Author: News Desk Benkiyabale

ತುಮಕೂರು :       ನಗರದ ಎನ್.ಆರ್ ಕಾಲೋನಿಯ ಮಾದಿಗ ಜನಾಂಗದ ಕುಲ ದೇವತೆಯಾದ ಶ್ರೀ ದುರ್ಗಮ್ಮ ದೇವಿಯ ಮೂಲ ನೆಲೆಯಾದ ತುಮಕೂರು ಕಸಬಾ ಸರ್ವೇ ನಂ, 170 ಮತ್ತು 171ರ 1.29 ಎಕರೆ ಭೂಮಿಯನ್ನು ಮಂಜೂರಾತಿ ಮಾಡಿ ಮಾದಿಗ ಜನಾಂಗದ ಧಾರ್ಮಿಕ ನಂಬಿಕೆಯ ದೇವಸ್ಥಾನದ ಜಾಗಕ್ಕೆ ಮುಖ್ಯದ್ವಾರ ನಿರ್ಮಿಸಿ ಎನ್,ಆರ್ ಕಾಲೋನಿ, ಅಂಬೇಡ್ಕರ್‍ನಗರ, ನಿರ್ವಾಣಿಲೇಔಟ್(ಇಂದಿರಾ ನಗರ) ಹಕ್ಕುಪತ್ರಗಳಿಲ್ಲದ ಕುಟುಂಬಗಳಿಗೆ ಸರಳಖಾತೆ ಮಾಡಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಆಯ್ಕೆಯಾಗಿರುವ ಪಲಾನುಭವಿಗಳಿಗೆ ನಗರಪಾಲಿಕೆ ವಿಶೇಷ ಅನುದಾನದಲ್ಲಿ ಪಲಾನುಭವಿ ಶುಲ್ಕ ಪಾವತಿಸಲು ಒತ್ತಾಯಿಸಿ ಇಂದು ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಎದುರು ಶ್ರೀ ದುರ್ಗಮ್ಮ ದೇವಸ್ಥಾನ ಜೀರ್ಣೋದ್ಧಾರ ಮತ್ತು ಎನ್,ಆರ್ ಕಾಲೋನಿ ಅಭಿವೃದ್ಧಿ ಸಂಘ (ರಿ) ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಪ್ರತಿಭಟನಾ ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಜನಾಂಗದ ಹಿರಿಯ ಮುಖಂಡರಾದ ಪ್ರೋ ಕೆ.ದೊರೈರಾಜ್ ತುಮಕೂರು ನಗರದ ಅಸ್ತಿತ್ವಕ್ಕೆ ಹಾಗೂ ದಲಿತ ಚಳಿವಳಿಗೆ ತನ್ನದೇಯಾದ ಕೊಡುಗೆ ನೀಡಿರುವ ಎನ್,ಆರ್ ಕಾಲೋನಿಯ ಮಾದಿಗರ ಧಾರ್ಮಿಕ ಅಸ್ಮಿತೆಯ ಭಾಗವಾದ…

Read More

ತುಮಕೂರು :       ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸಲುವಾಗಿ ಮಾರ್ಚ್ 12ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾದ್ಯಂತ ಏಕಕಾಲದಲ್ಲಿ “ಕಂದಾಯ ದಾಖಲೆ ಮನೆ ಬಾಗಿಲಿಗೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.       ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರು ಕೇಂದ್ರಸ್ಥಾನಕ್ಕೆ ಸಮೀಪವಿರುವ ಗ್ರಾಮದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಪ್ರಮುಖವಾಗಿ ಪರಿಶಿಷ್ಟ ಜಾತಿ/ ಪಂಗಡದ ಜನಾಂಗದವರು ವಾಸಿಸುವ ಕಾಲೋನಿಯ ರೈತರ ಮನೆ-ಮನೆಗೆ ಭೇಟಿ ನೀಡಿ ಕಂದಾಯ ದಾಖಲೆಗಳನ್ನು ಸಚಿವರು ಮುದ್ದಾಂ ವಿತರಿಸಲಿದ್ದಾರೆ ಎಂದು ತಿಳಿಸಿದರು.       ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ತಾಲ್ಲೂಕು ಮಟ್ಟದಲ್ಲಿ ಏರ್ಪಡಿಸಲಾಗುವ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು, ವಿಧಾನಪರಿಷತ್ ಸದಸ್ಯರು,…

Read More

 ತುಮಕೂರು :       ಮಹಾತ್ಮಗಾಂಧಿ ನರೇಗಾ ಯೋಜನೆಯ 2021-22ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿಗೆ ಜಿಲ್ಲೆಯಿಂದ ಮೂವರು ಆಯ್ಕೆಯಾಗಿದ್ದಾರೆ.       ಕೊರಟಗೆರೆ ತಾಲ್ಲೂಕು ಐ.ಇ.ಸಿ. ಸಂಯೋಜಕ ಟಿ.ಕೆ.ವಿನುತ್, ಕುಣಿಗಲ್ ತಾಲ್ಲೂಕು ಹುತ್ರಿದುರ್ಗ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಧುಸೂಧನ್ ಮೂರ್ತಿ ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕು ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ಡೇಟಾ ಎಂಟ್ರಿ ಆಪರೇಟರ್ ನವೀನ್ ಕುಮಾರ್ ಆಯ್ಕೆಯಾಗಿದ್ದಾರೆ       ಜಿಲ್ಲಾ ಪಂಚಾಯಿತಿಯಿಂದ ಸ್ವೀಕೃತಗೊಂಡಿದ್ದ ನಾಮ ನಿರ್ದೇಶನಗಳನ್ನು ಪರಿಶೀಲಿಸಿ, ಎಂ.ಐ.ಎಸ್. ಅಂಕಿ ಅಂಶಗಳನ್ನು ಆಧರಿಸಿ ಈ ಮೂರು ಮಂದಿಯನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಆಯ್ಕೆ ಮಾಡಿದ್ದು, ಮಾರ್ಚ್ 14 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯಲಿರುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಆಯ್ಕೆಗೊಂಡ ಈ ಮೂರು ಮಂದಿ ಅಧಿಕಾರಿ/ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

Read More

ತುಮಕೂರು :        ಪೋಲಿಸ್ ಇಲಾಖೆಯಲ್ಲಿ ಯಾವುದೇ ದಯಾ, ದಾಕ್ಷಿಣ್ಯ ಇಲ್ಲದೆ ಕಾನೂನು ಪರಿಪಾಲನೆ ಮಾಡಬೇಕು ಎಂದು ಪೋಲಿಸ್ ತರಬೇತಿ ಹೆಚ್ಚುವರಿ ಪೋಲಿಸ್ ಮಹಾನಿರ್ದೇಶಕರಾದ ಪಿ. ಹರಿಶೇಖರನ್ ಅವರು ಪ್ರಶಿಕ್ಷಣಾರ್ಥಿಗಳಿಗೆ ಕರೆ ನೀಡಿದರು.       ಯಾರಿಗೂ ದಯೆ ತೋರಿಸದೆ, ದಾಕ್ಷಿಣ್ಯ ತೋರಿಸದೆ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದಾಗ ಮಾತ್ರ ನಿಸ್ವಾರ್ಥವಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯ ಎಂದು ಅವರು ತಿಳಿಸಿದರು.       ನಗರದ ಜಿಲ್ಲಾ ಪೋಲಿಸ್ ಕವಾಯತು ಮೈದಾನದಲ್ಲಿ ನಡೆದ ತಾತ್ಕಾಲಿಕ ಪೋಲಿಸ್ ತರಬೇತಿ ಶಾಲೆಯ 11ನೇ ತಂಡದ ನಾಗರಿಕ ಮಹಿಳಾ ಪೋಲಿಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.       ಪೋಲಿಸ್ ಇಲಾಖೆಯಲ್ಲಿ ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸಿದರೆ ಜನ ಸಮುದಾಯ ಅಂತಹವರನ್ನು ಸದಾ ಸ್ಮರಿಸುತ್ತದೆ. ಹಾಗಾಗಿ ತರಬೇತಿ ಮುಗಿಸಿಕೊಂಡು ಕರ್ತವ್ಯ ಹಾಜರಾಗುವ ಪ್ರಶಿಕ್ಷಣಾರ್ಥಿಗಳು ಇದನ್ನು ತಮ್ಮ ಸೇವಾ ಅವಧಿಯಲ್ಲಿ…

Read More

ತುಮಕೂರು: ನನ್ನ ಮೇಲಿನ ದ್ವೇಷಕ್ಕೆ ಗೂಳೂರು- ಹೆಬ್ಬೂರು ಏತ ನೀರಾವರಿ ಯೋಜನೆಯಡಿ ಕೆರೆಗಳಿಗೆ ನೀರ ಬಿಡಿಸಲಿಲ್ಲ. ಒಣಗಿ ಹೋಗಿರುವ ಕೆರೆಗಳನ್ನು ನೋಡಿದರೆ ಕರುಳು ಹಿಂಡಿ ಬರುತ್ತದೆ ಎಂದು ಮಾಜಿ ಶಾಸಕ ಬಿ.ಸುರೇಶಗೌಡರು ಹೇಳಿದರು. ತಾಲ್ಲೂಕಿನ ಸೀನಪ್ಪನಹಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದ ದೊಡ್ಡಮ್ಮ, ಚಿಕ್ಕಮ್ಮ  ದೇವತೆಯರ ಗ್ರಾಮ‌ ಹಬ್ಬದಲ್ಲಿ ಮಾತನಾಡಿದರು. ನಾನು ಶಾಸಕನಾಗಿದ್ದಾಗ ಸರಿ ಇದ್ದ ಯೋಜನೆ ನಾನು ಮಾಜಿ ಆಗುತ್ತಿದ್ದಂತೆ ಅವೈಜ್ಞಾನಿಕ ವಾಯಿತೇ? ಪಕ್ಕದ ತುರುವೇಕೆರೆ ಶಾಸಕ ಮಸಾಲ ಜಯರಾಮ್ ಅವರು ಸಚಿವ ಮಾಧುಸ್ವಾಮಿ ಅವರನ್ನು ಹೊಗಳುತ್ತಾ ಇಪ್ಪತ್ತು ವರ್ಷಗಳಿಂದ ತುಂಬದ ಸಿ.ಎಸ್.ಪುರ ಕೆರೆಗೆ ಹೇಮಾವತಿ ನೀರಿನಿಂದ ತುಂಬಿಸಿದರು. ಅದೇ ಇಲ್ಲಿನ ಶಾಸಕರು ಮಾಧುಸ್ವಾಮಿಯನ್ನು ಹೊಗಳುತ್ತಾ ಕ್ಷೇತ್ರಕ್ಕೆ ನೀರು ಹರಿಯದಂತೆ ನೋಡಿಕೊಂಡರು. ನನ್ನ ಮೇಲಿನ ದ್ವೇಷಕ್ಕೆ ರೈತರನ್ನು ಬಲಿಪಶು ಮಾಡಬಾರದಿತ್ತು. ಇಂತ ಕೆಟ್ಟ ರಾಜಕಾರಣದಿಂದ‌ ನಾಡು ಕಟ್ಟಲು ಸಾಧ್ಯವಿಲ್ಲ ಎಂದು ಶಾಸಕ ಗೌರಿಶಂಕರ್ ವಿರುದ್ಧ ಹರಿಹಾಯ್ದರು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಯೋಜನೆ ಮಾಡುವಂತೆ ಮನವಿ ಮಾಡಿದ್ದೆ. ಅವರು ಮಾಡಲಿಲ್ಲ. ನಂತರ ಯಡಿಯೂರಪ್ಪ ಮಾಡಿದರು.…

Read More

ತುಮಕೂರು :       ಉಕ್ರೇನ್‍ನಲ್ಲಿ ಮೃತಪಟ್ಟಿರುವ ಭಾರತೀಯರಿಗೆ ಪರಿಹಾರ ಕೊಡುವ ಸಂಬಂಧ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಇಂದಿಲ್ಲಿ ತಿಳಿಸಿದರು. ನಗರದ ಬಿ.ಹೆಚ್. ರಸ್ತೆಯಲ್ಲಿ ಹೊಸಬಡಾವಣೆ ಪೆÇಲೀಸ್ ಠಾಣೆ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವುದಕ್ಕೂ ಮುನ್ನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಲ್ಲಿ ಸಾವನ್ನಪ್ಪಿರುವ ಭಾರತೀಯರಿಗೆ ಪರಿಹಾರ ನೀಡುವ ಕುರಿತು ಕೇಂದ್ರ ಸರ್ಕಾರ ತೀರ್ಮಾನಿಸಲಿದೆ. ಹಾಗೆಯೇ ಮೃತಪಟ್ಟಿರುವ ರಾಜ್ಯದ ವಿದ್ಯಾರ್ಥಿ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಒದಗಿಸುವ ಬಗ್ಗೆಯೂ ಚರ್ಚೆ ಮಾಡಲಾಗತ್ತಿದೆ ಎಂದರು. ನೀಟ್‍ನಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಈಗಾಗಲೇ ಈ ವಿಚಾರದ ಕುರಿತು ಅನೇಕ ಚರ್ಚೆಗಳು ನಡೆಯುತ್ತಿವೆ. ಇದರ ಬಗ್ಗೆಯೂ ಕೇಂದ್ರ ಸರ್ಕಾರ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಉತ್ತರಿಸಿದರು. 2016 ರಲ್ಲಿ ಔರಾದ್ಕರ್ ಅವರು ವರದಿಯನ್ನು ಸಲ್ಲಿಸಿದಾಗ ಆ…

Read More

  ತುಮಕೂರು :       ಜಿಲ್ಲೆಯಲ್ಲಿ ಶೇಂಗಾ ಬೆಳೆ ನಷ್ಟ ಹೊಂದಿದ ರೈತರಿಗೆ ವಿಶೇಷ ಪ್ಯಾಕೇಜ್‍ನಡಿ ಪರಿಹಾರ ಒದಗಿಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಅವರು ಕೃಷಿ ಜಂಟಿ ನಿರ್ದೇಶಕಿ ರಾಜ ಸುಲೋಚನಾ ಅವರಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶೇಂಗಾ ಸೇರಿದಂತೆ ಎಣ್ಣೆ ಕಾಳು ಬೆಳೆಯುವ ಶಿರಾ, ಪಾವಗಡ, ಕೊರಟಗೆರೆ, ಮಧುಗಿರಿ ತಾಲ್ಲೂಕುಗಳಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತ ಬಿತ್ತಿದ ಬೆಳೆ ಕೈಗೆ ಬರದೆ ಹೋಗಿದೆ. ಈ ನಿಟ್ಟಿನಲ್ಲಿ ಶೇಂಗಾ ಬೆಳೆಗೆ ಸಂಬಂಧಿಸಿದಂತೆ ಹಿಂದಿನ 5 ವರ್ಷಗಳ ಅವಧಿಯ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿದಲ್ಲಿ ವಿಶೇಷ ಪ್ಯಾಕೇಜ್‍ನಡಿ ಪರಿಹಾರ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಕೃಷಿ ಜಂಟಿ ನಿರ್ದೇಶಕಿ ರಾಜ ಸುಲೋಚನಾ ಸಭೆಗೆ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ…

Read More

ತುಮಕೂರು :       ಇತಿಹಾಸ ಪ್ರಸಿದ್ದ ಹೆತ್ತೇನಹಳ್ಳಿಯ ಶ್ರೀ ಮಾರಮ್ಮ ಆಧಿಶಕ್ತಿ ದೇವಿಯ ಜಾತ್ರಾ ಮಹೋತ್ಸವ ರಾತ್ರಿಯಿಂದ ಆರಂಭವಾಗಿದ್ದು, ಶ್ರೀ ಅಮ್ಮನವರ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಇಂದು ಮುಂಜಾನೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿಯೂ ನಸುಕಿನಲ್ಲಿ ನಡೆದ ಹೆತ್ತೇನಹಳ್ಳಿಯಮ್ಮನ ರಥೋತ್ಸವಕ್ಕೆ ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತ ಸಮೂಹ ಸಾಕ್ಷಿಯಾಯಿತು. ತುಮಕೂರು ತಾಲ್ಲೂಕಿನ ಗೂಳೂರು ಹೋಬಳಿಯ ಹೆತ್ತೇನಹಳ್ಳಿ, ಕೈದಾಳ, ಗೂಳೂರು, ಕಂಭತ್ತನಹಳ್ಳಿ, ರಂಗಯ್ಯನಪಾಳ್ಯ, ಚಿಕ್ಕಸಾರಂಗಿ, ನರುಗನಹಳ್ಳಿ, ಮಾಯಣ್ಣಗೌಡನ ಪಾಳ್ಯ ಸೇರಿದಂತೆ ಈ ಭಾಗದ ಹಳ್ಳಿಗಳಲ್ಲಿ ಹೆತ್ತೇನಹಳ್ಳಿಯಮ್ಮನ ಜಾತ್ರೆಗೆ ವಿಶೇಷವಾಗಿಯೇ ಭಕ್ತ ಸಮೂಹ ಸಜ್ಜಾಗುತ್ತಾರೆ. ಅದರಂತೆ ಸೋಮವಾರ ಇಡೀ ದಿನ ಭಕ್ತರು ಉಪವಾಸ ವ್ರತ ಮಾಡಿದ ಭಕ್ತರು ಮಧ್ಯರಾತ್ರಿಯಿಂದಲೇ ಅಗ್ನಿಕೊಂಡ ಹಾಯ್ದು ಅಮ್ಮನವರಿಗೆ ಹರಕೆ ಅರ್ಪಿಸಿ ಭಕ್ತಿ ಸಮರ್ಪಿಸಿದರು. ಇನ್ನು ಈ ಭಾಗದ ಹೆಣ್ಣು ಮಕ್ಕಳು ಅಮ್ಮನವರಿಗೆ ಬಾಯಿ ಬೀಗದ ಹರಕೆ ತೀರಿಸುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಹದಿ ಹರೆಯದ ಹೆಣ್ಣು ಮಕ್ಕಳು, ಮಹಿಳೆಯರು…

Read More

 ತುಮಕೂರು :        ಗ್ರಾಮದ ಸಮಗ್ರ ಅಭಿವೃದ್ಧಿಯೇ ಆದರ್ಶ ಗ್ರಾಮ ಯೋಜನೆಯ ಉದ್ದೇಶವಾಗಿದೆ ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗುಬ್ಬಿ ತಾಲ್ಲೂಕಿನ ಮಾರಶೆಟ್ಟಿಹಳ್ಳಿ ಗ್ರಾಮದ ಪ್ರಗತಿ ಪರಿಶೀಲನಾ ಸಭೆ ಹಾಗೂ ಮಧುಗಿರಿ ತಾಲ್ಲೂಕಿನ ಗಂಜಲಗುಂಟೆ, ಕೊರಟಗೆರೆ ತಾಲ್ಲೂಕಿನ ಕುರಂಕೋಟೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಮತ್ತು ತಿಪಟೂರು ತಾಲ್ಲೂಕಿನ ಅರಳಗುಪ್ಪೆ ಗ್ರಾಮಗಳಲ್ಲಿ ಗ್ರಾಮಸಭೆ ನಡೆಸಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಳ್ಳಿಗಳು ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಸಂಸದರ ಆದರ್ಶ ಗ್ರಾಮ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು. ಈ ಯೋಜನೆಯಡಿ ನೀರಿನ ಮೂಲಗಳು ಮತ್ತು ಅವುಗಳ ಸಮರ್ಪಕ ಬಳಕೆ, ಸ್ವಚ್ಛತೆ ಮತ್ತು ನೈರ್ಮಲ್ಯ, ಜೀವನಮಟ್ಟ, ಶಾಲೆ ಸೇರಿದಂತೆ ಹಳ್ಳಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು. ಅಧಿಕಾರಿಗಳು ಆದರ್ಶ ಗ್ರಾಮಗಳ ಅಭಿವೃದ್ಧಿಗಾಗಿ ಸಹಕಾರ ಮನೋಭಾವದಿಂದ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕು. ಸರ್ಕಾರದ…

Read More

ತುಮಕೂರು :       ಸುಮಾರು ಐವತ್ತೆಂಟು ವರ್ಷಗಳ ಹಿಂದೆ ಶ್ರೀ ಸಿದ್ದಗಂಗಾ ಮಠದಲ್ಲಿ ಪ್ರಾರಂಭವಾದ ಕೃಷಿನ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಇಂದು ರಾಜ್ಯದಲ್ಲಿಯೇ ಮೊದಲನೇ ಸ್ಥಾನದಲ್ಲಿ ಗುರ್ತಿಸಿಕೊಂಡಿದೆ ಎಂದು ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಹೇಳಿದರು. ಶ್ರೀ ಸಿದ್ಧಗಂಗಾ ಮಠದ ವತಿಯಿಂದ ಆಯೋಜಿಸಲಾಗಿದ್ದ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಶ್ರೀ ಮಠದಿಂದ ಹೊರ ತಂದಿರುವ ವಸ್ತು ಪ್ರದರ್ಶನದ ಇತಿಹಾಸವನ್ನು ಸಾರುವ ಸ್ಮರಣ ಸಂಚಿಕೆ “ಸುವರ್ಣ ದರ್ಶನ”ವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು 1964ರಲ್ಲಿ ಪ್ರಾರಂಭವಾದ ಕೃಷಿ ಮತ್ತು ಕೈಗಾರಿಕ ವಸ್ತು ಪ್ರದರ್ಶನ ಇಂದು ವಿಶ್ವ ವಿಖ್ಯಾತಿ ಪಡೆದಿದ್ದು, ಆಪಾರ ಜನಪ್ರಿಯತೆಯನ್ನು ಹೊಂದಿದೆ ಎಂದು ತಿಳಿಸಿದರು. ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಹಾಗೂ ಕೃಷಿಯಲ್ಲಿ ಆಗಿರುವ ಬದಲಾವಣೆಗಳನ್ನು ತಿಳಿಸುವುದೇ ಈ ವಸ್ತು ಪ್ರದರ್ಶನದ ಮೂಲ ಉದ್ದೇಶವಾಗಿದೆ. 12ನೇ ಶತಮಾನದ ಕಾಯಕದಲ್ಲಿ ನಂಬಿಕೆಯಿಟ್ಟಿದ್ದ, ಬಸವಣ್ಣರಾದಿಯಾಗಿ ಎಲ್ಲಾ…

Read More