ಮಧುಗಿರಿ : ರೈತಪರ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ರಾಜ್ಯ ಬಿಜೆಪಿ ಸರ್ಕಾರವು ಸದ್ಯ 6 ತಿಂಗಳಿಂದಲೂ ಯಾವುದೇ ರೀತಿಯ ಪಿಂಚಣಿಯನ್ನು ಸಹ ನೀಡಿಲ್ಲ. ರೈತ ವಿರೋಧಿಯಾಗಿ ಕೇಂದ್ರ ಸರ್ಕಾರ ಸಂಪೂರ್ಣ ವಿಫವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಲ್ಲಾಳಿಗಳ ಸರ್ಕಾರ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ಗಂಭೀರ ಆರೋಪ ಮಾಡಿದರು. ಪಟ್ಟಣದ ಪುರಸಭೆ ಸದಸ್ಯ ಎಂ.ಆರ್.ಜಗನ್ನಾಥ್ ನಿವಾಸಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ಇಂದು ರಾಷ್ಟ್ರೀಯ ರೈತ ದಿನಾಚರಣೆಯ ಅಂಗವಾಗಿ ಅನ್ನದಾತನ ಶ್ರಮವನ್ನು ಮರೆಯಲಾಗದೆಂದು ಸ್ಮರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿದ್ದಾರಾಮಯ್ಯ, ಕುಮಾರಸ್ವಾಮಿ ಸರ್ಕಾರದಲ್ಲಿ ನಾವು ರೈತರ ಸಾಲ ಮನ್ನಾ ಮಾಡಿದ್ದೆವು. ಈ ಬಗ್ಗೆ ಯಡೆಯೂರಪ್ಪ ಎಲ್ಲೂ ತುಟಿ ಬಿಚ್ಚಲ್ಲ. ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರೈತರು ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ರೈತವಿರೋಧಿಯಾದ ಮೋದಿಯವರು ಕಾಪೆರ್Çೀರೇಟ್ ಉದ್ಯಮಿಗಳಿಗೆ ನೆರವಾಗುವಂತ ಕಾನೂನನ್ನು ಜಾರಿಗೊಳಿಸಲು ಮುಂದಾಗಿದ್ದಾರೆ.…
Author: News Desk Benkiyabale
ಹುಳಿಯಾರು : ಕೋಳಿ ಮತ್ತು ಮಟನ್ ತ್ಯಾಜ್ಯ ವಿಲೇವಾರಿ ಹೊಣೆಯನ್ನು ಕೋಳಿ ಮತ್ತು ಮಟನ್ ಅಂಗಡಿ ಮಾಲೀಕರೆ ಹೊರಬೇಕಿದ್ದು ತಕ್ಷಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ವಿಲೇವಾರಿ ಮಾಡಿದ್ದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಪಪಂ ಮುಖ್ಯಾಧಿಕಾರಿ ಹಾಗೂ ಹುಳಿಯಾರು ಪಿಎಸ್ಐ ಕೆ.ಟಿ.ರಮೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಕೋಳಿ ಅಂಗಡಿ ಮತ್ತು ಮಟನ್ ಸ್ಟಾಲ್ ಮಾಲೀಕರ ಸಭೆಯಲ್ಲಿ ಈ ಎಚ್ಚರಿಕೆ ನೀಡಲಾಯಿತು. ಕೋಳಿ ತ್ಯಾಜ್ಯವನ್ನು ಹುಳಿಯಾರು ಕೆರೆ ಅಂಗಳ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ವಿಲೇ ಮಾಡುತ್ತಿರುವುದರಿಂದ ನಾಯಿ, ಹಂದಿಗಳ ಕಾಟದ ಜತೆಗೆ ದುರ್ನಾತ ಬೀರುತ್ತಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಅಲ್ಲದೆ ಇನ್ನೊಂದು ತಿಂಗಳಲ್ಲಿ ಹುಳಿಯಾರು ಕೆರೆಗೆ ಹೇಮಾವತಿ ಹರಿಯುವುದರಿಂದ ನೀರು ಕಲುಷಿತವಾಗಿ ಈ ನೀರು ಕುಡಿಯುವ ಪ್ರಾಣಿ, ಪಕ್ಷಿಗಳ ಜೀವಕ್ಕೆ ಆಪತ್ತು ಎದುರಾಗುತ್ತದೆ ಎಂಬುದು ಪ್ರಾಣಿಪ್ರಿಯರ ಆತಂಕವಾಗಿದೆ. ಇನ್ನು ಮಟನ್ ಸ್ಟಾಲ್ನವರು ಪಟ್ಟಣದ ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಹಾಕುತ್ತಿರುವ ದೂರುಗಳ ಬಂದಿರುವುದರಿಂದ…
ತುಮಕೂರು : ನವದೆಹಲಿಯ ತೆಂಗು ಅಭಿವೃದ್ಧಿ ಮಂಡಳಿಯ 140ನೇ ಸಭೆಗೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ಜಿ.ಎಸ್ ಬಸವರಾಜ್ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಭಾಗವಹಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಎನ್ಐಸಿಯ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದ ಸಂಸದರು, 139ನೇ ಸಭೆಯ ನಡಾವಳಿಯ ಬಗ್ಗೆ ವಿಸ್ತøತವಾಗಿ ಚರ್ಚಿಸಿದರು. ಅಲ್ಲದೇ ಅಜೆಂಡಾದಲ್ಲಿದ್ದ 8 ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮಂಡಳಿಯ ಅಧಿಕಾರಿ ನೇಮಿಚಂದ್ರ ಅವರ ವಿರುದ್ಧದ ವಿಚಾರಣೆಯನ್ನು ಸಿಬಿಐ ಮುಕ್ತಾಯಗೊಳಿಸಿದ್ದ, ವರದಿಯಲ್ಲಿ ನಿರ್ದೋಷಿಯೆಂದು ತಿಳಿಸಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಎನ್ಐಸಿಯ ಅಧಿಕಾರಿ ಅಜಯ್ ಮತ್ತಿತರು ಹಾಜರಿದ್ದರು.
ತುಮಕೂರು: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಡಿಸೆಂಬರ್ 23ರಂದು ಬೆಳಿಗ್ಗೆ 10 ಗಂಟೆಗೆ ಮಧುಗಿರಿಯ ಕೆ.ಆರ್. ಬಡಾವಣೆ ಸರ್ಕಾರಿ ಪ್ರೌಢಶಾಲೆ(ಡಿಡಿಪಿಐ ಕಚೇರಿ ಮುಂಭಾಗ)ಯಲ್ಲಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಪ್ರಬಂಧ, ಪೋಸ್ಟರ್ ಮತ್ತು ಕೋಲಾಜ್ ಮೇಕಿಂಗ್, ರಸಪ್ರಶ್ನೆ, ಮತ್ತಿತರ ಸ್ಪರ್ಧೆಗಳನ್ನು ನಡೆಸಲಾಗುವುದು. ನೂತನ ಹಾಗೂ ಭವಿಷ್ಯ ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಸ್ಪರ್ಧೆಯನ್ನು ನಡೆಸಲಾಗುತ್ತಿದ್ದು, ಶಾಲಾ ಹಂತ ಮತ್ತು ತಾಲೂಕು ಹಂತಗಳಲ್ಲಿ ಈಗಾಗಲೇ ಸ್ಪರ್ಧೆಗಳನ್ನು ನಡೆಸಲಾಗಿದೆ. ತಾಲೂಕು ಹಂತದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ವಿಜೇತರಾದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ನಡೆಸಲಾಗುತ್ತಿದೆ. ಮತದಾನದಲ್ಲಿ ಇವಿಎಂ ಮತ್ತು ವಿ.ವಿ.ಪ್ಯಾಟ್ಗಳ ಪ್ರಾಮುಖ್ಯತೆ, ಶಿಕ್ಷಣ ವ್ಯವಸ್ಥೆಯಲ್ಲಿ ಮತದಾ ರರ ಶಿಕ್ಷಣ ಮತ್ತು ಭಾಗವಹಿಸುವಿಕೆ ಬಹಳ ಅವಶ್ಯಕತೆ, ಕೋವಿಡ್-1 9 ಸಾಂಕ್ರಾಮಿಕ ರೋಗದ ಅವಧಿಯಲ್ಲಿ ಚುನಾವಣೆಯನ್ನು ಹೇಗೆ…
ಚಿಕ್ಕನಾಯಕನಹಳ್ಳಿ : ತಾಲ್ಲೂಕಿನಾದ್ಯಂತ ವಿವಿಧ ಭಾಗಗಳಲ್ಲಿ 30ಕ್ಕೂ ಹೆಚ್ಚು ದಾಳಿ ಮಾಡಿ, 2 ಲಕ್ಷದ 85ಸಾವಿರದ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ನಿರೀಕ್ಷಕ ಹೆಚ್.ಟಿ.ಗಂಗರಾಜು ತಿಳಿಸಿದ್ದಾರೆ. ಅಬಕಾರಿ ಉಪ ಆಯುಕ್ತರು, ಅಬಕಾರಿ ಉಪಅಧೀಕ್ಷಕರ ಮಾರ್ಗದರ್ಶನದಲ್ಲಿ ದಾಳಿ ಪ್ರಕರಣ ಕೈಗೊಂಡಿದ್ದು ದಾಳಿ ವೇಳೆ 22 ಪ್ರಕರಣಗಳನ್ನು ದಾಖಲಿಸಿ, 7 ದ್ವಿಚಕ್ರ ವಾಹನಗಳು, 65 ಲೀಟರ್ 430 ಎಂ.ಎಲ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಅಕ್ರಮ ಮದ್ಯ ಮಾರಾಟ, ಸರಬರಾಜು, ಸಂಗ್ರಹಣೆ, ಶೇಖರಣೆ ಮತ್ತು ಪಾರ್ಟಿಗಳನ್ನು ಆಯೋಜಿಸಿ ಮದ್ಯ ಹಂಚಿಕೆ ಮಾಡುವುದನ್ನು ಗಮನದಲ್ಲಿಟ್ಟುಕೊಂಡು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಅಬಕಾರಿ ಅಕ್ರಮಗಳು ಕಂಡುಬಂದರೆ ಕಂಟ್ರೋಲ್ ರೂಂ.ನಂ. 08133-295288, ಅಬಕಾರಿ ನಿರೀಕ್ಷಕ ಮೊ.ನಂ.7829493094 ನಂಬರ್ ಗೆ ಮಾಹಿತಿ ನೀಡಲು ತಿಳಿಸಿದ್ದಾರೆ. …
ಗುಬ್ಬಿ: ತಾಲ್ಲೂಕಿನ ಕಲ್ಲೂರು ಗ್ರಾಮದ ಮತಗಟ್ಟೆಯಲ್ಲಿ ಅಕ್ರಮ ಮತದಾನ ನಡೆದಿದೆ ಎಂಬ ಅರೋಪ ಕೆಲ ಕಾಲ ಗೊಂದಲ ಉಂಟು ಮಾಡಿದ್ದು ಹೊರತು ಪಡಿಸಿ ತಾಲ್ಲೂಕಿನಲ್ಲಿ ಬಹುತೇಕ ಶಾಂತಿ ಯುತವಾಗಿ ಮತ ದಾನ ನಡೆದಿದೆ. ಮಂಚಲದೊರೆ ಮತ್ತು ಅಂಕಸಂದ್ರ ಗ್ರಾಮ ಪಂಚಾಯಿತಿ ಹೊರತಾಗಿ ಉಳಿದಂತೆ ತಾಲ್ಲೂಕಿನ 32 ಪಂಚಾಯಿತಿ ವ್ಯಾಪ್ತಿಯ 300 ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ನಡೆದು ಸಂಜೆ 4 ರ ವೇಳೆಗೆ ಶೇ.75 ಕ್ಕೂ ಅಧಿಕ ಮತದಾನ ನಡೆದಿರುವ ಅಂಕಿಅಂಶ ತಿಳಿದಿದೆ. ಬೆಳಿಗ್ಗೆ 7 ರಿಂದ ಆರಂಭವಾದ ಮತದಾನ ಪ್ರಕ್ರಿಯೆಯು ಬೆಳಿಗ್ಗೆ 11 ರ ವೇಳೆಗೆ ಶೇ.22 ರಷ್ಟು ಮತದಾರರು ಮತಗಟ್ಟೆಗೆ ತಲುಪಿದ್ದರು. ಮದ್ಯಾಹ್ನ 1 ರ ಸಮಯಕ್ಕೆ ಶೇ. 45 ರಷ್ಟು ಮತದಾನ ವರದಿಯಾಗಿತ್ತು. ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 25 ಗ್ರಾಮ ಪಂಚಾಯಿತಿಯಲ್ಲಿ ಬಿರುಸಿನ ಚಟುವಟಿಕೆ ಕಂಡು ಬಂದಿದೆ. ಉಳಿದ 7 ಪಂಚಾಯಿತಿ ತುರುವೇಕೆರೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟು…
ಗುಬ್ಬಿ : ತಾಲ್ಲೂಕಿನ ಮಂಚಲದೊರೆ ಮತ್ತು ಅಂಕಸಂದ್ರ ಗ್ರಾಮ ಪಂಚಾಯಿತಿ ಹೊರತುಪಡಿಸಿದಂತೆ ಉಳಿದ 32 ಗ್ರಾಮ ಪಂಚಾಯ್ತಿಗಳಿಗೆ ನಡೆಯಲಿರುವ ಚುನಾವಣೆಗೆ ಸಕಲ ಸಿದ್ದತೆಯನ್ನು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯವಸ್ಥೆ ಮಾಡಲಾಗಿದೆ. ಕಾಲೇಜಿನಲ್ಲಿ ಆವರಣದಲ್ಲಿ ನಿಯೋಜಿತ ಸಿಬ್ಬಂದಿಗಳು ಬೆಳಿಗ್ಗೆಯಿಂದಲೇ ಹಾಜರಾಗಿ ತಮ್ಮ ಮತಗಟ್ಟೆ ಸ್ಥಳಕ್ಕೆ ತೆರಳಲು ಸಿದ್ದವಾಗಿದ್ದಾರೆ. ಮತಗಟ್ಟೆಗಳಿಗೆ ಚುನಾವಣಾ ಸಾಮಗ್ರಿಗಳು ಮತ್ತು ಮತಗಟ್ಟೆ ಅಧಿಕಾರಿಗಳನ್ನು ಕರೆದೊಯ್ಯಲು 32 ಬಸ್ ಮತ್ತು 10 ಮಿನಿಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಮತದಾನ ನಂತರ ಸಂಜೆ ಮತಪೆಟ್ಟಿಗಳನ್ನು ಸ್ವೀಕರಿಸಲು ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿ ಅಗತ್ಯವಿರುವ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಒಟ್ಟು 300 ಮತಗಟ್ಟೆಗಳ ಪೈಕಿ 31 ಅತಿ ಸೂಕ್ಷ್ಮ, 62 ಸೂಕ್ಷ್ಮ ಮತ್ತು 207 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದ್ದು ಒಟ್ಟು 1200 ಮಂದಿ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಪೊಲೀಸ್ ಸಿಬ್ಬಂದಿಗಳನ್ನೂ ಬಂದೋಬಸ್ತ್ಗಾಗಿ ನಿಯೋಜಿಸಿ ಸೂಕ್ಷ್ಮ ಮತ್ತು ಅತಿ ಸೋಕ್ಷ್ಮ…
ತುಮಕೂರು : ರಾಷ್ಟ್ರೀಯ ಮತದಾನ ದಿನಾಚರಣೆ ಅಂಗವಾಗಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ, ಕಾಲೇಜು ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಮತದಾರರ ಸಾಕ್ಷರತಾ ಸಂಘಗಳ ಸದಸ್ಯರುಗಳಿಗೆ ವಿವಿಧ ಸ್ಪರ್ಧೆಗಳನ್ನು ಇತ್ತೀಚಿಗೆ ಏರ್ಪಡಿಸಲಾಗಿತ್ತು. ನಗರದ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಮತದಾರರ ಸಾಕ್ಷರತಾ ಸಂಘಗಳ ಸದಸ್ಯರುಗಳಿಗಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ವಿವಿಧ ಸ್ವರ್ಧೆಗಳನ್ನು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ(ಅಭಿವೃದ್ಧಿ) ಟಿ.ಕೆ.ರಮೇಶ್ ಉದ್ಘಾಟಿಸಿ ಮಾತನಾಡುತ್ತಾ, 2021ರ ಜನವರಿ 25ರಂದು “ರಾಷ್ಟ್ರೀಯ ಮತದಾರರ ದಿನಾಚರಣೆ” (National Voters Day) ಆಚರಿಸುವ ಸಂಬಂಧ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪೂರ್ವಭಾವಿಯಾಗಿ ವಿವಿಧ ಸ್ಪರ್ಧೆ ಸೇರಿದಂತೆ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಮತದಾರ ಸಾಕ್ಷರತಾ ಸಂಘಗಳನ್ನು ಅದರಲ್ಲಿಯೂ ವಿದ್ಯಾರ್ಥಿಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.…
ಮಧುಗಿರಿ : ಪಟ್ಟಣದ ಶ್ರೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಯುವಬ್ರಿಗೇಡ್ ತಂಡದ ಯುವಕರಿಂದ ಸ್ವಯಂ ಪ್ರೇರಣೆಯಿಂದ ದೇಗುಲ ಸ್ವಚ್ಚತಾ ಕಾರ್ಯ ನಡೆಸಿದರು. ಪುರಾತನ ಐತಿಹಾಸಿಕ ಶ್ರೀ ವೆಂಕಟರಮಣ ಸ್ವಾಮಿ ದೇಗುಲದ ಗೋಪುರ ಹಾಗು ಪ್ರಭಾವಳಿಗಳಲ್ಲಿ ಗಿಡಗಳು ಬೆಳೆದು ದೇಗುಲದ ಕಟ್ಟಡಕ್ಕೆ ಹಾನಿಯಾಗುತಿತ್ತು, ಈ ವಿಚಾರವನ್ನು ಯುವ ಬ್ರಿಗೇಡ್ ಗಮನಕ್ಕೆ ಅರ್ಚಕ ಅನಂತಭಟ್ ತಿಳಿಸಿದ್ದು ಮಧುಗಿರಿ , ಪಾವಗಡ , ತುಮಕೂರು, ಹಾಗು ಕೊರಟಗೆರೆ ಯ ಕೆಲ ಸ್ನೇಹಿತರು ಸೇರಿ ದೇಗುಲಕ್ಕೆ ಹಾನಿಯುಂಟು ಮಾಡುತ್ತಿದ್ದ ಗಿಡಗಳನ್ನು ತೆಗೆದು ಸ್ವಚ್ಚಗೊಳಿಸಿದರು. ನಂತರ ಯುವಬ್ರಿಗೇಡ್ ನ ಸಂಚಾಲಕ ಅಭಿಷೇಕ್ ಜಯರಾಂ ಮಾತನಾಡಿ, ಇಂತಹ ಸಾಮಾಜಿಕ ಕಾರ್ಯಗಳಿಗೆ ನಮಗೆ ಚಕ್ರವರ್ತಿ ಸೂಲಿಬೆಲೆ ಸ್ಪೂರ್ತಿಯಾಗಿದ್ದಾರೆ. ಇಂತಹ ಅನೇಕ ಸಮಾಜಮುಖಿ ಕಾರ್ಯಗಳನ್ನು ಜಿಲ್ಲಾದ್ಯಂತ ಮಾಡುತ್ತಿದ್ದು ಸಂಘಟನೆಯು ಜಿಲ್ಲೆಯಲ್ಲಿ ಬೆಳೆಯುತ್ತಿದೆ. ಈಗ ಮಧುಗಿರಿಯಲ್ಲಿ ಕಲ್ಯಾಣಿಗಳ ಹಾಗೂ ಪುರಾತನ ದೇಗುಲಗಳ ಸ್ವಚ್ಚತೆಗೆ ಆದ್ಯತೆ ನೀಡಿದ್ದು ಅರ್ಚಕರ ಮನವಿ…
ತುಮಕೂರು : ತ್ರಿವಿಧ ದಾಸೋಹಮೂರ್ತಿ, ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಹೆಸರಾಗಿದ್ದ ಸಿದ್ದಗಂಗಾ ಮಠದ ಲಿಂಗೈಕ್ಯ ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಅವರು ಕ್ಯಾತ್ಸಂದ್ರದ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನಾ ಸತ್ಯಾಗ್ರಹ ನಡೆಸಿದರು. ನಗರದ ಕ್ಯಾತ್ಸಂದ್ರದ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಯ ಮೇಲೆ ಕುಳಿತು ಸತ್ಯಾಗ್ರಹ ನಡೆಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀಗಳು ದೇಶ ಕಂಡಂತಹ ಉತ್ತಮ ಆದರ್ಶ, ಅದ್ಭುತವಾದಂತಹ ವ್ಯಕ್ತಿತ್ವವುಳ್ಳವರು. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಮೂರು ರಾಜಕೀಯ ಪಕ್ಷಗಳವರು ಅಧಿಕಾರಕ್ಕಾಗಿ, ರಾಜಕೀಯಕ್ಕಾಗಿ ಶ್ರೀಗಳ ಪ್ರಭಾವವನ್ನು ಬಳಸಿಕೊಂಡಿದ್ದಾರೆ. ಆದರೆ ಶ್ರೀಗಳಿಗೆ ಭಾರತ ರತ್ನ ಕೊಡಿಸುವ ಬಗ್ಗೆ ಯಾರೂ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ ಎಂದು…