ತುಮಕೂರು : ನಗರದಲ್ಲಿ ಮಕ್ಕಳ ಮನರಂಜ ನೆಗಾಗಿ ಪುಟಾಣಿ ರೈಲು ಅಳವಡಿಸಲು ರಾಜ್ಯ ಬಾಲಭವನ ಚಿಂತನೆ ನಡೆಸಿದೆ ಎಂದು ಬಾಲಭವನ ಸೊಸೈಟಿಯ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜ್ ತಿಳಿಸಿದರು. ಜಿಲ್ಲಾ ಬಾಲಭವನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಗರ ಕೇಂದ್ರ ಭಾಗದಲ್ಲಿ ಸುಮಾರು 3 ಎಕರೆ ಪ್ರದೇಶದಲ್ಲಿರುವ ಜಿಲ್ಲಾ ಬಾಲಭವನ ಆವರಣವನ್ನು ಮಕ್ಕಳ ಮನರಂಜನಾ ತಾಣವಾಗಿಸುವ ನಿಟ್ಟಿನಲ್ಲಿ ಈಗಾಗಲೇ ಸ್ಪ್ರಿಂಗ್ ರೈಡರ್, ಡಕ್, ಪ್ಲಾಟ್ ಫಾರಂ ಮೆರಿಗೋ ರೌಂಡ್ಸ್, ವೇವ್ ಸ್ಟೇಡ್, ಸೈಡ್ ಬೈ ಸೈಡ್ ಸಿ, ರೈನ್ಬೋ ಕ್ಲೈಂಬರ್, ಸ್ಟಾಂಡರ್ಡ್ ಸ್ಪ್ರಿಂಗ್ ಸೇರಿದಂತೆ ಮತ್ತಿತರ ಆಟಿಕೆಗಳನ್ನು ಅಳವಡಿಸಲಾಗಿದೆ. ಅಲ್ಲದೆ ಮಕ್ಕಳಿಗೆ ಮತ್ತಷ್ಟು ಮನರಂಜನೆ ಒದಗಿಸಲು ಪುಟಾಣಿ ರೈಲು ಅಳವಡಿಕೆಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರಲ್ಲದೆ ಪುಟಾಣಿ ರೈಲು ಅಳವಡಿಕೆಗಾಗಿ ಸುಮಾರು 6-8 ಎಕರೆ ಪ್ರದೇಶದ ಅಗತ್ಯವಿದ್ದು, ಜಿಲ್ಲಾಧಿಕಾರಿಗಳು ಸೂಕ್ತ ನಿವೇಶನ ಮಂಜೂರು ಮಾಡಿದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ಜಿಲ್ಲಾ ಬಾಲಭವನದ ಆವರಣದಲ್ಲಿ ಈಗಾಗಲೇ ಆಟಿಕೆ ಅಳವಡಿಕೆ, ಆಟದ…
Author: News Desk Benkiyabale
ತುಮಕೂರು : ತ್ರಿವಿಧ ದಾಸೋಹಿ, ಕಾಯಕಯೋಗಿ, ಶತಮಾನದ ಸಂತ, ನಡೆದಾಡುವ ದೇವರು ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳವರ ಪುಣ್ಯ ಸ್ಮರಣೆ ದಿನವನ್ನು ದಾಸೋಹದ ದಿನವನ್ನಾಗಿ ಆಚರಿಸಲು ಸರ್ಕಾರದಿಂದ ಆಜ್ಞೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಶ್ರೀ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಂಡಿದ್ದ ಲಿಂಗೈಕ್ಯ ಡಾ. ಶ್ರೀ ಶ್ರೀ ಶಿವಕುಮಾರಸ್ವಾಮೀಜಿ ಅವರ ದ್ವಿತೀಯ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನೂರನ್ನೊಂದು ವರ್ಷಗಳ ಕಾಲ ನಡೆದಾಡುವ ದೇವರೆಂದೇ ಬದುಕಿದ ಶ್ರೀಗಳ ಬದುಕು ಮತ್ತು ವ್ಯಕ್ತಿತ್ವ ಸಾರುವ ಉದ್ದೇಶದಿಂದ ಅವರ ಹುಟ್ಟೂರಾದ ವೀರಾಪುರದಲ್ಲಿ 111 ಅಡಿ ಪುತ್ಥಳಿ ಸ್ಥಾಪನೆಗೆ 80 ಕೋಟಿ ಅಂದಾಜು ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದ್ದು, ಈಗಾಗಲೇ 25 ಕೋಟಿ ಬಿಡುಗಡೆ ಮಾಡಲಾಗಿದೆ. ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿ ವಸ್ತುಸಂಗ್ರಹಾಲಯ ನಿರ್ಮಾಣಕ್ಕೆ ಪ್ರದಾನ ಮಂತ್ರಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದು, ಇದಕ್ಕಾಗಿ ಅವಶ್ಯವಕವಿರುವ 10 ಕೋಟಿ ಅನುದಾನವನ್ನು ಶೀಘ್ರ…
ತುಮಕೂರು : ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಜನವರಿ 21ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ರಸ್ತೆ ಮೂಲಕ ಆಗಮಿಸುವ ಮುಖ್ಯಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಶ್ರೀ ಸಿದ್ಧಗಂಗಾ ಮಠದಲ್ಲಿ ಆಯೋಜಿಸಿರುವ ಪರಮಪೂಜ್ಯ ಡಾ|| ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 2ನೇ ಪುಣ್ಯಸಂಸ್ಮರಣೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12-30 ಗಂಟೆಗೆ ಶ್ರೀ ಸಿದ್ಧಗಂಗಾ ಮಠದಿಂದ ಬೆಂಗಳೂರಿಗೆ ತೆರಳುವರು.
ತುಮಕೂರು : ಪಶುವೈದ್ಯರ ಕೆಲಸ ಇಂದು ದನ ಕರುಗಳಿಗೆ ಚಿಕಿತ್ಸೆ ನೀಡುವುದಕಷ್ಟೇ ಸಿಮೀತವಾಗಿಲ್ಲ.ಪ್ರಾಣಿಯಿಂದ ಮನುಷ್ಯನಿಗೆ ಬರಬಹುದಾದ ರೋಗಗಳನ್ನು ತಡೆಗಟ್ಟಿ, ಜನರ ಆರೋಗ್ಯದ ಕಡೆಗೂ ಹೆಚ್ಚಿನ ಗಮನಹರಿಸುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಮಂಜುಳ ಅಭಿಪ್ರಾಯಪಟ್ಟಿದ್ದಾರೆ. ನಗರದ ಶ್ರೀಸಿದ್ದಾರ್ಥ ಎಂಬಿಎ ಸಭಾಂಗಣದಲ್ಲಿ ಕರ್ನಾಟಕ ಪಶು ವೈದ್ಯಕೀಯ ಸಂಘ, ತುಮಕೂರು ಜಿಲ್ಲಾ ಶಾಖೆ ಹಾಗೂ ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಜಾನುವಾರುಗಳು ಉದರ ಸಂಬಂಧಿ ರೋಗಗಳ ಪತ್ತೆ ಮತ್ತುಚಿಕಿತ್ಸೆ ಎಂಬ ವಿಷಯ ಕುರಿತ ತಾಂತ್ರಿಕ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಪ್ರಾಣಿಗಳಿಂದ ಮನುಷ್ಯನಿಗೆ ಹರಡಬಹುದಾದ ರೇಬಿಸಿ ಇನ್ನಿತರ ರೋಗಗಳು ಮಾನವ ಸಂಪನ್ಮೂಲವನ್ನು ಕಡಿಮೆ ಮಾಡದ ರೀತಿಯಲ್ಲಿ ಆಗಿಂದಾಗ್ಗೆ ಇಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಪಡೆದು, ಹೊಸ ರೋಗಗಳಿಗೆ ಸವಾಲಾಗಿ ಕೆಲಸ ಮಾಡುತ್ತಿದ್ದಾರೆ ಎಂದರು. ಕೃಷಿ ಸಂಕಷ್ಟದ ದಿನಗಳಲ್ಲಿ ಇರುವ…
ತುಮಕೂರು : ಗ್ಯಾಟ್ ಒಪ್ಪಂದದ ನಂತರ ಜಾರಿಗೆ ಬಂದ ಜಾಗತೀಕರಣ ಉದಾರೀಕರಣ, ಖಾಸಗೀಕರಣದ ಫಲವಾಗಿ 1991ರ ನಂತರ ಸರಕಾರಗಳು ಬದಲಾದರೂ ನೀತಿಗಳು ಬದಲಾಗುತ್ತಿಲ್ಲ. ಬಿಜೆಪಿ ನೇತೃತ್ವದ ಎನ್.ಡಿ.ಎ ಸರಕಾರದಲ್ಲಿ ದೇಶವನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಬಹುವೇಗವಾಗಿ ನಡೆಯುತ್ತಿದೆ ಎಂದು ಚಿಂತಕ ಮತ್ತು ಅಂಕಣಕಾರ ಶಿವಸುಂದರಂ ಅಭಿಪ್ರಾಯಪಟ್ಟಿದ್ದಾರೆ. ನಗರದ ಕನ್ನಡ ಭವನದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ, ವಿವಿಧ ರೈತ, ಪ್ರಗತಿಪರ ಸಂಘಟನೆಗಳ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ ಜನವರಿ 26ರ ರೈತರ ಫೇರೆಡ್ನ ಪೂರ್ವಭಾವಿ ಸಭೆಯಲ್ಲಿ ರೈತರಿಗೆ ಉಪಯುಕ್ತ ಮಾಹಿತಿಯನ್ನು ಒಳಗೊಂಡ ಕ್ಯಾಲೇಂಡರ್, ಡೈರಿ, ಕರಪತ್ರ ಬಿಡುಗಡೆ ಮಾಡಿ ಮಾತನಾಡುತಿದ್ದ ಅವರು, 2019ರ ಚುನಾವಣೆ ನಂತರ ದೇಶದ ಸಂಪನ್ಮೂಲವನ್ನು ಕಾರ್ಪೋರೇಟ್ ಸಂಸ್ಥೆಗಳಿಗೆ ಹರಾಜು ಹಾಕಲಾಗುತ್ತಿದೆ ಎಂದು ಹಲವು ಉದಾಹರಣೆಗಳ ಮೂಲಕ ವಿವರಿಸಿದರು. ಜ.26 ರಂದು ನಡೆಯಲಿರುವ ಟ್ರಾಕ್ಟರ್ ರ್ಯಾಲಿ ಐತಿಹಾಸಿಕ ದಿನ, ಗಣರಾಜ್ಯೋತ್ಸವ ಸೈನಿಕ ಶಕ್ತಿ ಪ್ರದರ್ಶಿಸಲು ಪರೇಡ್ ನಡೆಸಿದರೆ, ರೈತಾಪಿಗಳ…
ತುಮಕೂರು : ಕೋವಿಡ್ ಲಸಿಕಾ ವಿತರಣಾ ಅಭಿಯಾನದ ಮೂರನೇ ದಿನವಾದ ಮಂಗಳವಾರ ಜಿಲ್ಲೆಯಾದ್ಯಂತ 69 ವಿತರಣಾ ಕೇಂದ್ರಗಳಲ್ಲಿ 4310 ಮಂದಿಗೆ ಲಸಿಕೆ ವಿತರಿಸಲಾಯಿತು. ಲಸಿಕಾ ಅಭಿಯಾನದ ಮೊದಲ ದಿನ 13 ಕೇಂದ್ರಗಳಲ್ಲಿ ಲಸಿಕೆ ವಿತರಿಸುವ ಗುರಿ ಹೊಂದಲಾಗಿದ್ದ 1142 ಫಲಾನುಭವಿಗಳ ಪೈಕಿ 839 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಎರಡನೇ ದಿನ ನೋಂದಣಿಯಾಗಿದ್ದ 4549 ಫಲಾನುಭವಿಗಳ ಪೈಕಿ 3640 ಫಲಾನುಭವಿಗಳಿಗೆ ಲಸಿಕೆ ಹಾಕಲಾಯಿತು. ಮೂರನೇ ದಿನ ಗುರಿ ಹೊಂದಲಾಗಿದ್ದ 5117 ನೋಂದಣಿಯಾದ ಫಲಾನುಭವಿಗಳ ಪೈಕಿ 4310 ಮಂದಿಗೆ ಲಸಿಕೆ ವಿತರಿಸಲಾಯಿತು. ಮಂಗಳವಾರ 84% ಲಸಿಕೆ ವಿತರಿಸಲಾಗಿದೆ. ಮೊದಲ ಹಂತದಲ್ಲಿ ಲಸಿಕೆ ಪಡೆಯಲು ಒಟ್ಟು 20ಸಾವಿರ ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ ಲಸಿಕಾ ಅಭಿಯಾನ ಆರಂಭವಾದ ಒಟ್ಟು 3 ದಿನದಲ್ಲಿ 8789 ಫಲಾನುಭವಿಗಳು ಲಸಿಕೆ ಪಡೆದಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.
ಹುಳಿಯಾರು : ಹುಳಿಯಾರು ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಲಿಂಗಪ್ಪನಪಾಳ್ಯ ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸುವಂತೆ ಇಲ್ಲಿನ ನಿವಾಸಿಗಳು ಒತ್ತಾಯಿಸಿದ್ದಾರೆ. ಸುಮಾರು 200 ಮನೆಗಳಿರುವ ಗ್ರಾಮದಲ್ಲಿ 650 ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಆದರೆ ರಸ್ತೆ, ನೀರು, ಬೀದಿ ದೀಪ, ಚರಂಡಿ ಸೇರಿದಂತೆ ಮೂಲಸೌಲಭ್ಯಗಳ ಕೊರತೆ ಇಲ್ಲಿದೆ. ಪಟ್ಟಣ ಪಂಚಾಯ್ತಿ ವ್ಯಾಪ್ತಿಗೆ ಒಳಪಟ್ಟರೂ ಅಲ್ಲಿನ ಅಧಿಕಾರಿಗಳ ಅವಕೃಪೆಯಿಂದ ಗ್ರಾಪಂಗೂ ಕಡೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇಡೀ ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ ಕಾಲದಲ್ಲಿ ಮಾಡಿದ 2 ಬೀದಿ ಸಿಮೆಂಟು ರಸ್ತೆಗಳು ಬಿಟ್ಟರೆ ಉಳಿದ ಕಡೆಯಲ್ಲೆಲ್ಲ ಕಲ್ಲುಮಣ್ಣಿನ ರಸ್ತೆಗಳಿವೆ. ಗ್ರಾಮದಲ್ಲಿ ಒಳಚರಂಡಿ ವ್ಯವಸ್ಥೆಯಿಲ್ಲದೆ ತ್ಯಾಜ್ಯ ನೀರು ಅಲ್ಲಲ್ಲಿ ನಿಂತಿದ್ದು, ಅನೈರ್ಮಲ್ಯಕ್ಕೆ ಕಾರಣವಾಗಿದೆ. ರಸ್ತೆಗೆ ಕೊಳಚೆ ನೀರು ಹರಿಯುತ್ತಿದ್ದರೂ ಪಪಂ ಸಿಬ್ಬಂದಿ ಸ್ವಚ್ಚಮಾಡದ ಪರಿಣಾಮ ಮೂಗು ಮುಚ್ಚಿಕೊಂಡು ಜನ ಓಡಾಡುವಂತ್ತಾಗಿದೆ ಎಂದು ಗ್ರಾಮಸ್ಥರ ದೂರಾಗಿದೆ. ಇನ್ನು ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲು ದಶಕಗಳಿಂದ…
ಗುಬ್ಬಿ : ಬೃಹತ್ ಎಚ್ಎಎಲ್ ಕಾರ್ಖಾನೆ ಸ್ಥಾಪನೆಗೆ ಭೂಮಿ ಬಿಟ್ಟುಕೊಟ್ಟ ಮಾರಶೆಟ್ಟಿಹಳ್ಳಿ ಗೊಲ್ಲರಹಟ್ಟಿ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಗ್ರಾಮಸ್ಥರಿಗೆ ನೀಡಿದ ಯಾವುದೇ ಭರವಸೆಯನ್ನು ಈಡೇರಿಸದೆ ಈಗ ಬಗರ್ಹುಕುಂ ಮಂಜೂರಾತಿ ಹೆಸರಿನಲ್ಲಿ ಭೂ ಮಾಫಿಯಾಗಳಿಗೆ ಜಮೀನು ನೀಡುತ್ತಿರುವ ಭ್ರಷ್ಟಾಚಾರವನ್ನು ಖಂಡಿಸಿ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಪಟ್ಟಣದ ಸರ್ಕಲ್ ಬಳಿ ಜಮಾಯಿಸಿದ ನಿಟ್ಟೂರು ಹೋಬಳಿ ಮಾರಶೆಟ್ಟಿಹಳ್ಳಿ ಗೊಲ್ಲರಹಟ್ಟಿ ಗ್ರಾಮಸ್ಥರು ಪಾದಯಾತ್ರೆ ಮೂಲಕ ತಾಲ್ಲೂಕು ಕಚೇರಿಗೆ ತಲುಪಿ ತಾಲ್ಲೂಕು ಆಡಳಿತದ ವಿರುದ್ದ ಘೋಷಣೆ ಕೂಗಿದರು. ರೈತರನ್ನು ಒಕ್ಕಲೆಬ್ಬಿಸುವ ಸರ್ಕಾರದ ಧೋರಣೆಯನ್ನು ಖಂಡಿಸಿ ನಮ್ಮ ಭೂಮಿ ನಮಗೆ ಉಳಿಸಿಕೊಡಲು ಆಗ್ರಹಿಸಿದರು. ಸುಮಾರು 60 ವರ್ಷಕ್ಕೂ ಅಧಿಕ ಅನುಭವದಲ್ಲಿರುವ ಗೊಲ್ಲರಹಟ್ಟಿ ಗ್ರಾಮಸ್ಥರು ಸುಮಾರು 130 ಎಕರೆ ಪ್ರದೇಶದಲ್ಲೇ ಕೃಷಿ ನಡೆಸಿಕೊಂಡು 70 ಕ್ಕೂ ಅಧಿಕ ಕುಟುಂಬ ಬದುಕು ಕಟ್ಟಿಕೊಂಡಿದೆ. ದಿಢೀರ್ ಪ್ರತ್ಯಕ್ಷವಾದ ಎಚ್ಎಎಲ್ ಕಾರ್ಖಾನೆ ನಮ್ಮ ಜೀವನವನ್ನೇ ಬೀದಿಗೆ…
ತುಮಕೂರು : ಜಾಗತಿಕ ಮಟ್ಟಕ್ಕೆ ಸರಿಸಮಾನವಾದ ರೀತಿಯಲ್ಲಿ ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನ ‘ಸಿದ್ಧಾರ್ಥ ಅಡ್ವಾನ್ಸ್ಡ್ ಹಾರ್ಟ್ಸೆಂಟರ್’ನಲ್ಲಿ ಯಶಸ್ವಿಯಾಗಿ ಓಪನ್ ಹಾರ್ಟ್ ಸರ್ಜರಿಯನ್ನು ಉಚಿತವಾಗಿ ನಡೆಸಲಾಗಿದೆ. ಇದು ಇತಿಹಾಸದಲ್ಲಿ ಹೊಸ ಅಧ್ಯಾಯವನ್ನ ಸೃಷ್ಟಿಸಿದೆ ಎಂದು ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಶ್ರೀ ಸಿದ್ದಾರ್ಥ ವೈದ್ಯಕೀಯ ಆಸ್ಪತ್ರ ಮತ್ತು ಕಾಲೇಜಿನಲ್ಲಿಂದು (ಜನವರಿ 19) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತುಮಕೂರಿನಂತಹ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಓಪನ್ ಹಾರ್ಟ್ ಸರ್ಜರಿಯನ್ನು ನಡೆಸಿ ಯಶಸ್ವಿಯಾಗಿರುವುದು ದಾಖಲಾರ್ಹ. ಶಸ್ತ್ರಚಿಕಿತ್ಸೆಯಾದ ಅರ್ಧ ತಾಸಿನಲ್ಲೇ ರೋಗಿ ಚೇತರಿಸಿಕೊಂಡು, ವೈದ್ಯರೊಂದಿಗೆ ಮಾತನಾಡಿದ್ದು, ಗಮನಾರ್ಹ ಸಂಗತಿ ಎಂದರು. ಸಿದ್ದಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಯುಜಿಸಿಯಿಂದ ‘ಎ’ ಗ್ರೇಡ್ ಮಾನ್ಯತೆ ಪಡೆದಿದ್ದು ಸ್ವಾಯತ್ತ ವಿಶ್ವವಿದ್ಯಾಲಯವಾಗಿ ಪರಿವರ್ತನೆಗೊಂಡಿದೆ. ತಂದೆ ಶಿಕ್ಷಣ ಭೀಷ್ಮ ಡಾ.ಎಚ್.ಎಂ ಗಂಗಾಧರಯ್ಯನವರ ಆಶಯ…
ತುರುವೇಕೆರೆ: ತಾಲ್ಲೂಕಿನ ಬಾಣಸಂದ್ರ ಗ್ರಾಮದ ಮೂಡಲಗಿರಿಯಪ್ಪ ಎಂಬುವರ ಜಮೀನಿನಲ್ಲಿ ಬೆಳೆದಿದ್ದ 125 ಅಡಿಕೆ ಸಸಿಗಳನ್ನು ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಕತ್ತರಿಸಿ ಹಾಕಿರುವ ಅಮಾನವೀಯ ಘಟನೆ ನೆಡೆದಿದೆ. ಘಟನೆಯ ಬಗ್ಗೆ ವಿವರಿಸಿದ ಮೂಡಲಗಿರಿಯಪ್ಪನವರ ಮಕ್ಕಳಾದ ಶಿವಕುಮಾರ್ ಹಾಗೂ ಮಂಜುನಾಥ್ ನಮ್ಮ ತಂದೆ ನಮ್ಮ ಚಿಕ್ಕಪ್ಪಂದಿರ ನೆರವಿನೊಂದಿಗೆ ಪಿತ್ರಾರ್ಜಿ ಆಸ್ತಿಯಲ್ಲಿ ಅಡಿಕೆ ಸಸಿಗಳನ್ನು ಬೆಳೆದಿದ್ದರು. ನನ್ನ ತಂಗಿ ಪದ್ಮಾವತಿ ಗಂಡನ ಕುಮ್ಮಕ್ಕಿನಿಂದ ಅಡಿಕೆ ಸಸಿಗಳನ್ನು ಕತ್ತರಿಸಿ ಹಾಕುವ ಮೂಲಕ ವೈಯಕ್ತಿಕ ದ್ವೇಷ ಸಾಧಿಸಲು ಮುಂದಾಗಿದ್ದಾರೆಂದು ಆರೋಪಿಸಿದ್ದಾರೆ. ಘಟನೆ ಸ್ಥಳಕ್ಕೆ ತಂಡೋಪ ತಂಡವಾಗಿ ಆಗಮಿಸುತ್ತಿರುವ ರೈತಾಪಿಗಳು ಅಡಿಕೆ ಸಸಿಗಳನ್ನು ಕತ್ತರಿಸಿ ಹಾಕಿರುವ ಕ್ರಮವನ್ನು ಖಂಡಿಸುತ್ತಿದ್ದಾರೆ.ಈ ಕುರಿತು ದಂಡಿನಶಿವರ ಪೋಲೀಸರಿಗೆ ದೂರು ನೀಡುವುದಾಗಿ ಮೂಡಲಗಿರಿಯಪ್ಪನವರ ಮಕ್ಕಳಾದ ಮಂಜುನಾಥ್ ಹಾಗೂ ಶಿವಕುಮಾರ್ ತಿಳಿಸಿದ್ದಾರೆ,