Author: News Desk Benkiyabale

 ತುಮಕೂರು :       ಜಿಲ್ಲೆಯಲ್ಲಿ 2021-22ನೇ ಮುಂಗಾರು ಋತುವಿನ ಅವಧಿಗೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು 2022ರ ಜನವರಿ 1 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.       ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರ ನಿಗಧಿಪಡಿಸಿರುವ ಬೆಂಬಲ ಬೆಲೆಯಲ್ಲಿ ರೈತರಿಂದ ರಾಗಿ ಖರೀದಿಸಲು ಜನವರಿ 1 ರಿಂದ 20ರವರೆಗೆ ಕೋವಿಡ್ ನಿಯಮಗಳನ್ನು ಅನುಸರಿಸುವ ಮೂಲಕ ರೈತರ ನೋಂದಣಿಗೆ ಸೂಕ್ತ ಕ್ರಮ ಕೈಗೊಳ್ಳುವುದಲ್ಲದೆ, ವ್ಯವಸ್ಥಿತವಾಗಿ ನೋಂದಣಿ ಪ್ರಕ್ರಿಯೆಯನ್ನು ನಡೆಸಬೇಕೆಂದು ಸೂಚಿಸಿದರು.       ರೈತರು ನೋಂದಣಿಯನ್ನು ಆಯಾ ಖರೀದಿ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಮಾಡಿಕೊಳ್ಳಬೇಕಾಗುತ್ತದೆ. ಕೃಷಿ ಇಲಾಖೆ ನೀಡಿರುವ ‘FRUITS ID’’ ಯನ್ನು ಮಾತ್ರ ಹಾಜರುಪಡಿಸಿ ನೋಂದಾಯಿಸಿಕೊಳ್ಳಬೇಕು ಎಂದರಲ್ಲದೆ, ಸರ್ಕಾರ ನಿಗಧಿಪಡಿಸಿರುವ ಮಾನದಂಡವನ್ನು ಅನುಸರಿಸಿ ಎಫ್.ಎ.ಕ್ಯೂ. ಗುಣಮಟ್ಟದ ರಾಗಿಯನ್ನು…

Read More

 ತುಮಕೂರು :       ಜಿಲ್ಲೆಯಲ್ಲಿ ಬಾಕಿ ಉಳಿಸಿಕೊಂಡಿರುವ ಲಸಿಕೆಗಳನ್ನು ಅರ್ಹರಿಗೆ ನೀಡುವಲ್ಲಿ ಯಾವುದೇ ಬೇಜವಾಬ್ದಾರಿ ತೋರದೆ ಶೀಘ್ರ ಲಸಿಕಾಕರಣ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.       ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 33 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಈ ಪೈಕಿ 25 ಮಂದಿ ಹೋಂ ಐಸೋಲೇಷನ್‍ನಲ್ಲಿದ್ದು, 8 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಸಿಕೆ ಹಾಕಿಸಿಕೊಳ್ಳದವರಲ್ಲಿ ಜಾಗೃತಿ ಮೂಡಿಸುವುದಲ್ಲದೆ ಆಸ್ಪತ್ರೆಗೆ ದಾಖಲಾಗುವವರಿಗೆ ಕಡ್ಡಾಯವಾಗಿ ಕನಿಷ್ಟ 1 ಅಥವಾ 2 ಡೋಸ್ ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆ ನೀಡುವ ಮೂಲಕ ಶೇ.100ರಷ್ಟು ಲಸಿಕಾಕರಣ ಪೂರ್ಣಗೊಳಿಸಬೇಕು.. ಇತ್ತೀಚೆಗೆ ಕೋವಿಡ್‍ನಿಂದ ಮೃತಪಟ್ಟ ಯಾವುದೇ ಪ್ರಕರಣಗಳು ದಾಖಲಾಗಿರುವುದಿಲ್ಲ. ಲಸಿಕಾಕರಣ ವಿಳಂಬವಾದಲ್ಲಿ ಆಯಾ ತಾಲ್ಲೂಕಿನ ಸಂಬಂಧಿತ ಅಧಿಕಾರಿಗಳನ್ನೇ ನೇರ ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.       ಬೆಳೆ ಹಾನಿ ಹಾಗೂ ಪರಿಹಾರಕ್ಕೆ…

Read More

 ತುಮಕೂರು :       ಅಂಚೆ ಇಲಾಖೆ ಆಶ್ರಯದಲ್ಲಿ ಮಧುಗಿರಿ ತಾಲೂಕಿನ ಕಾರ್ಡಿಯಲ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಂಚೆ ಪತ್ರವನ್ನು ಬರೆದು ಪ್ರಧಾನ ಮಂತ್ರಿಯವರಿಗೆ ರವಾನಿಸಿದರು.       ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ‘ಎಲೆ ಮರೆಯ ಅಪ್ರತಿಮ ದೇಶ ಭಕ್ತ’, ‘ಸ್ವಾತಂತ್ರ್ಯ ಹೋರಾಟಗಾರರು’ ಹಾಗೂ ‘2047ರಲ್ಲಿ ನನ್ನ ಕನಸಿನ ಭಾರತ’ ಎಂಬ ವಿಷಯಗಳ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಂಚೆ ಪತ್ರ ಬರೆಯಲಾಯಿತು.      ಕಾರ್ಯಕ್ರಮದಲ್ಲಿ ತುಮಕೂರು ಅಂಚೆ ವಿಭಾಗದ ಅಧೀಕ್ಷಕ ಎನ್.ಗೋವಿಂದರಾಜು, ಸಹಾಯಕ ಅಂಚೆ ಅಧೀಕ್ಷಕ ಗಂಗಪ್ಪ, ಮಧುಗಿರಿ ಅಂಚೆ ಉಪವಿಭಾಗದ ನಿರೀಕ್ಷಕ ಮಹೇಶ್, ಕಾರ್ಡಿಯಲ್ ಇಂಟರ್ ನ್ಯಾಷನಲ್ ಶಾಲೆಯ ಪ್ರಾಂಶುಪಾಲ ರಘು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  

Read More

 ತುಮಕೂರು :       ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನ ಕಾರ್ಯಕ್ರಮ’ದಡಿ ಡಿಸೆಂಬರ್ 18ರಂದು ತುರುವೇಕೆರೆ ತಾಲ್ಲೂಕು ದಂಡಿನಶಿವರ ಹೋಬಳಿಯ ಸಂಪಿಗೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ವಾಸ್ತವ್ಯ ಮಾಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.      ಸರ್ಕಾರದ ಸೂಚನೆಯಂತೆ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯಿಂದ ಸ್ಥಗಿತಗೊಳಿಸಲಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅಕ್ಟೋಬರ್ 18ರಂದು ಪುನರಾರಂಭಿಸುತ್ತಿರುವುದರಿಂದ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ವಾಸ್ತವ್ಯ ಹೂಡಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಿದ್ದಾರೆ. ನಿಗಧಿಪಡಿಸಿದ ತಾಲ್ಲೂಕಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಡೀಸಿ ಸೂಚನೆ:-       ಸರ್ಕಾರದ ನಿರ್ದೇಶನದಂತೆ ಪ್ರತಿ ತಿಂಗಳ 3ನೇ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನ ಕಾರ್ಯಕ್ರಮದಡಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮದಲ್ಲಿ ಆಯಾ ತಾಲ್ಲೂಕು ತಹಶೀಲ್ದಾರರು ನಿಗಧಿಪಡಿಸಿರುವ ಗ್ರಾಮಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಗ್ರಾಮ ವಾಸ್ತವ್ಯ ಮಾಡಿ ಸಾರ್ವಜನಿಕರ…

Read More

 ತುಮಕೂರು:       ಸಾರ್ವಜನಿಕರು,ಜನಪ್ರತಿನಿಧಿಗಳ ಒತ್ತಾಯದ ಮೇರೆಗೆ ನಗರದ ಹೊಸಬಡಾವಣೆ ಪೊಲೀಸ್ ಠಾಣೆಯ ಹಿಂಭಾಗದಲ್ಲಿದ್ದ ವೀರಸಾರ್ವಕರ್ ಉದ್ಯಾನವನ್ನು ಸ್ಮಾರ್ಟ್‍ಸಿಟಿ ವತಿಯಿಂದ ಅತ್ಯಂತ ವ್ಯವಸ್ಥಿತವಾಗಿ ಅಭಿವೃದ್ದಿ ಪಡಿಸಲಾಗಿದ್ದು, ನಾಗರಿಕರು, ಶುಚಿತ್ವ ಕಾಪಾಡುವ ಮೂಲಕ ಪಾರ್ಕಿನ ಸದುಪಯೋಗ ಪಡೆದುಕೊಳ್ಳಬೇಕು ಎಂದು 15ನೇ ವಾರ್ಡಿನ ಕಾರ್ಪೋರೇಟರ್ ಶ್ರೀಮತಿ ಗಿರಿಜಾ ಧನಿಯಕುಮಾರ್ ಮನವಿ ಮಾಡಿದ್ದಾರೆ.       ಸ್ಮಾರ್ಟ್‍ಸಿಟಿ ವತಿಯಿಂದ ಆಭಿವೃದ್ದಿಪಡಿಸಲಾದ ವೀರ ಸಾರ್ವಕರ್ ಉದ್ಯಾನವನವನ್ನು ಜನರ ಉಪಯೋಗಕ್ಕೆ ಮುಕ್ತಗೊಳಿಸಿ ಮಾತನಾಡಿದ ಅವರು, ಇಡೀ ಪಾರ್ಕ್‍ನ್ನು ಅತ್ಯಂತ ವ್ಯವಸ್ಥಿತವಾಗಿ ಅತ್ಯಾಧುನಿಕವಾಗಿ ಅಭಿವೃದ್ದಿ ಪಡಿಸಲಾಗಿದೆ. ಇದರ ನಿರ್ವಹಣೆಯನ್ನು ಪಾರ್ಕಿನ ಪಕ್ಕದಲ್ಲಿಯೇ ಇರುವ ಅಕ್ಷರ ಐ ಪೌಂಢೇಷನ್ ನವರು ವಹಿಸಿಕೊಂಡಿದ್ದು, ಸೆಕ್ಯೂರಿಟಿಯವರನ್ನು ಇಟ್ಟು, ಬೆಳಗ್ಗೆ ಮತ್ತು ಸಂಜೆ ಪಾರ್ಕಿನ ಬಾಗಿಲು ತೆಗೆಯಲಿದ್ದಾರೆ. ಮಧ್ಯಾಹ್ನ ಯಾವುದೇ ಚಟುವಟಿಕೆಗಳು ಇರುವುದಿಲ್ಲ ಎಂದರು.       ಪಾರ್ಕಿನ ಅಂದ ಹೆಚ್ಚಿಸಲು 16 ಸಣ್ಣ ಮತ್ತು 18 ದೊಡ್ಡ ಲೈಟುಗಳನ್ನು ಹಾಕಲಾಗಿದೆ. ಅಲ್ಲದೆ 12 ಸಿಸಿ ಟಿ.ವಿ.ಕ್ಯಾಮರಗಳನ್ನು ಅಳವಡಿಸಲಾಗಿದೆ. ಇದರಿಂದ ಪಾರ್ಕಿನಲ್ಲಿ…

Read More

ತುಮಕೂರು:       ಅಪಘಾತ ದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹುಲಿಯೂರುದುರ್ಗ ದೀಪಾಂಬುದಿ ಕ್ಷೇತ್ರದ ಹಿಂದಿನ ಗುರುಗಳು ಹಾಗೂ ನಂದಿ ಸಿದ್ದನಗವಿ ಜ್ಞಾನಾನಂದಾಶ್ರಮದ ಶ್ರೀ ಶಿವಾತ್ಮನಂದ ಸರಸ್ವತಿ ಸ್ವಾಮೀಜಿ(59) ಅವರು ಚಿಕಿತ್ಸೆ ಫಲಿಸದೆ ಬುಧವಾರ ಇಹಲೋಕ ತ್ಯಜಿಸಿದ್ದಾರೆ.       ವೇದ, ಉಪನಿಷತ್, ಭಾಷ್ಯ ಗಳು ಸೇರಿದಂತೆ ಸಂಸ್ಕೃತ, ಕನ್ನಡ ಗ್ರಂಥಗಳ ಬಗ್ಗೆ ಆಳ ಪಾಂಡಿತ್ಯ ಹೊಂದಿದ್ದ ಶ್ರೀ ಗಳು ರಾಜ್ಯ, ಹೊರರಾಜ್ಯ ದೇಶ ವಿದೇಶಗಳಲ್ಲಿ ತಮ್ಮ ವಿದ್ವತ್ ಪೂರ್ಣ ಉಪನ್ಯಾಸ ಗಳಿಂದ ರಾಷ್ಟ್ರ ಸಂತರೆಂದು ಬಿರುದಾಂಕಿತ ರಾಗಿದ್ದರು.       ಕವಿ, ಲೇಖಕರು ಆಗಿದ್ದ ಶ್ರೀ ಗಳು ವಿಶ್ವಕರ್ಮ ಸಮಾಜಕ್ಕೆ ದಾರಿದೀಪ ವಾಗಿ, ಎಲ್ಲಾ ಸಮಾಜದ ವರಿಗೂ ಗುರುವಾಗಿ ಮಾರ್ಗದರ್ಶನ ಮಾಡುತ್ತಿದ್ದರು.       ಇಂತಹ ಶ್ರೇಷ್ಠ ಗುರುವಿನ ಅಗಲಿಕೆ ನಾಡಿಗೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅರೆಮಾದನಹಳ್ಳಿ ಶ್ರೀಗಳು, ನಿಟ್ಟರಹಳ್ಳಿ ಸ್ವಾಮೀಜಿ, ಶ್ರೀ ರವಿ ಶಂಕರ್ ಗುರೂಜಿ ಸೇರಿದಂತೆ ನಾಡಿನ ಅನೇಕ ಗಣ್ಯರು, ಸಮಾಜದ…

Read More

 ತುಮಕೂರು :       ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ಪದವಿ ಪೂರ್ವ ವಿದ್ಯಾರ್ಹತೆಯುಳ್ಳ ಗ್ರೂಪ್-ಸಿ ತಾಂತ್ರಿಕೇತರ ಹುದ್ದೆಗಳಿಗೆ ಡಿಸೆಂಬರ್ 19ರಂದು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಆದೇಶಿಸಿದ್ದಾರೆ.       ನಿಷೇಧಾಜ್ಞೆಯು ಡಿಸೆಂಬರ್ 19ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ತೆರೆಯುವಂತಿಲ್ಲ. ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡು ಬಂದಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 107 ಮತ್ತು 110ರಡಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ಈ ನಿಷೇಧದನ್ವಯ ಅನಧಿಕೃತ ವ್ಯಕ್ತಿಗಳು ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿ…

Read More

 ತುಮಕೂರು :      ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ನ್ಯೂನ್ಯತೆಗಳಿರುವುದು ಕಂಡು ಬಂದರೆ ಸಂಬಂಧಿಸಿದ ಸ್ಕ್ಯಾನಿಂಗ್ ಸೆಂಟರ್ ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.      ತಮ್ಮ ಕಛೇರಿಯಲ್ಲಿ ಸೋಮವಾರ ನಡೆದ ಪಿಸಿ/ಪಿಎನ್‍ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ 2 ತಿಂಗಳಿಗೊಮ್ಮೆ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು. ನಿಯಮಗಳನ್ನು ಪದೇ ಪದೇ ಉಲ್ಲಂಘನೆ ಮಾಡುವ ಸ್ಕ್ಯಾನಿಂಗ್ ಸೆಂಟರ್‍ಗಳ ಮೇಲೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಬೇಕು ಎಂದು ನಿರ್ದೇಶನ ನೀಡಿದರು.      ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ: ಮಹಿಮಾ ಮಾತನಾಡಿ, ಜಿಲ್ಲೆಯಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಎರಡು ಸ್ಕ್ಯಾನಿಂಗ್ ಸೆಂಟರ್‍ಗಳ ಮೇಲೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ವಿಚಾರಣೆ ಹಂತದಲ್ಲಿದೆ ಎಂದು ಮಾಹಿತಿ ನೀಡಿದರಲ್ಲದೆ, ಪ್ರತಿ 2 ತಿಂಗಳಿಗೊಮ್ಮೆ ಜರುಗುವ ಪಿಸಿ/ಪಿಎನ್‍ಡಿಟಿ ಸಮಿತಿ ಸಭೆಯಲ್ಲಿ ಸ್ಕ್ಯಾನಿಂಗ್ ಸೆಂಟರ್‍ಗಳ ನೋಂದಣಿ ಹಾಗೂ ಅವಧಿ…

Read More

ತುಮಕೂರು  :       ವಿಧಾನಪರಿಷತ್ ಚುನಾವಣೆಯಲ್ಲಿ ಮಾಜಿ ಶಾಸಕ ಕೆ.ರಾಜಣ್ಣರ ಪುತ್ರ ಆರ್. ರಾಜೇಂದ್ರ ಜಯ ಭೇರಿ ಬಾರಿಸಿದ್ದಾರೆ.        ರಾಜೇಂದ್ರರನ್ನ ಸೋಲಿಸಲು ತೊಡೆ ತಟ್ಟಿದ್ದ ದೊಡ್ಡ ಗೌಡರು ಮತ್ತು ಅವರ ಕುಟುಂಬದ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದ ತುಮಕೂರಿನ ಮತದಾರರು ದೊಡ್ಡ ಗೌಡರ ಆಟ ಜಿಲ್ಲೆಯಲ್ಲಿ ನಡೆಯುವುದಿಲ್ಲವೆಂಬ ಸ್ಪಷ್ಟ ಸಂದೇಶವನ್ನು ರವಾನಿಸುವ ಮುಖೇನ್ ಕಾಂಗ್ರೆಸ್ ಅಭ್ಯರ್ಥಿ ಆರ್.ರಾಜೇಂದ್ರ ಗೆಲುವಿಗೆ ಬೆಂಬಲಿಸಿದ್ದಾರೆ.       ಜೆಡಿಎಸ್ ನ ಭದ್ರಕೋಟೆಯಂತಿದ್ದ ತುಮಕೂರು ಜಿಲ್ಲೆ ದೊಡ್ಡ ಗೌಡರ ಆಗಮನದ ನಂತರ ಅವನತಿಯತ್ತ ಸಾಗುತ್ತಿದೆಯೇನೋ ಎಂಬ ಆತಂಕ ಜನರ ಮನಸ್ಸಿನಲ್ಲಿ ಮೂಡುತ್ತಿದೆ. ಇದಕ್ಕೆ ಇಂಬು ನೀಡುವಂತೆ ಕಳೆದೆರಡು ಬಾರಿ ಹಿಡಿತದಲ್ಲಿಟ್ಟುಕೊಂಡಿದ್ದ ವಿಪ್ ಕ್ಷೇತ್ರ ‘ಕೈ’ ಪಕ್ಷದ ಪಾಲಾಗುವ ಮುಖೇನ ಜೆಡಿಎಸ್ ನ ಅಸ್ಥಿತ್ವ ಕಳೆದುಕೊಳ್ಳುತ್ತಿದೆ ಎಂಬ ಸ್ಪಷ್ಟ ಸಂದೇಶ ನೀಡುತ್ತಿದೆ.       ಮೊದಲನೇ ಪ್ರಾಶಸ್ತ್ಯ ಮತದಲ್ಲಿ ಹೆಚ್ಚು ಮತಗಳನ್ನು ಪಡೆದರೂ ಗೆಲುವಿನ ದಡ ಸೇರಲು…

Read More

 ತುಮಕೂರು :       ಕರ್ನಾಟಕ ವಿಧಾನ ಪರಿಷತ್‍ಗೆ 14-ತುಮಕೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಈಗಾಗಲೇ ಡಿಸೆಂಬರ್ 10ರಂದು ನಡೆದಿರುವ ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಡಿಸೆಂಬರ್ 14ರಂದು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ನಡೆಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.       ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಸಲು ಕೈಗೊಂಡಿರುವ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, ಮತ ಎಣಿಕಾ ಕೇಂದ್ರದಲ್ಲಿ ಡಿಸೆಂಬರ್ 14ರ ಬೆಳಿಗ್ಗೆ 6.30 ಗಂಟೆಯೊಳಗಾಗಿ ಜಿಲ್ಲಾಧಿಕಾರಿಗಳ ಕಛೇರಿಯಿಂದ ನೀಡಿರುವ ಗುರುತಿನ ಚೀಟಿಯೊಂದಿಗೆ ಹಾಜರಿರಬೇಕೆಂದು ಎಣಿಕಾ ಏಜೆಂಟ್ ಹಾಗೂ ಮತ ಎಣಿಕೆಗೆ ನಿಯೋಜನೆಗೊಂಡಿರುವ ಅಧಿಕಾರಿ/ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು       ಮತ ಪೆಟ್ಟಿಗೆಗಳು ಭದ್ರವಾಗಿರುವ ಭದ್ರತಾ ಕೊಠಡಿಯನ್ನು ಬೆಳಿಗ್ಗೆ 7.30 ಗಂಟೆಗೆ ತೆರೆದು 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು. ಸರ್ಕಾರಿ…

Read More