ತುಮಕೂರು: ಜಿಲ್ಲೆಯಲ್ಲಿ ಜನವರಿ ೨೦೨೨ರಿಂದ ಈವರೆಗೂ ಯಾವುದೇ ಸ್ಥಳೀಯ ಮಲೇರಿಯಾ ಪ್ರಕರಣಗಳು ವರದಿಯಾಗಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್ ತಿಳಿಸಿದರು. ವಿಶ್ವ ಮಲೇರಿಯ ದಿನಾಚರಣೆ ಅಂಗವಾಗಿ ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಅಶ್ರಿತ ರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಮಲೇರಿಯಾ ರೋಗವನ್ನು ೨೦೨೭ಕ್ಕೆ ನಿವಾರಣೆ ಮಾಡುವ ಗುರಿ ಹೊಂದಲಾಗಿದ್ದು, ಜಿಲ್ಲೆಯು ಈಗಾಗಲೇ ಮಲೇರಿಯಾ ನಿವಾರಣಾ ಗುರಿ ತಲುಪಿದೆ ಎಂದು ತಿಳಿಸಿದರು. ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ, ಮರು ಹೂಡಿಕೆ ಮಾಡಿ, ಮರು ಕಲ್ಪನೆ ಮಾಡಿ, ಮರು ಉತ್ತೇಜನ ನೀಡೋಣ ಎಂಬ ಘೋಷವಾಕ್ಯದೊಂದಿಗೆ ಈ ವರ್ಷದ ವಿಶ್ವ ಮಲೇರಿಯಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮಲೇರಿಯಾ ರೋಗಕ್ಕೆ…
Author: News Desk Benkiyabale
ತುಮಕೂರು: ಸಾವಿರ ಸಂಗಮಗಳಲ್ಲಿ ಸ್ನಾನ ಮಾಡುವುದರಿಂದ ಮೈಮೇಲಿನ ಕೊಳೆ ಹೋಗಬಹುದೇ ಹೊರತು, ಮನಸ್ಸಿನ ಕೊಳೆ ತೊಳೆಯಲು ನಾಟಕ, ಸಂಗೀತ, ಸಾಹಿತ್ಯ,ನೃತ್ಯಗಳಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಾತ್ರ ಸಾಧ್ಯಎಂದುಕರ್ನಾಟಕ ನಾಟಕಅಕಾಡೆಮಿಅಧ್ಯಕ್ಷರಾದ ಕೆ.ವಿ.ನಾಗರಾಜಮೂರ್ತಿ ಪ್ರತಿಪಾದಿಸಿದ್ದಾರೆ. ನಗರದಕನ್ನಡ ಭವನದಲ್ಲಿ ಶ್ರೀನಾಗಾರ್ಜುನ ಕಲಾ ಸಂಘ(ರಿ)ದ ೧೫ನೇ ವರ್ಷದ ವಾರ್ಷಿಕೋತ್ಸವ ಹಾಗೂ ರಂಗಸಾಧಕರಿಗೆ ಸನ್ಮಾನ,ಸಾಂಸ್ಕೃತಿಕ ಸಂಗೀತ ಸೌರಭ ಹಾಗೂ ಸಂಘದ ವಾರ್ಷಿಕ ಮಹಾಸಭೆಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದಅವರು,ತಾವು ಮಾಡಿದ ಪಾಪ ಹೋಗುತ್ತದೆಎಂದು ಸಂಗಮದಲ್ಲಿ ಸ್ನಾನ ಮಾಡುವುದಕ್ಕಿಂತಇAತಹದೊAದು ಸಂಸ್ಥೆಯ ಮೂಲಕ ಮನಸ್ಸುಗಳನ್ನು ಬೆಸೆಯುವ ಕೆಲಸ ಮಾಡುವುದುಅತ್ಯಂತ ಪುಣ್ಯದ ಕೆಲಸ ಎಂದು ನಂಬಿದ್ದೇನೆ.ಆ ಕೆಲಸವನ್ನು ನಾಗಾರ್ಜುನ ಕಲಾಸಂಘ ಕಳೆದ ಹದಿನೈದು ವರ್ಷಗಳಿಂದ ಮಾಡುತ್ತಿರುವುದುಅಭಿನಂದನಾರ್ಹಎAದರು. ಸ0ಘಗಳು ಕೇವಲ ವಾರ್ಷಿಕೋತ್ಸವಗಳಿಗೆ ಸಿಮೀತವಾಗಿರುವ ಇಂದಿನ ಕಾಲದಲ್ಲಿಒಂದು ಸಂಘವನ್ನು ಹದಿನೈದು ವರ್ಷಗಳ ಕಾಲ ಅತ್ಯಂತ ಕ್ರಿಯಾಶೀಲವಾಗಿ ಜೀವಂತವಾಗಿಡುವ ಕೆಲಸವನ್ನು ನಾಗಾರ್ಜುನ ಕಲಾ ಸಂಘದಅಧ್ಯಕ್ಷರಾದ ಕೆ.ಸಿ.ನರಸಿಂಹಮೂರ್ತಿ ಮತ್ತುಅವರತಂಡ ಮಾಡುತ್ತಿದೆ.ಕಲೆಗೆತಮ್ಮಜೀವನವನ್ನು ಮುಡಿಪಾಗಿಟ್ಟರುವಡಾ.ಗುಬ್ಬಿ ವೀರಣ್ಣ ಮತ್ತುಡಾ.ರಾಜ್ಕುಮಾರ್ಅವರನ್ನುಆದರ್ಶವಾಗಿಟ್ಟುಕೊಂಡು ಕೆಲಸ ಮಾಡುತ್ತಿರುವುದು ಸ್ವಾಗತಾರ್ಹ. ಡಾ.ಗುಬ್ಬಿ ವೀರಣ್ಣಅವರಕನ್ನಡದ ಮೂಲಕ ಭಾರತೀಯರಂಗಭೂಮಿಯನ್ನುಕಟ್ಟುವ ಕೆಲಸ ಮಾಡಿದರು.ಅದೇರೀತಿಡಾ.ರಾಜಕುಮಾರ್ ಹಲವು ಕನ್ನಡಗಳ ನಡುವೆ,…
ತುಮಕೂರು: ಕಾಶ್ಮೀರದ ಪೆಹಲ್ಗಾಮ್ ಪ್ರವಾಸಿ ತಾಣದಲ್ಲಿ ಭಾರತೀಯರ ಮೇಲೆ ನಡೆದ ಉಗ್ರಗಾಮಿಗಳ ದಾಳಿಯನ್ನು ಖಂಡಿಸಿ, ಉಗ್ರರನ್ನು ಸದೆ ಬಡಿಯುವಂತೆ ಒತ್ತಾಯಿಸಿ ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅವರ ನೇತೃತ್ವದಲ್ಲಿ ನಗರದ ಟೌನ್ಹಾಲ್ ಮುಂಭಾಗ ಮೇಣದ ಬತ್ತಿ ಹಚ್ಚಿ ಮೃತರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಘಟನೆಯಲ್ಲಿ ಮೃತರಾದವರಿಗೆ ಮುಂಬತ್ತಿ ಹಚ್ಚಿ, ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ,ಭಾರತದ ಮುಕುಟ ಮಣಿ ಎಂದು ಕರೆಯಲ್ಪಡುವ ಕಾಶ್ಮೀರದಲ್ಲಿ ನಡೆದ ಭಯೋತ್ಪಾಧಕರ ದಾಳಿ ಕೇಂದ್ರದ ಬೇಹುಗಾರಿಕೆ ಮತ್ತು ಭದ್ರತಾ ವೈಫಲ್ಯಗಳೇ ಕಾರಣ.ಇದನ್ನು ಖಂಡಿಸುತ್ತೇವೆ. ಹಾಗೆಯೇ ಉಗ್ರರನ್ನು ಸದೆ ಬಡೆಯಲು ಕಾಂಗ್ರೆಸ್ ಪಕ್ಷ ಸದಾ ದೇಶದ ಪರವಾಗಿ ನಿಲ್ಲಲಿದೆ ಎಂದರು. ಕಾಶ್ಮೀರದಲ್ಲಿ ಭಯೋತ್ಪಾಧನೆಯನ್ನು ಮಟ್ಟ ಹಾಕಲಾಗಿದೆ ಎಂದು ಕಳೆದ ಎಂಟು ದಿನಗಳ ಹಿಂದೆಯಷ್ಟೇ ಕೇಂದ್ರದ ಗೃಹ ಮಂತ್ರಿ ಅಮಿತಾ ಷಾ ಹೇಳಿಕೆ ನೀಡಿದ್ದರು. ಇದನ್ನು ನಂಬಿದ್ದ ಸಾವಿರಾರು ಪ್ರವಾಸಿಗರು ಕಾಶ್ಮೀರದ ಪ್ರಕೃತಿ ಸೌಂಧರ್ಯ ಸವಿಯಲು ಹೋಗಿದ್ದರು.…
ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಅವರು ಉತ್ತಮ ಜನಪರ ಕೆಲಸಗಾರರು, ಹಿಡಿದ ಕೆಲಸವನ್ನು ಮಾಡಿ ಮುಗಿಸುವ ಛಲಗಾರ. ಅವರು ರೈಲ್ವೆ ಸಚಿವರಾದ ನಂತರ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಾಗುತ್ತಿವೆ, ನೆನೆಗುದಿಗೆ ಬಿದ್ದಿದ್ದ ಕೆಲಸಗಳಿಗೆ ಚಾಲನೆ ದೊರಕಿದೆ ಎಂದು ಸಿದ್ಧಗಂಗಾ ಮಠ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ನಗರದ ರೈಲು ನಿಲ್ದಾಣಕ್ಕೆ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ ಹೆಸರು ಇಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುಮೋದನೆ ನೀಡಿದ ಸಂದರ್ಭದಲ್ಲಿ ಸಚಿವ ವಿ.ಸೋಮಣ್ಣ ಅಭಿಮಾನಿ ಬಳಗ, ಜಿಲ್ಲಾ ಕನ್ನಡ ಸೇನೆ ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸಿಹಿ ವಿತರಿಸಿ ಸಂಭ್ರಮ ಆಚರಿಸುವ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಸೋಮಣ್ಣ ಅವರು ಕೇಂದ್ರ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಸಂಸತ್ತಿನಲ್ಲಿ ಬಸವ ಜಯಂತಿ ಆಚರಣೆಗೆ ಕಾರಣರಾದರು ಎಂದು ಅಭಿನಂದಿಸಿದರು. ರೈಲು ನಿಲ್ದಾಣವನ್ನು ಸಿದ್ಧಗಂಗಾ ಮಠದ ಮಾದರಿಯಲ್ಲಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಲು ಹಾಗೂ ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿಗಳ ನಾಮಕರಣ ಮಾಡಲು ಸಚಿವ ಸೋಮಣ್ಣ ಕಾಳಜಿ ವಹಿಸಿದ್ದಾರೆ ಎಂದು…
ತುಮಕೂರು: ಸಿದ್ಧಗಂಗಾ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಕಾಲೇಜು ವತಿಯಿಂದ ಐಕ್ಯೂಎಸಿ ಮತ್ತು ೨೦೨೫ರ ವಾರ್ಷಿಕ ಸಂಚಿಕೆ ಆಶ್ರಯದಲ್ಲಿ ಲೇಖನ ರಚನೆ ಕೌಶಲಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಸತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೂಜ್ಯ ಶ್ರೀ ಸಿದ್ಧಲಿಂಗಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಬರವಣಿಗೆಯ ಕಾರ್ಯಾಗಾರದಲ್ಲಿ ಪಠ್ಯದಷ್ಟೇ ಪಠ್ಯೇತರವೂ ಮುಖ್ಯ ಎಂಬುದಕ್ಕೆ ಒತ್ತು ನೀಡಿದೆ. ಪ್ರಕೃತಿಗೆ ಸಂಸ್ಕಾರ ಕೊಟ್ಟರೆ ಸಂಸ್ಕೃತಿಯಾಗುತ್ತದೆ. ಆಲೋಚನಾ ಶಕ್ತಿ ಹೊಂದಿರುವ ಮನುಷ್ಯನ ಅನುಭವಗಳಿಗೆ ಬರವಣಿಗೆ ರೂಪ ನೀಡಿದಾಗ ನೈಜ ಸಾಹಿತ್ಯ ರೂಪುಗೊಳ್ಳುತ್ತದೆ ಎಂದರು. ಒಂದು ವಾರ್ಷಿಕ ಸಂಚಿಕೆ ಉತ್ತಮ ಬರಹಗಾರರನ್ನು ಬೆಳಕಿಗೆ ತರಬಲ್ಲ ಸಾಮ ರ್ಥ್ಯ ಹೊಂದಿದೆ. ವಿದ್ಯಾರ್ಥಿನಿಯರು ಪ್ರಗತಿಯತ್ತ ಸಾಗಲು ಇದು ಸೂಕ್ತ ಮಾರ್ಗವೆಂದರು. ಮುಖ್ಯ ಅತಿಥಿಯಾಗಿ ಉಪನ್ಯಾಸ ನೀಡಿದ ಪದವಿ ಪೂರ್ವ ಶಿಕ್ಷಣ ಇಲಾ ಖೆ ನಿವೃತ್ತ ಉಪನಿರ್ದೇಶಕ ಹೆಚ್.ಕೆ.ನರ ಸಿಂಹಮೂರ್ತಿಯವರು ಸಾಹಿತ್ಯ ರಚನೆ ಬರವಣಿಗೆಯ ಒಂದು ಕಲೆ, ಅಭಿವ್ಯಕ್ತಿಯ ಮಾಧ್ಯಮ. ಒಳ್ಳೆಯ ಅಭ್ಯಾಸ, ವಿಷಯವನ್ನು…
ಮಧುಗಿರಿ: ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ನೆರೆಗಾ ಯೋಜನೆ ಅಡಿಯಲ್ಲಿ ಉತ್ತಮ ಕೆಲಸ ಆಗಿರುವ ಬಗ್ಗೆ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಪ್ರಶಂಸೆ ವ್ಯಕ್ತಪಡಿಸಿದ್ದರೆ. ನರೇಗಾ ಕಾಮಗಾರಿ ವೀಕ್ಷಿಸಲು ಕೇಂದ್ರದಿAದ ಆಗಮಿಸಿದ್ದ ತಂಡದೊAದಿಗೆ ಕಾಮಗಾರಿ ವೀಕ್ಷಿಸಿ ಮಾತನಾಡಿದ ಸಹಕಾರ ಸಚಿವರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹೆಚ್ಚು ಶ್ರಮವಹಿಸಿ ರೈತರಿಗೆ ತಮ್ಮ ಜಮೀನಿನಲ್ಲಿ ಬದಾ ನಿರ್ಮಿಸಲು ತಿಳಿಸಿ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಿದ್ದರಿಂದ ಕೂಲಿ ಕಾರ್ಮಿಕರು ವಲಸೆ ಹೋಗದಂತೆ ತಡೆದು ಜಿಲ್ಲೆಯಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರ ಹೆಚ್ಚು ಮಾನವ ದಿನಗಳ ಸೃಜನಯಾಗಿರುವುದಕ್ಕೆ ಅಧಿಕಾರಿಗಳನ್ನು ಅಭಿನಂದಿಸಿದ ಅವರು ನೆರೆಗಾ ಯೋಜನೆ ಅಡಿಯಲ್ಲಿ ಸಮುದಾಯ ಕಾಮಗಾರಿ ಶಾಲಾ ಕಾಂಪೌAಡ್ ಆಟದ ಮೈದಾನ ಶೌಚಾಲಯ ಕಾಮಗಾರಿ ಶೇಕಡ ೮೦% ಪೂರ್ಣಗೊಂಡಿರುವುದನ್ನು ತಿಳಿದು ಮಧುಗಿರಿ ಕ್ಷೇತ್ರ ನೆರಗ ಯೋಜನೆ ಅಡಿಯಲ್ಲಿ ಪ್ರಥಮ ಸ್ಥಾನ ಪಡೆಯಬೇಕಾಗಿದೆ ಇದಕ್ಕೆ ಅಧಿಕಾರಿಗಳು ಹೆಚ್ಚಿನ ಶ್ರಮವಹಿಸಬೇಕು ಎಂದರು. ಮಧುಗಿರಿ ಕ್ಷೇತ್ರದಲ್ಲಿ ನರೇಗಾ ಯೋಜನೆ ಉತ್ತಮವಾಗಿ ನಡೆಯುತ್ತಿರುವುದಕ್ಕೆ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ಸಹಾಯಕ ನಿರ್ದೇಶಕರು ಗ್ರಾಮೀಣ…
ತಿಪಟೂರು: ವಿಶ್ವ ಆರೋಗ್ಯ ಸಂಸ್ಥೆ ೨೦೩೦ರ ವೇಳೆಗೆ ಎಚ್ಐವಿ ಮುಕ್ತ ಭಾರತ ಮಾಡುವ ಗುರಿ ಹೊಂದಿದೆ. ಈ ಎಚ್ಐವಿ ಯನ್ನು ಹೋಗಲಾಡಿಸಲು ಯುವಕರು ಸಂಕಲ್ಪ ಮಾಡಬೇಕೆಂದು ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ಆಪ್ತ ಸಮಾಲೋ ಚಕರಾದ ಟಿ.ಎಸ್.ಉಮೇಶ್ ತಿಳಿಸಿದ್ದಾರೆ. ತಿಪಟೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ಮತ್ತು ಎನ್ಎಸ್ಎಸ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಕಚೇರಿ ಹಾಗೂ ತಿಪಟೂರಿನ ಸಾರ್ವಜನಿಕ ಆಸ್ಪತ್ರೆ ವತಿಯಿಂದ ಕಾಲೇಜಿನಲ್ಲಿ ಬುಧವಾರ ನಡೆದ ‘ಯುವ ಜನತೆಗೆ ಎಚ್ಐವಿ, ಏಡ್ಸ್ ಬಗ್ಗೆ ಅರಿವು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಚ್ಐವಿ ಪಾಸಿಟಿವ್ ಇರುವರ ಸಂಖ್ಯೆ ಇತ್ತೀಚೆಗೆ ಕಡಿಮೆ ಆಗುತ್ತಿದೆ. ಇದು ಶೂನ್ಯಕ್ಕೆ ಬಂದು ನಿಲ್ಲಬೇಕು. ಈ ರೋಗವನ್ನು ತಡೆಗಟ್ಟಲು ಯುವಕರ ಸಹಕಾರ ಹೆಚ್ಚು ಮುಖ್ಯ. ಈ ಮಾರಕ ರೋಗವನ್ನು ತಡೆಗಟ್ಟಲು ಕಾಲೇಜುಗಳಲ್ಲಿನ ರೆಡ್ ರಿಬ್ಬನ್ ಕ್ಲಬ್ ಸಂಚಾಲಕರುಗಳು ಸೈನಿಕ ರಂತೆ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಉಮೇಶ್ ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹೆಚ್. ಬಿ. ಕುಮಾ ರಸ್ವಾಮಿ…
ಗುಬ್ಬಿ: ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ತಾಲ್ಲೂಕಿನ ಕಡಬದಿಂದ ಕಾಡಶೆಟ್ಟಿಹಳ್ಳಿಯವರೆಗೆ ರೈತ ಸಂಘದವರು ನೂರಾರು ರೈತರೊಂದಿಗೆ ಗುರುವಾರ ಬೈಕ್ರ್ಯಾಲಿ ನಡೆಸಿದರು. ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಕಡಬ ಹೋಬಳಿ ಗಂಗಸAದ್ರ, ಕಾಡಶೆಟ್ಟಿಹಳ್ಳಿ ಭಾಗದಲ್ಲಿ ಕಳೆದ ಮಂಗಳವಾರ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಪ್ರಾರಂಭಿಸಲು ಬಂದಿದ್ದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಪ್ರತಿಭಟಿಸಿ, ಕಾಮಗಾರಿ ತಡೆದಿದ್ದರು. ನೀರಾವರಿ ಇಲಾಖೆ ಅಧಿಕಾರಿಗಳು ಕಂದಾಯ ಇಲಾಖೆ ಮತ್ತು ಸರ್ವೆ ಇಲಾಖೆ ಅಧಿಕಾರಿಗಳೊಂದಿಗೆ ಗುರುವಾರ ಸರ್ವೆಗೆ ಬರುವುದಾಗಿ ತಿಳಿಸಿ ಹೋಗಿದ್ದರು.ಗುರುವಾರ ಅಧಿಕಾರಿಗಳು ಬರುವರು ಎಂದು ಸ್ಥಳೀಯರು ರೈತಸಂಘದೊAದಿಗೆ ಪ್ಯಾಲಿ ನಡೆಸಿದರು.ರೈತ ಸಂಘದವರ ಜೊತೆ ಸುತ್ತಲಿನ ಗ್ರಾಮಗಳ ನೂರಾರು ರೈತರು ಹಾಗೂ ಮುಖಂಡರು ಸೇರಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು. ಈಗಾಗಲೇ ನಿರ್ಮಿಸಿರುವ ಹೇಮಾವತಿ ಉಪ ನಾಲೆಯ ಕೆಳಭಾಗದಲ್ಲಿಯೇ ಪೈಪ್ ಅಳವಡಿಸಿ ನೀರು ತೆಗೆದುಕೊಂಡು ಹೋಗುತ್ತೇವೆ ಎಂದು ಅಧಿಕಾರಿಗಳು ಹೇಳುವುದು ಕಾನೂನುಬಾಹಿರ. ಈ ಹಿಂದೆ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿದ್ದು ಉಪನಾಲೆ ನಿರ್ಮಾಣಕ್ಕಾಗಿ ಮಾತ್ರ. ಇದು ರಾಜ್ಯಪತ್ರದಲ್ಲಿಯೂ…
ತುಮಕೂರು: ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ೩೯ ಮಂದಿ ರಾಜಸ್ವ ನಿರೀಕ್ಷಕರು ಹಾಗು ಗ್ರಾಮ ಲೆಕ್ಕಿಗರಿಗೆ ಉಚಿತವಾಗಿ ಲ್ಯಾಪ್ ಟಾಪ್, ಬುಕ್ಕಾಪಟ್ಟಣ ವ್ಯಾಪ್ತಿಯ ಹತ್ತು ಮಂದಿಗೆ ಸ್ಮಾರ್ಟ್ ಪೋನ್ ಗಳನ್ನು ವಿತರಿಸಿದರು. ತಾಲ್ಲೂಕು ಕಚೇರಿಯಲ್ಲಿರುವ ಶಾಸಕರ ಭವನದಲ್ಲಿ ಗುರುವಾರ ಆಯೋಜಿಸಿದ್ದ ಲ್ಯಾಪ್ ಟಾಪ್ ವಿತರಣಾ ಕಾರ್ಯಕ್ರಮದಲ್ಲಿ ವಿತರಿಸಿ ಮಾತನಾಡಿದ ಅವರು, ರಾಜ್ಯದಲ್ಲಿಯೇ ಪ್ರಪ್ರ ಥಮವಾಗಿ ಎಸ್.ಬಿ. ಚಾರಿಟಬಲ್ ಟ್ರಸ್ಟ್ ವತಿಯಿಂದ ಲ್ಯಾಪ್ಟಾಪ್, ಸ್ಮಾರ್ಟ್ ಫೋನ್ ಗಳನ್ನು ವಿತರಿಸಲಾಗುತ್ತಿದೆ. ಗ್ರಾಮ ಲೆಕ್ಕಿಗರು ತಮ್ಮ ಕಚೇರಿಯಲ್ಲೇ ಇದ್ದು ಎಲ್ಲಾ ಕೆಲಸಗಳನ್ನು ಮಾಡಲು ಮತ್ತು ಪ್ರತಿನಿತ್ಯ ತಾಲ್ಲೂಕು ಕಚೇರಿಗೆ ಹೋಗುವುದನ್ನು ತಪ್ಪಿಸಲು ಈ ಲ್ಯಾಪ್ ಟಾಪ್ ವಿತರಿಸಲಾಗಿದೆ. ಜನರಿಗೆ ಉತ್ತಮ ಸೇವೆ ನೀಡಲು ಲ್ಯಾಪ್ ಟಾಪ್ ಅನ್ನು ಬಳಸಿಕೊಳ್ಳಬೇಕು. ಗ್ರಾಮೀಣ ಜನರ ಜತೆ ನೇರ ಸಂಪರ್ಕ ಇರುವ, ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವತ್ತ ಕಂದಾ ಯ ಇಲಾಖೆಯು ತಂತ್ರಜ್ಞಾನವನ್ನು ಸಮ ರ್ಥವಾಗಿ ಬಳಸಿಕೊಳ್ಳುವ ಸಲುವಾಗಿ ಎಸ್. ಬಿ. ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರು…
ತುಮಕೂರು: ಕೊರಟಗೆರೆ ತಾಲ್ಲೂಕಿನ ಎಲೆರಾಂಪು ರದಲ್ಲಿರುವ ಕುಂಚಿಟಿಗರ ಮಹಾ ಸಂಸ್ಥಾನ ಮಠದಲ್ಲಿ ೪ನೇ ವರ್ಷದ ೧೦ ದಿನಗಳ ಸಂಸ್ಕಾರ ಶಿಬಿರವನ್ನು ಆಯೋಜಿಸಲಾಗಿತ್ತು. ಬೆಂಗಳೂರು ಆಕ್ಸ್ಫರ್ಡ್ ಕಾಲೇಜು ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಪ್ರಾಂಶುಪಾಲರಾದ ಡಾ. ಎಂ.ದೇವೇAದ್ರ ಶ್ರೀಮಠದಲ್ಲಿ ಕಲಿತ ಪ್ರತಿಯೊಂದು ಜ್ಞಾನವನ್ನು ನಿಮ್ಮ ಭವಿಷ್ಯಕ್ಕೆ ದಾರಿದೀಪವಾಗಲಿದೆ ಎಂದು ಡಾ. ಎಂ.ದೇವೇAದ್ರ ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಣಿಗಲ್ನ ದೊಂಬರಹಟ್ಟಿಯಲ್ಲಿನ ಶ್ರೀ ಶನಿಮಹಾತ್ಮ ದೇವಸ್ಥಾನದ ಸ್ವಾಮೀಜಿಗಳಾದ ಆನಂದ್ ಗುರೂಜಿಯವರು ಮಾತ ನಾಡುತ್ತಾ, ಇಂತಹ ಶಿಬಿರಗಳ ಮೂಲಕ ಹಳ್ಳಿಗಾಡಿನ ಮಕ್ಕಳು ಭಗವದ್ಗೀತೆಯ ಪ್ರಾ ರ್ಥನಾ ಶ್ಲೋಕಗಳು, ಸಂಸ್ಕೃತ ಭಾಷೆಯು ಏಕಾಗ್ರತೆ ಮತ್ತು ಒಳ ಮನಸ್ಸಿನಿಂದ ಸ್ಪಷ್ಟವಾಗಿ ಉಚ್ಚರಿಸುತ್ತಿರುವುದನ್ನು ನೋಡಿದರೆ ಶ್ರೀಮ ಠವು ಸಂಸ್ಕೃತಿಯ ಕೇಂದ್ರ ಸ್ಥಾನವಾಗಿ ರೂಪ ಗೊಳ್ಳುತ್ತಿರುವುದು ಹರ್ಷದಾಯಕವಾಗಿದೆ. ಇಲ್ಲಿ ಕಲಿಯುವ ವಿಚಾರಗಳು ಜೀವನ ಪೂರ್ತಿಯಾಗಿ ಸ್ಮರಿಸಬೇಕು ಎಂದರು. ಶ್ರೀ ಮಠದಲ್ಲಿ ಕಲಿತ ಪ್ರತಿಯೊಂದು ಜ್ಞಾನವನ್ನು ನಿಮ್ಮ ಭವಿಷ್ಯಕ್ಕೆ ನಿಮ್ಮ ಜೀವನ ಬದಲಾಯಿಸುವಂತಹ ಶಕ್ತಿ ಇದೆ, ಅತ್ಯಂತ ಅಮೂಲ್ಯವಾದ ಜ್ಞಾನವನ್ನು ಸಂಪಾದನೆ…