ತುಮಕೂರು : ಮಹಿಳೆಯರಲ್ಲಿ ಹೆಚ್ಚಾಗಿ ಕ್ಯಾನ್ಸರ್ ಕಂಡು ಬರುವುದರಿಂದ ಆರಂಭದಲ್ಲಿಯೇ ಸೂಕ್ತ ಚಿಕಿತ್ಸೆಯನ್ನು ಪಡೆಯುವುದರ ಮೂಲಕ ಕ್ಯಾನ್ಸರ್ ಕಾಯಿಲೆಯನ್ನು ತಡೆಗಟ್ಟಬಹುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಡಾ: ಕೆ.ವಿದ್ಯಾಕುಮಾರಿ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಸ್ಪತ್ರೆಂiÀi ಆಡಿಟೋರಿಯಂನಲ್ಲಿಂದು ಆಯೋಜಿಸಲಾಗಿದ್ದ ಬೃಹತ್ ಕ್ಯಾನ್ಸರ್ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಾಣಿಸಿಕೊಳ್ಳುವುದರಿಂದ ಆರಂಭದಲ್ಲಿಯೇ ತಪಾಸಣೆಗೆ ಒಳಗಾಗಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಘಟಕದ ಸಭಾಪತಿ ನಾಗಣ್ಣ ಮಾತನಾಡಿ ಈಗಾಗಲೇ ಮಧುಗಿರಿ ಹಾಗೂ ತಿಪಟೂರಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲಾಗಿದೆ ಎಂದರಲ್ಲದೆ, 30 ವರ್ಷ ಮೇಲ್ಪಟ್ಟ ಮಹಿಳೆಯರು ಕಡ್ಡಾಯವಾಗಿ ಕ್ಯಾನ್ಸರ್ ತಪಾಸಣೆಗೆ ಒಳಗಾಗಬೇಕು. ಕ್ಯಾನ್ಸರ್ ಕಾಯಿಲೆಯ ಬಗ್ಗೆ ಗ್ರಾಮೀಣ ಪ್ರದೇಶದ ಜನರಲ್ಲಿರುವ…
Author: News Desk Benkiyabale
ತುಮಕೂರು : ಅಲೆಮಾರಿ, ಅರೆ ಅಲೆಮಾರಿಗಳಿಗೆ ನಿವೇಶನ ನೀಡುವುದು ಸೇರಿದಂತೆ ಅವರ ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಎಲ್ಲಾ ತಹಶೀಲ್ದಾರ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಅಲೆಮಾರಿ, ಅರೆ ಅಲೆಮಾರಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರುವುದು ಗಮನಕ್ಕೆ ಬಂದಿದ್ದು, ಜಿಲ್ಲೆಯಲ್ಲಿ ನಿವೇಶನ ರಹಿತ ಅಲೆಮಾರಿ/ಅರೆ ಅಲೆಮಾರಿಗಳಿಗೆ ನಿವೇಶನ ನೀಡುವುದು ಸೇರಿದಂತೆ ಅವರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. ಮಧುಗಿರಿ ಹಾಗೂ ಕೊರಟಗೆರೆ ತಾಲ್ಲೂಕುಗಳಲ್ಲಿ ಅಲೆಮಾರಿ/ಅರೆ ಅಲೆಮಾರಿ ಸಮುದಾಯದವರು ಹೆಚ್ಚಿನ ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ವರದಿಯಾಗಿದ್ದು, ತ್ವರಿತವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಳೆದ ಶುಕ್ರವಾರ ಪರಿಶಿಷ್ಟರ ಅನುದಾನ ಬಳಕೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯಡಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಸುವಲ್ಲಿ ಕಡಿಮೆ ಪ್ರಗತಿ ಸಾಧಿಸಿದ ಹಾಗೂ ಪರಿಶೀಲನಾ…
ತುಮಕೂರು : ಜಿಲ್ಲೆಯಲ್ಲಿ ಗುರುತಿಸಿರುವ 59 ರಸ್ತೆ ಬ್ಲ್ಯಾಕ್ಸ್ಪಾಟ್ಸ್ಗಳಲ್ಲಿ ಪದೇ ಪದೇ ಅಪಘಾತಗಳಾಗುತ್ತಿದ್ದು, ಅಪಘಾತಗಳು ಮತ್ತೊಮ್ಮೆ ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಪಾವಗಡ ತಾಲ್ಲೂಕು ಪಳವಳ್ಳಿಕಟ್ಟೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸತ್ತವರ ಸಂಖ್ಯೆ 7ಕ್ಕೆ ಏರಿದ್ದು, ಅಪಘಾತದಲ್ಲಿ ಸಾವನ್ನಪ್ಪಿರುವ ಹಾಗೂ ಗಾಯಗೊಂಡವರ ಕುಟುಂಬಗಳು ಕೇಳುವ ಪ್ರಶ್ನೆಗೆ ಉತ್ತರಿಸಲಾಗುತ್ತಿಲ್ಲ. ಅಪಘಾತದಲ್ಲಿ ಸತ್ತವರಿಗೆ ಪರಿಹಾರ ನೀಡುವುದಕ್ಕಿಂತ ಅಪಘಾತಗಳು ನಡೆಯದಂತೆ ಕ್ರಮ ಕೈಗೊಳ್ಳವುದೊಂದೇ ನಮಗಿರುವ ಮಾರ್ಗವೆಂದು ತಿಳಿಸಿದರು. ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಗುರುತಿಸಿರುವ ಬ್ಲ್ಯಾಕ್ಸ್ಪಾಟ್ಗಳಲ್ಲಿ ರಸ್ತೆ ಅಗಲೀಕರಣ, ರಸ್ತೆ ತಿರುವು, ಅಗಲೀಕರಣಕ್ಕೆ ಅಗತ್ಯವಿರುವ ಭೂಸ್ವಾಧೀನ, ಸೈನ್ ಬೋರ್ಡ್ ಅಳವಡಿಕೆ, ಸ್ಕೈವಾಕ್ ಅಳವಡಿಕೆ ಸಮಸ್ಯೆಗಳಿದ್ದಲ್ಲಿ ಶೀಘ್ರವೇ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದ ಅವರು, ಅಪಘಾತಕ್ಕೆ ಕಾರಣವೆನ್ನಲಾದ ಪಳವಳ್ಳಿ ಬಳಿಯಿರುವ ರಸ್ತೆ…
ತುಮಕೂರು: ಕೃಷಿಯನ್ನೇ ನಂಬಿ ಬದುಕುತ್ತಿರುವ ತಿಗಳ ಸಮುದಾಯ ಸರಕಾರದ ಮುಂದಿಟ್ಟಿರುವ ಮೂರು ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಇಂದೇ ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ನಗರದ ಗಾಜಿನಮನೆಯಲ್ಲಿ ಅಗ್ನಿವಂಶ ಕ್ಷತ್ರೀಯ ತಿಗಳ ಸಮಾಜದವತಿಯಿಂದ ಆಯೋಜಿಸಿದ್ದ ತಿಗಳ ಸಮುದಾಯದ ಮೂಲ ಪುರುಷ ಶ್ರೀಅಗ್ನಿಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಎಲ್ಲಾ ಸ್ತರಗಳಲ್ಲಿಯೂ ಹಿಂದುಳಿದಿರುವ ತಿಗಳ ಸಮುದಾಯದ ಸಮಗ್ರ ಅಭಿವೃದ್ದಿಗಾಗಿ ಕರ್ನಾಟಕ ರಾಜ್ಯ ಅಗ್ನಿವಂಶ ತಿಗಳ ಅಭಿವೃದ್ದಿ ನಿಗಮ ಸ್ಥಾಪನೆ,ಸರಕಾರದವತಿಯಿಂದ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಆಚರಣೆ ಹಾಗೂ ತುಮಕೂರಿನ ಕುಂದೂರಿನಲ್ಲಿ ಶ್ರೀಅಗ್ನಿಬನ್ನಿರಾಯಸ್ವಾಮಿ ದೇವಾಲಯ ಮತ್ತು ಪ್ರಸಾದ ನಿಲಯ ಸ್ಥಾಪನೆಗೆ ಅಗತ್ಯವಿರುವ 1.09 ಎಕರೆ ಜಮೀನು ಮಂಜೂರಿಗೆ ಸಂಬಂಧಿಸಿದಂತೆ ಇದೇ ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸಿ, ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು. ತಿಗಳ ಸಮುದಾಯ ಕೃಷಿಯನ್ನೇ ನಂಬಿ ಬದುಕುತ್ತಿದ್ದು,ತಮಗಿರುವ ಸಣ್ಣ ಹಿಡುವಳಿಯಲ್ಲಿಯೇ ಕಷ್ಟಪಟ್ಟು ದುಡಿದು ಬದುಕುತ್ತಿರುವ ಈ ಸಮುದಾಯ ಅರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ…
ತುಮಕೂರು : ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ(ನರೇಗಾ) 100 ದಿನಗಳ ಉದ್ಯೋಗ ಪಡೆದ ಮಹಿಳೆಯರಿಗೆ ಎಸ್.ಬಿ.ಐ ಸಂಯೋಜಿತ (ಖSಇಖಿI) ಸಂಸ್ಥೆಯಲ್ಲಿ ಉದ್ಯೋಗಾಧಾರಿತ ತರಬೇತಿ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ತಿಳಿಸಿದರು. ಜಿಲ್ಲಾ ಪಂಚಾಯತಿಯಲ್ಲಿಂದು ಸ್ಥಳೀಯ ಸಲಹಾ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು 2018-19ರಲ್ಲಿ ನರೇಗಾ ಯೋಜನೆಯಡಿ ಕನಿಷ್ಠ 100 ದಿನ ಉದ್ಯೋಗ ಪಡೆದ ಮಹಿಳೆಯರನ್ನು ಜಿಲ್ಲಾ ಪಂಚಾಯತಿ ವತಿಯಿಂದ ಆಯ್ಕೆ ಮಾಡಿ ಅವರ ಆಸಕ್ತಿಗೆ ಅನುಗುಣವಾಗಿ ತರಬೇತಿ ಪಡೆಯಲು ಖSಇಖಿI ಸಂಸ್ಥೆಗೆ ಕಳುಹಿಸಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗಾಗಿ ಖರೀದಿಸುವ ವಾಹನಗಳ ಚಾಲನೆಗೆ ಮಹಿಳೆಯರನ್ನೇ ನೇಮಿಸಲಾಗುತ್ತಿದೆ. ಅವರಿಗೆ ಲಘು ವಾಹನ ಚಾಲನಾ ತರಬೇತಿಯನ್ನು ಖSಇಖಿI ಸಂಸ್ಥೆಯಿಂದ ನೀಡಲಾಗುವುದು ಎಂದು ತಿಳಿಸಿದರು. ಖSಇಖಿI ಸಂಸ್ಥೆಯ ನಿರ್ದೇಶಕ ಪಿ.ರಾಮಚಂದ್ರ ಮಾತನಾಡಿ ಜಿಲ್ಲಾ ಪಂಚಾಯತ್ ವತಿಯಿಂದ ಸೂಚಿಸಿರುವ ಮಹಿಳಾ ಮತ್ತು ಪುರುಷ ತಂಡಗಳಿಗೆ ಉದ್ಯೋಗಿನಿ ಹೆಸರಿನಲ್ಲಿ 6…
ತುಮಕೂರು : ಪ.ಜಾತಿ.,ಪಂಗಡದ ಸಮುದಾಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಜರುಗುವ ಸಭೆಗಳಿಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಪ್ರಕರಣವನ್ನು ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ ವಿಶೇಷ ಘಟಕ(ಎಸ್ಸಿಪಿ) ಹಾಗೂ ಗಿರಿಜನ ಉಪಯೋಜನೆ(ಟಿಎಸ್ಪಿ)ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಜಿಲ್ಲೆಯಲ್ಲಿ ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಪ.ಜಾತಿ ಮತ್ತು ವರ್ಗದವರ ಅಭಿವೃದ್ಧಿಗಾಗಿ ನಿಗಧಿಯಾಗಿದ್ದ ಅನುದಾನ ಬಳಕೆಗೆ ಸಂಬಂಧಿಸಿದಂತೆ ವರ್ಷಾಂತ್ಯಕ್ಕೆ ಸಾಧಿಸಿದ ಇಲಾಖಾವಾರು ಪ್ರಗತಿ ಪರಿಶೀಲಿಸಿದ ಅವರು ಕಡಿಮೆ ಹಾಗೂ ಶೂನ್ಯ ಪ್ರಗತಿ ಸಾಧಿಸಿದ ತಿಪಟೂರು ನಗರಸಭೆ, ಚಿಕ್ಕನಾಯಕನಹಳ್ಳಿ ಪುರಸಭೆ, ಗುಬ್ಬಿ ಪಟ್ಟಣ ಪಂಚಾಯತಿ ಅಧಿಕಾರಿಗಳಿಂದ ಕಡಿಮೆ ಸಾಧನೆಗೆ ಕಾರಣವೇನೆಂದು ಮಾಹಿತಿ ಪಡೆದರಲ್ಲದೆ, ನಿಗಧಿತ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ತುಮಕೂರು ಮಹಾನಗರಪಾಲಿಕೆ, ಕೊರಟಗೆರೆ ಪಟ್ಟಣ ಪಂಚಾಯತಿ, ಶಿರಾ ನಗರಸಭೆಗಳ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಜಿಲ್ಲಾ ಕೈಗಾರಿಕಾ ಕೇಂದ್ರ, ಪಂಚಾಯತ್ ರಾಜ್ ಇಲಾಖೆ, ತೋಟಗಾರಿಕೆ, ಕನ್ನಡ ಮತ್ತು…
ತುಮಕೂರು : ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ನಗರದ ಹೊರವಲಯದ ಹನುಮಂತ ಪುರ ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ಮೃತರನ್ನು ಹನುಮಂತಪುರ ನಿವಾಸಿ ಹನುಮಂತರಾಯಪ್ಪ (41) ಎಂದು ಗುರುತಿಸಲಾಗಿದೆ. ಇನ್ನು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
ತುಮಕೂರು : ಸಕಾರದಿಂದ ಬಿಡುಗಡೆಯಾಗಿರುವ ಅನುದಾನದಡಿ ಕೈಗೆತ್ತಿಕೊಂಡು ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಎಂದು ತಾಲ್ಲೂಕು ಪಂಚಾಯತಿ ಆಡಳಿತಾಧಿಕಾರಿ ಬಿ.ರಘು ತಿಳಿಸಿದರು. ತಾಲ್ಲೂಕು ಪಂಚಾಯತಿಯಲ್ಲಿಂದು ನಡೆದ ಸಾಮಾನ್ಯ ಹಾಗೂ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ತಾಲ್ಲೂಕಿನ ವಿವಿಧ ಇಲಾಖೆಯ ಪ್ರಗತಿ ವರದಿ ಪರಿಶೀಲಿಸಿ ತಾಲ್ಲೂಕಿನ ಎಲ್ಲಾ ಇಲಾಖೆಗಳು ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವುದರ ಜೊತೆಗೆ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಸಮಾಜ ಕಲ್ಯಾಣ ಇಲಾಖೆಯಡಿ ಮುತ್ಸಂದ್ರ, ಗೌಡಿಹಳ್ಳಿ, ಅದಲಾಪುರ, ಹಾಲನೂರು ಗ್ರಾಮಗಳಲ್ಲಿ ಪ್ರಗತಿಯಲ್ಲಿರುವ ಡಾ|| ಬಿ.ಆರ್. ಅಂಬೇಡ್ಕರ್ ಭವನ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದರು. 2021-22ನೇ ಸಾಲಿನ ಫೆಬ್ರುವರಿ ಮಾಹೆಯಲ್ಲಿ ಸಾಧಿಸಿರುವ ವರದಿಯ ಪ್ರಕಾರ ತಾಲ್ಲೂಕಿನಲ್ಲಿ ನರೇಗಾ ಯೋಜನೆಯಡಿ 2 ಅಂಗನವಾಡಿ ಕಟ್ಟಡಗಳು ಪೂರ್ಣಗೊಂಡಿದ್ದು, 3 ಕಟ್ಟಡಗಳು ನಿರ್ಮಾಣ ಹಂತದಲ್ಲಿವೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದರು. ತುಮಕೂರು ತಾಲ್ಲೂಕು ವ್ಯಾಪ್ತಿಯಲ್ಲಿರುವ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರ ಹಾಗೂ ಕೊರಟಗೆರೆ ವಿಧಾನ ಸಭಾ…
ತುಮಕೂರು : ಗ್ರಾಮೀಣ ಪ್ರದೇಶಗಳಲ್ಲಿ ನೀರು ಮತ್ತು ನೈರ್ಮಲ್ಯ ವಸ್ತು ವಿಷಯಗಳಿಗೆ ಸಂಬಂಧಿಸಿದ ಮೂಲ ಉದ್ದೇಶ ಹಾಗೂ ಕ್ರಿಯಾಶೀಲ ಮಾಹಿತಿಯುಳ್ಳ ಜಾಗೃತಿ ಪರಿಕರಗಳನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|| ಕೆ.ವಿದ್ಯಾಕುಮಾರಿ ಜಿಲ್ಲಾ ಅವರು ಪಂಚಾಯತಿ ಸಭಾಂಗಣದಲ್ಲಿಂದು ಬಿಡುಗಡೆ ಮಾಡಿದರು. ಬೆಂಗಳೂರಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಮುದ್ರಿತವಾಗಿರುವ 2022ರ ಕ್ಯಾಲೆಂಡರ್, ದಿನಚರಿ, ಕರಪತ್ರ, ಭಿತ್ತಿಚಿತ್ರ ಹಾಗೂ ಫ್ಲಿಪ್ಚಾರ್ಟ್ ಸೇರಿದಂತೆ ಜಾಗೃತಿ ಪರಿಕರಗಳನ್ನು ಬಿಡುಗಡೆ ಮಾಡಲಾಯಿತು. ಸ್ವಚ್ಛ ಭಾರತ್ ಮಿಷನ್ (ಗ್ರಾ) ಹಾಗೂ ಜಲ ಜೀವನ್ ಮಿಷನ್ ಯೋಜನೆಗೆ ಸಂಬಂಧಿಸಿದ ಈ ಜಾಗೃತಿ ಪರಿಕರಗಳನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅಳವಡಿಸುವ ಉದ್ದೇಶದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಿಲ್ಲೆಗೆ ಸರಬರಾಜು ಮಾಡಲಾಗಿದೆ. ಈ ಸಂದರ್ಭದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಮುಖ್ಯ ಯೋಜನಾಧಿಕಾರಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಸಣ್ಣಮಸಿಯಪ್ಪ, ಉಪಕಾರ್ಯದರ್ಶಿ (ಅಭಿವೃದ್ಧಿ) ಅಥೀಕ್…
ತುಮಕೂರು: ಆಟೋ ಚಾಲಕನೊಬ್ಬ ಪಾವಗಡದಲ್ಲಿ ಐದಾರು ವಿದ್ಯಾರ್ಥಿಗಳನ್ನು ತುಂಬಿಕೊಂಡ ಚಲಾಯಿಸಿರುವ ಘಟನೆ ನಡೆದಿದೆ. ಒಂದು ಬಸ್ನಲ್ಲಿ 130ಕ್ಕೂ ಹೆಚ್ಚು ಜನರನ್ನು ಕೂರಿಸಿಕೊಂಡು ಪ್ರಯಾಣ ಮಾಡಿದ ಖಾಸಗಿ ಬಸ್ ಅಪಘಾತ ಮಾಸುವ ಮುನ್ನವೇ ಈ ಘಟನೆ ನಡೆದಿದೆ. ಖಾಸಗಿ ಬಸ್ ಅಪಘಾತದಲ್ಲಿ ಸುಮಾರು 6 ಜನ ಮೃತಪಟ್ಟಿದ್ದರು. ಆಟೋ ಚಾಲಕರು ಪಾವಗಡದಲ್ಲಿ ವಿದ್ಯಾರ್ಥಿಗಳನ್ನು ತುಂಬಿಕೊಂಡ ಚಲಾಯಿಸುತ್ತಿದ್ದಾರೆ. ಟಾಪ್ ಮೇಲೆಯೂ ವಿದ್ಯಾರ್ಥಿಗಳನ್ನು ಕೂರಿಸಿಕೊಂಡಿದ್ದು, ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.











