ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು ಜನಾಂಗದ ಬಹುದಿನದ ಒತ್ತಾಯವಾಗಿದೆ. ಈ ನಿಟ್ಟಿನಲ್ಲಿ ಸರಕಾರದ ಮೇಲೆ ಒತ್ತಡ ತರಲು ಶ್ರಮಿಸುವುದಾಗಿ ವಿಧಾನ ಪರಿಷತ್ ಸದಸ್ಯ ರಮೇಶ ಬಾಬು ತಿಳಿಸಿದ್ದಾರೆ. ನಗರದ ಶ್ರೀ ಸಿದ್ದಿವಿನಾಯಕ ಸಮುದಾಯ ಭವನದಲ್ಲಿ ಜಿಲ್ಲಾ ಬಲಿಜ ಸಂಘ(ರಿ), ತುಮಕೂರು ಹಾಗೂ ಶ್ರೀಯೋಗಿ ನಾರೇಯಣ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀಶ್ರೀಶ್ರೀ ಯೋಗಿ ನಾರೇಯಣ ಯತೀಂದ್ರರ ೧೯೧ನೇ ವರ್ಷದ ಜೀವ ಸಮಾಧಿ ಮಹೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡುತಿದ್ದ ಅವರು,ಶಿಕ್ಷಣದಲ್ಲಿ ೨ಎ ಮೀಸಲಾತಿಯಿಂದ ವಿದ್ಯಾವಂತರ ಸಂಖ್ಯೆ ಹೆಚ್ಚಾಗಿದೆ. ಇದೇ ಮೀಸಲಾತಿ ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿ ದೊರೆತರೆ ನಮ್ಮ ಸಮುದಾಯದ ಜನರು ಸರಕಾರಿ ಉದ್ಯೋಗ ಪಡೆಯುವವರ ಸಂಖ್ಯೆ ಹೆಚ್ಚಲಿದೆ.ಅಲ್ಲದೆ ಸ್ಥಳೀಯ ಸಂಸ್ಥೆಗಳಿAದ ಸಂಸತ್ವರೆಗೆ ಸಮಾಜದ ಜನರು ಜನ ಪ್ರತಿನಿಧಿಗಳಾಗಿ ಆಯ್ಕೆಯಾಗಲು ಸಹಕಾರಿಯಾಗಲಿದೆ ಎಂದರು. ಸ್ಪೂರ್ತಿ ಡೆವಲ್ರ್ಸ್ನ…
Author: News Desk Benkiyabale
ತುಮಕೂರು: ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಸಾಧನೆಯ ಹಾದಿಯನ್ನು ತಮ್ಮಲ್ಲಿ ಮೂಡಿಸಿಕೊಳ್ಳಬೇಕು. ಅವರ ಅಚಲವಾದ ಹಾಗೂ ದೃಢವಾದ ಮನಸ್ಥಿಯನ್ನು ಅಳವಡಿಸಿಕೊಂಡು, ತಮ್ಮ ಗುರಿಯನ್ನು ಸಾಧನೆಯತ್ತ ಮಾತ್ರ ಇಟ್ಟುಕೊಳ್ಳಿ ಎಂದು ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರಾದ ಪ್ರೊ. ಹೆಚ್.ಎಸ್. ಮೋಹನ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠ ಹಾಗೂ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆ. ೦೩ ಸೋಮವಾರದಂದು ಹಮ್ಮಿಕೊಳ್ಳಲಾಗಿದ್ದ “ಪದವಿ ಶಿಕ್ಷಣ ಉದ್ಯೋಗಕ್ಕಷ್ಟೇ ಅಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೂ” ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯನು ಕೇವಲ ತನಗಾಗಿ ಮಾತ್ರವಲ್ಲದೆ, ಜಗತ್ತಿಗಾಗಿ ಬದುಕುವ ಪರಿಯನ್ನು ಅರಿತುಕೊಳ್ಳಬೇಕು. ಸಮಾಜಕ್ಕೆ ಮತ್ತು ಜಗತ್ತಿಗೆ ನಮ್ಮ ಕೊಡುಗೆ ಏನು ಎಂಬುದನ್ನು ಸದಾ ಪ್ರಶ್ನಿಸಿಕೊಳ್ಳಬೇಕು ಎಂದರು. ಕಾರ್ಯಾಗಾರದ ಅಧ್ಯಕ್ಷರಾದ ಹಿರಿಯ ಪ್ರಾಧ್ಯಾಪಕ ಪ್ರೊ. ಶೇಟ್ ಪ್ರಕಾಶ್ ಮಾತನಾಡಿ ಖಾಸಗಿ ಕಾಲೇಜುಗಳಿಗಿಂತ ತುಮಕೂರು ವಿಶ್ವವಿದ್ಯಾನಿಲಯ ನೂರು ಪಟ್ಟು ಉತ್ತಮವಾಗಿದೆ. ಒಮ್ಮೆ ಕ್ಯಾಂಪಸ್ ಒಳಗೆ ಕಾಲಿಟ್ಟರೆ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್ಡಿ ಪಡೆದು ಸಂಪೂರ್ಣ ಸಬಲರಾಗಿ ಹೊರಹೋಗಬಹುದು.…
ತುಮಕೂರು: ನಮ್ಮ ಬೆಳವಣಿಗೆಗೆ ಸಹಕಾರಿ ಸಂಘಗಳು ಸಹಕಾರಿಯಾಗಿವೆ. ತಳಮಟ್ಟದ ಸಮು ದಾಯಗಳು ಶ್ರೇಯೋಭಿವೃದ್ಧಿಗೆ, ನಮ್ಮ ಶಕ್ತಿ ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿಯಾಗಬೇಕು ಎಂದು ಮಾಜಿ ಸಹಕಾರ ಸಚಿವ, ಶಾಸಕ ಕೆ.ಎನ್. ರಾಜಣ್ಣ ಹೇಳಿದರು. ಭಾನುವಾರ ನಗರದ ಕುಂಚಿಟಿಗರ ಸಮುದಾಯ ಭವನದಲ್ಲಿ ನಗರದ ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘದರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರಿನಲ್ಲಿ ಪ್ರತಿಯೊಂದು ತಳಸಮುದಾಯದವರೂ ಸಹಕಾರ ಸಂಘ ಸ್ಥಾಪನೆ ಮಾಡಿದ್ದಾರೆ. ಸಣ್ಣಸಣ್ಣ ಸಮುದಾಯದವರಿಗೆ ಸಾಲ ಸೌಲಭ್ಯ ಸಿಗದ ಸಂದರ್ಭದಲ್ಲಿ ತಮ್ಮದೇ ಸಹಕಾರ ಸಂಘಗಳಲ್ಲಿ ಸಾಲ ಸೌಕರ್ಯ ಪಡೆದು ಬೆಳವಣಿಗೆ ಆಗಬಹುದು. ಖಾಸಗಿಯವರಿಂದ ದುಬಾರಿ ಬಡ್ಡಿತೆತ್ತು ಸಾಲ ಪಡೆಯುವುದು ತಪ್ಪಬೇಕು ಎಂದರು. ಕುರುಹಿನ ಶೆಟ್ಟಿ ಸಮಾಜದ ಹುಬ್ಬಳ್ಳಿಯ ನೀಲಕಂಠ ಮಠದ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ ಸಮಾರಂಭದ ಸಾನಿಧ್ಯವಹಿಸಿ, ನೀಲಕಂಠೇಶ್ವರ ಸ್ವಾಮಿ ಸಹಕಾರ ಸಂಘವು ದೊಡ್ಡ ಪ್ರಮಾಣದಲ್ಲಿ ಬೆಳೆದು ಸಂಭ್ರಮದಿAದ ಶತಮಾನೋತ್ಸವ ಆಚರಿಸುವಂತಾಗಲಿ, ಸಹಕಾರ ಸಂಘಗಳ ಮೂಲಕ ಆರ್ಥಿಕ ಚಟುವಟಿಕೆಗಳಲ್ಲದೆ, ಸಮಾಜದಲ್ಲಿ ಭಾವೈಕ್ಯತೆ ಬೆಳೆಯಲು ಸಾಧ್ಯವಾಗುತ್ತದೆ. ಸಮಾಜಮುಖಿಯಾಗಿ ಕೆಲಸ ಮಾಡುವುದು…
ತುಮಕೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟಕರೆ ನೀಡಿರುವ ಈ ತಿಂಗಳ ೧೩ರ ಕರ್ನಾಟಕ ಬಂದ್ಗೆ ನಗರದ ಕನ್ನಡಪರ ಹಾಗೂ ಇತರೆ ಸಂಘಗಳ ಒಕ್ಕೂಟ ಬೆಂಬಲ ನೀಡಿದೆ. ಈ ಸಂಬAಧ ನಗರದಲ್ಲಿ ಸಭೆ ಸೇರಿ ಚರ್ಚಿಸಿದ ಸಂಘಟನೆಗಳ ಮುಖಂಡರು ೧೩ರ ಬಂದ್ ಹೋರಾಟದಲ್ಲಿ ಭಾಗವಹಿಸಲು ತೀರ್ಮಾನಿಸಿದರು. ಒಕ್ಕೂಟದ ಅಧ್ಯಕ್ಷ ಎಂ ಗೋಪಿ ಮಾತನಾಡಿ, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ರಾಜ್ಯದ ಜನರಿಗೆ ಮಾರಕವಾಗಿದೆ. ಮಳೆ ಇಲ್ಲದೆ, ಕುಡಿಯುವ ನೀರಿಗೂ ತೊಂದರೆಯಾಗಿ ಹಾಹಾಕಾರ ಪರಿಸ್ಥಿತಿ ಇರುವಾಗ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ನಿರ್ಧಾರ ಅಮಾನವೀಯ. ಇದರ ವಿರುದ್ಧ ರಾಜ್ಯದ ಎಲ್ಲಾ ಶಾಸಕರು, ಸಂಸದರು ಪಕ್ಷಾತೀತವಾಗಿಧ್ವನಿ ಎತ್ತಬೇಕು, ಕನ್ನಡಿಗರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು. ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್. ರಾಮಯ್ಯ ಮಾತನಾಡಿ, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ರಾಜ್ಯದ…
ತುಮಕೂರು: ಪರಸ್ಪರ ಸಹಕಾರ, ಸೌಹಾರ್ದತೆಯಿಂದ ಕೂಡಿ ನೆರವಾಗುವ ಸಹಕಾರಿ ಸಂಸ್ಥೆಯನ್ನು ಕಟ್ಟಿ ಬೆಳೆಸಬೇಕು. ಆ ಮೂಲಕ ಸಾಲ ಸೌಲಭ್ಯ ಪಡೆದು ತಮ್ಮ ಅಭಿವೃದ್ಧಿಗೂ ಅವಕಾಶ ಮಾಡಿಕೊಂಡು ಬೆಳೆಯಬೇಕು. ಈ ಸಹಕಾರಿ ಸಂಘ ಯಶಸ್ವಿಯಾಗಿ ಮುನ್ನೆಡೆಯಬೇಕಾದರೆ ಸಾಲ ಪಡೆದ ಗ್ರಾಹಕರು ಸಕಾಲಕ್ಕೆ ಮರು ಪಾವತಿ ಮಾಡುವುದು ಅತ್ಯಾವಶ್ಯಕ. ಬಾಕಿ ಉಳಿಸಿಕೊಂಡರೆ ಸಹಕಾರಿ ಸಂಘಗಳು ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಮಾಜಿ ಸಹಕಾರ ಸಚಿವ, ಶಾಸಕ ಕೆ.ಎನ್. ರಾಜಣ್ಣ ಹೇಳಿದರು. ಭಾನುವಾರ ನಗರದ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಹೋಟೆಲು ಮತ್ತು ಉಪಹಾರ ಮಂದಿರಗಳ ಸಂಘದ ೮೦ನೆ ವರ್ಷದ ಅಮೃತ ಮಹೋತ್ಸವ ಹಾಗೂ ಹೋಟೆಲು ಮಾಲೀಕರ ಸೌಹಾರ್ದ ಸಹಕಾರಿ ಸಂಘದ ೫೦ನೆ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ೮ ದಶಕಗಳ ಇತಿಹಾಸದ ತುಮಕೂರಿನ ಹೋಟೆಲ್ ಮತ್ತು ಉಪಹಾರ ಮಂದಿರಗಳ ಸಂಘದವರು ಹೋಟೆಲ್ ಉದ್ಯಮದಲ್ಲಿ ತೊಡಗಿಸಿಕೊಂಡವರ ಅನುಕೂಲಕ್ಕಾಗಿ ಐದು ದಶಕದ ಹಿಂದೆ ಸ್ಥಾಪಿಸಿದ ಸಹಕಾರಿ ಸಾರ್ಥಕ ೫೦ ವರ್ಷಗಳನ್ನು ಕಂಡಿರುವುದು ಪ್ರಶಂಸನಾರ್ಹ. ಯಾವುದೇ ಸಹಕಾರಿ ಸಂಘವಾಗಲಿ,…
ತುಮಕೂರು: ತಮಿಳುನಾಡಿಗೆ ಪ್ರತಿದಿನ ೩,೫೦೦ ಕ್ಯೂಸೆಕ್ಸ್ ನೀರು ಬಿಡಬೇಕೆಂದುಕಾವೇರಿ ನೀರು ನಿಯಂತ್ರಣಾ ಸಮಿತಿ ಮಾಡಿರುವ ಶಿಫಾರಸ್ಸಿಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ವೀವ್ರ ವಿರೋಧ ವ್ಯಕ್ತಪಡಿಸಿದೆ. ನಮ್ಮನೀರನ್ನು ಉಳಿಸಿಕೊಳ್ಳಲು, ಕಾವೇರಿ ಸಮಿತಿ ಶಿಫಾರಸು ವಿರೋಧಿಸಿ ರಾಜ್ಯ ಸಂಘಟನೆಗಳು ರೂಪಿಸುವ ಹೋರಾಟವನ್ನು ಬೆಂಬಲಿಸಿ ಹೋರಾಟ ನಡೆಸಲು ಒಕ್ಕೂಟದ ಮುಖಂಡರು ತೀರ್ಮಾನ ಮಾಡಿದರು. ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಪ್ರಮುಖರು ಸಭೆ ಸೇರಿ ಕಾವೇರಿ ನೀರು ಹೋರಾಟ ಕುರಿತು ಚರ್ಚಿಸಿದರು.ಕನ್ನಡ ಸೇನೆ ಜಿಲ್ಲಾಧ್ಯಕ್ಷ ಡಾ.ಧನಿಯಾ ಕುಮಾರ್ ಮಾತನಾಡಿ ಮಳೆ ಬೀಳದೆ ನಮ್ಮಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿರುವಾಗ, ಜಲಾಶಯಗಳು ಬತ್ತಿಹೋಗಿರುವಾಗ ತಮಿಳುನಾಡಿಗೆ ಪ್ರತಿದಿನ ೩೫೦೦ ಕ್ಯೂಸೆಕ್ಸ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಮಾಡಿರುವ ಶಿಫಾರಸು ಅಮಾನವೀಯ. ಸರ್ಕಾರ ಈ ಶಿಫಾರಸ್ಸನ್ನು ತಿರಸ್ಕರಿಸಿ ನಾಡಿನ ಜನರ ರಕ್ಷಣೆಗೆ ಬದ್ಧತೆ ತೋರಬೇಕು.ಕಾವೇರಿ ನೀರಿನ ವಿಚಾರದಲ್ಲಿ ಪ್ರತಿಬಾರಿಯೂ ನಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯದ ಬರ ಪರಿಸ್ಥಿತಿಯ ವಸ್ತುಸ್ಥಿತಿಯನ್ನು ಸಮರ್ಥವಾಗಿ ಮಂಡನೆ ಮಾಡುವಲ್ಲಿ…
ತುಮಕೂರು: ಉನ್ನತಿಯ ಜೀವನ ಸಾಧ್ಯವಾಗಬೇಕೆಂದರೆ ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು. ಸ್ವಧ್ಯಾಯ ಪ್ರತಿಯೊಂದು ಜೀವಿಗೂ ಅವಶ್ಯಕ ಎಂದು ಆಚಾರ್ಯಶ್ರೀ ೧೦೮ ಪ್ರಮುಖ್ ಸಾಗರ್ಜೀ ಮಹಾರಾಜ್ ಸ್ವಾಮೀಜಿ ಸಂದೇಶ ನೀಡಿದರು. ಚಾತುರ್ಮಾಸ ಕಳಸ ಸ್ಥಾಪನೆ ಅಂಗವಾಗಿ ಶುಕ್ರವಾರ ನಗರದ ಜೈನ ಭವನದಲ್ಲಿ ನಡೆದ ವೀರ ಶಾಸನ ಜಯಂತಿ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಜೈನ ಧರ್ಮವು ಎಲ್ಲಾ ಜೀವಿಗಳ ಕಲ್ಯಾಣ ಬಯಸುತ್ತದೆ. ಅಹಿಂಸೆ, ಪರಸ್ಪರ ಶಾಂತಿ, ಸೌಹಾರ್ದಯುತ ಜೀವನ ಜೈನ ಧರ್ಮದ ಸಂದೇಶವಾಗಿದೆ ಎಂದು ತಿಳಿಸಿದರು. ೨೪ನೇ ತೀರ್ಥಂಕರರಾದ ಮಹಾವೀರರ ಉಪದೇಶ ಅನುಷ್ಠಾನಗೊಂಡ ದಿನವನ್ನು ವೀರ ಶಾಸನ ದಿವಸನ್ನಾಗಿ ಇಂದು ಆಚರಿ ಸುತ್ತಿದ್ದೇವೆ. ಪ್ರತಿಯೊಂದು ಜೀವಿಗೂ ಮಹಾವೀರರ ಸಂದೇಶಗಳು ಪ್ರಸ್ತುತ ದಿನಕ್ಕೂ ಅನ್ವಯವಾಗುತ್ತವೆ. ಸರ್ವ ಜೀವಿಯ ಒಳಿತಿಗೆ ಮಹಾವೀರರ ಸಾರ್ವಕಾಲಿಕ ಸಂದೇಶಗಳನ್ನು ಸಮಾಜದ ಪ್ರತಿಯೊಬ್ಬರೂ ಪಾಲನೆ ಮಾಡಿದರೆ ಎಲ್ಲರೂ ಶಾಂತಿ, ನೆಮ್ಮದಿಯಿಂದ ಬಾಳಲು ಸಾಧ್ಯವಾಗುತ್ತದೆ. ಗುರು ಪೂರ್ಣಿಮೆ ಧಾರ್ಮಿಕ ಸಭೆಗೆ ಮಹಿಳೆಯರು ಬಿಳಿ ಬಣ್ಣದ ಸೀರೆ ಉಟ್ಟು,…
ತುಮಕೂರು: ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿದ್ದು ಮೂವರು ಮಕ್ಕಳು ಸೇರಿ ಐವರು ಗಂಭೀರವಾಗಿ ಗಾಯಗೊಂಡಿರುವ ಟನೆ ಗುರುವಾರ ನಗರದ ಹೊರವಲಯದ ಊರುಕೆರೆ ಬಳಿ ರಾಷ್ಟಿçÃಯ ಹೆದ್ದಾರಿ ೪೮ರಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಲಿಂಗಸೂರು ಮೂಲದ ದ್ಯಾವಪ್ಪ (೬೫), ದುರ್ಗವ್ವ (೬೦) ಮೃತ ದುರ್ದೆÊವಿಗಳು. ಆಟೋ ಚಾಲಕ ವೆಂಕಟೇಶ್ (೩೮), ಶಾಂತಮ್ಮ (೩೮) ಹಾಗೂ ಅವರ ಮಕ್ಕಳಾದ ಅಂಬಿಕಾ (೭), ಮಂಜುನಾಥ್? (೧೩) ಸಂಬAಧಿಕರ ಪುತ್ರ ದೇವೇಗೌಡ (೧೧) ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು ಚೇತರಿಸಿಕೊಂಡಿದ್ದಾರೆ. ಜಾತ್ರೆಗೆ ತೆರಳಿದ್ದ ಕುಟುಂಬ: ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದ್ಯಾವಪ್ಪ ಕುಟುಂಬ ಹುಟ್ಟೂರಿಗೆ ಜಾತ್ರೆಗೆ ತೆರಳಿತ್ತು. ಜಾತ್ರೆ ಮುಗಿಸಿಕೊಂಡು ಗುರುವಾರ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಊರುಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾ ರಸ್ತೆಬದಿಯ ತಡೆಗೋಡೆಗೆ ಗುದ್ದಿದ್ದು ಈ ಅವಘಡ ಸಂಭವಿಸಿದೆ. ದಂಪತಿ ಮೃತದೇಹವನ್ನು ಶುಕ್ರವಾರ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸೆ÷್ಟÃಬಲ್ (ಸಿವಿಲ್) ವೃಂದದ ಹುದ್ದೆಗಳ ನೇರ ನೇಮಕಾತಿ ಹಿನ್ನೆಲೆ ನಗರದ ೨೭ ಪರೀಕ್ಷಾ ಕೇಂದ್ರಗಳಲ್ಲಿ ಆ.೨ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಅಹಿತಕರ ಘಟನೆ ಸಂಭವಿಸದAತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯು ಆದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ೨೦೦ ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆಯು ಆ.೨ರಂದು ಬೆಳಗ್ಗೆ ೯ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತವಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್/ಸೈಬರ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆ ಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ಆ್ಯಪ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ಬೇಸಿಕ್ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದ್ದು,…
ತುಮಕೂರು: ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳು, ದ್ವೀತಿಯ ದರ್ಜೆ ಸಹಾಯಕರಿಗೆ ಪ್ರಥಮ ದರ್ಜೆ ಸಹಾಯಕರಾಗಿ ಹಾಗೂ ರಾಜಸ್ವ ನಿರೀಕ್ಷಕರಾಗಿ ಬಡ್ತಿ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶಿ ಸಿದ್ದರೂ ತುಮಕೂರು ಜಿಲ್ಲೆಯಲ್ಲಿ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಜಿಲ್ಲೆಯಲ್ಲಿ ೭೦೦ಕ್ಕೂ ಹೆಚ್ಚು ಗ್ರಾಮ ಆಡಳಿತ ಅಧಿಕಾರಿಗಳು ಬಡ್ತಿಗಾಗಿ ಚಾತಕ ಪಯಂತೆ ಕಾಯುತ್ತಿದ್ದು ಉದ್ದೇಶಪೂರ್ವಕವಾಗಿ ಬಡ್ತಿ ಪ್ರಕ್ರಿಯೆಯನ್ನು ಜಿಲ್ಲಾಡಳಿತ ತಡಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಜಿಲ್ಲಾಧಿಕಾರಿ ಶುಭಕಲ್ಯಾಣ್ ವಿರುದ್ಧ ಇತ್ತೀಚೆಗೆ ವಿಎಒಗಳು “ತೊಲಗಲಿ ತೊಲಗಲಿ’ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದು ಬಡ್ತಿ ಪ್ರಕ್ರಿಯೆ ತಡವಾಗಲು ನೆಪವಾಗಿದೆ ಎಂಬ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಕಂದಾಯ ಘಟಕದ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ದ್ವೀತಿಯ ದರ್ಜೆ ಸಹಾಯಕ ವೃಂದದ ಅಂತಿಮ ಸಂಯುಕ್ತ ಜೇಷ್ಟತಾ ಪಟ್ಟಿಯಲ್ಲಿ ೭೦೦ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದು ೭೫ ಖಾಲಿ ಹುದ್ದೆಗಳಿಗೆ ಬಡ್ತಿ ನೀಡಲು ಅವಕಾಶವಿದೆ. ಜಿಲ್ಲೆಯಲ್ಲಿ ಬಡ್ತಿ ತಡ ಮಾಡುವುದರಿಂದ ಆರ್ಐ ಮೇಲ್ಪಟ್ಟ ಮುಂಬಡ್ತಿಯಲ್ಲಿ ವಿಭಾಗ ಮಟ್ಟದ…











