Author: News Desk Benkiyabale

ತುಮಕೂರು:       ಜಿಲ್ಲೆಯಲ್ಲಿ ಪೊಕ್ಸೊ ಕಾಯ್ದೆ-2012ರಡಿ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 11 ಪ್ರಕರಣಗಳಿಗೆ ಸಂಬಂಧಿಸಿದಂತೆ 2019-20 ಹಾಗೂ 2020-21ನೇ ಸಾಲಿನಲ್ಲಿ 18 ಆರೋಪಿಗಳಿಗೆ ಶಿಕ್ಷೆ ನೀಡಿ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.       ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಗಳಲ್ಲಿ ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಒಂದು ವರ್ಷದಿಂದ ಜೀವಾವಧಿಯವರೆಗೂ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲು ಪೊಕ್ಸೊ ಕಾಯ್ದೆ ಸಹಕಾರಿಯಾಗಿದ್ದು, ಈ ಕಾಯ್ದೆಯಡಿ 18 ವರ್ಷದೊಳಗಿನ ಗಂಡು ಮತ್ತು ಹೆಣ್ಣು ಮಕ್ಕಳು ಲೈಂಗಿಕ ದೌರ್ಜನ್ಯಕ್ಕೊಳಗಾದಾಗ ದೂರನ್ನು ದಾಖಲಿಸಲು ಅವಕಾಶವಿರುತ್ತದೆ. ಇಂತಹ ದೂರುಗಳ ವಿಚಾರಣೆಗಾಗಿ ರಾಜ್ಯದಲ್ಲಿ “ಮಕ್ಕಳ ಸ್ನೇಹಿ ವಿಶೇಷ ನ್ಯಾಯಾಲಯ”ವನ್ನು ಸ್ಥಾಪಿಸಲಾಗಿದ್ದು, ತುಮಕೂರಿನಲ್ಲಿಯೂ ಸದರಿ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದೆ.       ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಮಕ್ಕಳ ಸ್ನೇಹಿ ವಿಶೇಷ ನ್ಯಾಯಾಲಯವನ್ನು…

Read More

ಮಧುಗಿರಿ :        ತಾಲ್ಲೂಕಿನ 39 ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳ ಸಾರ್ವತ್ರಿಕ ಚುನಾವಣೆಗೆ 324 ಮತಗಟ್ಟೆಗಳಲ್ಲಿ 42 ಮತಗಟ್ಟೆಗಳು ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಮತದಾನದ ಸಂಪೂರ್ಣ ವಿಡಿಯೋ ಚಿತ್ರಿಕರಣ ಮಾಡಲಾಗುವುದು ಎಂದು ತಹಶೀಲ್ದಾರ್ ಡಾ.ಜಿ.ವಿಶ್ವನಾಥ್ ತಿಳಿಸಿದರು.         ಪಟ್ಟಣದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತದಾನಕ್ಕೆ ಪೂರ್ವ ಸಿದ್ದತೆ ಕೈಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1,95,548 ಮತದಾರರು ಮತದಾನ ಮಾಡಬಹುದಾಗಿದ್ದು, 900 ಕ್ಕೂ ಹೆಚ್ಚು ಮತದಾರರೊಂದಿರುವ ಮತಗಟ್ಟೆಗಳಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪಿಸಲಾಗುವುದು ತಾಲ್ಲೂಕಿನಲ್ಲಿ 33 ಹೆಚ್ಚುವರಿ ಮತಗಟ್ಟೆ ತೆರೆಯಲಾಗಿದೆ ಎಂದರು.       ಶಾಂತಿ ಮತ್ತು ನಿರ್ಭೀತಿಯಿಂದ ಮತದಾನ ಮಾಡಲು ಸೂಕ್ತ ಪೊಲೀಸ್ ಬಂದೋಬಸ್ತು ಮಾಡಲಾಗಿದೆ. ಡಿವೈಎಸ್‍ಪಿ ಒಬ್ಬರು, ಸಿಪಿಐ ನಾಲ್ವರು, ಪಿಎಸ್‍ಐ ಏಳು ಹಾಗೂ ಎಎಸ್‍ಐ 17 ಪೊಲೀಸ್ ರೊಂದಿಗೆ ಜೊತೆಗೆ ಗೃಹರಕ್ಷಣಕದಳದವರು ಸೇರಿ 378 ಸಿಬ್ಬಂದಿಯನ್ನು ಮತ್ತು 17 ಮೀಸಲು ಶಸಸ್ತ್ರ ಪಡೆಯ ತುಕ್ಕಡಿಗಳನ್ನು ಸಹ ನಿಯೋಜಿಸಲಾಗಿದೆ…

Read More

ತುಮಕೂರು :        ಕುರುಬ ಸಮುದಾಯಕ್ಕೆ ಎಸ್‍ಟಿ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ 340 ಕಿಲೋ ಮೀಟರ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ತಿಳಿಸಿದರು. ನಗರದ ಬೀರೇಶ್ವರ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಕುರುಬರ ಎಸ್.ಟಿ.ಮೀಸಲಾತಿ ಹೋರಾಟ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.       ಕಾಗಿನೆಲೆಯಿಂದ ಜ.15ರಂದು ಆರಂಭಗೊಳ್ಳಲಿರುವ ಪಾದಯಾತ್ರೆ ಫೆ.2ರಂದ ಬೆಂಗಳೂರು ತಲುಪಲಿದ್ದು, ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಏರ್ಪಡಿಸುವ ಮೂಲಕ ಪಕ್ಷಾತೀತವಾಗಿ ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸಲು ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಹೇಳಿದರು.       ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವ ಹೋರಾಟಕ್ಕಾಗಿ ಈಗಾಗಲೇ ರಾಜ್ಯದಲ್ಲಿ ಜನಪ್ರತಿನಿಧಿಗಳು, ಮಹಿಳಾ ಪ್ರತಿನಿಧಿಗಳು ಸೇರಿಸಂತೆ ಸಮುದಾಯದ ಮುಖಂಡರ ಸಭೆಯನ್ನು ನಡೆಸಲಾಗಿದೆ, ಬಾಗಲಕೋಟೆಯಲ್ಲಿ ಬೃಹತ್ ಸಮಾವೇಶವನ್ನು ಯಶಸ್ವಿಯಾಗಿ ಸಂಘಟಿಸಲಾಗಿದ್ದು, ಬೃಹತ್ ಹೋರಾಟವನ್ನು ಹಮ್ಮಿಕೊಳ್ಳುವ ಮೂಲಕ ಹಕ್ಕೋತ್ತಾಯ ಮಂಡಿಸಲಾಗುವುದು ಎಂದರು.       1976ರಲ್ಲಿ ದೇವರಾಜ…

Read More

ತುಮಕೂರು:       ಕಡುಬಡತನದಲ್ಲಿ ಹುಟ್ಟಿ, ತಮ್ಮ ಅಜ್ಜಿಯಿಂದ ಕಲಿತ ಸೂಲಗಿತ್ತಿ ಕಸುಬಿನಿಂದ ಬರುವ ಯಾವುದೇ ಪ್ರತಿಫಲಕ್ಕೆ ಆಸೆ ಪಡದೆ, ಸಾವಿರಾರು ಹೆರಿಗೆಗಳನ್ನು ಮಾಡಿ ತಾಯಿ ಮತ್ತು ಮಗುವಿಗೆ ಜೀವ ನೀಡಿದ ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮ ಅವರ ಗದ್ದುಗೆಯನ್ನು ಒಳಗೊಂಡಂತೆ ಇದೊಂದು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಜಿಲ್ಲಾಡಳಿತ ಹಾಗೂ ಸರಕಾರ ಮುಂದಾಗುವಂತೆ ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗಸ್ವಾಮೀಜಿ ಸಲಹೆ ನೀಡಿದ್ದಾರೆ.       ನಗರದ ಗಂಗಸಂದ್ರ ಬಳಿ ಇರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಡಾ.ಸೂಲಗಿತ್ತಿ ನರಸಮ್ಮ ಅವರ ಜನ್ಮ ಶತಮಾನೋತ್ಸವ ಸಮಾರಂಭದ ಹಿನ್ನೆಲೆಯಲ್ಲಿ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಗದ್ದುಗೆಗೆ ಪುಷ್ಪನಮನ ಸಲ್ಲಿಸಿ ಮಾತನಾಡುತಿದ್ದ ಅವರು, ಡಾ.ಸೂಲಗಿತ್ತಿ ನರಸಮ್ಮ ಅವರು, ಅತ್ಯಂತ ಕುಗ್ರಾಮದಲ್ಲಿ ಹುಟ್ಟಿ,ತನ್ನ ಕಾಯಕದ ಮೂಲಕವೇ ದೆಹಲಿಯವರಗೂ ಹೆಸರು ಮಾಡಿದರು. ಸಮಾಧಿಯ ಪಕ್ಕದಲ್ಲಿಯೇ ಇರುವ ಕೆರೆಯನ್ನು ಸ್ವಚ್ಚಗೊಳಿಸಿ,ಇದೊಂದು ಪ್ರವಾಸಿ ತಾಣವಾಗಿ ಅಭಿವೃದ್ದಿ ಪಡಿಸುವ ಕೆಲಸ ಆಗಬೇಕು. ಈಗಾಗಲೇ ಸ್ಥಳೀಯ ಶಾಸಕರು, ಸಂಸದರು ಈ ನಿಟ್ಟಿನಲ್ಲಿ ಪ್ರಯತ್ನ…

Read More

ತುಮಕೂರು :       ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಕ್ರೈಸ್ತ ಸಮುದಾಯದ ಪವಿತ್ರ ಹಬ್ಬವಾದ ಕ್ರಿಸ್‍ಮಸ್ ಹಬ್ಬವನ್ನು ನಗರದಲ್ಲಿ ಸಡಗರ ಸಂಭ್ರಮ ಇಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲಾಯಿತು.       ಕ್ರಿಸ್‍ಮಸ್ ಎಂದಾಕ್ಷಣ ಕ್ರಿಸ್‍ಮಸ್ ಟ್ರೀ ಅಲಂಕಾರ, ಕ್ರಿಸ್ಮಸ್ ಕೇಕ್‍ಗಳು, ಸಂತಕ್ಲಾಸ್ ಕ್ಯಾಂಡಲ್‍ಗಳು, ವಿವಿಧ ಅಲಂಕಾರಗಳು ನೆನಪಿಗೆ ಬರುತ್ತವೆ. ಪಟಾಕಿ ಸಿಡಿಸುವುದು, ಗುಂಪು ಸೇರುವುದು, ಸಾಮೂಹಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಸಂಭ್ರಮದ ಮನೆ ಮಾಡಿರಲಿಲ್ಲ.       ನಗರದ ಚರ್ಚ್ ಸರ್ಕಲ್‍ನಲ್ಲಿರುವ ಸಿಎಸ್‍ಐ ಮಹಾದೇವಾಲಯದಲ್ಲಿ ಸರಳವಾಗಿ ಕ್ರಿಸ್‍ಮಸ್ ಹಬ್ಬವನ್ನು ಆಚರಿಸಲಾಯಿತು. ಸಿಎಸ್‍ಐ ವೆಸ್ಲಿ ಮಹಾದೇವಾಲಯದಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ದೇವಾಲಯಕ್ಕೆ ಬಂದ ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ ಕೈಗಳಿಗೆ ಸ್ಯಾನಿಟೈಸರ್ ಹಾಕಲಾಗುತ್ತಿತ್ತು. ಹಾಗೆಯೇ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲಾಗಿತ್ತು.       ಕ್ರೈಸ್ತ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ಈ ಕೊರೊನಾ ಮಹಾಮಾರಿ ಜಗತ್ತಿನಿಂದ…

Read More

ಹುಳಿಯಾರು :        ಗ್ರಾಮ ಪಂಚಾಯಿತಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಮತದಾರರ ಮನೆ, ಮನ ತಲುಪಲು ತರಹೇವಾರಿ ಕಸರತ್ತು ಶುರುವಿಟ್ಟುಕೊಂಡಿದ್ದಾರೆ. ಅದರಲ್ಲೂ ಈ ಬಾರಿ ತಮ್ಮ ಚುನಾವಣಾ ಪ್ರಚಾರಕ್ಕೆ ಅಭ್ಯರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಸಂಪರ್ಕ ಸೇತುಗಳಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ.       ಈ ಬಾರಿ ಚುನಾವಣೆಯಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಕಣಕ್ಕೆ ಇಳಿದಿದ್ದು, ಆನ್‍ಲೈನ್ ಪ್ರಚಾರಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ವಾಟ್ಸಾಪ್, ಫೇಸ್‍ಬುಕ್‍ಗಳಲ್ಲಿ ಕರಪತ್ರಗಳನ್ನು ಪೋಸ್ಟ್ ಮಾಡುವ ಮೂಲಕ ಮತಯಾಚನೆ ಮಾಡುತ್ತಿದ್ದಾರೆ. ಕೆಲ ಅಭ್ಯರ್ಥಿಗಳು ತಮ್ಮ ಬೆಂಬಲಿಗರು ಮತ್ತು ಆತ್ಮೀಯರಿಗೆ ಟ್ಯಾಗ್ ಮಾಡಿ ಮತ ಕೇಳುತ್ತಿದ್ದಾರೆ. ಇನ್ನೂ ಕೆಲವರು ಕೈ ಮುಗಿದು ಮತ ಕೇಳುವ ವಿಡಿಯೋ ತುಣುಕುಗಳನ್ನು ಹಾಕಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.        ಕೆಲವರು ಕರಪತ್ರಗಳಷ್ಟೇ ಅಲ್ಲದೇ, ಸಿನಿಮಾ ಹಾಡುಗಳಿಗೆ ತಮ್ಮ ವಿಡಿಯೊಗಳನ್ನು ಮಿಕ್ಸ್ ಮಾಡಿ, ಪ್ರಚಾರ ನಡೆಯುತ್ತಿದ್ದಾರೆ. ಸ್ಟಾರ್ ನಟರ ಹಾಡುಗಳ ತುಣುಕುಗಳಿಗೆ ತಮ್ಮ…

Read More

ತುಮಕೂರು :        ಗ್ರಾಮಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತ ಎಣಿಕಾ ದಿನದಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.       ಈ ನಿಷೇಧಾಜ್ಞೆಯನ್ವಯ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮುಚ್ಚಿಸಿ, ಮದ್ಯ ಮಾರಾಟ/ಶೇಖರಣೆಯನ್ನು ನಿಷೇಧಿಸಿ ಒಣದಿನವೆಂದು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Read More

ಚಿಕ್ಕನಾಯಕನಹಳ್ಳಿ :         ಡಿ.27 ರಂದು ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಮತಗಟ್ಟೆ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮ ನಡೆಸಲಾಯಿತು.       ಪಟ್ಟಣದ ತೀನಂಶ್ರಿ ಸ್ಮಾರಕ ಭವನ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳ ಚುನಾವಣಾ ಸಿಬ್ಬಂದಿಗಳಾದ 278 ಮತಗಟ್ಟೆ ಅಧಿಕಾರಿಗಳು ಹಾಗೂ 278 ಮಂದಿ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಹಾಗೂ ಎಲ್‍ಇಡಿ ಮೂಲಕ ತರಬೇತಿ ನೀಡಲಾಯಿತು.      ಈ ತರಬೇತಿ ಕೆಂದ್ರಗಳಿಗೆ ಜಿಲ್ಲಾಧಿಕಾರಿ ಕೆ. ರಾಕೇಶ್‍ಕುಮಾರ್ ಹಾಗೂ ಉಪವಿಭಾಗಾಧಿಕಾರಿ ದಿಗ್ವಿಜಯ್ ಬೋಡ್ಕೆ ಭೇಟಿ ನೀಡಿ ಕೆಲವು ಸಲಹೆ ಸೂಚನೆಗಳನ್ನು ನೀಡಿದರು. ನಂತರ ಸ್ಟ್ರಾಂಗ್ ರೂಂಗೆ ಭೇಟಿ ನೀಡಿ ಪರಿಶೀಲಿಸಿದರು. ತಹಸೀಲ್ದಾರ್ ಬಿ. ತೇಜಸ್ವಿನಿ, ಸಿಪಿಐ ವೀಣಾ ಮತ್ತು ಸಿಬ್ಬಂದಿಗಳು ಹಾಜರಿದ್ದರು.  

Read More

ಕೊರಟಗೆರೆ:       ಅಶೋಕ್ ಲೇಲ್ಯಾಂಡ್ ವಾಹನ ಸವಾರ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಓವರ್‍ಟೇಕ್ ಮಾಡುವ ವೇಳೆ ಎದುರಿಗೆ ಆಗಮಿಸುತ್ತೀದ್ದ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಡ್ರೈವರ್ ಸ್ಥಳದಲ್ಲಿಯೇ ಮೃತಪಟ್ಟರೇ ಆಟೋ ಮೂರು ಪಲ್ಟಿ ಹೊಡೆದಿರುವ ಘಟನೆ ಬುಧವಾರ ಮುಂಜಾನೆ ಜರುಗಿದೆ.      ಕೊರಟಗೆರೆ ಪಟ್ಟಣದ ಸಮೀಪದ ರಾಜ್ಯ ಹೆದ್ದಾರಿಯ ನವೀಲುಕುರಿಕೆ ಕ್ಯಾಸ್‍ನಲ್ಲಿ ಅಶೋಕ ಲೇಲ್ಯಾಂಡ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿದೆ. ಕೋಳಾಲ ಹೋಬಳಿ ವಜ್ಜನಕುರಿಕೆ ಗ್ರಾಪಂ ವ್ಯಾಪ್ತಿಯ ಪುಟ್ಟನರಸಯ್ಯನಪಾಳ್ಯದ ವಾಸಿಯಾದ ಮುತ್ತುರಾಜು(44) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.       100ಕೀಮೀ ವೇಗದಲ್ಲಿ ಲಾರಿ ಚಲಾಯಿಸುತ್ತೀದ್ದ ಸವಾರ ಮತ್ತೋಂದು ವಾಹನವನ್ನು ಓವರ್‍ಟೇಕ್ ಮಾಡಲು ಯತ್ನಿಸಿ ವಾಹನ ನಿಯಂತ್ರಣಕ್ಕೆ ಬರದೇ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ತನ್ನ ಮಡದಿಯ ತವರು ಮನೆ ಮಧುಗಿರಿಯ ಮಾರಿಬೀಳ್‍ನಿಂದ ತನ್ನ ಮನೆಗೆ ಬರುತ್ತೀದ್ದ ವೇಳೆ ದುರ್ಘಟನೆ ಸಂಭವಿಸಿ ಆಟೋ ಡ್ರೈವರ್ ಸ್ಥಳದಲ್ಲಿಯೇ ಅಸುನೀಗಿದ್ದಾನೆ.       ಅಶೋಕ ಲೇಲ್ಯಾಂಡ್ ಲಾರಿಯ ಸ್ಟೇರಿಂಗ್…

Read More

 ತುಮಕೂರು :        ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಸಾರಿಗೆ ವಾಹನದ 2 ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟ ಇಬ್ಬರು ವ್ಯಕ್ತಿಗಳ ವಾರಸುದಾರರಿಗೆ ತಲಾ 2.35 ಲಕ್ಷ ರೂ.ಗಳ ಚೆಕ್‍ನ್ನು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಆರ್.ಬಸವರಾಜು ಪರಿಹಾರ ಚೆಕ್‍ನ್ನು ಇಂದು ವಿತರಿಸಿದರು. ಅಪಘಾತ 1:- ತುಮಕೂರು-ಗೂಳರಿವೆ ಮಾರ್ಗದಲ್ಲಿ ಜಿ.ಎಸ್.ಎಸ್. ಭವನದ ಬಸ್ ನಿಲುಗಡೆ ಬಳಿ 2013ರ ಮಾರ್ಚ್ 12ರಂದು ಸಂಜೆ 6-30 ಗಂಟೆ ಸಮಯದಲ್ಲಿ ಬಸ್(ವಾಹನ ಸಂಖ್ಯೆ: ಕೆಎ-06-ಎಫ್-819) ಇಳಿಯಲು ಪ್ರಯತ್ನಿಸಿ ಕೆಳಕ್ಕೆ ಬಿದ್ದು ತಲೆಗೆ ಪೆಟ್ಟಾಗಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವಾಗ ದಿಃ 13/03/13ರಂದು ಮೃತಪಟ್ಟಿರುತ್ತಾರೆ. ಮೃತ ಮಹಿಳೆಯ ಪತಿ ನರಸಿಂಹಯ್ಯ ಅವರಿಗೆ 2.35 ಲಕ್ಷ ರೂ.ಗಳ ಪರಿಹಾರದ ಚೆಕ್‍ನ್ನು ವಿತರಿಸಲಾಯಿತು. ಅಪಘಾತ 2:-       ಅದೇ ರೀತಿ ಶಿರಾ-ಬೆಂಗಳೂರು ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿರುವ ಊರುಕೆರೆ ಮುಂದೆ ಇರುವ ಹೆಬ್ಬಾಕ ಕೆರೆ ಬಳಿ 2013ರ ಫೆಬ್ರುವರಿ 1ರಂದು ಬಸ್(ಶಿರಾ ಘಟಕದ ವಾಹನ ಸಂಖ್ಯೆ:…

Read More