Author: News Desk Benkiyabale

ಕೊರಟಗೆರೆ: ಭಾರತೀಯ ಸಂಸ್ಕೃತಿಯಲ್ಲಿ ವಿವಾಹವು ವಿಶೇಷ ಸ್ಥಾನಮಾನ ಪಡೆದಿದೆ. ಸಾಮೂಹಿಕ ವಿವಾಹದ ಮೂಲಕ ದಾಂಪತ್ಯ ಜೀವನ ಪ್ರವೇಶಿಸುತ್ತಿರುವ ಆದರ್ಶ ದಂಪತಿಗಳು ನಿಜಕ್ಕೂ ಪುಣ್ಯವಂತರು ಎಂದು ಬಾಳೆಹೊನ್ನೂರು ಶ್ರೀಮಠದ ಶ್ರೀಮದ್ ರಂಭಾಪುರಿ ವೀರಸಿಂಹಾನಾಧೀಶ್ವರ ಶ್ರೀ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ತಿಳಿಸಿದರು. ತಾಲ್ಲೂಕಿನ ಶ್ರೀಕ್ಷೇತ್ರ ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದಲ್ಲಿ ಆಯೋಜಿಸಿದ್ದ ೧೯ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಶ್ರೀಜಗದ್ಗುರು ರೇಣುಕಾಚಾರ್ಯರ, ಶ್ರೀಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಹಾಗೂ ಸಾಮೂಹಿಕ ವಿವಾಹ, ಜನಜಾಗೃತಿ ಧರ್ಮ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಶ್ರೀಕ್ಷೇತ್ರದಲ್ಲಿ ವಾರ್ಷಿಕೋತ್ಸವ ಅಂಗವಾಗಿ ನಡೆಯುತ್ತಿರುವ ಹಲವಾರು ವೈವಿಧ್ಯಮಯ ಧಾರ್ಮಿಕ ಕಾರ್ಯಕ್ರಮಗಳು ಹಬ್ಬದ ವಾತಾವರಣ ಸೃಷ್ಠಿಸಿದೆ. ಧರ್ಮದ ಜಾಗೃತಿಗಾಗಿ ನೆಲೆಯೂರಿದ ಶ್ರೀಮಠÀ ೧೯ವರ್ಷ ಪೂರೈಸಿ ಮುಂದೆ ಸಾಗುತ್ತಿರುವ ಕೀರ್ತಿ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿಗೆ ಸಲ್ಲುತ್ತದೆ. ಶೈಕ್ಷಣಿಕ ವಿದ್ಯಾಲಯ ಪ್ರಗತಿ, ನಿತ್ಯ ದಾಸೋಹ, ಬಡ ವಿದ್ಯಾರ್ಥಿಗಳ ನಿಲಯವಿದ್ದು ಇಷ್ಟೆಲ್ಲಾ ಸೇವೆಗಳಿಗೆ ಭಕ್ತರೇ ಶ್ರೀಮಠದ ನಿಜವಾದ ಶಕ್ತಿ. ಆಧುನಿಕ ಜಗತ್ತಿನಲ್ಲಿ ಮಕ್ಕಳು…

Read More

ತುಮಕೂರು: ಅಂದು ಅನಂತಮೂರ್ತಿ ಅವರು ಆರಂಭಿಸಿದ ಚಲನೆಯು ಇಂದು ಬಾನು ಮುಷ್ತಾಕ್ರಿಂದ ಪೂರ್ಣವಾಗಿದೆ. ಬಾನು ಮತ್ತು ಭಾಸ್ತಿ ಈಗ ಕನ್ನಡಕ್ಕೆ ಬೂಕರ್ ಪ್ರಶಸ್ತಿ ತಂದು ಕನ್ನಡ ಭಾಷೆಯ ಕಂಪನ್ನು ಜಗತ್ತಿಗೆ ಪಸರಿಸಿದ್ದಾರೆ ಹಾಗೂ ಈ ಪ್ರೇರಣೆಯಿಂದ, ಬಾನು ಅವರ ಕಥೆಗಳ ಪ್ರಭಾವದಿಂದ ಇನ್ನಷ್ಟು ಕನ್ನಡ ಮೂಲ ಸಾಹಿತ್ಯವನ್ನು ಓದುವ ಆಸಕ್ತಿ ಬೆಳೆಯಲಿದೆ ಎಂದು ಹಿರಿಯ ಸಾಹಿತಿಗಳಾದ ಅಗ್ರಹಾರ ಕೃಷ್ಣಮೂರ್ತಿಯವರು ಕುಂಡದ ಬೇರು ಕಥಾ ಸಂಕಲನ ಬಿಡುಗಡೆ  ಸಮಾರಂಭದಲ್ಲಿ ತಿಳಿಸಿದರು. ನಗರದ ಕನ್ನಡ ಭವನದಲ್ಲಿ ಕರ್ನಾಟಕ ಲೇಖಕಿಯರ ಸಂಘ ಜಿಲ್ಲಾ ಶಾಖೆ ತುಮಕೂರು, ತುಮಕೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಿಲಿಟರಿ ಪ್ರಕಾಶನ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಕುಂಡದ ಬೇರು ಕಥಾ ಸಂಕಲನನ್ನು ಲೋಕಾರ್ಪಣೆಗೊಳಿಸಿದ ಅವರು “ಲೇಖಕಿ ಪ್ರತಿಭಾ ನಂದಕುಮಾರ್ ಅವರ ಮಾತನ್ನು ನೆನೆಯುತ್ತಾ ಬದುಕು ಮತ್ತು ಸಾಹಿತ್ಯದ ನಡುವಿನ ಗೆರೆಯನ್ನು ಅಳಿಸಿದಾಗ ಕನ್ನಡದ ಅಪ್ಪಟ ಸಾಹಿತ್ಯದ ಗುರುತಿಸುವಿಕೆ ಸಾಧ್ಯ” ಎಂದರು. ಕುಂಡದ ಬೇರು ಕೃತಿಯ ಕುರಿತು ಮಾತನಾಡಿದ ಅವರು “ಜಾತಿಯ…

Read More

ತುಮಕೂರು: ಕಾಶ್ಮೀರದ ಪಹಲ್ಗಾಮ್ ಘಟನೆ ಯಿಂದ ಮುಂದೂಡಲ್ಪಟ್ಟಿದ್ದ ಸಹಕಾರಿ ಸಚಿವ ಕೆ.ಎನ್. ರಾಜಣ್ಣರವರ ಗೌರವ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಜೂನ್. ೨೧ ರಂದು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ತಿಳಿಸಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಗೌರವ ಗ್ರಂಥ ಬಿಡುಗಡೆ ಸಮಾರ ಂಭದ ವೇದಿಕೆ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೇ ೧೩ ರಂದು ಆಯೋಜಿಸಿದ್ದ ಕಾರ್ಯಕ್ರಮ ಇನ್ನೆರಡು ದಿನ ಇದೆ ಎನ್ನುವಾಗ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಪ್ರಾರಂಭಿಸಲಾಗಿತ್ತು. ದೇಶದೆಲ್ಲೆಡೆ ಬಿಗುವಿನ ವಾತಾವರಣ ಇದ್ದ ಪರಿಣಾಮ ಹಿರಿಯರ ಮಾರ್ಗದರ್ಶನದಂತೆ ಕಾರ್ಯಕ್ರಮ ಮುಂದೂಡಿದ್ದು, ಕೆ.ಎನ್.ಆರ್. ಅಮೃತ ಮಹೋತ್ಸವ ಅಭಿನಂದನಾ ಸಮಿತಿ ತೀರ್ಮಾನದಂತೆ ಜೂನ್. ೨೧ ಕ್ಕೆ ಆಯೋಜಿಸಲಾಗುತ್ತಿದೆ ಎಂದರು. ಸಹಕಾರಿ ಸಚಿವರಾಗಿರುವ ಕೆ.ಎನ್.ರಾಜಣ್ಣ ಅವರು ಸಹಕಾರಿ ಕ್ಷೇತ್ರದಲ್ಲಿ ಹೆಸರು ಮಾಡಿದವರು. ಹಾಗಾಗಿ ಇಡೀ ರಾಜ್ಯದ ಮೂಲೆ…

Read More

ತುಮಕೂರು: ಜೂ.೪ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಐಪಿಎಲ್ ಪಂದ್ಯ ವೀಕ್ಸಿಸಲು ಹೋಗಿ ಕಾಲ್ತುಳಿತದಲ್ಲಿ ಮೃತಪಟ್ಟ ಕುಣಿಗಲ್ ಅಮೃತೂರಿನ ಮನೋಜ್ ಕುಮಾರ್ ತಂದೆಗೆ ಸರ್ಕಾರ ವತಿಯಿಂದ ೨೫ ಲಕ್ಷ ರೂ. ಪರಿಹಾರ ವಿತರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೃತ ಮನೋಜ್ ತಂದೆ ದೇವರಾಜುಗೆ ಪರಿಹಾರದ ಚೆಕ್ ವಿತರಿಸಿ ಮಾತನಾಡಿದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಮುಖ್ಯಮಂತ್ರಿ ಗಳ ರಿಲೀಪ್ ಫಂಡ್ ನಿಂದ ನಮಗೆ ಜಿಲ್ಲಾûಧಿಕಾರಿಗಳ ಪಿಡಿ ಖಾತೆಯಿಂದ ತಕ್ಷಣ ೨೫ ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ಬಂದಿದ್ದು ಅದರಂತೆ ನಾವು ಪರಿಹಾರದ ಚೆಕ್ ನೀಡಿದ್ದೇವೆ ಎಂದರು. ದೇವರಾಜು ಮಾತನಾಡಿ ಸರ್ಕಾರ ಹಣ ನೀಡಿದೆ ಆದರೆ ನಮ್ಮಮಗ ಬದುಕಿಬರಲಿಲ್ಲ.ಮುಂದಿನ ದಿನಗಳಲ್ಲಿ ನಮಗೆ ಆದಂತೆ ಬೇರೆ ಯಾರಿಗೂ ಆಗುವುದು ಬೇಡ . ಸರ್ಕಾರ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು.ನನ್ನ ಮಗ ರ್ಯಾಂಕ್ ವಿದ್ಯಾರ್ಥಿ ಇನ್ನು ಎರಡು ವರ್ಷ ಹೋಗಿದ್ದರೆ ಉತ್ತಮ ಉದ್ಯೋಗ ಸಂಪಾದಿಸಿ ಇದಕ್ಕಿಂತ ಎರಡರಷ್ಟು ಸಂಪಾದನೆ ಮಾಡುತ್ತಿದ್ದ. ಪರಿಹಾರದ ಹಣವನ್ನು ಅವನ ತಂಗಿ ಹಾಗೂ ತಾಯಿ…

Read More

ಕೊರಟಗೆರೆ: ಸಾರಿಗೆ ಬಸ್ ನಿರಂತರ ಸಮಸ್ಯೆಗೆ ಬೇಸೆತ್ತ ಪ್ರಯಾಣಿಕರು ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ತಡೆದು ಸಾರಿಗೆ ಅಧಿಕಾರಿಗಳು ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಗೃಹ ಸಚಿವರ ಕ್ಷೇತ್ರದಲ್ಲಿಯೇ ಬಸ್‌ಗಾಗಿ ಪರದಾಡುತ್ತವಂತಹ ಅನಿವಾರ್ಯತೆ ಎದುರಾಗಿದೆ. ಸಾರ್ವಜನಿಕ ಆಸ್ಪತ್ರೆ ಮುಂಭಾಗದ ಖಾಸಗಿ ಬಸ್ ನಿಲ್ದಾಣದಲ್ಲಿ ಬೆ.೪ರಿಂದಲೂ ಕಾಯುತ್ತಿದ್ದೇವೆ, ಬಸ್ ಬಂದರೂ ನಿಲ್ಲಿಸಲ್ಲಾ, ಕೆಲವು ಬಸ್‌ಗಳು ನಗರಕ್ಕೆ ಬರದೇ ಬೈಪಾಸ್ ಮೂಲಕ ಹೋಗುತ್ತಿದೆ. ಇದು ಕೇವಲ ಒಂದು ದಿನದ ಸಮಸ್ಯೆಯಲ್ಲಾ ಪ್ರತಿನಿತ್ಯದ ಸಮಸ್ಯೆ ಎಂದು ಪ್ರಯಾಣಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಸ್ ತಡೆದು ಆಕ್ರೋಶ ಹೊರಹಾಕುತ್ತಿರುವ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೋಲಿಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಪ್ರಯಾಣಿಕರ ಸಮಸ್ಯೆಯನ್ನು ಆಲಿಸಿ ತುಮಕೂರು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಕರೆ ಮಾಡಿ ತಿಳಿಸಿ, ಪ್ರಯಾಣಿಕರ ಸಮಸ್ಯೆಯ ಬಗ್ಗೆ ಅರಿವು ಮೂಡಿಸಿ, ಪ್ರಯಾಣಿಕರು ತಡೆಹಿಡಿದ ೧೦ಕ್ಕೂ ಹೆಚ್ಚಿನ ಬಸ್‌ಗಳಿಂದ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡಿ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು. ಸರ್ಕಾರಿ ಬಸ್ ತೊರೆದು…

Read More

ಬೆಂಗಳೂರು/ತುಮಕೂರು: ತುಮಕೂರಿನ ರಾಷ್ಟಿçÃಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸುವ ಕುರಿತಂತೆ ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವರಾದ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದೇನೆ ಎಂದು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ.ಪರಮೇಶ್ವರ ಅವರು ತಿಳಿಸಿದರು. ಸದಾಶಿವನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನ ರಾಷ್ಟಿçÃಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲು ಸ್ಮಾರ್ಟ್ ಸಿಟಿಯಿಂದ ೫ ಕೋಟಿ ರೂ. ಒದಗಿಸಿಕೊಂಡಿದ್ದೇವೆ. ರಾಷ್ಟಿçÃಯ ಹೆದ್ದಾರಿಯ ಸ್ಥಳೀಯ ನಿರ್ದೇಶಕರು ಆಗುವುದಿಲ್ಲ ಎಂದು ನಮಗೆ ತಿಳಿಸಿದ್ದರು. ಇದಕ್ಕೆ ಕೇಂದ್ರ ಸರ್ಕಾರದ ಅನುಮತಿಯಾಗಬೇಕಿದೆ. ಕೇಂದ್ರದ ಸಚಿವರಾದ ವಿ.ಸೋಮಣ್ಣ ಅವರು ನಮ್ಮ ಜಿಲ್ಲೆಯ ಸಂಸದರು. ಕೇಂದ್ರದ ಭೂಹೆದ್ದಾರಿ ಸಚಿವರಾದ ನಿತೀನ್ ಗಡ್ಕರಿ ಅವರಿಗೆ ವಿ.ಸೋಮಣ್ಣ ಅವರ ಮೂಲಕ ಮನವಿ ನೀಡಿ, ಅನುಮತಿಯನ್ನು ಕೊಡಿಸುವಂತೆ ಕೇಳಿದ್ದೇನೆ. ಅನುಮತಿ ಕೊಟ್ಟರೆ ತುಮಕೂರಿನ ಆರಂಭದಲ್ಲಿ ಸ್ವಾಗತ ಕಮಾನು ನಿರ್ಮಿಸುತ್ತೇವೆ ಎಂದು ತಿಳಿಸಿದರು. ನಮ್ಮ ಜಿಲ್ಲೆಗೆ ಕೇಂದ್ರದ ಅನೇಕ ಯೋಜನೆಗಳು ಆಗಬೇಕಿದೆ. ಕುಡಿಯುವ ನೀರಿಗೆ ಸಂಬAಧಪಟ್ಟAತೆ ಅನೇಕ ಯೋಜನೆಗಳು…

Read More

ಪಾವಗಡ: ಸುತ್ತಮುತ್ತಲಿನ ಪರಿಸರದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಸದಂತೆ ಪಾವಗಡ ಪುರಸಭಾಧ್ಯಕ್ಷ ಸುದೇಶ್ ಬಾಬು ಕರೆ ನೀಡಿದರು ಗುರುವಾರ ಮಧ್ಯಾಹ್ನ ೧೨ ಗಂಟೆಯಲ್ಲಿ ಪಟ್ಟಣದ ಪುರಸಭೆಯ ಆವರಣದಲ್ಲಿ ಹಮ್ಮಿ ಕೊಂಡಿದ್ದು ವಿಶ್ವ ಪರಿಸರ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ನಾವು ಪರಿಸರವನ್ನು ರಕ್ಷಿಸಿದರೆ ನಮ್ಮನ್ನು ಪರಿಸರ ರಕ್ಷಿಸುತ್ತದೆ, ಈ ಒಂದು ನಿಯಮವನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು, ಮನೆಗಳ ಲ್ಲಿಯೂ ತಯಾರಾಗುವ ಕಸವನ್ನು ಪುರಸಭೆಯ ವಾಹನಕ್ಕೆ ನೀಡಿ ಸ್ವಚ್ಛತೆಯನ್ನು ಕಾಪಾಡಬೇಕು, ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಮುಂದಾಗಬೇಕೆAದು ಕರೆ ನೀಡಿದರು, ವಿಜ್ಞಾನ ಕೇಂದ್ರದ ಅಧ್ಯಕ್ಷರು ನಿವೃತ್ತ ಶಿಕ್ಷಕರು ಆದ ಎಂ. ಗಂಗಾಧರ್ ಅವರು ಮಾತನಾಡಿ, ಪ್ಲಾಸ್ಟಿಕ್ ಮುಕ್ತ ಭಾರತ ವನ್ನಾಗಿ ಮಾಡಲು ಎಲ್ಲರೂ ಪಣತೊಡಬೇಕು, ಪ್ಲಾಸ್ಟಿಕ್ ನಿಂದ ಜೀವ ಹಾನಿಯೇ ಹೊರತು ಪ್ಲಾಸ್ಟಿಕ್ ಇಂದ ಉಪಯೋಗವಿಲ್ಲ, ಪ್ಲಾಸ್ಟಿಕ್ ವಸ್ತುಗಳನ್ನು ನಾವು ಕೂಡಾ ಖಂಡಿತವಾಗಿ ನಿರಾಕರಿಸಬೇಕು, ಮತ್ತು ಪ್ಲಾಸ್ಟಿಕ್ ನ ಮರುಬಳಕೆಯ ವಸ್ತುಗಳನ್ನು ಮಾರಾಟ ಮಾಡಬೇಕು, ಅಲ್ಲದೆ ಪ್ಲಾಸ್ಟಿಕ್ ವಸ್ತುಗಳನ್ನು ಸಂಸ್ಕರಿಸಬಹುದಾಗಿದೆ, ಆದ್ದರಿಂದ…

Read More

ಪಾವಗಡ: ಶಿಕ್ಷಣಕ್ಕೆ ಒತ್ತು ಕೊಟ್ಟು ಶಿಕ್ಷಕ ರನ್ನು ಪುರಸ್ಕರಿಸಿದ ಮಾಜಿಶಾಸಕ ಕೆ.ಎಂ. ತಿಮ್ಮರಾಯಪ್ಪ. ತಾಲೂಕಿನ ನಾಯ್ಡುಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರಾರ್ಜಿದೇಸಾಯಿ ವಸತಿ ಶಾಲೆ ಕೋಡಿಗೆಹಳ್ಳಿ ಇಲ್ಲಿ ನಿಡಗಲ್ ಹೋಬಳಿ ನ್ಯಾಯದಗುಂಟೆ ಗ್ರಾಮ ಪಂಚಾಯಿತಿ ನಾಗರಿಕ ಸಮಿತಿ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ೧೦೦% ಫಲಿತಾಂಶ ಜಿಲ್ಲೆಯಲ್ಲಿ ದ್ವಿತೀಯ ತಾಲೂಕಿನ ಪ್ರಥಮ ಸ್ಥಾನ ಪಡೆದಿರುವುದಕ್ಕೆ ಪ್ರಾಂಶುಪಾಲರಿಗೆ ಮತ್ತು ಶಿಕ್ಷಕರಿಗೆ ಸನ್ಮಾನಿಸಿ ಅಭಿನಂದಿಸಿದರು. ನಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದಅವರು, ವಿದ್ಯಾರ್ಥಿಗಳು ಮೊಬೈ ಲ್ ಗೀಳಿನಿಂದ ದೂರವಿದ್ದು ಶಿಕ್ಷಣದ ಕಡೆ ಹೆಚ್ಚು ಗಮನಹರಿಸಿ, ಪೋಷಕರ ಕನಸನ್ನು ನನಸು ಮಾಡುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದರು. ಜೆಡಿಎಸ್ ತಾಲೂಕು ಅಧ್ಯಕ್ಷರಾದ ಎನ್ ಎ ಈರಣ್ಣ ಮಾತನಾಡುತ್ತಾ ನಿಡಗಲ್ ಹೋಬಳಿಗೆ ಮುರಾರ್ಜಿ ಕಾಲೇಜಿನ ಅವಶ್ಯಕತೆ ಇದೆ ಎಂದು ಈ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಈ ನಮ್ಮ ಶಾಲೆ ಜಿಲ್ಲೆಯಲ್ಲಿ ಉತ್ತಮ ಸ್ಥಾನ ಪಡೆದುಕೊಂಡಿದೆ ಶಿಕ್ಷಕರು ಮತ್ತು ಪ್ರಾಂಶುಪಾಲರ ಶ್ರಮದಿಂದ ಉತ್ತಮ ಸಾಧನೆ…

Read More

ತುಮಕೂರು: ಇತಿಹಾಸ ಕಾಲಘಟ್ಟದಲ್ಲಿ ಸಾಮಂತರಾಗಿ ಸ್ಥಳೀಯವಾಗಿ ಆಳ್ವಿಕೆ ಮಾಸುತ್ತಿದ್ದ ನಾಡಪ್ರಭುಗಳನ್ನು ಪ್ರಬಲ ಸಮುದಾಯದವರು ಇತ್ತೀಚಿನ ದಿನಗಳಲ್ಲಿ ಅವರನ್ನು ಸಾಮ್ರಾಟರಾಜರಂತೆ ವೈಭವೀಕರಿಸುತ್ತಿರುವುದು ಇತಿಹಾಸಕ್ಕೆ ಮಾಡುತ್ತಿರುವ ಅಪಚಾರ ಈ ಪ್ರವೃತ್ತಿ ಎಲ್ಲಾ ಸಮುದಾಯಗಳಲ್ಲಿ ಹೆಚ್ಚಾಗುತ್ತಿರುವುದು ವಿಷಾದನೀಯ ಸಂಗತಿ ಎಂದು ಕನ್ನಡ ವಿ.ವಿ.ಯ ಇತಿಹಾಸ ಪ್ರಾಧ್ಯಾಪಕ ಡಾ. ಚನ್ನಸ್ವಾಮಿ ಸೋಸಲೆ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಬೆಂಗಳೂರಿನ ಸುಹಾಸ್‌ಗ್ರಾಫಿಕ್ಸ್ ಪ್ರಕಟಿಸಿರುವ ಡಾ. ಡಿ.ಎನ್.ಯೋಗೀಶ್ವರಪ್ಪನವರು ಸಂಶೋಧಿಸಿ ರಚಿಸಿರುವ ಕಲ್ಪಹಾಸ ಕೃತಿಯನ್ನು ಶ್ರೀ ಸಿದ್ಧಗಂಗಾ ಕಾಲೇಜಿನ ಡಾ. ಶ್ರೀ ಶ್ರೀ ಶಿವಕುಮಾರಸ್ವಾಮೀಜಿ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ ಬಿಡುಗಡೆಯಾದ ಕೃತಿಯನ್ನು ಕುರಿತು ಮಾತನಾಡಿದರು. ಒಂದು ಜಿಲ್ಲೆಗೆ ಸೀಮಿತವಾದಂತಹ ಸಮಗ್ರ ಇತಿಹಾಸವನ್ನು ಕಟ್ಟಿಕೊಡುವುದು ಸುಲಭದ ಮಾತಲ್ಲ. ಇಂತಹ ಇತಿಹಾಸ ರಚನೆಯಲ್ಲಿ ಡಾ. ಡಿ.ಎನ್.ಯೋಗೀಶ್ವರಪ್ಪನವರು ಸವಾಲಾಗಿ ಸ್ವೀಕರಿಸಿ ಮೌಖಿಕ ಮತ್ತು ಚಾರಿತ್ರಿಕ ದಾಖಲೆಗಳನ್ನು ಸಮಚಿತ್ತದಿಂದ ಪೂರ್ವಾಗ್ರಹವಿಲ್ಲದೆ ಅಧ್ಯಯನಮಾಡಿ ಪರಾಮರ್ಶಿಸಿ ಕಲ್ಪಹಾಸ ಕೃತಿಯನ್ನು ರಚಿಸಿದ್ದಾರೆ. ಈ ಜಿಲ್ಲೆಯ ೧೮೦೦ ವರ್ಷಗಳ ಇತಿಹಾಸವನ್ನು ಒಳಗೊಂಡಿರುವ ಈ ಕೃತಿ ಈ ಜಿಲ್ಲೆಯ ಇತಿಹಾಸಕ್ಕೆ ಕೊಟ್ಟ…

Read More

ತುಮಕೂರು: ಕೊರಟಗೆರೆ ತಾಲ್ಲೂಕು ಶ್ರೀ ಕ್ಷೇತ್ರ ಸಿದ್ಧರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವಾರ್ಷಿಕೋತ್ಸವ ಸಮಾರಂಭ ಈ ತಿಂಗಳ ೮ರಂದು ನಡೆಯಲಿದ್ದು, ಇದರ ಅಂಗವಾಗಿ ಜಗದ್ಗುರು ರೇಣುಕಾಚಾರ್ಯರು, ಜಗಜ್ಯೋತಿ ಬಸವೇಶ್ವರರ ಜಯಂತುತ್ಸವ, ಸಾಮೂಹಿಕ ವಿಹಾಹ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಏರ್ಪಾಟಾಗಿದೆ. ಸಿದ್ಧರಬೆಟ್ಟ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿ, ಮಠದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಇದೇ ೭ರಂದು ನಡೆಯುವ ಪುಸ್ತಕ ದಾಸೋಹ ಸಮಾರಂಭವನ್ನು ಅಟವಿ ಶಿವಲಿಂಗ ಸ್ವಾಮೀಜಿ ಉದ್ಘಾಟಿಸುವರು. ತಗ್ಗಿಹಳ್ಳಿ ರಾಮಕೃಷ್ಣ ಮಠದ ರಮಾನಂದ ಸ್ವಾಮೀಜಿ, ತಮ್ಮಡಿಹಳ್ಳಿ ಮಠದ ಸಿದ್ಧಲಿಂಗ ದೇಶಿಕೇಂದ್ರ ಸ್ವಾಮೀಜಿ, ಚಿಮ್ಮಲಗಿ ಮಠದ ಸಿದ್ಧರೇಣುಕಾ ಶಿವಾಚಾರ್ಯ ಸ್ವಾಮೀಜಿ, ತೆವಡೆಹಳ್ಳಿ ಮಠದ ಗೋಸಲ ಚನ್ನಬಸವೇಏಶ್ವರ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸುವರು ಎಂದರು. ಇದೇ ೮ರಂದು ಭಾನುವಾರ ಬೆಳಿಗ್ಗೆ ೭.೩೦ಕ್ಕೆ ರೇಣುಕಾಚಾರ್ಯರು, ಸಿದ್ಧೇಶ್ವರಸ್ವಾಮಿ, ಬಸವೇಶ್ವರರ ಬೆಳ್ಳಿ ಪಲ್ಲಕ್ಕಿ ಉತ್ಸವ ನಡೆಯಲಿದೆ. ನಂತರ ಸಾಮೂಹಿಕ ವಿವಾಹದ ಶಾಸ್ತç ಹಾಗೂ ಧಾರೆ ಕಾರ್ಯಕ್ರಮ…

Read More