Author: News Desk Benkiyabale

 ತುಮಕೂರು :        ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ನವೀಕರಣಕ್ಕೆ ಇರುವ ನಿಯಮಗಳನ್ನು ಸಡಿಲಗೊಳಿಸಬೇಕು. ಈ ಮೂಲಕ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.       ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಗೊಳಿಸದಿದ್ದರೆ ಮಕ್ಕಳ ಶಿಕ್ಷಣಕ್ಕೆ ತುಂಬಾ ತೊಂದರೆಯಾಗಲಿದೆ. ಈ ಬಗ್ಗೆ ಸರ್ಕಾರ ಗಮನ ಹರಿಸಿ ಸಮಸ್ಯೆ ಬಗೆಹರಿಸಬೇಕು ಎಂದರು.         ಸಿದ್ದಗಂಗಾ ಮಠದಲ್ಲಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು ತಮ್ಮನ್ನು ಭೇಟಿ ಮಾಡಿ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವಂತೆ ಮನವಿ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರದ ಜತೆ ಜತೆಯಲ್ಲೇ ಖಾಸಗಿ ಶಿಕ್ಷಣ ಸಂಸ್ಥೆಗಳು ಅಷ್ಟೇ ಮಹತ್ವಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ. ನಾಡಿನ ಶೈಕ್ಷಣಿಕ ಪ್ರಗತಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆಯೂ ಅಪಾರವಾಗಿದೆ. ಮಠಮಾನ್ಯಗಳು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳು ಅಷ್ಟೇ ಪ್ರಮುಖವಾಗಿ…

Read More

ಹುಳಿಯಾರು :        ಟಿವಿಎಸ್‍ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟಿವಿಎಸ್ ಸವಾರ ರೈತನೋರ್ವ ಸಾವನ್ನಪ್ಪಿದ ಘಟನೆ ಹುಳಿಯಾರು ಸಮೀಪದ ಮುಕ್ತಿಧಾಮದ ಬಳಿ ಜರುಗಿದೆ.       ಅಪಘಾತದಲ್ಲಿ ಮೃತನಾದ ದುರ್ಧೈವಿಯನ್ನು ಹುಳಿಯಾರು ಹೋಬಳಿಯ ಕುರಿಹಟ್ಟಿಯ ಮೈಲಾರಪ್ಪ (51) ಎಂದು ಗುರುತಿಸಲಾಗಿದೆ. ಇವರು ಹುಳಿಯಾರಿನಿಂದ ಮಾರ್ನಿಂಗ್ ಮಾರ್ಕೆಟ್‍ನಲ್ಲಿ ಟಮೋಟೊ ಮಾರಿಕೊಂಡು ಸ್ವಗ್ರಾಮ ಕುರಿಹಟ್ಟಿಗೆ ಹಿಂದಿರುಗುವಾಗ ಹಿರಿಯೂರು ಮಾರ್ಗವಾಗಿ ಬಂದ ತಮಿಳುನಾಡು ಮೂಲಕ ಲಾರಿ ಡಿಕ್ಕಿ ಹೊಡೆದು ಆತನ ಎರಡೂ ಕಾಲಿನ ಮೇಲೆ ಹರಿದಿದೆ.       ಪರಿಣಾಮ ರೈತ ಮೈಲಾರಪ್ಪನ ಎರಡೂ ಕಾಲುಗಳು ನಜ್ಜುಗುಜ್ಜಾಗಿ ತೀರ್ವ ರಕ್ತಸ್ತ್ರಾವ ಆಗಿದೆ. ದಾರಿಹೋಕರು ಹುಳಿಯಾರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದರು. ನಂತರ ಕುಟುಂಬ ವರ್ಗದವರು ಹೆಚ್ಚಿನ ಚಿಕಿತ್ಸೆಗೆ ಹಾಸನ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.       ಲಾರಿ ಚಾಲಕ ಪರಾರಿಯಾಗಿದ್ದು ಲಾರಿಯನ್ನು ಹುಳಿಯಾರು ಪೊಲೀಸರು ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಮೃತ ಮೈಲಾರಪ್ಪನಿಗೆ…

Read More

ತುಮಕೂರು :       ಅಕ್ಷರ ದಾಸೋಹ ಬಿಸಿಯೂಟ ನೌಕರರಿಗೆ ಕನಿಷ್ಠಕೂಲಿ ನಿಗಧಿ ಪಡಿಸಬೇಕು,ಡಿಸೆಂಬರ್ ತಿಂಗಳ ವೇತನ ಬಿಡುಗಡೆ ಮಾಡಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೇಡರೇಷನ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.      ಎಐಟಿಯುಸಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾವೇಶಗೊಂಡಿದ್ದ ನೂರಾರು ಬಿಸಿಯೂಟ ತಯಾರಕರು,ನಮಗೆ ಸೇವಾ ಭದ್ರತೆ ಒದಗಿಸಬೇಕು, ಬಿಸಿಯೂಟ ತಯಾರಕರ ಕಲ್ಯಾಣಮಂಡಳಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.       ಈ ವೇಳೆ ಮಾತನಾಡಿದ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್,ಕಳೆದ 18 ವರ್ಷಗಳಿಂದ ಸರಕಾರ ಅಕ್ಷರ ದಾಸೋಹ ಯೋಜನೆಯಲ್ಲಿ ದುಡಿಯುತ್ತಿರುವ ನೌಕರರನ್ನು ಅತ್ಯಂತ ಕೀಳಾಗಿ ಕಾಣುತ್ತಿದೆ. ಅವರಿಗೆ ಕನಿಷ್ಠ ವೇತನ ಜಾರಿ ಮಾಡದೆ, ಸೇವಾ ಭದ್ರತೆಯನ್ನು ನೀಡಿದೆ, ಅತ್ಯಂತ ಕಡಿಮೆ ಕೂಲಿಗೆ ದುಡಿಸಿಕೊಳ್ಳುವ ಮೂಲಕ ಶೋಷಣೆ ಮಾಡುತ್ತಿದೆ.ಕೋವಿಡ್-19 ಲಾಕ್‍ಡೌನ್‍ನಿಂದ ಶಾಲೆಗಳು ಮುಚ್ಚಿದ ಪರಿಣಾಮ ಕಳೆದ…

Read More

ತುಮಕೂರು:      ದೇವರಾಜ ಅರಸು ಅಭಿವೃದ್ದಿ ನಿಗಮದ ಫಲಾನುಭವಿಗಳ ಆಯ್ಕೆ ಸಂಬಂಧ ಮತ್ತಷ್ಟು ಪಾರದರ್ಶಕತೆ ಕಾಯ್ದೆಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಕಚೇರಿಯನ್ನು ಒಳಗೊಂಡಂತೆ ಸಿಸಿಟಿವಿ ಅಳವಡಿಕೆ ಹಾಗೂ ನಿಗಾವಣೆ ಸಮಿತಿಯನ್ನು ನೇಮಿಸುವ ಚಿಂತನೆ ಇದೆ ಎಂದು ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ ತಿಳಿಸಿದ್ದಾರೆ.      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಹೋರಾಟ ನಡೆಸಿದ ಪ್ರಮುಖರಲ್ಲಿ ಅರಸು ಒಬ್ಬರು,ಅವರ ಹೆಸರಿನಲ್ಲಿರುವ ನಿಗಮವನ್ನು ಮತ್ತಷ್ಟು ಜನಪರಗೊಳಿಸುವ, ವಿಸ್ತರಿಸುವ,ಶಕ್ತಿ ತುಂಬುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುತ್ತಿದೆ ಎಂದರು. ಕೋರೋನಾ ಮಹಾಮಾರಿಯಿಂದಾಗಿ ಕಳೆದ ಸಾಲಿನಲ್ಲಿ ಅಂದರೆ 2019-20ಕ್ಕೆ ಹೊಲಿಕೆ ಮಾಡಿದರೆ 2020-21ರಲ್ಲಿ ನಿಗಮಕ್ಕೆ ನೀಡಿದ್ದ 80 ಕೋಟಿ ರೂ ಅನುದಾನದಲ್ಲಿ 206 ಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಗೆ ಅನುಕೂಲ ಮಾಡ ಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಆಗಿರುವ ವೆತ್ಯಾಸವನ್ನು 2021-22ನೇ ಸಾಲಿನ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ಮೀಸಲಿರಿಸಿ,ಮತ್ತಷ್ಟು ಜನರನ್ನು ತಲುಪಲು ಪ್ರಯತ್ನಿಸಲಾಗುವುದು ಎಂದು ರಘು ಕೌಟಿಲ್ಯ ಭರವಸೆ…

Read More

ಚಿಕ್ಕನಾಯಕನಹಳ್ಳಿ:       ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಮುಂದಿನ ಪ್ರಕ್ರಿಯೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಮಾಣ ವನ್ನು ಚುನಾವಣಾ ಆಯೋಗ ಪ್ರಕಟಿಸಿದೆ.      ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳಿಂದ ಆಯ್ಕೆಯಾಗಿರುವ 448 ಸದಸ್ಯರ ಪ್ರಮಾಣಕ್ಕೆ ತಕ್ಕಂತೆ ಮೀಸಲು ನಿಗದಿಗೊಳಿಸಿದ್ದು 27 ಪಂಚಾಯಿತಿಗಳಲ್ಲಿ ಒಟ್ಟಾರೆಎಲ್ಲಾ ವರ್ಗದಿಂದ 14 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿರಿಸಿದೆ. ಇದರಲ್ಲಿ ಅನುಸೂಚಿತ ಜಾತಿ 6 ಸ್ಥಾನಗಳನ್ನು ಮೀಸಲಿರಿಸಿದ್ದು ಈ 6ರಲ್ಲಿ 3 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿರಿಸಲಾಗಿದೆ. ಅನುಸೂಚಿತ ಪಂಗಡಕ್ಕೆ 3 ಸ್ಥಾನಗಳನ್ನು ಮೀಸಲಿರಿಸಿದ್ದು ಈ 3ರಲಿ 2 ಸ್ಥಾನಗಳು ಮಹಿಳೆಗೆ ಮೀಸಲಿರಿಸಿದೆ. ಹಿಂದುಳಿದವರ್ಗ(ಎ) ಗೆ 3 ಸ್ಥಾನಗಳನ್ನು ಮೀಸಲಿರಿಸಿದ್ದು ಈ 3ರಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ. ಹಿಂದುಳಿದವರ್ಗ(ಬ) 1 ಸ್ಥಾನ ಮೀಸಲಿರಿಸಿದೆ. ಸಾಮಾನ್ಯ ಸ್ಥಾನಗಳಿಗೆ 14 ಸ್ಥಾನಗಳನ್ನು ಮೀಸಲಿರಿಸಿದ್ದು ಈ 14 ರಲ್ಲಿ 7 ಸ್ಥಾನಗಳು ಮಹಿಳೆಯರಿಗೆ ಮೀಸಲಿರಿಸಲಾಗಿದೆ.       ತಾಲ್ಲೂಕುವಾರು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆ…

Read More

ಚಿಕ್ಕನಾಯಕನಹಳ್ಳಿ:       2020-21 ನೇ ಶೈಕ್ಷಣಿಕ ವರ್ಷವನ್ನು ವಿಶೇಷ ರೀತಿಯಲ್ಲಿ ಸ್ವಾಗತಕೋರುವ ಮೂಲಕ ಸರ್ಕಾರಿ ಶಾಲೆಗಳು ಆರಂಭಗೊಂಡವು.       ಕೊರೋನಾ ಸೋಂಕಿನ ಭೀತಿಯಿಂದ ಕಳೆದ ಎಂಟು ತಿಂಗಳಿಂದ ಮುಚ್ಚಿದ್ದ ಶಾಲೆಗಳಿಗೆ ಜ.1 ರಿಂದ ವಿವಿಧ ಸುರಕ್ಷತಾ ನಿಯಮಗಳ ಕಡ್ಡಾಯ ಪಾಲನೆಯೊಂದಿಗೆ ಶಾಲೆಗಳನ್ನು ತೆರೆಯಲು ಆದೇಶಬಂದ ಕಾರಣ ವಿವಿಧ ಶಾಲೆ ಹಾಗೂ ಕಾಲೇಜುಗಳಲ್ಲಿ ಉತ್ಸಾಹದ ವಾತಾವರಣ ನಿರ್ಮಾಣವಾಗಿತ್ತು.        ಪೋಷಕರು ಹಾಗೂ ವಿದ್ಯಾರ್ಥಿಗಳಿಂದಲೂ ಹೆಚ್ಚಿನ ಬೆಂಬಲ ವ್ಯಕ್ತವಾದ ಹಿನ್ನಲೆಯಲ್ಲಿ ಶಾಲಾ ಕಾಲೇಜು ಸಿಬ್ಬಂದಿ ವಿದ್ಯಾರ್ಥಿಗಳನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಂಡರು. ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ಕಲ್ಲುಬಾವಿ ಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಿದ್ಯಾಗಮ ಕಾರ್ಯಕ್ರಮದ ಬೋದನೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕೆಂಬಾಳ್ ರಮೇಶ್ ಗುಲಾವಿ ಹೂ ನೀಡುವ ಮೂಲಕ ಬರಮಾಡಿಕೊಂಡರು. ಶಾಲೆಯನ್ನು ಹಿಂದಿನ ದಿನಸ್ವಚ್ಚಗೊಳಿಸಿ, ಎಲ್ಲಾ ಕೊಠಡಿ, ಪ್ರಾಂಗಣ, ಊಟದ ಕೋಣೆ ಹಾಗೂ ಶೌಚಾಲಯವನ್ನು ಸ್ಯಾನಿಟೈಸರ್ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಉಷ್ಣತೆ ತಪಾಸಣೆ, ಹ್ಯಾಂಡ್…

Read More

 ತುಮಕೂರು :        ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜನವರಿ 7ರಂದು ನಡೆಯಲಿರುವ 2020-21ನೇ ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಗೆ ನೀಡುವ ಅಂಕಿ-ಅಂಶಗಳು ನಿಖರ ಹಾಗೂ ಸ್ಪಷ್ಟವಾಗಿರಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.        ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಇಲಾಖಾ ಪ್ರಗತಿ ಕಡಿಮೆಯಿದ್ದರೆ ಸ್ವಷ್ಟ ಕಾರಣ ನೀಡಬೇಕು ಹಾಗೂ ಅದನ್ನು ಷರಾದಲ್ಲಿ ನಮೂದಿಸಬೇಕು ಎಂದು ಸೂಚನೆ ನೀಡಿದರು.         ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ 249590 ರೈತರಿಗೆ 3ನೇ ತ್ರೈಮಾಸಿಕದಲ್ಲಿ ಮೊತ್ತ ಪಾವತಿ ಬಾಕಿಯಿದೆ. ಈಗಾಗಲೇ ಎಫ್‍ಟಿಒ ಜನರೇಟ್ ಆಗಿದ್ದು, ಅವರಿಗೆ ಶೀಘ್ರದಲ್ಲೇ ಮೊತ್ತ ಪಾವತಿಯಾಗಲಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನಾ ಸಭೆಗೆ…

Read More

 ತುಮಕೂರು :       ಬೆವಿಕಂ ನಗರ ಉಪವಿಭಾಗ-1 ವ್ಯಾಪ್ತಿಯಲ್ಲಿ ಕೇಬಲ್ ಅಳವಡಿಸುವ ಕಾಮಗಾರಿ ನಿರ್ವಹಿಸುತ್ತಿರುವುದರಿಂದ ಜನವರಿ 4 ರಿಂದ 22ರವರೆಗೆ ಬೆಳಿಗ್ಗೆ 7 ರಿಂದ ಬೆಳಿಗ್ಗೆ 10 ಗಂಟೆಯವರೆಗೆ (ಜನವರಿ 9, 10 ಮತ್ತು 17ರ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ) ಕೋತಿತೋಪು, ಹೊರಪೇಟೆ, ಶ್ರೀರಾಮನಗರ, ಆರ್.ವಿ.ಕಾಲೋನಿ, ಕೆ.ಆರ್.ಬಡಾವಣೆ, ಎಮ್.ಜಿ.ರಸ್ತೆ, ವಿವೇಕಾನಂದ ರಸ್ತೆ, ಬಾರ್ ಲೈನ್, ಅರಳೆಪೇಟೆ, ಬಿದಿರುಮಳೆ ತೋಟ, ಆರ್.ಟಿ.ನಗರ, ಬಿ.ಹೆಚ್.ರಸ್ತೆ, ದೊಡ್ಡಮನೆ ನರ್ಸಿಂಗ್ ಹೋಮ್, ಎಸಿ/ಎಸ್‍ಟಿ ಹಾಸ್ಟೇಲ್, ಹೊಸಹಳ್ಳಿ, ಹಾರೋನಹಳ್ಳಿ, ನರಸಾಪುರ, ಕುಪ್ಪುರು, ಕಾಳಮ್ಮನ ಪಾಳ್ಯ, ಮರಿಹುಚ್ಚಯ್ಯನ ಪಾಳ್ಯ, ಬಿ.ಎಚ್.ಪಾಳ್ಯ ಮತ್ತಿತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.

Read More

ತುಮಕೂರು:       ಜಿಲ್ಲೆಯ 329 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣಾ ಮತ ಎಣಿಕೆಯು ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಅಂತಿಮವಾಗಿ 5262 ಸದಸ್ಯರು ಆಯ್ಕೆಯಾಗಿದ್ದಾರೆ.       ತುಮಕೂರು ತಾಲೂಕಿನ 41 ಗ್ರಾಮ ಪಂಚಾಯಿತಿಗಳ 13 ಸದಸ್ಯರು ಅವಿರೊಧವಾಗಿ, ಮತದಾನದ ನಂತರ ಆಯ್ಕೆಯಾದ 733 ಸದಸ್ಯರು ಸೇರಿದಂತೆ 746 ಸದಸ್ಯ ಸ್ಥಾನಗಳು; ಕುಣಿಗಲ್ ತಾಲೂಕಿನ 36 ಗ್ರಾಮ ಪಂಚಾಯಿತಿಗಳ ಅವಿರೊಧವಾಗಿ 37 ಸದಸ್ಯರು, ಮತದಾನದ ನಂತರ ಆಯ್ಕೆಯಾದ 459 ಸದಸ್ಯರು ಸೇರಿದಂತೆ 496 ಸದಸ್ಯ ಸ್ಥಾನಗಳು; ಗುಬ್ಬಿ ತಾಲೂಕಿನ 34 ಗ್ರಾಮ ಪಂಚಾಯಿತಿಗಳ 65 ಸದಸ್ಯರು ಅವಿರೊಧವಾಗಿ, ಮತದಾನದ ನಂತರ ಆಯ್ಕೆಯಾದ 525 ಸದಸ್ಯರು ಸೇರಿದಂತೆ 590 ಸದಸ್ಯ ಸ್ಥಾನಗಳು(36 ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನಗಳು); ಕೊರಟಗೆರೆ ತಾಲೂಕಿನ 24 ಗ್ರಾಮ ಪಂಚಾಯಿತಿಗಳ 25 ಸದಸ್ಯರು ಅವಿರೊಧವಾಗಿ, ಮತದಾನದ ನಂತರ ಆಯ್ಕೆಯಾದ 367 ಸದಸ್ಯರು ಸೇರಿದಂತೆ 392 ಸದಸ್ಯ ಸ್ಥಾನಗಳು; ಪಾವಗಡ ತಾಲೂಕಿನ 33 ಗ್ರಾಮ ಪಂಚಾಯಿತಿಗಳ 16…

Read More

ತುಮಕೂರು :        ತುಮಕೂರು ಜಿಲ್ಲೆಯ 327 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಆಯಾ ತಾಲೂಕು ಕೇಂದ್ರಗಳಲ್ಲಿ ಯಾವುದೇ ಗೊಂದಲವಿಲ್ಲದೇ ಶಾಂತಿಯುತವಾಗಿ ನಡೆಯಿತು.       ತುಮಕೂರು ತಾಲೂಕಿನ 41 ಗ್ರಾಮ ಪಂಚಾಯಿತಿಗಳು, ಗುಬ್ಬಿ-34, ಕುಣಿಗಲ್-36, ತಿಪಟೂರು-25, ತುರುವೇಕೆರೆ-27, ಚಿಕ್ಕನಾಯಕನಹಳ್ಳಿ-27, ಮಧುಗಿರಿ-39, ಶಿರಾ-41, ಕೊರಟಗೆರೆ-24 ಹಾಗೂ ಪಾವಗಡ ತಾಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ಸೇರಿದಂತೆ ಒಟ್ಟು ಜಿಲ್ಲೆಯ 327 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಶಾಂತಿಯುತವಾಗಿ ನಡೆಯಿತು. ಜಿಲ್ಲೆಯಲ್ಲಿ ಗ್ರಾಮಪಂಚಾಯಿತಿಗಳ 2661 ಕ್ಷೇತ್ರಗಳ ಮತ ಎಣಿಕೆಯು 167 ಕೊಠಡಿಗಳಲ್ಲಿ 762 ಟೇಬಲ್‍ಗಳಲ್ಲಿ ನಡೆದಿದ್ದು, ಮತ ಎಣಿಕೆಗಾಗಿ 817 ಮಂದಿ ಎಣಿಕೆ ಮೇಲ್ವಿಚಾರಕರು, 1624 ಮಂದಿ ಸಹಾಯಕರನ್ನು ನೇಮಿಸಲಾಗಿತ್ತು.      ತುಮಕೂರು ತಾಲ್ಲೂಕು-ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ತುಮಕೂರು, ಗುಬ್ಬಿ-ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಗುಬ್ಬಿ, ತಿಪಟೂರು-ಪಲ್ಲಗಟ್ಟಿ ಅಡವಪ್ಪ ಕಾಲೇಜು, ತುರುವೇಕೆರೆ-ಸರ್ಕಾರಿ ಪದವಿ ಪೂರ್ವ ಕಾಲೇಜು, ಚಿಕ್ಕನಾಯಕನಹಳ್ಳಿ-ಸರ್ಕಾರಿ ಪದವಿ ಪೂರ್ವ ಕಾಲೇಜು, ಮಧುಗಿರಿ-ಸರ್ಕಾರಿ ಪದವಿ ಪೂರ್ವ…

Read More