ತುಮಕೂರು: ಕರ್ನಾಟಕ ರಾಜ್ಯವೊಂದರಲ್ಲೇ ಶೇ.22.8ರಷ್ಟು ಮಂದಿ ತಂಬಾಕು ಚಟಕ್ಕೆ ದಾಸರಾಗಿದ್ದಾರೆ ಎಂದು ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ (IPಊ)ನ ಡಾ. ಚಂದ್ರಶೇಖರ್ ಕೊಟಗಿ ಆತಂಕ ವ್ಯಕ್ತಪಡಿಸಿದರು. ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ (IPಊ), ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವರ ಸಹಯೋಗದಲ್ಲಿ ಕುಣಿಗಲ್ ತಾಲೂಕಿನಲ್ಲಿಂದು ವಿವಿಧ ಶಾಲೆಗಳ ಮುಖ್ಯೋಪಧ್ಯಾಯರು ಹಾಗು ಕ್ಲಸ್ಟರ್ ಸಂಪನ್ಮೂಲ ಅಧಿಕಾರಿಗಳಿಗಾಗಿ “ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ” ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರವನ್ನುದ್ದೇಶಿಸಿ ಅವರು ಮಾತನಾಡಿದರು. ತಂಬಾಕು ದುಷ್ಚಟಕ್ಕೆ ವಯಸ್ಕರಲ್ಲದೆ ಮಕ್ಕಳೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ದಾಸರಾಗುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಸುತ್ತಮುತ್ತಲ ಪ್ರದೇಶಗಳನ್ನು ತಂಬಾಕು ಮುಕ್ತ ಗೊಳಿಸುವ ಉದ್ದೇಶದಿಂದ ಹಾಗೂ ಭವಿಷ್ಯದ ಯುವಜನತೆಯನ್ನು ಈ ದುಷ್ಚಟದಿಂದ ದೂರವಿಡಲು ಐಪಿಎಚ್ ಸಂಸ್ಥೆಯು ತುಮಕೂರು ಜಿಲ್ಲೆಯನ್ನು ಆಯ್ದುಕೊಂಡು “ತಂಬಾಕು ಮುಕ್ತ ಶಾಲೆ” ಅಭಿಯಾನವನ್ನು ಕೈಗೆತ್ತಿಕೊಂಡಿದೆ. ಈ ಅಭಿಯಾನದಡಿ ಮೊದಲ ಹಂತದಲ್ಲಿ ಜಿಲ್ಲೆಯ…
Author: News Desk Benkiyabale
ತುಮಕೂರು : ನಗರದಲ್ಲಿಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ, ದಂತ ವೈದ್ಯಕೀಯ ಕಾಲೇಜು ತುಮಕೂರು ಇವರ ಸಂಯುಕ್ತ ಆಶ್ರದಲ್ಲಿ ರಾಷ್ಟ್ರೀಯ ಪ್ಲೋರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮದಡಿ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ನಾಗಾರ್ಜುನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಿದ್ದಾರ್ಥ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಕುಲಪತಿಗಳಾದ ಡಾ.ಜಿ.ಪರಮೇಶ್ವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ಲೋರೋಸಿಸ್ ನಿಂದ ಆಗುವ ತೊಂದರೆಗಳನ್ನ ತಡೆಗಟ್ಟವಲ್ಲಿ ಮತ್ತು ನೀಡಲಾಗುವ ಚಿಕಿತ್ಸೆಯ ಜೊತೆಯಲ್ಲಿ ಇನ್ನಿತರ ದುಷ್ಪರಿಣಾಮಗಳ ಕುರಿತಾದ ಸಂಶೋಧನೆಗಳು ಹೆಚ್ಚು ಹೆಚ್ಚು ನಡೆಯಬೇಕೆಂದರು. ದಂತ ಪ್ಲೋರೋಸಿಸ್ ಕುರಿತಾಗಿ ಡಾ.ಭರತೇಶ್, ಮೂಳೆಗಳ ಪೆÇ್ಲೀರೋಸಿಸ್ ಕುರಿತಾಗಿ ಡಾ.ರವಿಕುಮಾರ್, ಪ್ಲೋರೋಸಿಸ್ ನಿಯಂತ್ರಣದ ಕ್ರಮಗಳ ಕುರಿತಾಗಿ ಡಾ.ಚೇಲುವೆಗೌಡ, ರಾಷ್ಟ್ರೀಯ ಪ್ಲೋರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿನ ತುಮಕೂರು ಜಿಲ್ಲೆಯಲ್ಲಿ ಕೈಗೊಂಡಿರುವ ಮಾಹಿತಿಯನ್ನು ಡಾ.ಕೇಶವರಾಜು ಅವರು ತಿಳಿಸಿದರು. ಜಿಲ್ಲಾ…
ತುಮಕೂರು : ಅಕ್ಷರ ದಾಸೋಹ, ಸಾರ್ವಜನಿಕ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಮಾರ್ಚ್ ಮಾಹೆಯೊಳಗೆ ಖರ್ಚು ಮಾಡುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಇಲಾಖೆಗಳಿಗೆ ಸರ್ಕಾರ ನೀಡಿರುವ ಅನುದಾನವನ್ನು ವ್ಯರ್ಥ ಮಾಡದೇ, ಜಿಲ್ಲಾ ಪಂಚಾಯತ್ ಅನುಮೋದನೆ ನೀಡಿರುವ ಕಾಮಗಾರಿಗಳನ್ನು ಕೈಗೊಂಡು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕೋವಿಡ್-19 ನಂತರ ಶಾಲೆ ಆರಂಭವಾದ ಮೇಲೆ ಶಾಲೆಯ ವಾತಾವರಣ, ಮಕ್ಕಳು ಮತ್ತು ಪೋಷಕರ ಅಭಿಪ್ರಾಯಗಳ ಬಗ್ಗೆ ಡಿಡಿಪಿಐಗಳಿಗೆ ಪ್ರಶ್ನಿಸಿದಾಗ ಇದಕ್ಕೆ ಉತ್ತರಿಸಿದ ಡಿಡಿಪಿಐಗಳು, ಶಾಲೆ ಆರಂಭವಾದಗಿನಿಂದ ಶೇ.70ರಷ್ಟು ಹಾಜರಾತಿಯಿದ್ದು, ಮಕ್ಕಳು ಉತ್ಸುಕರಾಗಿಯೇ ಶಾಲೆಗೆ ಬರುತ್ತಿದ್ದಾರೆ. ಇದರಿಂದ ಮಕ್ಕಳ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಬಲವಂತವಾಗಿ ಯಾವ ಮಕ್ಕಳನ್ನು…
ಮಧುಗಿರಿ : ದ್ವಿಚಕ್ರ ವಾಹನ ಸವಾರನೊಬ್ಬ ಆಕಸ್ಮಿಕವಾಗಿ ರಸ್ತೆಯಲ್ಲಿ ಬಿದ್ದಿದನ್ನು ಕಂಡು ತಹಶೀಲ್ದಾರ್ ಡಾ. ಜಿ. ವಿಶ್ವನಾಥ್ ರವರು ವಾಹನ ಸವಾರನಿಗೆ ಉಪಚರಿಸಿ ಮಾನವೀಯತೆ ಮೆರೆದಿದ್ದಾರೆ. ತಾಲ್ಲೂಕಿನ ಪುರವರ ಹೋಬಳಿಯ ಬ್ಯಾಲ್ಯ ಗ್ರಾಮಕ್ಕೆ ಕಾರ್ಯದ ನಿಮಿತ್ತ ಭೇಟಿ ನೀಡುವಾಗ ಮರಬಹಳ್ಳಿ ಕೋಡಗದಾಲ ಗ್ರಾಮಗಳ ಮಧ್ಯೆ ಹಾದುಹೋಗಿರುವ ಗೌರಿಬಿದನೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಬಿದ್ದಂತಹ ದ್ವಿಚಕ್ರವಾಹನವನ್ನು ಮೇಲಕ್ಕೆತ್ತಿ ವಾಹನ ಸವಾರನ ಯೋಗಕ್ಷೇಮ ವಿಚಾರಿಸಿ ಸವಾರನ ಸಂಭಂಧಿಕರಿಗೆ ದೂರವಾಣಿ ಕರೆ ಮಾಡಿ ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಸರಳ ಸಜ್ಜನಿಕೆಯ ಸರ್ಕಾರಿ ಅಧಿಕಾರಿಯಾಗಿರುವ ತಹಶೀಲ್ದಾರ್ ರವರು ಬಡ ಕುಟುಂಬದಿಂದ ಬಂದವರಾಗಿದ್ದು, ಸರ್ಕಾರಿ ಸೇವೆಗೂ ಮೊದಲು ತಮ್ಮ ಪದವಿ ಪೂರ್ವ ವಿದ್ಯಾಭ್ಯಾಸದ ಸಮಯದಲ್ಲಿ ಪತ್ರಿಕೆಗಳನ್ನು ಹಂಚುವ ಕೆಲಸ ಮಾಡಿದ್ದರು. ಇವರು ತಾಲ್ಲೂಕಿನಲ್ಲಿ ಅನೇಕ ಜನಪರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಜನ ಸ್ನೇಹಿ ಅಧಿಕಾರಿಯಾಗಿದ್ದಾರೆ.ತಹಶಿಲ್ದಾರರ…
ತುಮಕೂರು : ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಮಾರ್ಚ್ 23ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಜಿಲ್ಲೆಯ ಸುಪ್ರಸಿದ್ಧ ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವವು ಶಾಸ್ತ್ರೋಕ್ತವಾಗಿ ಜರುಗಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪುಣ್ಯ ಪ್ರಸಿದ್ಧಿಯಾಗಿರುವ ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಳ್ಳುವುದರಿಂದ ಬರುವ ಭಕ್ತಾಧಿಗಳ ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-19 ನಿಯಾಮಾವಳಿಗಳು ಕಡ್ಡಾಯವಾಗಿ ಪಾಲನೆಯಾಗಬೇಕು ಎಂದರು. ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳು/ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಕೋವಿಡ್-19 ನಿಯಮಗಳನ್ನು ಪಾಲಿಸಬೇಕು. ಜಾತ್ರಾ ಸಮಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯವರು ಅಗತ್ಯ ಔಷಧಿ, ಸಿಬ್ಬಂದಿ, ಆಂಬುಲೆನ್ಸ್, ವ್ಯವಸ್ಥೆ ಮಾಡಬೇಕು. ಜಾತ್ರೆಯಲ್ಲಿ ಭಕ್ತಾದಿಗಳಿಗೆ ನೀಡುವ ಆಹಾರ(ಪ್ರಸಾದ)ವನ್ನು ತಪಾಸಣೆ ಮಾಡಬೇಕು. ವೈದ್ಯರು,…
ತಿಪಟೂರು : ಕಳೆದ 11 ದಿನಗಳಿಂದ ಸೂಕ್ತ ಅಂಡರ್ಪಾಸ್ಗಾಗಿ ನಗರದ ಕೆಂಚರಾಯ ನಗರ, ಬಿಳಿಕಲ್ಲ ನಗರ, ಹಳೆಪಾಳ್ಯದ ಸಾರ್ವಜನಿಕರು ಅನಿರ್ಧಿಷ್ಟಾವದಿ ಪ್ರತಿಭಟನೆ ನಡೆಸುತ್ತಿದ್ದು, ಬಿ.ಜೆ.ಪಿ ಮುಖಂಡ ಲೋಕೇಶ್ವರ್ ಹಾಗೂ ರಾಷ್ಟ್ರೀಯ ಹೆದ್ದಾರಿ 206ರ ಯೋಜನಾಧಿಕಾರಿ ಶಿರೀಷ್ ಗಂಗಾಧರ್ ಸ್ಥಳಕ್ಕೆ ಭೇಟಿ ನೀಡಿ ಇನ್ನು 30 ದಿನಗಳಲ್ಲಿ ಪರಿಶೀಲಿಸುವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಶಿವಮೊಗ್ಗ ಹಾಗೂ ತುಮಕೂರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಚತುಷ್ಪತ ಕಾಮಾಗಾರಿಯು ನಡೆಯುತ್ತಿದ್ದು ಈ ಕಾಮಗಾರಿಯಲ್ಲಿ ನಿರ್ಮಾಣವಾಗಿರುವ ರಸ್ತೆಯಿಂದ ನಗರದ ಹಳೆಪಾಳ್ಯ ಹಾಗೂ ಕೆಂಚರಾಯನಗರ, ಬಿಳಿಕಲ್ಲುನಗರ ಹಾಗೂ ಗೆದ್ಲೇಹಳ್ಳಿಯ ಜನರು ರಸ್ತೆಯನ್ನು ದಾಟಲು ಸುಮಾರು 1.5 ಕಿಮೀ ಸುತ್ತಿಬಳಸಿ ಬರಬೇಕು ಹಾಗೂ ಶಾಲೆಗಾಗಿ ಮಕ್ಕಳನ್ನು ಕರೆದುಕೊಂಡು ಹೋಗಲು ಸಾಧ್ಯವಾಗುವುದರ ಜೊತೆಗೆ ಕೂಲಿಕೆಲಸಕ್ಕೆ ಹೋಗುವ ಸಾಮಾನ್ಯ ಕೂಲಿಕಾರರು ಕಾಲ್ನಡಿಗೆಯಲ್ಲಿ ತಮ್ಮ ಕಾರ್ಯಸ್ಥಳವನ್ನು ತಲುಪುವ ವೇಳೆಗೆ ಸುಸ್ತಾಗುತ್ತಾರೆ. ಆದ್ದರಿಂದ ಇಲ್ಲಿ ನಮಗೆ ಅಂಡರ್ಪಾಸ್ ನಿರ್ಮಿಸಿಕೊಡಬೇಕೆಂದು ಸ್ಥಳೀಯರು ಕಳೆದ 11 ದಿನಗಳಿಂದ ಧರಣಿ…
ಮಧುಗಿರಿ: ಮಧುಗಿರಿ ಜಿಲ್ಲೆಯಾಗಲು ಎಲ್ಲಾ ಅರ್ಹತೆ ಇದ್ದು ಸರ್ಕಾರವನ್ನು ಕೇಳೋರು ಇಲ್ಲದ ಕಾರಣ ನೆನೆಗುದಿಗೆ ಬಿದ್ದಂತಾಗಿದೆ ಎಂದು ಮಾಜಿ ಶಾಸಕ ಕೆ .ಎನ್. ರಾಜಣ್ಣ ತಿಳಿಸಿದರು. ಪಟ್ಟಣದಲ್ಲಿರುವ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸ್ವಾತಂತ್ರ ಪೂರ್ವದಲ್ಲೇ ಉಪವಿಭಾಗಾಧಿಕಾರಿ ಕಚೇರಿ ಇದ್ದು.ಡಾ. ನಂಜುಂಡಪ್ಪ ವರದಿ ಆಧಾರಿತ ಅತಿ ಹಿಂದುಳಿದ ತಾಲ್ಲೂಕುಗಳಾದ ಮಧುಗಿರಿ- ಪಾವಗಡ- ಶಿರಾ- ಕೊರಟಗೆರೆ ತಾಲ್ಲೂಕುಗಳು ಸೇರಿ ಉಪವಿಭಾಗ ಕೇಂದ್ರವಾಗಿದ್ದು, ಈಗಾಗಲೇ ಶೈಕ್ಷಣಿಕ ಜಿಲ್ಲೆ ಆಗಿರುವುದರಿಂದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಖಜಾನೆ ಕಚೇರಿ ಹೊರತುಪಡಿಸಿ ಎಲ್ಲಾ ಇಲಾಖೆಗಳು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಮೂವತ್ತೊಂದನೇ ಜಿಲ್ಲೆಯಾಗಿ ವಿಜಯನಗರ ಘೋಷಣೆಯಾಗಿದ್ದು ತುಂಕೂರು ಜಿಲ್ಲೆ ಅತಿ ದೊಡ್ಡ ಜಿಲ್ಲೆ ಯಾಗಿದೆ. ಇದನ್ನು ವಿಭಜಿಸಿ ಮಧುಗಿರಿ ಜಿಲ್ಲೆಯನ್ನಾಗಿಸಿ ಎಂದು ಸರ್ಕಾರವನ್ನು ಕೇಳಬೇಕಾದ ಇಲ್ಲಿನ ಶಾಸಕರು ಸಿಲ್ಲಿ ವಿಚಾರವಾಗಿ ಚಂದ್ರಗಿರಿ ಗ್ರಾಮಪಂಚಾಯಿತಿ ಬಗ್ಗೆ ಪ್ರಸ್ತಾಪ ಮಾಡಿ ಶಾಸಕ ಸ್ಥಾನದ ಗೌರವವನ್ನು ಕಳೆದಿದ್ದಾರೆಂದು ಆರೋಪಿಸಿದರು. ತುಮಕೂರು- ರಾಯದುರ್ಗ ನಡುವಿನ ರೈಲ್ವೆ…
ತುಮಕೂರು: ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಅಧ್ಯಕ್ಷೆ ಕವಿತಾರಮೇಶ್ ಅಧ್ಯಕ್ಷತೆಯಲ್ಲಿ ಮಂಗಳವಾರ ತಾ.ಪಂ. ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಹಾಗೂ ಅಭಿವೃದ್ಧಿ ಕುರಿತು ಗಂಭೀರ ಚರ್ಚೆ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆಯೇ ತಾಪಂ ಸದಸ್ಯ ಸುರೇಶ್ ಹಿರೇಹಳ್ಳಿ ಭಾಗದಲ್ಲಿ ಕುಡಿಯುವ ನೀರಿನ ತತ್ವಾರ ಹೆಚ್ಚಾಗಿದ್ದು, ಇರುವ ಕೆಲವು ಬೋರ್ವೆಲ್ಗಳು ಬತ್ತಿಹೋಗಿದ್ದರೆ, ಇನ್ನೂ ಕೆಲವು ಬೋರ್ವೆಲ್ಗಳನ್ನು ದುರಸ್ಥಿ ಮಾಡಬೇಕಾಗಿದೆ. ಕೂಡಲೇ ಅಧಿಕಾರಿಗಳು ಕ್ರಮ ವಹಿಸಿ ಕುಡಿಯುವ ನೀರಿನ ಸಮಸ್ಯೆ ನೀಗಿಸಬೇಕೆಂದು ಸಭೆಯಲ್ಲಿ ಒತ್ತಾಯಿಸಿದರು. ಇದಕ್ಕೆ ತಾಪಂ ಅಧ್ಯಕ್ಷೆ ಕವಿತಾ ರಮೇಶ್ ಮಾತನಾಡಿ, ಈಗಾಗಲೇ ಬೇಸಿಗೆ ಆರಂಭವಾಗಿದೆ. ತಾಪಂ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೂ ಕುಡಿಯುವ ನೀರಿಗೆ ಮೊದಲ ಆಧ್ಯತೆ ನೀಡಬೇಕು, ಅಧಿಕಾರಿಗಳು ಜವಾಬ್ದಾರಿ ವಹಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು, ಎಲ್ಲಿಯೂ ನೀರಿನ ಸಮಸ್ಯೆ ಕಂಡುಬರದಂತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ರಾಗಿ ಖರೀದಿ ಕೇಂದ್ರಗಳು ಇನ್ನೂ ಆರಂಭವಾಗದ ಕಾರಣ…
ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಗ್ರಾಮದ ಎಚ್.ಎಸ್. ಅನಂದಮೂರ್ತಿ ಅವರಿಗೆ ಸೇರಿದ ತೋಟದ ಮನೆಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಹೆಂಚಿನ ಮನೆಯಲ್ಲಿದ್ದ 23 ಸಾವಿರ ಕೊಬ್ಬರಿ, ಮನೆ ನಿರ್ಮಾಣಕ್ಕೆ ಇಟ್ಟಿದ್ದ ಬೇವಿನ ಮುಟ್ಟುಗಳು ಸೇರಿದಂತೆ ಅಗತ್ಯ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತುಮಕೂರು : ಕೆಎಸ್ಸಾರ್ಟಿಸಿ ಸಿಬ್ಬಂದಿಗಳು ನೇತ್ರ ಮತ್ತು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಆರ್ ಬಸವರಾಜು ಸಲಹೆ ನೀಡಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ತುಮಕೂರು ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ನೇತ್ರ ಹಾಗೂ ಆರೋಗ್ಯ ತಪಾಸಣ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ (ದಿ:18-01-2021 ರಿಂದ ದಿ:17-02-2021 ರವರೆಗೆ)“ರಸ್ತೆ ಸುರಕ್ಷತೆ-ಜೀವನ ರಕ್ಷೆ”“( Sadak Suraksha-Jeevan Raksha )” ಹಾಗೂ ಇಂಧನ ಉಳಿತಾಯ ಮಾಸಿಕ (16-01-2021 ರಿಂದ 15-02-2021 ರವರೆಗೆ) ಆಚರಣೆ ಮಾಡಿ ಅಪಘಾತಗಳನ್ನು ಕಡಿಮೆಗೊಳಿಸುವ ಅನೇಕ ಕಾರ್ಯಕ್ರಮ, ಶಿಬಿರಗಳನ್ನು ಘಟಕಮಟ್ಟದಲ್ಲಿ ನಡೆಸಲಾಗಿದೆ ಎಂದು ತಿಳಿಸಿದರು. ದ್ವಿಚಕ್ರ ವಾಹನ ಸವಾರರು/ ಪಾದಚಾರಿಗಳ ನಡುವೆ ಹೆಚ್ಚಿನ ಅಪಘಾತ ಸಂಭವಿಸುತ್ತಿದ್ದು, ಸಂಸ್ಥೆಯ ಚಾಲಕರು ರಸ್ತೆಯಲ್ಲಿ ಸಂಚರಿಸುವ ಪಾದಚಾರಿ ಮತ್ತು ದ್ವಿಚಕ್ರ ವಾಹನಗಳನ್ನು (ಲಘು ವಾಹನಗಳು) ಸೂಕ್ಷ್ಮವಾಗಿ ನಿಗಾವಹಿಸಿ ಎಚ್ಚರಿಕೆಯಿಂದ ವಾಹನ ಚಾಲನೆ…