ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿಯ ಮತ್ತಿಹಳ್ಳಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮೂರು ನಮ್ಮ ಕೆರೆ ಅಡಿಯಲ್ಲಿ ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ, ಸೂರಿಲ್ಲದ ನಿರ್ಗತಿಕರಾದ ಶಂಕರಮ್ಮನವರಿಗೆ ಶ್ರೀ ಕ್ಷೇತ್ರದ ವತಿಯಿಂದ ನಿರ್ಮಿಸಲಾದ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಬೆಂಚ್ ಡೆಸ್ಕ್ಗಳ ವಿತರಣೆ ಕಾರ್ಯಕ್ರಮ ಗುರುವಾರ ನಡೆಯಿತು. ಮತ್ತಿಹಳ್ಳಿ ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಮ್.ಸುದರ್ಶನ್ ಮಾತಾನಾಡಿ ಧರ್ಮಸ್ಥಳ ಕ್ಷೇತ್ರದಿಂದ ನಾನಾ ಕಾರ್ಯಗಳು ನೆಡೆಯುತ್ತಿದ್ದು, ಕೆರೆಗಳಲ್ಲಿ ಮಣ್ಣು ತೆಗೆಯುವ ಮೂಲಕ ಪರಿಸರ ಸಂರಕ್ಷಣೆಗೆ ಹೆಚ್ಚಿನ ಅಧ್ಯತೆ ನೀಡಲಾಗಿದೆ. ಹಸ್ತಾಂತರಗೊ0ಡ ಕೆರೆಯನ್ನು ಉಸ್ತುವಾರಿ ಸಮಿತಿಯು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದಾಗ ಮಾತ್ರ ಮಾಡಿದ ಕಾರ್ಯಕ್ಕೆ ಬೆಲೆಸಿಗುತ್ತದೆ ಎಂದರು. ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿತರಣಾ ಕಾರ್ಯಕ್ರಮವನ್ನು ತಾಲ್ಲೂಕು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುದರ್ಶನ್ ರವರ ಸಮ್ಮುಖದಲ್ಲಿ ಹಮ್ಮಿಕೊಳ್ಳಲಾಗಿತ್ತು.ಮೊದಲಿಗೆ ಯೋಜನೆಯ ವತಿಯಿಂದ ಮಾಶಾಸನ ಪಡೆಯುತ್ತಿರುವ ಸೂರಿಲ್ಲದ ಶಂಕರಮ್ಮರವರಿಗೆ…
Author: News Desk Benkiyabale
ಕೊರಟಗೆರೆ: ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತರಿಂದ ಕೊಟ್ಯಂತರ ಶುಲ್ಕ ವಸೂಲು ಮಾಡಿಕೊಂಡು ನಮ್ಮನ್ನು ೨೬ ವರ್ಷಗಳಿಂದ ದುಡಿಸಿಕೊಂಡು ಅನ್ಯಾಯ ಮಾಡಿಕೊಂಡು ಬರುತ್ತಿದೆ ಎಂದು ತಾಲ್ಲೂಕು ಪರವಾನಗಿ ಭೂಮಾಪಕರ ಸಂಘದ ಅದ್ಯಕ್ಷ ಡಿ.ನಾರಾಯಣರಾಜು ಆರೋಪಿಸಿದರು. ಅವರು ಕೊರಟಗೆರೆ ಪಟ್ಟಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತ ನಾಡಿ ಸರ್ಕಾರವು ರೈತರಿಂದ ಕ್ರಯ, ಧಾನ, ಹದ್ದುಭಸ್ತು, ತತ್ಕಾಲ್ ಪೋಡಿ ಸೇರಿದಂತೆ ಹಲವು ಪ್ರಕರಣಗಳಿಗೆ ಭೂಮಾಪನಾ ಕಾರ್ಯ ನಿರ್ವಹಿಸಲು ರೈತರಿಂದ ಸಾವಿರಾರು ರೂಗಳ ಶುಲ್ಕವನ್ನು ಪರವಾನಗಿ ಭೂಮಾಪಕರಿಗೆ ನೀಡಬೇಕೆಂದು ವಸೂಲು ಮಾಡುತ್ತಿದೆ, ನಮಗೆ ಅದರಲ್ಲಿ ಕಾಲು ಭಾಗ ಮಾತ್ರ ನೀಡಿ ಮುಕ್ಕಾಲು ಭಾಗ ಸರ್ಕಾರ ಇಟ್ಟುಕೊಳ್ಳುತ್ತಿದೆ, ಈ ಕಾಲು ಭಾಗದ ಹಣದಲ್ಲಿ ನಾವು ಬಾಂದು ಜವಾನರನ್ನು ಹಣ ನೀಡಿ ಕರೆದುಕೊಂಡು ಹೋಗಬೇಕು, ರೈತರ ಜಮೀನಿನ ಹತ್ತಿರದ ಪ್ರಯಾಣ ದರವನ್ನು ನಾವೇ ಭರಸಿಕೊಳ್ಳಬೇಕು ನಮಗೆ ಯಾವುದೇ ಭದ್ರತೆ, ಸೌಲಭ್ಯ ಇಲ್ಲ ಈ ೨೬ ವರ್ಷಗಳ ಅನ್ಯಾಯದ ವಿರುದ್ದ ನಾವು ಒಂದು ತಿಂಗಳಿನಿAದ ರಾಜ್ಯಾದ್ಯಂತ ಮುಷ್ಕರ ಮಾಡುತ್ತಿದ್ದು ನಮಗೆ ಸಮಾನ ಕೆಲಸಕ್ಕೆ…
ಪಾವಗಡ: ತಾಲೂಕಿನ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿ ಸುವ ನಿಟ್ಟಿನಲ್ಲಿ, ತಾಲೂಕು ಕಛೇರಿ ಹಾಗೂ ಸಿ.ಕೆ. ಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳ ಲಾಗಿದ್ದ ‘ಜನಸಂಪರ್ಕ ಸಭೆ’ ಯಶಸ್ವಿಯಾಗಿ ಜರುಗಿತು. ಸಾರ್ವಜನಿಕರು ತಮ್ಮ ದೈನಂದಿನ ಸಮಸ್ಯೆಗ ಳನ್ನು ನೇರವಾಗಿ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲು ಈ ಸಭೆ ವೇದಿಕೆಯಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿಗಳು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಸರ್ಕಾರದ ಸೌಲಭ್ಯಗಳು ಜನರಿಗೆ ತಲುಪಿಸುವಲ್ಲಿ ವಿಳಂಬವಾಗಬಾರದು. ಸಾರ್ವಜನಿಕರು ಅಲೆದಾಡು ವುದನ್ನು ತಪ್ಪಿಸಲು ಅವರಿದ್ದಲ್ಲಿಗೆ ಆಡಳಿತವನ್ನು ತರುವುದೇ ಈ ಕಾರ್ಯಕ್ರಮದ ಉದ್ದೇಶ, ಸ್ವೀಕೃತ ವಾದ ಅರ್ಜಿಗಳಲ್ಲಿ ಸರಳವಾದ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಅವರು, ಜಟಿಲವಾದ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ತಾಕೀತು ಮಾಡಿದರು. ತಾಲೂಕು ಕೇಂದ್ರದ ಜೊತೆಗೆ ಸಿ.ಕೆ. ಪುರ ಗ್ರಾಮದಲ್ಲಿಯೂ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು. ಗ್ರಾಮೀಣ ಭಾಗದ ರೈತರ ಪೌತಿ ಖಾತೆ ಬದಲಾವಣೆ ಹಾಗೂ ಪೋಡಿ ಮುಂತಾದ ಸಮಸ್ಯೆಗಳಿಗೆ ಆದ್ಯತೆ ನೀಡಿ…
ತುಮಕೂರು: ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬಿಸಿಸಿಐ ವತಿಯಿಂದ ಟಾಟಾ ಐಪಿಎಲ್೨೦೨೬ ಆರಂಭಿಕ ಎರಡು ಮ್ಯಾಚ್ಗಳ ನೇರ ಪ್ರಸಾರವನ್ನು ಉಚಿತವಾಗಿ ದೊಡ್ಡ ಪರದೆಯ ಮೇಲೆ ಆಯೋಜಿಸಲಾಗಿದೆ ಎಂದು ಬಿಸಿಸಿಐನ ಅಲ್ಪಿನ್ ಗಾಯಕವಾಡ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಟಾಟಾ ಐಪಿಎಲ್ ಪ್ಯಾನ್ ಪಾರ್ಕು ಆಯೋಜಿಸಿರುವ ಈ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಾರ್ಚ್೨೮ ಶನಿವಾರ ಸಂಜೆ.೭:೩೦ಕ್ಕೆ ರಾಯಲ್ಚಾಲೆಂರ್ಸ್ ಬೆಂಗಳೂರು ಮತ್ತು ಸನ್ರೈಸರ್ ಹೈದ್ರಾಬಾದ್ ತಂಡಗಳ ನಡುವಿನ ಮ್ಯಾಚ್ ಹಾಗೂ ಮಾರ್ಚ್ ೨೯ ರ ಭಾನುವಾರ ಸಂಜೆ ೭:೩೦ಕ್ಕೆ ಮುಂಬೈ ಇಂಡಿಯನ್ಸ್ ಮತ್ತು ಕಲ್ಕತ್ತಾ ನೈಟ್ ರೈರ್ಸ್ ತಂಡಗಳ ನಡುವಿನ ಮ್ಯಾಚ್ ಉಚಿತವಾಗಿ ವಿಕ್ಷೀಸಲು ಅವಕಾಶವಿದ್ದು, ಸುಮಾರು ೧೦ ಸಾವಿರ ಜನರು ನೆಲದ ಮೇಲೆ ಕುಳಿತು ನೋಡಲು ಬೇಕಾದ ವ್ಯವಸ್ಥೆ ಮಾಡಿದ್ದು, ಸ್ಟೇಡಿಯಂನಲ್ಲಿಯ ಮ್ಯಾಚ್ ನೋಡುತ್ತಿರುವ ಅನುಭವ ನೀಡಲಿದೆ ಎಂದರು. ಕ್ರಿಕೆಟ್ ನೋಡುಗರ ಸಂಖ್ಯೆಯನ್ನು ಹೆಚ್ಚು ಮಾಡುವ ನಿಟ್ಟಿನಲ್ಲಿ ಬಿಸಿಸಿಐ ದೇಶದ ಐವತ್ತು ಕಡೆಗಳಲ್ಲಿ ಈ ರೀತಿಯ ದೊಡ್ಡ ಪರದೆಗಳ ಮೂಲಕ ಕ್ರಿಕೆಟ್ ಪ್ರೇಮಿ ಗಳಿಗೆ…
ತುಮಕೂರು: ಜೀವನದಲ್ಲಿ ಎದುರಾಗುವ ಕಷ್ಟ-ಸುಖ ಹಾಗೂ ನೋವು-ನಲಿವುಗಳು ಸಹಜ ಪ್ರಕ್ರಿಯೆಗಳಾಗಿದ್ದು, ಇವು ಯಾವುದೂ ಮನುಷ್ಯನ ಸಾಧನೆಯ ಹಾದಿಗೆ ಅಡ್ಡಿ ಯಾಗಬಾರದು ಎಂದು ಮಹಿಳಾ ಅಂಧರ ಟಿ-೨೦ ವಿಶ್ವಕಪ್ ವಿಜೇತ ತಂಡದ ನಾಯಕಿ ಟಿ. ಸಿ. ದೀಪಿಕಾ ಅವರು ಕಿವಿಮಾತು ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಯೋಗಾಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ (ಮಾ. ೨೭) ಶುಕ್ರವಾರ ಆಯೋಜಿಸಲಾಗಿದ್ದ ಯೋಗ ಮತ್ತು ಮಹಿಳಾ ಸಬಲೀಕರಣ ಕುರಿತ ಒಂದು ದಿನದ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಮ್ಮ ಜೀವನದ ಕಹಿ ಘಟನೆಗಳನ್ನು ಮೆಲುಕು ಹಾಕಿದ ಅವರು, ಒಂದು ಹೊತ್ತಿನ ಊಟಕ್ಕೂ ಪರದಾಡಿದ ದಿನಗಳು ಮತ್ತು ಅಂಧತ್ವದ ಕಾರಣಕ್ಕೆ ಎದುರಿಸಿದ ಅವಹೇಳನಗಳನ್ನು ಸ್ಮರಿಸಿದರು. ಟೀಕೆಗಳನ್ನು ಮೆಟ್ಟಿ ನಿಂತು ಸಾಧನೆಯ ಗುರಿ ತಲುಪುವ ಮೂಲಕ ಇಂದು ತನ್ನನ್ನು ಹೀಯಾಳಿಸಿದವರು ತಲೆತಗ್ಗಿಸುವಂತೆ ಹಾಗೂ ಬೆಂಬಲಿಸಿದವರು ಹೆಮ್ಮೆಯಿಂದ ತಲೆ ಎತ್ತುವಂತೆ ಮಾಡಿರುವುದಾಗಿ ತಿಳಿಸಿದರು. ಬೆಂಗಳೂರಿನ ಅಂತರಾಷ್ಟ್ರೀಯ ಯೋಗ ಮತ್ತು ವೆಲ್ನೇಸ್…
ಹುಳಿಯಾರು: ಇಂದಿನ ಒತ್ತಡದ ಜೀವನಶೈಲಿಯಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಅತ್ಯಗತ್ಯ ಎಂದು ಗೀತಕ್ಕ ಅವರು ಅಭಿಪ್ರಾಯಪಟ್ಟರು. ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿಸ್ ಈಶ್ವರೀಯ ವಿಶ್ವವಿದ್ಯಾ ಲಯದ ಆವರಣದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ, ಹುಳಿಯಾರು-ಕೆಂಕೆರೆ ಶಾಖೆ ಹಮ್ಮಿಕೊಂಡಿದ್ದ ೪೮ ದಿನಗಳ “ಉಚಿತ ಯೋಗಾಸನ ಹಾಗೂ ಪ್ರಾಣಾಯಾಮ ತರಬೇತಿ ಶಿಬಿರ”ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಕ ನಟರಾಜು ಅವರು, “ಯೋಗವು ಕೇವಲ ವ್ಯಾಯಾಮವಲ್ಲ, ಅದು ಜೀವನ ನಡೆಸುವ ಕಲೆ. ರೋಗಮುಕ್ತ ಸಮಾಜ ನಿರ್ಮಾಣಕ್ಕಾಗಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಮುಂದಿನ ೪೮ ದಿನಗಳ ಕಾಲ ಸೂರ್ಯ ನಮಸ್ಕಾರ, ಆಸನಗಳು, ಮುದ್ರೆಗಳು ಹಾಗೂ ಪ್ರಾಣಾಯಾಮದ ಬಗ್ಗೆ ಸವಿಸ್ತಾರವಾಗಿ ಕಲಿಸಲಾಗುವುದು,” ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಯೋಗ ಶಿಕ್ಷಕಿ ಬಕುಳಾದೇವಿ ಅವರು ಮಾತನಾಡಿ, ದಿನನಿತ್ಯದ ಜಂಜಾಟಗಳ ನಡುವೆ ಯೋಗ ಮಾಡುವುದರಿಂದ ಏಕಾಗ್ರತೆ ಮತ್ತು ಕಾರ್ಯಕ್ಷಮತೆ ಹೆಚ್ಚುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು…
ಹುಳಿಯಾರು: ಇಲ್ಲಿನ ಗಾಂಧಿ ಪೇಟೆಯ ನಿವಾಸಿ ರೋಷನ್ ಬಿನ್ ಶ್ರೀರಂಗಬಾಬು ಎಂಬುವರ ಮನೆಯಲ್ಲಿ ಬುಧವಾರ ನಸುಕಿನ ವೇಳೆಯಲ್ಲಿ ಕಳ್ಳತನ ನಡೆದಿದೆ. ಮನೆಯವರು ದೇವರ ದರ್ಶನಕ್ಕಾಗಿ ಮುಂಜಾನೆ ನನಗೆ ಬೀಗ ಹಾಕಿ ನಂಜನಗೂಡಿಗೆ ತೆರಳಿದ್ದ ಸಮಯದಲ್ಲಿ ಕಳ್ಳರು ಬೀಗ ಮುರಿದು ಒಳನುಗ್ಗಿ ಕೃತ್ಯ ಎಸಗಿದ್ದಾರೆ. ಘಟನೆಯ ವಿವರ: ಮನೆಯ ಮಾಲೀಕ ರೋಷನ್ ಮತ್ತು ಅವರ ಪತ್ನಿ ಬುಧವಾರ ಬೆಳಗಿನ ಜಾವ ಸುಮಾರು ೨:೩೦ಕ್ಕೆ ನಂಜನಗೂಡಿನ ದೇವಸ್ಥಾನಕ್ಕೆ ಕಾರಿನಲ್ಲಿ ತೆರಳಿದ್ದರು. ದಂಪತಿಗಳು ಹೋದ ನಂತರ ಅಂದರೆ ಸುಮಾರು ೨:೩೦ ರಿಂದ ೩:೩೦ರ ಅವಧಿಯಲ್ಲಿ ಈ ಕಳ್ಳತನ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಮಧ್ಯಾಹ್ನ ೨:೩೦ರ ಸುಮಾರಿಗೆ ಪಕ್ಕದ ಮನೆಯವರು ವಾಹನ ನಿಲ್ಲಿಸಲು ಬಂದಾಗ ಮನೆ ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ತಕ್ಷಣ ಅವರು ರೋಷನ್ ಅವರಿಗೆ ಫೋನ್ ಮಾಡಿ ವಿಷಯ ತಿಳಿಸಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಮನೆಯ ಮುಂಭಾಗದ ಗೇಟ್ ಮತ್ತು ಮುಂಬಾಗಿಲಿನ ಬೀಗ ಹಾಕಿರುವುದನ್ನು ಗಮನಿಸಿರುವ ಕಳ್ಳರು, ಮನೆಯಲ್ಲಿ ಯಾರೂ ಇಲ್ಲ ಎಂದು ಬಗೆದು…
ಮಧುಗಿರಿ: ನಗರದ ಉಪ ವಿಭಾಗಾಧಿಕಾರಿಗಳ ಕಛೇರಿಯಲ್ಲಿ ವೃತ್ತಿಜೀವನ ಆರಂಭಿಸಿದ ಸಣ್ಣಮುದ್ದಯ್ಯನವರು ಪ್ರಾರಂಭಿಕ ದಿನಗಳಿಂದ ಬಡವರು, ಶೋಷಿತರ ಪರ ಧ್ವನಿಯಾಗಿದ್ದರು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ತಿಳಿಸಿದರು. ಅವರು ಕನ್ನಡ ಭವನದಲ್ಲಿ ಜಿಲ್ಲಾ ಕಸಾಪ ವತಿಯಿಂದ ಏರ್ಪಡಿಸಿದ್ದ ಸಣ್ಣಮುದ್ದಯ್ಯನವರ ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಮ್ಮ ದೈನಂದಿನ ಕೆಲಸ ಕಾರ್ಯಗಳು, ಪ್ರಮಾಣ ಪತ್ರಗಳಿಗಾಗಿ ಬರುತ್ತಿದ್ದ ಗ್ರಾಮೀಣ ರೈತರಿಗೆ ಅಲೆದಾಡಿಸದೆ ತಕ್ಷಣ ಕೆಲಸ ಮಾಡಿಕೊಡುತ್ತಿದ್ದರು ಎಂದು ತಿಳಿಸಿದರು. ಸಣ್ಣಮುದ್ದಯ್ಯನವರ ಸಮಾಜಮುಖಿ ಕೆಲಸಗಳನ್ನು ಕುರಿತು ಜಿಲ್ಲಾ ಕಸಾಪ ಸಂಚಾಲಕರಾದ ಕೆ.ಎಸ್.ಉಮಾಮಹೇಶ್ ಮಾತನಾಡಿ, ೨೦೦೨ರಲ್ಲಿ ತುಮಕೂರಿನಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನೆನೆಗುದಿಗೆ ಬಿದ್ದಾಗ ನೌಕರ ಸಂಘದ ವತಿಯಿಂದ ಪ್ರೇರಕ ಶಕ್ತಿಯಾಗಿ ನಿಂತರು. ಸರ್ಕಾರಿ ನೌಕರರ ಭವನದಲ್ಲಿಯೇ ಪೂರ್ವಸಿದ್ಧತಾ ಸಭೆ ನಡೆಸಿದರು. ಜಿಲ್ಲೆಯ ಸಚಿವರುಗಳಾದ ಟಿ.ಬಿ.ಜಯಚಂದ್ರ ಹಾಗೂ ಡಾ. ಜಿ.ಪರಮೇಶ್ವರ್ ಅವರಿಗೆ ಸಹಕಾರದ ಭರವಸೆ ನೀಡಿ ಸಾಹಿತ್ಯ ಸಮ್ಮೇಳನದ ಕೆಲಸಗಳಿಗೆ ಚಾಲನೆ ನೀಡುವುದರ ಜೊತೆಗೆ ಜಿಲ್ಲೆಯ ಎಲ್ಲಾ ನೌಕರರ ಒಂದು ದಿನದ ವೇತನವನ್ನು…
ತುಮಕೂರು: ಯಶಸ್ಸು ಎಂಬುದು ಬದುಕಿನ ಸಾರ್ಥಕತೆಯ ಮೊದಲ ಮೆಟ್ಟಿಲು. ಮಕ್ಕಳಿಗೆ ಹಸಿವು, ಬಡತನ ಮತ್ತು ಅವಮಾನದ ಅರಿವಿದ್ದಾಗ ಮಾತ್ರ ಅವರಿಗೆ ಸಾಧನೆಯ ಹಾದಿಯಲ್ಲಿ ದೃಢವಾದ ಪ್ರೇರಣೆ ಲಭ್ಯವಾಗುತ್ತದೆ ಎಂದು ಅಖಿಲ ಭಾರತೀಯ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಸಿ. ಸೋಮ ಶೇಖರ್ ಅವರು ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮ ಸಮಿತಿ ಹಾಗೂ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಸಹಯೋಗದೊಂದಿಗೆ ಮಾ. ೨೬ರ ಗುರುವಾರದಂದು ಆಯೋಜಿಸಲಾಗಿದ್ದ ೨೦೨೫-೨೬ನೇ ಸಾಲಿನ ಪ್ರೇರಣಾ ಉಪನ್ಯಾಸ – ೦೫ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಶಸ್ಸಿನ ಹಾದಿಯ ಬಗ್ಗೆ ವಿವರಿಸಿದ ಅವರು, ಯಶಸ್ಸು ಎಂಬುದು ನಮ್ಮ ಆಸೆ ಮತ್ತು ಆಕಾಂಕ್ಷೆಗಳಿಗೆ ಸಿಗುವ ತೃಪ್ತ ಭಾವನೆ. ಸಾಧನೆಗೆ ಯಾವುದೇ ಅಡ್ಡದಾರಿಗಳಿಲ್ಲ, ಕಠಿಣ ಶ್ರಮ, ಏಕಾಗ್ರತೆ ಮತ್ತು ಛಲದಿಂದ ಮಾತ್ರ ಇದನ್ನು ಪಡೆಯಲು ಸಾಧ್ಯ. ಪೋಷಕರ ಕನಸುಗಳೊಂದಿಗೆ ವಿದ್ಯಾರ್ಥಿಗಳ ಕನಸುಗಳು ಸಮೀಕರಣಗೊಂಡಾಗ ಉತ್ತಮ ಭವಿಷ್ಯ ನಿರ್ಮಾಣವಾಗುತ್ತದೆ. ಶಿಷ್ಯರು ತಮ್ಮ ಗುರುಗಳನ್ನು ಮೀರಿಸುವಂತಹ ಸ್ಥಾನಕ್ಕೇರಬೇಕು ಎಂದರು. ಡಾ. ಎ.ಪಿ.ಜೆ. ಅಬ್ದುಲ್…
ತುಮಕೂರು: ಬೆಳಗಾವಿಯ ತಾಂತ್ರಿಕ ಶಿಕ್ಷಣ ವಿಶ್ವವಿದ್ಯಾಲಯದ ಬೋಧನಾ ಮತ್ತು ಪಠ್ಯಕ್ರಮ ಜಗತ್ತಿಗೆ ಮಾದರಿಯಾಗಿದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಗೌರವಾನ್ವಿತ ಕುಲಪತಿಯಾದ ಪ್ರೊ.ವಿದ್ಯಾಶಂಕರ್.ಎಸ್. ರವರು ಅಭಿಪ್ರಾಯಪಟ್ಟಿದ್ದಾರೆ. ನಗರದ ಶಿರಾರಸ್ತೆಯ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಮಾರ್ಚ್ ೨೬ ರಂದು ಗುರುವಾರ ಬೆಳಿಗ್ಗೆ ೧೦ ಗಂಟೆಗೆ ಶ್ರೀದೇವಿ ಕಾಲೇಜಿನ ಆವರಣದಲ್ಲಿ ಶ್ರೀಉತ್ಸವ ವಾರ್ಷಿಕೋತ್ಸವ-೨೦೨೬ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ್ದ ಪ್ರೊ.ವಿದ್ಯಾಶಂಕರ್.ಎಸ್.ರವರು ಮಾತನಾಡುತ್ತಾ ಕೃತಕ ಬುದ್ಧಿಮತ್ತೆ ಬೆಳೆದಷ್ಟು ಉದ್ಯೋಗಾವಕಾಶಗಳು ಕಡಿಮೆಯಾಗಲಿದೆ. ಎಂಬ ಆತಂಕದಲ್ಲಿ ಸತ್ಯಾಂಶವಿಲ್ಲ ಆದರೆ ಕೃತಕ ಬುದ್ಧಿಮತ್ತೆಯನ್ನು ಮೀರಿ ಬೆಳೆಯುವಂತಹ ಅವಕಾಶಗಳನ್ನು ನಾವು ಸೃಷ್ಟಿಸಿಕೊಳ್ಳದೆ ಹೋದಲ್ಲಿ ಮನುಷ್ಯ ಬೇಡವಾದ ವಸ್ತುವಾಗುತ್ತಾನೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಹೀಗಾಗಿ ೨೦೩೦ರ ವೇಳೆಗೆ ಕೃತಕ ಬುದ್ಧಿಮತ್ತೆಯನ್ನು ನಿಯಂತ್ರಿಸುಲು ಇಂದಿನಿ0ದಲೇ ನಮ್ಮ ಪ್ರಯತ್ನಗಳನ್ನು ಮತ್ತು ಹೊಸ ಹೊಸ ಅಲೋಚನೆ, ಸಂಶೋಧನೆ ಮತ್ತು ನಾವೀನ್ಯತೆಗೆ ಹೆಚ್ಚು ಗಮನಕೊಡಬೇಕು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಠ್ಯಕ್ರಮ ಶೈಕ್ಷಣಿಕ ಕ್ರಮಕ್ರಮ ಅಂತರಾಷ್ಟ್ರೀಯ ಮಟ್ಟದಲ್ಲಿ ಶ್ರೇಷ್ಠವಾಗಿದೆ. ಹೀಗಾಗಿ ನಮಗೆ ಮಾನ್ಯತೆ ಕೊಡಿ ಎಂದು. ಸೌದಿಅರೇಬಿಯಾ, ದಕ್ಷಿಣ…











