡೆ ಪ್ರಯಾಣ ಮಾಡಬೇಕಿತ್ತು. ಈ ಹಿನ್ನೆಲೆಯಲ್ಲಿ ತಾವು…

Read More

ತುಮಕೂರು: ರಾಜ್ಯ ಸರಕಾರ ಮಹತ್ವದ ಬಿಸಿಯೂಟ ಯೋಜನೆಗೆ ಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರಿಡುವುದಾಗಿ ಸಿ.ಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ ಮಾಡಿದರು. ಶ್ರೀಗಳ ಹೆಸರು ಘೋಷಿಸಬೇಕೆಂದು ಮುಖ್ಯಮಂತ್ರಿಗಳಲ್ಲಿ ಪ್ರಾಸ್ತಾವಿಕ ಭಾಷಣದಲ್ಲಿ ಮನವಿ ಮಾಡಿದ ಗುರುವಂದನಾ ಸ್ವಾಗತ ಸಮಿತಿಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ. ಈಗಾಗಲೇ ಶ್ರೀಗಳ ಪುಣ್ಯ ಸ್ಮರಣೆಯ ದಿನವನ್ನು ದಾಸೋಹ ದಿನವಾಗಿ ಘೋಷಿಸಿದ್ದು ಶ್ರೀಗಳ ಜನ್ಮದಿನದ ಸಂದರ್ಭದಲ್ಲಿ ಅವರ ಹೆಸರನ್ನು ಚಿರಸ್ಥಾಯಿಯಾಗಿಸಲು ಬಿಸಿಯೂಟದ ಯೋಜನೆಗೆ ಶ್ರೀಗಳ ಹೆಸರಿಡುವ ಸರಕಾರಿ ಆದೇಶವನ್ನು ಶೀಘ್ರವೇ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Read More

ತುಮಕೂರು ನಗರಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಾಜ್ಯ ಬಿಜೆಪಿ ನಾಯಕರು ಅದ್ಧೂರಿ ಸ್ವಾಗತ ಕೋರಿದರು. ತುಮಕೂರು ವಿವಿ ಆವರಣದ ಹೆಲಿಪ್ಯಾಡ್‍ಗೆ ಅಮಿತ್ ಶಾ ಬಂದಿಳಿಯುತ್ತಿದ್ದಂತೆ ಹೆಲಿಪ್ಯಾಡ್‍ನಿಂದ ಮಠದವರೆಗೂ ಅಮಿತ್ ಶಾ ಅವರ ಕಾರಿನ ಮೇಲೆ ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿದ್ದ ಸಾರ್ವಜನಿಕರು ಪುಷ್ಪಾರ್ಚನೆ ಮಾಡಿದರು. . ಅಮಿತ್ ಶಾ ಅವರೊಂದಿಗೆ ಪ್ರಹ್ಲಾದ್ ಜೋಶಿ ಕೂಡ ಆಗಮಿಸಿದ್ದರು. ಅಮಿತ್ ಶಾ ಅವರ ಸ್ವಾಗತಕ್ಕೆ ವಿವಿಧ ಕಲಾ ತಂಡಗಳು ಮೆರುಗು ನೀಡಿದವು. ವಿಶ್ವವಿದ್ಯಾಲಯದ ಮುಂಭಾಗ ಕಹಳೆ, ವೀರಗಾಸೆ, ಡೊಳ್ಳುಕುಣಿತ, ಡ್ರಮ್ ಸೆಟ್ ಕಲಾವಿದರು ಸಾಂಸ್ಕøತಿಕ ವೈಭವದ ಮೂಲಕ ಅಮಿತ್ ಶಾ ಅವರನ್ನು ಅದ್ದೂರಿ ಯಾಗಿ ಬರಮಾಡಿಕೊಂಡರು. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಂತರ ತ್ರಿವಿಧ ದಾಸೋಹಿ, ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಕ್ಷೇತ್ರದಲ್ಲಿ ಆಯೋಜಿಸುರುವ `ನಡೆದಾಡುವ ದೇವರ ಬಸವ ಭಾರತ’ ಕಾರ್ಯಕ್ರಮವನ್ನು ಅಮಿತ್ ಶಾ ಉದ್ಘಾಟಿಸಿದರು. ಬಳಿಕ…

Read More

ತುಮಕೂರು :       ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯ ಆಗಮನದ ವೇಳೆ ತುಮಕೂರಿನ ಕಾಂಗ್ರೆಸ್ ನ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡರು  ಸ್ವಾಗತಕ್ಕೆ ಆಗಮಿಸದಿರುವುದು ಹಲವು ಅನುಮಾನಕ್ಕೆಡೆಮಾಡಿಕೊಡುತ್ತಿದೆ. ಕಳೆದ ಬಾರಿ ಟಿಕೆಟ್ ಕೈ ತಪ್ಪುವುದಕ್ಕೆ ರಾಹುಲ್ ಗಾಂಧಿರವರ ನಿರ್ದೇಶನ ಬಹುಮುಖ್ಯ ಎಂಬ ಮಾತು ಕೇಳಿಬಂದಿತ್ತು. ಕಾಂಗ್ರೆಸ್‍ನಲ್ಲಿ ಎಲ್ಲವೂ ಸರಿಯಿಲ್ಲವೆಂಬ ಸ್ಪಷ್ಟ ಸಂದೇಶವನ್ನ ರವಾನಿಸಲು ಮುದ್ದಹನುಮೇಗೌಡರ ಗೈರು ಹಾಜರಿ ಎತ್ತಿ ತೋರಿಸುತ್ತಿತ್ತು. ರಾಷ್ಟ್ರೀಯ ಪಕ್ಷದ ವರಿಷ್ಠ ರಾಹುಲ್ ಗಾಂಧಿರವರ ತುಮಕೂರು ಭೇಟಿಯ ಸಂದರ್ಭದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡರು ಸನಿಹದಲ್ಲಿರಬೇಕಿತ್ತು ಆದರೆ, ಅವರ ಗೈರು ಹಾಜರಿಗೆ ಮುದ್ದಹನುಮೇಗೌಡರ ಮುನಿಸೇ ಕಾರಣ ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ಗುಸುಗುಡುತ್ತಿದ್ದರು. ಜಿಲ್ಲಾ ಕಾಂಗ್ರೆಸ್‍ನಲ್ಲಿ ಒಗ್ಗಟ್ಟಿಲ್ಲವೆಂಬ ಸ್ಪಷ್ಟ ಸಂದೇಶ ಈ ಭೇಟಿಯ ಸಂದರ್ಭದಲ್ಲಿ ಎದ್ದುಕಾಣುತ್ತಿತ್ತು.

Read More

ತುಮಕೂರು :       ಕಾಯಕ ಯೋಗಿ, ತ್ರಿವಿಧ ದಾಸೋಹಿ, ಪದ್ಮಭೂಷಣ, ಕರ್ನಾಟಕ ರತ್ನ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತಿ ಸವಿನೆನಪಿಗಾಗಿ ನಗರದ ರಾಷ್ಟ್ರೀಯ ಹೆದ್ದಾರಿ-206 ರ ಬಟವಾಡಿ ಮಿರ್ಜಿ ಪೆಟ್ರೋಲ್ ಬಂಕ್‍ನಿಂದ ಗುಬ್ಬಿ ಗೇಟ್ ವರೆಗಿನ ರಸ್ತೆಗೆ ಮಹಾನಗರ ಪಾಲಿಕೆ ವತಿಯಿಂದ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ರಸ್ತೆ ಎಂದು ನಾಮಕರಣ ಮಾಡಲಾಯಿತು. ನಗರದ ಬಟವಾಡಿಯಲ್ಲಿಂದು ಬೆಳಿಗ್ಗೆ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸಂಸದ ಜಿ.ಎಸ್. ಬಸವರಾಜು ಅವರು ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ರಸ್ತೆ ನಾಮಫಲಕವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಜಿ.ಎಸ್. ಬಸವರಾಜು, ಇಂದು ಸುದಿನ, ಶ್ರೀಗಳ 115ನೇ ವರ್ಷದ ಜಯಂತಿ ಸವಿನೆನಪಿಗಾಗಿ ಬಟವಾಡಿಯಿಂದ ಗುಬ್ಬಿಗೇಟ್ ವರೆಗಿನ ರಾಷ್ಟ್ರೀಯ ಹೆದ್ದಾರಿ-206ಕ್ಕೆ ಶ್ರೀಗಳ ಹೆಸರು ನಾಮಕರಣ ಮಾಡಲಾಗಿದೆ. ಈ ಹೆಸರು ಯಾವಾಗಲೂ ಚಿರಾಯು ಆಗಿರಬೇಕು ಎಂದರು. ನಗರಕ್ಕೆ ಆಗಮಿಸುವ ಪ್ರತಿಯೊಬ್ಬರೂ ಶ್ರೀಗಳ ಪುತ್ಥಳಿಯನ್ನು…

Read More

ತುಮಕೂರು :      ಕಾಯಕ ಯೋಗಿ, ಆಧುನಿಕ ಬಸವಣ್ಣ, ತ್ರಿವಿಧ ದಾಸೋಹಿ, ನಾಡಿನ ಉದ್ದಗಲಕ್ಕೂ ನಡೆದಾಡುವ ದೇವರೆಂದೇ ಹೆಸರುವಾಸಿಯಾಗಿದ್ದ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವಕ್ಕೆ ನಡೆದಿರುವ ಅಂತಿಮ ಹಂತದ ಸಿದ್ದತೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಶೀಲನೆ ನಡೆಸಿದರು. ಶ್ರೀಗಳ 115ನೇ ಜಯಂತಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಂಡಿರುವ ಅಭೂತ ಪೂರ್ವ ಭದ್ರತಾ ಕಾರ್ಯ, ಶ್ರೀಗಳ ಗುರುವಂದನಾ ಮಹೋತ್ಸವಕ್ಕೆ ಸಿದ್ದಗೊಳ್ಳುತ್ತಿರುವ ಬೃಹತ್ ವೇದಿಕೆಯನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಅವರಿಂದ ಮಾಹಿತಿ ಪಡೆದರು. ನಗರದ ಸಿದ್ದಗಂಗಾ ಮಠಕ್ಕೆ ಸಚಿವರಾದ ಅರಗ ಜ್ಞಾನೇಂದ್ರ, ಜೆ.ಸಿ. ಮಾಧುಸ್ವಾಮಿ, ವಿ. ಸೋಮಣ್ಣ ಅವರೊಂದಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀಗಳ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಂತರ ಶ್ರೀಮಠದ ಆವರಣದಲ್ಲಿ…

Read More

ತುಮಕೂರು : ಶಿವಕುಮಾರ ಸ್ವಾಮೀಜಿಯವರ 115ನೇ ಜನ್ಮದಿನೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಏ.1 ನಡೆಯುತ್ತಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದರೂ ತಪ್ಪಾಗಲಾರದು. ಈ ಜಯಂತಿ ಉತ್ಸವ ರೀತಿಯಲ್ಲಿ ನಡೆಯಬೇಕು. ಕಾರ್ಯಕ್ರಮಕ್ಕೆ ಸುಮಾರು ಒಂದೂವರೆ ಎರಡು ಲಕ್ಷ ಜನ ಬರುವ ನಿರೀಕ್ಷೆಯಿದೆ. ಆಗಾಗಿ ನಮ್ಮ ಎಲ್ಲ ಪೊಲೀಸ್ ಇಲಾಖೆ ಎಲ್ಲ ರೀತಿಯ ಭದ್ರತೆಯನ್ನು ಮಾಡಿಕೊಂಡಿದೆ. ಬರುವ ಎಲ್ಲ ಭಕ್ತಾದಿಗಳಿಗೆ ಪ್ರಸಾದ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಸಚಿವ ಅಮಿತ್ ಶಾ ಅವರು ಏ.1ರ 10.30ರ ಸಮಯಕ್ಕೆ ಶ್ರೀಮಠಕ್ಕೆ ಆಗಮಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಈ ಕ್ಷೇತ್ರದ ಮಹಿಮೆಯೇ ಅಂತದ್ದು, ರಾಜ್ಯದ ಎಲ್ಲ ಮಠದ ಮಠಾಧೀಶರು ಆಗಮಿಸಲಿದ್ದಾರೆ. ಈ ಮಠ ಎಲ್ಲ ಜಾತಿಮತಗಳನ್ನು ಮೀರಿದ್ದು ಎಂದರು. ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಆದಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆಡಳಿತ ಪಕ್ಷದ ಎಲ್ಲ ರಾಜಕೀಯ…

Read More

ತುಮಕೂರು : ಜಿಲ್ಲಾಡಳಿತ ಹಾಗೂ ಸಂಘಟನೆಗಳೆಲ್ಲರ ಸಹಕಾರದೊಂದಿಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ 131ನೇ ಡಾ: ಬಿ.ಆರ್. ಅಂಬೇಡ್ಕರ್ ಹಾಗೂ 115ನೇ ಡಾ: ಬಾಬು ಜಗಜೀವನರಾಂ ಜನ್ಮದಿನಾಚರಣೆಯನ್ನು ಏಪ್ರಿಲ್ 14ರಂದು ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಯಂತಿಯನ್ನು ವಿಜೃಂಭಣೆಯಿಂದ ನಡೆಸಲು ಹಾಗೂ ಡೀಸಿ ಕಚೇರಿಯಿಂದ ಎಂ.ಜಿ.ರಸ್ತೆ, ಟೌನ್ ಹಾಲ್ ವೃತ್ತ ಮಾರ್ಗವಾಗಿ ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೆ ಡಾ: ಬಾಬು ಜಗಜೀವನರಾಂ ಹಾಗೂ ಡಾ: ಬಿ.ಆರ್. ಅಂಬೇಡ್ಕರ್ ಭಾವಚಿತ್ರಗಳ ಮೆರವಣಿಗೆ ಏರ್ಪಡಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು. ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಮಹನೀಯರ ದಿನಾಚರಣೆಯನ್ನು ಆಚರಿಸಬೇಕು. ಜನ್ಮ ದಿನಾಚರಣೆ ಕಾರ್ಯಕ್ರಮ ಹಾಗೂ ಮೆರವಣಿಗೆಯಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಶಿಷ್ಟಾಚಾರದನ್ವಯ ಮುಖ್ಯ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಹರಿರಾಮ್ ಹಾಗೂ ಡಾ: ಸದಾಶಿವ ಅವರಿಂದ…

Read More